Author: kannadanewsnow09

ಬೆಂಗಳೂರು: ನಗರದಲ್ಲಿ ಮಾಲಿನ್ಯ ನಿಯಂತ್ರಣ ತಡೆಯುವ ಸಂಬಂಧ ಬೆಂಗಳೂರು ನಗರ ಪೊಲೀಸ್ ಇಲಾಖೆಯಿಂದ ದೀಪಾವಳಿ ಹಬ್ಬದಂದು ಮಾರ್ಗಸೂಚಿ ಅನುಸರಿಸಿ ಪಟಾಕಿ ಹಚ್ಚುವಂತೆ ತಿಳಿಸಲಾಗಿತ್ತು. ಈ ನಿಯಮವನ್ನು ಉಲ್ಲಂಘಿಸಿ ಪಟಾಕಿ ಹಚ್ಚಿದವರಿಗೆ ಪೊಲೀಸ್ ಇಲಾಖೆ ಬಿಗ್ ಶಾಕ್ ನೀಡಿದೆ. ಇಂದು ಬರೋಬ್ಬರಿ 56 ಪ್ರಕರಣ ದಾಖಲಿಸಿದೆ. ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ಬೆಂಗಳೂರು ನಗರ ಪೊಲೀಸರು ಮಾಹಿತಿ ಹಂಚಿಕೊಂಡಿದ್ದು, ದಿನಾಂಕ 31-10-2024ರಿಂದ ದಿನಾಂಕ 01-11-2024ರವರೆಗೆ ಸಂಜೆ 5 ಗಂಟೆಯವರೆಗೆ ಬೆಂಗಳೂರು ನಗರದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಪಟಾಕಿ ನಿಯಮಾವಳಿಗಳನ್ನು ಉಲ್ಲಂಘನೆ ಮಾಡಿದವರ ವಿರುದ್ಧ 56 ಕೇಸ್ ದಾಖಲಿಸಿರುವುದಾಗಿ ತಿಳಿಸಿದೆ. ಬೆಂಗಳೂರು ಉತ್ತರ ವಲಯದಲ್ಲಿ 09, ದಕ್ಷಿಣ ವಲಯದಲ್ಲಿ 04, ಪೂರ್ವ ವಲಯದಲ್ಲಿ 06, ಈಶಾನ್ಯ 19, ಆಗ್ನೇಯ 09, ವೈಟ್ ಫೀಲ್ಡ್ 09 ಸೇರಿದಂತೆ 56 ಪ್ರಕರಣವನ್ನು ದಾಖಲಿಸಿರುವುದಾಗಿ ತಿಳಿಸಿದೆ. https://kannadanewsnow.com/kannada/minister-ramalinga-reddy-hoists-kannada-flag-in-ramanagara-here-are-the-highlights-of-his-speech/ https://kannadanewsnow.com/kannada/everyone-should-unite-in-the-work-of-developing-kannada-language-minister-krishnabaire-gowda/ https://kannadanewsnow.com/kannada/important-information-for-ration-card-holders-those-who-do-not-do-e-kyc-will-not-get-ration-grains-card-cancelled/

Read More

ರಾಮನಗರ: ಇಂದು ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾಗಿದ್ದ 69ನೇ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ, ಮಾತನಾಡಿದರು. ಆ ಭಾಷಣದ ಹೈಲೈಟ್ಸ್ ಮುಂದೆ ಓದಿ. ಇಂದು ಅಖಂಡ ಕರ್ನಾಟಕ ಅಸ್ತಿತ್ವಕ್ಕೆ ಬಂದ ದಿನ. 1956ಕ್ಕೂ ಮೊದಲು ಕರ್ನಾಟಕ ವಿವಿಧ ಪ್ರಾಂತ್ಯಗಳಲ್ಲಿ ಹರಿದು ಹಂಚಿ ಹೋಗಿತ್ತು. ದಕ್ಷಿಣದ ಕೆಲವು ಜಿಲ್ಲೆಗಳು ಮೈಸೂರು ಸಂಸ್ಥಾನದಲ್ಲಿದ್ದರೆ, ಕಲಬುರಗಿ, ಬೀದರ, ರಾಯಚೂರು ಜಿಲ್ಲೆಗಳು ಹೈದ್ರಾಬಾದ್ ನಿಜಾಮರ ಆಳ್ವಿಕೆಗೆ ಒಳಪಟ್ಟಿದ್ದವು. ರಾಜ್ಯದ ವಾಯುವ್ಯ ಭಾಗ ಮುಂಬೈ ಪ್ರಾಂತ್ಯಕ್ಕೆ ಸೇರಿದ್ದರೆ, ದಕ್ಷಿಣ ಕನ್ನಡ, ಕೊಳ್ಳೇಗಾಲ, ಬಳ್ಳಾರಿ ಮುಂತಾದ ಪ್ರದೇಶಗಳು ಮದ್ರಾಸ್ ಪ್ರಾಂತ್ಯಕ್ಕೆ ಸೇರಿದ್ದವು. ಕೊಡಗು ಜಿಲ್ಲೆ ಬ್ರಿಟಿಷರ ಒಂದು ಅಧೀನ ರಾಜ್ಯವಾಗಿ ಉಳಿದಿತ್ತು ಎಂದರು. ಮೈಸೂರು ರಾಜ್ಯವನ್ನು ನವೆಂಬರ್ 1 1973 ರಂದು ಅಂದಿನ ಮುಖ್ಯಮಂತ್ರಿಗಳಾದ ದಿವಂಗತ ಡಿ.ದೇವರಾಜ ಅರಸರವರು ವಿಶಾಲಾರ್ಥದಲ್ಲಿ ‘ಕರ್ನಾಟಕ’ ಎಂದು ಮರು ನಾಮಕರಣ ಮಾಡಿ ಇಂದಿಗೆ 51 ವರ್ಷ ಪೂರ್ಣಗೊಂಡಿರುತ್ತದೆ ಎಂದು ಹೇಳಿದರು. ಕರ್ನಾಟಕ ಏಕೀಕರಣಕ್ಕಾಗಿ ಹೋರಾಡಿದ ಸ್ಮರಣೀಯರ ಸಂಖ್ಯೆ…

Read More

ದಾವಣಗೆರೆ: ಅಲ್ಪಸಂಖ್ಯಾತ ಹಾಗೂ ವಕ್ಪ್ ಖಾತೆಯ ಸಚಿವ ಜಮೀರ್ ಆಹಮ್ಮದ್ ಖಾನ್ ಓರ್ವ ಮತಾಂಧ.ಕೂಡಲೇ ಇವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು. ಇಲ್ಲವೇ ಪಾಕಿಸ್ತಾನಕ್ಕೆ ಓಡಿಸಬೇಕು ಎಂದು ಮಾಜಿ ಸಚಿವ ಎ.ಪಿ.ರೇಣುಕಾಚಾರ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಗ್ರಹಿಸಿದ್ದಾರೆ. ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸಚಿವ ಜಮೀರ್ ಆಹಮ್ಮದ್ ಖಾನ್ ಅಂತಹವರನ್ನು ಯಾವುದೇ ಕಾರಣಕ್ಕೂ ಸಚಿವ ಸಂಪುಟದಲ್ಲಿ ಇಟ್ಟುಕೊಳ್ಳಬಾರದು. ಇಲ್ಲದಿದ್ದರೆ, ರಾಜ್ಯದ ಜನತೆ ಕಾಂಗ್ರೆಸ್ ಪಕ್ಷವನ್ನು ವಿಧಾನಸೌಧದ ಮೂರನೇ ಮಹಡಿಯಿಂದ ಜಾಗ ಖಾಲಿ ಮಾಡಿಸುತ್ತಾರೆ ಎಂದು ಎಚ್ಚರಿಕೆ ಕೊಟ್ಟರು. ಅಧಿಕಾರಿಗಳ ಮೂಲಕ ನೋಟೀಸ್ ಕೊಡಲು ಜಮೀರ್ ಅವರಿಗೆ ಅಧಿಕಾರ ಕೊಟ್ಡಿದ್ದು ಯಾರು? ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಅಧಿಕಾರಿಗಳು ನೋಟೀಸ್ ಜಾರಿ ಮಾಡಿದ್ದಾರೆ ಎಂದು ಹೇಳಿರುವ ವಿಡಿಯೋ ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗಿದೆ ಎಂದು ಕಿಡಿಕಾರಿದರು. ಜಮೀರ್ ಕೇವಲ ಮುಸ್ಲಿಂ ಸಮುದಾಯಕ್ಕೆ ಮಾತ್ರ ಸಚಿವರಲ್ಲ. ಅವರು ಇದನ್ನು ಮೊದಲು ಅರ್ಧಮಾಡಿಕೊಳ್ಳಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡಲೇ ಅವರನ್ನು…

Read More

ಬೆಂಗಳೂರು : ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಕುಟುಂಬಕ್ಕೆ ಸಂಬಂಧಿಸಿದಂತೆ ಯಾವುದೇ ಸುದ್ದಿ ಪ್ರಕಟಿಸದಂತೆ ಸಿಟಿ ಸಿವಿಲ್ ಕೋರ್ಟ್ ನಿರ್ಬಂಧ ಹೇರಿದೆ. ಸಿ.ಪಿ. ಯೋಗೇಶ್ವರ್ ಮತ್ತು ಶೀಲಾ ಯೋಗೇಶ್ವರ್ ಅವರ ಮನವಿ ಮೇರೆಗೆ ವಿವಿಧ ಸುದ್ದಿವಾಹಿನಿಗಳು, ವೆಬ್ ಸೈಟ್ ಗಳು, ಯೂಟ್ಯೂಬ್ ವಾಹಿನಿಗಳಲ್ಲಿ ಈ ಹಿಂದೆ ಪ್ರಸಾರವಾಗಿದ್ದ ವಿಡಿಯೋಗಳು ಸ್ಥಗಿತಗೊಳಿಸುವುದು, ಸಾಮಾಜಿಕ ಜಾಲತಾಣಗಳು, ಒಳಗೊಂಡಂತೆ ಎಲ್ಲಾ ಮಾಧ್ಯಮಗಳ ಮೇಲೆ ನಿರ್ಬಂಧ ವಿಧಿಸಲಾಗಿದೆ. ಯೋಗೇಶ್ವರ್ ಕುಟುಂಬಕ್ಕೆ ಸಂಬಂಧಿಸಿದಂತೆ ಮುಂದಿನ ಆದೇಶದವರೆಗೆ ಯಾವುದೇ ಸುದ್ದಿ ಪ್ರಸಾರ ಮಾಡಬಾರದು ಎಂದು ನ್ಯಾಯಪೀಠ ಆದೇಶಿಸಿದೆ. https://kannadanewsnow.com/kannada/neet-pg-2024-counselling-schedule-announced/ https://kannadanewsnow.com/kannada/big-news-isro-launched-indias-first-analog-space-mission/

Read More

ನವದೆಹಲಿ: ವೈದ್ಯಕೀಯ ಕೌನ್ಸೆಲಿಂಗ್ ಸಮಿತಿ (Medical Counselling Committee – MCC) ದೀರ್ಘ ಕಾಯುವಿಕೆಯ ನಂತರ ನೀಟ್ ಪಿಜಿ 2024 ಕೌನ್ಸೆಲಿಂಗ್ ವೇಳಾಪಟ್ಟಿಯನ್ನು ( NEET PG 2024 counselling schedule ) ಅಧಿಕೃತವಾಗಿ ಬಿಡುಗಡೆ ಮಾಡಿದೆ. ಕೌನ್ಸೆಲಿಂಗ್ ಪ್ರಕ್ರಿಯೆಯಲ್ಲಿ ಭಾಗವಹಿಸಲು ಆಸಕ್ತಿ ಹೊಂದಿರುವ ವೈದ್ಯಕೀಯ ವಿದ್ಯಾರ್ಥಿಗಳು mcc.nic.in ರ ಅಧಿಕೃತ ಎಂಸಿಸಿ ವೆಬ್ಸೈಟ್ನಿಂದ ವಿವರವಾದ ವೇಳಾಪಟ್ಟಿಯನ್ನು ಪರಿಶೀಲಿಸಬಹುದು ಮತ್ತು ಡೌನ್ಲೋಡ್ ಮಾಡಬಹುದು. ಮೊದಲ ಸುತ್ತಿನ ಪಿಜಿ ಕೌನ್ಸೆಲಿಂಗ್ ಗೆ ನೋಂದಣಿ ವಿಂಡೋ ಸೆಪ್ಟೆಂಬರ್.20ರಂದು ಪ್ರಾರಂಭವಾಯಿತು. ನೀಟ್ ಪಿಜಿ 2024 ಕೌನ್ಸೆಲಿಂಗ್ ವೇಳಾಪಟ್ಟಿ ಏನು? ನೀಟ್ ಪಿಜಿ ಕೌನ್ಸೆಲಿಂಗ್ ವೇಳಾಪಟ್ಟಿಯ ಪ್ರಕಾರ, ಸಮಿತಿಯು ನವೆಂಬರ್ 20 ರಂದು ಮೊದಲ ಸುತ್ತಿನ ಸೀಟು ಹಂಚಿಕೆ ಫಲಿತಾಂಶಗಳನ್ನು ಪ್ರಕಟಿಸಲಿದೆ. ಸೀಟುಗಳನ್ನು ಹಂಚಿಕೆ ಮಾಡಿದ ಅಭ್ಯರ್ಥಿಗಳು ನವೆಂಬರ್ 21 ರಿಂದ ನವೆಂಬರ್ 27 ರೊಳಗೆ ಆಯಾ ಕಾಲೇಜುಗಳಿಗೆ ವರದಿ ಮಾಡಬೇಕು. ಕೌನ್ಸೆಲಿಂಗ್ ಗಾಗಿ ಎರಡನೇ ಸುತ್ತಿನ ನೋಂದಣಿ ಪ್ರಕ್ರಿಯೆ ಡಿಸೆಂಬರ್ 4 ರಿಂದ 9 ರವರೆಗೆ…

Read More

ಬೆಂಗಳೂರು: ಸಿಲಿಕಾನ್ ಸಿಟಿ ನೂರಾರು, ಸಾವಿರಾರು, ಲಕ್ಷಾಂತರ ಮಂದಿಗೆ ಉದ್ಯೋಗ ಕೊಟ್ಟಿದೆ. ದುಡಿಮೆಯ ಬದುಕು ಕಟ್ಟಿಕೊಳ್ಳಲು ಅವಕಾಶ ನೀಡಿದೆ. ಇಲ್ಲಿಗೆ ಬಂದ ಅದೆಷ್ಟೋ ಮಂದಿ ಐದು, ಹತ್ತಾರು ವರ್ಷಗಳಿಂದ ಕರ್ನಾಟಕದ ರಾಜಧಾನಿಯಲ್ಲೇ ಬದುಕು ಕಟ್ಟಿಕೊಂಡಿದ್ದಾರೆ. ಹೀಗೆ ಕಳೆದ 12 ವರ್ಷಗಳಿಂದ ಬೆಂಗಳೂರಲ್ಲಿ ಬದುಕು ಕಟ್ಟಿಕೊಂಡಿದ್ದಂತ ವ್ಯಕ್ತಿಯೊಬ್ಬ ಮಾತ್ರ ಕನ್ನಡವನ್ನು ಕಲಿಯದಿದ್ದಕ್ಕೇ, ಸ್ಥಳೀಯರೊಬ್ಬರು ಕನ್ನಡ ಕಲಿಯುವಂತೆ ಪಾಠ ಮಾಡಿದಂತ ವೀಡಿಯೋ ವೈರಲ್ ಆಗಿದೆ. ಈಗ ವ್ಯಾಪಕವಾಗಿ ಹಂಚಿಕೊಳ್ಳಲಾದ ವೀಡಿಯೊದಲ್ಲಿ, ಬೆಂಗಳೂರಿನ ನಿವಾಸಿಯೊಬ್ಬರು ಒಂದು ದಶಕದಿಂದ ನಗರದಲ್ಲಿ ವಾಸಿಸುತ್ತಿರುವ ಕನ್ನಡೇತರ ಭಾಷಿಕರನ್ನು ಎದುರಿಸಿ, ಸ್ಥಳೀಯ ಸಂಸ್ಕೃತಿಯನ್ನು ಅಳವಡಿಸಿಕೊಳ್ಳುವ ಮಾರ್ಗವಾಗಿ ಕನ್ನಡವನ್ನು ಕಲಿಯುವಂತೆ ಒತ್ತಾಯಿಸುತ್ತಿರುವುದು ಕಂಡುಬರುತ್ತದೆ. ವೀಡಿಯೊದುದ್ದಕ್ಕೂ, ಬೆಂಗಳೂರು ಸ್ಥಳೀಯರು, ನಗರದಲ್ಲಿ ಅನೇಕ ವರ್ಷಗಳ ನಂತರವೂ, ಭಾಷೆಯನ್ನು ಕಲಿಯುವ ಪ್ರಯತ್ನವನ್ನು ಏಕೆ ಮಾಡಲಿಲ್ಲ ಎಂದು ಆ ವ್ಯಕ್ತಿಯನ್ನು ಪ್ರಶ್ನಿಸುತ್ತಾರೆ. ಇದು ಈ ಪ್ರದೇಶದ ಸಂಸ್ಕೃತಿ ಮತ್ತು ಅಸ್ಮಿತೆಗೆ ಗೌರವ ಮತ್ತು ಮೆಚ್ಚುಗೆಯನ್ನು ತೋರಿಸುತ್ತದೆ ಎಂದು ಗಮನಸೆಳೆದರು. ಇನ್ನೂ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ವೀಡಿಯೋದಲ್ಲಿ, ಈ ವ್ಯಕ್ತಿ…

Read More

ಬೆಂಗಳೂರು: ಕನ್ನಡೇತರರು ಕನ್ನಡವನ್ನು ಕಲಿಯುವ ವಾತಾವರಣವನ್ನು ನಾವು ನಿರ್ಮಿಸಿದಾಗ ಮಾತ್ರ , ನಮ್ಮ ಭಾಷೆ ಎತ್ತರಕ್ಕೆ ಬೆಳೆಯಲು ಸಾಧ್ಯ. ನಾನು ಅಧಿಕಾರದಲ್ಲಿ ಇರುವಾಗ ಕನ್ನಡಕ್ಕೆ ಚ್ಯುತಿಯಾಗಲು ಬಿಡುವುದಿಲ್ಲ ಎಂಬುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕರ್ನಾಟಕ ರಾಜ್ಯೋತ್ಸವ ಸಮಿತಿ ನೃಪತುಂಗ ಮಂಟಪ ಬೆಂಗಳೂರು ಇವರ ವತಿಯಿಂದ ಆಯೋಜಿಸಲಾಗಿದ್ದ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. 100 ಕನ್ನಡ ಸಾಧಕರಿಗೆ ಪ್ರಶಸ್ತಿ 1956ರ ನವೆಂಬರ್ 1 ರಂದು ರಾಜ್ಯ ಏಕೀಕರಣಗೊಂಡು ಮೈಸೂರು ರಾಜ್ಯ ಉದಯವಾಯಿತು. ಮಾಜಿ ಮುಖ್ಯಮಂತ್ರಿ, ದಿ.ದೇವರಾಜ ಅರಸು ಅವರ ಅವಧಿಯಲ್ಲಿ 1973ರ ನವೆಂಬರ್ 1 ರಂದು ಮೈಸೂರು ರಾಜ್ಯ , ಇಡೀ ರಾಜ್ಯವನ್ನು ಪ್ರತಿನಿಧಿಸುವ ಹೆಸರಾದ ಕರ್ನಾಟಕ ವೆಂದು ಮರುನಾಮಕರಣಗೊಂಡಿತು.. ಈ ಸುವರ್ಣ ಸಂಭ್ರಮವನ್ನು 2023ರ ನವೆಂಬರ್ 1 ರಂದು 51 ನೇ ವರ್ಷ ಎಂದು ಕರ್ನಾಟಕ ನಾಮಕರಣಗೊಂಡ ದಿನವೆಂದು ವರ್ಷಪೂರ್ತಿ ಆಚರಿಸಬೇಕೆಂದು ನಿರ್ಧರಿಸಲಾಯಿತು. ಇಡೀ ರಾಜ್ಯದಲ್ಲಿ ಕನ್ನಡ ನಾಡು, ನುಡಿ, ನೆಲ, ಜಲದ ಮಹತ್ವ ಪ್ರಚುರಪಡಿಸಲು ‘ಹೆಸರಾಯಿತು…

Read More

ಬೆಂಗಳೂರು: ದೀಪಾವಳಿಯ ನಂತರದ ಅವಧಿಯಲ್ಲಿ ಮತ್ತು ಮುಂಬರುವ ದೀರ್ಘ ವಾರಾಂತ್ಯದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿರ್ವಹಿಸಲು, ನೈಋತ್ಯ ರೈಲ್ವೆಯು ಹುಬ್ಬಳ್ಳಿ ಮತ್ತು ಯಶವಂತಪುರ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲನ್ನು ಓಡಿಸಲಿದೆ. ರೈಲು ಸಂಖ್ಯೆ 07353/07354 ಎಸ್ಎಸ್ಎಸ್ ಹುಬ್ಬಳ್ಳಿ-ಯಶವಂತಪುರ-ಎಸ್ಎಸ್ಎಸ್ ಹುಬ್ಬಳ್ಳಿ ವಿಶೇಷ ಎಕ್ಸ್ ಪ್ರೆಸ್ (1 ಟ್ರಿಪ್) ರೈಲು ಸಂಖ್ಯೆ 07353 ಎಸ್ಎಸ್ಎಸ್ ಹುಬ್ಬಳ್ಳಿ-ಯಶವಂತಪುರ ವಿಶೇಷ ಎಕ್ಸ್ ಪ್ರೆಸ್ ರೈಲು ನವೆಂಬರ್ 3 ರಂದು ಎಸ್ಎಸ್ಎಸ್ ಹುಬ್ಬಳ್ಳಿಯಿಂದ ರಾತ್ರಿ 8 ಗಂಟೆಗೆ ಹೊರಟು, ನವೆಂಬರ್ 4 ರಂದು ಯಶವಂತಪುರ ನಿಲ್ದಾಣವನ್ನು ಮುಂಜಾನೆ 3:30 ಗಂಟೆಗೆ ತಲುಪಲಿದೆ. ಪುನಃ ಇದೆ ರೈಲು (07354) ನವೆಂಬರ್ 4ರಂದು ಯಶವಂತಪುರದಿಂದ ಬೆಳಗ್ಗೆ 4.45 ಗಂಟೆಗೆ ಹೊರಟು ಅದೇ ದಿನ ಮಧ್ಯಾಹ್ನ 12.50ಕ್ಕೆ ಎಸ್ಎಸ್ಎಸ್ ಹುಬ್ಬಳ್ಳಿ ತಲುಪಲಿದೆ. ಈ ರೈಲು ಎರಡೂ ಮಾರ್ಗಗಳಲ್ಲಿ ಹಾವೇರಿ, ರಾಣಿಬೆನ್ನೂರು, ಹರಿಹರ, ದಾವಣಗೆರೆ, ಚಿಕ್ಕಜಾಜೂರು, ಕಡೂರು, ಅರಸೀಕೆರೆ, ತಿಪಟೂರು ಮತ್ತು ತುಮಕೂರು ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ. ಈ ರೈಲಿನಲ್ಲಿ ಒಂದು…

Read More

ಬೆಂಗಳೂರು: ನಟ ದರ್ಶನ್ ಅವರು ಬೆನ್ನು ನೋವಿನಿಂದ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರನ್ನು ಪರೀಕ್ಷೆಗೆ ಒಳಪಡಿಸಿರುವಂತ ವೈದ್ಯರು ಚಿಕಿತ್ಸೆಯ ಬಗ್ಗೆ ಬಿಗ್ ಅಪ್ ಡೇಟ್ ನೀಡಿದ್ದಾರೆ. ಅದೇನು ಅಂತ ಮುಂದೆ ಓದಿ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯ ನರರೋಗ ತಜ್ಞ ವೈದ್ಯ ಡಾ.ನವೀನ್ ಅಪ್ಪಾಜಿಗೌಡ ಅವರು, ನಟ ದರ್ಶನ್ ಅವರಿಗೆ ಚಿಕಿತ್ಸೆ ಆರಂಭಿಸಲಾಗಿದೆ. ಫಿಸಿಯೋಥೆರವಿ ನೀಡಲಾಗುತ್ತಿದೆ. ಚಿಕಿತ್ಸೆ ಆರಂಭಿಸಿ ವೈದ್ಯಕೀಯ ಪರೀಕ್ಷೆ ಮಾಡ್ತಿದ್ದೇವೆ ಎಂದರು. ನಟ ದರ್ಶನ್ ಅವರಿಗೆ ಬೆನ್ನು ನೋವಿನ ಕಾರಣದಿಂದಾಗಿ ವಿವಿಧ ಪರೀಕ್ಷೆಗೆ ಒಳಪಡಿಸಲಾಗಿದೆ. ನಟ ದರ್ಶನ್ ಅವರಿಗೆ ಬೆನ್ನು ನೋವಿದೆ. ಎಡಗಾಲು ಸೆಳೆತವಿದೆ. ಮುಂದಿನ 48 ಗಂಟೆಗಳಲ್ಲಿ ಹೆಲ್ತ್ ರಿಪೋರ್ಟ್ ಸಿಗಲಿದೆ. ಆ ವರದಿಯ ನಂತ್ರ ಮುಂದಿನ ನಿರ್ಧಾರವನ್ನು ತೆಗೆದುಕೊಳ್ಳಲಾಗುವುದು ಎಂಬುದಾಗಿ ತಿಳಿಸಿದ್ದಾರೆ. https://kannadanewsnow.com/kannada/everyone-should-unite-in-the-work-of-developing-kannada-language-minister-krishnabaire-gowda/ https://kannadanewsnow.com/kannada/big-news-isro-launched-indias-first-analog-space-mission/ https://kannadanewsnow.com/kannada/important-information-for-ration-card-holders-those-who-do-not-do-e-kyc-will-not-get-ration-grains-card-cancelled/

Read More

ಬೆಂಗಳೂರು: ಕಾಂಗ್ರೆಸ್ ಸರಕಾರ ಕೊಟ್ಟ 5 ಗ್ಯಾರಂಟಿಗಳೂ ನಾಪತ್ತೆ ಆಗುತ್ತಿವೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆರೋಪಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಈ ಕಾಂಗ್ರೆಸ್ ಸರಕಾರದ ಕಥೆ ಹೇಗಾಗಿದೆ ಎಂದರೆ ಎತ್ತು ಏರಿಗೆ ಕೋಣ ನೀರಿಗೆ ಎಂಬಂತಾಗಿದೆ. ದಯವಿಟ್ಟು ಎತ್ತು ಯಾರು, ಕೋಣ ಯಾರೆಂದು ಕೇಳದಿರಿ. ಅದನ್ನು ನೀವೇ ಅರ್ಥ ಮಾಡಿಕೊಳ್ಳಿ ಎಂದು ನುಡಿದರು. ಜನರಿಗೆ ಮೋಸ ಮಾಡಿ, ವಂಚನೆ ಮಾಡಿ 5 ಗ್ಯಾರಂಟಿ ಮೂಲಕ ಅಧಿಕಾರಕ್ಕೆ ಬಂದ ಕಾಂಗ್ರೆಸ್ಸಿಗರು ನಿಜವಾಗಿಯೂ 50 ಗ್ಯಾರಂಟಿ ಕೊಟ್ಟವರು. 5 ಗ್ಯಾರಂಟಿಗಳಲ್ಲಿ ಯಾವುದೂ ಸರಿಯಾಗಿ ಜನರನ್ನು ತಲುಪುತ್ತಿಲ್ಲ. ಗೃಹಲಕ್ಷ್ಮಿ 3 ತಿಂಗಳಿನಿಂದ ಬಂದಿಲ್ಲ. ಬೆಳಗಾವಿಯ ಲಕ್ಷ್ಮಕ್ಕ ಹೇಳುತ್ತಿದ್ದರೂ ಹಣ ಬರುತ್ತಿಲ್ಲ. ಅನ್ನಭಾಗ್ಯದ ಭಾಗ್ಯವೂ ಇಲ್ಲ. ಸರ್ವರ್ ಡೌನ್, ಇವತ್ತು- ನಾಳೆ ಅನ್ನುತ್ತಾರೆ. ಯುವನಿಧಿ ಯಾರಿಗೆ ಬಂತೆಂದು ಒಬ್ಬರೂ ಹೇಳಿಲ್ಲ. ಈ ಪರಿಸ್ಥಿತಿಯಲ್ಲಿ ಶಕ್ತಿ ಯೋಜನೆ ವಾಪಸ್…

Read More