Author: kannadanewsnow09

ಮಂಗಳೂರು: ಕಳೆದ ಶುಕ್ರವಾರದಂದು ಮಂಗಳೂರಿನ ಯೆಯ್ಯಾಡಿಯಲ್ಲಿ ಚಾಕು ಇರಿತಕ್ಕೆ ಕೌಶಿಕ್ ಎಂಬಾತ ಒಳಗಾಗಿ ಗಾಯಗೊಂಡಿದ್ದನು. ಇಂತಹ ಕೌಶಿಕ್ ಚಿಕಿತ್ಸೆ ಫಲಿಸದೇ ಇಂದು ಸಾವನ್ನಪ್ಪಿದ್ದಾನೆ. ಮಂಗಳೂರಿನ ಯೆಯ್ಯಾಡಿಯಲ್ಲಿ ಶುಕ್ರವಾರ ಮಧ್ಯಾಹ್ನದಂದು ಕೌಶಿಕ್ ಹಾಗೂ ಇತರರ ನಡುವೆ ಗಲಾಟೆಯಾಗಿತ್ತು. ಗಲಾಟೆಯ ಸಂದರ್ಭದಲ್ಲಿ ಬ್ರಿಜೇಶ್ ಶೆಟ್ಟಿ, ಗಣೇಶ್ ಬಿಜೈ ಎಂಬುವರು ಚಾಕುವಿನಿಂದ ಕೌಶಿಕ್ ಹೊಟ್ಟೆಗೆ ಇರಿದಿದ್ದರು. ತೀವ್ರ ರಕ್ತಸ್ತ್ರಾವದಿಂದ ಗಾಯಗೊಂಡಿದ್ದಂತ ಕೌಶಿಕ್ ನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಇಂದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಂತ ಕೌಶಿಕ್ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾನೆ. ಹೀಗಾಗಿ ಕೊಲೆ ಯತ್ನ ಪ್ರಕರಣ, ಈಗ ಕೊಲೆ ಪ್ರಕರಣವಾಗಿ ಬದಲಾದಂತೆ ಆಗಿದೆ. https://kannadanewsnow.com/kannada/did-you-get-the-grihalakshmi-yojana-money-this-is-the-reason-do-this-work-you-will-get-the-guarantee/ https://kannadanewsnow.com/kannada/breaking-a-horrific-accident-in-belagavi-three-dead-including-a-person-who-was-trying-to-rescue-the-injured/

Read More

ಬೆಂಗಳೂರು : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಪ್ರಸ್ತಕ ಸಾಲಿನಲ್ಲಿ ವಿಕಲಚೇತನ ವ್ಯಕ್ತಿಗಳ ಆರೈಕೆದಾರರಿಗೆ ಪ್ರೋತ್ಸಾಹಧನ ನೀಡಲು ಉದ್ದೇಶಿಸಲಾಗುತ್ತಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಸೆರೆಬ್ರಲ್ ಪಾಲ್ಸಿ, ಮಸ್ಕುಲರ್ ಡಿಸ್ಟೊçÃಫಿ, ಪಾರ್ಕಿನ್ ಸನ್ಸ್, ಮಲ್ಟಿಪಲ್ ಸ್ಕೊ÷್ಲÃರೋಸಿಸ್, ಆಟಿಸಂ, ಬೌದ್ದಿಕ ವಿಕಲತೆ ಮತ್ತು ಬಹುವಿಧ ಅಂಗವಿಕಲತೆ (ಶ್ರವಣ ದೋಷ ಹೊಂದಿದ ದೃಷ್ಠಿ ದೋಷವುಳ್ಳ) ಕಾಯಿಲೆಯಿಂದ ಬಳಲುತ್ತಿರುವ ವ್ಯಕ್ತಿಗಳ ಆರೈಕೆದಾರರಿಗೆ ಮಾಹೆಯಾನ 1,000 ರೂ. ಪ್ರೋತ್ಸಾಹಧನ ನೀಡಲಾಗುತ್ತದೆ. ಜಿಲ್ಲೆಯ ಅರ್ಹ ವಿಕಲಚೇತನರು ಅರ್ಜಿ ಸಲ್ಲಿಸಬಹುದು. ಇದರ ಪ್ರಯೋಜನ ಪಡೆಯಲು 07 ವಿಧಗಳ ವಿಕಲಚೇತನರು ಕಡ್ಡಾಯವಾಗಿ ವೈದ್ಯಕೀಯ ಪ್ರಮಾಣ ಪತ್ರ, ವಿಕಲಚೇತನರ ವಿಶಿಷ್ಠ ಗುರುತಿನ ಚೀಟಿ(ಯು.ಡಿ.ಐ.ಡಿ) ಆರೈಕೆದಾರರ ಬ್ಯಾಂಕ್ ಖಾತೆ ಪುಸ್ತಕದ ಪ್ರತಿ ಹಾಗೂ ಇತ್ತೀಚಿನ ಆದಾಯ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಮತ್ತು ಮತದಾರರ ಗುರುತಿನ ಚೀಟಿ, ನಿವಾಸಿ ದೃಢೀಕರಣ ಪತ್ರ ಹಾಗೂ ಇತ್ತೀಚಿನ ಭಾವಚಿತ್ರದೊಂದಿಗೆ ಅರ್ಜಿ ಸಲ್ಲಿಸಬೇಕು. ಅರ್ಜಿ ನಮೂನೆಗಳನ್ನು www.dwdsc.kar.nic.in ವೆಬ್‌ಸೈಟ್‌ನಿಂದ ನೇರವಾಗಿ ಡೌನ್‌ಲೋಡ್…

Read More

ಬಳ್ಳಾರಿ : ಸಮಗ್ರ ಶಿಕ್ಷಣ – ಕರ್ನಾಟಕ ಬಳ್ಳಾರಿ ಸಮನ್ವಯ ಶಿಕ್ಷಣ ವಿಭಾಗದಡಿ 2025-26ನೇ ಶೈಕ್ಷಣಿಕ ಸಾಲಿಗೆ ಖಾಲಿ ಇರುವ ಬಿಐಇಆರ್‌ಟಿ ಪ್ರಾಥಮಿಕ ವಿವಿಧ ತಾತ್ಕಾಲಿಕ ಹುದ್ದೆಗಳಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಮಗ್ರ ಶಿಕ್ಷಣ ಅಭಿಯಾನದ ಉಪನಿರ್ದೇಶಕರು ತಿಳಿಸಿದ್ದಾರೆ. ಪ್ರಾಥಮಿಕ (1 ರಿಂದ 5) ಡಿ.ಇಡಿ ವಿಶೇಷ ಶಿಕ್ಷಣ(ಆರ್‌ಸಿಐ ಸಿಆರ್‌ಆರ್ ಸಂಖ್ಯೆಯೊAದಿಗೆ), ಪ್ರೌಢ (6 ರಿಂದ ಬಿ.ಇಡಿ ವಿಶೇಷ ಶಿಕ್ಷಣ(ಆರ್‌ಸಿಐ ಸಿಆರ್‌ಆರ್ ಸಂಖ್ಯೆಯೊAದಿಗೆ) ಮತ್ತು ಪ್ರೌಢ (9 ರಿಂದ 12) ಬಿ.ಇಡಿ ವಿಶೇಷ ಶಿಕ್ಷಣ(ಆರ್‌ಸಿಐ ಸಿಆರ್‌ಆರ್ ಸಂಖ್ಯೆಯೊAದಿಗೆ) ಹುದ್ದೆಗಳಿಗೆ ತಾತ್ಕಾಲಿಕವಾಗಿ ನೇರಗುತ್ತಿಗೆ ಅಡಿ ಅರ್ಜಿ ಆಹ್ವಾನಿಸಲಾಗಿದೆ. ಈ ಹಿಂದೆ ಈ ಇಲಾಖೆಯಲ್ಲಿ ಬಿಐಇಆರ್‌ಟಿಯಾಗಿ ಕಾರ್ಯನಿರ್ವಹಿಸಿರುವÀ ಅಭ್ಯರ್ಥಿಗಳಿಗೆ ಸೇವಾ ಜೇಷ್ಠತೆಯನ್ನು ಪರಿಗಣಿಸಿ ಆಯ್ಕೆ ಮಾಡಲಾಗುವುದು. ಅರ್ಜಿಗಳನ್ನು ಜೂ.17 ರೊಳಗಾಗಿ ಉಪನಿರ್ದೇಶಕರು ಮತ್ತು ಪದನಿಮಿತ್ತ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿಗಳು, ಸಮಗ್ರ ಶಿಕ್ಷಣ – ಕರ್ನಾಟಕ, ಕೋಟೆ, ಬಳ್ಳಾರಿ ಇವರಿಗೆ ಅರ್ಜಿ ಸಲ್ಲಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. https://kannadanewsnow.com/kannada/good-news-for-maize-farmers-in-the-state-opening-of-procurement-centers-under-the-minimum-support-scheme/ https://kannadanewsnow.com/kannada/breaking-a-horrific-accident-in-belagavi-three-dead-including-a-person-who-was-trying-to-rescue-the-injured/

Read More

ನವದೆಹಲಿ: ಗುಜರಾತ್ ನ ಅಹಮದಾಬಾದ್ ಬಳಿಯಲ್ಲಿ ಪತನಗೊಂಡ ಏರ್ ಇಂಡಿಯಾ ವಿಮಾನವು ಹಕ್ಕಿ ಡಿಕ್ಕಿ ಅಥವಾ ಓವರ್ ಲೋಡ್ ನಿಂದ ಅಪಘಾತಕ್ಕೆ ಈಡಾಗಿಲ್ಲ ಎಂಬುದಾಗಿ ನಾಗರಿಕ ವಿಮಾನಯಾನ ನಿರ್ದೇಶನಾಲಯದ ಪ್ರಾಥಮಿಕ ತನಿಖಾ ವರದಿಯಿಂದ ತಿಳಿದು ಬಂದಿದೆ. ನಿನ್ನೆ ಗುಜರಾತಿನ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿಯಲ್ಲಿ ಲಂಡನ್ ಗೆ ಹೊರಟಿದ್ದಂತ ಏರ್ ಇಂಡಿಯಾ ವಿಮಾನವು ಟೇಕ್ ಆಫ್ ಆದಂತ 30 ಸೆಕೆಂಡಿನಲ್ಲಿ ಸಮೀಪದಲ್ಲಿಯೇ ಪತನಗೊಂಡಿತ್ತು. ಈ ದುರಂತದಲ್ಲಿ 241 ಮಂದಿ ಸಾವನ್ನಪ್ಪಿದ್ದಾರೆ. ಈಗಾಗಲೇ ಈ ದುರಂತದಲ್ಲಿ ಮೃತರಾದಂತವರ ಕುಟುಂಬಕ್ಕೆ ತಲಾ 1 ಕೋಟಿ ಪರಿಹಾರವನ್ನು ಟಾಟಾ ಗ್ರೂಪ್ ಘೋಷಣೆ ಮಾಡಿದೆ. ಈ ದುರಂತದ ಬಗ್ಗೆ ತನಿಖೆ ನಡೆಸಿದಂತ ನಾಗರಿಕ ವಿಮಾನಯಾನ ನಿರ್ದೇಶನಾಲಯವು, ಅಹಮದಾಬಾದ್ ನಲ್ಲಿ ಪತನಗೊಂಡ ಏರ್ ಇಂಡಿಯಾ ವಿಮಾನಕ್ಕೆ ಹಕ್ಕಿ ಅಥವಾ ಓವರ್ ಲೋಡ್ ಕಾರಣವಲ್ಲ. ಈ ಕಾರಣದಿಂದ ಏರ್ ಇಂಡಿಯಾ ವಿಮಾನ ಪನತಗೊಂಡಿಲ್ಲ ಎಂಬುದಾಗಿ ಪ್ರಾಥಮಿಕ ತನಿಖಾ ವರದಿಯಲ್ಲಿ ಮಾಹಿತಿ ಹಂಚಿಕೊಂಡಿದೆ. ಅಲ್ಲದೇ ಇಂಜಿನ್ ಫೆಲ್ಯೂರ್ ನಿಂದ ಈ ದುರಂತ…

Read More

ಬೆಂಗಳೂರು: ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ‘ಗೃಹ ಆರೋಗ್ಯ’ ಯೋಜನೆ ಅನುಷ್ಠಾನಕ್ಕೆ ಅಗತ್ಯವಿರುವ ಔಷಧಿ, ಉಪಕರಣಗಳಿಗಾಗಿ 185 ಕೋಟಿ ಅನುದಾನ ಬಳಕೆಗೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವಂತ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು, ಕೋಲಾರ ಜಿಲ್ಲೆಯಲ್ಲಿ ಯೋಜನೆ ಯಶಸ್ವಿಯಾದ ಬೆನ್ನಲ್ಲೇ, ರಾಜ್ಯಾದ್ಯಂತ ಯೋಜನೆ ಜಾರಿಯಾಗುತ್ತಿದ್ದು, ಈ ತಿಂಗಳ ಅಂತ್ಯದೊಳಗೆ ಜಿಲ್ಲೆಗಳಲ್ಲಿ ತಪಾಸಣಾ ಕಾರ್ಯ ಆರಂಭವಾಗಲಿದೆ ಎಂದಿದ್ದಾರೆ. ಆಶಾ ಕಾರ್ಯಕರ್ತೆಯರು ಮನೆ, ಮನೆಗೆ ತೆರಳಿ ಅಸಾಂಕ್ರಾಮಿಕ ರೋಗಗಳ ಬಗ್ಗೆ ಜಾಗೃತಿ ಮೂಡಿಸುವುದರ ಜೊತೆಗೆ 30 ವರ್ಷ ಮೇಲ್ಪಟ್ಟವರು, ಆಯುಷ್ಮಾನ್ ಆರೋಗ್ಯ ಮಂದಿರಗಳಲ್ಲಿ ತಪಾಸಣೆಗೆ ಒಳಪಡಲು ನೆರವಾಗಲಿದ್ದಾರೆ. ರಕ್ತದೊತ್ತಡ, ಡಯಾಬಿಟಿಸ್, ಕ್ಯಾನ್ಸರ್ ಸೇರಿದಂತೆ 14 ಅಸಾಂಕ್ರಾಮಿಕ ರೋಗಗಳ ತಪಾಸಣೆಯನ್ನು ಸಮುದಾಯ ಆರೋಗ್ಯ ಅಧಿಕಾರಿಗಳು ನಡೆಸಲಿದ್ದಾರೆ ಎಂದು ತಿಳಿಸಿದ್ದಾರೆ. ರೋಗಗಳಿಗೆ ತುತ್ತಾದವರಿಗೆ, ಅವರ ಬಳಿಗೆ ಉಚಿತವಾಗಿ ಔಷಧಗಳನ್ನು ಒದಗಿಸಲು ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಗ್ರಾಮೀಣ ಪ್ರದೇಶದ ಜನರ ಆರೋಗ್ಯ ರಕ್ಷಣೆಯಲ್ಲಿ ಒಂದು ದೂರದೃಷ್ಟಿಯ ಯೋಜನೆಯಾಗಿರುವ ‘ಗೃಹ ಆರೋಗ್ಯ’ , ಮುಂಬರುವ ವರ್ಷಗಳಲ್ಲಿ ಹಲವರ…

Read More

ಶಿವಮೊಗ್ಗ: ಇಂದು ಜಿಲ್ಲೆಯ ಸಾಗರ ತಾಲ್ಲೂಕಿನ ಕಿರತೋಡಿ-ಚಿಮಲೆ ಗ್ರಾಮದ ಸತೀಶ ಅವರ ಅನುಮಾನಸ್ಪದ ಸಾವಿನ ಕುರಿತು ತನಿಖೆ ನಡೆಸುವಂತೆ ಒತ್ತಾಯಿಸಿ ಗ್ರಾಮಸ್ಥರು ತಾಲ್ಲೂಕು ಪಂಚಾಯ್ತಿ ಮಾಜಿ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ ನೇತೃತ್ವದಲ್ಲಿ ಡಿವೈಎಸ್‍ಪಿ ಕಚೇರಿಗೆ ಮನವಿ ಸಲ್ಲಿಸಿದರು. ಈ ವೇಳೆ ಮಾತನಾಡಿದ ತಾಲ್ಲೂಕು ಪಂಚಾಯ್ತಿ ಮಾಜಿ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ, ಕಳೆದ 14 ತಿಂಗಳ ಹಿಂದೆ ಚಿಮಲೆ ಗ್ರಾಮದ ಸತೀಶ್ ಎಂಬುವವರ ಕೊಲೆ ಆಗಿದೆ. ಸತೀಶ್ ಅವರ ಶವವನ್ನು ನಾಲ್ಕು ಅಡಿ ಎತ್ತರದಲ್ಲಿ ನೇತು ಹಾಕಲಾಗಿತ್ತು. ಅವರು ಧರಿಸಿದ್ದ ಅಂಗಿಯಲ್ಲಿ ರಕ್ತದ ಕಲೆಯಿತ್ತು. ಸತೀಶ್ ಅವರು ಸಾಯುವುದಕ್ಕಿಂತ ಮೊದಲ ನಾಲ್ಕೈದು ಜನರ ಬಳಿ ಫೋನ್‍ನಲ್ಲಿ ಮಾತನಾಡಿ ತಮ್ಮ ನೋವು ತೋಡಿಕೊಂಡಿದ್ದರು ಎಂದು ಹೇಳಲಾಗುತ್ತಿದೆ. ಆದರೆ ಸತೀಶ್ ಅವರದ್ದು ಆತ್ಮಹತ್ಯೆ ಎಂದು ಹೇಳಲಾಗುತ್ತಿದ್ದು, ಇದನ್ನು ಗ್ರಾಮಸ್ಥರು ಹಾಗೂ ಸತೀಶ್ ಅವರ ಪತ್ನಿ ಅಲ್ಲಗಳೆಯುತ್ತಿದ್ದಾರೆ ಎಂದು ಹೇಳಿದರು. ಸತೀಶ್ ಅವರ ಕೊಲೆಗೆ ಸಂಬಂಧಿಸಿದಂತೆ ಗ್ರಾಮಸ್ಥರಿಗೆ ನಾಲ್ಕೈದು ಜನರ ಮೇಲೆ ಅನುಮಾನವಿದ್ದು ಅದನ್ನು ಡಿವೈಎಸ್‍ಪಿ ಅವರಿಗೆ…

Read More

ಶಿವಮೊಗ್ಗ: ನಿನ್ನೆ ಗುಜರಾತಿನ ಅಹಮದಾಬಾದ್ ನಲ್ಲಿ ಏರ್ ಇಂಡಿಯಾ ವಿಮಾನ ಪತನಗೊಂಡು 241 ಮಂದಿ ಮೃತಪಟ್ಟಿದ್ದರು. ಈ ದುರಂತದಲ್ಲಿ ಮೃತರಾದಂತವರಿಗೆ ಸಾಗರ ತಾಲ್ಲೂಕು ಕಾಂಗ್ರೆಸ್ ನಿಂದ ಶ್ರದ್ಧಾಂಜಲಿ ಸಲ್ಲಿಸಲಾಯಿತು.  ಇಂದು ಶಿವಮೊಗ್ಗ ಜಿಲ್ಲೆಯ  ಸಾಗರದ ಸಾಗರ ಹೋಟೆಲ್ ವೃತ್ತದಲ್ಲಿ ಬ್ಲಾಕ್ ಕಾಂಗ್ರೇಸ್ ವತಿಯಿಂದ ಅಹ್ಮದಾಬಾದ್‍ನಲ್ಲಿ ನಡೆದ ವಿಮಾನ ದುರಂತದಲ್ಲಿ ಮೃತಪಟ್ಟವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಈ ವೇಳೆ ಮಾತನಾಡಿದಂತ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಕಲಸೆ ಚಂದ್ರಪ್ಪ ಇದೊಂದು ಹೃದಯವಿದ್ರಾವಕ ಘಟನೆಯಾಗಿದೆ. ಭವಿಷ್ಯದ ಕನಸು ಕಟ್ಟಿಕೊಂಡು ವಿಮಾನ ಹತ್ತಿದ್ದಂತ 241 ಜನರು ದುರಂತ ಅಂತ್ಯಕಂಡಿದ್ದಾರೆ. ಈ ಘಟನೆಯಿಂದ ಇಡೀ ದೇಶವೇ ದುಃಖಸಾಗರದಲ್ಲಿ ಮುಳುಗುವಂತೆ ಮಾಡಿದೆ. ಇದು ಕಂಡುಕೇಳರಿಯದ ದುರಂತವಾಗಿದೆ ಎಂದರು. ಅಹಮದಾಬಾದ್ ನ ಏರ್ ಇಂಡಿಯಾ ವಿಮಾನವು ವೈದ್ಯಕೀಯ ಕಾಲೇಜಿನ ಹಾಸ್ಟೆಲ್ ಕಟ್ಟಡಕ್ಕೆ ಅಪ್ಪಳಿಸಿದ ಪರಿಣಾಮ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದಂತವರು ಮೃತರಾಗಿದ್ದಾರೆ. ದೇಶಿಗರಲ್ಲದೇ ವಿಮಾನ ಅಪಘಾತದಲ್ಲಿ ವಿದೇಶಿಗರು ಮೃತಪಟ್ಟಿದ್ದಾರೆ. ಮೃತ ಕುಟುಂಬದ ಜೊತೆ ಕಾಂಗ್ರೇಸ್ ಪಕ್ಷ ಇದ್ದು, ಅವರ ಕುಟುಂಬಕ್ಕೆ ದುಃಖವನ್ನು ಭರಿಸುವ ಶಕ್ತಿ…

Read More

ಲಕ್ಷ್ಮೀ ದೇವಿಯ ಅನುಗ್ರಹವನ್ನು ಸಂಪೂರ್ಣವಾಗಿ ಪಡೆದವರಿಗೆ ಮಾತ್ರ ಸಂಪತ್ತಿನ ಶುಭವು ದೊರೆಯುತ್ತದೆ ಎಂದು ನಮಗೆಲ್ಲರಿಗೂ ತಿಳಿದಿದೆ. ಸಂಪತ್ತಿನ ಶಕುನವಿದ್ದಾಗ ಮಾತ್ರ ಮನೆ ಎಲ್ಲಾ ರೀತಿಯ ಸಂಪತ್ತಿನಿಂದ ತುಂಬಿರುತ್ತದೆ. ಆ ಮೂಲಕ ನಾವು ಸಾರ್ಥಕ ಜೀವನವನ್ನು ಹೊಂದಬಹುದು. ಈ ಆಧ್ಯಾತ್ಮಿಕ ಪೋಸ್ಟ್‌ನಲ್ಲಿ, ಅಂತಹ ಸಂಪತ್ತನ್ನು ಪಡೆಯಲು ಸರಳವಾದ ಪರಿಹಾರವನ್ನು ನಾವು ನೋಡಲಿದ್ದೇವೆ . ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,…

Read More

ಬೆಂಗಳೂರು: ರಾಜ್ಯದಲ್ಲಿ ಇಂದು 150 ಮಂದಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ವರದಿಯಿಂದ ದೃಢಪಟ್ಟಿದೆ. ಅಲ್ಲದೇ ಸೋಂಕಿತರಾದಂತ 18 ಜನರು ಗುಣಮುಖರಾಗಿದ್ದಾರೆ. ಈ ಕುರಿತಂತೆ ಆರೋಗ್ಯ ಇಲಾಖೆಯಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಕಳೆದ 24 ಗಂಟೆಯಲ್ಲಿ 496 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇವರಲ್ಲಿ 150 ಜನರಿಗೆ ಸೋಂಕು ಪಾಸಿಟಿವ್ ಅಂತ ದೃಢಪಟ್ಟಿರುವುದಾಗಿ ತಿಳಿಸಿದೆ. ಇಂದು 150 ಮಂದಿಗೆ ಕೊರೋನಾ ಸೋಂಕು ಪತ್ತೆಯಾದ ಕಾರಣ ಸಕ್ರೀಯ ಸೋಂಕಿತರ ಸಂಖ್ಯೆ 527ಕ್ಕೆ ಏರಿಕೆಯಾಗಿದೆ. ಇವರಲ್ಲಿ 520 ಮಂದಿ ಹೋಂ ಐಸೋಲೇಷನ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೇ, 7 ಜನರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದಿದೆ. https://kannadanewsnow.com/kannada/a-black-box-found-on-the-roof-of-the-building-where-the-air-india-aircraft-crashed/ https://kannadanewsnow.com/kannada/breaking-a-horrific-accident-in-belagavi-three-dead-including-a-person-who-was-trying-to-rescue-the-injured/

Read More

ಅಹಮದಾಬಾದ್: ವಿಮಾನ ಡಿಕ್ಕಿ ಹೊಡೆದ ಕಟ್ಟಡದ ಮೇಲ್ಛಾವಣಿಯಿಂದ ದುರದೃಷ್ಟಕರ ಏರ್ ಇಂಡಿಯಾ ವಿಮಾನ AI-171 ರ ಕಪ್ಪು ಪೆಟ್ಟಿಗೆಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಶುಕ್ರವಾರ ದೃಢಪಡಿಸಿದ್ದಾರೆ. 241 ಜೀವಗಳನ್ನು ಬಲಿ ಪಡೆದ ದುರಂತ ಅಪಘಾತದ ಕಾರಣದ ಬಗ್ಗೆ ನಿರ್ಣಾಯಕ ವಿಮಾನ ದತ್ತಾಂಶ ರೆಕಾರ್ಡರ್ ಪ್ರಮುಖ ಒಳನೋಟಗಳನ್ನು ಒದಗಿಸುವ ನಿರೀಕ್ಷೆಯಿದೆ. ಗುರುವಾರ ಮಧ್ಯಾಹ್ನ ಅಹಮದಾಬಾದ್‌ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಬೋಯಿಂಗ್ 787-8 ಡ್ರೀಮ್‌ಲೈನರ್ ಹಠಾತ್ ಇಳಿಯುವಿಕೆಗೆ ಕಾರಣವೇನು ಎಂಬುದನ್ನು ನಿರ್ಧರಿಸಲು ಕಪ್ಪು ಪೆಟ್ಟಿಗೆಯ ವಿಶ್ಲೇಷಣೆಯು ನಿರ್ಣಾಯಕ ಪುರಾವೆಗಳನ್ನು ನೀಡುತ್ತದೆ ಎಂದು ತನಿಖಾಧಿಕಾರಿಗಳು ನಂಬಿದ್ದಾರೆ. ಲೋಹದ ಕಟ್ಟರ್‌ಗಳು ಸೇರಿದಂತೆ ಸುಧಾರಿತ ಉಪಕರಣಗಳನ್ನು ಹೊಂದಿದ ಅಹಮದಾಬಾದ್ ಅಗ್ನಿಶಾಮಕ ದಳದ ಸಮರ್ಪಿತ ತಂಡವು ವಿಮಾನ ನಿಲ್ದಾಣದ ಪರಿಧಿಯ ಹೊರಗೆ ಇರುವ ಮೇಘನಿನಗರದಲ್ಲಿ ವಿಮಾನ ಬಹುಮಹಡಿ ಹಾಸ್ಟೆಲ್ ಕಟ್ಟಡಕ್ಕೆ ಅಪ್ಪಳಿಸಿದ ಅವಶೇಷಗಳ ಮೂಲಕ ಶೋಧ ನಡೆಸುತ್ತಿತ್ತು. ಕೇಂದ್ರೀಕೃತ ಕಾರ್ಯಾಚರಣೆಯ ನಂತರ, ಕಟ್ಟಡದ ಮೇಲ್ಛಾವಣಿಯಲ್ಲಿ ಕಪ್ಪು ಪೆಟ್ಟಿಗೆಯನ್ನು…

Read More