Subscribe to Updates
Get the latest creative news from FooBar about art, design and business.
Author: kannadanewsnow09
ಮಂಡ್ಯ : ರಾಜ್ಯ ಸರ್ಕಾರದಿಂದ ನಡೆಸುತ್ತಿರುವ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಮಾಡಲು ಬರುವ ಅಧಿಕಾರಿಗಳಿಗೆ ನಾವು ಮಾಹಿತಿ ನೀಡಲ್ಲ ಎಂದು ಬಿಜೆಪಿ ನಾಯಕರ ಹೇಳಿಕೆಗೆ ಮದ್ದೂರು ಶಾಸಕ ಕೆ.ಎಂ.ಉದಯ್ ಆಕ್ರೋಶ ವ್ಯಕ್ತಪಡಿಸಿದರು. ಮದ್ದೂರು ವಿಧಾನಸಭಾ ಕ್ಷೇತ್ರದ ಮರಕಾಡದೊಡ್ಡಿ, ಗೊರವನಹಳ್ಳಿ ಹಾಗೂ ಉಪ್ಪಾರದೊಡ್ಡಿ ಗ್ರಾಮಗಳಲ್ಲಿ ಮಂಗಳವಾರ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು. ರಾಜ್ಯ ಸರ್ಕಾರದ ಜಾತಿ ಗಣತಿ ವಿಚಾರವಾಗಿ ನಮ್ಮ ಮನೆ ಬಳಿ ಬರುವ ಅಧಿಕಾರಿಗಳಿಗೆ ನಾವು ಮಾಹಿತಿ ನೀಡುವುದಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಸಂಸದ ತೇಜಸ್ವಿ ಸೂರ್ಯ ಹಾಗೂ ವಿಪಕ್ಷ ನಾಯಕ ಆರ್.ಅಶೋಕ್ ಸೇರಿದಂತೆ ವಿವಿಧ ನಾಯಕರು ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದ್ದರು. ಈ ವಿಚಾರವಾಗಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಶಾಸಕ ಉದಯ್ ಬಿಜೆಪಿ ನಾಯಕರ ಹೇಳಿಕೆಗಳು ಅವರ ಉದ್ಧಟತನವನ್ನು ತೋರಿಸುತ್ತಿದೆ ಎಂದು ಕಿಡಿಕಾರಿದರು. ಇನ್ನು ಕೆಲ ದಿನಗಳಲ್ಲೇ ಕೇಂದ್ರ ಸರ್ಕಾರವು ಸಹ ಜಾತಿ ಸಮೀಕ್ಷೆಗೆ ಮುಂದಾಗಿದೆ. ಆಗಲು ಸಹ ಬಿಜೆಪಿ ನಾಯಕರು…
ಬೆಂಗಳೂರು: ದಿನಾಂಕ 02-10-2025ರಂದು ದಸರಾ ಉತ್ಸವ ಮತ್ತು ಮೆರವಣಿಗೆ ಪ್ರಯುಕ್ತ ಈ ಏರಿಯಾದಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಾಂತ್ ಕುಮಾರ್ ಸಿಂಗ್ ಆದೇಶಿಸಿದ್ದಾರೆ. ಈ ಕುರಿತಂತೆ ಆದೇಶ ಹೊರಡಿಸಿರುವಂತ ಅವರು, ದಿನಾಂಕ: 02-10-2025 ರಂದು ಬೆಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ಉತ್ತರ, ಕೇಂದ್ರ, ಪೂರ್ವ ಮತ್ತು ಈಶಾನ್ಯ ವಿಭಾಗಳಲ್ಲಿ ನಡೆಯಲಿರುವ ದಸರಾ ಉತ್ಸವ ಮತ್ತು ಮೆರವಣಿಗೆ ಸಮಯದಲ್ಲಿ ಕೆಲವು ಕಿಡಿಗೇಡಿಗಳು ಮದ್ಯಪಾನದ ಅಮಲಿನಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ತೊಂದರೆ ಮಾಡಬಹುದಾದ ಸಾಧ್ಯತೆಗಳಿರುತ್ತವೆ. ಈ ನಿಟ್ಟಿನಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಮುನ್ನೆಚ್ಚರಿಕಾ ಕ್ರಮವಾಗಿ ಬೆಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ಕೆಲವು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಮದ್ಯದಂಗಡಿ, ಬಾರ್ & ರೆಸ್ಟೋರೆಂಟ್ ಮತ್ತು ವೈನ್ಸ್ಗಳಲ್ಲಿ ಮದ್ಯ ಮಾರಾಟವನ್ನು ನಿಷೇಧಿಸುವಂತೆ ಸಂಬಂಧಪಟ್ಟ ವಿಭಾಗಗಳ ಉಪ ಪೊಲೀಸ್ ಆಯುಕ್ತರುಗಳು ಉಲ್ಲೇಖಿತ ಪತ್ರಗಳಲ್ಲಿ ಪ್ರತ್ಯೇಕವಾಗಿ ಮನವಿಯನ್ನು ಸಲ್ಲಿಸಿರುತ್ತಾರೆ ಎಂದಿದ್ದಾರೆ. ಮೇಲ್ಕಂಡ ವಿಷಯದ ಬಗ್ಗೆ ನಾನು…
ನವದೆಹಲಿ: 2025 ರ ಏಷ್ಯಾ ಕಪ್ ಸಮಯದಲ್ಲಿ ಎಡ ಕ್ವಾಡ್ರೈಸೆಪ್ಸ್ ಗಾಯಕ್ಕೆ ಒಳಗಾದ ನಂತರ ಸ್ಟಾರ್ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಅವರನ್ನು ಹಲವಾರು ವಾರಗಳ ಕಾಲ ಹೊರಗುಳಿಯುವ ನಿರೀಕ್ಷೆಯಿದೆ. ಈ ಗಾಯವು ಭಾರತದ ಮುಂಬರುವ ಆಸ್ಟ್ರೇಲಿಯಾ ಪ್ರವಾಸದಲ್ಲಿ ಅವರ ಭಾಗವಹಿಸುವಿಕೆಯ ಬಗ್ಗೆ ಅನುಮಾನಗಳನ್ನು ಹುಟ್ಟುಹಾಕುತ್ತದೆ. ದುಬೈ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಶ್ರೀಲಂಕಾ ವಿರುದ್ಧದ ಸೂಪರ್ 4 ಪಂದ್ಯದ ಸಮಯದಲ್ಲಿ ಪಾಂಡ್ಯ ಗಾಯಗೊಂಡರು. ಅವರು ಕೇವಲ ಒಂದು ಓವರ್ ಬೌಲಿಂಗ್ ಮಾಡಿ ಮೈದಾನದಿಂದ ಹೊರಗುಳಿದರು ಮತ್ತು ಉಳಿದ ಪಂದ್ಯಕ್ಕೆ ಹಿಂತಿರುಗಲಿಲ್ಲ. ನಂತರ ಅವರನ್ನು ಪಾಕಿಸ್ತಾನ ವಿರುದ್ಧದ ಏಷ್ಯಾ ಕಪ್ ಫೈನಲ್ನಿಂದ ಹೊರಗುಳಿದು ರಿಂಕು ಸಿಂಗ್ ಅವರನ್ನು ಬದಲಾಯಿಸಲಾಯಿತು. ಆಸ್ಟ್ರೇಲಿಯಾದಲ್ಲಿ ಏಕದಿನ ಸರಣಿಯು ಅಕ್ಟೋಬರ್ 19 ರಂದು ಪರ್ತ್ನಲ್ಲಿ ಪ್ರಾರಂಭವಾಗಲಿದ್ದು, ಮೂರು ಪಂದ್ಯಗಳನ್ನು ಒಳಗೊಂಡಿದ್ದು, ನಂತರ ಅಕ್ಟೋಬರ್ 29 ರಂದು ಹೋಬಾರ್ಟ್ನ ಮನುಕಾ ಓವಲ್ನಲ್ಲಿ ಪ್ರಾರಂಭವಾಗುವ ಐದು ಪಂದ್ಯಗಳ ಟಿ20ಐ ಸರಣಿ ನಡೆಯಲಿದೆ. ಆರಂಭಿಕ ಚೇತರಿಕೆಯ ನಂತರವೂ, ಪಾಂಡ್ಯ ಏಕದಿನ ಪಂದ್ಯವನ್ನು ತಪ್ಪಿಸಿಕೊಳ್ಳುವ ಸಾಧ್ಯತೆಯಿದೆ. ಟಿ20ಐಗಳಲ್ಲಿ ಅವರ…
ನೀವು ದುರಾದೃಷ್ಟವಂತರಾಗಿದ್ದರೂ ಸಹ, ಪ್ರತಿದಿನ ಕೇವಲ ಐದು ನಿಮಿಷಗಳ ಕಾಲ ಈ ಎರಡು ಪದಗಳನ್ನು ಹೇಳುವ ಮೂಲಕ ನೀವು ಅದೃಷ್ಟಶಾಲಿಯಾಗಬಹುದು. ಅದೃಷ್ಟವು ನಿಮ್ಮ ಮನೆಗೆ ಬರಲು ಪ್ರಾರಂಭಿಸುತ್ತದೆ. ಅದೃಷ್ಟವನ್ನು ಆಕರ್ಷಿಸಲು ಹೇಳಬೇಕಾದ ಪದಗಳು ಧ್ಯಾನ, ಯಶಸ್ಸು ನಾವೆಲ್ಲರೂ ನಾವು ಮಾಡುವ ಎಲ್ಲದರಲ್ಲೂ ಯಶಸ್ವಿಯಾಗಬೇಕೆಂದು ಬಯಸುತ್ತೇವೆ. ಅದಕ್ಕಾಗಿ ಹಾರೈಸಿದರೆ ಸಾಕೇ? ನಮಗೆ ಉಡುಗೊರೆ ಬೇಕು, ಅದಕ್ಕಾಗಿ ಅದೃಷ್ಟ ಬೇಕು ಎಂದು ಅವರು ಹೇಳುತ್ತಾರೆ. ನಮಗೆ ದುರಾದೃಷ್ಟವಿದೆ ಎಂದು ಜನರು ಹೇಳುವುದನ್ನು ನಾವು ಕೇಳಿದ್ದೇವೆ ಮತ್ತು ನಾವು ಹೋಗುವ ಮೊದಲು ನಮ್ಮ ದುರಾದೃಷ್ಟ ನಮ್ಮ ಮುಂದೆ ಬರುತ್ತದೆ ಎಂದು ದೂರುವ ಜನರನ್ನು ಸಹ ನಾವು ನೋಡಿದ್ದೇವೆ. ಈ ಆಧ್ಯಾತ್ಮಿಕ ಪೋಸ್ಟ್ನಲ್ಲಿ, ನಾವು ಯಾವುದೇ ಕೆಲಸವನ್ನು ಮಾಡುವಾಗ, ನಮ್ಮ ಅದೃಷ್ಟವನ್ನು ಲೆಕ್ಕಿಸದೆ, ಅಡೆತಡೆಗಳನ್ನು ಎದುರಿಸುತ್ತಿದ್ದರೆ, ಅದನ್ನು ಬದಲಾಯಿಸಲು ಮತ್ತು ನಮಗೆ ಅದೃಷ್ಟವನ್ನು ತರಲು ನಾವು ಮಾಡಬಹುದಾದ ತಾಂತ್ರಿಕ ಪರಿಹಾರವನ್ನು ನಾವು ನೋಡಲಿದ್ದೇವೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ…
ಬೆಂಗಳೂರು: ನಗರದ ಬೆಸ್ಕಾಂ ಗ್ರಾಹಕರ ವಿದ್ಯುತ್ ಬಿಲ್ ಹೆಚ್ಚು ಕಡಿಮೆ ಆಗಿದ್ದರೇ ಚಿಂತಿಸುವ ಅಗತ್ಯವಿಲ್ಲ. ಯಾಕೆಂದ್ರೇ ಸಾಫ್ಟ್ ವೇರ್ ಉನ್ನತೀಕರಣದ ಕಾರಣಕ್ಕಾಗಿ ಆ ರೀತಿಯಾಗಿ ಬಿಲ್ ಬಂದಿದೆ. ಹಾಗಾದ್ರೆ ಅದೇನು ಅಂತ ಮುಂದೆ ಓದಿ. ಸಾಫ್ಟ್ವೇರ್ ಉನ್ನತೀಕರಣದ ಕಾರ್ಯ ಕೈಗೊಂಡಿರುವ ಹಿನ್ನೆಲೆಯಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ-ಬಿಬಿಎಂಪಿ) ವ್ಯಾಪ್ತಿಯ ಗ್ರಾಹಕರಿಗೆ ಕಳೆದ 3 ತಿಂಗಳ ಸರಾಸರಿ ಪರಿಗಣಿಸಿ ಮುಂದಿನ ತಿಂಗಳ ವಿದ್ಯುತ್ ಬಿಲ್ ವಿತರಿಸಲಾಗುವುದು ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ. ಬಿಲ್ಲಿಂಗ್ ತಂತ್ರಜ್ಞಾನದ ಸುಧಾರಣೆಗೆ ಬೆಸ್ಕಾಂನ ಮಾಹಿತಿ ತಂತ್ರಜ್ಞಾನ ವಿಭಾಗವು ಕೈಗೊಂಡಿರುವ ಸಾಫ್ಟ್ವೇರ್ ಉನ್ನತೀಕರಣ ಕಾರ್ಯ ಪ್ರಗತಿಯಲ್ಲಿರುವುದರಿಂದ ಈ ತಿಂಗಳ (ಅಕ್ಟೋಬರ್) 1ರಿಂದ 15ರವರೆಗಿನ ನಿಗದಿತ ಅವಧಿಯಲ್ಲಿ ಮೀಟರ್ ರೀಡರ್ಗಳು ಜಿಬಿಎ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಮಾಪನಕ್ಕೆ ಬರುವುದಿಲ್ಲ. ಬದಲಿಗೆ ಗ್ರಾಹಕರ ಕಳೆದ 3 ತಿಂಗಳ ಸರಾಸರಿ ಲೆಕ್ಕ ಹಾಕಿ, ವಿದ್ಯುತ್ ಬಿಲ್ ನೀಡಲಾಗುತ್ತದೆ. ಬೆಸ್ಕಾಂ ಮಿತ್ರ ಆ್ಯಪ್, ಉಪ ವಿಭಾಗ ಕೇಂದ್ರ, ಯುಪಿಐ ಆ್ಯಪ್ಗಳ ಮೂಲಕ ಬಿಲ್ ಪಾವತಿಸಬಹುದಾಗಿದೆ ಎಂದು ಕುರಿತು…
ಬೆಂಗಳೂರು: “ಕುಮಾರಸ್ವಾಮಿ ಅವರು ನನ್ನ ವಿಚಾರದಲ್ಲಿ ಕೇವಲ ಹಿಟ್ ಅಂಡ್ ರನ್ ಮಾಡುತ್ತಿದ್ದಾರೆ. ಇದಕ್ಕೆ ಕೊನೇ ಹಾಡಬೇಕು. ಮಾಧ್ಯಮಗಳೇ ಒಂದು ಸೂಕ್ತ ವೇದಿಕೆ ಕಲ್ಪಿಸಲಿ. ನಾನು, ಕುಮಾರಸ್ವಾಮಿ ಅವರ ಜೊತೆ ಬಹಿರಂಗ ಚರ್ಚೆ ಮಾಡಲು ಸಿದ್ಧ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸವಾಲೆಸೆದಿದ್ದಾರೆ. ಕೆಪಿಸಿಸಿ ಕಚೇರಿ ಹಾಗೂ ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು. ನೀವು ಜೈಲಿಗೆ ಹೋಗುವ ದಿನ ಹತ್ತಿರವಿದೆ ಎಂದು ಕುಮಾರಸ್ವಾಮಿ ಅವರು ಹೇಳಿದ್ದಾರಲ್ಲಾ ಎಂದು ಕೇಳಿದಾಗ, “ಮೊದಲಿನಿಂದಲೂ ನನ್ನನ್ನು ಜೈಲಿಗೆ ಹಾಕಿಸಲೇಬೇಕು ಎಂದು ಕುಮಾರಸ್ವಾಮಿ ಅವರು ಸಂಕಲ್ಪ ಮಾಡಿ ಷಡ್ಯಂತ್ರ ಮಾಡುತ್ತಿದ್ದಾರೆ. ಈಗಲೂ ಅದನ್ನೇ ಮುಂದುವರಿಸುತ್ತಿರುವುದಾಗಿ ಅವರೇ ಹೇಳಿದ್ದು, ಜೈಲಿಗೆ ಹೋಗುವ ದಿನ ಹತ್ತಿರಬರುತ್ತಿದೆ ಎಂದಿದ್ದಾರೆ. ಹಬ್ಬ ಮುಗಿದ ಬಳಿಕ ಅವರಿಗೆ ಉತ್ತರ ನೀಡುತ್ತೇನೆ” ಎಂದು ತಿಳಿಸಿದರು. ನನ್ನ ವಿರುದ್ಧ ಇರುವ ದಾಖಲೆ ಜನರ ಮುಂದಿಡಲಿ: “ಕುಮಾರಸ್ವಾಮಿ ಅವರು ತಮ್ಮ ಆಸೆ ವ್ಯಕ್ತಪಡಿಸಿದ್ದಾರೆ. ಅವರಿಗೆ ಒಳ್ಳೆಯದಾಗಲಿ. ಅವರ ಕುಟುಂಬ ನನ್ನ ಕುಟುಂಬದ ಮೇಲೆ…
ಬೆಂಗಳೂರು : ಸಾಫ್ಟ್ವೇರ್ ಉನ್ನತೀಕರಣದ ಕಾರ್ಯ ಕೈಗೊಂಡಿರುವ ಹಿನ್ನೆಲೆಯಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ-ಬಿಬಿಎಂಪಿ) ವ್ಯಾಪ್ತಿಯ ಗ್ರಾಹಕರಿಗೆ ಕಳೆದ 3 ತಿಂಗಳ ಸರಾಸರಿ ಪರಿಗಣಿಸಿ ಮುಂದಿನ ತಿಂಗಳ ವಿದ್ಯುತ್ ಬಿಲ್ ವಿತರಿಸಲಾಗುವುದು ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ. ಬಿಲ್ಲಿಂಗ್ ತಂತ್ರಜ್ಞಾನದ ಸುಧಾರಣೆಗೆ ಬೆಸ್ಕಾಂನ ಮಾಹಿತಿ ತಂತ್ರಜ್ಞಾನ ವಿಭಾಗವು ಕೈಗೊಂಡಿರುವ ಸಾಫ್ಟ್ವೇರ್ ಉನ್ನತೀಕರಣ ಕಾರ್ಯ ಪ್ರಗತಿಯಲ್ಲಿರುವುದರಿಂದ ಈ ತಿಂಗಳ (ಅಕ್ಟೋಬರ್) 1ರಿಂದ 15ರವರೆಗಿನ ನಿಗದಿತ ಅವಧಿಯಲ್ಲಿ ಮೀಟರ್ ರೀಡರ್ಗಳು ಜಿಬಿಎ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಮಾಪನಕ್ಕೆ ಬರುವುದಿಲ್ಲ. ಬದಲಿಗೆ ಗ್ರಾಹಕರ ಕಳೆದ 3 ತಿಂಗಳ ಸರಾಸರಿ ಲೆಕ್ಕ ಹಾಕಿ, ವಿದ್ಯುತ್ ಬಿಲ್ ನೀಡಲಾಗುತ್ತದೆ. ಬೆಸ್ಕಾಂ ಮಿತ್ರ ಆ್ಯಪ್, ಉಪ ವಿಭಾಗ ಕೇಂದ್ರ, ಯುಪಿಐ ಆ್ಯಪ್ಗಳ ಮೂಲಕ ಬಿಲ್ ಪಾವತಿಸಬಹುದಾಗಿದೆ ಎಂದು ಕುರಿತು ಪ್ರಕಟಣೆ ಹೊರಡಿಸಿರುವ ಬೆಸ್ಕಾಂ ತಿಳಿಸಿದೆ. ಈ ಪ್ರಕ್ರಿಯೆಯಿಂದ ಗೃಹಜ್ಯೋತಿ ಫಲಾನುಭವಿಗಳು ಯೋಜನೆಯ ಲಾಭ ಪಡೆಯುವಲ್ಲಿ ಯಾವುದೇ ವ್ಯತ್ಯಯವಾಗುವುದಿಲ್ಲ ಎಂದು ಬೆಸ್ಕಾಂ ಸ್ಪಷ್ಟಪಡಿಸಿದೆ. https://kannadanewsnow.com/kannada/draft-ward-wise-constituency-redistribution-of-5-city-corporations-of-bangalore-and-notification-published/ https://kannadanewsnow.com/kannada/green-signal-for-temporary-selection-of-guest-lecturers-from-the-state-government-these-conditions-apply/
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ 5 ನಗರ ಪಾಲಿಕೆಗಳ ಕರಡು ವಾರ್ಡ್ ವಾರು ಕ್ಷೇತ್ರ ಪುನರ್ ವಿಂಗಡಣೆಯ ಅಧಿಸೂಚನೆ ಪ್ರಕಟಿಸಲಾಗಿದೆ. ಅಲ್ಲದೇ ನಾಗರೀಕರಿಂದ ಆಕ್ಷೇಪಣೆಗಳು ಹಾಗೂ ಸಲಹೆಗಳನ್ನು ಆಹ್ವಾನಿಸಲಾಗಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ಗೆಜೆಟ್ ಅಧಿಸೂಚನೆ ಪ್ರಕಟಿಸಿದ್ದು, ದಿನಾಂಕ: 14- 05-2025 ರಲ್ಲಿ ಗ್ರೇಟರ್ ಬೆಂಗಳೂರು ಆಡಳತ ಅಧಿನಿಯಮ, 2024 ಅನ್ನು ಸರ್ಕಾರವು ದಿನಾಂಕ: 15-05-2025 ರಿಂದ ಜಾರಿಗೆ ತಂದಿರುತ್ತದೆ ಎಂದಿದೆ. ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 183 ಬಿಬಿಎಸ್ 2025, ದಿನಾಂಕ:02-09- 2025ರಲ್ಲಿ ಸರ್ಕಾರವು ಗ್ರೇಟರ್ ಬೆಂಗಳೂರು ಪ್ರದೇಶದ ವ್ಯಾಪ್ತಿಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ 1) ಬೆಂಗಳೂರು ಕೇಂದ್ರ ನಗರ ಪಾಲಿಕೆ, 2) ಬೆಂಗಳೂರು ಪೂರ್ವ ನಗರ ಪಾಲಿಕೆ, 3) ಬೆಂಗಳೂರು ಪಶ್ಚಿಮ ನಗರ ಪಾಲಿಕೆ, 4) ಬೆಂಗಳೂರು ಉತ್ತರ ನಗರ ಪಾಲಿಕೆ, 5) ಬೆಂಗಳೂರು ದಕ್ಷಿಣ ನಗರ ಪಾಲಿಕೆಗಳಿಗೆ ಸಂಬಂಧಿಸಿದಂತೆ, ಸದರಿ ಕಾಯ್ದೆಯ ಪ್ರಕರಣ 29ರ ಉಪ ಪ್ರಕರಣ (1) ಮತ್ತು (3) ಗಳನ್ವಯ ವಾರ್ಡ್ಗಳ ಪುನರ್ ವಿಂಗಡಣೆಗಾಗಿ…
ಬೆಂಗಳೂರು: ಶಿವಮೊಗ್ಗದ ಲಕ್ಕಿಕೊಪ್ಪ ಅರಣ್ಯ ಪ್ರದೇಶದಲ್ಲಿ ಕಳ್ಳಬೇಟೆ, ಮರಗಳವು ಪ್ರಕರಣವನ್ನು ಅರಣ್ಯ ಸಚಿವ ಈಶ್ವರ್ ಖಂಡ್ರೆ ಗಂಭೀರವಾಗಿ ಪರಿಗಣಿಸಿದ್ದಾರೆ. ಈ ಕುರಿತಂತೆ ಮೂರು ದಿನಗಳಲ್ಲಿ ತನಿಖೆ ನಡೆಸಿ ವರದಿ ನೀಡುವಂತೆ ಆದೇಶಿಸಿದ್ದಾರೆ. ಇಂದು ಈ ಕುರಿತಂತೆ ಆದೇಶ ಹೊರಡಿಸಿರುವಂತ ಅವರು, ಶಿವಮೊಗ್ಗ ಜಿಲ್ಲೆ, ಶಿವಮೊಗ್ಗ ತಾಲೂಕು ಲಕ್ಕಿನಕೊಪ್ಪ ಅರಣ್ಯ ಪ್ರದೇಶದಲ್ಲಿ ನಿರಂತರವಾಗಿ ಕಳ್ಳ ಬೇಟೆ ನಡೆಯುತ್ತಿದೆ, ಮರಗಳವು ಆಗುತ್ತಿದೆ ಎಂದು ಮಾಧ್ಯಮದಲ್ಲಿ ವರದಿ ಆಗಿದ್ದು, ಈ ಬಗ್ಗೆ ಸಿಸಿಎಫ್ ದರ್ಜೆಯ ಅಧಿಕಾರಿಯಿಂದ ಖುದ್ದು ಪರಿಶೀಲನೆ ನಡೆಸಿ, ಮೂರು ದಿನಗಳ ಒಳಗಾಗಿ ವರದಿ ಸಲ್ಲಿಸುವಂತೆ ದಿ.28.09.2025ರ ಟಿಪ್ಪಣಿ ಸಂಖ್ಯೆ ಅಜೀಪ/1725/2025-26ರಲ್ಲಿ ಸೂಚಿಸಿದ್ದಾರೆ. ಈ ಮಧ್ಯೆ ಲಕ್ಕಿನಕೊಪ್ಪ ಪ್ರದೇಶದಲ್ಲಿ ಕೆಲವು ಪ್ರಭಾವಿಗಳು ಅರಣ್ಯ ಭೂಮಿ ಒತ್ತುವರಿ ಮಾಡಿರುವುದಾಗಿ ಈ ಕಚೇರಿಗೆ ಸ್ಪಷ್ಟ ಮಾಹಿತಿ ಬಂದಿದ್ದು, ಕಳ್ಳಬೇಟೆ ತನಿಖೆಯ ಜೊತೆಗೆ ಒತ್ತುವರಿ ಕುರಿತಂತೆಯೂ ಸಮಗ್ರ ತನಿಖೆ ನಡೆಸಿ ಒತ್ತುವರಿ ಆಗಿದ್ದಲ್ಲಿ ಅಥವಾ ಅರಣ್ಯ ಭೂಮಿಯನ್ನು ಅಕ್ರಮವಾಗಿ ಮಂಜೂರು ಮಾಡಿದ್ದಲ್ಲಿ ಸೂಕ್ತ ಕ್ರಮ ಜರುಗಿಸಲು ಮತ್ತು ಒತ್ತುವರಿಯ…
ಮಂಡ್ಯ: ದಸರಾ ಹೇಗೆ ವಿಶ್ವವಿಖ್ಯಾತವಾಗಿದೆ ಹಾಗೆಯೇ ಕಾವೇರಿ ಆರತಿ ವಿಶ್ವವಿಖ್ಯಾತವಾನ್ನಾಗಿಸುವುದು ನಮ್ಮ ಕನಸು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಚಲುವರಾಯಸ್ವಾಮಿ ತಿಳಿಸಿದರು. ಅವರು ಇಂದು ಸಾಂಕೇತಿಕ ಕಾವೇರಿ ಆರತಿ ಉದ್ಘಾಟಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಭಾರತ ದೇಶದಲ್ಲಿ ಉತ್ತರ ಭಾಗದಲ್ಲಿ ಹೇಗೆ ಗಂಗಾ ಆರತಿ ನಡೆಯುತ್ತದೆ ಹಾಗೆ ನಮ್ಮ ದಕ್ಷಿಣ ಭಾಗದಲ್ಲಿ ಕಾವೇರಿ ನಡೆಸಲು ಯೋಜನೆಗಳನ್ನು ರೂಪಿಸಲಾಗುತ್ತಿದೆ ಎಂದರು. ಕಾವೇರಿ ಆರತಿ ಯೋಜನೆಯಿಂದ ಅನೇಕ ಯುವಕರಿಗೆ ಉದ್ಯೋಗ ಅವಕಾಶ ದೊರೆಯಲಿದೆ ಮತ್ತು ಅನೇಕ ಪ್ರವಾಸಿಗರನ್ನು ಆಕರ್ಷಸಲಿದೆ. ಮುಂದಿನ ದಿನಗಳಲ್ಲಿ ಪ್ರತಿ ವರ್ಷ ಕಾವೇರಿ ನಡೆಸಲು ಕ್ರಮಗಳನ್ನು ಕೈಗೊಳ್ಳಲಾಗುವುದು. ಕಾವೇರಿ ಮಾತೆಯನ್ನು ಧಾರ್ಮಿಕವಾಗಿ ಗೌರವಸಲು ಕಾವೇರಿ ಆರತಿ ನಡೆಸಲಾಗುತ್ತಿದೆ ಎಂದು ಹೇಳಿದರು. ಮೈಸೂರಿನಿಂದ ತಮಿಳುನಾಡಿನವರೆಗೂ ಕುಡಿಯುವ ನೀರಿನಿಂದ ಹಿಡಿದು ಕೃಷಿ ಹಾಗೂ ಇತರೆ ಜೀವನೋಪಾಯಕ್ಕೆ ಅನುಕೂಲವಾಗುತ್ತಿರುವ ನಮ್ಮ ರಾಜ್ಯದ ಹೆಮ್ಮೆ ಕಾವೇರಿ ನದಿಗೆ ಆರತಿ ಸಲ್ಲಿಸಿ ಗೌರವಿಸಲಾಗುತ್ತಿದೆ ಎಂದರು. ಪ್ರಾರಂಭಿಕವಾಗಿ ಈ ಭಾರಿ ಕಾವೇರಿ ಆರತಿ ನಡೆಸಿದ್ದು ಸಮಸ್ಯೆಗಳ ಪರಿಹಾರದ…