Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಮುಡಾ ಕೇಸ್ ನಲ್ಲಿ ಸಿಎಂ ಸಿದ್ದರಾಮಯ್ಯಗೆ ಇದಿಗ ಸಿಬಿಐ ತನಿಖೆ ಭೀತಿ ಎದುರಾಗಿತ್ತು. ದೂರುದಾರ ಸ್ನೇಹಮಯಿ ಕೃಷ್ಣ ಅವರು ಈ ಒಂದು ಪ್ರಕರಣ ಸಿಬಿಐ ತನಿಖೆಗೆ ಕೋರಿ ರಿಟ್ ಅರ್ಜಿ ಸಲ್ಲಿಸಿದ್ದರು. ಇಂದು ವಿಚಾರಣೆ ಕೈಗೆತ್ತಿಕೊಂಡ ವೇಳೆಯಲ್ಲಿ ಕಾಲಾವಕಾಶ ಕೋರಿದ ಹಿನ್ನಲೆಯಲ್ಲಿ ನವೆಂಬರ್.26ಕ್ಕೆ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿಕೆ ಮಾಡಿದೆ. ಇಂದು ಸ್ನೇಹಮಯಿ ಕೃಷ್ಣ ಅವರು ಲೋಕಾಯುಕ್ತ ತನಿಖೆಯಲ್ಲಿ ನಂಬಿಕೆಯಿಲ್ಲ. ಸಿಬಿಐ ತನಿಖೆಗೆ ಆದೇಶಿಸುವಂತೆ ಕೇರಿ ಸಲ್ಲಿಸಿದ್ದಂತ ರಿಟ್ ಅರ್ಜಿಯನ್ನು ಹೈ ಕೋರ್ಟ್ ನಲ್ಲಿ ನ್ಯಾ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠದಲ್ಲಿ ವಿಚಾರಣೆ ನಡೆಯಿತು. ಈ ವೇಳೆಯಲ್ಲಿ ಹೈಕೋರ್ಟ್ ಗೆ ಈ ಪ್ರಕರಣ ಸಂಬಂಧ ವಾದಿಸಲು ಕಾಲಾವಕಾಶ ನೀಡುವಂತೆ ಸಿಎಂ ಸಿದ್ಧರಾಮಯ್ಯ ಪರ ವಕೀಲರು ಕೋರಿದರು. ಈ ಹಿನ್ನಲೆಯಲ್ಲಿ ಹೈಕೋರ್ಟ್ ವಿಚಾರಣೆಯನ್ನು ನ.26ಕ್ಕೆ ಮುಂದೂಡಿದೆ. ಅಂದಹಾಗೇ ಕಳೆದ ಸಪ್ಟೆಂಬರ್ 27ರಂದು ಸ್ನೇಹಮಯಿ ಕೃಷ್ಣ ಅವರು ಲೋಕಾಯುಕ್ತ ತನಿಖೆಯ ಮೇಲೆ ನಂಬಿಕೆ ಇಲ್ಲ ಎಂದು ಅವರು ಹೈಕೋರ್ಟಿಗೆ ಸಿಬಿಐ ತನಿಖೆಗೆ ಆದೇಶ ಕೋರಿ ರಿಟ್…
ಹಾಸನ: ಜಿಲ್ಲೆಯಲ್ಲಿ ಜನರು ಬೆಚ್ಚಿ ಬೀಳುವಂತೆ ಹಸೆಮಣೆ ಏರಬೇಕಿದ್ದಂತ ಕೆ ಎಸ್ ಐ ಎಸ್ ಎಫ್ ಕಾನ್ಸ್ ಸ್ಟೇಬಲ್ ಒಬ್ಬರನ್ನು ಬರ್ಬರವಾಗಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವಂತ ಘಟನೆ ನಡೆದಿದೆ. ಹಾಸನ ತಾಲ್ಲೂಕಿನ ದುದ್ದ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಬಾಗೇಶಪುರದ ವಿ.ಹರೀಶ್ ಅವರು ಬೆಂಗಳೂರಿನ ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆಯಲ್ಲಿ ಕಾನ್ಸ್ ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅವರಿಗೆ ನವೆಂಬರ್.11ರಂದು ಮದುವೆ ಕೂಡ ನಿಗದಿಯಾಗಿತ್ತು. ಮದುವೆ ಆಮಂತ್ರಣ ಪತ್ರವನ್ನು ಹಂಚಿಕೆ ಮಾಡಿ ಮನೆಗೆ ಹಿಂದಿರುಗುತ್ತಿದ್ದಾಗ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದಾರೆ. ಈ ಮೂಲಕ ಹಸೆಮಣೆ ಏರಬೇಕಿದ್ದಂತ ಕೆ ಎಸ್ ಐ ಎಸ್ ಎಫ್ ಕಾನ್ಸ್ ಸ್ಟೇಬಲ್ ವಿ.ಹರೀಶ್ ಬರ್ಬರವಾಗಿ ಕೊಲೆ ಮಾಡಲಾಗಿದೆ. https://kannadanewsnow.com/kannada/sda-commits-suicide-at-belagavi-tahsildars-office/ https://kannadanewsnow.com/kannada/good-news-for-contractors-under-bbmp-25-of-pending-bills-withheld-by-state-govt-released/
ಬೆಳಗಾವಿ: ಜಿಲ್ಲೆಯ ತಹಶೀಲ್ದಾರ್ ಕಚೇರಿಯಲ್ಲೇ ದ್ವಿತೀಯ ದರ್ಜೆ ಸಹಾಯಕ ಸಿಬ್ಬಂದಿಯೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವಂತ ಘಟನೆ ನಡೆದಿದೆ. ಬೆಳಗಾವಿ ತಹಶೀಲ್ದಾರ್ ಕಚೇರಿಯಿಂದ ಸವದತ್ತಿ ತಹಶೀಲ್ದಾರ್ ಕಚೇರಿಗೆ ರುದ್ರಣ್ಣ ಯಡವಣ್ಣನವರ ಎಂಬುವರನ್ನು ಸವದತ್ತಿ ತಹಶೀಲ್ದಾರ್ ಕಚೇರಿಗೆ ನಿನ್ನಯಷ್ಟೇ ವರ್ಗಾವಣೆ ಮಾಡಲಾಗಿತ್ತು. ಸವದತ್ತಿ ತಹಶೀಲ್ದಾರ್ ಕಚೆರಿಗೆ ಎಸ್ ಡಿಎ ರುದ್ರಣ್ಣ ಯಡವಣ್ಣನವರನ್ನು ವರ್ಗಾವಣೆ ಮಾಡಿದ್ದಕ್ಕೆ ಮನನೊಂದು ಬೆಳಗಾವಿಯ ತಹಶೀಲ್ದಾರ್ ಕಚೇರಿಯಲ್ಲೇ ಆತ್ಮಹತ್ಯೆಗೆ ಶರಣಾಗಿದ್ದಾರೆ. https://kannadanewsnow.com/kannada/good-news-for-contractors-under-bbmp-25-of-pending-bills-withheld-by-state-govt-released/ https://kannadanewsnow.com/kannada/big-news-cm-siddaramaiah-fears-cbi-probe-in-muda-case-hc-to-hear-plea-in-minutes/
ಬೆಂಗಳೂರು: ಬಿಬಿಎಂಪಿಯಲ್ಲಿ ಕಾಮಗಾರಿಯನ್ನು ನಿರ್ವಹಿಸಿರುವ ಗುತ್ತಿಗೆದಾರರಿಗೆ ಈಗಾಗಲೇ ಪಾವತಿ ಮಾಡಿರುವ ಬಿಲ್ಲುಗಳಲ್ಲಿ ತಡೆ ಹಿಡಿದಿರುವ ಶೇ.25ರಷ್ಟು ಬಾಕಿ ಮೊತ್ತವನ್ನು ಬಿಡುಗಡೆ ಮಾಡಲು ಆದೇಶಿಸಿದೆ. ಈ ಮೂಲಕ ಪಾವತಿಸಲು ಬಾಕಿಯಿರುವ ಕಾಮಗಾರಿ ಬಿಲ್ಲುಗಳನ್ನು ಶೇ.100ರಷ್ಟು ಪಾವತಿ ಮಾಡುವಂತೆ ಆದೇಶದಲ್ಲಿ ತಿಳಿಸಲಾಗಿದೆ. ಈ ಕುರಿತಂತೆ ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಲಕ್ಷ್ಮೀ ಸಾಗರ್ ಎನ್.ಕೆ ಅವರು ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ ಬೃಹತ್ ಬೆಂಗಳೂರು ಮಹಾನಗರ ವ್ಯಾಪ್ತಿಯಲ್ಲಿ 2019-20 ರಿಂದ 2022-23 ರವರೆಗೆ ಪ್ರಮುಖವಾಗಿ ಘನತ್ಯಾಜ್ಯ ನಿರ್ವಹಣೆ ಕಾಮಗಾರಿಗಳು, ರಸ್ತೆ ಅಭಿವೃದ್ಧಿ, ಓಎಫ್ಸಿ ಕೇಬಲ್ ಅಳವಡಿಕೆ, ಬೃಹತ್ ನೀರುಗಾಲುವೆ ಕಾಮಗಾರಿಗಳು, ಕೇಂದ್ರ/ವಲಯ ನಗರ ಯೋಜನೆ ವಿಭಾಗಗಳಲ್ಲಿ ನಕ್ಷೆ ಮಂಜೂರಾತಿ | ಸ್ವಾಧೀನಾನುಭವ ಪತ್ರ ನೀಡುವಿಕೆ, ಕೆರೆಗಳ ಅಭಿವೃದ್ಧಿ ಕಾಮಗಾರಿಗಳು, ಯೋಜನೆಯಡಿಯಲ್ಲಿನ ಕಾಮಗಾರಿಗಳು ಮತ್ತು ವಾರ್ಡ್ ಮಟ್ಟದ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತು ವಿವರವಾದ ತನಿಖೆಯನ್ನು ನಡೆಸಲು 4 ವಿಶೇಷ ತನಿಖಾ ತಜ್ಞರ | ಪರಿಣಿತರ ನೇತೃತ್ವದಲ್ಲಿ 4 ಪ್ರತ್ಯೇಖ ತನಿಖಾ ಸಂಸ್ಥೆಗಳನ್ನು ರಚಿಸಿ…
ನವದೆಹಲಿ: 2024 ರ ಯುಎಸ್ ಅಧ್ಯಕ್ಷೀಯ ಚುನಾವಣೆ ನಡೆಯಲಿದ್ದು, ಡೆಮಾಕ್ರಟಿಕ್ ಅಭ್ಯರ್ಥಿ ಕಮಲಾ ಹ್ಯಾರಿಸ್ (60) ಮತ್ತು ಅವರ ರಿಪಬ್ಲಿಕನ್ ಪ್ರತಿಸ್ಪರ್ಧಿ ಮತ್ತು ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (78) ಅವರ ಭವಿಷ್ಯವನ್ನು ನಿರ್ಧರಿಸುವುದು ಏಳು ರಾಜ್ಯಗಳಿಗೆ ಬಿಟ್ಟಿದ್ದು. ಈ ಪ್ರಮುಖ ರಾಜ್ಯಗಳಾದ ಅರಿಜೋನಾ, ಜಾರ್ಜಿಯಾ, ಮಿಚಿಗನ್, ನೆವಾಡಾ, ಉತ್ತರ ಕೆರೊಲಿನಾ, ಪೆನ್ಸಿಲ್ವೇನಿಯಾ ಮತ್ತು ವಿಸ್ಕಾನ್ಸಿನ್ 93 ಎಲೆಕ್ಟೋರಲ್ ಮತಗಳನ್ನು ಹೊಂದಿವೆ ಮತ್ತು ಅಧ್ಯಕ್ಷ ಸ್ಥಾನವನ್ನು ಭದ್ರಪಡಿಸಿಕೊಳ್ಳಲು ಅಗತ್ಯವಿರುವ ಒಟ್ಟು 538 ಎಲೆಕ್ಟೋರಲ್ ಮತಗಳಲ್ಲಿ 270 ಸ್ಥಾನಗಳಿಗೆ ಎರಡೂ ಅಭ್ಯರ್ಥಿಗಳು ಸ್ಪರ್ಧಿಸುತ್ತಿರುವುದರಿಂದ ಪ್ರಾಥಮಿಕ ಯುದ್ಧಭೂಮಿಗಳಾಗಿವೆ. ಸ್ವಿಂಗ್ ರಾಜ್ಯಗಳು, ಅಥವಾ ಯುದ್ಧಭೂಮಿ ರಾಜ್ಯಗಳು, ಚುನಾವಣೆಯನ್ನು ಅವಲಂಬಿಸಿ ಡೆಮಾಕ್ರಟಿಕ್ ಮತ್ತು ರಿಪಬ್ಲಿಕನ್ ಬೆಂಬಲದ ನಡುವೆ ಬದಲಾಗಬಹುದು. ಐತಿಹಾಸಿಕವಾಗಿ ಕಡಿಮೆ ಮತದಾನದ ಅಂತರ ಮತ್ತು ಕಾಲಾನಂತರದಲ್ಲಿ ವೈವಿಧ್ಯಮಯ ಫಲಿತಾಂಶಗಳನ್ನು ಹೊಂದಿರುವ ಈ ರಾಜ್ಯಗಳು ಅಭ್ಯರ್ಥಿಗಳಿಂದ ಗಮನಾರ್ಹ ಗಮನವನ್ನು ಸೆಳೆಯುತ್ತವೆ. ಅವರು ಮತದಾರರನ್ನು ಸೆಳೆಯಲು ಮತ್ತು ನಿರ್ಣಾಯಕ ಚುನಾವಣಾ ಮತಗಳನ್ನು ಪಡೆಯಲು ತಮ್ಮ ಪ್ರಚಾರವನ್ನು ಅಲ್ಲಿ ಕೇಂದ್ರೀಕರಿಸುತ್ತಾರೆ.…
ಹುಬ್ಬಳ್ಳಿ: ನಾನು ನಾಳೆ ಬೆಳಿಗ್ಗೆ 10 ಗಂಟೆಗೆ ಮುಡಾ ಹಗರಣ ಸಂಬಂಧ ಲೋಕಾಯುಕ್ತದ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಮುಡಾ ಹಗರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ. ಹೀಗಾಗಿ ನಾನು ನಾಳೆ ಬೆಳಿಗ್ಗೆ 10 ಗಂಟೆಗೆ ಮೈಸೂರಿನ ಮುಡಾ ಕಚೇರಿಗೆ ತೆರಳಲಿದ್ದೇನೆ ಎಂದರು. ನಾಳೆ ಬೆಳಿಗ್ಗೆ 10 ಗಂಟೆಗೆ ಲೋಕಾಯುಕ್ತ ಕಚೇರಿಗೆ ತೆರಳಿ ವಿಚಾರಣಾಧಿಕಾರಿಗಳ ಮುಂದೆ ವಿಚಾರಣೆ ಎದುರಿಸಲಿದ್ದೇನೆ. ಅವರು ಕೇಳುವಂತ ಪ್ರಶ್ನೆಗಳಿಗೂ ಉತ್ತರಿಸುವುದಾಗಿ ತಿಳಿಸಿದರು. https://kannadanewsnow.com/kannada/big-news-cm-siddaramaiah-fears-cbi-probe-in-muda-case-hc-to-hear-plea-in-minutes/ https://kannadanewsnow.com/kannada/breaking-lineman-dies-due-to-electrocution-in-tumkur/
ಬೆಂಗಳೂರು: ಬಿಎಂಟಿಸಿಯ ನಿರ್ವಾಹಕರ ಹುದ್ದೆಗೆ ಅರ್ಜಿ ಸಲ್ಲಿಸಿದ್ದವರಿಗೆ ಮಹತ್ವದ ಮಾಹಿತಿ ಎನ್ನುವಂತೆ, ಮೂಲ ದಾಖಲೆ/ದೇಹದಾರ್ಢ್ಯತೆ ಪರಿಶೀಲನೆಗೆ ಹಾಜರಾಗಲು ಕರೆಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳುವಂತೆ ನಿಗಮ ಸೂಚಿಸಿದೆ. ಬೆಂ.ಮ.ಸಾ.ಸಂಸ್ಥೆಯು ದಿನಾಂಕ 21-10-2024 ರಂದು ನಿರ್ವಾಹಕ (ಮಿಕ್ಕುಳಿದ ಮೂಲವೃಂದ) ಹುದ್ದೆಗೆ ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ಅರ್ಹ ಅಭ್ಯರ್ಥಿಗಳು ನಿಗದಿಪಡಿಸಿದ ದಿನಾಂಕ ಮತ್ತು ಸಮಯದಂದು ದಾಖಲೆ ಪರಿಶೀಲನೆ ಮತ್ತು ದೈಹಿಕ ಮಾನದಂಡಗಳ ಪರೀಕ್ಷೆಗಾಗಿ ಆಯ್ಕೆ ಸಮಿತಿಯ ಮುಂದೆ ಹಾಜರಾಗಲು ತಿಳಿಸಲಾಗಿದೆ. ಕರೆ ಪತ್ರಗಳನ್ನು www.mybmtc.karnataka.gov.in ಅಧಿಕೃತ ವೆಬ್ ಸೈಟ್ ನಲ್ಲಿ ಡೌನ್ಲೋಡ್ ಮಾಡಬಹುದು ಎಂದಿದೆ. https://kannadanewsnow.com/kannada/fir-filed-against-union-minister-hd-kumaraswamy-2/ https://kannadanewsnow.com/kannada/big-news-cm-siddaramaiah-fears-cbi-probe-in-muda-case-hc-to-hear-plea-in-minutes/
ಬೆಂಗಳೂರು : ಎಡಿಜಿಪಿ ಚಂದ್ರಶೇಖರ್ ಹಾಗೂ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ನಡುವಿನ ವಾಕ್ಸಮರ ಇದೀಗ ತಾರಕಕ್ಕೆ ಏರಿದ್ದು, ಎಚ್ ಡಿ ಕುಮಾರಸ್ವಾಮಿ ಬೆದರಿಸುವುದಾಗಿ ಹೇಳಿಕೆ ನೀಡಿದ್ದರಿಂದ ಈ ವಿಚಾರವಾಗಿ ಬೆಂಗಳೂರಿನ ಸಂಜಯನಗರ ಪೊಲೀಸ್ ಠಾಣೆಯಲ್ಲಿ ಎಡಿಜಿಪಿ ಚಂದ್ರಶೇಖರ್ ಅವರು ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಹೌದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಕುಮಾರಸ್ವಾಮಿ ವಿರುದ್ಧ ಎಡಿಜಿಪಿ ಚಂದ್ರಶೇಖರ್ ಅವರು FIR ದಾಖಲಿಸಿದ್ದಾರೆ.ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಹಾಗೂ ಇತರರು ತೊಂದರೆ ಕೊಡುವುದಾಗಿ ನಾನಾಗೆ ಬೆದರಿಕೆ ಹಾಕಿದ್ದಾರೆ ಎಂದು ಎಫ್ ಐ ಆರ್ ನಲ್ಲಿ ಎಡಿಜಿಪಿ ಚಂದ್ರಶೇಖರ್ ಉಲ್ಲೇಖಿಸಿದ್ದಾರೆ. ಎಚ್ ಡಿ ಕುಮಾರಸ್ವಾಮಿ ಅವರು ತೊಂದರೆ ಕೊಡುವುದಾಗಿ ಬೆದರಿಕೆ ಹಾಕಿದ್ದಾರೆ ಆದ್ದರಿಂದ A1 ಆರೋಪಿಯಾಗಿ HD ಕುಮಾರಸ್ವಾಮಿ, A2 ನಿಖಿಲ್, ಹಾಗೂ A3 ಆರೋಪಿ ಜೆಡಿಎಸ್ ಮುಖಂಡ ಸುರೇಶ್ ಬಾಬು ವಿರುದ್ಧ…
ಸಾಲ ಅಂತ ಇದ್ರೆ ಅದು ನಮ್ಮನ್ನು ನಿದ್ರೆ ಮಾಡಲು ಬಿಡುವುದಿಲ್ಲ ಯಾವಗ ಸಾಲ ತೀರುತ್ತದೆ ಎಂಬ ಚಿಂತೆ ನಿಮ್ಮನ್ನು ಕಾಡುತ್ತಿದೇಯೆ..!! ಸಾಲ ಲಕ್ಷ ಇರಲಿ ಕೋಟಿ ಇರಲಿ ಎಲೆ ಲವಂಗ ಏಲಕ್ಕಿ ಪ್ರಯೋಗ ಮಾಡಿ । ಸಾಲ ತೀರೋದು ಗ್ಯಾರಂಟಿ 1)ಸಾಲ ಲಕ್ಷ ಕೋಟಿ ಇರಲಿ ಎಲೆ ಲವಂಗ ಏಲಕ್ಕಿಯ ಪ್ರಯೋಗ ಮಾಡಿದರೆ ಸಾಲತಿರುವುದು 2)ಪಕ್ಕಾ ಸಾಲ ಅಂತ ಇದ್ರೆ ಅದು ನಮ್ಮನ್ನು ನಿದ್ರೆ ಮಾಡಲು ಬಿಡುವುದಿಲ್ಲ ಯಾವಗ ಸಾಲ ತೀರುತ್ತದೆ ಎಂಬ ಚಿಂತೆ ನಮ್ಮನ್ನು ಕಾಡುತ್ತದೆ ಸಾಲ ಇಲ್ಲದ ಜೀವನ ಅತಿ ಸುಂದರ ಜೀವನ ಎನ್ನಬಹುದು ಸಾಲ ತೆಗೆದುಕೊಳ್ಳುವುದು ತುಂಬಾ ಸುಲಭ ಆದರೆ ಅದನ್ನು ತೀರಿಸುವುದು ತುಂಬಾ ಕಷ್ಟಕರವಾದ ಕೆಲಸ ಎಂದು ಎಲ್ಲರಿಗೂ ಗೊತ್ತು ಕೆಲವೊಮ್ಮೆ ಪರಿಸ್ಥಿತಿಗಳು ಹೇಗೆ ಬರುತ್ತಿದೆ ಎಂದರೆ ತಗೊಂಡ ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ…
ಇಂತಹ ಕೃತ್ಯಗಳು ಭಾರತವನ್ನು ದುರ್ಬಲಗೊಳಿಸುವುದಿಲ್ಲ: ಕೆನಡಾದಲ್ಲಿನ ಹಿಂದೂ ದೇವಾಲಯದ ಮೇಲಿನ ದಾಳಿಗೆ ಮೋದಿ ಪ್ರತಿಕ್ರಿಯೆ
ನವದೆಹಲಿ: ಕೆನಡಾದ ಹಿಂದೂ ದೇವಾಲಯದ ಮೇಲೆ ನಡೆದ ಉದ್ದೇಶಪೂರ್ವಕ ದಾಳಿಯನ್ನು ಖಂಡಿಸಿರುವ ಪ್ರಧಾನಿ ನರೇಂದ್ರ ಮೋದಿ, ಕೆನಡಾ ಸರ್ಕಾರವು ನ್ಯಾಯವನ್ನು ಖಚಿತಪಡಿಸುತ್ತದೆ ಮತ್ತು ಕಾನೂನಿನ ನಿಯಮವನ್ನು ಎತ್ತಿಹಿಡಿಯುತ್ತದೆ ಎಂದು ನಿರೀಕ್ಷಿಸುತ್ತೇನೆ ಎಂದು ಸೋಮವಾರ ಹೇಳಿದ್ದಾರೆ. ಉಭಯ ದೇಶಗಳ ನಡುವೆ ರಾಜತಾಂತ್ರಿಕ ಉದ್ವಿಗ್ನತೆ ಹೆಚ್ಚುತ್ತಿರುವ ಸಮಯದಲ್ಲಿ ಅಪರೂಪದ ಹೇಳಿಕೆಯಲ್ಲಿ, ಕೆನಡಾದಲ್ಲಿ ಭಾರತೀಯ ರಾಜತಾಂತ್ರಿಕರನ್ನು ಬೆದರಿಸುವ ಪ್ರಯತ್ನಗಳು “ಅಷ್ಟೇ ಭಯಾನಕ” ಎಂದು ಮೋದಿ ಸಾಮಾಜಿಕ ಮಾಧ್ಯಮ ಪೋಸ್ಟ್ನಲ್ಲಿ ಹೇಳಿದ್ದಾರೆ. https://twitter.com/narendramodi/status/1853442198575952031 ಒಂಟಾರಿಯೊದ ಬ್ರಾಂಪ್ಟನ್ನಲ್ಲಿರುವ ದೇವಾಲಯದಲ್ಲಿ ಭಾನುವಾರ ನಡೆದ ಹಿಂಸಾಚಾರವನ್ನು ಉಗ್ರಗಾಮಿಗಳು ಮತ್ತು ಪ್ರತ್ಯೇಕತಾವಾದಿಗಳು ನಡೆಸಿದ್ದಾರೆ ಎಂದು ಭಾರತದ ವಿದೇಶಾಂಗ ಸಚಿವಾಲಯ ಹೇಳಿದೆ. ಅಲ್ಲದೇ ಇಂತಹ ಕೃತ್ಯಗಳು ಭಾರತದ ಸಂಕಲ್ಪವನ್ನು ದುರ್ಬಲಗೊಳಿಸುವುದಿಲ್ಲ ಎಂಬುದಾಗಿ ಕೆನಡಾದಲ್ಲಿ ಹಿಂದೂ ದೇವಾಲಯದ ಮೇಲಿನ ದಾಳಿಗೆ ಪ್ರಧಾನಿ ಮೋದಿ ಪ್ರತಿಕ್ರಿಯೆ ನೀಡಿದ್ದಾರೆ. https://kannadanewsnow.com/kannada/notification-for-by-elections-to-urban-local-body-vacant-seats-in-the-state-released/ https://kannadanewsnow.com/kannada/sensex-crashes-1400-points-investor-wealth-worth-rs-8-lakh-cr-wiped-out-why-is-market-falling/