Subscribe to Updates
Get the latest creative news from FooBar about art, design and business.
Author: kannadanewsnow09
ನವದೆಹಲಿ: ಹೊಸ ಭದ್ರತಾ ಭೀತಿಯ ನಡುವೆ, ನವದೆಹಲಿಯ ತಾಜ್ ಪ್ಯಾಲೇಸ್ ಹೋಟೆಲ್ಗೆ ಶನಿವಾರ ಬಾಂಬ್ ಬೆದರಿಕೆ ಇಮೇಲ್ ಬಂದಿದ್ದು, ದೆಹಲಿ ಪೊಲೀಸರಿಂದ ತಕ್ಷಣದ ಮತ್ತು ದೃಢವಾದ ಪ್ರತಿಕ್ರಿಯೆ ಬಂದಿದೆ. ಘಟನೆಯನ್ನು ದೃಢಪಡಿಸುತ್ತಾ, ಬೆದರಿಕೆಯ ವಿವರಗಳನ್ನು ಇನ್ನೂ ನಿರೀಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ, ಹೋಟೆಲ್ ಆವರಣಕ್ಕೆ ಬಾಂಬ್ ನಿಷ್ಕ್ರಿಯ ದಳ ಮತ್ತು ಭದ್ರತಾ ತಂಡಗಳನ್ನು ನಿಯೋಜಿಸಲಾಗಿದೆ. ಸಂಪೂರ್ಣ ತಪಾಸಣೆ ನಡೆಯುತ್ತಿದೆ ಮತ್ತು ಪೊಲೀಸರು ಇಮೇಲ್ನ ಮೂಲ ಮತ್ತು ಸತ್ಯಾಸತ್ಯತೆಯನ್ನು ಸಕ್ರಿಯವಾಗಿ ಪರಿಶೀಲಿಸುತ್ತಿದ್ದಾರೆ. ದೆಹಲಿ ಹೈಕೋರ್ಟ್ ಬಾಂಬ್ ಬೆದರಿಕೆ ಸುಳ್ಳು ಎಂದು ಘೋಷಣೆ ಶುಕ್ರವಾರದ ಮೊದಲು, ದೆಹಲಿ ಹೈಕೋರ್ಟ್ಗೆ ಕಳುಹಿಸಲಾದ ಇದೇ ರೀತಿಯ ಬಾಂಬ್ ಬೆದರಿಕೆ ಇಮೇಲ್ ವ್ಯಾಪಕ ಭೀತಿಯನ್ನುಂಟುಮಾಡಿತು. ನ್ಯಾಯಾಧೀಶರು, ವಕೀಲರು ಮತ್ತು ನ್ಯಾಯಾಲಯದ ಸಿಬ್ಬಂದಿಯನ್ನು ಸ್ಥಳಾಂತರಿಸಲಾಯಿತು ಮತ್ತು ನ್ಯಾಯಾಲಯದ ವಿಚಾರಣೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಯಿತು. “ನ್ಯಾಯಾಲಯ”ವನ್ನು ಅಸ್ಪಷ್ಟವಾಗಿ ಉಲ್ಲೇಖಿಸಿದ ಇಮೇಲ್ ಪೂರ್ಣ ಭದ್ರತಾ ಕಸರತ್ತುಗೆ ಕಾರಣವಾಯಿತು. ಬಾಂಬ್ ಸ್ಕ್ವಾಡ್ಗಳು ಮತ್ತು ಭದ್ರತಾ ಸಂಸ್ಥೆಗಳು ಆವರಣದ ಸಮಗ್ರ ಶೋಧನೆಯ ನಂತರ, ಬೆದರಿಕೆಯನ್ನು…
ಬೆಂಗಳೂರು: ʼರಾಜ್ಯದಲ್ಲಿ ಅಂದಾಜು ₹ 882 ಕೋಟಿ ವೆಚ್ಚದಲ್ಲಿ ಸೌರ ಕೋಶ ತಯಾರಿಸುವ ಘಟಕ ಸಾಪಿಸುವುದನ್ನು ಜಪಾನಿನ ಹೊಸೊಡಾ ಹೋಲ್ಡಿಂಗ್ಸ್ ಖಚಿತಪಡಿಸಿದೆʼ ಎಂದು ಬೃಹತ್ ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ ಅವರು ತಿಳಿಸಿದ್ದಾರೆ. ʼತೋಂಗ್ ತರ್ ಎನರ್ಜಿ ಸೊಲುಷನ್ಸ್ (ಟಿಟಿಇಎಸ್) ಸಹಯೋಗದಲ್ಲಿ ಈ ಯೋಜನೆ ಕಾರ್ಯಗತಗೊಳ್ಳಲಿದೆ. ಆರಂಭದಲ್ಲಿ ಟಿಟಿಇಎಸ್ ಈ ಯೋಜನೆಗೆ ₹490 ಕೋಟಿ ವೆಚ್ಚ ಮಾಡಲು ನಿರ್ಧರಿಸಿತ್ತು. ಫೆಬ್ರುವರಿಯಲ್ಲಿ ನಡೆದಿದ್ದ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಈ ಯೋಜನೆಯ ಒಪ್ಪಂದಕ್ಕೆ ಅಂಕಿತ ಹಾಕಲಾಗಿತ್ತು. ಟಿಟಿಇಎಸ್ ಜೊತೆಗಿನ ಪಾಲುದಾರಿಕೆ ಫಲವಾಗಿ ಈ ಯೋಜನೆಯ ಹೂಡಿಕೆ ಮೊತ್ತವನ್ನು ಹೊಸೊಡಾ ಹೋಲ್ಡಿಂಗ್ಸ್ ಹೆಚ್ಚಿಸಿದೆ. ಇದರಿಂದ ರಾಜ್ಯದಲ್ಲಿ 500 ಜನರಿಗೆ ಉದ್ಯೋಗ ಅವಕಾಶಗಳು ಸೃಷ್ಟಿಯಾಗಲಿವೆʼ ಎಂದು ಸಚಿವರು ಮಾಹಿತಿ ನೀಡಿದ್ದಾರೆ. ಜಪಾನ್ಗೆ ಭೇಟಿ ನೀಡಿರುವ ರಾಜ್ಯದ ಉನ್ನತ ಮಟ್ಟದ ನಿಯೋಗದ ನೇತೃತ್ವವಹಿಸಿರುವ ಸಚಿವರು, ಶುಕ್ರವಾರ ಹೊಸೊಡಾ ಹೋಲ್ಡಿಂಗ್ಸ್ನ ಅಧ್ಯಕ್ಷ ನಕಾಮುರಾ ಸ್ಯಾನ್ ಅವರ ಜೊತೆಗೆ ನಡೆಸಿದ ಸಮಾಲೋಚನೆಯಲ್ಲಿ ಕಂಪನಿಯು ಈ ಹೂಡಿಕೆ ಹೆಚ್ಚಳವನ್ನು ಖಚಿತಪಡಿಸಿದೆ. ʼಬಂಡವಾಳ…
ನಿಮ್ಮ ಆದಾಯ ತೆರಿಗೆ ರಿಟರ್ನ್ ಸಲ್ಲಿಸುವುದು ನಿಮ್ಮ ಜವಾಬ್ದಾರಿಯ ಅಂತ್ಯವಲ್ಲ. ಕಳೆದ ವರ್ಷ 2 ಕೋಟಿಗೂ ಹೆಚ್ಚು ತೆರಿಗೆದಾರರು ಸರಳ ತಪ್ಪುಗಳಿಗಾಗಿ ದೋಷಯುಕ್ತ ಐಟಿಆರ್ ನೋಟಿಸ್ಗಳನ್ನು ಸ್ವೀಕರಿಸಿದ್ದಾರೆ, ಅವುಗಳನ್ನು ತಪ್ಪಿಸಬಹುದಿತ್ತು ಎಂದು ಡೈಮ್ ಸಂಸ್ಥಾಪಕಿ ಚಂದ್ರಲೇಖಾ ಎಂಆರ್ ಲಿಂಕ್ಡ್ಇನ್ ಪೋಸ್ಟ್ನಲ್ಲಿ ಬರೆದಿದ್ದಾರೆ. 2024-25 ನೇ ಸಾಲಿನ 7 ಕೋಟಿ ಐಟಿಆರ್ಗಳಲ್ಲಿ ಕೇವಲ 5.34 ಕೋಟಿಗಳನ್ನು ಮಾತ್ರ ಯಶಸ್ವಿಯಾಗಿ ಪ್ರಕ್ರಿಯೆಗೊಳಿಸಲಾಗಿದೆ. ಅವರು ಉಲ್ಲೇಖಿಸಿದ ದತ್ತಾಂಶದ ಪ್ರಕಾರ, 1.65 ಲಕ್ಷಕ್ಕೂ ಹೆಚ್ಚು ಪ್ರಕರಣಗಳನ್ನು ವಿವರವಾದ ಪರಿಶೀಲನೆಗಾಗಿ ಗುರುತಿಸಲಾಗಿದೆ. “ಇವು ಸಂಕೀರ್ಣ ತೆರಿಗೆ ವಂಚನೆ ಪ್ರಕರಣಗಳಲ್ಲ” ಎಂದು ಚಂದ್ರಲೇಖಾ ಗಮನಿಸಿದರು. “ಇವು ಸಲ್ಲಿಸಿದ ನಂತರ ಸರಳ, ನಿರ್ಣಾಯಕ ತಪ್ಪುಗಳನ್ನು ಮಾಡಿದ ಸಾಮಾನ್ಯ ಜನರು.” ಅವರು ಮೂರು ಸಾಮಾನ್ಯ ದೋಷಗಳನ್ನು ವಿವರಿಸಿದ್ದಾರೆ: 1. ಇ-ಪರಿಶೀಲಿಸಲು ವಿಫಲವಾಗಿದೆ ಆಗಸ್ಟ್ 2024 ರ ಹೊತ್ತಿಗೆ ಸುಮಾರು 32 ಲಕ್ಷ ತೆರಿಗೆದಾರರು ಐಟಿಆರ್ಗಳನ್ನು ಸಲ್ಲಿಸಿದರು ಆದರೆ ಅವುಗಳನ್ನು ಎಂದಿಗೂ ಇ-ಪರಿಶೀಲಿಸಿಲ್ಲ. 30 ದಿನಗಳಲ್ಲಿ ಇ-ಪರಿಶೀಲನೆ ಇಲ್ಲದೆ, ರಿಟರ್ನ್ಗಳನ್ನು ಅಮಾನ್ಯವೆಂದು ಪರಿಗಣಿಸಲಾಗುತ್ತದೆ, ಮರುಪಾವತಿಗಳು…
ಬೆಂಗಳೂರು 15: 66/11 ಕೆವಿ ಸಹಕಾರನಗರ ಸ್ಟೇಷನ್ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಹೆಬ್ಬಾಳ ವಿಭಾಗದ ಸಿ-8 ಉಪ ವಿಭಾಗದಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 15.09.2025 ರಿಂದ 29.09.2025 ವರಗೆ ಸಮಯ ಬೆಳಗ್ಗೆ 09:00 ರಿಂದ ಸಂಜೆ 17:00 ಗಂಟೆವರೆಗೆ ಮಧ್ಯಂತರವಾಗಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಎ ಬ್ಲಾಕ್, ಇ ಬ್ಲಾಕ್, ಬಳ್ಳಾರಿ ಮುಖ್ಯ ರಸ್ತೆ, ಜಿ ಬ್ಲಾಕ್, ಎಫ್ ಬ್ಲಾಕ್, ತಲಕಾವೇರಿ ಲೇಔಟ್, ಅಮೃತಹಳ್ಳಿ, ಬಿಜಿಎಸ್ ಲೇಔಟ್, ನವ್ಯ ನಗರ ಬ್ಲಾಕ್, ಶಬರಿ ನಗರ, ಬೈತರಾಯನಪುರ ಜಕ್ಕೂರು ಬಡಾವಣೆ, ಜಿಕೆವಿಕೆ ಲೇಔಟ್, ಜಕ್ಕೂರು ಪ್ಲಾಂಟೇಶನ್, ಯೋಷಾದ ನಗರಾಮೃತಹಳ್ಳಿ, ಡಿ, ಅಮೃತಹಳ್ಳಿ ಬಿ ಬ್ಲಾಕ್, ಸಿ ಬ್ಲಾಕ್, ಸಿಕ್ಯುಎಎಲ್ ಲೇಯೋಟ್, ಡಿ ಬ್ಲಾಕ್, ಇ ಬ್ಲಾಕ್, ಸಂಪಿಗೆಹಳ್ಳಿ, ಅಗ್ರಹಾರ ಗ್ರಾಮ, ಜಯಸೂರ್ಯ ಲೇಔಟ್, ವಿಧಾನಸೌಧ ಲೇಔಟ್ ಸಾಯಿಬಾಬಾ ಲೇಔಟ್, ಟೆಲಿಕಾಂ ಲೇಔಟ್, ಎಂಸಿಇಸಿಎಚ್ಎಸ್ ಲೇಔಟ್, ಎಂಸಿಇಸಿಎಚ್ಎಸ್ ಲೇಔಟ್, ಎಂಸಿ ಪಿಎಚ್ಎಸ್ ಲೇಔಟ್, ಸೂರ್ಯೋದಯ ನಗರ. 2 ,…
ಶಿವಮೊಗ್ಗ: ಜಿಲ್ಲೆಯ ರಿಪ್ಪನ್ ಪೇಟೆ ಸಮೀಪದ ಇತಿಹಾಸ ಪ್ರಸಿದ್ಧ ಅಮ್ಮನಘಟ್ಟ ಜೇನುಕಲ್ಲಮ್ಮ ದೇವಿಯ ಜಾತ್ರಾ ಮಹೋತ್ಸವ ಪ್ರಾರಂಭವಾಗಿದ್ದು ಎರಡನೇ ಮಹಾಲಯ ಜಾತ್ರಾ ಮಹೋತ್ಸವ ಶುಕ್ರವಾರ ವಿಜ್ರಂಭಣೆಯಿಂದ ಜರುಗಿತು. ದೇವಸ್ಥಾನದ ಜಾತ್ರಾ ಸಮಿತಿಯ ಕಾರ್ಯಾಧ್ಯಕ್ಷರಾದ ಕಲಗೋಡು ರತ್ನಾಕರ್ ಅವರು ದೇವಿಯ ದರ್ಶನ ಪಡೆದು ಮಹಾಲಯ ಜಾತ್ರಾ ಮಹೋತ್ಸವದ ಪ್ರಯುಕ್ತ ಮಂಗಳವಾರ (16-09-2025) ಮತ್ತು ಶುಕ್ರವಾರ(19-09-2025) ದಂದು ಹಾಗೂ ನವರಾತ್ರಿಯಲ್ಲಿ ಒಂಬತ್ತು ದಿನ ದೇವಿಗೆ ವಿಶೇಷ ಅಲಂಕಾರದ ಜೊತೆಗೆ ವಿಶೇಷ ಪೂಜೆ ವಿಜೃಂಭಣೆಯಿಂದ ಜರುಗಲಿದೆ. ರಿಪ್ಪನ್ ಪೇಟೆಯ ಅಮ್ಮನಘಟ್ಟದ ಜೇನುಕಲ್ಲಮ್ಮ ದೇವಿಯ ಜಾತ್ರಾ ಮಹೋತ್ಸವದಲ್ಲಿ ಭಕ್ತಾದಿಗಳು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದೇವಿಯ ದರ್ಶನವನ್ನು ಪಡೆಯಬೇಕು ಎಂದು ಜಾತ್ರಾ ಮಹೋತ್ಸವಕ್ಕೆ ಸಮಸ್ತ ಭಕ್ತಾದಿಗಳಿಗೆ ಜಾತ್ರಾ ಸಮಿತಿಯ ಪರವಾಗಿ ಆಹ್ವಾನಿಸಲಾಗಿದೆ. https://kannadanewsnow.com/kannada/rural-journalists-free-bus-pass-conditions-relaxed-cm-media-advisor-k-v-prabhakar-assures/ https://kannadanewsnow.com/kannada/shivamogga-tomorrow-a-student-awareness-program-will-be-held-at-ramakrishna-school-in-ml-halli-sagar-with-santosh-hegde-participating/
ಮೈಸೂರು: ಹಿಂದೂ ಧರ್ಮದಲ್ಲಿ ಅಸಮಾನತೆ ಇದೆ. ಹೀಗಾಗಿ ಹಲವರು ಮತಾಂತರ ಆಗ್ತಿದ್ದಾರೆ. ಆದರೇ ನಾನೆಂದೂ ಮುಸ್ಲೀಂ ಆಗಿ ಮತಾಂತರ ಆಗಲ್ಲ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ. ಇಂದು ಮೈಸೂರಲ್ಲಿ ಸುದ್ದಿಗಾರರೊಂದಿಗೆ ಜಾತಿ ಗಣತಿಯಲ್ಲಿ ಹೊಸ ಜಾತಿಗಳ ಸೇರ್ಪಡೆ ವಿಚಾರವಾಗಿ ಮಾತನಾಡಿ, ನಾನು ಮುಸ್ಲೀಂ ಆಗಿ ಮತಾಂತರ ಆದ್ರೆ ನನ್ನ ಜಾತಿಯೂ ಆ ಧರ್ಮದ ಜೊತೆ ಸೇರುತ್ತೆ ಅಲ್ವ? ನಾನೇನೂ ಮುಸ್ಲಿಂ ಆಗಿ ಮತಾಂತರ ಆಗಲ್ಲ. ಸುಮ್ಮನೆ ಉದಾಹರಣೆಗೆ ಇದನ್ನು ಹೇಳಿದೆ ಅಷ್ಟೇ ಎಂದರು. ಹಿಂದೂ ಧರ್ಮದಲ್ಲಿ ಅಸಮಾನತೆ ಇದೆ. ಹೀಗಾಗಿ ಹಲವರು ಮತಾಂತರ ಆಗ್ತಿದ್ದಾರೆ. ಮತಾಂತರ ಆದವರ ಜಾತಿಯೂ ಮುಖ್ಯ ಎಂದರು. https://kannadanewsnow.com/kannada/shivamogga-tomorrow-a-student-awareness-program-will-be-held-at-ramakrishna-school-in-ml-halli-sagar-with-santosh-hegde-participating/ https://kannadanewsnow.com/kannada/rural-journalists-free-bus-pass-conditions-relaxed-cm-media-advisor-k-v-prabhakar-assures/
ದಾವಣಗೆರೆ: ತೀರಾ ಅಗತ್ಯ ಇರುವ ಬಡ ಪತ್ರಕರ್ತರಿಗೆ ರಿಯಾಯ್ತಿ ದರದಲ್ಲಿ ನಿವೇಶನ ಒದಗಿಸುವ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ವಸತಿ ಸಚಿವರ ಜೊತೆ ಚರ್ಚಿಸುತ್ತೇನೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಅಭಿಪ್ರಾಯಪಟ್ಟರು. ಜಿಲ್ಲಾ ವರದಿಗಾರರ ಕೂಟ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು. ನಾನೂ ಕೂಡ ಗ್ರಾಮೀಣ ಭಾಗದಿಂದಲೇ ಪತ್ರಕರ್ತ ವೃತ್ತಿ ಆರಂಭಿಸಿರುವುದರಿಂದ ಪತ್ರಕರ್ತ ಸಮುದಾಯದ ಸಮಸ್ಯೆ, ಸಂಕಷ್ಟಗಳನ್ನು ಅನುಭವಿಸಿದ್ದೇನೆ. ಹೀಗಾಗಿ ಪತ್ರಕರ್ತ ಸಮುದಾಯದ ಎಲ್ಲಾ ಬೇಡಿಕೆಗಳನ್ನೂ ಹಂತ ಹಂತವಾಗಿ ಈಡೇರಿಸಲಾಗಿದೆ. ಗ್ರಾಮೀಣ ಪತ್ರಕರ್ತರ ಪಾಸ್ ಗೆ ವಿಧಿಸಿರುವ ಷರತ್ತುಗಳನ್ನು ಸಡಿಲಗೊಳಿಸುವ ದಿಕ್ಕಿನಲ್ಲಿ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ ಎಂದರು. ಪತ್ರಕರ್ತರ ಗಿಲ್ಡ್ ಗೆ ಸ್ವಂತ ನಿವೇಶನ ಮತ್ತು ಕಟ್ಟಡ ನಿರ್ಮಿಸಲು ಅಗತ್ಯ ಸಹಕಾರ ನೀಡುವಂತೆ ಗಿಲ್ಡ್ ಪದಾಧಿಕಾರಿಗಳು ಮುಂದಿಟ್ಟ ಬೇಡಿಕೆ ಬಗ್ಗೆಯೂ ಪರಿಶೀಲಿಸಿ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. https://kannadanewsnow.com/kannada/shivamogga-tomorrow-a-student-awareness-program-will-be-held-at-ramakrishna-school-in-ml-halli-sagar-with-santosh-hegde-participating/ https://kannadanewsnow.com/kannada/shivamogga-essay-competition-announced-by-navachetana-forum-in-sagar-winners-names-announced/
ಶಿವಮೊಗ್ಗ: ಸಾಗರದ ಲಿಂಗದಹಳ್ಳಿ ಬಳಿಯಲ್ಲಿರುವಂತ ರಾಮಕೃಷ್ಣ ವಸತಿ ಶಾಲೆಯಲ್ಲಿ ನಾಳೆ ಭ್ರಷ್ಟ ಮುಕ್ತ ಸಮಾಜ ನಿರ್ಮಾಣಕ್ಕೆ ವಿದ್ಯಾರ್ಥಿಗಳ ಜಾಗೃತಿ ಕಾರ್ಯಕ್ರಮ ನಡೆಯಲಿದೆ. ಸುಪ್ರೀಂ ಕೋರ್ಟ್, ಲೋಕಾಯುಕ್ತದ ವಿಶ್ರಾಂತ ನ್ಯಾಯಮೂರ್ತಿ ಸಂತೋಷ್ ಹೆಗಡೆ ಅವರು ಭಾಗಿಯಾಗಿ, ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಶ್ರೀ ರಾಮಕೃಷ್ಣ ಸಮೂಹ ಸಂಸ್ಥೆಗಳ ಸಂಸ್ಥಾಪಕರಾದಂತ ದೇವರಾಜ್ ಮಾಹಿತಿ ಹಂಚಿಕೊಂಡರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದಲ್ಲಿನ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ದಿನಾಂಕ 14-09-2025ರ ಭಾನುವಾರದಂದು ಭ್ರಷ್ಟ ಮುಕ್ತ ಸಮಾಜ ನಿರ್ಮಾಣಕ್ಕೆ ವಿದ್ಯಾರ್ಥಿ ಜಾಗೃತಿ ಕಾರ್ಯಕ್ರಮವನ್ನು ಶ್ರೀ ರಾಮಕೃಷ್ಣ ವಸತಿ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಹಿಂದೆ ಹೈಕೋರ್ಟ್ ನ್ಯಾಯಮೂರ್ತಿ ಹೆಚ್.ಪಿ ಸತೀಶ್ ಅವರನ್ನು ಕರೆಯಿಸಿ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವಂತ ಕೆಲಸವನ್ನು ನಮ್ಮ ಶಾಲೆ ವತಿಯಿಂದ ಮಾಡಲಾಗಿತ್ತು ಎಂದರು. ನಾಳೆ ಬೆಳಗ್ಗೆ 11 ಗಂಟೆಗೆ ಎಂಎಲ್ ಹಳ್ಳಿಯ ಶಾಲಾ ಆವರಣದಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು, ಸುಪ್ರೀಂ ಕೋರ್ಟ್, ಲೋಕಾಯುಕ್ತದ ವಿಶ್ರಾಂತ ನ್ಯಾಯಾಧೀಶರಾದಂತ ಸಂತೋಷ್ ಹೆಗಡೆ…
ಶಿವಮೊಗ್ಗ: ಸಾಗರದ ನವಚೇತನ ವೇದಿಕೆಯಿಂದ ಶಿಕ್ಷಕರ ದಿನಾಚರಣೆ ಪ್ರಯುಕ್ತ ಇಂದಿನ ಶಿಕ್ಷಣ ವ್ಯವಸ್ಥೆ ಎಂಬ ವಿಷಯ ಕುರಿತು ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿತ್ತು. ಈ ಪ್ರಬಂಧ ಸ್ಪರ್ದೆಯಲ್ಲಿ ವಿಜೇತರಾದಂತ ವಿತೇತರ ಹೆಸರನ್ನು ನವಚೇತನ ವೇದಿಕೆ ಅಧ್ಯಕ್ಷ ಪ್ರಶಾಂತ್ ಘೋಷಿಸಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನವಚೇತನ ವೇದಿಕೆಯಿಂದ 2025-26ನೇ ಸಾಲಿನ ಶಿಕ್ಷಕ ದಿನಾಚರಣೆಯ ಅಂಗವಾಗಿ ಇಂದಿನ ಶಿಕ್ಷಣ ವ್ಯವಸ್ಥೆಯ ಕುರಿತಂತೆ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಕೈ ಬರಹದಲ್ಲೇ ಕನ್ನಡದಲ್ಲೇ ಪ್ರಬಂಧ ಬರೆದು ಕಳುಹಿಸಲು ಕೋರಲಾಗಿತ್ತು. ಅದರಂತೆ ಸುಮಾರು 300 ಜನರು ಪ್ರಬಂಧ ಬರೆದು ಕಳುಹಿಸಿದ್ದರು ಎಂದರು. ಸಾಗರ ತಾಲ್ಲೂಕಿನವರು ಅಲ್ಲದೇ ಹಾಸನ, ಮೈಸೂರು, ಉಡುಪಿ, ಬೇಳಗಾವಿ, ಸಿಂದಗಿ, ಉತ್ತರ ಕರ್ನಾಟಕ ಭಾಗದವರು ಪ್ರಬಂಧ ಸ್ಪರ್ಧೆಯಲ್ಲಿ ಭಾಗಿಯಾಗಿದ್ದರು. ಜೊತೆಗೆ ಹೊರ ರಾಜ್ಯದವರು ಪ್ರಬಂಧಗಳನ್ನು ಕಳುಹಿಸಿದ್ದರು. ಇವುಗಳನ್ನು ಸಾಗರದ ಇಂದಿರಾ ಗಾಂಧಿ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ.ಅಶೋಕ್ ರೇವಣಕರ್ ಮೌಲ್ಯ ಮಾಪನ ನಡೆಸಿದರು…
ಬೆಂಗಳೂರು: ಕರ್ನಾಟಕದಲ್ಲಿ ಪರಿಟೋನೀಯಲ್ ಡಯಾಲಿಸಿಸ್ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆಯನ್ನು ನೀಡಲಾಗಿದೆ. ಈ ಕಾರ್ಯಕ್ರಮದ ಅಡಿಯಲ್ಲಿ ಡಯಾಲಿಸಿಸ್ ರೋಗಿಗಳಿಗೆ ಮನೆಯಲ್ಲೇ ಚಿಕಿಸ್ತೆ ದೊರೆಯುವಂತೆ ಆಗಲಿದೆ. ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆಯಿಂದ ನಡವಳಿಯನ್ನು ಹೊರಡಿಸಿದ್ದು, ಅಭಿಯಾನ ನಿರ್ದೇಶಕರು, ರಾಷ್ಟ್ರೀಯ ಆರೋಗ್ಯ ಅಭಿಯಾನ ಇವರಿಂದ ಸ್ವೀಕೃತವಾದ ಏಕಕಡತ ಸಂಖ್ಯೆ: HFWS-DLSOFILE/20/2025(1780906)ರಲ್ಲಿ ಕರ್ನಾಟಕದಲ್ಲಿ ಮೂತ್ರಪಿಂಡದ ಕಾಯಿಲೆ ಹಾಗೂ ಎಂಡ್-ಸೈಜ್ ರಿನಲ್ ಕಾಯಿಲೆ (ESRD) ಗಳು ಹೆಚ್ಚಾಗುತ್ತಿದ್ದು, ಇದರಿಂದ ಆರೋಗ್ಯ ವ್ಯವಸ್ಥೆಗೆ ದೊಡ್ಡ ಸವಾಲಾಗಿ ಎದುರಾಗುತ್ತಿದೆ. ಮೂತ್ರಪಿಂಡ ಕಾಯಿಲೆಗೆ ಮುಖ್ಯವಾದ Renal Replacement Therapy (RRT) ಆಗಿರುವ ಹೀಮೊಡಯಾಲಿಸಿಸ್ ಸೌಲಭ್ಯಗಾಗಿ ವಿಶೇಷ ಮೂಲಸೌಕರ್ಯ ಮತ್ತು ಕಡ್ಡಾಯವಾಗಿ ಆಸ್ಪತ್ರೆಗೆ ಭೇಟಿ ಮಾಡಬೇಕಾಗಿರುತ್ತದೆ. ಗಂಟೋನೀಯಲ್ ಡಯಾಲಿಸಿಸ್ (FD) ಒಂದು ಸುಲಭವಾಗಿ ಮಾಡಬಹುದಾದ ಮತ್ತು ರೋಗಿಗಳಿಗೆ ಅನುಕೂಲಕರವಾದ ಪರ್ಯಾಯ ಚಿಕಿತ್ಸೆ ವಿಭಾಗವಾಗಿರುತ್ತದೆ. ಸದರಿ ವೆರಿಟೋನೀಯಲ್ ಡಯಾಲಿಸಿಸ್ (PD) ಅನ್ನು ಮನೆಯಲ್ಲಿಯ ಚಿಕಿತ್ಸೆ ನಡೆಸಲು ಸಾಧ್ಯವಾಗುವುದರಿಂದ ಆಸ್ಪತ್ರೆಗೆ ಭೇಟಿನೀಡುವ ಅವಶ್ಯಕತೆ ಕಡಿಮೆಯಾಗುತ್ತದೆ. ಪ್ರಧಾನಮಂತ್ರಿ ರಾಷ್ಟ್ರೀಯ ಡಯಾಲಿಸಿಸ್ ಕಾರ್ಯಕ್ರಮದಡಿಯಲ್ಲಿ (PMNDP) ಕರ್ನಾಟಕದಲ್ಲಿ ಎಲ್ಲಾ…













