Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು : ಬಳ್ಳಾರಿಯಲ್ಲಿ ಮಾಜಿ ಸಚಿವ ಜನಾರ್ಧನ ರೆಡ್ಡಿಯವರ ನಿವಾಸದ ಸಮೀಪ ನಡೆದ ಗುಂಪುಘರ್ಷಣೆ ಯ ಬಗ್ಗೆ ತನಿಖೆ ನಡೆಸಿ ವರದಿ ನೀಡಲು ಸೂಚನೆ ನೀಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬಳ್ಳಾರಿಯಲ್ಲಿ ಮಾಜಿ ಸಚಿವ ಜನಾರ್ಧನ ರೆಡ್ಡಿಯವರ ನಿವಾಸದ ಸಮೀಪ ನಡೆದ ಗುಂಪುಘರ್ಷಣೆಯಲ್ಲಿ ಓರ್ವ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರನ ಸಾವು ಸಂಭವಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಪ್ರಕರಣದ ತನಿಖೆಗೆ ಈಗಾಗಲೇ ಸೂಚನೆ ನೀಡಲಾಗಿದ್ದು, ಘಟನೆಯಲ್ಲಿ ಬಳಸಲಾದ ಗನ್ ಯಾರಿಗೆ ಸೇರಿದ್ದು ಎಂಬ ಬಗ್ಗೆಯೂ ತನಿಖೆ ನಡೆಸಿ ವರದಿ ನೀಡಲು ಸೂಚಿಸಲಾಗಿದೆ. ಸತೀಶ್ ರೆಡ್ಡಿಯವರು ಗಾಳಿಯಲ್ಲಿ ಗುಂಡು ಹಾರಿಸಲು ಹೋಗಿ ರಾಜಶೇಖರ ಅವರಿಗೆ ತಗುಲಿರಬಹುದು, ಆದ್ದರಿಂದ ಈ ಬಗ್ಗೆ ತನಿಖೆ ನಡೆಯಬೇಕಿದೆ ಎಂದರು. https://kannadanewsnow.com/kannada/bpl-card-cancelled-to-reduce-financial-burden-in-the-state-food-department-has-not-reinstated-a-single-card-so-far/
ಬೆಂಗಳೂರು: ಗ್ಯಾರಂಟಿ ಯೋಜನೆಗಳ ಆರ್ಥಿಕ ಹೊರೆಯನ್ನು ತಗ್ಗಿಸಲು ಆಹಾರ ಇಲಾಖೆ, ಏಕಾಏಕಿ ಲಕ್ಷಾಂತರ ಬಿಪಿಎಲ್ ಕಾರ್ಡ್ಗಳನ್ನು ರದ್ದುಪಡಿಸುತ್ತಿರುವುದು ಮತ್ತು ಬಿಪಿಎಲ್ನಿಂದ ಎಪಿಎಲ್ಗೆ ಪರಿವರ್ತನೆ ಮಾಡುತ್ತಿರುವ ಬಗ್ಗೆ ಗುರುತರ ಆರೋಪಗಳು ಕೇಳಿಬಂದಿವೆ. 2023-24ರಲ್ಲಿ 74,342, 2024-25ರಲ್ಲಿ 16,719 ಮತ್ತು 2025ರ ಆಗಸ್ಟ್ವರೆಗೆ 10,810 ಸೇರಿ ಒಟ್ಟು 1,01,871 ಬಿಪಿಎಲ್ಗಳು ರದ್ದಾಗಿವೆ. ಅಲ್ಲದೆ, ಕಳೆದ ಮೂರು ವರ್ಷಗಳಿಂದ ಇಲಾಖೆಯ ಅಧಿಕಾರಿಗಳು, ಸರ್ಕಾರದ ಮಾನದಂಡವನ್ನೇ ನೆಪವಾಗಿಸಿ ಲಕ್ಷಾಂತರ ಬಿಪಿಎಲ್ ಕಾರ್ಡ್ಗಳನ್ನು ಎಪಿಎಲ್ಗೆ ಪರಿವರ್ತಿಸುತ್ತಿದ್ದಾರೆ. ಪ್ರಸ್ತುತ 7,76,206 ಬಿಪಿಎಲ್ ಚೀಟಿಗಳನ್ನು ‘ಶಂಕಾಸ್ಪದ’ ಪಟ್ಟಿಗೆ ಸೇರಿಸಲಾಗಿದೆ. ಮುಂದಿನ ದಿನಗಳಲ್ಲಿ ಇವುಗಳು ಸಹ ರದ್ದಾಗುವ ಸಾಧ್ಯತೆ ಇದೆ. ಬಿಪಿಎಲ್ನಿಂದ ಎಪಿಎಲ್ಗೆ ಈಗಾಗಲೇ ಪರಿವರ್ತನೆಯಾಗಿರುವ ಲಕ್ಷಾಂತರ ಲಾನುಭವಿಗಳ ಪೈಕಿ ಶೇ.75 ನೈಜ ಫಲಾನುಭವಿಗಳ ಹೆಸರನ್ನೇ ಡಿಲೀಟ್ ಮಾಡಲಾಗಿದೆ ಎನ್ನಲಾಗಿದೆ. ನೈಜ ಕಾರ್ಡ್ಗಳು ರದ್ದಾಗಿದ್ದರೆ ಆಯಾ ತಾಲೂಕಿನ ಸಂಬಂಧಪಟ್ಟ ತಹಶೀಲ್ದಾರ್ಗೆ 45 ದಿನದೊಳಗೆ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿದ್ದರೆ ಬಿಪಿಎಲ್ ಚೀಟಿ ಮರುಸ್ಥಾಪನೆ ಮಾಡುವುದಾಗಿ ಇಲಾಖೆ ಸಚಿವ ಕೆ.ಎಚ್. ಮುನಿಯಪ್ಪ ಸಾಕಷ್ಟು ಬಾರಿ…
ಬಳ್ಳಾರಿ: ಶಾಸಕ ಜನಾರ್ಧನ ರೆಡ್ಡಿ ಮನೆಯ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಪೊಲೀಸರ ಎದುರೇ ಓರ್ವ ವ್ಯಕ್ತಿ ಕಲ್ಲು ತೂರಾಟ ನಡೆಸಿದ್ದಾನೆ. ಹೀಗೆ ಕಲ್ಲು ತೂರಾಟ ಮಾಡುತ್ತಿದ್ದಂತೆ ಗನ್ ಮ್ಯಾನ್ ನಿಂದ ಫೈರಿಂಗ್ ಮಾಡಿರೋದಾಗಿ ಹೇಳಲಾಗುತ್ತಿದೆ. ಜನಾರ್ಧನ ರೆಡ್ಡಿ ಮನೆಯ ಮೇಲೆ ಫೈರಿಂಗ್ ಪ್ರಕರಮಕ್ಕೆ ಸಂಬಂಧಿಸಿದಂತೆ ಖಾಸಗಿ ಗನ್ ಮ್ಯಾನ್ ಗಳ ಬಳಿಯಿಂದ ಐದು ಗನ್ ಗಳನ್ನು ಪೊಲೀಸರು ಸೀಜ್ ಮಾಡಿದ್ದಾರೆ. ಹೀಗೆ ಸೀಜ್ ಮಾಡಿದಂತ ಗನ್ ಗಳನ್ನು ಎಫ್ ಎಸ್ ಎಲ್ ಗೆ ಪರಿಶೀಲನೆಗೆ ಕಳುಹಿಸಿದ್ದಾರೆ. ಇದಷ್ಟೇ ಅಲ್ಲದೇ ಜನಾರ್ಧನ ರೆಡ್ಡಿಗೆ ನೀಡಿದ್ದ ಗನ್ ಮ್ಯಾನ್ ಗಳ ಗನ್ ಕೂಡ ಪರಿಶೀಲನೆ ನಡೆಸಲಾಗುತ್ತಿದೆ. ಜನಾರ್ಧನ ರೆಡ್ಡಿ ಗನ್ ಮ್ಯಾನ್ ಗಳ ಬುಲೆಟ್ ಫೈರ್ ಆಗಿಲ್ಲ ಎಂಬ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಆ ಮೂಲಕ ಪ್ರಕರಣದ ತನಿಖೆಯನ್ನು ಬಳ್ಳಾರಿ ಪೊಲೀಸರು ಚುರುಕುಗೊಳಿಸಿದ್ದಾರೆ. ಇನ್ನೂ ಜನಾರ್ಧನ ರೆಡ್ಡಿ ಮನೆಯ ಮೇಲೆ ವ್ಯಕ್ತಿಯೊಬ್ಬ ಕಲ್ಲು ತೂರಾಟ ಮಾಡಿದ ಬಳಿಕ, ಗನ್ ಮ್ಯಾನ್ ಫೈರಿಂಗ್ ಮಾಡಿರೋದಾಗಿ…
ಬಳ್ಳಾರಿ: ಶಾಸಕ ಜನಾರ್ಧನ ರೆಡ್ಡಿ ಮನೆಯತ್ತ ಫೈರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರಿಂದ ಖಾಸಗಿ ಗನ್ ಮ್ಯಾನ್ ಗಳ ಬಳಿಯಿದ್ದಂತ ಐದು ಗನ್ ಗಳನ್ನು ಸೀಜ್ ಮಾಡಿದ್ದಾರೆ. ಜನಾರ್ಧನ ರೆಡ್ಡಿ ಮನೆಯ ಮೇಲೆ ಫೈರಿಂಗ್ ಪ್ರಕರಮಕ್ಕೆ ಸಂಬಂಧಿಸಿದಂತೆ ಖಾಸಗಿ ಗನ್ ಮ್ಯಾನ್ ಗಳ ಬಳಿಯಿಂದ ಐದು ಗನ್ ಗಳನ್ನು ಪೊಲೀಸರು ಸೀಜ್ ಮಾಡಿದ್ದಾರೆ. ಹೀಗೆ ಸೀಜ್ ಮಾಡಿದಂತ ಗನ್ ಗಳನ್ನು ಎಫ್ ಎಸ್ ಎಲ್ ಗೆ ಪರಿಶೀಲನೆಗೆ ಕಳುಹಿಸಿದ್ದಾರೆ. ಇದಷ್ಟೇ ಅಲ್ಲದೇ ಜನಾರ್ಧನ ರೆಡ್ಡಿಗೆ ನೀಡಿದ್ದ ಗನ್ ಮ್ಯಾನ್ ಗಳ ಗನ್ ಕೂಡ ಪರಿಶೀಲನೆ ನಡೆಸಲಾಗುತ್ತಿದೆ. ಜನಾರ್ಧನ ರೆಡ್ಡಿ ಗನ್ ಮ್ಯಾನ್ ಗಳ ಬುಲೆಟ್ ಫೈರ್ ಆಗಿಲ್ಲ ಎಂಬ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಆ ಮೂಲಕ ಪ್ರಕರಣದ ತನಿಖೆಯನ್ನು ಬಳ್ಳಾರಿ ಪೊಲೀಸರು ಚುರುಕುಗೊಳಿಸಿದ್ದಾರೆ.
ಬೆಂಗಳೂರು: ಮಾಜಿ ಸಚಿವರು ಮತ್ತು ಶಾಸಕರಾದ ಜನಾರ್ಧನ ರೆಡ್ಡಿ ಮತ್ತು ಶ್ರೀರಾಮುಲು ಅವರಿಗೆ ಪ್ರಾಣಾಪಾಯ ಇದೆ. ಕೂಡಲೇ ಅವರಿಗೆ ಪೊಲೀಸ್ ರಕ್ಷಣೆ ಕೊಡಬೇಕು. ಬಳ್ಳಾರಿ ಅಹಿತಕರ ಘಟನೆಯ ನ್ಯಾಯಾಂಗ ತನಿಖೆ ಮಾಡಬೇಕೆಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಆಗ್ರಹಿಸಿದ್ದಾರೆ. ಅವರು ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದರು. ಮಾಜಿ ಸಚಿವ ಮತ್ತು ಶಾಸಕ ಜನಾರ್ಧನ ರೆಡ್ಡಿ ಬೆಂಬಲಿಗರ ಮನೆಗೆ ಅಕ್ರಮವಾಗಿ ನುಗ್ಗಿದ ಕಾಂಗ್ರೆಸ್ಸಿನವರನ್ನು ಕೂಡಲೇ ಗೂಂಡಾ ಕಾಯ್ದೆಯಡಿ ಬಂಧಿಸಬೇಕು. ಬಳ್ಳಾರಿ ಘಟನಾವಳಿ, ಒಂದು ಸಾವಿಗೆ ಶಾಸಕ ಭರತ್ ರೆಡ್ಡಿಯೇ ಕಾರಣ. ಕೂಡಲೇ ಅವರನ್ನು ಬಂಧಿಸಬೇಕು ಎಂದು ಒತ್ತಾಯಿಸಿದರು. ಮಾಜಿ ಸಚಿವ ಮತ್ತು ಶಾಸಕ ಜನಾರ್ದನ ರೆಡ್ಡಿ ಮುಗಿಸಲು ಕಾಂಗ್ರೆಸ್ಸಿನವರು ತೀರ್ಮಾನಿಸಿದ್ದರು ಎಂದು ಆರೋಪಿಸಿದರು. ಬಳ್ಳಾರಿಯಲ್ಲಿ ಕಾಂಗ್ರೆಸ್ಸಿನ ಗೂಂಡಾಗಳು ಜನಾರ್ಧನ ರೆಡ್ಡಿ ಮತ್ತು ಶ್ರೀರಾಮುಲು ಅವರ ಮೇಲೆ ಗುಂಡಿನ ದಾಳಿ ಮಾಡಿರುವುದು ಇಡೀ ರಾಜ್ಯವನ್ನು ಬೆಚ್ಚಿ ಬೀಳಿಸಿದೆ. ಹೊಸ ವರ್ಷಾಚರಣೆ ವೇಳೆ ಮುಖ್ಯಮಂತ್ರಿಗಳು ದುರ್ಘಟನೆ ನಡೆಯದಂತೆ ಪೊಲೀಸರು ನೋಡಲಿದ್ದಾರೆಂದು ಭರವಸೆಯ…
ಬೆಂಗಳೂರು: ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಇದೇವೇಳೆ ಸತೀಶ್ ರೆಡ್ಡಿ ಇಷ್ಟೆಲ್ಲ ಗೂಂಡಾವರ್ತಿ ಮಾಡಿದ್ದು, ಅವರನ್ನು ಬಂಧಿಸಿದ್ದೀರಾ ಎಂದು ಪ್ರಶ್ನಿಸಿದರು. ಸರಕಾರ ಯಾಕೆ ಅವರನ್ನು ಬಂಧಿಸಿಲ್ಲ ಎಂದು ಆಕ್ಷೇಪಿಸಿದರು. ಕಾಂಗ್ರೆಸ್ ನಾಯಕರು ಮತ್ತು ಶಾಸಕರನ್ನು ಬಂಧಿಸಬೇಕೇ ಹೊರತು ಜನಾರ್ಧನ ರೆಡ್ಡಿ ಮತ್ತು ಶ್ರೀರಾಮುಲು ಅವರನ್ನಲ್ಲ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ತಿಳಿಸಿದರು. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಜೀವ ಬಲಿ ಪಡೆದ ಹೊಸ ವರ್ಷದ ಮೊದಲ ದಿನವಾಗಿದೆ. ಗೂಂಡಾ ರಾಜ್ಯದ ಸಂದೇಶ ಇದೆಂದು ತಿಳಿಸಿದರು. ಶಾಸಕ ಮತ್ತು ಅವರ ಕಾರ್ಯಕರ್ತರ ವಿರುದ್ಧ ದೂರು ದಾಖಲಿಸಬೇಕಿತ್ತು. ಆದರೆ, ಜನಾರ್ಧನ ರೆಡ್ಡಿ ಮತ್ತು ಶ್ರೀರಾಮುಲು ಅವರ ಮೇಲೆ ದೂರು ದಾಖಲಿಸುವ ಪ್ರಯತ್ನ ನಡೆದಿದೆ. ಅವರು ಯಾವ ರೀತಿ ಇದರಲ್ಲಿ ಭಾಗಿ ಆಗಿದ್ದಾರೆ? ಗುಂಡು ಹಾರಿಸಿದ್ದು ಯಾರು? ಎಂದು ಕೇಳಿದರು. ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಇದೇವೇಳೆ ಸತೀಶ್ ರೆಡ್ಡಿ ಇಷ್ಟೆಲ್ಲ ಗೂಂಡಾವರ್ತಿ ಮಾಡಿದ್ದು, ಅವರನ್ನು ಬಂಧಿಸಿದ್ದೀರಾ ಎಂದು ಪ್ರಶ್ನಿಸಿದರು. ಸರಕಾರ ಯಾಕೆ…
ಬೆಂಗಳೂರು: ಕೇರಳ ಮುಖ್ಯಮಂತ್ರಿಗೂ ಕರ್ನಾಟಕಕ್ಕೂ ಏನು ಸಂಬಂಧ ಇದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ಕಿಡಿ ಕಾರಿದ್ದಾರೆ. ಬೆಂಗಳೂರಿನಲ್ಲಿ ಗುರುವಾರ ಹೆಬ್ಬಾಳ ಮೇಲ್ಸೇತುವೆಯ ನೂತನ ಲೂಪ್ ಉದ್ಘಾಟನೆಗೂ ಮುನ್ನ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕೋಗಿಲು ನಿರಾಶ್ರಿತರ ವಿಚಾರಕ್ಕೆ ಸಂಬಂಧಿಸಿದಂತೆ ಪರೋಕ್ಷವಾಗಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ವಿರುದ್ಧ ಪರೋಕ್ಷವಾಗಿ ಈ ಆಕ್ರೋಶ ಹೊರಹಾಕಿದರು. ಕೇರಳ ರಾಜ್ಯದಲ್ಲಿ ಇರುವಷ್ಟು ಅರಾಜಕತೆ, ಕಾರ್ಮಿಕರ ಸಮಸ್ಯೆಗಳು ಸೇರಿದಂತೆ ಸಮಸ್ಯೆಗಳ ಸರಮಾಲೆಯೇ ಇದೆ. ಅಲ್ಲಿ ಹಾಸಿ ಹೊದ್ದುಕೊಳ್ಳುವಷ್ಟು ಸಮಸ್ಯೆಗಳನ್ನು ಇಟ್ಟುಕೊಂಡು ನಮ್ಮ ರಾಜ್ಯದ ವಿಚಾರದ ಬಗ್ಗೆ ಅವರು ಮಾತನಾಡುವುದು ಸರಿಯಲ್ಲ. ಕೇರಳದಲ್ಲಿರುವಂತಹ ಅರಾಜಕತೆ ದೇಶದ ಯಾವುದೇ ರಾಜ್ಯದಲ್ಲೂ ಇಲ್ಲ ಎಂದು ಸಚಿವರು ತೀವ್ರ ವಾಗ್ದಾಳಿ ನಡೆಸಿದರು. ಕೋಗಿಲು ವಿವಾದಿತ ಸ್ಥಳದಲ್ಲಿ ಎಷ್ಟು ಜನ ಮೂಲನಿವಾಸಿಗಳು, ಎಷ್ಟು ಜನ ವಲಸಿಗರು ಇದ್ದಾರೆ ಎಂಬುದನ್ನು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಸಮೀಕ್ಷೆ ನಡೆಸಿದ್ದಾರೆ. ಇಲ್ಲಿ 90 ಕ್ಕೂ ಹೆಚ್ಚು ಕುಟುಂಬಗಳು ಹಲವು ವರ್ಷಗಳಿಂದ…
ನವದೆಹಲಿ: ಡಿಸೆಂಬರ್ 31, ಹೊಸ ವರ್ಷದ ಮುನ್ನಾದಿನ, ಪ್ರೀತಿಪಾತ್ರರೊಂದಿಗೆ ಹೊಸ ವರ್ಷವನ್ನು ಆಚರಿಸಲು ಮತ್ತು ಸ್ವಾಗತಿಸೋಕು ಕಾಮನ್. ಆದರೇ 25 ವರ್ಷದ ವಿವಾಹಿತ ಮಹಿಳೆಯೊಬ್ಬರು ತಮ್ಮ 44 ವರ್ಷದ ವಿವಾಹಿತ ಪ್ರೇಮಿಯನ್ನು ಹೊಸ ವರ್ಷದ ಸಿಹಿತಿಂಡಿಗಳನ್ನು ನೀಡಲು ತನ್ನ ಮನೆಗೆ ಆಹ್ವಾನಿಸಿದರು. ಆದರೆ ಮಹಿಳೆ ಚಾಕುವಿನಿಂದ ಆತನ ಖಾಸಗಿ ಭಾಗಗಳ ಮೇಲೆ ಹಲ್ಲೆ ನಡೆಸಿದ್ದರಿಂದ ಆ ವ್ಯಕ್ತಿಗೆ ತೀವ್ರ ಗಾಯಗೊಳಿಸಿರುವಂತ ಆಘಾತಕಾರಿ ಘಟನೆ ನಡೆದಿದೆ. ಆ ವ್ಯಕ್ತಿ ಪ್ರಸ್ತುತ ಮುಂಬೈನ ಸಿಯಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆರೋಪಿ ಮಹಿಳೆ ಪರಾರಿಯಾಗಿದ್ದಾಳೆ ಎಂದು ವರದಿಯಾಗಿದೆ. ಹೀಗೆ ಮಾಡಲು ಕಾರಣವೇನು? ಆರಂಭಿಕ ತನಿಖೆಯಲ್ಲಿ ಇಬ್ಬರ ನಡುವೆ ಸಂಬಂಧವಿದೆ ಎಂದು ತಿಳಿದುಬಂದಿದೆ – ಆರೋಪಿ ಮಹಿಳೆ ತನ್ನ ಪ್ರಿಯಕರನ ಸಹೋದರಿಯ ಅತ್ತಿಗೆ ಎಂದು ವರದಿಯಾಗಿದೆ. ಮತ್ತು ಇಬ್ಬರೂ ಕಳೆದ ಆರರಿಂದ ಏಳು ವರ್ಷಗಳಿಂದ ಸಂಬಂಧ ಹೊಂದಿದ್ದರು. ಮಹಿಳೆ ತನ್ನ ಹೆಂಡತಿಯನ್ನು ಬಿಟ್ಟು ಮದುವೆಯಾಗುವಂತೆ ಪುರುಷನ ಮೇಲೆ ಒತ್ತಡ ಹೇರುತ್ತಿದ್ದಳು ಎಂದು ವರದಿಯಾಗಿದೆ. ಇದು ಅವರ ನಡುವೆ…
ಬೆಂಗಳೂರು: ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್ ಎನ್ನುವಂತೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿನ ಕೆಲವೊಂದು ವರ್ಗದ ನಿವೇಶನಗಳಲ್ಲಿ ನಿರ್ಮಿಸುವ ಕಟ್ಟಡಗಳಿಗೆ ಸ್ವಾಧೀನಾನುಭವ, ಅಧಿಭೋಗ ಪ್ರಮಾಣ ಪತ್ರ ( Occupancy Certificate) ಪಡೆಯುವುದರಿಂದ ವಿನಾಯ್ತಿ ನೀಡಿ ಸರ್ಕಾರ ಅಧಿಕೃತ ಆದೇಶ ಮಾಡಿದೆ. ಈ ಕುರಿತಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪದನಿಮಿತ್ತ ಸರ್ಕಾರದ ಉಪ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನಿರ್ಮಿಸಲಾಗುವ ಕಟ್ಟಡಗಳಿಗೆ ಅಥವಾ ಅಸ್ತಿತ್ವದಲ್ಲಿನ ಕಟ್ಟಡಗಳ ಬದಲಾವಣೆಗಳಿಗೆ ಸಂಬಂಧಿಸಿದಂತೆ ಕಾಮಗಾರಿ ಪೂರ್ಣಗೊಂಡ ನಂತರ ಪ್ರಾಧಿಕಾರಕ್ಕೆ ಅರ್ಹನಾದ ವಾಸ್ತುಶಿಲ್ಪಿ/ಪಟ್ಟಿಯಲ್ಲಿನ (empanelled) ಇಂಜಿನಿಯರ್/ ಮೇಲ್ವಿಚಾರಕರಿಂದ ಕಟ್ಟಡ ಪೂರ್ಣಗೊಂಡ ಪ್ರಮಾಣ ಪತ್ರವನ್ನು ಪಡೆದ ನಂತರ ಪಂಚಾಯತಿ ಅಭಿವೃದ್ಧಿ ಅಧಿಕಾರಿಯು ಸ್ವಾಧೀನ/ಅಧಿಭೋಗದಾರಿಕೆ ಪಮಾಣ ಪತ್ರ ವಿತರಿಸುವ ಪೂರ್ವದಲ್ಲಿ ಪ್ರಾರಂಭಿಕ ಪ್ರಮಾಣ ಪತ್ರ ಮತ್ತು ಗ್ರಾಮ ಪಂಚಾಯತಿಯಿಂದ ವಿತರಣೆ ಮಾಡಲಾದ ಲೈಸನ್ಸ್ ಅನುಮೋದಿಸಲಾದ ಕಟ್ಟಡ ನಕ್ಷೆ ಹಾಗೂ ಅಂದಾಜು ಪಟ್ಟಿಗಳಂತೆ ಕಟ್ಟಡ ನಿರ್ಮಾಣವಾಗಿರುವ ಬಗ್ಗೆ ಸಂಬಂಧಿಸಿದ ಪ್ರಾಧಿಕಾರಗಳೊಂದಿಗೆ ಜಂಟಿಯಾಗಿ ಪರಿಶೀಲಿಸಿ, ಸಂಬಂಧಿಸಿದ ಯೋಜನಾ ಪ್ರಾಧಿಕಾರದಿಂದ…
ರಾಯರ ಸನ್ನಿಧಿಯಲ್ಲಿ ನಡೆದ ಸತ್ಯ ಘಟನೆ..!! ಆ ರಾತ್ರಿ ಮಂತ್ರಾಲಯದಲ್ಲಿ ನಡೆದ ಪವಾಡ.. ಮಂತ್ರಾಲಯಕ್ಕೆ ಹೋಗುವ ಯೋಜನೆಯಾಗಲಿ ಯೋಚನೆಯಾಗಲಿ ನನಗಿರಲಿಲ್ಲ.. ನಿಜ ಹೇಳಬೇಕೆಂದರೆ ಮುಂಚೆ ರಾಘವೇಂದ್ರ ಸ್ವಾಮಿಗಳ ಮೇಲೆ ಅಷ್ಟು ಭಕ್ತಿಯೂ ನನಗಿರಲಿಲ್ಲ.. ಕಾರಣ ನಿಜಕ್ಕೂ ನನಗೆ ಗೊತ್ತಿಲ್ಲ.. ಆದರೆ ಏನೋ ತಿಳಿಯದು ಅಷ್ಟು ಭಕ್ತಿ ಬರುತ್ತಿರಲಿಲ್ಲ.. ಕೆಲ ತಿಂಗಳ ಹಿಂದೆ ಉಡುಗೊರೆಯಾಗಿ ಕೊಟ್ಟ ರಾಘವೇಂದ್ರ ಸ್ವಾಮಿಗಳ ಮೂರ್ತಿಯೊಂದು ಮನೆಗೆ ಬಂತು.. ದೇವರ ಮನೆಯಲ್ಲಿ ಇಟ್ಟು ಪೂಜಿಸಲು ಶುರು ಮಾಡಿದೆ.. ಪೂಜೆ ಮಾಡುವ ಸಮಯದಲ್ಲಿ ಏನಾದರು ನನ್ನಿಂದ ತಪ್ಪಾಗಿದ್ದರೆ ಕ್ಷಮಿಸಪ್ಪ ತಂದೆ ಎಂದು ಭಕ್ತಿಯಿಂದ ಒಮ್ಮೆ ಕೇಳಿಕೊಂಡೆ ಅಷ್ಟೇ ನೋಡಿ.. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ…














