Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ರಾಜ್ಯ ಸರ್ಕಾರದಿಂದ ಎರಡು ಅಕಾಡೆಮಿಗಳಿಗೆ, ಒಂದು ಪ್ರಾಧಿಕಾರಕ್ಕೆ ಅಧ್ಯಕ್ಷರು, ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಇದೇ ಸಂದರ್ಭದಲ್ಲಿ ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯ ಅಧ್ಯಕ್ಷರ ಸ್ಥಾನಕ್ಕೆ ಡಾ.ಕೃಪಾ ಫಡಕೆ, ಮೈಸೂರು ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಸದಸ್ಯ ಸ್ಥಾನಕ್ಕೆ ವಿಜಯಲಕ್ಷ್ಮಿ ಕೌಟಗಿ ಹಾಗೂ ಕರ್ನಾಟಕ ನಾಟಕ ಅಕಾಡೆಮಿ ಸದಸ್ಯ ಸ್ಥಾನಕ್ಕೆ ಮಾಲೂರು ವಿಜಿ ನಾಮನಿರ್ದೇಶನವನ್ನು ರದ್ದುಗೊಳಿಸಿದೆ. ಈ ಸಂಬಂಧ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ಎಸ್ ಗೀತಾಬಾಯಿ ಅಧಿಸೂಚನೆ ಹೊರಡಿಸಿದ್ದಾರೆ. 2024ರಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯ ಅಧ್ಯಕ್ಷರ ಸ್ಥಾನಕ್ಕೆ ಡಾ.ಕೃಪಾ ಫಡಕೆ, ಮೈಸೂರು ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಸದಸ್ಯ ಸ್ಥಾನಕ್ಕೆ ವಿಜಯಲಕ್ಷ್ಮಿ ಕೌಟಗಿ ಹಾಗೂ ಕರ್ನಾಟಕ ನಾಟಕ ಅಕಾಡೆಮಿ ಸದಸ್ಯ ಸ್ಥಾನಕ್ಕೆ ಮಾಲೂರು ವಿಜಿ ಇವರ ನಾಮ ನಿರ್ದೇಶನಗೊಳಿಸಿರುವುದನ್ನು ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಪಡಿಸಿ ಆದೇಶಿಸಿದ್ದಾರೆ. ಇನ್ನೂ ಈ ತಕ್ಷಣದಿಂದ ಜಾರಿಗೆ ಬರುವಂತೆ…
ಶಿವಮೊಗ್ಗ: ಮುಖ್ಯಮಂತ್ರಿ ಸಿದ್ಧರಾಮಯ್ಯ ಬೆನ್ನಲ್ಲೇ, ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಅಲರ್ಟ್ ಆಗಿದ್ದಾರೆ. ಸಾಗರ ತಾಲೂಕು ಆಡಳಿತದ ಸರಣಿ ಸಭೆ ನಡೆಸಿ, PDO, ಮೆಸ್ಕಾಂ ಅಧಿಕಾರಿಗಳಿಗೆ ಚುರುಕು ಮುಟ್ಟಿಸಿದರು. ಇಂದು ಸಾಗರ ನಗರದ ಪ್ರವಾಸಿ ಮಂದಿರದಲ್ಲಿ ತಾಲೂಕು ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಿದರು. ಸಾಗರ ತಾಲೂಕಿನ ಪಿಡಿಓ, ಮೆಸ್ಕಾಂ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಮಳೆಗಾಲದಲ್ಲಿ ಸೂಕ್ತ ಕ್ರಮ ವಹಿಸುವಂತೆ ಖಡಕ್ ಸೂಚನೆ ನೀಡಿದರು. ಮಳೆಯಿಂದ ಮನೆ ಹಾಳಾದ್ರೇ 10,000 ತಕ್ಷಣ ಕೊಡಬೇಕು ಮುಂಗಾರು ಮಳೆ ತಾಲೂಕಿನಲ್ಲಿ ಚುರುಕು ಪಡೆದಿದೆ. ಮಳೆಯಿಂದ ಹಲವೆಡೆ ಹಾನಿಗಳು ಘಟಿಸುತ್ತಿದ್ದಾವೆ. ಮಳೆಯಿಂದ ಮನೆ ಬಿದ್ದು ಹೋದರೇ ಕೂಡಲೇ ಅಂತಹ ಕುಟುಂಬಕ್ಕೆ ನೆರವಾಗೋದಕ್ಕಾಗಿ 10,000 ರೂ.ಗಳನ್ನು ಕೊಡಬೇಕು ಎಂಬುದಾಗಿ ಗ್ರಾಮ ಪಂಚಾಯ್ತಿ ಪಿಡಿಓಗಳಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ಸೂಚಿಸಿದರು. ಅಲ್ಲದೇ ಕೊಟ್ಟಿಗೆ ಮನೆ ಬಿದ್ದಾಗ ಎನ್ ಆರ್ ಜಿ ಅನುದಾನದ ಅಡಿಯಲ್ಲಿ ಹಣ ನೀಡುವಂತೆ ಸೂಚಿಸಿದರು. ಮಳೆಯಿಂದ ಮನೆ ಹಾಳಾದ ಬಗ್ಗೆ ಪಿಡಿಓ, ವಿಎ ಕೂಡಲೇ ಸ್ಥಳಕ್ಕೆ ತೆರಳಿ…
ಬೆಂಗಳೂರು: ನಗರದಲ್ಲಿ ಅನಧಿಕೃತವಾಗಿ ಫ್ಲೆಕ್ಸ್, ಬ್ಯಾನರ್ ಹಾಕಿದವರ ವಿರುದ್ಧ ಬಿಬಿಎಂಪಿ ಸಮರವನ್ನೇ ಸಾರಿದೆ. ಇದೀಗ ಅನಧಿಕೃತವಾಗಿ ಫ್ಲೆಕ್ಸ್, ಬ್ಯಾನರ್ ಹಾಕಿದ್ದಕ್ಕೆ 12 ಎಫ್ಐಆರ್ ದಾಖಲಿಸಿದೆ. ನಗರದಾದ್ಯಂತ ಅನಧಿಕೃತವಾಗಿ ಅಳವಡಿಸಿರುವ ಫ್ಲೆಕ್ಸ್, ಬ್ಯಾನರ್ ಗಳ ತೆರವು ಕಾರ್ಯಾಚರಣೆಯನ್ನು ನಡೆಸಲಾಗುತ್ತಿದೆ. ಈ ಸಂಬಂಧ ಉಪ ಮುಖ್ಯಮಂತ್ರಿಗಳು ಹಾಗೂ ನಗರಾಭಿವೃದ್ಧಿ ಸಚಿವರಾದ ಡಿ.ಕೆ ಶಿವಕುಮಾರ್ ರವರು ಕೂಡಾ ನಗರದಲ್ಲಿ ಯಾವುದೇ ಅನಧಿಕೃತ ಜಾಹೀರಾತುಗಳು ಅಳವಡಿಸಿದಂತೆ ಸೂಕ್ತ ಕ್ರಮ ವಹಿಸಲು ಸೂಚನೆ ನೀಡಿರುತ್ತಾರೆ. ಅದರಂತೆ, ದಿನಾಂಕ: 01-06-2024 ರಿಂದ ಇದುವರೆಗೆ 1259 ಫ್ಲೆಕ್ಸ್, ಬ್ಯಾನರ್, ಎಲ್.ಇ.ಡಿ ಹಾಗೂ ಹೋರ್ಡಿಂಗ್ಸ್ ಗಳನ್ನು ತೆರವುಗೊಳಿಸಲಾಗಿದೆ. ಪೊಲೀಸ್ ಠಾಣೆಯಲ್ಲಿ 27 ದೂರುಗಳನ್ನು ದಾಖಲಿಸಿದ್ದು, ಅದರಲ್ಲಿ 12 ಎಫ್.ಐ.ಆರ್ ಗಳನ್ನು ದಾಖಲಿಸಲಾಗಿದೆ. ಅನಧಿಕೃತ ಜಾಹೀರಾತುಗಳ ಮಾಹಿತಿ ನೀಡಿ ಪಾಲಿಕೆಯ ವ್ಯಾಪ್ತಿಯಲ್ಲಿ ಪ್ರಸ್ತುತ ಜಾರಿಯಲ್ಲಿರುವ “ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಹೊರಾಂಗಣ ಜಾಹೀರಾತು ಫಲಕ ಮತ್ತು ಸಾರ್ವಜನಿಕ ಸಂದೇಶದ ಉಪ ವಿಧಿಗಳು-2018″ ರಲ್ಲಿ ಅಂಗಡಿ ಮುಂಗಟ್ಟು ಜಾಹೀರಾತುಗಳು, ವಾಹನ ಸ್ವ-ಜಾಹೀರಾತು ಇನ್ನಿತರೆ ಸಣ್ಣಪುಟ್ಟ ಜಾಹೀರಾತುಗಳನ್ನು…
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣವೊಂದು ದಾಖಲಾಗಿತ್ತು. ಈ ಪ್ರಕರಣದಲ್ಲಿ ರಾಜ್ಯ ಸರ್ಕಾರದ ಪರವಾಗಿ ವಾದಿಸೋದಕ್ಕೆ ವಿಶೇಷ ಅಭಿಯೋಜಕರಾಗಿ ಅಶೋಕ್ ಎನ್ ನಾಯಕ್ ನೇಮಕ ಮಾಡಿ ಆದೇಶಿಸಿದೆ. ಪೋಕ್ಸೋ ಪ್ರಕರಣ ಸಂಬಂಧ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಸಿಐಡಿ ನೋಟಿಸ್ ನೀಡಲಾಗಿದೆ. ಪೋಕ್ಸೋ ಪ್ರಕರಣ ಸಂಬಂಧ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪಗೆ ಸಿಐಡಿ ಅಧಿಕಾರಿಗಳು ನೋಟಿಸ್ ನೀಡಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ. ಆದರೆ ಯಡಿಯೂರಪ್ಪ ದೆಹಲಿ ಇರುವ ಕಾರಣ ಇಂದು ವಿಚಾರಣೆಗೆ ಹಾಜರಾಗಿಲ್ಲ. ಯಡಿಯೂರಪ್ಪನವರ ಬಳಿ ಸಹಾಯ ಕೋರಿ ಹೋಗಿದ್ದಾಗ ತಮ್ಮ ಪುತ್ರಿಯ ಜೊತೆಗೆ ಯಡಿಯೂರಪ್ಪನವರು ಅಸಭ್ಯವಾಗಿ ವರ್ತಿಸಿದ್ದರೆಂದು ಮಹಿಳೆಯೊಬ್ಬರು ಮಾರ್ಚ್ 14ರಂದು ದೂರು ದಾಖಲಿಸಿದ್ದರು. ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಯಡಿಯೂರಪ್ಪನವರ ನಿವಾಸದಲ್ಲಿ ಈ ಘಟನೆ ನಡೆದಿದ್ದಾಗಿ ಮಹಿಳೆ ದೂರಿನಲ್ಲಿ ತಿಳಿಸಿದ್ದಳು. ಯಡಿಯೂರಪ್ಪನವರ ವಿರುದ್ಧ ಈ ಮಹಿಳೆ ಮಾರ್ಚ್ 14ರಂದು ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಿದ್ದಳು. ಅದರ ಮರುದಿನ,…
ನವದೆಹಲಿ: ಖ್ಯಾತ ಫುಟ್ಬಾಲ್ ತರಬೇತುದಾರ ಮತ್ತು ಭಾರತದ ಮಾಜಿ ಆಟಗಾರ ಟಿ.ಕೆ.ಚತುನ್ನಿ ತಮ್ಮ 79 ನೇ ವಯಸ್ಸಿನಲ್ಲಿ ನಿಧನರಾದರು. ಕ್ಯಾನ್ಸರ್ ಸಂಬಂಧಿತ ಕಾಯಿಲೆಗಳಿಂದ ಬಳಲುತ್ತಿದ್ದ ಅವರು ಬುಧವಾರ ಬೆಳಿಗ್ಗೆ ಕೊಚ್ಚಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. 1990ರಲ್ಲಿ ಕೇರಳ ಪೊಲೀಸ್ ತಂಡ ಮೊದಲ ಬಾರಿಗೆ ಫೆಡರೇಷನ್ ಕಪ್ ಜಯಿಸಿತ್ತು. ಅವರು ಭಾರತೀಯ ದಂತಕಥೆ ಐ ಎಂ ವಿಜಯನ್ ಮತ್ತು ಮಾಜಿ ರಾಷ್ಟ್ರೀಯ ಆಟಗಾರ ಜೋ ಪಾಲ್ ಅಂಚೇರಿ ಅವರನ್ನು ತಮ್ಮ ರಚನಾತ್ಮಕ ವರ್ಷಗಳಲ್ಲಿ ಪೋಷಿಸಿದರು. ಮೋಹನ್ ಬಗಾನ್, ಸಾಲ್ಗೋಕರ್ ಎಫ್ ಸಿ, ಡೆಂಪೊ ಎಸ್ ಸಿ, ಚರ್ಚಿಲ್ ಬ್ರದರ್ಸ್ ಮತ್ತು ಎಫ್ ಸಿ ಕೊಚ್ಚಿನ್ ನಂತಹ ಅಗ್ರ ಭಾರತೀಯ ಕ್ಲಬ್ ಗಳನ್ನು ಚತುನ್ನಿ ನಿರ್ವಹಿಸಿದ್ದಾರೆ. ಅವರು ನಾಲ್ಕು ದಶಕಗಳ ನಿರ್ವಹಣಾ ವೃತ್ತಿಜೀವನದಲ್ಲಿ ಚಿರಾಗ್ ಯುನೈಟೆಡ್ ಮತ್ತು ಜೋಸ್ಕೊ ಎಫ್ ಸಿಯ ಉಸ್ತುವಾರಿ ವಹಿಸಿದ್ದರು. ಚಲಕುಡಿ ಮೂಲದ ಚತುನ್ನಿ ಹಿರಿಯರ ಮಟ್ಟದಲ್ಲಿ ಕೇರಳ, ಗೋವಾ, ಸರ್ವಿಸಸ್ ಮತ್ತು ಮಹಾರಾಷ್ಟ್ರ ಪರ ಆಡಿದ್ದಾರೆ. ಅವರು ಇಎಂಇ (ಸಿಕಂದರಾಬಾದ್),…
ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ನಕಲಿ ವೈದ್ಯರ ಹಾವಳಿಯನ್ನು ತಡೆಗಟ್ಟಲು ಸರ್ಕಾರ ಕಟ್ಟುನಿಟ್ಟಿನ ಬಿಗಿಯಾದ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಹಾಗು ಜೀವನೋಪಾಯ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಎಚ್ಚರಿಕೆ ನೀಡಿದ್ದಾರೆ. ಬುಧವಾರ ಕರ್ನಾಟಕ ಖಾಸಗಿ ಹೋಮಿಯೋಪಥಿಕ್ ವೈದ್ಯಕೀಯ ಮಹಾ ವಿದ್ಯಾಲಯಗಳ ಆಡಳಿತ ಸಂಘದ ವತಿಯಿಂದ ಡಾ.ಬಿಆರ್.ಅಂಬೇಡ್ಕರ್ ಭವನದಲ್ಲಿ ಹಮಿಕೊಂಡಿದ್ದ ವಿಶ್ವ ಹೋಮಿಯೋಪತಿ ದಿನಾಚರಣೆ ಮತ್ತು ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ನಕಲಿ ವೈದ್ಯರ ಹಾವಳಿ ವ್ಯಾಪಕವಾಗಿ ಕೇಳಿಬರುತ್ತಿದೆ. ಯಾವುದೇ ವೈದ್ಯಕೀಯ ಕೋರ್ಸ್ ಮುಗಿಸದೆ ಇರುವವರು ಎಲ್ಲೆಂದರಲ್ಲಿ ಕ್ಲಿನಿಕ್ಗಳನ್ನು ತೆರೆದು ಚಿಕಿತ್ಸೆ ನೀಡುತ್ತಾರೆ. ಇದರ ಬಗ್ಗೆ ಸರ್ಕಾರಕ್ಕೆ ಸಾಕಷ್ಟು ದೂರುಗಳು ಬಂದಿವೆ ಎಂದು ಹೇಳಿದರು. ಗ್ರಾಮೀಣ ಭಾಗದ ಜನರ ಅಮಾಯಕತೆಯನ್ನು ಕೆಲವರು ದುರುಪಯೋಗಪಡಿಸಿಕೊಂಡು ನಕಲಿ ಚಿಕಿತ್ಸೆ ನೀಡುತ್ತಾರೆ. ಇದು ಕಾನೂನು ಬಾಹಿರ ಎಂದು ಗೊತ್ತಿದ್ದರೂ ಕೆಲವರು ಚಿಕಿತ್ಸೆ ನೀಡುತ್ತಿದ್ದಾರೆ. ಇನ್ನು ಮುಂದೆ ಇದಕ್ಕೆ ಶಾಶ್ವತವಾದ ಕಡಿವಾಣ ಬೀಳಲಿದೆ ಎಂದರು. ಕೇವಲ ಸರ್ಕಾರದಿಂದ…
ಬೆಂಗಳೂರು :ರಾಜೀವ್ ಗಾಂಧಿ ವಸತಿ ನಿಗಮದ ವತಿಯಿಂದ ಕೈಗೊಂಡಿರುವ ವಸತಿ ಯೋಜನೆಗಳು ತ್ವರಿತ ಗತಿಯಲ್ಲಿ ಪೂರ್ಣ ಗೊಳಿಸುವಂತೆ ವಸತಿ ಸಚಿವ ಜಮೀರ್ ಅಹಮದ್ ಖಾನ್ ಸೂಚನೆ ನೀಡಿದ್ದಾರೆ. ರಾಜೀವ್ ಗಾಂಧಿ ವಸತಿ ನಿಗಮದ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಪ್ರಧಾನಮಂತ್ರಿ ನಗರ ಅವಾಸ್ ಯೋಜನೆ ಯಡಿ ಬಡ ಕುಟುಂಬಗಳಿಗೆ ಮನೆ ನಿರ್ಮಾಣ ಮಾಡಿ ಕೊಡುವ ಕಾಮಗಾರಿ ಗೆ ವೇಗ ನೀಡಬೇಕು ಎಂದು ನಿರ್ದೇಶನ ನೀಡಿದರು. ರಾಜ್ಯದಲ್ಲಿ ಈ ಯೋಜನೆಯಡಿ ಚಾಲ್ತಿಯಲ್ಲಿರುವ 52 ಸಾವಿರ ಮನೆಗಳ ಪೈಕಿ 11400 ಮನೆ ಆದಷ್ಟು ಶೀಘ್ರ ಹಂಚಿಕೆ ಮಾಡಬೇಕಿದ್ದು, ವಸತಿ ಸಮುಚ್ಚಯ ಹಾಗೂ ಮೂಲ ಸೌಕರ್ಯ ಕಾಮಗಾರಿ ಕಾಲ ಮಿತಿಯಲ್ಲಿ ಪೂರ್ಣ ಗೊಳಿಸಿ ಎಂದು ಹೇಳಿದರು. ಬಸವ, ಅಂಬೇಡ್ಕರ್, ದೇವರಾಜ ಅರಸು, ವಾಜಪೇಯಿ ನಗರ ಹಾಗೂ ಪ್ರಧಾನ ಮಂತ್ರಿ ಅವಾಸ್ ಗ್ರಾಮೀಣ ಮನೆಗಳ ವಿಚಾರದಲ್ಲಿ ಫಲಾನುಭ ವಿಗಳ ಆಯ್ಕೆ ವಿಳಂಬದ ಬಗ್ಗೆ ದೂರುಗಳಿದ್ದು, ಶಾಸಕರ ಜತೆ ಪತ್ರ ವ್ಯವಹಾರ ನಡೆಸಿ ಸಮಸ್ಯೆ ಬಗೆಹರಿಸಿ ಕೊಳ್ಳಿ.…
ನವದೆಹಲಿ: ಭಾರತದ ಚಿಲ್ಲರೆ ಹಣದುಬ್ಬರವು ಮೇ ತಿಂಗಳಲ್ಲಿ ವಾರ್ಷಿಕ ಆಧಾರದ ಮೇಲೆ 12 ತಿಂಗಳ ಕನಿಷ್ಠ 4.75% ಕ್ಕೆ ಇಳಿದಿದೆ. ಇದು ಏಪ್ರಿಲ್ನಲ್ಲಿ 4.83% ರಷ್ಟಿತ್ತು ಎಂದು ಬುಧವಾರ ಬಿಡುಗಡೆಯಾದ ಸರ್ಕಾರದ ಅಂಕಿ ಅಂಶಗಳು ತಿಳಿಸಿವೆ. ಈ ಅಂಕಿಅಂಶವು ಹೆಚ್ಚಿನ ಅರ್ಥಶಾಸ್ತ್ರಜ್ಞರು ಊಹಿಸಿದ್ದಕ್ಕಿಂತ ಕಡಿಮೆಯಾಗಿದೆ. ಇದರೊಂದಿಗೆ, ಚಿಲ್ಲರೆ ಹಣದುಬ್ಬರವು ಸೆಪ್ಟೆಂಬರ್ 2023 ರಿಂದ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಗುರಿ ವ್ಯಾಪ್ತಿಯಲ್ಲಿ 2-6% ರಷ್ಟಿದೆ. ಅಖಿಲ ಭಾರತ ಗ್ರಾಹಕ ಬೆಲೆ ಸೂಚ್ಯಂಕ (ಸಿಪಿಐ) ಸಂಖ್ಯೆಯನ್ನು ಆಧರಿಸಿದ ವಾರ್ಷಿಕ ಹಣದುಬ್ಬರ ದರವು ಮೇ 2024 ರಲ್ಲಿ 4.75% (ತಾತ್ಕಾಲಿಕ) ಆಗಿದೆ. ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಅನುಗುಣವಾದ ಹಣದುಬ್ಬರ ದರಗಳು ಕ್ರಮವಾಗಿ 5.28% ಮತ್ತು 4.15% ಆಗಿವೆ ಎಂದು ಸರ್ಕಾರ ಬಿಡುಗಡೆ ಮಾಡಿದ ಅಂಕಿ ಅಂಶಗಳು ತಿಳಿಸಿವೆ. ಗಮನಾರ್ಹವಾಗಿ, ಏಪ್ರಿಲ್ 2024 ಕ್ಕೆ ಹೋಲಿಸಿದರೆ ಸಾಂಬಾರ ಪದಾರ್ಥಗಳ ವಿಭಾಗವು ವರ್ಷದಿಂದ ವರ್ಷಕ್ಕೆ ಹಣದುಬ್ಬರದಲ್ಲಿ ಗಣನೀಯ ಕುಸಿತವನ್ನು ಕಂಡಿದೆ. ಗುಂಪುಗಳ ಪೈಕಿ, ‘ಬಟ್ಟೆ ಮತ್ತು…
ಪೂರ್ವಜರು ಅಥವಾ ಹಿರಿಯರು ತಾವು ಕಷ್ಟಪಟ್ಟು ದುಡಿದ ಹಣವನ್ನು ಸುರಕ್ಷಿತಗೊಳಿಸಲು ಹಿಂದಿನ ಕಾಲದಲ್ಲಿ ಹೂತಿಡುತ್ತಿದ್ದರು, ಆದರೆ ಆ ನಿಧಿ ಎಲ್ಲಿರುತ್ತದೆ ಎಂಬುದು ಈಗಿನ ಕಾಲದವರಿಗೆ ತಿಳಿದಿರುವುದಿಲ್ಲ. ಹಾಗಾದರೆ ಅಕ್ಕಪಕ್ಕದಲ್ಲಿರುವ ನಿಧಿಯನ್ನು ಯಾವ ಉಪಾಯದಿಂದ ತಿಳಿದುಕೊಳ್ಳಬಹುದು ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 5 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ…
ಅರುಣಾಚಲ ಪ್ರದೇಶ: ಅರುಣಾಚಲ ಪ್ರದೇಶ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಪೆಮಾ ಖಂಡು ಅವರು ಮರು ಆಯ್ಕೆಯಾದ ನಂತರ ಮತ್ತೊಂದು ಅವಧಿಗೆ ಮುಖ್ಯಮಂತ್ರಿಯಾಗಲಿದ್ದಾರೆ. ಖಂಡು ಅವರು ರಾಜ್ಯಪಾಲ ಕೆ.ಟಿ.ಪರ್ನಾಯಕ್ ಅವರನ್ನು ಭೇಟಿಯಾಗಿ ಸರ್ಕಾರ ರಚಿಸಲು ಹಕ್ಕು ಮಂಡಿಸಲಿದ್ದಾರೆ. ಖಂಡು ಅವರು ತಮ್ಮ ಸಂಪುಟ ಸಹೋದ್ಯೋಗಿಗಳೊಂದಿಗೆ ಗುರುವಾರ ಬೆಳಿಗ್ಗೆ ಪ್ರಮಾಣವಚನ ಸ್ವೀಕರಿಸಲಿದ್ದು, ರಾಜ್ಯದಲ್ಲಿ ಅವರ ನಾಯಕತ್ವದ ಮುಂದುವರಿಕೆಯನ್ನು ಸೂಚಿಸುತ್ತದೆ. https://twitter.com/arunachaltimes_/status/1800862328034058302 ಅರುಣಾಚಲ ಪ್ರದೇಶದ ಶಾಸಕಾಂಗ ಪಕ್ಷದ ನಾಯಕನ ಆಯ್ಕೆಗೆ ಹಿರಿಯ ಬಿಜೆಪಿ ನಾಯಕರಾದ ರವಿಶಂಕರ್ ಪ್ರಸಾದ್ ಮತ್ತು ತರುಣ್ ಚುಗ್ ಅವರನ್ನು ವೀಕ್ಷಕರಾಗಿ ಕಳುಹಿಸಲಾಗಿದೆ. https://kannadanewsnow.com/kannada/rave-party-case-telugu-actress-hema-granted-bail/ https://kannadanewsnow.com/kannada/action-will-be-taken-within-legal-framework-in-actor-darshans-case-minister-laxmi-hebbalkar/