Author: kannadanewsnow09

ಡೆಹ್ರಾಡೂನ್: ಚಾರ್ ಧಾಮ್ ಯಾತ್ರೆಯ ಮೂಲಾಧಾರವಾದ ಬದರಿನಾಥ ಧಾಮದ ಪವಿತ್ರ ದ್ವಾರಗಳನ್ನು ಚಳಿಗಾಲಕ್ಕಾಗಿ ಮಂಗಳವಾರ ಮಧ್ಯಾಹ್ನ 2:56 ಕ್ಕೆ ಔಪಚಾರಿಕವಾಗಿ ಮುಚ್ಚಲಾಯಿತು. ಈ ಮುಚ್ಚುವಿಕೆಯು ಅತ್ಯಂತ ಯಶಸ್ವಿ ತೀರ್ಥಯಾತ್ರೆಯ ಅವಧಿಯ ಅಂತ್ಯವನ್ನು ಸೂಚಿಸುತ್ತದೆ, ಇದು ಹಿಂದಿನ ವರ್ಷಕ್ಕೆ ಹೋಲಿಸಿದರೆ ಭಕ್ತರ ಸಂಖ್ಯೆಯಲ್ಲಿ ಗಮನಾರ್ಹ ಏರಿಕೆಯನ್ನು ಕಂಡಿತು. ಗಂಭೀರವಾದ ಸಮಾರೋಪ ಸಮಾರಂಭವನ್ನು ರಾವಲ್ (ಮುಖ್ಯ ಅರ್ಚಕ) ಅಮರನಾಥ ನಂಬೂದಿರಿ ಅವರು ಪ್ರಾಚೀನ ಸಂಪ್ರದಾಯಗಳಿಗೆ ಕಟ್ಟುನಿಟ್ಟಾಗಿ ಬದ್ಧರಾಗಿ ಭಕ್ತರ ದೊಡ್ಡ ಸಭೆಯ ಸಮ್ಮುಖದಲ್ಲಿ ನಡೆಸಿದರು. ಈ ಋತುವಿನಲ್ಲಿ ಹಿಮಾಲಯದ ದೇವಾಲಯಗಳಲ್ಲಿ ಅಭೂತಪೂರ್ವ ಜನಸಂದಣಿ ಕಂಡುಬಂದಿದೆ. ಬದರಿನಾಥ-ಕೇದಾರನಾಥ ದೇವಾಲಯ ಸಮಿತಿಯ (BKTC) ಮೂಲಗಳ ಪ್ರಕಾರ, ಈ ವರ್ಷ ನಾಲ್ಕು ಪ್ರಮುಖ ಚಾರ್ ಧಾಮ್ ದೇವಾಲಯಗಳಿಗೆ ಭೇಟಿ ನೀಡುವ ಒಟ್ಟು ಯಾತ್ರಿಕರ ಸಂಖ್ಯೆ 51 ಲಕ್ಷವನ್ನು ಮೀರಿದೆ, ಇದು ಕಳೆದ ವರ್ಷದ 48 ಲಕ್ಷಕ್ಕಿಂತ ಸುಮಾರು ಮೂರು ಲಕ್ಷ ಸಂದರ್ಶಕರ ಹೆಚ್ಚಳವಾಗಿದೆ. “ಯಾತ್ರೆಯ ಸಮಯದಲ್ಲಿ ಪ್ರತಿಕೂಲ ಹವಾಮಾನದ ಹೊರತಾಗಿಯೂ ಈ ವರ್ಷದ ಮತದಾನ ಐತಿಹಾಸಿಕವಾಗಿದೆ” ಎಂದು BKTC…

Read More

ಬೆಂಗಳೂರು: ʼಸಂವಿಧಾನ ದಿನʼದಂದು ಕರ್ನಾಟಕ ಸರ್ಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ‘ಅರಿವು ಯಾತ್ರೆ’ ಅಭಿಯಾನದ ಮೂಲಕ ರಾಜ್ಯದ ಪ್ರತಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಸಮುದಾಯದಲ್ಲಿ ಸಂವಿಧಾನದ ಮೂಲಭೂತ ಮೌಲ್ಯಗಳಾದ ಸ್ವಾತಂತ್ರ‍್ಯ, ಸಮಾನತೆ, ಬಾಂಧವ್ಯ, ನ್ಯಾಯ ಮತ್ತು ಗೌರವಗಳನ್ನು ದೈನಂದಿನ ಜೀವನದಲ್ಲಿ ಬೇರೂರಿಸುವ ಮಹತ್ವಾಕಾಂಕ್ಷಿ ಕಾರ್ಯಕ್ರಮವನ್ನು ಜಾರಿಗೊಳಿಸುವ ಮೂಲಕ ಸಂವಿಧಾನದ ಆಶಯಗಳನ್ನು ಗ್ರಾಮೀಣ ಜನಸಮುದಾಯಕ್ಕೆ ಅರಿವು ಮೂಡಿಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದರು. ವಿಕಾಸಸೌಧದದ ತಮ್ಮ ಕಚೇರಿ ಕೊಠಡಿಯಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ಅರಿವು ಯಾತ್ರೆ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಇತರೆ ಅನುಷ್ಠಾನ ಇಲಾಖೆಗಳು ಮತ್ತು ನಾಗರಿಕ ಸಮಾಜ ಸಂಸ್ಥೆಗಳ ಸಹಭಾಗಿತ್ವದಲ್ಲಿ ಇಡೀ ವರ್ಷ ಈ ಅಭಿಯಾನವನ್ನು ರಾಜ್ಯದ ಎಲ್ಲ ಗ್ರಾಮ ಪಂಚಾಯತಿಗಳಲ್ಲಿನ 5884 ಅರಿವು ಕೇಂದ್ರಗಳಲ್ಲಿ ನಡೆಸಲಿದ್ದು, ಅರಿವು ಕೇಂದ್ರಗಳನ್ನು ಸಾಂವಿಧಾನಿಕ ಮೌಲ್ಯಗಳನ್ನು ತಿಳಿಸುವ ಪ್ರಮುಖ ಕೇಂದ್ರಗಳನ್ನಾಗಿ ರೂಪಿಸಲು…

Read More

ಕಲಬುರ್ಗಿ: ಜಿಲ್ಲೆಯಲ್ಲಿ ಅತ್ಯಂತ ಪ್ರಾಮಾಣಿಕ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರು ಭೀಕರ ಕಾರು ಅಪಘಾತದಲ್ಲಿ ಸಹೋದರರೊಂದಿಗೆ ದುರ್ಮರಣ ಹೊಂದಿದ್ದಾರೆ. ಆದರೇ ತಮ್ಮ ಅಧಿಕಾರಾವಧಿಯಲ್ಲಿ ಒಂದೇ ಒಂದು ರೂಪಾಯಿಗೂ ಲಂಚಕ್ಕೆ ಬೇಡಿಕೆ ಇಡದಂತ ಪ್ರಾಮಾಣಿಕ ವ್ಯಕ್ತಿಯಾಗಿದ್ದರು ಎಂಬುದು ಅವರನ್ನು ಬಲ್ಲವರ ಮಾತು. ಇದಕ್ಕೊಂದು ಕಾರಣವಿದೆ. ಜೊತೆ ಜೊತೆಗೆ ಅವರು ಐಎಎಸ್ ಅಧಿಕಾರಿಯಾದ ಹಿಂದೆ ಮನಕಲಕುವ ಕತೆ ಇದೆ. ಅದೇನು ಅಂತ ಮುಂದೆ ಓದಿ. ಇದು ಮಹಾಂತೇಶ್ ಬೀಳಗಿ ಐಎಎಸ್ ಅಧಿಕಾರಿಯಾಗುವುದರ ಹಿಂದಿನ ಮನಕಲಕುವ ಕತೆ ತನಗೆ 5 ವರ್ಷವಿದ್ದಾಗ ತನ್ನ ತಂದೆಯನ್ನು ಮಹಾಂತೇಶ್ ಬೀಳಗಿ ಕಳೆದುಕೊಂಡರು. ಕಡು ಬಡತನದಲ್ಲಿ ತಾಯಿ ಕೂಲಿ ನಾಲಿ ಮಾಡಿ ಮಗ ಮಹಾಂತೇಶ್ ಬೀಳಗಿ ಸಾಕಿದ್ರು. ತನಗೆ ವಿಧವಾ ವೇತನ ಬರುತ್ತದೆ ಎನ್ನುವ ಮಾಹಿತಿ ಆಕೆಗೆ ಸಿಕ್ಕಿತ್ತು. ಇದಕ್ಕಾಗಿ ಅಧಿಕಾರಿಯ ಬಳಿಗೆ ತೆರಳಿ. ತನ್ನ ಕಡು ಬಡತನದ ಜೀವನದ ಬಗ್ಗೆ ಹೇಳಿಕೊಂಡು ವಿಧವಾ ವೇತನಕ್ಕೆ ಮನವಿ ಮಾಡಿದರು. ಮಾಸಿಕ 25 ರೂಪಾಯಿ ವಿಧವಾ ವೇತನ ಮಾಡಿಕೊಡಲು ಆ…

Read More

ಬೆಳಗಾವಿ: ರಾಜ್ಯದಲ್ಲೊಂದು ಮನಕಲಕುವ ಘಟನೆ ಎನ್ನುವಂತೆ ಹೆಣ್ಣು ಮಗು ಹುಟ್ಟಿದ್ದರಿಂದ ಬೇಸರಗೊಂಡು ತಾಯಿಯೊಬ್ಬಳು ಹಸುಗೂಸನ್ನೇ ಕೊಂದು ಹಾಕಿರುವಂತ ಘಟನೆ ನಡೆದಿದೆ. ಬೆಳಗಾವಿಯಲ್ಲಿ ಹಸುಗೂಸನ್ನೇ ಪಾಪಿ ತಾಯಿಯೊಬ್ಬಳು ಕೊಂದು ಹಾಕಿದ್ದಾಳೆ. 3 ದಿನದ ಹೆಣ್ಣಮಗು ಕತ್ತು ಹಿಸುಕಿ ಕ್ರೂರಿ ತಾಯಿ ಕೊಂದು ಹಾಕಿದ್ದಾರೆ. ಬೆಳಗಾವಿ ಜಿಲ್ಲೆಯ ರಾಮದುರ್ಗದ ಹಿರೇಮುಲಂಗಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಅಶ್ವಿನಿ ಹಳಕಟ್ಟಿ(28) ಎಂಬುವರೇ ಹಸುಗೂಸು ಕೊಂದ ಪಾಪಿ ತಾಯಿಯಾಗಿದ್ದಾರೆ. ನವೆಂಬರ್ 23ರಂದು ಮುದಕವಿಯಲ್ಲಿ ಅಶ್ವಿನಿಗೆ ಹೆರಿಗೆಯಾಗಿತ್ತು. ಗಂಡು ಮಗು ನಿರೀಕ್ಷೆಯಲ್ಲಿದ್ದ ಅಶ್ವಿನಿಗೆ ಹೆಣ್ಣುಮಗು ಜನಿಸಿದ್ದರಿಂದ ನಿರಾಸೆಯಾಗಿತ್ತು. ಮಗಳು ಉಸಿರಾಡ್ತಿಲ್ಲ ಅಂತ ಡ್ರಾಮಾವನ್ನು ಅಶ್ವಿನಿ ಮಾಡಿ ಆಸ್ಪತ್ರೆಗೆ ಮಗು ತಂದಿದ್ದಾರೆ. ಈ ವೇಳೆ ಅಶ್ವಿನಿ ಉಸಿರುಗಟ್ಟಿಸಿ ಹಸುಗೂಸು ಕೊಂದಿರುವಂತ ಕೃತ್ಯ ಬೆಳಕಿಗೆ ಬಂದಿದೆ.

Read More

ಬೆಂಗಳೂರು: ಸರ್ಕಾರಿ ಶಾಲಾ ವಿದ್ಯಾರ್ಥಿಗಳನ್ನು ತಾಂತ್ರಿಕವಾಗಿ ಸದೃಢಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆಯಿಟ್ಟಿದ್ದು, ಇನ್ಮುಂದೆ 1ನೇ ತರಗತಿಯಿಂದಲೇ ಕಂಪ್ಯೂಟರ್ ಶಿಕ್ಷಣವನ್ನು (Computer Education) ಆರಂಭಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವರಾದ ಮಧು ಬಂಗಾರಪ್ಪ ತಿಳಿಸಿದರು. ಇಂದು ನಗರದ ಜವಾಹರಲಾಲ್ ನೆಹರು ತಾರಾಲಯದಲ್ಲಿ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಆಯೋಜಿಸಿದ್ದ “ಗಗನಯಾತ್ರಿ ಶುಭಾಂಶು ಶುಕ್ಲಾ ವಿದ್ಯಾರ್ಥಿ ಸಂವಾದ” ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ISRO) ಐತಿಹಾಸಿಕ ‘ಗಗನಯಾನ’ ಮಾನವಸಹಿತ ಬಾಹ್ಯಾಕಾಶ ಯೋಜನೆಗೆ ಆಯ್ಕೆಯಾಗಿರುವ ಭಾರತೀಯ ವಾಯುಪಡೆಯ ಪೈಲಟ್, ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ (Group Captain Shubhanshu Shukla) ಅವರ ಉಪಸ್ಥಿತಿಯಲ್ಲಿ ಸಚಿವರು ವಿದ್ಯಾರ್ಥಿಗಳನ್ನ ಉದ್ದೇಶಿಸಿ ಮಾತನಾಡಿದರು. 1ನೇ ತರಗತಿಯಿಂದಲೇ ಕಂಪ್ಯೂಟರ್ ಕಲಿಕೆ: ಪ್ರಸ್ತುತ ಯುಗವು ಕೃತಕ ಬುದ್ಧಿಮತ್ತೆ (AI) ಮತ್ತು ಕಂಪ್ಯೂಟರ್‌ಗಳ ಯುಗವಾಗಿದೆ. ಈ ಸ್ಪರ್ಧಾತ್ಮಕ ಜಗತ್ತಿನಲ್ಲಿ ಸರ್ಕಾರಿ ಶಾಲಾ ಮಕ್ಕಳು ಹಿಂದೆ ಉಳಿಯಬಾರದು ಎಂಬ ಉದ್ದೇಶದಿಂದ ಸರ್ಕಾರ ಈ ನಿರ್ಧಾರಕ್ಕೆ…

Read More

ಬೆಂಗಳೂರು: ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಹಿರಿಯ ಐಎಎಸ್ ಅಧಿಕಾರಿ ಮಹಂತೇಶ್ ಬೀಳಗಿ ಅವರ ಅಕಾಲಿಕ ನಿಧನದ ವಿಚಾರ ನೋವುಂಟು ಮಾಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ ವಿಜಯೇಂದ್ರ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. ಹಲವು ಜಿಲ್ಲೆಗಳಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ, ಜಿಲ್ಲಾಧಿಕಾರಿಯಾಗಿ ಪ್ರಾಮಾಣಿಕ ಸೇವೆ ಸಲ್ಲಿಸಿದ್ದರು. ಮಹಂತೇಶ್ ಅವರು ಕರ್ತವ್ಯ ನಿರ್ವಹಿಸುತ್ತಿದ್ದ ಎಲ್ಲ ಕಡೆಗಳಲ್ಲಿಯೂ ತಮ್ಮ ದಕ್ಷತೆಯಿಂದಾಗಿ ಹೆಜ್ಜೆ ಗುರುತುಗಳನ್ನು ಉಳಿಸಿ ಹೋಗಿದ್ದಾರೆ ಎಂದು ತಿಳಿಸಿದ್ದಾರೆ. ಮೃತರ ಕುಟುಂಬಕ್ಕೆ, ಬಂಧುಮಿತ್ರರಿಗೆ ಅಗಲುವಿಕೆಯನ್ನು ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ. ಮೃತರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಪ್ರಾರ್ಥಿಸಿದ್ದಾರೆ. https://kannadanewsnow.com/kannada/give-dcm-d-k-shivakumar-the-cm-post-congress-mla-openly-demands/ https://kannadanewsnow.com/kannada/100-crore-grant-for-providing-infrastructure-to-mandya-agricultural-university-minister-n-chaluvarayaswamy/

Read More

ಬೆಂಗಳೂರು : ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನದ ಹಂಚಿಕೆ ಕಗ್ಗಂಟಾದ ಬೆನ್ನಲ್ಲೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ನೀಡುವಂತೆ ಶಾಸಕ ಕದಲೂರು ಉದಯ್ ನೇತೃತ್ವದಲ್ಲಿ ಹೈಕಮಾಂಡ್ ಭೇಟಿಗೆ ತೆರಳಿದ್ದ ಶಾಸಕರ ನಿಯೋಗ ಮಂಗಳವಾರ ರಾತ್ರಿ ಬೆಂಗಳೂರಿಗೆ ವಾಪಸ್ಸಾಗಿದೆ. ಈ ವಿಚಾರವಾಗಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ, ಶಾಸಕ ಕದಲೂರು ಉದಯ್ ನಾವು ಡಿಸಿಎಂ ಡಿ.ಕೆ‌‌.ಶಿವಕುಮಾರ್ ಅವರನ್ನು ಸಿಎಂ ಸ್ಥಾನ ನೀಡುವಂತೆ ಹೈಕಮಾಂಡ್ ಭೇಟಿಗೆ ಹೋಗಿರಲಿಲ್ಲ. ಇನ್ನು ಕೆಲ ದಿನಗಳಲ್ಲೇ ಸಚಿವ ಸಂಪುಟ ಪುನಾರಚನೆ ಆಗುತ್ತಿರುವ ಹಿನ್ನೆಲೆಯಲ್ಲಿ ಹೊಸದಾಗಿ ಆಯ್ಕೆಯಾಗಿರುವ ಶಾಸಕರನ್ನು ಪರಿಗಣಿಸುವಂತೆ ಮನವಿ ಮಾಡಲಾಗಿದ್ದು, ಈ ವಿಚಾರವಾಗಿಯೂ ಸಹ ಹೈಕಮಾಂಡ್ ಸಕಾರಾತ್ಮಕವಾಗಿ ಸ್ಪಂದಿಸಿದೆ ಆದರೆ, ನಾನಂತು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ ಎಂದು ಸ್ಪಷ್ಟಪಡಿಸಿದರು. ಇನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಸಿಎಂ‌ ಸ್ಥಾನ ನೀಡುವ ವಿಚಾರವಾಗಿ ಆ ನಿರ್ಧಾರವನ್ನು ಹೈಕಮಾಂಡ್ ಮಾಡುತ್ತೆ. ಅದರ ಪರವಾಗಿ ನಾವು ಯಾವುದೇ ವಿಚಾರ ಪ್ರಸ್ತಾಪ ಮಾಡಿಲ್ಲ‌. ನಮ್ಮ ಹಿರಿಯ ಸಚಿವರು ಸಹ ಹೈಕಮಾಂಡ್ ಭೇಟಿ…

Read More

ವಿಜಯನಗರ : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ 3.50 ಲಕ್ಷ ಅಕ್ರಮ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸಲಾಗಿದ್ದು, ಉಳಿದ 1 ಲಕ್ಷದಷ್ಟು ಪಂಪ್ ಸೆಟ್ ಗಳನ್ನು ಶೀಘ್ರದಲ್ಲೇ ಸಕ್ರಮಗೊಳಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಹಾಗೂ ಗುಲ್ಬರ್ಗ ವಿದ್ಯುತ್ ಸರಬರಾಜು ಕಂಪನಿ (ಜೆಸ್ಕಾಂ) ಸಹಯೋಗದಲ್ಲಿ ಮಂಗಳವಾರ ಆಯೋಜಿಸಿದ್ದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ಇಂಧನ ಇಲಾಖೆಗೆ ಸಂಬಂಧಿಸಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. “ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗ, ಪಂಪ್ ಸೆಟ್ ಗಳ ಅಕ್ರಮ-ಸಕ್ರಮ ಯೋಜನೆಯಡಿ 4.5 ಲಕ್ಷ ಅರ್ಜಿಗಳು ಬಾಕಿ ಇದ್ದವು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಹಕಾರದಿಂದ ಈಗಾಗಲೇ 3.5 ಲಕ್ಷ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸಲಾಗಿದೆ. ಉಳಿದವುಗಳನ್ನು ಸಕ್ರಮಗೊಳಿಸುವ ಕಾರ್ಯ ಪ್ರಗತಿಯಲ್ಲಿದೆ. ಈ ಮಧ್ಯೆ, ನವೀಕೃತ ಶೀಘ್ರ ಸಂಪರ್ಕ ಯೋಜನೆಯಡಿ ತಾವೇ ಮೂಲ ಸೌಕರ್ಯ ಕಲ್ಪಿಸಿಕೊಳ್ಳುವವರ ಸಂಪರ್ಕಗಳನ್ನು ಸಕ್ರಮಗೊಳಿಸಲಾಗುತ್ತಿದೆ,” ಎಂದರು. “ವಿದ್ಯುತ್‌…

Read More

ಮಂಡ್ಯ: ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಛಲವಾದಿ ನಾರಾಯಣ್ ಸ್ವಾಮಿಗೆ ರಾಜಕೀಯ ವಿವೇಕ ಇಲ್ಲ ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ಹೇಳಿದರು. ಇಂದು ಮಂಡ್ಯ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದು ಎರಡೂವರೇ ವರ್ಷ ಆಗಿದೆ, ಡಿ.ಕೆ ಶಿವಕುಮಾರ್ ಅವರು ಸಿ.ಎಂ ಆಗಬೇಕು ಎಂಬ ಅಭಿಪ್ರಾಯ ಇದೆ ಆದರೆ ಇದು ಪಕ್ಷ ತೀರ್ಮಾನ ಮಾಡುತ್ತೆ ಎಂದು ಹೇಳಿದರು. ಶಾಸಕರ ಖರೀದಿ ವಿಚಾರವಾಗಿ ಛಲವಾದಿ ನಾರಾಯಣ್ ಸ್ವಾಮಿ ಹೇಳಿಕೆಯ ಕುರಿತು ಪ್ರತಿಕ್ರಿಯಿಸಿದ ಅವರು ಕಾಂಗ್ರೆಸ್ 50 ವರ್ಷ ಆಡಳಿತ ಮಾಡಿದಾಗ ಭ್ರಷ್ಟಾಚಾರ ಇರಲಿಲ್ಲ. ಭ್ರಷ್ಟಾಚಾರ ಶುರುವಾಗಿದ್ರೆ ಅದು ಬಿಜೆಪಿಯಿಂದ ಮಾತ್ರ ಅವರು ನನ್ನ ಎದರು ಮಾತನಾಡಲಿ ಮಾತನಾಡೋಣ. ರಾಹುಲ್ ಗಾಂಧಿಯವರು ಇವತ್ತಿಗೂ ಸಹ ಪಕ್ಷವನ್ನು ನಡೆಸಿಕೊಂಡು ಬರ್ತಿದ್ದಾರೆ ಎಂದರು. ಸುರ್ಜೇವಾಲಾ, ವೇಣುಗೋಪಾಲ ಅವರು ಗಂಭೀರ ವಾಗಿ ಸರ್ಕಾರ ಬರಲು ಜವಾಬ್ದಾರಿ ತೆಗೆದುಕೊಂಡಿದ್ದರು. ಇವರ 5 ವರ್ಷ ನಡವಳಿಕೆ ಎಲ್ಲರಿಗೂ ಗೊತ್ತಿದೆ. ಜನರ…

Read More

ಬೆಂಗಳೂರು: ಕನ್ನಡದ ಅಪ್ಪಟ ಬ್ರ್ಯಾಂಡ್‌ ನಂದಿನಿಯ ಘಮಲು ಜಗದಗಲ ವ್ಯಾಪಿಸುತ್ತಿದೆ. ಈಗಾಗಲೇ ಕೆಲ ವಿದೇಶಗಳಲ್ಲಿ ಮಾರಾಟವಾಗುತ್ತಿರುವಂತ ಕರ್ನಾಟಕದ ಹೆಮ್ಮೆಯ ನಂದಿನಿ ಉತ್ಪನ್ನ, ಈಗ ಮತ್ತಷ್ಟು ದೇಶಗಳಿಗೂ ರಪ್ತುಗೊಳ್ಳಲಿದೆ. ಈ ಬಗ್ಗೆ ಸಿಎಂ ಸಿದ್ಧರಾಮಯ್ಯ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಪ್ರಸ್ತುತ ದುಬೈ, ಕತಾರ್‌, ಬ್ರುನೈ, ಮಾಲ್ಡೀವ್ಸ್‌ ಹಾಗೂ ಸಿಂಗಾಪುರ್‌ ದೇಶಗಳು ಸೇರಿದಂತೆ ಭಾರತೀಯರು, ವಿಶೇಷವಾಗಿ ಕನ್ನಡಿಗರು ಹೆಚ್ಚಾಗಿ ನೆಲೆಸಿರುವ ನೆರೆಯ ರಾಷ್ಟ್ರಗಳಲ್ಲಿ ನಂದಿನಿ ಬ್ರ್ಯಾಂಡ್‌ಗೆ ಡಿಮ್ಯಾಂಡ್‌ ಹೆಚ್ಚಿದೆ. ಹೀಗಾಗಿಯೇ ನಂದಿನಿ ಯುಹೆಚ್‌ಟಿ ಟೆಟ್ರಾಪ್ಯಾಕ್‌ ಹಾಲು, ತುಪ್ಪ, ಚೀಸ್‌, ಬೆಣ್ಣೆ, ಐಸ್‌ಕ್ರೀಂ, ಸುವಾಸಿತ ಹಾಲು, ಸಿಹಿ ಉತ್ಪನ್ನ, ಸೇವರಿಸ್‌ ಅನ್ನು ವಿದೇಶಕ್ಕೆ ರಫ್ತು ಮಾಡಲಾಗುತ್ತಿದೆ. ಇದೀಗ ವಿದೇಶದಲ್ಲೂ ಮಾರುಕಟ್ಟೆ ವಿಸ್ತರಣೆ ಮಾಡಲು ಕೆಎಂಎಫ್‌ ಕ್ರಮ ವಹಿಸಿದೆ ಎಂದಿದ್ದಾರೆ. 2023ರ ಸೆಪ್ಟೆಂಬರ್‌ 9ರಂದು ಯುನೈಟೆಡ್‌ ಅರಬ್‌ ಎಮಿರೇಟ್ಸ್‌ (ದುಬೈ)ನಲ್ಲಿ ಅಂತಾರಾಷ್ಟ್ರೀಯ ಮಟ್ಟದ ಮೊದಲ ʼನಂದಿನಿ ಕೆಫೆ ಮೂʼ ಅನ್ನು ಆರಂಭಿಸಿ, ತುಪ್ಪ, ಬೆಣ್ಣೆ, ಚೀಸ್‌, ಯುಹೆಚ್‌ಟಿ ಹಾಲು, ಐಸ್‌ಕ್ರೀಂ, ಸಿಹಿ ಉತ್ಪನ್ನಗಳನ್ನು ಮಾರಾಟ ಮಾಡಲಾಯಿತು. ಅಲ್ಲಿ…

Read More