Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ವಕ್ಫ್ ವಿವಾದದ ಕಾರಣದಿಂದ ರೈತರಿಗೆ ನೀಡಿರುವ ನೋಟೀಸ್ ತಕ್ಷಣ ವಾಪಸ್ ಪಡೆಯುವಂತೆ ಅಧಿಕಾರಿಗಳಿಗೆ ಸಿಎಂ ಸಿದ್ಧರಾಮಯ್ಯ ಖಡಕ್ ಸೂಚನೆ ನೀಡಿದ್ದಾರೆ. ಅಲ್ಲದೇ ಪಹಣಿಯಲ್ಲಿ ಆಗಿರುವ ತಿದ್ದುಪಡಿಗಳೂ ರದ್ದುಗೊಳಿಸುವಂತ ಮಹತ್ವದ ತೀರ್ಮಾನವನ್ನು ಕೈಗೊಂಡಿದ್ದಾರೆ. ವಕ್ಫ್ ವಿಚಾರದಲ್ಲಿ ರೈತರಿಗೆ ನೀಡಲಾಗಿರುವ ನೋಟಿಸ್ಗಳನ್ನು ತಕ್ಷಣದಿಂದಲೇ ವಾಪಸ್ ಪಡೆಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಇನ್ನು ಮುಂದೆ ರೈತರಿಗೆ ಯಾವುದೇ ರೀತಿಯ ತೊಂದರೆ ನೀಡದಂತೆ ಮುಖ್ಯಮಂತ್ರಿಯವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಮುಖ್ಯಮಂತ್ರಿಗಳು ಇಂದು ಕಂದಾಯ, ಅಲ್ಪಸಂಖ್ಯಾತರ ಕಲ್ತಾಣ ಇಲಾಖೆ ಹಾಗೂ ಮತ್ತು ವಕ್ಫ್ ಮಂಡಳಿಯ ಹಿರಿಯ ಅಧಿಕಾರಿಗಳ ಜೊತೆ ಸುದೀರ್ಘ ಸಭೆ ನಡೆಸಿದರು. ವಕ್ಫ್ ಜಮೀನು ವಿಚಾರದಲ್ಲಿ ಇತ್ತೇಚೆಗೆ ನಡೆದಿರುವ ಬೆಳವಣಿಗೆಗಳ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಅವರು, ನೋಟಿಸ್ ವಿಚಾರದಲ್ಲಿ ಕೆಲ ಅಧಿಕಾರಿಗಳು ಕೈಗೊಂಡಿರುವ ಕ್ರಮದ ಬಗ್ಗೆಯೂ ಗರಂ ಆದರು. ಬೆಳವಣಿಗೆಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಂಡ ಮುಖ್ಯಮಂತ್ರಿಯವರು, ವಕ್ಫ್ ವಿಚಾರವನ್ನು ಜೆಡಿಎಸ್ ಮತ್ತು ಬಿಜೆಪಿ ರಾಜಕಾರಣಕ್ಕೆ ಬಳಸಿಕೊಳ್ಳುತ್ತಿದೆ. ಈ…
ಬೆಂಗಳೂರು: ನಾನು ಯಾವುದೇ ಮಾಧ್ಯಮದವರಿಗೂ ಶಕ್ತಿ ಯೋಜನೆ ನಡೆಸಲು ಸಾರಿಗೆ ಇಲಾಖೆಗೆ ಸ್ವಲ್ಪ ಕಷ್ಟವಾಗುತ್ತಿದೆ ಎಂಬ ಹೇಳಿಕೆಯನ್ನೇ ನೀಡಿಲ್ಲ ಎಂಬುದಾಗಿ ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟ ಪಡಿಸಿದ್ದಾರೆ. ಈ ಬಗ್ಗೆ ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ನಾನು ಯಾವುದೇ ಮಾಧ್ಯಮದವರಿಗೂ ಶಕ್ತಿ ಯೋಜನೆ ನಡೆಸಲು ಸಾರಿಗೆ ಇಲಾಖೆಗೆ ಸ್ವಲ್ಪ ಕಷ್ಟವಾಗುತ್ತಿದೆ ಎಂಬ ಹೇಳಿಕೆಯನ್ನೇ ನೀಡಿಲ್ಲ. ಈ ರೀತಿಯ ಹೇಳಿಕೆಗಳು ವಿನಾ ಕಾರಣ ಅತ್ಯಂತ ವ್ಯವಸ್ಥಿತವಾಗಿ ನಡೆಯುತ್ತಿರುವ ಶಕ್ತಿ ಯೋಜನೆಯ ಬಗ್ಗೆ ಗೊಂದಲ ಸೃಷ್ಟಿಸುವ ಹುನ್ನಾರವಾಗಿದೆ. ನಾನು ಮಾತನಾಡಿಯೇ ಇಲ್ಲದ ಹೇಳಿಕೆಗಳನ್ನು ಈ ರೀತಿ ಪ್ರಕಟಿಸಿರುವುದು ಸರಿಯಲ್ಲ ಎಂದಿದ್ದಾರೆ. ನನ್ನನ್ನು ಯಾವುದೇ ಮಾಧ್ಯಮದವರು ಈ ಬಗ್ಗೆ ಸಂರ್ಪಕಿಸಿಯೇ ಇಲ್ಲ ನಾನು ಯಾರೊಂದಿಗೂ ಮಾತನಾಡಿಯೇ ಇಲ್ಲದಿರುವುದರಿಂದ ಈ ರೀತಿಯ ಹೇಳಿಕೆಗಳನ್ನು ಮಾಧ್ಯಮದವರು ಪ್ರಕಟಿಸುವ ಮುನ್ನ ನನ್ನನ್ನು ಖುದ್ದು ಸಂರ್ಪಕಿಸಿ ಪ್ರಕಟಿಸಲು ಕೋರಿದ್ದಾರೆ. https://twitter.com/rlr_btm/status/1852638659901837330 https://kannadanewsnow.com/kannada/breaking-two-terrorists-killed-in-encounter-between-security-forces-and-terrorists-in-jammu-and-kashmir/ https://kannadanewsnow.com/kannada/note-to-parents-these-documents-are-mandatory-to-get-your-childs-birth-certificate/
ನವದೆಹಲಿ: ಕೇಂದ್ರ ಸರ್ಕಾರವು ಸುಕನ್ಯಾ ಸಮೃದ್ಧಿ ಯೋಜನೆ (Sukanya Samriddhi Yojana – SSY) 2024-25 ಅನ್ನು ಪ್ರಾರಂಭಿಸಿತು. ಹೆಣ್ಣು ಮಗುವನ್ನು ಹೊಂದಿರುವ ಭಾರತದ ಎಲ್ಲಾ ಪೋಷಕರಿಗೆ ಉಳಿತಾಯ ಖಾತೆಯನ್ನು ಒದಗಿಸಲು ಭಾರತ ಸರ್ಕಾರವು ಸುಕನ್ಯಾ ಸಮೃದ್ಧಿ ಯೋಜನೆ (ಎಸ್ಎಸ್ವೈ) ಅನ್ನು ಪರಿಚಯಿಸಿತು. ಈ ಯೋಜನೆಯ ಸಹಾಯದಿಂದ, ಹೆಣ್ಣು ಮಗುವಿನ ಪೋಷಕರು ಹೆಚ್ಚಿನ ಅಪಾಯವಿಲ್ಲದೆ ತಮ್ಮ ಹಣವನ್ನು ಠೇವಣಿ ಮಾಡಬಹುದು. ಹೆಣ್ಣು ಮಗುವಿನ ಪೋಷಕರು ಕನಿಷ್ಠ 250 ರೂ.ಗಳ ಠೇವಣಿಯನ್ನು ಸಲ್ಲಿಸಬಹುದು. ಅರ್ಹತಾ ಮಾನದಂಡಗಳನ್ನು ಪೂರ್ಣಗೊಳಿಸಿದ ಭಾರತದ ಎಲ್ಲಾ ನಾಗರಿಕರು ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಬೇಕು. ಇದೀಗ ಸುಕನ್ಯಾ ಸಮೃದ್ಧಿ ಯೋಜನೆ ಫಲಾನುಭವಿಗಳಿಗೆ ಸಿಹಿಸುದ್ದಿ ನೀಡಿದೆ. ಅದೇನು ಅಂತ ಮುಂದೆ ಓದಿ. ಸುಕನ್ಯಾ ಸಮೃದ್ಧಿ ಯೋಜನೆಯ ಉದ್ದೇಶ ಭಾರತದಲ್ಲಿ ಹೆಣ್ಣು ಮಕ್ಕಳ ಭವಿಷ್ಯವನ್ನು ಭದ್ರಪಡಿಸುವುದು ಸುಕನ್ಯಾ ಸಮೃದ್ಧಿ ಯೋಜನೆಯನ್ನು ಪ್ರಾರಂಭಿಸುವ ಮುಖ್ಯ ಉದ್ದೇಶವಾಗಿದೆ. ಈ ಯೋಜನೆಯ ಪ್ರಯೋಜನಗಳನ್ನು ಪಡೆಯಲು ಬಯಸುವ ಎಲ್ಲಾ ಪೋಷಕರು ತಮ್ಮ ಹೆಣ್ಣು ಮಗುವಿಗೆ 10 ವರ್ಷ ತುಂಬುವ…
ಬೆಂಗಳೂರು: ರಾಜ್ಯದಲ್ಲಿ ಸಾವಿರಾರು ಜನರು ಹೊಸ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸೋದಕ್ಕೆ ಜಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ. ಅವರಿಗೆ ಗುಡ್ ನ್ಯೂಸ್ ಎನ್ನುವಂತೆ ಶೀಘ್ರವೇ ಸರ್ಕಾರದಿಂದ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸೋದಕ್ಕೆ ಆರಂಭ ಮಾಡಲಿದೆ. ಹೀಗಾಗಿ ನೀವು ಹೊಸದಾಗಿ BPL, APL ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸೋ ನಿರೀಕ್ಷೆಯಲ್ಲಿದ್ದರೇ ಈ ಕೆಳಗಿನ ದಾಖಲೆಗಳನ್ನು ರೆಡಿ ಇಟ್ಕೊಳ್ಳಿ. ಕರ್ನಾಟಕ ರಾಜ್ಯ ಸರ್ಕಾರವು ಹೊಸ ಪಡಿತರ ಚೀಟಿಗಾಗಿ ಅರ್ಜಿಯನ್ನು ಶೀಘ್ರವೇ ಪ್ರಾರಂಭಿಸಲಿದೆ. ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಲು ಬಯಸುವ ಕರ್ನಾಟಕ ರಾಜ್ಯದ ಎಲ್ಲಾ ಖಾಯಂ ನಿವಾಸಿಗಳು ಈಗ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಬಹುದು. ಕರ್ನಾಟಕ ರಾಜ್ಯದಲ್ಲಿ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಅರ್ಜಿ ನಮೂನೆಯನ್ನು ಭರ್ತಿ ಮಾಡಬಹುದು. ಪಡಿತರ ಚೀಟಿಗೆ ಅರ್ಜಿ ಸಲ್ಲಿಸುವ ಆನ್ ಲೈನ್ ವ್ಯವಸ್ಥೆಯ ಸಹಾಯದಿಂದ ಅರ್ಜಿದಾರರು ಮತ್ತು ಸರ್ಕಾರ ಇಬ್ಬರೂ ಸಾಕಷ್ಟು ಸಮಯ ಮತ್ತು ಶ್ರಮವನ್ನು ಉಳಿಸಬಹುದು. ಕರ್ನಾಟಕ ರಾಜ್ಯದ ಖಾಯಂ ನಿವಾಸಿಗಳು ಮಾತ್ರ ಕರ್ನಾಟಕ…
ಖ್ಯಾತ ಡಿಸೈನರ್ ರೋಹಿತ್ ಬಾಲ್ ನವೆಂಬರ್ 1ರ ಶುಕ್ರವಾರ ನಿಧನರಾದರು. ಡಿಸೈನರ್ ಕೇವಲ 63 ವರ್ಷ ವಯಸ್ಸಿನವರಾಗಿದ್ದರು ಮತ್ತು ಕಳೆದ ವರ್ಷ ಹೃದಯ ಕಾಯಿಲೆಯಿಂದ ಬಳಲುತ್ತಿದ್ದರು. ಅವರು ಕೆಲವು ವಾರಗಳ ಹಿಂದೆ ಲ್ಯಾಕ್ಮೆ ಫ್ಯಾಷನ್ ವೀಕ್ ನಲ್ಲಿ ಫ್ಯಾಷನ್ ಸರ್ಕ್ಯೂಟ್ ಗೆ ಮರಳಿದ್ದರು. ನಿಯಮಗಳಿಗೆ ಸವಾಲೊಡ್ಡುವ ವಿನ್ಯಾಸಗಳೊಂದಿಗೆ ಬಾಲ್ ಅವರನ್ನು ಭಾರತೀಯ ಫ್ಯಾಷನ್ ದೃಶ್ಯದಲ್ಲಿ ಟ್ರೆಂಡ್ ಸೆಟ್ಟರ್ ಎಂದು ಪರಿಗಣಿಸಲಾಯಿತು. ಸಾಂಪ್ರದಾಯಿಕ ಸೌಂದರ್ಯಶಾಸ್ತ್ರವನ್ನು ಸಮಕಾಲೀನ ಶೈಲಿಯೊಂದಿಗೆ ತಡೆರಹಿತವಾಗಿ ಬೆರೆಸಿದ್ದಕ್ಕಾಗಿ ಮತ್ತು ಭಾರತದ ಸಾಂಸ್ಕೃತಿಕ ಪರಂಪರೆಯನ್ನು ಜಾಗತಿಕ ಫ್ಯಾಷನ್ ಪ್ರವೃತ್ತಿಗಳೊಂದಿಗೆ ಜೋಡಿಸಿದ್ದಕ್ಕಾಗಿ ಅವರು ಹೆಸರುವಾಸಿಯಾಗಿದ್ದರು. ಆರೋಗ್ಯ ಸಮಸ್ಯೆಗಳಿಂದಾಗಿ ಅವರು ಕಳೆದ ಕೆಲವು ವರ್ಷಗಳಿಂದ ಫ್ಯಾಷನ್ ಪ್ರಪಂಚದಿಂದ ದೂರವಿದ್ದರು.
ಬೆಂಗಳೂರು: ಕೆ ಎಸ್ ಆರ್ ಟಿಸಿಯ ಹುಮ್ನಾಬಾದ್ ನಲ್ಲಿ ದಿನಾಂಕ 18-09-2024ರಿಂ ಚಾಲನಾ ವೃತ್ತಿ ಪರೀಕ್ಷೆಯನ್ನು ನಡೆಸಲಾಗಿತ್ತು. ಈ ಪರೀಕ್ಷೆಗೆ ಕೆಲ ಅಭ್ಯರ್ಥಿಗಳು ಹಾಜರಾಗಿರಲಿಲ್ಲ. ಇಂತವರಿಗೆ ಗುಡ್ ನ್ಯೂಸ್ ಎನ್ನುವಂತೆ ಮತ್ತೊಂದು ಅವಕಾಶವನ್ನು ಕಲ್ಪಿಸಲಾಗಿದೆ. ಇಂದು ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಮಾಹಿತಿ ಹಂಚಿಕೊಂಡಿದ್ದು, ಚಾಲಕ-ಕಂ-ನಿರ್ವಾಹಕ ಹುದ್ದೆಗೆ ಅರ್ಜಿ ಸಲ್ಲಿಸಿ ಹುಮ್ನಾಬಾದ್ ತರಬೇತಿ ಕೇಂದ್ರದಲ್ಲಿ ಚಾಲನಾ ವೃತ್ತಿ ಪರೀಕ್ಷೆ ಪಡೆಯಲು ಆಯ್ಕೆ ಮಾಡಿಕೊಂಡಿದ್ದ ಅಭ್ಯರ್ಥಿಗಳಿಗೆ ಚಾಲನಾ ವೃತ್ತಿ ಪರೀಕ್ಷೆಯನ್ನು ದಿನಾಂಕ: 18-09-2024 ರಿಂದ ನಡೆಸಲಾಗುತ್ತಿದೆ. ಈ ಸಂಬಂಧ ಎಲ್ಲಾ ಅಭ್ಯರ್ಥಿಗಳಿಗೆ ಕರೆಪತ್ರ ಡೌನ್-ಲೋಡ್ ಮಾಡಿಕೊಂಡು ನಿಗದಿತ ದಿನಾಂಕದಂದು ಹಾಜರಾಗಲು ಎಸ್. ಎಂ.ಎಸ್ ಸಂದೇಶ / ಪತ್ರಿಕಾ ಪ್ರಕಟಣೆ ಹಾಗೂ ನಿಗಮದ ಅಧಿಕೃತ ವೆಬ್-ಸೈಟ್ನಲ್ಲಿ ಪ್ರಕಟಣೆ ನೀಡುವ ಮೂಲಕ ಮಾಹಿತಿ ನೀಡಲಾಗಿತ್ತು ಎಂದಿದೆ. ಈ ಪರೀಕ್ಷೆಗೆ ಕೆಲವೊಂದು ಅಭ್ಯರ್ಥಿಗಳು ನಿಗದಿತ ದಿನಾಂಕಗಳಂದು ಚಾಲನಾ ವೃತ್ತಿ ಪರೀಕ್ಷೆಗೆ ಹಾಜರಾಗಿರುವುದಿಲ್ಲ. ಈ ಹಿನ್ನಲೆಯಲ್ಲಿ ಅಂತಿಮವಾಗಿ ಗೈರುಹಾಜರಾದ ಅಭ್ಯರ್ಥಿಗಳಿಗೆ ಮತ್ತೊಂದು ಅವಕಾಶ ಕಲ್ಪಿಸಲು…
ಶಿವಮೊಗ್ಗ: ವ್ಯಕ್ತಿತ್ವನ್ನು ರೂಪಿಸುವಲ್ಲಿ ಪುಸ್ತಕಗಳು ಬಹುದೊಡ್ಡ ಪಾತ್ರವನ್ನು ವಹಿಸುತ್ತವೆ ಎಂದು ಹಿರಿಯ ಪತ್ರಕರ್ತ, ಚಿಂತಕ, ಬರಹಗಾರ ಎನ್. ರವಿಕುಮಾರ್ ಟೆಲೆಕ್ಸ್ ಹೇಳಿದರು. ಇಂದು ನಗರದ ಪ್ರಜ್ಞಾ ಬುಕ್ ಗ್ಯಾಲರಿಯ ವತಿಯಿಂದ ಆಯೋಜಿಸಿದ್ದ ಪುಸ್ತಕ ಸುಗ್ಗಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಅನುಭವ ಲೋಕದಿಂದ ಗಳಿಸಿದ ಅರಿವು ಓದಿನಿಂದ ವಿಸ್ತಾರಗೊಳ್ಳುತ್ತದೆ. ಸಮಾಜವನ್ನು ಮಾನವೀಯಗೊಳಿಸುವಲ್ಲಿ ಪುಸ್ತಕಗಳ ಪಾತ್ರ ದೊಡ್ಡದ್ದಾಗಿದ್ದು, ಇಂದಿನ ಡಿಜಿಟಲ್ ಯುಗದಲ್ಲೂ ಜನರು ಓದುಗ ಸಂಸ್ಕೃತಿಗೆ ಮರುಳುತ್ತಿರುವುದು ಆಶಾದಾಯಕ ಸಂಗತಿಯಾಗಿದೆ ಎಂದರು. ಯಾವುದೇ ಪುಸ್ತಕಗಳು ನಮ್ಮ ಬೌದ್ಧಿಕ ಆಯುಧಗಳೇ ಆಗಿರುತ್ತವೆ. ಜರ್ಮನ್ ನ ಹಿಟ್ಲರ್ ಮೊದಲು ಪುಸ್ತಕಗಳನ್ನು, ಗ್ರಂಥಾಲಯಗಳನ್ನು ಸುಡುವ ಮೂಲಕ ಜನರನ್ನು ಅರಿವಿನಿಂದ ದೂರವಿಟ್ಟು ತನ್ನ ಸರ್ವಾಧಿಕಾರವನ್ನು ಜಾರಿಗೊಳಿಸಲು ಮುಂದಾಗಿದ್ದನು. ಸಂವಿಧಾನವನ್ನು ಓದದೆ ಇರುವವರು ಸಂವಿಧಾನವನ್ನು ತಿರಸ್ಕರಿಸುವ ನಡವಳಿಕೆಗಳನ್ನುತೋರುತ್ತಿದ್ದಾರೆ. ಆದರೆ ಸಂವಿಧಾನವನ್ನು ಓದುವುದರಿಂದ ಭಾರತ ಅರಿವಾಗಲಿದೆ. ಇದು ಓದಿನ ಮಹತ್ವವನ್ನು ತಿಳಿಸುತ್ತದೆ ಎಂದು ವಿಶ್ಲೇಷಿಸಿದರು. ಪುಸ್ತಕಗಳು ಹಿಮ್ಮುಖ ಮತ್ತು ಮುನ್ನಡೆಯ ಎರಡೂ ಬಗೆಯ ದರ್ಶನವನ್ನು ಕೊಡಬಲ್ಲವು. ಪುಸ್ತಕಗಳನ್ನು ಓದುವುದರಿಂದ ನಮ್ಮ ವರ್ತಮಾನ…
ಬಳ್ಳಾರಿ : 95-ಸಂಡೂರು (ಪ.ಪಂ) ವಿಧಾನಸಭೆ ಉಪಚುನಾವಣೆ ಹಿನ್ನಲೆಯಲ್ಲಿ ಸಂಡೂರು ಮತಕ್ಷೇತ್ರಕ್ಕೆ ಸ್ಪರ್ಧಿಸಿರುವ ಅಭ್ಯರ್ಥಿಗಳಿಗೆ ಚುನಾವಣಾ ಆಯೋಗದ ನಿಯಮಗಳ ಅನ್ವಯ ಚಿಹ್ನೆ ಹಂಚಿಕೆ ಮಾಡಲಾಗಿದೆ ಎಂದು ಸಂಡೂರು ವಿಧಾನಸಭೆ ಉಪಚುನಾವಣಾಧಿಕಾರಿ ರಾಜೇಶ್.ಹೆಚ್.ಡಿ ಅವರು ತಿಳಿಸಿದ್ದಾರೆ. ಮಾನ್ಯತೆ ಪಡೆದ ರಾಷ್ಟ್ರೀಯ ಮತ್ತು ರಾಜ್ಯ ರಾಜಕೀಯ ಪಕ್ಷಗಳಾದ ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಈ.ಅನ್ನಪೂರ್ಣ ಅವರಿಗೆ ಕೈ ಚಿಹ್ನೆ, ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಬಂಗಾರ ಹನುಮಂತ ಅವರಿಗೆ ಕಮಲ ಚಿಹ್ನೆ ನೀಡಲಾಗಿದೆ. ಅದರಂತೆ ನೋಂದಾಯಿತ ರಾಜಕೀಯ ಪಕ್ಷಗಳಾದ ಕರ್ನಾಟಕ ಜನತಾ ಪಕ್ಷದ ಅಭ್ಯರ್ಥಿ ಅಂಜಿನಪ್ಪ.ಎನ್ ಅವರಿಗೆ ವಜ್ರ ಮತ್ತು ಪಕ್ಷೇತರ ಅಭ್ಯರ್ಥಿಗಳಾದ ಟಿ.ಎಂ.ಮಾರುತಿ ಅವರಿಗೆ ಬ್ಯಾಟರಿ ಚಾರ್ಜ್, ಟಿ.ರ್ರಿಸ್ವಾಮಿ ಅವರಿಗೆ ಟ್ರಕ್, ಎನ್.ವೆಂಕಣ್ಣ ಅವರಿಗೆ ಉಂಗುರ ಚಿಹ್ನೆ ನೀಡಲಾಗಿದ್ದು, ನ.13 ರಂದು ಮತದಾನ ನಡೆಯಲಿದೆ ಎಂದು ಸಂಡೂರು ವಿಧಾನಸಭೆ ಉಪಚುನಾವಣಾಧಿಕಾರಿ ರಾಜೇಶ್.ಹೆಚ್.ಡಿ ಅವರು ತಿಳಿಸಿದ್ದಾರೆ. https://kannadanewsnow.com/kannada/kannada-language-to-be-taught-in-all-schools-in-the-state-minister-madhu-bangarappa/ https://kannadanewsnow.com/kannada/important-information-for-ration-card-holders-those-who-do-not-do-e-kyc-will-not-get-ration-grains-card-cancelled/
ಬೆಂಗಳೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಎಸ್. ಮಧು ಬಂಗಾರಪ್ಪ ಅವರು 69ನೇ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ಭಾಗವಹಿಸಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಶ್ರೀ ಭುವನೇಶ್ವರಿ ದೇವಿಗೆ ಪುಷ್ಪಾರ್ಚನೆ ಸಲ್ಲಿಸಿದರು. ನಂತರ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗವಹಿಸಿ, ರಾಜ್ಯೋತ್ಸವ ಸಂದೇಶ ನೀಡಿದರು. ನಮ್ಮ ಕರ್ನಾಟಕವು ಭಾಷೆ, ಶಿಲ್ಪಕಲೆ, ಸಾಹಿತ್ಯ, ಸಂಸ್ಕøತಿ, ನೆಲ, ಜಲ, ಸಂಪತ್ತುಗಳಿಂದ ಸಮೃದ್ಧವಾಗಿದ್ದು, ಸಾಮಾಜಿಕವಾಗಿ, ಆರ್ಥಿಕವಾಗಿ ಪ್ರತಿಯೊಬ್ಬರೂ ಅಭಿವೃದ್ಧಿ ಹೊಂದಲು ಎಲ್ಲಾ ಅವಕಾಶಗಳನ್ನು ಒದಗಿಸಿದೆ. ಕರ್ನಾಟಕದಲ್ಲಿ ಕನ್ನಡವೇ ಆಡಳಿತ ಭಾಷೆಯಾಗಿದೆ. ಅದಕ್ಕಾಗಿ ರಾಜ್ಯದಲ್ಲಿ ಉತ್ತಮ ಗುಣಮಟ್ಟದ ಶಾಲಾ ಶಿಕ್ಷಣವನ್ನು ನೀಡಲು ಸತತ ಪ್ರಯತ್ನಗಳನ್ನು ಮಾಡಲಾಗುತ್ತಿದೆ. ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನ್ನಡ ಬಾಷೆಯನ್ನು ಪ್ರಥಮ ಭಾಷೆ ಅಥವಾ ದ್ವಿತೀಯ ಭಾಷೆಯಾಗಿ ಭೋದಿಸಲಾಗುತ್ತಿದೆ ಎಂದು ತಿಳಿಸಿದರು. ರಾಜ್ಯದಲ್ಲಿ 70 ಸಾವಿರಕ್ಕೂ ಹೆಚ್ಚು ಸರ್ಕಾರಿ, ಅನುದಾನಿತ ಖಾಸಗಿ ಶಾಲೆಗಳು ಕಾರ್ಯನಿರ್ವಹಿಸುತ್ತಿದ್ದು, 1 ಕೋಟಿ 4 ಲಕ್ಷ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಶಾಲೆಗಳ ಗುಣಮಟ್ಟ ಹೆಚ್ಚಿಸಲು ಹಲವು ನೂತನ ಯೋಜನೆಗಳನ್ನು ಸರ್ಕಾರ ರೂಪಿಸಿದೆ. ನಮ್ಮ…
ಸಾಲವನ್ನು ಮರುಪಾವತಿಸಲು ಗ್ರೇಸ್ ಅವಧಿಗಾಗಿ ಕಾಯುತ್ತಿರುವವರಿಗೆ ಇಂದು ಶುಭ ದಿನವಾಗಿದೆ. ಶುಕ್ರವಾರದ ಜೊತೆಗೆ ದೀಪಾವಳಿ ಅಮಾವಾಸ್ಯೆ ಬಂದಿದೆ. ಸಾಮಾನ್ಯ ದಿನಗಳಿಗಿಂತ ಅಮಾವಾಸ್ಯೆ ದಿನಗಳು ಹೆಚ್ಚು ಶಕ್ತಿ ಹೊಂದಿವೆ ಎಂದು ಸಾಮಾನ್ಯವಾಗಿ ಹೇಳಲಾಗುತ್ತದೆ. ಬ್ರಹ್ಮಾಂಡದ ಧನಾತ್ಮಕ ಶಕ್ತಿಯು ಭೂಮಿಗೆ ಹೆಚ್ಚು ಆಕರ್ಷಿತವಾದ ಈ ದಿನದಲ್ಲಿ, ನಾವು ಮಾಡಬಹುದಾದ ಪರಿಹಾರಗಳು ದುಪ್ಪಟ್ಟು ಪ್ರಯೋಜನಕಾರಿಯಾಗುತ್ತವೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಸಾಲದ ಹೊರೆ ನಿಮ್ಮಿಂದ ದೂರವಾಗಬೇಕು ಎಂದು ಹೇಳಿ ಈ 2 ವಸ್ತುಗಳನ್ನು ನಿಮ್ಮ ತಲೆಯ ಸುತ್ತ ಬೆಂಕಿಯಲ್ಲಿ ಇರಿಸಿ. ಸಹಜವಾಗಿ ಸಾಲ ಕರಗುತ್ತದೆ ಮತ್ತು ಆದಾಯವು ಗೋಚರವಾಗಿ ಹೆಚ್ಚಾಗುತ್ತದೆ. ಆ ಎರಡು ಅರ್ಥವೇನು? ಆ ವಸ್ತುಗಳನ್ನು ಬೆಂಕಿಯಲ್ಲಿ ಹಾಕುವುದು ಹೇಗೆ ಎಂದು ತಿಳಿಯಲು ಈ ಆಧ್ಯಾತ್ಮಿಕ ಪೋಸ್ಟ್ ಅನ್ನು ಓದುತ್ತಲೇ ಇರೋಣ. ದೀಪಾವಳಿ ಅಮಾವಾಸ್ಯೆ ಪರಿಕ್ರಮ ಹರಳೆಣ್ಣೆ ಮತ್ತು ಲವಂಗಗಳು ಆ 2 ಪದಾರ್ಥಗಳಾಗಿವೆ. ಮಣ್ಣಿನ ದೀಪವನ್ನು ತೆಗೆದುಕೊಂಡು ಇರಿಸಿ. ಅದರಲ್ಲಿ…