Subscribe to Updates
Get the latest creative news from FooBar about art, design and business.
Author: kannadanewsnow09
ನವದೆಹಲಿ: ನವೆಂಬರ್ 2 ರಂದು ತಮ್ಮ 59 ನೇ ಹುಟ್ಟುಹಬ್ಬದಂದು ಅಭಿಮಾನಿ ಕಾರ್ಯಕ್ರಮವೊಂದರಲ್ಲಿ ನಟ ಶಾರುಖ್ ಖಾನ್ ಧೂಮಪಾನವನ್ನು ತ್ಯಜಿಸುವ ಬಗ್ಗೆ ಮಾತನಾಡಿದರು. ಅವರ ಅಭಿಮಾನಿಗಳು ಅವರ ನಿರ್ಧಾರವನ್ನು ಆಚರಿಸುತ್ತಿದ್ದಂತೆ, ಕೆಲವರು ಧೂಮಪಾನವನ್ನು ತ್ಯಜಿಸುವ ಉದ್ದೇಶವನ್ನು ವ್ಯಕ್ತಪಡಿಸಿದರು. ಆದಾಗ್ಯೂ, 30 ವರ್ಷಗಳಿಂದ ಆಕ್ರಮಣಕಾರಿಯಾಗಿ ಧೂಮಪಾನ ಮಾಡಿದ ಶಾರುಖ್ ಈ ವಿಷಯದಲ್ಲಿ ತಮ್ಮನ್ನು ತಾವು ರೋಲ್ ಮಾಡೆಲ್ ಎಂದು ಪರಿಗಣಿಸುವುದಿಲ್ಲ ಎಂದು ಹೇಳಿದ್ದಾರೆ. ಈವೆಂಟ್ನ ವೀಡಿಯೊದಲ್ಲಿ ಅಭಿಮಾನಿಗಳು ತಮ್ಮ ಆರಾಧ್ಯ ದೈವದ ಹೆಜ್ಜೆಗಳನ್ನು ಅನುಸರಿಸುವ ಬದ್ಧತೆಯನ್ನು ಘೋಷಿಸುವುದನ್ನು ತೋರಿಸಿದೆ. ಇದಕ್ಕೆ ಪ್ರತಿಕ್ರಿಯಿಸಿದ ಎಸ್ಆರ್ಕೆ, “ಜಬ್ ಜಬ್ ಜಿಂದಗಿ ಮೇ ಜೈಸಾ ಅಚ್ಚಾ ಲಗೆ ವೋ ಕರೋ… ನನ್ನ ರೋಲ್ ಮಾಡೆಲ್ ನಹೀ ಹೂಂ… (ನಿಮಗೆ ಯಾವುದು ಸರಿ ಎನಿಸುತ್ತದೆಯೋ ಅದನ್ನು ಮಾಡಿ. ನಾನು ರೋಲ್ ಮಾಡೆಲ್ ಅಲ್ಲ. 30 ವರ್ಷಗಳ ಕಾಲ ಧೂಮಪಾನ ಮಾಡಿದ ನಂತರ ಧೂಮಪಾನವನ್ನು ತ್ಯಜಿಸಲು ಸಲಹೆ ನೀಡುವುದು ಸರಿ ಎಂದು ನಾನು ಭಾವಿಸುವುದಿಲ್ಲ ಎಂದು ಶಾರುಖ್ ಒತ್ತಿ ಹೇಳಿದರು.…
ಜೀವನದಲ್ಲಿ ಎಷ್ಟೇ ದೊಡ್ಡ ಸಮಸ್ಯೆ ಬಂದರೂ ಕಣ್ಣಿಗೆ ಗೊತ್ತಾಗುವುದಿಲ್ಲ. ಆದರೆ ಸ್ವಲ್ಪ ಸಾಲ ತೆಗೆದುಕೊಂಡರೆ ಸಾಕು. ಆ ಸಾಲದ ಜೊತೆಗೆ ಸಂಪೂರ್ಣ ಪರಿಹಾರ, ನಮಗೆ ಏನೂ ಉಳಿಯುವುದಿಲ್ಲ. ಎಷ್ಟೇ ದೊಡ್ಡ ಋಣವಾದರೂ ಆ ಋಣ ತೀರಿಸಲು ನಾವು ಮಾಡಬೇಕಾದ ಪೂಜೆ ಮುರುಗನ ಆರಾಧನೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ…
ಮೈಸೂರು: 40 ವರ್ಷದ ರಾಜಕಾರಣದಲ್ಲಿ ಸಿಎಂ ಸಿದ್ಧರಾಮಯ್ಯಗೆ ವಿಚಾರಣೆಗೆ ಹಾಜರಾಗುವಂತೆ ಮೊದಲ ಬಾರಿಗೆ ಲೋಕಾಯುಕ್ತದಿಂದ ನೋಟಿಸ್ ನೀಡಲಾಗಿದೆ. ನವೆಂಬರ್.6ರಂದು ಮುಡಾ ಹಗರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ. ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಎ.1 ಆರೋಪಿಯಾಗಿದ್ದಾರೆ. ಅವರಿಗೆ ನವೆಂಬರ್.6ರಂದು ಮುಡಾ ಹಗರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ನವೆಂಬರ್.6ರಂದು ಬೆಳಿಗ್ಗೆ 10 ಗಂಟೆಗೆ ಮೈಸೂರಿನ ಲೋಕಾಯುಕ್ತ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಸಿಎಂ ಸಿದ್ಧರಾಮಯ್ಯಗೆ ನೋಟಿಸ್ ನಲ್ಲಿ ತಿಳಿಸಲಾಗಿದೆ. ಈಗಾಗಲೇ ಮುಡಾ ಹಗರಣದಲ್ಲಿ ಎ.2 ಆರೋಪಿಯಾಗಿರುವಂತ ಸಿಎಂ ಸಿದ್ಧರಾಮಯ್ಯ ಪತ್ನಿ ಪಾರ್ವತಿ, ಎ3 ಆರೋಪಿ ಮಲ್ಲಿಕಾರ್ಜುನ, ಎ.4 ಆರೋಪಿಯನ್ನು ವಿಚಾರಣೆಗೆ ಲೋಕಾಯುಕ್ತ ಅಧಿಕಾರಿಗಳು ಒಳಪಡಿಸಿದ್ದರು. ಇದೀಗ ಸಿಎಂ ಸಿದ್ಧರಾಮಯ್ಯಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ. https://kannadanewsnow.com/kannada/people-of-soraba-taluk-mescom-to-hold-mass-contact-meeting-tomorrow-on-the-spot-solution-to-your-problem/ https://kannadanewsnow.com/kannada/sensex-crashes-1400-points-investor-wealth-worth-rs-8-lakh-cr-wiped-out-why-is-market-falling/
ಶಿವಮೊಗ್ಗ: ಮೆಸ್ಕಾಂ ಗ್ರಾಹಕರ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಮಹತ್ವದ ಕ್ರಮ ಎನ್ನುವಂತೆ ಸೊರಬ ಮೆಸ್ಕಾಂ ಕಚೇರಿಯಲ್ಲಿ ನಾಳೆ ಜನ ಸಂಪರ್ಕ ಸಭೆಯನ್ನು ನಿಗದಿ ಪಡಿಸಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಸೊರಬ ಮೆಸ್ಕಾಂ ಎಇಇ ಮಾಹಿತಿ ಹಂಚಿಕೊಂಡಿದ್ದು, ದಿನಾಂಕ 05-11-2024ರಂದು ಬೆಳಿಗ್ಗೆ 10.30ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಮೆಸ್ಕಾಂ ಸೊರಬ ಉಪ ವಿಭಾಗೀಯ ಕಚೇರಿಯಲ್ಲಿನ ಸಭಾಂಗಣದಲ್ಲಿ ಜನ ಸಂಪರ್ಕ ಸಭೆಯನ್ನು ಏರ್ಪಡಿಸಲಾಗಿದೆ ಎಂದಿದ್ದಾರೆ. ನಾಳೆಯ ಮೆಸ್ಕಾಂ ಜನ ಸಂಪರ್ಕ ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು, ಸಾರ್ವಜನಿಕರು, ವಿದ್ಯುತ್ ಗ್ರಾಹಕರು ಭಾಗವಹಿಸಿ, ವಿದ್ಯುತ್ ಸಮಸ್ಯೆ ಕುರಿತು ತಮ್ಮ ಅಹವಾಲುಗಳನ್ನು ಸಲ್ಲಿಸಬಹುದಾಗಿದೆ. ಅವುಗಳನ್ನು ಪರಿಹರಿಸುವಂತ ಕೆಲಸ ಮಾಡಲಾಗುತ್ತದೆ ಎಂಬುದಾಗಿ ಸೊರಬ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ. ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು https://kannadanewsnow.com/kannada/mig-29-fighter-jet-crashes-near-agra/ https://kannadanewsnow.com/kannada/sensex-crashes-1400-points-investor-wealth-worth-rs-8-lakh-cr-wiped-out-why-is-market-falling/ https://kannadanewsnow.com/kannada/breaking-deeply-concerned-india-condemns-violence-against-hindus-in-canada/
ನವದೆಹಲಿ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (State Bank of India – SBI) ಗ್ರಾಹಕರನ್ನು ಗುರಿಯಾಗಿಸಿಕೊಂಡು ಹೊಸ ಹಗರಣದ ಬಗ್ಗೆ ಪ್ರೆಸ್ ಇನ್ಫಾರ್ಮೇಶನ್ ಬ್ಯೂರೋ ಎಚ್ಚರಿಕೆ ನೀಡಿದೆ. ಭಾರತ ಸರ್ಕಾರದ ನೋಡಲ್ ಏಜೆನ್ಸಿಯ ಸಲಹೆಯ ಪ್ರಕಾರ, ನಕಲಿ “ಎಸ್ಬಿಐ ರಿವಾರ್ಡ್ಗಳನ್ನು” ರಿಡೀಮ್ ಮಾಡಲು ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಲು ಬಳಕೆದಾರರನ್ನು ಪ್ರೇರೇಪಿಸುವ ಮೋಸದ ಸಂದೇಶಗಳನ್ನು ಸ್ಕ್ಯಾಮರ್ಗಳು ಪ್ರಸಾರ ಮಾಡುತ್ತಿದ್ದಾರೆ. ಪಿಐಬಿ ತನ್ನ ಸಾಮಾಜಿಕ ಮಾಧ್ಯಮ ಚಾನೆಲ್ನಲ್ಲಿ ಅಂತಹ ಒಂದು ಸಂದೇಶವನ್ನು ಹಂಚಿಕೊಂಡಿದೆ ಮತ್ತು ಬಳಕೆದಾರರಿಗೆ ಎಚ್ಚರಿಕೆ ವಹಿಸಲು, ಯಾವುದೇ ಅನಪೇಕ್ಷಿತ ಲಿಂಕ್ಗಳನ್ನು ಕ್ಲಿಕ್ ಮಾಡುವುದನ್ನು ತಪ್ಪಿಸಲು ಮತ್ತು ಅಪರಿಚಿತ ಫೈಲ್ಗಳನ್ನು ಡೌನ್ಲೋಡ್ ಮಾಡದಂತೆ ಸಲಹೆ ನೀಡಿದೆ. ಎಸ್ಬಿಐ ಎಸ್ಎಂಎಸ್ ಅಥವಾ ವಾಟ್ಸಾಪ್ ಮೂಲಕ ಲಿಂಕ್ಗಳು ಅಥವಾ ಎಪಿಕೆ ಫೈಲ್ಗಳನ್ನು (ಆಂಡ್ರಾಯ್ಡ್ ಅಪ್ಲಿಕೇಶನ್ ಫೈಲ್ಗಳು) ಕಳುಹಿಸುವುದಿಲ್ಲ ಎಂದು ಪಿಐಬಿ ಒತ್ತಿಹೇಳಿದೆ. ಆದ್ದರಿಂದ, ಇಂತಹ ಮೋಸದ ಹಗರಣಗಳಿಗೆ ಬಲಿಯಾಗುವುದನ್ನು ತಪ್ಪಿಸಲು, ಅಧಿಕೃತ ಎಂದು ತೋರುವ ಆದರೆ ವಾಸ್ತವವಾಗಿ, ಸೂಕ್ಷ್ಮ ಮಾಹಿತಿಯನ್ನು ಕದಿಯಲು ವಿನ್ಯಾಸಗೊಳಿಸಲಾದ…
ಉತ್ತರ ಪ್ರದೇಶ: ಆಗ್ರಾದಲ್ಲಿ ಮಿಗ್-29 ಯುದ್ಧ ವಿಮಾನ ಪತನಗೊಂಡಿದೆ. ಈ ಪತನದ ನಂತ್ರ ಪೈಲಟ್ ಸುರಕ್ಷಿತವಾಗಿ ಪಾರಾಗಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಉತ್ತರ ಪ್ರದೇಶದ ಆಗ್ರಾ ಬಳಿ ಮಿಗ್-29 ಯುದ್ಧ ವಿಮಾನ ಪತನಗೊಂಡಿದೆ. ಪೈಲಟ್ ವಿಮಾನದಿಂದ ಹೊರಬಂದಿದ್ದಾರೆ. ವಿಮಾನವು ಪಂಜಾಬ್ನ ಆದಂಪುರದಿಂದ ಹೊರಟು ಆಗ್ರಾಕ್ಕೆ ವ್ಯಾಯಾಮಕ್ಕಾಗಿ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ. ತನಿಖೆಗೆ ಆದೇಶಿಸಿರುವುದಾಗಿ ರಕ್ಷಣಾ ಅಧಿಕಾರಿಗಳು ತಿಳಿಸಿದ್ದಾರೆ. https://twitter.com/ANI/status/1853396413457285467 https://kannadanewsnow.com/kannada/sensex-crashes-1400-points-investor-wealth-worth-rs-8-lakh-cr-wiped-out-why-is-market-falling/ https://kannadanewsnow.com/kannada/breaking-deeply-concerned-india-condemns-violence-against-hindus-in-canada/
ಕೆಎನ್ ಎನ್ ನ್ಯೂಸ್ ಡೆಸ್ಕ್ : ಪ್ರತಿಯೊಬ್ಬರು ಹತ್ರನೂ ಇಯರ್ ಬಡ್ಸ್ ಇದ್ದೆ ಇರುತ್ತದೆ. ಕಿವಿಯಲ್ಲಿ ಉತ್ಪತ್ತಿಯಾಗುವ ವ್ಯಾಕ್ಸ್ ಹೊರತೆಗೆಯಲು ಹೆಚ್ಚಿನವರು ಇದನ್ನು ಬಳಸುತ್ತಾರೆ. ಇನ್ನೂ ಕೆಲವರಿಗೆ, ಸ್ನಾನ ಮಾಡಿ ಬಂದ ತಕ್ಷಣ ಕಿವಿಗೆ ಬಡ್ಸ್ ಹಾಕದಿದ್ದರೆ ಸಮಾಧಾನ ಇರೋದೆ ಇಲ್ಲ. ಇನ್ನೂ ಕೆಲವರು ಕಿವಿಗೆ ಸೀರೆಯ ಪಿನ್, ಹೇರ್ ಪಿನ್, ಪೇಪರ್ ಕ್ಲಿಪ್, ಟೂತ್ ಪಿಕ್ಸ್, ಪೆನ್ ಸೇರಿದಂತೆ ಬೆರಳುಗಳನ್ನು ಕೂಡಾ ತುರುಕುತ್ತಾರೆ. ಇದು ಅಭ್ಯಾಸವಾದ ಮೇಲಂತೂ, ಕೈಗೆ ಸಿಕ್ಕ ಕಡ್ಡಿಯಂತಹ ಸಾಧನಗಳನ್ನು ಕಿವಿಗೆ ಹಾಕಿ ಮೇಣದಂತಹ ವಸ್ತುವನ್ನು ಕಿವಿಯಿಂದ ತೆಗೆಯುತ್ತಾರೆ. ಆದರೆ ಇದು ಯಾವುದೂ ಸುರಕ್ಷಿತವಲ್ಲ ಎಂದು ತಜ್ಞರು ಹೇಳುತ್ತಾರೆ.ಪ್ರತಿಯೊಬ್ಬರೂ ಕಿವಿಯಲ್ಲಿರುವ ಮೇಣದಂತಹ ಅಂಶವನ್ನು ಹೊರತೆಗೆಯುವ ಅಗತ್ಯವಿಲ್ಲ. ಇದು ದೊಡ್ಡ ಪ್ರಮಾಣದಲ್ಲಿ ಕಿವಿಯಲ್ಲಿ ಸಂಗ್ರಹವಾದಾಗ, ಕಿವಿ ನೋವು ಮತ್ತು ಸಾಂಕ್ರಾಮಿಕ ರೋಗಗಳ ಅಪಾಯವನ್ನು ಉಂಟುಮಾಡುತ್ತದೆ. ತಾತ್ಕಾಲಿಕ ಶ್ರವಣದೋಷ ಮತ್ತು ಖಿನ್ನತೆಯ ಸಾಧ್ಯತೆಯಿದೆ. ಆದರೆ, ಹೆಚ್ಚಿನ ಸಂದರ್ಭಗಳಲ್ಲಿ ಇಯರ್ ವ್ಯಾಕ್ಸ್ ಅನ್ನು ಹೊರ ತೆಗೆಯುವ ಅಗತ್ಯವಿಲ್ಲ. ಏಕೆಂದರೆ ಅದನ್ನು ಕಿವಿಯೇ…
ನವದೆಹಲಿ: ರಾಜ್ಯ ಸರ್ಕಾರದಿಂದ ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿದ್ದನ್ನು ಹಿಂಪಡೆಯಲಾಗಿತ್ತು. ಇದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲಾಗಿತ್ತು. ಈ ಅರ್ಜಿಯ ವಿಚಾರಣೆಯನ್ನು ಮತ್ತೆ ಸುಪ್ರೀಂ ಕೋರ್ಟ್ ನಾಲ್ಕು ವಾರಗಳ ಕಾಲ ಮುಂದೂಡಿಕೆ ಮಾಡಿದೆ. ಈ ಮೂಲಕ ಡಿಸಿಎಂ ಡಿಕೆಶಿಗೆ ಮತ್ತೆ ರಿಲೀಫ್ ನೀಡಿದೆ. ಇಂದು ಸುಪ್ರೀಂ ಕೋರ್ಟ್ ನ ನ್ಯಾಯಮೂರ್ತಿ ಸೂರ್ಯಕಾಂತ್ ಹಾಗೂ ನ್ಯಾಯಮೂರ್ತಿ ಉಜ್ಜಲ್ ಭುಯನ್ ಅವರನ್ನೊಳಗೊಂಡ ದ್ವಿಸದಸ್ಯ ನ್ಯಾಯಪೀಠವು ವಿಚಾರಣೆ ಕೈಗೆತ್ತಿಕೊಂಡರು. ಈ ವೇಳೆ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಕರ್ನಾಟಕ ಹೈಕೋರ್ಟ್ ನ ತೀರ್ಪಿನ ವಿರುದ್ಧ ಸಿಬಿಐ ಮೇಲ್ಮನವಿ ಸಲ್ಲಿಸಿದೆ ಎಂಬುದಾಗಿ ನ್ಯಾಯಪೀಠದ ಗಮನಕ್ಕೆ ತಂದರು. ಅಲ್ಲದೇ ಸಿಬಿಐ ಮನವಿಯ ವಿಚಾರಣೆಗೆ ದಿನಾಂಕ ನಿಗದಿಯಾಗಿಲ್ಲ ಎಂಬುದಾಗಿಯೂ ತಿಳಿಸಿದರು. ಈ ಹಿನ್ನಲೆಯಲ್ಲಿ ಸುಪ್ರೀಂ ಕೋರ್ಟ್ ನಾಲ್ಕುವಾರ ವಿಚಾರಣೆ ಮುಂದೂಡಿಕೆ ಮಾಡಿದೆ. https://kannadanewsnow.com/kannada/karnataka-janapada-academy-awards-2023-30-artistes-to-be-honoured/ https://kannadanewsnow.com/kannada/sensex-crashes-1400-points-investor-wealth-worth-rs-8-lakh-cr-wiped-out-why-is-market-falling/
ಬೆಂಗಳೂರು: ಕರ್ನಾಟಕ ಜಾನಪದ ಅಕಾಡೆಮಿಯಂದ ಕೊಡಮಾಡುವಂತ 2023ನೇ ಸಾಲಿನ ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಪ್ರಕಟಿಸಲಾಗಿದೆ. 30 ಕಲಾವಿದರಿಗೆ ವಾರ್ಷಿಕ ಗೌರವ ಪ್ರಶಸ್ತಿ ಹಾಗೂ ಇಬ್ಬರಿಗೆ ಜಾನಪದ ತಜ್ಞ ಪ್ರಶಸ್ತಿ ಹಾಗೂ ಐವರಿಗೆ ಪುಸ್ತಕ ಬಹುಮಾನ ಪ್ರಶಸ್ತಿಯನ್ನು ನೀಡಲಾಗಿದೆ. ಈ ಕುರಿತಂತೆ ಕರ್ನಾಟಕ ಜಾನಪದ ಅಕಾಡೆಮಿಯಂದ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಬೆಂಗಳೂರು ನಗರ ಜಿಲ್ಲೆಯ ಏಕತಾರಿ, ತಂಬೂರಿ ಕಲಾವಿದ ಕೆ.ಎಂ ರಾಮಯ್ಯ ಅವರಿಗೆ 2023ನೇ ಸಾಲಿನ ಜಾನಪದ ಅಕಾಡೆಮಿ ಪ್ರಶಸ್ತಿಯನ್ನು ನೀಡಲಾಗಿದೆ. ಹೀಗಿದೆ ಪ್ರಶಸ್ತಿ ಪುರಸ್ಕೃತರ ಪಟ್ಟಿ ಬೆಂಗಳೂರು ಗ್ರಾಮಾಂತರದ ಓಬಮ್ಮ- ಸೋಬಾನೆ ರಾಮನಗರ ಜಿಲ್ಲೆಯ ರಂಗಯ್ಯ -ಪಟ ಕುಣಿತ ಕೋಲಾರದ ತೋಪಣ್ಣ ಮಂಚಂಡಹಳ್ಳಿ – ಕೀಲುಕುದುರೆ ಚಿಕ್ಕಬಳ್ಳಾಪುರದ ದೊಡ್ಡಕೂರ್ಲಪ್ಪ – ತಮಟೆ ವಾದನ ತುಮಕೂರಿ ಜಿಲ್ಲೆಯ ಕದರಮ್ಮ- ಜನಪದ ಹಾಡು ದಾವಣಗೆರೆ ಜಿಲ್ಲೆಯ ಕಾಟಮ್ಮ- ಕಥನ ಕಾವ್ಯ ಚಿತ್ರದುರ್ಗದ ಸಿರಿಯಮ್ಮ-ಮಹಾಕಾವ್ಯ ಶಿವಮೊಗ್ಗ ಜಿಲ್ಲೆ ಟೀಕಪ್ಪ- ಡೊಳ್ಳು ಕುಣಿತ ಕೊಡಗು ಜಿಲ್ಲೆಯ ದೇವಕಿ ಕೆ.ಸಿ- ಊರ್ಟಿಕೋಟ್ ಮಂಡ್ಯದ…
ಶಿವಮೊಗ್ಗ: ಜಿಲ್ಲೆಯಲ್ಲಿ ಸಂಕಷ್ಟಕ್ಕೊಳಪಟ್ಟ ಮಹಿಳೆಯರ ರಕ್ಷಣೆಗಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಉಚಿತ ವಾಹನ ಸೌಲಭ್ಯವನ್ನು ಒದಗಿಸಲಾಗುತ್ತಿದ್ದು ನ.01 ರಂದು ಸದರಿ ವಾಹನಕ್ಕೆ ಶಾಸಕರಾದ ಎಸ್.ಎನ್.ಚನ್ನಬಸಪ್ಪ ಚಾಲನೆ ನೀಡಿದರು. ಶಾಸಕರು, ಸಖಿ ಒನ್ ಸ್ಟಾಪ್ ಸೆಂಟರ್, ಮಹಿಳಾ ತ್ತ ಮಕ್ಕಳ ಅಭಿವೃದ್ದಿ ಇಲಾಖೆಗಳ ಸಂಕೀರ್ಣ ಆವರಣ, 100 ಅಡಿ ರಸ್ತೆ, ಆಲ್ಕೊಳ, ಶಿವಮೊಗ್ಗ ಇಲ್ಲಿ ನ.01 ರಂದು ವಾಹನಕ್ಕೆ ಚಾಲನೆ ನೀಡಿದರು. ಈ ವೇಳೆ ವಿಧಾನ ಪರಿಷತ್ ಶಾಸಕರಾದ ಡಾ.ಧನಂಜಯ ಸರ್ಜಿ, ಜಿ.ಪಂ ಸಿಇಓ ಹೇಮಂತ್ ಎನ್, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಿಥುನ್ ಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕ ಕೃಷ್ಣಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಅಧಿಕಾರಿ ಶಶಿರೇಖಾ, ಇತರೆ ಅಧಿಕಾರಿ, ಸಿಬ್ಬಂದಿಗಳು ಹಾಜರಿದ್ದರು. ಕುಟುಂಬ, ಸಮುದಾಯ ಕೆಲಸದ ಸ್ಥಳಗಳು ಖಾಸಗಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ದೌರ್ಜನ್ಯಕ್ಕೆ ಒಳಗಾಗಿ ಹಿಂಸೆಯನ್ನು ಅನುಭವಿಸುತ್ತಿರುವ ಮಹಿಳೆಯರಿಗೆ ಸಕಾಲಿಕ ನೆರವನ್ನು ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರದ ನಿರ್ಭಯ ಯೋಜನೆಯಡಿ…