Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಕರ್ನಾಟಕದ ವಕ್ಫ್ ಮಂಡಳಿಗೆ ಸಂಬಂಧಿಸಿದ ಎಲ್ಲ ಬಗೆಯ ಜಮೀನು ನೋಂದಣಿಯನ್ನು ಸ್ಥಗಿತಗೊಳಿಸಲು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚಿಸಬೇಕೆಂದು ಕೋರಿ ಪ್ರತಿಪಕ್ಷ ನಾಯಕ ಆರ್.ಅಶೋಕ ಕೇಂದ್ರ ಸಚಿವರಿಗೆ ಹಾಗೂ ವಕ್ಫ್ ಜಂಟಿ ಸಮಿತಿಗೆ ಪತ್ರ ಬರೆದಿದ್ದಾರೆ. ರೈತರ ಜಮೀನು ಹಾಗೂ ಹಿಂದೂ ಸಂಸ್ಥೆಗಳಿಗೆ ಸಂಬಂಧಿಸಿದ ಜಮೀನುಗಳನ್ನು ವಕ್ಫ್ ಮಂಡಳಿ ಕಬಳಿಸುತ್ತಿರುವ ಕುರಿತು ಆತಂಕ ವ್ಯಕ್ತಪಡಿಸಿರುವ ಅವರು, ಈ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ ಹಾಗೂ ವಕ್ಫ್ ತಿದ್ದುಪಡಿ ಮಸೂದೆಯ ಜಂಟಿ ಸಂಸದೀಯ ಸಮಿತಿಯ ಅಧ್ಯಕ್ಷ ಜಗದಾಂಬಿಕಾ ಪಾಲ್ ಅವರಿಗೆ ಪತ್ರ ಬರೆದಿದ್ದಾರೆ. ಕೇಂದ್ರ ಸರ್ಕಾರದಲ್ಲಿ ವಕ್ಫ್ ತಿದ್ದುಪಡಿ ಮಸೂದೆ ತರಲು ಜಂಟಿ ಸಂಸದೀಯ ಸಮಿತಿ ರಚಿಸಿದ್ದು, ವಕ್ಫ್ ಆಸ್ತಿಗಳ ನಿರ್ವಹಣೆಯಲ್ಲಿ ದಕ್ಷತೆ ಹಾಗೂ ಪಾರದರ್ಶಕತೆ ತರಲು ಈ ಸಮಿತಿ ಶ್ರಮಿಸುತ್ತಿದೆ. ಆದರೆ ಕರ್ನಾಟಕದಲ್ಲಿ ರಾಜ್ಯ ಸರ್ಕಾರ ಮತ್ತು ವಕ್ಫ್ ಮಂಡಳಿಯು ಕಂದಾಯ ದಾಖಲೆಗಳನ್ನು ತಿದ್ದುವ ಹಾಗೂ ರೈತರ ಜಮೀನುಗಳ ಮಾಲೀಕತ್ವ ವರ್ಗಾಯಿಸಿಕೊಳ್ಳುವ ಪ್ರಯತ್ನ…
ಉತ್ತರಾಖಂಡ: ಇಲ್ಲಿನ ಅಲ್ಮೋರಾದಲ್ಲಿ ಸೋಮವಾರ ಬಸ್ ಕಮರಿಗೆ ಬಿದ್ದ ಪರಿಣಾಮ ಕನಿಷ್ಠ 36 ಪ್ರಯಾಣಿಕರು ಸಾವನ್ನಪ್ಪಿದ್ದಾರೆ. 19 ಮಂದಿ ಗಾಯಗೊಂಡಿದ್ದಾರೆ. ಪೌರಿ ಜಿಲ್ಲೆಯ ನೈನಿದಂಡಾದಿಂದ ನೈನಿತಾಲ್ನ ರಾಮ್ನಗರಕ್ಕೆ ತೆರಳುತ್ತಿದ್ದ ಬಸ್ನಲ್ಲಿ 30 ಕ್ಕೂ ಹೆಚ್ಚು ಜನರು ಇದ್ದರು. ಪೊಲೀಸರು ಮತ್ತು ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ (ಎನ್ಡಿಆರ್ಎಫ್) ಮತ್ತು ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆ (ಎಸ್ಡಿಆರ್ಎಫ್) ತಂಡಗಳು ಮಾರ್ಚುಲಾದ ಸಾಲ್ಟ್ ಪ್ರದೇಶದಲ್ಲಿ ಅಪಘಾತದ ಸ್ಥಳದಲ್ಲಿವೆ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಮೂಲಗಳ ಪ್ರಕಾರ, ಬಸ್ ನ ಓವರ್ ಲೋಡ್ ಅಪಘಾತಕ್ಕೆ ಕಾರಣವಾಗಿರಬಹುದು. ಸಾವಿನ ಸಂಖ್ಯೆ ಹೆಚ್ಚಾಗುವ ನಿರೀಕ್ಷೆಯಿದೆ ಎಂದು ಅಲ್ಮೋರಾ ಪೊಲೀಸ್ ವರಿಷ್ಠಾಧಿಕಾರಿ ದೇವೇಂದ್ರ ಪಿಂಚಾ ತಿಳಿಸಿದ್ದಾರೆ. ಘಟನೆಯ ಸಮಯದಲ್ಲಿ ಬಸ್ಸಿನಿಂದ ಬಿದ್ದ ಪ್ರಯಾಣಿಕರು ಬೆಳಿಗ್ಗೆ ೯ ಗಂಟೆ ಸುಮಾರಿಗೆ ಅಪಘಾತವನ್ನು ಅಧಿಕಾರಿಗಳಿಗೆ ವರದಿ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ., ಗಾಯಗೊಂಡವರಿಗೆ 50,000 ರೂ.ಗಳ ಪರಿಹಾರವನ್ನು ಘೋಷಿಸಿದ್ದಾರೆ. ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್…
ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ 2025ರ ಮೆಗಾ ಹರಾಜು ( Indian Premier League 2025 mega auction -IPL 2025 ) ನವೆಂಬರ್ 24 ಮತ್ತು 25 ರಂದು ಸೌದಿ ಅರೇಬಿಯಾದ ರಿಯಾದ್ನಲ್ಲಿ ನಡೆಯುವ ನಿರೀಕ್ಷೆಯಿದೆ ಎಂಬುದಾಗಿ ವರದಿಗಳಿಂದ ತಿಳಿದು ಬಂದಿದೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಸ್ಥಳ ಅಥವಾ ದಿನಾಂಕಗಳನ್ನು ಇನ್ನೂ ಅಧಿಕೃತವಾಗಿ ದೃಢಪಡಿಸಿಲ್ಲವಾದರೂ, ಅಂತಿಮ ವ್ಯವಸ್ಥೆಗಳು ಪ್ರಗತಿಯಲ್ಲಿವೆ ಮತ್ತು ಶೀಘ್ರದಲ್ಲೇ ಪ್ರಕಟಣೆಯನ್ನು ನಿರೀಕ್ಷಿಸಲಾಗಿದೆ ಎಂದು ಮೂಲಗಳು ಸೂಚಿಸುತ್ತವೆ. ಆದಾಗ್ಯೂ, ಹರಾಜು ದಿನಾಂಕಗಳು ನವೆಂಬರ್ 22 ರಿಂದ 26 ರವರೆಗೆ ಪರ್ತ್ನಲ್ಲಿ ನಡೆಯಲಿರುವ ಆಸ್ಟ್ರೇಲಿಯಾ ವಿರುದ್ಧದ ಭಾರತದ ಮೊದಲ ಟೆಸ್ಟ್ ಪಂದ್ಯದೊಂದಿಗೆ ಹೊಂದಿಕೆಯಾಗುವುದರಿಂದ ವೇಳಾಪಟ್ಟಿ ತೊಡಕುಗಳು ಉದ್ಭವಿಸಿವೆ. ಐಪಿಎಲ್ ಮತ್ತು ಭಾರತ-ಆಸ್ಟ್ರೇಲಿಯಾ ಟೆಸ್ಟ್ ಸರಣಿಗಳೆರಡರ ಪ್ರಸಾರ ಹಕ್ಕುಗಳನ್ನು ಹೊಂದಿರುವ ಡಿಸ್ನಿ ಸ್ಟಾರ್, ಘಟನೆಗಳ ನಡುವೆ ನೇರ ಅತಿಕ್ರಮಣವನ್ನು ತಪ್ಪಿಸಲು ಉತ್ಸುಕವಾಗಿದೆ. ಅದೃಷ್ಟವಶಾತ್, ಆಸ್ಟ್ರೇಲಿಯಾದೊಂದಿಗಿನ ಸಮಯದ ವ್ಯತ್ಯಾಸದಿಂದಾಗಿ, ಹರಾಜು ಮಧ್ಯಾಹ್ನ (ಐಎಸ್ಟಿ) ನಡೆದರೆ, ಪಂದ್ಯದ ಪ್ರಸಾರದೊಂದಿಗೆ ಘರ್ಷಣೆಗಳನ್ನು ತಪ್ಪಿಸುತ್ತದೆ.…
ಬೆಂಗಳೂರು: ಕೇಂದ್ರೀಯ ಸೈನಿಕ ಮಂಡಳಿಯು ಭಾರತೀಯ ಸೇನೆಯ ಜೆ.ಸಿ.ಓ ರ್ಯಾಂಕ್ವರೆಗಿನ ಅಥವಾ ವಾಯು ಸೇನೆ, ನೌಕಾ ಸೇನೆಯ ತತ್ಸಮಾನ ರ್ಯಾಂಕ್ವರೆಗಿನ ಮಾಜಿ ಸೈನಿಕರ ಮಕ್ಕಳು, ದ್ವಿತೀಯ ಪಿ.ಯು.ಸಿ ಯಲ್ಲಿ ಶೇ.60 ಕ್ಕಿಂತ ಅಧಿಕ ಅಂಕಗಳನ್ನು ಪಡೆದು, ಇಂಜಿನಿಯರಿAಗ್, ಮೆಡಿಕಲ್ ಮತ್ತು ಇತರೆ ವೃತ್ತಿಪರ ಶಿಕ್ಷಣದಲ್ಲಿ ಪದವಿ ವ್ಯಾಸಂಗಕ್ಕಾಗಿ 2024-25ನೇ ಸಾಲಿನಲ್ಲಿ ಪ್ರವೇಶಾತಿ (ಅಡ್ಮಿಷನ್) ಪಡೆದು ಪ್ರಥಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಪ್ರಧಾನ ಮಂತ್ರಿ ಶಿಷ್ಯವೇತನ ಯೋಜನೆ (ಪ್ರಧಾನ ಮಂತ್ರಿ ಸ್ಕಾಲರ್ಷಿಪ್ ಸ್ಕೀಂ) ಎಂಬ ಶೀರ್ಷಿಕೆಯಡಿ ಶಿಷ್ಯವೇತನಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಜಾಲತಾಣ HTTPS://ONLINE.KSB.GOV.IN ರಲ್ಲಿ ನ. 30 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕ ಡಾ. ಸಿ.ಎ. ಹಿರೇಮಠರವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಕೇಂದ್ರೀಯ ಸೈನಿಕ ಮಂಡಳಿಯ ಜಾಲತಾಣ HTTPS://ONLINE.KSB.GOV.IN ವನ್ನು ಅಥವಾ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಇವರ ದೂ. ಸಂ.: 08182-220925 ನ್ನು ಸಂಪರ್ಕಿಸುವುದು.
ಶಿವಮೊಗ್ಗ : ಜಿಲ್ಲೆಯ ಗಾಜನೂರು ಜವಾಹರ ನವೋದಯ ವಿದ್ಯಾಲಯದ 2025-26ನೇ ಶೈಕ್ಷಣಿಕ ಸಾಲಿನ 9 ಮತ್ತು 11 ನೇ ತರಗತಿಗೆ ಪ್ರವೇಶ ಪರೀಕ್ಷೆಗೆ ಆನ್ಲೈನ್ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ನ.09 ರವರೆಗೆ ವಿಸ್ತರಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೆಬ್ಸೈಟ್ 9 ನೇ ತರಗತಿಗೆ https://cbseitms.nic.in/2024/nvsix ಮತ್ತು 11 ನೇ ತರಗತಿಗೆ https://cbseitms.nic.in/2024/nvsxi_11ರ ಮೂಲಕ ನವೆಂಬರ್ 09 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಜವಾಹರ ನವೋದಯ ವಿದ್ಯಾಲಯದ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಮಾಜಿ ಸೈನಿಕರ ಮಕ್ಕಳ ವಿದ್ಯಾಭ್ಯಾಸದ ಶಿಷ್ಯವೇತನ ಹಾಗೂ ಆರ್ಥಿಕ ಅನುದಾನಕ್ಕಾಗಿ ಅರ್ಜಿ ಆಹ್ವಾನ ಕೇಂದ್ರೀಯ ಸೈನಿಕ ಮಂಡಳಿಯು ಭಾರತೀಯ ಸೇನೆಯ ಜೆ.ಸಿ.ಓ ರ್ಯಾಂಕ್ವರೆಗಿನ ಅಥವಾ ವಾಯು ಸೇನೆ, ನೌಕಾ ಸೇನೆಯ ತತ್ಸಮಾನ ರ್ಯಾಂಕ್ವರೆಗಿನ ಮಾಜಿ ಸೈನಿಕರ ಮಕ್ಕಳು, ದ್ವಿತೀಯ ಪಿ.ಯು.ಸಿ ಯಲ್ಲಿ ಶೇ.60 ಕ್ಕಿಂತ ಅಧಿಕ ಅಂಕಗಳನ್ನು ಪಡೆದು, ಇಂಜಿನಿಯರಿAಗ್, ಮೆಡಿಕಲ್ ಮತ್ತು ಇತರೆ ವೃತ್ತಿಪರ ಶಿಕ್ಷಣದಲ್ಲಿ ಪದವಿ ವ್ಯಾಸಂಗಕ್ಕಾಗಿ 2024-25ನೇ ಸಾಲಿನಲ್ಲಿ ಪ್ರವೇಶಾತಿ (ಅಡ್ಮಿಷನ್) ಪಡೆದು ಪ್ರಥಮ…
ರಾಶಿ – ದಿಕ್ಕು – ಗ್ರಹ 1.ಮೇಷ-ಪೂರ್ವ-ಮಂಗಳ. 2.ವೃಷಭ-ಪೂರ್ವ-ಶುಕ್ರ. 3.ಮಿಥುನ-ಆಗ್ನೇಯ-ಬುಧ. 4.ಕರ್ಕಾಟಕ-ದಕ್ಷಿಣ-ಚಂದ್ರ . 5.ಸಿಂಹ-ದಕ್ಷಿಣ-ಸೂರ್ಯ. 6.ಕನ್ಯಾ-ನ್ಯೆರುತ್ಯ-ಬುಧ. 7.ತುಲಾ-ಪಶ್ಚಿಮ-ಶುಕ್ರ. 8.ವೃಶ್ಚಿಕ-ಪಶ್ಚಿಮ-ಮಂಗಳ. 9.ಧನಸ್ಸು-ವಾಯುವ್ಯ-ಗುರು. 10.ಮಕರ-ಉತ್ತರ-ಶನಿ. 11.ಕುಂಭ-ಉತ್ತರ-ಶನಿ. 12.ಮೀನ-ಈಶಾನ್ಯ-ಗುರು. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ ಕಷ್ಟ, ಹಣಕಾಸಿನ ಅಡಚಣೆ, ಪ್ರೇಮ ವೈಫಲ್ಯ ಹಾಗೂ ಸ್ತ್ರೀ…
ಚಿತ್ರದುರ್ಗ: ಜಿಲ್ಲೆಯ ಪೊಲೀಸರಿಂದ ಜೂಜಾಟದಲ್ಲಿ ತೊಡಗಿದ್ದವರ ವಿರುದ್ಧ ಭರ್ಜರಿ ಕಾರ್ಯಾಚರಣೆಯನ್ನು ನಡೆಸಲಾಗಿದೆ. ಇಸ್ಪಿಟ್ ಆಟದಲ್ಲಿ ತೊಡಗಿದ್ದಂತ 9 ಮಂದಿಯನ್ನು ಬಂಧಿಸಲಾಗಿದೆ. ಈ ಕುರಿತಂತೆ ಚಿತ್ರದುರ್ಗ ಜಿಲ್ಲಾ ಪೊಲೀಸ್ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಚಿತ್ರದುರ್ಗ ಗ್ರಾಮಾಂತರ ಠಾಣೆ ವ್ಯಾಪ್ತಿಯ ಗುಡ್ಡವೊಂದರಲ್ಲಿ ಜೂಜಾಟದಲ್ಲಿ ತೊಡಗಿರುವ ಬಗ್ಗೆ ಖಚಿತ ಮಾಹಿತಿ ಸಿಕ್ಕಿತ್ತು. ಎಸ್ ಪಿ ರಂಜಿತ್ ಕುಮಾರ್ ಬಂಡಾರು ಮಾರ್ಗದರ್ಶನದಲ್ಲಿ ಐಮಂಗಲ ವೃತ್ತ ನಿರೀಕ್ಷಕರು ಹಾಗೂ ಜಿಲ್ಲಾ ಪೊಲೀಸ್ ಕಚೇರಿಯ ವಿಶೇಷ ವಿಭಾಗದ ಪ್ರಭಾರ ಪೊಲೀಸ್ ನಿರೀಕ್ಷಕರಾದ ಗುಡ್ಡಪ್ಪ ಎನ್ ನೇತೃತ್ವದಲ್ಲಿ, ಪಿಎಸ್ಐ ದಾದಪೀರ್, ಎಎಸ್ಐ ತಿಪ್ಪೇಸ್ವಾಮಿ, ಸಿಬ್ಬಂದಿಗಳಾದ ಪ್ರದೀಪ್, ಮಧು, ಐಮಂಗಲ ಠಾಣೆಯ ಎಹೆಚ್ ಸಿ ಪ್ರವೀಣ್, ಖದರ್ ಬಾಷಾ, ಎಪಿಸಿ ಹರ್ಷ, ಭೀಮಣ್ಣ ತಂಡದಿಂದ ದಾಳಿಯನ್ನು ನಡೆಸಲಾಗಿತ್ತು. ಕಾನೂನು ಬಾಹಿರವಾಗಿ ಅಂದರ್ ಬಾಹರ್ ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದಂತ ದೀಪು @ ದೀಪಕ್ ತಂದೆ ಗಂಗಾಧರ, ಮಲ್ಲಿಕಾರ್ಜನ ಮತ್ತು ಇತರರು ಸೇರಿದಂತೆ 7 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. ಬಂಧಿತ ಆರೋಪಿಗಳಿಂದ 5,30,160…
ಬೆಳಗಾವಿ: ಜಿಲ್ಲೆಯ ಅಥಣಿ ತಾಲ್ಲೂಕಿನ ರೈತರಿಗೂ 7 ಎಕರೆ ಜಮೀನು ತನ್ನದು ಎಂಬುದಾಗಿ ವಕ್ಫ್ ಬೋರ್ಡ್ ನೋಟಿಸ್ ನೀಡಿ ಶಾಕ್ ನೀಡಿರುವುದಾಗಿ ತಿಳಿದು ಬಂದಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ಶಿರಹಟ್ಟಿ ಗ್ರಾಮದ ರೈತ ಬಸವರಾಜ ಅಡಿವೆಪ್ಪ ಕೊಹಳ್ಳಿ ಅವರ ಪಹಣಿ ಪತ್ರದಲ್ಲಿ ವಕ್ಫ್ ಆಸ್ತಿ ನಮ್ಮದೆಂದು ನಮೂದಿಸಲಾಗಿದೆ. ರೈತ ಬಸವರಾಜ ಅವರು ಹಾಗೂ ಅವರ ಅಣ್ಣ ತಮ್ಮಂದಿರಿಗೆ ಸೇರಿದಂತ 7 ಎಕರೆ 31 ಗುಂಟೆ ಜಮೀನಿನ ಪಹಣಡಿಯಲ್ಲಿ ವಕ್ಫ್ ಆಸ್ತಿ ಎಂಬುದಾಗಿ ನಮೂದಿಸಲಾಗಿದೆ. ಇದೀಗ ಪಹಣಿಯಲ್ಲಿ ವಕ್ಫ್ ಆಸ್ತಿ ಎಂಬುದಾಗಿ ನಮೂದಿಸಿದ್ದರಿಂದ ರೈತ ಬಸವರಾಜ ಅಡಿವೆಪ್ಪ ಅವರ ಕುಟುಂಬ ಆತಂಕದಲ್ಲಿದ್ದು, ತಕ್ಷಣವೇ ಸಮಸ್ಯೆ ಪರಿಹರಿಸುವಂತ ಸರ್ಕಾರಕ್ಕೆ ಒತ್ತಾಯಿಸಿದೆ. https://kannadanewsnow.com/kannada/i-have-developed-without-any-discrimination-basavaraj-bommai/ https://kannadanewsnow.com/kannada/waqf-row-bjp-to-stage-protest-across-the-state-tomorrow/
ಬೆಂಗಳೂರು: ರಾಜ್ಯದಲ್ಲಿ ಮಠ, ಮಂದಿರಗಳು, ರೈತರ ಆಸ್ತಿಗಳನ್ನು ವಕ್ಫ್ ಆಸ್ತಿ ಎಂದು ನಮೂದಿಸಿದ್ದರ ವಿರುದ್ಧ ಬಿಜೆಪಿ ಜನಾಂದೋಲನ ರೂಪಿಸಲಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ್ ಅವರು ತಿಳಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, 1974ರ ವಕ್ಫ್ ಆಸ್ತಿ ಕುರಿತ ಗಜೆಟ್ ಅಧಿಸೂಚನೆ ಹಿಂಪಡೆಯಲು ಆಗ್ರಹಿಸಿ ಮತ್ತು ಅಧಿಕಾರ ದುರ್ಬಳಕೆಯ ಕುರಿತು ಸಿಬಿಐ ತನಿಖೆಗೆ ಆಗ್ರಹಿಸಿ ನಾಳೆ ರಾಜ್ಯದೆಲ್ಲೆಡೆ ಪ್ರತಿಭಟನೆ ನಡೆಸಲಾಗುವುದು ಎಂದು ಪ್ರಕಟಿಸಿದರು. ಕರ್ನಾಟಕದ ವಕ್ಫ್ ನಲ್ಲಿ ನಡೆದಿರುವ ಖೊಟ್ಟಿ (ನಕಲಿ) ದಾಖಲೆಗಳ ಸೃಷ್ಟಿ, ಆ ಮೂಲಕ ಮಾಡಿಕೊಂಡಿರುವ ಲಾಭದ ಕುರಿತು ಇ.ಡಿ. (ಜಾರಿ ನಿರ್ದೇಶನಾಲಯ) ತನಿಖೆಯಾಗಬೇಕು. 50 ವರ್ಷದ ಹಿಂದಿನ ಗೆಜೆಟ್ ನೆಪ ಒಡ್ಡಿ 50 ವರ್ಷ ಯಾವುದೇ ಕ್ರಮ ಕೈಗೊಳ್ಳದೇ, ಈಗ ಅಲ್ಪಸಂಖ್ಯಾತರ ಮತ ಬ್ಯಾಂಕ್ ರಾಜಕಾರಣಕ್ಕಾಗಿ, ಅಲ್ಪಸಂಖ್ಯಾತರ ತುಷ್ಟೀಕರಣಕ್ಕಾಗಿ, ಕರ್ನಾಟಕ ವಕ್ಫ್ ಬೋರ್ಡ್ ಮೂಲಕ ಮಾಡಿರುವ ಬೃಹತ್ ದಾಖಲೆಗಳ ಸೃಷ್ಟಿಯ ಎಲ್ಲಾ ವ್ಯವಹಾರಗಳನ್ನು ಸಿಬಿಐ…
ಹಾವೇರಿ : ಸವಣೂರಿನಲ್ಲಿ ನಮ್ಮ ಸಂಸ್ಕೃತಿ ಗಟ್ಟಿಯಾಗಿ ಉಳಿಯಲು ಭಾವಸಾರ ಕ್ಷತ್ರಿಯ ಸಮಾಜ ಕಾರಣ. ನಿಮ್ಮ ಪ್ರೀತಿ ವಿಶ್ವಾಸದ ಮುಂದೆ ನಾನು ಮಾಡಿರುವ ಅಭಿವೃದ್ಧಿ ಕಾರ್ಯ ದೊಡ್ಡದಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಸವಣೂರಿನಲ್ಲಿ ಇಂದು ಭಾವಸಾರ ಕ್ಷತ್ರಿಯ ಸಮಾಜದ ಸಭೆಯಲ್ಲಿ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಪರ ಚುನಾವಣಾ ಪ್ರಚಾರ ಮಾಡಿದರು. ಸವಣೂರಿನಲ್ಲಿ ತಾವು ಯಾವ ಪರಿಸ್ಥಿತಿಯಲ್ಲಿ ವ್ಯಾಪಾರ ವ್ಯವಹಾರ ಮಾಡುತ್ತಿದ್ದೀರಾ ಎಂದು ನಮಗೆ ಅರಿವಿದೆ. ಆದರೂ, ನೀವು ಎದೆಗುಂದದೆ ಮುನ್ನಡೆಯುತ್ತಿದ್ದೀರಿ ನಮ್ಮನ್ನೂ ಮುನ್ನಡೆಸುತ್ತಿದ್ದೀರಿ, ನಾಲ್ಕು ಚುನಾವಣೆಯಿಂದಲೂ ನನ್ನನ್ನು ಗೆಲ್ಕಿಸುತ್ತ ಬಂದಿದ್ದೀರಿ, ನನ್ನ ಮೇಲೆ ಅಷ್ಟೊಂದು ಪ್ರೀತಿ ವಿಶ್ವಾಸ ಇಟ್ಟುಕೊಂಡಿದ್ದೀರಿ, ನಾನೇನಾದರೂ ಅಭಿವೃದ್ಧಿ ಕೆಲಸ ಮಾಡಿದ್ದರೆ ನಿಮ್ಮ ಪ್ರೀತಿ ವಿಶ್ವಾಸದ ಮುಂದೆ ಅದು ದೊಡ್ಡ ಕೆಲಸವಲ್ಲ ಎಂದರು. ಒಂದು ಬಾರಿ ಕೃಷ್ಣನ ಮೇಲೆ ಯಾರ ಪ್ರೀತಿ ದೊಡ್ಡದಿದೆ ಅಂತ ಪರೀಕ್ಷೆ ಮಾಡಲು ಸುಭದ್ರಾ ರುಕ್ಮಿಣಿ ನಡುವೆ ಸ್ಪರ್ಧೆ ಏರ್ಪಟ್ಟಿತು. ಒಂದು ತಕ್ಕಡಿಯಲ್ಲಿ ಕೃಷ್ಣನನ್ನು ಕೂಡಿಸಿ…