Author: kannadanewsnow09

ಕೊಪ್ಪಳ: ರಾಜ್ಯದಲ್ಲೊಂದು ಶಾಕಿಂಗ್ ಘಟನೆ ಎನ್ನುವಂತೆ ಕೊಪ್ಪಳದಲ್ಲಿ 10ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ಈ ಸಂಬಂಧ ಪೋಕ್ಸೋ ಕೇಸ್ ಅಡಿಯಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ಕೊಪ್ಪಳ ಜಿಲ್ಲೆಯ ಕುಕನೂರು ತಾಲ್ಲೂಕಿನ ಶಾಲೆಯೊಂದರಲ್ಲಿ 10ನೇ ತರಗತಿ ವಿದ್ಯಾರ್ಥಿನಿಗೆ ಹೊಡ್ಡೆ ನೋವು ಕಾಣಿಸಿಕೊಂಡಿತ್ತು. ನೋವಿನಿಂದ ನರಳಾಡಿದಂತ ವಿದ್ಯಾರ್ಥಿನಿಯನ್ನು ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆಯಲ್ಲಿ ಅಪ್ರಾಪ್ತ 10ನೇ ತರಗತಿ ಬಾಲಕಿ ಗಂಡು ಮಗುವಿಗೆ ಜನ್ಮ ನೀಡಿರುವುದಾಗಿ ತಿಳಿದು ಬಂದಿದೆ. ಈ ವಿಷಯ ತಿಳಿದು ಆಸ್ಪತ್ರೆಗೆ ಜಿಲ್ಲಾಧಿಕಾರಿ ಸುರೇಶ್ ಇಟ್ನಾಳ್, ಎಸ್ಪಿ ಡಾ.ರಾಮ್ ಎಲ್ ಅರಸಿದ್ಧಿ ಆಸ್ಪತ್ರೆಗೆ ಭೇಟಿ ನೀಡಿ, ಬಾಲಕಿಯ ಆರೋಗ್ಯ ವಿಚಾರಿಸಿದರು. ಮತ್ತೊಂದೆಡೆ 10ನೇ ತರಗತಿ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದಂತ ಯುವಕನ ವಿರುದ್ಧ ಪೋಕ್ಸೋ ಕೇಸ್ ದಾಖಲಿಸಿ ಪೊಲೀಸರು ಬಂಧಿಸಿದ್ದಾರೆ. https://kannadanewsnow.com/kannada/before-ambedkars-constitution-the-unwritten-manusmriti-was-in-force-in-the-country-cm-siddaramaiah/ https://kannadanewsnow.com/kannada/big-news-if-given-the-opportunity-in-the-state-we-will-make-dalits-cm-minister-kj-george-statement/

Read More

ಬೆಂಗಳೂರು: ದೇಶದಲ್ಲಿರುವ ಸಂವಿಧಾನ ವಿರೋಧಿ ಮನುವಾದಿಗಳನ್ನು ಗುರುತಿಸಿ. ಅಂಬೇಡ್ಕರ್ ಅವರ ಸಂವಿಧಾನಕ್ಕೆ ಮೊದಲು ದೇಶದಲ್ಲಿ ಅಲಿಖಿತ ಮನುಸ್ಮೃತಿ ಜಾರಿಯಲ್ಲಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಸಿದರು. ಸಮಾಜ ಕಲ್ಯಾಣ ಇಲಾಖೆ ವತಿಯಿಂದ ವಸಂತ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ “ಸಂವಿಧಾನ ದಿನಾಚರಣೆ – 2025” ಅನ್ನು ಉದ್ಘಾಟಿಸಿ, ಸಂವಿಧಾನ ಶಿಲ್ಪಿ ಬಾಬಾ ಸಾಹೇಬರಿಗೆ ನಮಿಸಿ ಮಾತನಾಡಿದರು. ಅಂಬೇಡ್ಕರ್ ಅವರ ಸಂವಿಧಾನಕ್ಕೆ ಮೊದಲು ದೇಶದಲ್ಲಿ ಅಲಿಖಿತ ಮನುಸ್ಮೃತಿ ಜಾರಿಯಲ್ಲಿತ್ತು. ಮನುಸ್ಮೃತಿಯಲ್ಲಿದ್ದ ಮನುಷ್ಯ ವಿರೋಧಿ, ಸಮಾನತೆ ವಿರೋಧಿ ನಿಯಮಗಳಿಗೆ ಅಂಬೇಡ್ಕರ್ ಅವರ ಸಂವಿಧಾನದಲ್ಲಿ ಅವಕಾಶ ಇಲ್ಲದಂತಾಯಿತು. ಅದಕ್ಕೇ ಮನುವಾದಿಗಳು ನಮ್ಮ ಸಂವಿಧಾನವನ್ನು ವಿರೋಧಿಸುತ್ತಾರೆ. ಸಮ ಸಮಾಜ ನಿರ್ಮಾಣ, ಅಸಮಾನತೆ ನಿವಾರಣೆ ನಮ್ಮ ಸಂವಿಧಾನ ಮತ್ತು ಅಂಬೇಡ್ಕರ್ ಅವರ ಆಶಯವಾಗಿತ್ತು. ಮುಖ್ಯಮಂತ್ರಿಗಳ ಭಾಷಣದ ಪ್ರಮುಖ ಹೈಲೈಟ್ಸ್… We the people of INDIA ಎನ್ನುವುದೇ ನಮ್ಮ ಸಂವಿಧಾನದ ಮೂಲ ಮಂತ್ರ *ಈ ದೇಶದ ಜನತೆಗೆ ಎಂಥಾ ಸಂವಿಧಾನ ಬೇಕು ಎನ್ನುವ ಬಗ್ಗೆ ಒಂದು ವರ್ಷ ಕಾಲ…

Read More

ಬೆಂಗಳೂರು: ನಾಳೆ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆಯನ್ನು ನಿಗದಿ ಪಡಿಸಲಾಗಿತ್ತು. ಆದರೇ ಈ ಸಭೆಯನ್ನು ಬೆಳಗ್ಗೆ ಇದ್ದದ್ದು ಮಧ್ಯಾಹ್ನ 12 ಗಂಟೆಗೆ ಮುಂದೂಡಿಕೆ ಮಾಡಲಾಗಿದೆ. ಈ ಸಂಪುಟ ಸಭೆಯಲ್ಲಿ ರಾಜ್ಯದ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಅನುಮೋದನೆ ನೀಡುವ ಸಾಧ್ಯತೆ ಇದೆ. ಈ ಬಗ್ಗೆ ಸಚಿವ ಸಂಪುಟದ ಸರ್ಕಾರದ ಅಪರ ಕಾರ್ಯದರ್ಶಿ ಆರ್ ಚಂದ್ರಶೇಖರ್ ಮಾಹಿತಿ ನೀಡಿದ್ದು, ದಿನಾಂಕ 27-11-2025ರ ಗುರುವಾರದ ನಾಳೆಯ ಬೆಳಗ್ಗೆ 11.30ಕ್ಕೆ ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರಲ್ಲಿ ಕರೆಯಲಾಗಿದ್ದಂತ 27ನೇ ಸಚಿವ ಸಂಪುಟದ ಸಭೆಯನ್ನು ಮುಂದೂಡಿಕೆ ಮಾಡಲಾಗಿದೆ. ಅದೇ ದಿನ ಮಧ್ಯಾಹ್ನ 12 ಗಂಟೆಗೆ ಕರೆಯಲಾಗಿದೆ ಎಂದಿದ್ದಾರೆ. https://kannadanewsnow.com/kannada/big-news-if-given-the-opportunity-in-the-state-we-will-make-dalits-cm-minister-kj-george-statement/ https://kannadanewsnow.com/kannada/shivamurthy-muruga-sharan-is-innocent-in-pocso-case-lawyer-kbk-swamy/

Read More

ಚಿತ್ರದುರ್ಗ: ಮೊದಲ ಪೋಕ್ಸೋ ಕೇಸಲ್ಲಿ ಶಿವಮೂರ್ತಿ ಮುರುಘಾ ಶರಣರನ್ನು ಕೋರ್ಟ್ ನಿರ್ದೋಷಿ ಎಂಬುದಾಗಿ ತೀರ್ಪು ನೀಡಿದೆ. ಹೀಗಾಗಿ ಶಿವಮೂರ್ತಿ ಮುರುಘಾ ಶರಣರು ನಿರಾಳರಾಗಿದ್ದಾರೆ ಎಂಬುದಾಗಿ ಮುರುಘಾ ಶ್ರೀ ಪರ ವಕೀಲ ಕೆಬಿಕೆ ಸ್ವಾಮಿ ತಿಳಿಸಿದ್ದಾರೆ. ಕೋರ್ಟ್ ತೀರ್ಪಿನ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಮುರುಘಾ ಶರಣರು, ಮತ್ತಿಬ್ಬರು ಆರೋಪಿಗಳಿಗೆ ಕೋರ್ಟ್ ಪೋಕ್ಸೋ ಕೇಸಲ್ಲಿ ಖುಲಾಸೆಗೊಳಿಸಿದೆ. ಮುಂದಿನ ದಿನಗಳಲ್ಲಿ ಮುರುಘಾ ಮಠಕ್ಕೆ ಒಳ್ಳೆಯದನ್ನು ತರಲಿ. ಮುರುಘಾ ಶ್ರೀಗಳು ಹಲವು ದಿನಗಳಿಂದ ಅನಾರೋಗ್ಯ ಪೀಡಿತರಾಗಿದ್ದರು. ನಾಳೆ ಶ್ರೀಗಳಿಗೆ ಮತ್ತೊಂದು ತಪಾಸಣೆ ಇದೆ ಎಂದರು. ಮುರುಘಾ ಶರಣರಿಗೆ ನಿರ್ಬಂಧ ವಿಚಾರವಾಗಿ ಈಗ ಪ್ರತಿಕ್ರಿಯಿಸಲ್ಲ ಎಂದು ಹೇಳಿದರು. ಅಂದಹಾಗೇ ಶಿವಮೂರ್ತಿ ಮುರುಘಾ ಶರಣರ ವಿರುದ್ಧದ ಮೊದಲ ಪೋಕ್ಸೋ ಕೇಸಲ್ಲಿ ಚಿತ್ರದುರ್ಗದ 2ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ಖುಲಾಸೆಗೊಳಿಸಿ ಮಹತ್ವದ ತೀರ್ಪು ಪ್ರಕಟಿಸಿದೆ. https://kannadanewsnow.com/kannada/big-news-if-given-the-opportunity-in-the-state-we-will-make-dalits-cm-minister-kj-george-statement/ https://kannadanewsnow.com/kannada/marriages-are-now-banned-in-this-famous-temple-in-the-state-what-is-the-reason/

Read More

ಚಿತ್ರದುರ್ಗ : ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧದ ಫೋಕ್ಸೋ ಕೇಸ್​ನ ವಾದ-ಪ್ರತಿವಾದ ಮುಕ್ತಾಯವಾಗಿದ್ದು, ಇದೀಗ ಪ್ರಕರಣದ ಮೊದಲ ಎಫ್ಐಆರ್ ಸಂಬಂಧ ಚಿತ್ರದುರ್ಗದ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಹತ್ವದ ತೀರ್ಪು ಪ್ರಕಟಿಸಿದ್ದು,ಪೋಕ್ಸೋ ಪ್ರಕರಣದಲ್ಲಿ ಮುರುಘಾ ಶ್ರೀ ಗಳಿಗೆ ಬಿಗ್ ರಿಲೀಫ್ ಸಿಕ್ಕಿದ್ದು ಮುರುಘಾ  ಶ್ರೀಗಳ ಕೇಸ್ ಖುಲಾಸೆಗೊಳಿಸಿ ಕೋರ್ಟ್ ಆದೇಶ ಹೊರಡಿಸಿದೆ. ಈ ಹಿಂದಿನ ವಿಚಾರಣೆ ವೇಳೆ ಶ್ರೀಗಳ ಪರವಾಗಿ ಕೋರ್ಟ್​ನಲ್ಲಿ ಖ್ಯಾತ ವಕೀಲ ಸಿ.ವಿ.ನಾಗೇಶ್ ವಾದ ಮಂಡಿಸಿದ್ದಾರೆ. ಸ್ವಾಮೀಜಿ ವಿರುದ್ಧದ ಎಲ್ಲಾ ಆರೋಪಗಳು ಸುಳ್ಳು ಎಂದು ವಾದಿಸಿದ್ದಾರೆ. ಚಿತ್ರದುರ್ಗದ 2ನೇ ಅಪರ ಜಿಲ್ಲಾ ನ್ಯಾಯಾಲಯದಲ್ಲಿ ಕೇಸ್​ನ ವಿಚಾರಣೆ ನಡೆದಿತ್ತು. ಏನಿದು ಪ್ರಕರಣ? ಚಿತ್ರದುರ್ಗದ ಮುರುಘಾಶ್ರೀ ವಿರುದ್ಧ 2022ರ ಆ.26 ರಂದು ಮೈಸೂರಿನ ನಜರಾಬಾದ್ ಠಾಣೆಯಲ್ಲಿ ಪೋಕ್ಸೊ ಕೇಸ್ ದಾಖಲಾಗಿದ್ದು, ಮುರುಘಾ ಮಠದ ಹಾಸ್ಟೆಲ್‌ನ ಇಬ್ಬರು ಅಪ್ರಾಪ್ತ ವಿದ್ಯಾರ್ಥಿನಿಯರಿಂದ ಕೇಸ್ ದಾಖಲಾಗಿತ್ತು. ಈ ಪ್ರಕರಣದಲ್ಲಿ ಎ1 ಮುರುಘಾಶ್ರೀ, ಎ2 ಲೇಡಿ ವಾರ್ಡನ್ ರಶ್ಮಿ, ಎ3 ಬಸವಾದಿತ್ಯ,…

Read More

ಶಿವಮೊಗ್ಗ: ನವೆಂಬರ್.30ರಂದು ಸಾಗರದ ಶ್ರೀ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನಕ್ಕೆ ಚುನಾವಣೆ ನಿಗದಿಯಾಗಿತ್ತು. ಆದರೇ ಕೊರಚ ಕೊರಮರಿಗೆ ಸೂಕ್ತ ಸ್ಥಾನ ಮಾನವನ್ನು ಬೈಲಾದಲ್ಲಿ ನೀಡಿಲ್ಲ ಎಂಬುದಾಗಿ ಆರೋಪಿಸಿ ಹೈಕೋರ್ಟ್ ನಿಂದ ತಡೆಯಾಜ್ಞೆ ತರಲಾಗಿದೆ. ಇದರ ಹಿಂದೆ ಮಾರಿಕಾಂಬ ದೇವಸ್ಥಾನದ ಆಡಳಿತ ಮಂಡಳಿ ಕೈವಾಡವಿದೆ ಎಂಬುದಾಗಿ ಆರೋಪ ಕೇಳಿ ಬಂದಿತ್ತು. ಈ ಎಲ್ಲಾ ವಿಚಾರಗಳಿಂದ ಮಾರಿಕಾಂಬ ದೇವಸ್ಥಾನದ ಆಡಳಿತ ಮಂಡಳಿ ವಿರುದ್ಧ ಹಿತರಕ್ಷಣಾ ಸಮಿತಿ ಸಿಡಿದೆದ್ದಿದೆ. ಇದನ್ನು ಖಂಡಿಸಿ ನಾಳೆ ಭಿಕ್ಷಾಟನೆ, ಪ್ರತಿಕೃತಿ ದಹನದಂತ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಈ ಬಗ್ಗೆ ಮಾಹಿತಿಯನ್ನು ಶ್ರೀ ಮಾರಿಕಾಂಬ ಹಿತರಕ್ಷಣಾ ಸಮಿತಿಯ ಸಂಚಾಲಕರಾದಂತ ಎಂ.ಡಿ ಆನಂದ್ ಹಂಚಿಕೊಂಡಿದ್ದು, ಶ್ರೀ ಮಾರಿಕಾಂಬಾ ದೇವಸ್ಥಾನದ ಆಡಳಿತ ಮಂಡಳಿಯ ಭ್ರಷ್ಟಾಚಾರ ಮತ್ತು ಪಟ್ಟ ಭದ್ರ ಹಿತಾಸಕ್ತಿ ಯ ವಿರುದ್ಧ ದಿನಾಂಕ 27-11-2025 ರಂದು ಬೆಳಿಗ್ಗೆ 10-30 ರಿಂದ 1-00 ಗಂಟೆಯವರೆಗೆ ಸಾಗರ ಹೊಟೆಲ್ ವೃತ್ತದಲ್ಲಿ ಭಿಕ್ಷಾಟನೆ ಮತ್ತು ಪ್ಲೇ ಕಾರ್ಡ್ ಹಾಗೂ ಪ್ರತಿಕೃತಿ ದಹನ ನಡೆಸಲಾಗುತ್ತದೆ ಎಂದಿದ್ದಾರೆ. ನಾಳೆ ಸಾಗರ ಹೋಟೆಲ್ ವೃತ್ತದಲ್ಲಿ…

Read More

ಬೆಂಗಳೂರು: ಮುಖ್ಯಮಂತ್ರಿ ಕುರ್ಚಿಗಾಗಿ ನಡೆಯುತ್ತಿರುವ ಕಿತ್ತಾಟದಲ್ಲಿ ಕಾಂಗ್ರೆಸ್ ಸರ್ಕಾರ ಅನ್ನದಾತ ರೈತರನ್ನು ಸಂಪೂರ್ಣವಾಗಿ ಮರೆತಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ಹೊರಹಾಕಿದ್ದಾರೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಹೃದಯಹೀನ ಸರ್ಕಾರಕ್ಕೆ ಅನ್ನದಾತನ ಬದುಕಿಗಿಂತ ಅಧಿಕಾರವೇ ಮುಖ್ಯವಾಗಿದೆ. ಕರ್ನಾಟಕದ ಇತಿಹಾಸದಲ್ಲಿ ರೈತರ ನೋವಿಗೆ ಸ್ಪಂದಿಸದ ಈ ರೀತಿಯ ಸಂವೇದನಾರಹಿತ ಸರ್ಕಾರವನ್ನು ನಾನು ಈವರೆಗೆ ಕಂಡಿರಲಿಲ್ಲ. ಕೊಟ್ಟ ಮಾತಿನಂತೆ ಅನ್ನದಾತರ ಸಂಕಷ್ಟಕ್ಕೆ ಸ್ಪಂದಿಸಿ, ಸೂಕ್ತ ಪರಿಹಾರ ನೀಡಬೇಕಿದ್ದ ಸರ್ಕಾರ ಇಂದು ರೈತರ ಸಮಸ್ಯೆಗಳನ್ನು ನಿರ್ಲಕ್ಷಿಸಿದೆ. ರೈತರ ಬದುಕು ನಾಶವಾದರೂ ಪರವಾಗಿಲ್ಲ, ನಮ್ಮ ಕುರ್ಚಿ ಭದ್ರವಾಗಿರಲಿ ಎನ್ನುವಂತಿದೆ ಇಬ್ಬರೂ ನಡೆದುಕೊಳ್ಳುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ. ಗುರ್ಲಾಪುರದಲ್ಲಿ ಪ್ರತಿಭಟನಾ ನಿರತ ರೈತ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘೋರ ದುರಂತ ಸಂಭವಿಸಿತು. ಆದರೆ, ಈ ಹೃದಯಹೀನ ಸರ್ಕಾರದ ಯಾವ ಮಂತ್ರಿಯೂ ರೈತನ ಕಣ್ಣೀರು ಒರೆಸುವ ಕೆಲಸ ಮಾಡಲಿಲ್ಲ. ಸಕ್ಕರೆ ಸಚಿವರು, ಕೃಷಿ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರು ತಲೆ ಮರೆಸಿಕೊಂಡಿದ್ದಾರೆ. ತಮ್ಮದೇ ಸರ್ಕಾರದ ಅಸಡ್ಡೆಯಿಂದಾಗಿ…

Read More

ಶಿವಮೊಗ್ಗ: 25ನೇ ನವೆಂಬರ್, 2025 ರಂದು SAIL-VISL ನ ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ ಯೋಜನೆ ಅಡಿಯಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಗ್ರಾಮೀಣ ತರಬೇತಿ ಚಟುವಟಿಕೆಗಳನ್ನು ಹೆಚ್ಚಿಸಲು ಅನುಕೂಲವಾಗುವಂತೆ ‘ಡಿಜಿಟಲ್ ಇಂಟರಾಕ್ಟೀವ್ ಪ್ಯಾನಲ್ ಮತ್ತು ಎರಡು ಕಂಪ್ಯೂಟರ್’ಗಳನ್ನು ಕರ್ನಾಟಕದ ಭದ್ರಾವತಿಯ ಶಿಕ್ಷಣ ಇಲಾಖೆಗೆ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ VISL ವತಿಯಿಂದ ಕಾರ್ಯಪಾಲಕ ನಿರ್ದೇಶಕರಾದ ಅನೂಪ್ ಕುಮಾರ್, ಬಿ. ವಿಶ್ವನಾಥ, ಮುಖ್ಯ ಮಹಾಪ್ರಬಂಧಕರು (ಮಾನವ ಸಂಪನ್ಮೂಲ), ಎಲ್. ಪ್ರವೀಣ್ ಕುಮಾರ್, ಮಹಾಪ್ರಬಂಧಕರು (ಮಾನವ ಸಂಪನ್ಮೂಲ ಮತ್ತು ಸಾರ್ವಜನಿಕ ಸಂಪರ್ಕ) ಮತ್ತು ಸಿ.ಎಸ್.ಆರ್ ಅಪೆಕ್ಷ್ ಸಮಿತಿಯ ಸದಸ್ಯರು, ಅಜಯ್ ಡಿ. ಸೋಂಕುವಾರ್, ಉಪ ಮಹಾಪ್ರಬಂಧಕರು ಮತ್ತು ಸಿ.ಎಸ್.ಆರ್ ಅಪೆಕ್ಸ್ ಸಮಿತಿಯ ಸದಸ್ಯರು, ಎಮ್.ಎಲ್. ಯೋಗೇಶ್, ಕಿರಿಯ ಪ್ರಬಂಧಕರು ಮತ್ತು ಸಿ.ಎಸ್.ಆರ್ ಅಪೆಕ್ಷ್ ಸಮಿತಿಯ ನೋಡಲ್ ಅಧಿಕಾರಿ ಉಪಸ್ಥಿತರಿದ್ದರು. ಹಾಗೆಯೇ ಭದ್ರಾವತಿಯ ಶಿಕ್ಷಣ ಇಲಾಖೆಯಿಂದ ಎ.ಕೆ. ನಾಗೇಂದ್ರಪ್ಪ, ಕ್ಷೇತ್ರ ಶಿಕ್ಷಣ ಅಧಿಕಾರಿ, ಭದ್ರಾವತಿ, ಪಂಚಾಕ್ಷರಿ, ಕ್ಷೇತ್ರ ಸಂಪನ್ಮೂಲ ಅಧಿಕಾರಿ ಮತ್ತು ದಯಾನಂದ, ಶಿಕ್ಷಣ ಸಂಯೋಜನಾಧಿಕಾರಿ, ಭದ್ರಾವತಿ ಉಪಸ್ಥಿತರಿದ್ದರು.…

Read More

ಬೆಂಗಳೂರು: ನಗರದಲ್ಲಿ 7.11 ಕೋಟಿಯ ಹಣವನ್ನು ದರೋಡೆ ಮಾಡಲಾಗಿತ್ತು. ಈಗಾಗಲೇ ಬಹುತೇಕ ಆರೋಪಿಗಳನ್ನು ಬಂಧಿಸಲಾಗಿದೆ. ಹೀಗೆ ಬಂದಿತ ಇಬ್ಬರು ಆರೋಪಿಗಳು ಮಾತ್ರ ತಮ್ಮ ಗರ್ಭಿಣಿ ಪತ್ನಿಯರ ಆರೋಗ್ಯ ವಿಚಾರಿಸಲು ಹೋಗಿ ಪೊಲೀಸರಿಗೆ ಲಾಕ್ ಆಗಿದ್ದಾರೆ. ಹೌದು.. ಬೆಂಗಳೂರಲ್ಲಿ ನಡೆದಿದ್ದಂತ 7.11 ಕೋಟಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾಗಿದ್ದಂತ ರವಿ ಹಾಗೂ ರಾಕೇಶ್ ಪತ್ನಿಯರು ಗರ್ಭಿಣಿಯರಾಗಿದ್ದರು. ಮನೆಯಲ್ಲಿ ಒಬ್ಬರೆ ಇದ್ದರು. ಹೀಗಾಗಿ ಆರೋಪಿಗಳು ಅವರ ಆರೋಗ್ಯ ವಿಚಾರಿಸೋದಕ್ಕೆ ಸಿಮ್ ಕಾರ್ಡ್ ಬಿಟ್ಟು 10 ಮೊಬೈಲ್ ಖರೀದಿಸಿದ್ದರು. ಸಿಮ್ ಕಾರ್ಡ್ ಖರೀದಿ ಮಾಡಿ, ಅದರಿಂದ ಕಾಲ್ ಮಾಡಿದರೇ ಸಿಕ್ಕಿ ಬೀಳುತ್ತೇವೆ ಎಂದು ಅರಿತಿದ್ದಂತ ಆರೋಪಿಗಳು, ದರೋಡೆಯ ಬಳಿಕ ಹೈದರಾಬಾದ್ ಗೆ ಕ್ಯಾಬ್ ಬುಕ್ ಮಾಡಿಕೊಂಡು ಹೋಗುತ್ತಿದ್ದರು. ಈ ವೇಳೆಯಲ್ಲಿ ಕ್ಯಾಬ್ ಚಾಲಕನ ಮೊಬೈಲ್ ಪಡೆದು ಆರೋಪಿಗಳು ತಮ್ಮ ಗರ್ಭಿಣಿ ಹೆಂಡತಿಯರಿಗೆ ಪೋನ್ ಮಾಡಿ, ಆರೋಗ್ಯದ ಕಡೆ ಗಮನ ಕೊಡು, ಹುಷಾರು ಅಂತ ಹೇಳಿದ್ದಾರೆ. ಆದರೇ ಪೊಲೀಸರು ಈ ವೇಳೆಗಾಗಲೇ ರವಿ ಮತ್ತು ರಾಕೇಶ್ ಪತ್ನಿಯರನ್ನು…

Read More

ಶಿವಮೊಗ್ಗ: ಸಾಗರ ತಾಲ್ಲೂಕಿನ ಲಿಂಗನಮಕ್ಕಿ ಜಲಾಶಯವು ನಾಡಿಗೆ ಬೆಳಕು ನೀಡುವಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸುತ್ತಿದೆ. ಹೀಗೆ ಪ್ರಮುಖ ವಿದ್ಯುತ್ ಉತ್ಪಾದನೆ ಕೇಂದ್ರವಾಗಿರುವಂತ ಲಿಂಗನಮಕ್ಕಿಯ ಪವರ್ ಚಾನಲ್ ಗೆ ಹೆಚ್ಚುವರಿಯಾಗಿ ಕಟ್ಟಿದ್ದಂತ ಕಾಂಕ್ರೀಟ್ ತಡೆಗೋಡೆ ಕುಸಿತಗೊಂಡು ಆಂತಕಕ್ಕೆ ಕಾರಣವಾಗಿದೆ. ಕಳಪೆ ಕಾಮಗಾರಿ ಎಫೆಕ್ಟ್, ಕೋಟಿ ಕೋಟಿ ಕಾಮಗಾರಿ 6 ತಿಂಗಳಲ್ಲೇ ಕುಸಿತ ಹೌದು.ನಾಡಿಗೆ ಬೆಳಕು ನೀಡುವಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸುತ್ತಿರುವ ಸಾಗರ ತಾಲ್ಲೂಕಿನ ಕಾರ್ಗಲ್ ಬಳಿಯ ಲಿಂಗನಮಕ್ಕಿ ಜಲಾಶಯದ ಸ್ಲ್ಯೂಸ್ ಗೇಟ್ ಮುಂಭಾಗದಲ್ಲಿ ತಳಕಳಲೆ ಅಣೆಕಟ್ಟೆಗೆ ನೀರು ಹಾಯಿಸಲು ನಿರ್ಮಿಸಲಾಗಿರುವ ತಡೆಗೋಡೆ ನಿರ್ಮಿಸಲಾಗಿತ್ತು. ಲಿಂಗನಮಕ್ಕಿ ಪವರ್ ಚಾನಲ್ ಗೆ ಹೆಚ್ಚುವರಿಯಾಗಿ ಕಾಂಕ್ರೀಟ್ ತಡೆಗೋಡೆ ನಿರ್ಮಾಣ ಕಾರ್ಯ ಕೈಗೊಳ್ಳಲು ರೂ 4.85 ಕೋಟಿ ವೆಚ್ಛದಲ್ಲಿ ಟೆಂಡರ್ ಕರೆಯಲಾಗಿತ್ತು. 2022 ರಲ್ಲಿ ದಾವುಲ್ ಸಾಬ್ ಕಮ್ಮಟಗಿ ಎಂಬ ಗುತ್ತಿಗೆದಾರರು ಸದರಿ ತಡೆಗೋಡೆ ನಿರ್ಮಾಣ ಕಾಮಗಾರಿಯನ್ನು ಗುತ್ತಿಗೆಯ ಮೂಲಕ ಕೈಗೊಂಡಿದ್ದರು. ಎರಡೂ ದಂಡೆಯಲ್ಲಿ ನಿರ್ಮಿಸಿದ್ದ ಹೆಚ್ಚುವರಿ ಕಾಂಕ್ರೀಟ್ ತಡೆಗೋಡೆ ಕಾಮಗಾರಿ ಪೂರ್ಣಗೊಂಡ 6 ತಿಂಗಳೊಳಗೆ…

Read More