Subscribe to Updates
Get the latest creative news from FooBar about art, design and business.
Author: kannadanewsnow09
ಮೈಸೂರು : ಸಮಾಜದಲ್ಲಿ ಅಸಮಾನತೆ ಇನ್ನೂ ಜೀವಂತವಾಗಿದ್ದು, ಅಸಮಾನತೆ ಹೋಗುವವರೆಗೂ, ಎಲ್ಲರಿಗೂ ನ್ಯಾಯ ಸಿಗುವವರೆಗೂ ಹೋರಾಟ ಹಾಗೂ ಜನರ ಕೆಲಸ ಮಾಡುತ್ತಲೇ ಇರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದಂತ ಅವರು, ಮಾಜಿ ಮುಖ್ಯಮಂತ್ರಿ ದೇವರಾಜ್ ಅರಸು ಅವರ ದಾಖಲೆಯನ್ನು ಸರಿಗಟ್ಟಿರುವ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ, ದಾಖಲೆಗಳನ್ನು ಮುರಿಯಲೆಂದು ರಾಜಕೀಯ ಮಾಡಿಲ್ಲ. ಈ ದಾಖಲೆ ಕಾಕತಾಳೀಯವಾಗಿ ಆಗಿದೆ. ದೇವರಾಜ ಅರಸು ಅವರು ಎಷ್ಟು ವರ್ಷ ಆಡಳಿತ ಮಾಡಿದ್ದಾರೆಂದು ತಿಳಿದಿರಲಿಲ್ಲ. ಜನರ ಆಶೀರ್ವಾದದಿಂದ ದೇವರಾಜ ಅರಸು ಅವರ ದಾಖಲೆಯನ್ನು ಮುರಿಯಲು ಸಾಧ್ಯವಾಗಿದೆ ಎಂದರು. ಮುಖ್ಯಮಂತ್ರಿಯಾಗಿ ಅವಧಿ ಪೂರ್ಣಗೊಳಿಸುವ ವಿಶ್ವಾಸವಿದೆ ಮುಖ್ಯಮಂತ್ರಿಯಾಗಿ ಅವಧಿಯನ್ನು ಪರಿಪೂರ್ಣ ಮಾಡುವ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ ಆ ಕುರಿತು ಪಕ್ಷದ ವರಿಷ್ಠರು ತೀರ್ಮಾನಿಸಬೇಕಿದೆ ಎಂದರು. ಮುಖ್ಯಮಂತ್ರಿಯಾಗಿ ಅವಧಿ ಪೂರ್ಣಗೊಳಿಸುವ ವಿಶ್ವಾಸವಿದೆ ಎಂದರು. ಮುಖ್ಯಮಂತ್ರಿಗಳ ಅಭಿಮಾನಿಗಳು ನಾಟಿ ಕೋಳಿ ಪಲಾವ್ ಹಂಚಿರುವ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿ ನನಗೆ ಈ ಬಗ್ಗೆ ತಿಳಿದಿಲ್ಲ…
ಬೆಂಗಳೂರು : “ಸಿದ್ದರಾಮಯ್ಯ ಅವರಿಗೆ ಒಳ್ಳೆಯದಾಗಲಿ, ಐ ವಿಶ್ ಹಿಮ್ ಆಲ್ ದ ಬೆಸ್ಟ್. ಗುಡ್ ಲಕ್” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಸದಾಶಿವನಗರ ನಿವಾಸ ಹಾಗೂ ಬೆಂಗಳೂರು ವಿವಿಯ ಜ್ಞಾನಜ್ಯೋತಿ ಸಭಾಂಗಣದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು. ಪೂರ್ಣಾವಧಿಗೆ ನಾನೇ ಸಿಎಂ ಆಗಿ ಮುಂದುವರಿಯುವ ವಿಶ್ವಾಸವಿದೆ ಎಂಬ ಸಿದ್ದರಾಮಯ್ಯ ಅವರ ಹೇಳಿಕೆ ಬಗ್ಗೆ ಕೇಳಿದಾಗ, ಈ ರೀತಿ ಪ್ರತಿಕ್ರಿಯೆ ನೀಡಿದರು. ಈ ಹೇಳಿಕೆಯಿಂದ ಮತ್ತೆ ಗೊಂದಲವಾಗುವುದಿಲ್ಲವೇ ಎಂದು ಕೇಳಿದಾಗ, “ನೀವುಗಳು (ಮಾಧ್ಯಮಗಳು) ಗೊಂದಲ ಮಾಡಿಕೊಳ್ಳುತ್ತಿದ್ದೀರಿ. ನಮಲ್ಲಿ ಯಾರಿಗೂ ಗೊಂದಲವಿಲ್ಲ” ಎಂದು ತಿಳಿಸಿದರು. ಸಿಎಂ ಅವರು ದಾಖಲೆ ನಿರ್ಮಿಸುತ್ತಿರುವ ಬಗ್ಗೆ ಕೇಳಿದಾಗ, “ಅವರಿಗೆ ಯಶಸ್ಸಾಗಲಿ, ಒಳ್ಳೆಯದಾಗಲಿ. ಅವರಿಗೆ ಹೆಚ್ಚು ಆರೋಗ್ಯ ಸಿಗಲಿ, ಜನರ ಸೇವೆ ಮಾಡುವ ಅವಕಾಶವನ್ನು ಭಗವಂತ ಅವರಿಗೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ತಿಳಿಸಿದರು. ಕುಮಾರಸ್ವಾಮಿ ಜೇಬಲ್ಲೇ ಐಟಿ ಇಲಾಖೆ ಇದೆಯಲ್ಲಾ? ಮೃತ ಕಾಂಗ್ರೆಸ್ ಕಾರ್ಯಕರ್ತನ ಕುಟುಂಬಕ್ಕೆ ನೀಡಿದ ಪರಿಹಾರ ಹಣ ಮೂಲ…
ಶಿವಮೊಗ್ಗ : ಜಿಲ್ಲೆಯ ಪ್ರಸಿದ್ಧ ಸಾಗರದ ಮಾರಿಜಾತ್ರೆಯನ್ನು ಯಶಸ್ವಿಗೊಳಿಸುವಂತೆ ಪ್ರತಿಯೊಬ್ಬ ಅಧಿಕಾರಿಗಳು ಶ್ರಮಿಸಲು ಶಾಸಕ ಗೋಪಾಲಕೃಷ್ಣ ಬೇಳೂರು ಕರೆ ನೀಡಿದರು. ಅಲ್ಲದೇ ಒಂದೊಂದು ಸಮಿತಿಗೆ ತಾಲ್ಲೂಕು ಮಟ್ಟದ ಒಬ್ಬೊಬ್ಬ ಅಧಿಕಾರಿಯನ್ನು ನೇಮಕ ಮಾಡಲಾಗುತ್ತದೆ. ಅಧಿಕಾರಿಗಳು ಜಾತ್ರೆ ಯಶಸ್ಸಿಗಾಗಿ ತಮಗೆ ವಹಿಸಿರುವ ಸಮಿತಿ ಜೊತೆ ಸೇರಿ ಕೆಲಸ ಮಾಡಬೇಕೆಂದು ಸೂಚಿಸಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿ ಮಾರಿಕಾಂಬಾ ಜಾತ್ರೆ ಹಿನ್ನೆಲೆಯಲ್ಲಿ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಮಾರಿಕಾಂಬ ಜಾತ್ರೆ ಯಶಸ್ಸಿಗೆ 20 ಉಪ ಸಮಿತಿಗಳನ್ನು ರಚಿಸಲಾಗಿದೆ. ಅಧಿಕಾರಿಗಳ ಜೊತೆ ಸಮಿತಿ ಸಂಚಾಲಕರು, 20 ಸದಸ್ಯರು ಇರುತ್ತಾರೆ. ಎಲ್ಲರೂ ಸೇರಿ ಜಾತ್ರೆ ಯಶಸ್ವಿಗೊಳಿಸುವತ್ತ ಗಮನ ಹರಿಸಬೇಕಾಗಿದೆ ಎಂದರು. ಸಾಗರದ ಮಾರಿಕಾಂಬ ದೇವಿ ಜಾತ್ರೆಗೆ ಕನಿಷ್ಟ 8 ಲಕ್ಷ ಜನರು ಸೇರುವ ನಿರೀಕ್ಷೆ ಇದೆ. ಮೂರು ದಿನಗಳ ಕಾಲ ಅಮ್ಮನವರ ದರ್ಶನಕ್ಕೆ ಲಕ್ಷಾಂತರ ಭಕ್ತರು ಆಗಮಿಸಲಿದ್ದು, ಸದರಿ ಸಾಲಿನಲ್ಲಿ ಬಿಸಿಲಿನಲ್ಲಿ ನಿಲ್ಲುತ್ತಾರೆ. ಅವರಿಗೆ ನೆರಳಿನ ವ್ಯವಸ್ಥೆ ಕಲ್ಪಿಸಲಾಗುತ್ತದೆ.…
ಬೆಂಗಳೂರು : ಮಲೇಷ್ಯಾದ ಪ್ರಮುಖ ಸೆಮಿಕಂಡಕ್ಟರ್ ಹಬ್ ಆಗಿರುವ ಪೆನಾಂಗ್ ರಾಜ್ಯದ ಉನ್ನತ ಮಟ್ಟದ ನಿಯೋಗವು, ಕರ್ನಾಟಕದೊಂದಿಗೆ ಕ್ವಾಂಟಮ್ ತಂತ್ರಜ್ಞಾನ ಅಭಿವೃದ್ಧಿಯಲ್ಲಿ ಸಹಭಾಗಿತ್ವಕ್ಕೆ ಆಸಕ್ತಿ ವ್ಯಕ್ತಪಡಿಸಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್. ಭೋಸರಾಜು ತಿಳಿಸಿದರು. ಇಂದು ವಿಕಾಸಸೌಧದಲ್ಲಿ ಪೆನಾಂಗ್ ರಾಜ್ಯದ ಉಪಮುಖ್ಯಮಂತ್ರಿಗಳಾದ ಶ್ರೀ ಜಗದೀಪ್ ಸಿಂಗ್ ದಿಯೋ ನೇತೃತ್ವದ ನಿಯೋಗದೊಂದಿಗೆ ಸಭೆ ನಡೆಸಿದ ನಂತರ ಸಚಿವರು ಈ ವಿಷಯ ತಿಳಿಸಿದರು. ಸಭೆಯಲ್ಲಿ ಮಾತನಾಡಿದ ಪೆನಾಂಗ್ ಉಪಮುಖ್ಯಮಂತ್ರಿ ಜಗದೀಪ್ ಸಿಂಗ್ ದಿಯೋ, ತಮ್ಮ ರಾಜ್ಯದ ಯಶಸ್ಸಿನ ಮಾದರಿಯನ್ನು ವಿವರಿಸಿದರು. “ಪೆನಾಂಗ್ ಭೌಗೋಳಿಕವಾಗಿ ಸಣ್ಣ ರಾಜ್ಯವಾಗಿದ್ದರೂ, ಇಂದು ಜಾಗತಿಕ ಮಟ್ಟದ ಸೆಮಿಕಂಡಕ್ಟರ್ ಶಕ್ತಿಯಾಗಿ ಹೊರಹೊಮ್ಮಿದೆ. ಇದಕ್ಕೆ ಮುಖ್ಯ ಕಾರಣ ನಮ್ಮಲ್ಲಿರುವ ಬಲವಾದ ‘ಉದ್ಯಮ ಮತ್ತು ಸಂಶೋಧನಾ ಸಹಭಾಗಿತ್ವ’ (Industry-Research Collaboration). ಇದರಲ್ಲಿ ಪೆನಾಂಗ್ ವಿಶ್ವವಿದ್ಯಾಲಯವು (Penang University) ನಿರ್ಣಾಯಕ ಪಾತ್ರ ವಹಿಸಿದೆ. ಉದ್ಯಮಗಳಿಗೆ ನೇರವಾಗಿ ಬೆಂಬಲ ನೀಡುವಂತಹ ಸಂಶೋಧನಾ ಪರಿಸರ ವ್ಯವಸ್ಥೆಯನ್ನು ವಿವಿ ನಿರ್ಮಿಸಿದೆ,” ಎಂದು ಅವರು ತಿಳಿಸಿದರು.…
ಬೆಂಗಳೂರು: ಸಾರಿಗೆ ( RTO) ಇಲಾಖೆಯಲ್ಲಿ ವಾಹನಗಳ Data Anomalies/ Duplicate Data ಗಳನ್ನು ಸರಿಪಡಿಸುವ ಸಂಬಂಧ ಅಧಿಕಾರ ವಿಕೇಂದ್ರೀಕರಣ ಮಾಡಿ ಆದೇಶ ಮಾಡಲಾಗಿದೆ. ಈ ಮೂಲಕ ವಾಹನ ಮಾಲೀಕರಿಗೆ ಗುಡ್ ನ್ಯೂಸ್ ನೀಡಲಾಗಿದೆ. ರಾಜ್ಯದ ಯಾವುದೇ ಸ್ಥಳದಲ್ಲಿ ವಾಹನಗಳ Data Anomalies ಗಳನ್ನು ಸರಿಪಡಿಸುವ ಅಥವಾ Duplicate Data ಸರಿಪಡಿಸಲು ಬೆಂಗಳೂರಿನ ಕೇಂದ್ರ ಕಛೇರಿಗೆ ಬಂದು ಸರಿ ಮಾಡಿಸಬೇಕಾಗಿತ್ತು. ಈ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬರುತ್ತಿದ್ದು, ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿದ ಸಾರಿಗೆ ಹಾಗೂ ಮುಜರಾಯಿ ಸಚಿವರಾದ ರಾಮಲಿಂಗಾ ರೆಡ್ಡಿ ಅವರು, ತುರ್ತು ಕ್ರಮ ತೆಗೆದುಕೊಳ್ಳಲು ಸೂಚನೆ ನೀಡಿದರು. ಸಾರಿಗೆ ಸಚಿವರ ಸೂಚನೆಯಂತೆ, ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ,ಅನುಮತಿ ಪಡೆದು, ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆ, ವಿನಾಕಾರಣ ವಿಳಂಬ ತಪ್ಪಿಸಲು ಅಧಿಕಾರ ವಿಕೇಂದ್ರೀಕರಣ ಮಾಡಲಾಯಿತು. RTO ಕಛೇರಿಯ ಕೆಲಸಗಳು ಸಾರ್ವಜನಿಕರಿಗೆ ಇನ್ನು ಹತ್ತಿರವಾಗಿಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಇರುವ 6 ವಿಭಾಗೀಯ ಕಛೇರಿಗಳಿಗೆ ( 6 Joint Commissioners Transport )…
ಬೆಂಗಳೂರು : ರಾಜ್ಯದ ದೀರ್ಘಾವಧಿ ಸಿಎಂ ಹೆಗ್ಗಳಿಕೆಗೆ ಸಿದ್ದರಾಮಯ್ಯ ಪಾತ್ರವಾಗಿದ್ದು, ಇಂದು ದೇವರಾಜ್ ಅರಸು ದಾಖಲೆಯನ್ನು ಸಿಎಂ ಸಿದ್ದರಾಮಯ್ಯ ಮುರಿದಿದ್ದಾರೆ. ಈ ಹಿಂದೆ 7 ವರ್ಷ 239 ದಿನಗಳ ಕಾಲ ಡಿ.ದೇವರಾಜ ಅರಸು ಸಿಎಂ ಆಗಿದ್ದರು. ಇಂದಿಗೆ 7 ವರ್ಷ 240 ದಿನ ಸಿಎಂ ಸಿದ್ದರಾಮಯ್ಯ ಪೂರೈಸಿದ್ದಾರೆ. ಇನ್ನು 3ನೇ ಸ್ಥಾನದಲ್ಲಿ ಎಸ್ ನಿಜಲಿಂಗಪ್ಪ 7 ವರ್ಷ 175 ದಿನ, 4 ನೇ ಸ್ಥಾನದಲ್ಲಿ ರಾಮಕೃಷ್ಣ ಹೆಗಡೆ 5 ವರ್ಷ 216 ದಿನ, 5ನೇ ಸ್ಥಾನದಲ್ಲಿ ಬಿಎಸ್ ಯಡಿಯೂರಪ್ಪ 5 ವರ್ಷ 82 ದಿನ ಸಿಎಂ ಆಗಿದ್ದಾರೆ. ರಾಜ್ಯ ಬಜೆಟ್ ಮಂಡನೆಯಲ್ಲಿ ಸಿಎಂ ಸಿದ್ದರಾಮಯ್ಯ ದಾಖಲೆ ಬರೆದಿದ್ದಾರೆ ಇದುವರೆಗೂ 16 ಬಜೆಟ್ ಮಂಡಿಸಿದ್ದಾರೆ. ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿ. ದೇವರಾಜ್ ಅರಸ್ ಅವರನ್ನು ಹಿಂದಿಕ್ಕಿ ರಾಜ್ಯದ ಅತ್ಯಂತ ದೀರ್ಘಾವಧಿಯ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಈ ಐತಿಹಾಸಿಕ ಮೈಲಿಗಲ್ಲು ಜನರ ಆಶೀರ್ವಾದಕ್ಕೆ ಸಲ್ಲುತ್ತದೆ ಎಂದು ಅವರು ಹೇಳಿದರು. ಸಿದ್ದರಾಮಯ್ಯ…
ಬೆಂಗಳೂರು: ಕೆ ಎಸ್ ಆರ್ ಟಿ ಸಿ ಬಸ್ ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಎನ್ನುವಂತೆ ನಿಗಮದ ಪ್ರತಿಷ್ಠಿತ ಸಾರಿಗೆ ಬಸ್ಸುಗಳ ಪ್ರಯಾಣದ ಟಿಕೆಟ್ ದರದಲ್ಲಿ ರಿಯಾಯಿತಿಯನ್ನು ಘೋಷಣೆ ಮಾಡಲಾಗಿದೆ. ಈ ಕುರಿತಂತೆ ಕೆ ಎಸ್ ಆರ್ ಟಿ ಸಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಸಾರ್ವಜನಿಕ ಪ್ರಯಾಣಿಕರಿಗೆ ಕರಾರಸಾ ನಿಗಮವು ಉತ್ತಮ ಸಾರಿಗೆ ಸೌಲಭ್ಯ ಕಲ್ಪಿಸುತ್ತಿದ್ದು, ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ನಿಗಮದ ವತಿಯಿಂದ ಆಯ್ದ ಮಾರ್ಗಗಳಾದ ಬೆಂಗಳೂರು-ಮಂಗಳೂರು, ಬೆಂಗಳೂರು-ಕುಂದಾಪುರ, ಬೆಂಗಳೂರು-ಉಡುಪಿ, ಬೆಂಗಳೂರು-ಧರ್ಮಸ್ಥಳ, ಬೆಂಗಳೂರು-ಕುಕ್ಕೆಸುಬ್ರಮಣ್ಯ, ಬೆಂಗಳೂರು-ಪುತ್ತೂರು, ಬೆಂಗಳೂರು-ಮಡಿಕೇರಿ/ವಿರಾಜಪೇಟೆ. ಬೆಂಗಳೂರು-ದಾವಣಗೆರೆ, ಬೆಂಗಳೂರು-ಶಿವಮೊಗ್ಗ/ಸಾಗರ, ಬೆಂಗಳೂರು-ಚೆನ್ನೈ, ಬೆಂಗಳೂರು-ಹೈದರಾಬಾದ್/ಸಿಕಂದರಾಬಾದ್, ಬೆಂಗಳೂರು-ತಿರುಪತಿ, ಬೆಂಗಳೂರು-ಮಂತ್ರಾಲಯ, ಬೆಂಗಳೂರು-ಪೂನಾ/ಮುಂಬೈ, ಬೆಂಗಳೂರು-ವಿಜಯವಾಡ, ಬೆಂಗಳೂರು-ಎರ್ನಾಕುಲಂ, ಬೆಂಗಳೂರು-ಮದುರೈ, ಬೆಂಗಳೂರು-ಕೋಯಿಮತ್ತೂರು, ಬೆಂಗಳೂರು-ತಿಶ್ರೂರು ಇನ್ನು ಕೆಲವು ಆಯ್ದ ಮಾರ್ಗಗಳಲ್ಲಿ ಕಾರ್ಯಾಚರಣೆ ಮಾಡುತ್ತಿರುವ ಪ್ರತಿಷ್ಠಿತ ಸಾರಿಗೆಗಳಾದ ರಾಜಹಂಸ, ನಾನ್ ಎಸಿ ಸ್ಲೀಪರ್, ಐರಾವತ, ಐರಾವತ ಕ್ಲಬ್ ಕ್ಲಾಸ್, ಎಸಿ ಸ್ಲೀಪರ್, ಮಲ್ಟಿ ಆಕ್ಸೆಲ್ ಎಸಿ ಸ್ಲೀಪರ್ ಮಾದರಿಯ ಸಾರಿಗೆಗಳ ಪ್ರಯಾಣದರಗಳಲ್ಲಿ ಶೇಕಡ 5 ರಿಂದ 15 ರವರೆಗೆ ರಿಯಾಯಿತಿ ನೀಡಲಾಗಿದೆ. ಸದರಿ ರಿಯಾಯಿತಿಯು…
ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್ಸಿಎಲ್) ವತಿಯಿಂದ ರಾಷ್ಟ್ರೀಯ ವಿದ್ಯಾಲಯ ರಸ್ತೆ ರಿಂದ ಡೆಲ್ಟಾ ಎಲೆಕ್ಟ್ರಾನಿಕ್ಸ್ ಬೊಮ್ಮಸಂದ್ರವರೆಗೆ (ಹಳದಿ ಮಾರ್ಗ) ಮೆಟ್ರೋ ರೈಲು ಸಂಚಾರವನ್ನು 11.08.2025 ರಿಂದ ಆರಂಭಿಸಲಾಗಿದೆ. ಈ ಮಾರ್ಗದಲ್ಲಿ ರೈಲು ಸೆಟ್ಗಳ ಸಂಖ್ಯೆಯನ್ನು ಹೆಚ್ಚಿಸಿದ ಪರಿಣಾಮವಾಗಿ, ವಿಶೇಷವಾಗಿ ಆನೇಕಲ್ ಹಾಗೂ ಬೊಮ್ಮಸಂದ್ರ ಮೆಟ್ರೋ ನಿಲ್ದಾಣದ ನಡುವೆ ಸಂಚರಿಸುವ ಪ್ರಯಾಣಿಕರ ಸಂಖ್ಯೆ ಹೆಚ್ಚಿದ್ದು, ಗರಿಷ್ಠ ಸಮಯಗಳಲ್ಲಿ ಸಂಚಾರ ದಟ್ಟಣೆ ಉಂಟಾಗುತ್ತಿದೆ. ಮೆಟ್ರೋ ಪ್ರಯಾಣಿಕರ ಅನುಕೂಲಕ್ಕಾಗಿ ಹಾಗೂ ಅಂತಿಮ ಹಂತದ ಸಂಪರ್ಕವನ್ನು (Last Mile Connectivity) ಸುಧಾರಿಸುವ ಉದ್ದೇಶದಿಂದ, ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ಮತ್ತು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಪರಸ್ಪರ ಸಂಯೋಜನೆ ಮಾಡಿಕೊಂಡು ವಿಶೇಷ ಫೀಡರ್ ಬಸ್ ಸೇವೆಗಳನ್ನು ಪರಿಚಯಿಸಲಾಗಿದೆ. ಈ ಯೋಜನೆಯ ಭಾಗವಾಗಿ, ದಟ್ಟಣೆಯನ್ನು ಕಡಿಮೆ ಮಾಡಲು ಹಾಗೂ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸುವ ಉದ್ದೇಶದಿಂದ, ಬಿಎಂಟಿಸಿ ವತಿಯಿಂದ 04 (ನಾಲ್ಕು) ವಿಶೇಷ ಮೆಟ್ರೋ ಫೀಡರ್ ಬಸ್ ಸೇವೆಗಳನ್ನು ಡೆಲ್ಟಾ ಎಲೆಕ್ಟ್ರಾನಿಕ್ಸ್…
ಮಂಡ್ಯ : ಜಿಲ್ಲೆಯಲ್ಲಿ ನಿರುದ್ಯೋಗವನ್ನು ಹೋಗಲಾಡಿಸಲು ಜಿಲ್ಲೆಗೆ ಕಾರ್ಖಾನೆಗಳು ಬರಬೇಕು ಹಾಗಾಗಿ ಸಾತನೂರು ಫಾರ್ಮ್ ನಲ್ಲಿ ಕಾಡಾಗೆ ಸೇರಿದ ಸರ್ವೇ ನಂ 257 ರಲ್ಲಿರುವ 90 ಎಕರೆ ಜಾಗವನ್ನು ಇಂದು ವೀಕ್ಷಣೆ ಮಾಡಲಾಗಿದೆ ಎಂದು ಮಂಡ್ಯ ಕ್ಷೇತ್ರದ ಶಾಸಕ ರವಿಕುಮಾರ್ ಸೋಮವಾರ ಹೇಳಿದರು. ಮಂಡ್ಯ ನಗರ ಬಳಿಯ ಸಾತನೂರು ಫಾರ್ಮ್ ನಲ್ಲಿ ಖಾಲಿ ಇರುವ ಜಾಗವನ್ನು ಅಧಿಕಾರಿಗಳ ಜೊತೆಗೆ ವೀಕ್ಷಣೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಸದರಿ ಜಾಗ ಅಚ್ಚುಕಟ್ಟಾದ ಪ್ರದೇಶವಾಗಿದೆ. ಜಾಗವನ್ನು ಖಾಲಿ ಬಿಡುವುದಕ್ಕಿಂತ ಕೈಗಾರಿಕೆಗೆ ಮೀಸಲಿಡಬೇಕು. ಈಗಾಗಲೇ ಮುಖ್ಯಮಂತ್ರಿಗಳು , ಉಪಮುಖ್ಯಮಂತ್ರಿಗಳು ಹಾಗೂ ಕೃಷಿ ಸಚಿವರಾದ ಚೆಲುವರಾಯಸ್ವಾಮಿ ಅವರು ಸದರಿ ಜಾಗಕ್ಕೆ ಕಾರ್ಖಾನೆಗಳು ಬರುವುದೇ ಆದರೆ ಕ್ಯಾಬಿನೆಟ್ ನಲ್ಲಿ ಚರ್ಚಿಸಿ ಕೈಗಾರಿಕೆಗೆ ಮೀಸಲಿಡೋಣ ಎಂದು ಹೇಳಿದ್ದಾರೆ ಎಂದರು. ಹಾಗಾಗಿ ಇಂದು ಸ್ಥಳವನ್ನು ವೀಕ್ಷಣೆ ಮಾಡಲು ಆಗಮಿಸಿದ್ದೇನೆ. ಜಾಗವು ಉತ್ತಮವಾಗಿದ್ದು ಮೂರು ಕಡೆಯಿಂದ ರಸ್ತೆ ಕೂಡಿದೆ. ನೀರಿನ ಸೌಲಭ್ಯವು ಸೂಕ್ತವಾಗಿದ್ದು ನಗರಕ್ಕೆ ಹೊಂದಿಕೊಂಡಂತೆ ಇದೆ. ವಿದೇಶದಗಳಿಂದ ಬರುವ ಕಾರ್ಖಾನೆಗಳಿಗಾಗಿ ನೀಡಬೇಕಾದ…
ಮಂಡ್ಯ : ಕಳೆದ ಆರು ತಿಂಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬ ಆತನ ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದು, ಸೋಮವಾರ ಮನೆಯಲ್ಲಿ ಅಸ್ಥಿಪಂಜರ ಪತ್ತೆಯಾಗಿರುವ ಘಟನೆ ಸಕ್ಕರೆನಾಡು ಮಂಡ್ಯದಲ್ಲಿ ಜರುಗಿದೆ. ಮದ್ದೂರು ತಾಲೂಕಿನ ದೊಡ್ಡ ಅರಸಿನಕೆರೆ ಗ್ರಾಮದ ಮಹದೇವಸ್ವಾಮಿ ಅಲಿಯಾಸ್ ಬೋಟಿ ಮಹದೇವ (45) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ ಎನ್ನಲಾಗಿದೆ. ಮೃತ ವ್ಯಕ್ತಿ ಮಹದೇವಸ್ವಾಮಿ ಕೆ.ಎಂ.ದೊಡ್ಡಿಯಲ್ಲಿ ಬೀದಿ ಬದಿ ಹೋಟೆಲ್ ನಡೆಸುತ್ತಿದ್ದು, ದೊಡ್ಡಅರಸಿನಕೆರೆ ಚಿಕ್ಕಮಾಯಿಗಯ್ಯ ಎಂಬುವವರ ಮನೆಯಲ್ಲಿ ಬಾಡಿಗೆಗೆ ಪಡೆದು ವಾಸವಿದ್ದರು. ಕಳೆದ ಒಂದೂವರೆ ವರ್ಷದ ಹಿಂದೆ ವಿಪರೀತ ಸಾಲ ಮಾಡಿಕೊಂಡಿದ್ದರಿಂದ ಮನೆಬಿಟ್ಟು ನಾಪತ್ತೆಯಾಗಿದ್ದನು. ಈತನ ಪತ್ನಿ ನಾಪತ್ತೆಯಾದ ಗಂಡನನ್ನು ಸಾಕಷ್ಟು ಹುಡುಕಿ ಸಾಕಾಗಿದ್ದರು. ಬಳಿಕ, ತಮ್ಮ ಮಕ್ಕಳ ಭವಿಷ್ಯದ ದೃಷ್ಟಿಯಿಂದ ಬೆಂಗಳೂರಿಗೆ ತೆರಳಿ ಖಾಸಗಿ ಕಾರ್ಖಾನೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಕಳೆದ ಒಂದೂವರೆ ವರ್ಷದಿಂದಲೂ ಮನೆ ಬಾಡಿಗೆಗೆ ನೀಡಿದ್ದ ಮಾಯಿಗಯ್ಯ ಅವರ ಪತ್ನಿ ಗೀತಾ ಎಂಬುವವರು ಬಾಡಿಗೆ ನೀಡುವಂತೆ ಕೇಳಿದ್ದರು. ಆದರೆ ಬಾಡಿಗೆ ನೀಡಲು ಮಹದೇವಸ್ವಾಮಿ ಇಲ್ಲದಿರುವ ಕಾರಣ ಈತನ ತಮ್ಮ…














