Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಚುನಾವಣೆಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯು ಭರ್ಜರಿ ತಯಾರಿ ನಡೆಸಿದೆ. ಇದಕ್ಕಾಗಿ ಬಂಗಳೂರು ಐದು ನಗರಪಾಲಿಕೆ ಚುನಾವಣೆ ಪೂರ್ವತಯಾರಿ ಸಮಿತಿ ರಚಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆದೇಶಿಸಿದ್ದಾರೆ. ಈ ಸಂಬಂಧ ಆದೇಶ ಹೊರಡಿಸಿರುವಂತ ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು, ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹಾಗೂ 5 ನಗರಪಾಲಿಕೆ ಅಸ್ತಿತ್ವಕ್ಕೆ ಬಂದ ನಂತರ, ಇದಕ್ಕೆ ಸಂಬಂಧಪಟ್ಟಂತೆ ಬೆಂಗಳೂರು ಮಹಾನಗರದ ವ್ಯಾಪ್ತಿಯಲ್ಲಿ ಬರುವ 5 ನಗರಪಾಲಿಕೆಗಳಲ್ಲಿ ಚುನಾವಣಾ ಪೂರ್ವತಯಾರಿ, ಪಕ್ಷ ಸಂಘಟನೆಗೆ ಸಂಬಂಧಪಟ್ಟ, ಇತರ ಪುಕ್ರಿಯೆಗಳನ್ನು ಪೂರ್ಣಗೊಳಿಸಿ ಪಕ್ಷವನ್ನು ಮುಂಬರುವ ನಗರಪಾಲಿಕೆ ಚುನಾವಣೆಗೆ ಸಜ್ಜುಗೊಳಿಸಲು “ಬೆಂಗಳೂರು 5 ನಗರಪಾಲಿಕೆ ಚುನಾವಣೆ ಪೂರ್ವತಯಾರಿ ಸಮಿತಿ” ರಚಿಸಲಾಗಿದೆ ಎಂದಿದ್ದಾರೆ. ಈ ಕೆಳಕಾಣಿಸಿದ ಸಮಿತಿಯ ಎಲ್ಲ ಸದಸ್ಯರುಗಳು ತಮಗೆ ನೀಡಲಾದ ಜವಾಬ್ದಾರಿಯನ್ನು ವಹಿಸಿಕೊಂಡು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಬರುವ 5 ಬೆಂಗಳೂರು ನಗರಪಾಲಿಕೆಗಳಿ ನಡೆಸಲು ಉದ್ದೇಶಿಸಲಾದ ಚುನಾವಣೆಗೆ ಸಂಬಂಧಪಟ್ಟಂತೆ ಬೆಂಗಳೂರು ನಗರ ವ್ಯಾಪ್ತಿಯ ಪಕ್ಷದ ಎಲ್ಲ…
ಹಾವೇರಿ: ರಾಜ್ಯದಲ್ಲಿ ಅನೇಕ ಮುಸ್ಲೀಮರು ಇನ್ನೂ ಗುಡಿಸಲಿನಲ್ಲಿದ್ದಾರೆ. ನೀರು, ಟಾಯ್ಲೆಟ್ ಇಲ್ಲ. ನಾವು ಮುಸ್ಲಿಮರಿಗೆ ಬಹಳ ದೊಡ್ಡದಾಗಿ ಏನೂ ಮಾಡಿಲ್ಲ ಎಂಬುದಾಗಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ಇಂದು ಹಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಜಾತಿಗಣತಿ ವಿಚಾರದಲ್ಲಿ ನಮ್ಮದೂ ಲೋಪವಿದೆ. ಜಾತಿಗಣತಿ ಮಾಡಿ 11 ವರ್ಷ ಆಗಿದೆ. ಹಾಗಾಗಿ ಹೊಸದಾಗಿ ಮಾಡ್ತಿದ್ದೇವೆ ಎಂದರು. ಆಯಾ ಜಾತಿಯವರಿಗೆ ಇನ್ನೊಂದು ಸಲ ಮನವರಿಕೆ ಮಾಡಿಕೊಡ್ತೇವೆ. ನಿಮ್ಮ ನಿಮ್ಮ ಜಾತಿ ಸರಿಯಾಗಿ ಬರೆಸಿ ಅಂತಾ ಮನವರಿಕೆ ಮಾಡುತ್ತೇವೆ ಎಂದರು. ಕಾಂಗ್ರೆಸ್ ನಿಂದ ಮುಸ್ಲಿಂ ತುಷ್ಠೀಕರಣ ಹೆಚ್ಚಾಗಿದೆ ಎಂಬ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದಂತ ಅವರು, ಸಂಸದ ಬೊಮ್ಮಾಯಿ ಹೇಳಿಕೆಗೆ ಪ್ರತಿಕ್ರಿಯಿಸಿ ಮುಸ್ಲೀಮರು ಇನ್ನೂ ಗುಡಿಸಲಿನಲ್ಲೇ ಇದ್ದಾರೆ. ನೀರು, ಟಾಯ್ಲೆಟ್ ಇಲ್ಲ. ನಾವು ಮುಸ್ಲೀಮರಿಗೆ ಬಹಳ ದೊಡ್ಡದಾಗಿ ಏನೂ ಮಾಡಿಲ್ಲ ಎಂದರು. ಪಾಕ್ ಪರ ಘೋಷಣೆ ಕೂಗಿದವರನ್ನು ಸಮರ್ಥನೆ ಮಾಡಲು ಆಗಲ್ಲ. ಪಾಕಿಸ್ತಾನ ಪರ ಘೋಷಣೆ ಕೂಗಿದವರನ್ನು ಪೊಲೀಸರು ಬಂಧಿಸಿದ್ದಾರೆ ಎಂದರು.
ನೇಪಾಳ ಪ್ರಧಾನಿ ಸುಶೀಲಾ ಕರ್ಕಿ ಜನರಲ್ ಝಡ್ ಪ್ರತಿಭಟನೆಯ ಸಂತ್ರಸ್ತರನ್ನು ಹುತಾತ್ಮರೆಂದು ಘೋಷಿಸಿದ್ದಾರೆ, ನೆರವು ಘೋಷಿಸಿದ್ದಾರೆ ಇತ್ತೀಚಿನ ಜನರಲ್ ಝಡ್ ಪ್ರತಿಭಟನೆಗಳಲ್ಲಿ ಪ್ರಾಣ ಕಳೆದುಕೊಂಡವರಿಗೆ ನ್ಯಾಯ ಮತ್ತು ಪರಿಹಾರವನ್ನು ಪ್ರತಿಜ್ಞೆ ಮಾಡುವ ಮೂಲಕ ಸುಶೀಲಾ ಕರ್ಕಿ ಭಾನುವಾರ ನೇಪಾಳದ ಮಧ್ಯಂತರ ಪ್ರಧಾನಿಯಾಗಿ ಅಧಿಕೃತವಾಗಿ ತಮ್ಮ ಪಾತ್ರಕ್ಕೆ ಕಾಲಿಟ್ಟರು. ಮೃತರನ್ನು ‘ಹುತಾತ್ಮರು’ ಎಂದು ಕರೆದ ಅವರು, ಸ್ಥಳೀಯ ವರದಿಗಳ ಪ್ರಕಾರ, ಪ್ರತಿ ಬಲಿಪಶುವಿನ ಕುಟುಂಬಕ್ಕೆ 1 ಮಿಲಿಯನ್ ರೂ (ರೂ. 10 ಲಕ್ಷ) ಆರ್ಥಿಕ ಸಹಾಯವನ್ನು ಘೋಷಿಸಿದರು. ಯುವ ನೇತೃತ್ವದ ಚಳುವಳಿಯಿಂದ ಹೆಚ್ಚುತ್ತಿರುವ ಸಾರ್ವಜನಿಕ ಒತ್ತಡದ ನಂತರ ನೇಪಾಳದ ಮೊದಲ ಮಹಿಳಾ ಮುಖ್ಯ ನ್ಯಾಯಮೂರ್ತಿ ಕರ್ಕಿ ಅವರನ್ನು ಶುಕ್ರವಾರ ಅಧ್ಯಕ್ಷ ರಾಮಚಂದ್ರ ಪೌಡೆಲ್ ಪ್ರಮಾಣ ವಚನ ಸ್ವೀಕರಿಸಿದರು. ಎರಡು ದಿನಗಳ ನಂತರ ಅವರು ಲೈಂಚೌರ್ನಲ್ಲಿರುವ ಹುತಾತ್ಮರ ಸ್ಮಾರಕಕ್ಕೆ ಗಂಭೀರ ಭೇಟಿ ನೀಡುವ ಮೂಲಕ ತಮ್ಮ ಅಧಿಕಾರಾವಧಿಯನ್ನು ಪ್ರಾರಂಭಿಸಿದರು, ಅಲ್ಲಿ ಅವರು ಸಿಂಘಾ ದರ್ಬಾರ್ಗೆ ಹೋಗುವ ಮೊದಲು ಸತ್ತವರಿಗೆ ಗೌರವ ಸಲ್ಲಿಸಿದರು.
ಬೆಂಗಳೂರು: ರಾಜ್ಯದಲ್ಲಿ ಸೈಬರ್ ವಂಚನೆ ಕಡಿವಾಣಕ್ಕೆ ಸರ್ಕಾರ ದಿಟ್ಟ ಕ್ರಮ ಕೈಗೊಂಡಿದೆ. ದೇಶದಲ್ಲೇ ಮೊದಲು ಎನ್ನುವಂತೆ ಸೈಬರ್ ಕಮಾಂಡ್ ಸೆಂಟರ್ ಸ್ಥಾಪನೆ ಮಾಡಲಾಗಿದೆ. 16,000ಕ್ಕೂ ಹೆಚ್ಚು ಸೈಬರ್ ಕೇಸ್ ಗಳು ಬಾಕಿ ಇವೆ. ಹೀಗಾಗಿ ಸೈಬರ್ ಅಪರಾಧ ತಡೆಗೆ ಹೈಕೋರ್ಟ್ ಸೂಚಿಸಿತ್ತು. ಹೀಗಾಗಿ ಸೈಬರ್ ವೈಚನೆ ಕಡಿವಾಣಕ್ಕೆ ರಾಜ್ಯ ಸರ್ಕಾರ ದಿಟ್ಟ ಕ್ರಮ ಕೈಗೊಂಡಿದೆ. ದೇಶದಲ್ಲೇ ಮೊದಲು ಎನ್ನುವಂತೆ ಸೈಬರ್ ಕಮಾಂಡ್ ಸೆಂಟರ್ ಸ್ಥಾಪನೆ ಮಾಡಿದೆ. ಈ ಸೈಬರ್ ಕಮಾಂಡ್ ಸೆಂಟರ್ ನಲ್ಲಿ ನಾಲ್ಕು ವಿಂಗ್ ಗಳನ್ನು ರಚನೆ ಮಾಡಲಾಗಿದೆ. ಮೊದಲೆಯ ವಿಂಗ್ ಸೈಬರ್ ಕ್ರೈಂ ವಿಂಗ್ ಆಗಿದೆ. ಇದು ಸೈಬರ್ ಅಪರಾಧಗಳನ್ನು ಪತ್ತೆ ಮಾಡಿ, ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತದೆ. ಇನ್ನೂ 2ನೇ ಕಮಾಂಡ್ ಸೆಂಟರ್ ಸೈಬರ್ ಸೆಕ್ಯೂರಿಟಿ ವಿಂಗ್, ಬ್ಯಾಂಕ್ ಖಾತೆ, ಸಾಮಜಿಕ ಜಾಲತಾಣ, ಸಾಫ್ಟ್ ವೇರ್ ಹ್ಯಾಕ್ ಮಾಡುವವರನ್ನ ಪತ್ತೆ ಮಾಡುತ್ತೆ. ಮೂರನೇ ಕಮಾಂಡ್ ಸೆಂಟರ್ ವಿಂಗ್ ಐಡಿಟಿಯು ವಿಂಗ್ ಆಗಿದೆ. ಇದು ಸೈಬರ್ ಅಪರಾಧಗಳ ಸ್ಥಳ…
ಬೆಂಗಳೂರು: ಮಂಡ್ಯದ ಅಬಕಾರಿ ಕಚೇರಿಯಲ್ಲಿ ಭಾರಿ ಭ್ರಷ್ಟಾಚಾರ ನಡೆಯುತ್ತಿರುವ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಲು ಸರ್ಕಾರಕ್ಕೆ ಸೂಚಿಸುವಂತೆ ಕೋರಿ ರಾಜ್ಯಪಾಲ ಥಾವರ್ಚಂದ್ ಗೆಹಲೋತ್ ಅವರಿಗೆ, ಲೋಕಾಯುಕ್ತಕ್ಕೆ ಕರ್ನಾಟಕ ರಾಜ್ಯ ರೈತ ಸಂಘ ದೂರು ಕೊಟ್ಟಿದೆ. ಮಂಡ್ಯ ಜಿಲ್ಲೆಯ ಮಂಡ್ಯ ನಗರದ ಕೇಂದ್ರಸ್ಥಾನದಲ್ಲಿರುವ ಅಬಕಾರಿ ಕಚೇರಿಗಳಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆಯುತ್ತಿದೆ. ಅಬಕಾರಿ ಮಂತ್ರಿ, ಜಿಲ್ಲಾ ಉಸ್ತುವಾರಿ ಸಚಿವ, ಸಿಎಂ ಮತ್ತು ಇಲಾಖೆ ಆಯುಕ್ತ ಹೆಸರಿನಲ್ಲಿ ಅಧಿಕಾರಿಗಳು, ಮದ್ಯದಂಗಡಿಗಳಲ್ಲಿ ಹಾಫ್ತಾ ವಸೂಲಿ ಮಾಡುತ್ತಿದ್ದಾರೆ. ಹೊಸದಾಗಿ ಹೋಟೆಲ್ ಮತ್ತು ವಸತಿ ಗೃಹ(ಸಿಎಲ್-7) ಪರವಾನಗಿ ಮಂಜೂರಾತಿ ಕೊಡಲು ಜಾತಿ ನೋಡಿ ಲಂಚ ನಿಗದಿ ಮಾಡುತ್ತಿದ್ದಾರೆ. ಸಿಎಲ್7 ಲೈಸೆನ್ಸ್ ನೀಡಲು 60 ಲಕ್ಷ ರೂ.ಬೇಡಿಕೆ ಇಟ್ಟಿರುವ ಮಂಡ್ಯ ಅಬಕಾರಿ ಉಪ ಆಯುಕ್ತ ವಿರುದ್ಧ ಈಗಾಗಲೇ ಕೆಲವರು ಲೋಕಾಯುಕ್ತಕ್ಕೆ ದೂರು ಕೊಟ್ಟಿದ್ದಾರೆ ಎಂದು ರಾಜ್ಯಪಾಲರಿಗೆ ಕೊಟ್ಟಿರುವ ದೂರಿನಲ್ಲಿ ಸಂಘದ ಅಧ್ಯಕ್ಷ ಇ.ಎನ್.ಕೃಷ್ಣೇಗೌಡ ಉಲ್ಲೇಖಿಸಿದ್ದಾರೆ. ನಾಗಶಯನ ಒಬ್ಬ ಭ್ರಷ್ಟ್ರ ಅಧಿಕಾರಿ ಆಗಿದ್ದಾರೆ. ಹಿಂದೆ ಚಿತ್ರದುರ್ಗದ ಅಬಕಾರಿ ಉಪ…
ಬೆಂಗಳೂರು: ರಾಜ್ಯದಲ್ಲಿನ ಅರಣ್ಯ ಇಲಾಖೆಯ ಹೊರಗುತ್ತಿಗೆ ನೌಕರರಿಗೆ ಸಕಾಲದಲ್ಲಿ ವೇತನ ಪಾವತಿ ಆಗದೇ ಸಂಕಷ್ಟಕ್ಕೆ ಸಿಲುಕಿದ್ದರು. ಇಂತಹ ಅರಣ್ಯ ಇಲಾಖೆಯ ಹೊರಗುತ್ತಿಗೆ ನೌಕರರಿಗೆ ಗುಡ್ ನ್ಯೂಸ್ ಎನ್ನುವಂತೆ ಸಕಾಲದಲ್ಲಿ ವೇತನ ಪಾವತಿಸುವಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಖಡಕ್ ಸೂಚನೆ ನೀಡಿದ್ದಾರೆ. ಬೆಂಗಳೂರಿನಲ್ಲಿಂದು ವನ್ಯಜೀವಿ-ಮಾನವ ಸಂಘರ್ಷ ಹಾಗೂ ರೈಲ್ವೆ ಬ್ಯಾರಿಕೇಡ್ ಯೋಜನೆಗಳನ್ನು ಅಂತಿಮಗೊಳಿಸುವ ಸಂಬಂಧ ನಡೆದ ವಿಡಿಯೋ ಕಾನ್ಫರೆನ್ಸ್ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಚಿಕ್ಕಮಗಳೂರಿನ ಮುತ್ತೋಡಿಗಿಂತಲೂ ತಣಿಗೆಬೈಲು ಸೂಕ್ತ ಪ್ರದೇಶ ಎಂದು ತಜ್ಞರು ವರದಿ ನೀಡಿದ್ದು, ಈ ಕುರಿತಂತೆ ಸ್ಥಳೀಯರ ಸಭೆ ಕರೆದು ಚರ್ಚಿಸಲಾಗುವುದು ಎಂದರು. ಹೊರಗುತ್ತಿಗೆ ಸಿಬ್ಬಂದಿ ಮಾಹಿತಿ ಕೇಳಿದ ಸಚಿವರು: ಮಲೆ ಮಹದೇಶ್ವರ ಬೆಟ್ಟದಲ್ಲಿ 5 ಹುಲಿಗಳ ಸಾವಿನ ನಂತರ ಹೊರಗುತ್ತಿಗೆ ಸಿಬ್ಬಂದಿಗೆ ಸಕಾಲದಲ್ಲಿ ವೇತನ ಪಾವತಿ ಆಗುತ್ತಿಲ್ಲ. ನೌಕರರ ಭವಿಷ್ಯ ನಿಧಿ ಹಣವನ್ನು ಸಂದಾಯ ಮಾಡುತ್ತಿಲ್ಲ ಎಂಬ ದೂರುಗಳು ಬಂದಿದ್ದು, ರಾಜ್ಯದಲ್ಲಿ ಎಷ್ಟು ಹೊರಗುತ್ತಿಗೆ ಸಿಬ್ಬಂದಿ ಇದ್ದಾರೆ. ಅವರಿಗೆ ವೇತನ, ಭತ್ಯೆ ಎಷ್ಟು ತಿಂಗಳಿನಿಂದ ಪಾವತಿಯಾಗಿಲ್ಲ.…
ಬೆಂಗಳೂರು: ರಾಜ್ಯ ಸರ್ಕಾರದಿಂದ ಗ್ರೇಟರ್ ಪ್ರಾಧಿಕಾರದ ಅಡಿಯಲ್ಲಿನ ನಗರ ಪಾಲಿಕೆಗಳ ವಲಯಗಳಿಗೆ ನಾಮಾಂಕಿತಗೊಳಿಸಿ ಆದೇಶ ಮಾಡಿದೆ. ಈ ಮೂಲಕ ಗ್ರೇಟರ್ ಬೆಂಗಳೂರು ಪ್ರಾಧಿಕಾರದಡಿ ಯಾವ ವಲಯಗಳು ಯಾವ ಪಾಲಿಗೆ ಸೇರಲಿವೆ ಎಂಬುದಾಗಿ ನಾಮಾಂಕಿತಗೊಳಿಸಲಾಗಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು ದಿನಾಂಕ : 02-09-2025 ರ ಸರ್ಕಾರದ ಆದೇಶದಂತೆ, ಗ್ರೇಟರ್ ಬೆಂಗಳೂರು ಪ್ರಾಧಿಕಾರವನ್ನಾಗಿ ಪುನರ್ ರಚಿಸಿ ಪ್ರಾಧಿಕಾರದಡಿ ಐದು ಪ್ರತ್ಯೇಕ ಬೆಂಗಳೂರು ನಗರ ಪಾಲಿಕಗಳನ್ನು ರಚಿಸಲಾಗಿರುತ್ತದೆ. ಈ ರೀತಿ ರಚಿಸಲಾದ 5 ಪ್ರತ್ಯೇಕ ಬೆಂಗಳೂರು ನಗರ ಪಾಲಿಕೆಗಳನ್ನು ಪ್ರತಿ ನಗರ ಪಾಲಿಕೆಗೆ ತಲಾ 2 ವಲಯಳಂತೆ 10 ವಲಯಗಳಾಗಿ ವಿಂಗಡಿಸಲಾಗಿದ್ದು ಸದರಿ ಎಲ್ಲಾ ವಲಯಗಳನ್ನು ವಲಯ-1 ಮತ್ತು ವಲಯ -2 ಎಂದು ಗುರುತಿಸಲಾಗಿರುತ್ತದೆ. ಸದರಿ 5 ನಗರ ಪಾಲಿಕೆಗಳ ಎಲ್ಲಾ ವಲಯಗಳಿಗೆ ಸಾರ್ವಜನಿಕರ ಹಾಗೂ ನಗರ ಪಾಲಿಕೆಯ ಆಡಳಿತ ದೃಷ್ಟಿಯಿಂದ ಕೆಳಕಂಡಂತೆ ನಾಮಾಂಕಿತವನ್ನು ನೀಡಿ ಆದೇಶಿಸಿದೆ. 1.ಬೆಂಗಳೂರು ಕೇಂದ್ರ ವಲಯ-1, ಸಿ.ವಿ.ರಾಮನ್ ನಗರ, 1. ಸಿ.ವಿ.ರಾಮನ್ ನಗರ, 2. ಶಾಂತಿನಗರ, 2. ಬೆಂಗಳೂರು…
ಹಾಗಲಕಾಯಿ ಅಥವಾ ಕರೇಲಾ, ಅಪಾರ ಪೌಷ್ಟಿಕಾಂಶದ ಪ್ರಯೋಜನಗಳನ್ನು ಹೊಂದಿರುವ ಅತ್ಯಂತ ಜನಪ್ರಿಯ ಭಾರತೀಯ ತರಕಾರಿಗಳಲ್ಲಿ ಒಂದಾಗಿದೆ. ಇದರ ರಸವನ್ನು ಪ್ರತಿದಿನ ಕುಡಿಯುವುದು ನಿಮ್ಮ ಮೂತ್ರಪಿಂಡದ ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದೆ. ವಿಶೇಷವಾಗಿ ಮಧುಮೇಹ ಇರುವವರಿಗೆ, ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಮತ್ತು ಮೂತ್ರಪಿಂಡದ ಶೋಧನೆಯನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಮೂತ್ರಪಿಂಡದ ಹಾನಿಯ ಅಪಾಯವನ್ನು ಕಡಿಮೆ ಮಾಡುತ್ತದೆ. ಆದಾಗ್ಯೂ, ಅತಿಯಾದ ಸೇವನೆಯು ಅಡ್ಡಪರಿಣಾಮಗಳಿಗೆ ಕಾರಣವಾಗಬಹುದು. ತಜ್ಞರ ಪ್ರಕಾರ, ಮೂತ್ರಪಿಂಡದ ಕಾಯಿಲೆ ಇರುವವರು ತಮ್ಮ ದೈನಂದಿನ ಆಹಾರದಲ್ಲಿ ಸೇರಿಸಿಕೊಳ್ಳುವ ಮೊದಲು ಆರೋಗ್ಯ ವೃತ್ತಿಪರರನ್ನು ಸಂಪರ್ಕಿಸಬೇಕು. ಕರೇಲಾ ರಸ ಎಂದರೇನು? ಹಾಗಲಕಾಯಿಯಿಂದ ತಯಾರಿಸಲಾಗುತ್ತದೆ ಅಥವಾ ಮೊಮೊರ್ಡಿಕಾ ಚರಂತಿಯಮ್. ಕರೇಲಾ ರಸವು ಪ್ರಪಂಚದ ಅನೇಕ ಭಾಗಗಳಲ್ಲಿ ಜನಪ್ರಿಯ ಆರೋಗ್ಯ ಟಾನಿಕ್ ಆಗಿದೆ. ಫೋಲೇಟ್, ಸತು, ಪೊಟ್ಯಾಸಿಯಮ್ ಮತ್ತು ಕಬ್ಬಿಣದಂತಹ ಹಲವಾರು ಮ್ಯಾಕ್ರೋ- ಮತ್ತು ಸೂಕ್ಷ್ಮ ಪೋಷಕಾಂಶಗಳಿಂದ ತುಂಬಿರುವ ಕರೇಲಾ ರಸವು ವಿಟಮಿನ್ ಸಿ ಗಾಗಿ ಉಲ್ಲೇಖ ದೈನಂದಿನ ಸೇವನೆಯ 87 ಪ್ರತಿಶತವನ್ನು ಅಥವಾ RDI ಅನ್ನು ಹೊಂದಿದೆ – ಇದು ರೋಗನಿರೋಧಕ…
ಬೆಂಗಳೂರು: ಸೆಪ್ಟೆಂಬರ್.15ರಂದು ರಾಜ್ಯಾಧ್ಯಂತ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಆಚರಿಸುವಂತೆ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿ ಹೊರಡಿಸಿದ್ದು, ಪ್ರಜಾಪ್ರಭುತ್ವದ ತತ್ವಗಳನ್ನು ಉತ್ತೇಜಿಸಲು ಮತ್ತು ಜಾಗತಿಕವಾಗಿ ಅದರ ಪ್ರಾಮುಖ್ಯತೆಯ ಬಗ್ಗೆ ಜಾಗೃತಿ ಮೂಡಿಸಲು ಪುಜಾಪ್ರಭುತ್ವದ ಆಡಳಿತ, ಮಾನವ ಹಕ್ಕುಗಳು ಮತ್ತು ಕಾನೂನಿನ ನಿಯಮದ ಮೌಲ್ಯಗಳನ್ನು ಬಲಪಡಿಸಲು 2007 ರಲ್ಲಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ನಿರ್ಣಯದಂತೆ ಪ್ರತಿ ವರ್ಷ ಸೆಪ್ಟೆಂಬರ್ 15 ರಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಆಚರಿಸಲಾಗುತ್ತಿದೆ. ಈ ಹಿನ್ನಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಕಾರ್ಮಿಕ ಕಲ್ಯಾಣ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ನಗರಾಭಿವೃದ್ಧಿ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ಗ್ರೇಟರ್ ಬೆಂಗಳೂರು ಪ್ರಾಧಿಕಾರ, ಬೆಂಗಳೂರು ವಿದ್ಯುತ್ ಸರಬರಾಜು…
ಶಿವಮೊಗ್ಗ: ಸಾಗರ ತಾಲ್ಲೂಕನ್ನು ಜಿಲ್ಲೆಯಾಗಿ ಮಾಡಬೇಕು ಎನ್ನುವ ಹೋರಾಟ ತೀವ್ರಗೊಂಡಿದೆ. ಈ ಸಾಗರ ಜಿಲ್ಲಾ ಹೋರಾಟಕ್ಕೆ ಸೊರಬ ತಾಲ್ಲೂಕಿನ ದೂಗೂರು ಗ್ರಾಮ ಪಂಚಾಯ್ತಿ ಅಧ್ಯಕ್ಷ ಫಯಾಸ್ ಅಹಮದ್ ಬೆಂಬಲ ಘೋಷಿಸಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಉಳವಿಯಲ್ಲಿ ಸಾಗರ ಜಿಲ್ಲಾ ಹೋರಾಟ ಸಮಿತಿಯವರು ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಸಾಗರ ಜಿಲ್ಲೆ ಮಾಡುವುದಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ. ಶಿವಮೊಗ್ಗ ಜಿಲ್ಲಾ ಕ್ಷೇತ್ರ ಉಳವಿಯಿಂದ ದೂರವಾಗಲಿದೆ. ಸಾಗರ ಜಿಲ್ಲೆ ಮಾಡಿದರೇ ನಮಗೆ ಅನುಕೂಲವಾಗಲಿದೆ. ಸಾಗರ ಜಿಲ್ಲೆ ಮಾಡುವುದಕ್ಕೆ ಎಲ್ಲಾ ಅನುಕೂಲಗಳಿವೆ ಎಂದರು. ಸಾಗರ ಜಿಲ್ಲಾ ಹೋರಾಟ ಸಮಿತಿ ಎಲ್ಲರನ್ನು ಒಟ್ಟುಗೂಡಿಸಿಕೊಂಡು ಹೋರಾಟಕ್ಕೆ ಇಳಿದಿದ್ದಾರೆ. ನಮ್ಮ ಸಂಪೂರ್ಣ ಸಹಕಾರವಿದೆ. ಜಿಲ್ಲೆಗೆ ಬೇಕಾದಂತ ಎಲ್ಲಾ ಕಚೇರಿಗಳು ಸಾಗರದಲ್ಲಿದ್ದಾವೆ. ಸಾಗರ, ಸೊರಬ, ಹೊಸನಗರ, ಸಿದ್ದಾಪುರ ಸೇರಿಸಿ ಜಿಲ್ಲಾ ಕೇಂದ್ರ ಮಾಡಿದರೇ, ಹತ್ತಿರವಾಗಲಿದೆ. ಅಭಿವೃದ್ಧಿ ಕಾರ್ಯದಲ್ಲೂ ಅನುಕೂಲವಾಗಲಿದೆ. ಸಾಗರ ಜಿಲ್ಲೆಯನ್ನಾಗಿ ಮಾಡುವ ಹೋರಾಟಕ್ಕೆ ಯಾವ ತ್ಯಾಗವನ್ನು ಮಾಡುವುದಕ್ಕೂ ನಾವು ಸಿದ್ಧವಿದ್ದೇವೆ. ಸಾಗರ ಜಿಲ್ಲಾ ಹೋರಾಟಕ್ಕೆ ದೂಗೂರು…













