Author: kannadanewsnow09

ಬೆಂಗಳೂರು: ನಟ ದರ್ಶನ್ ಅಂಡ್ ಟೀಂನಿಂದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಎಂಬಾತನನ್ನು ಕೊಲೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ 13 ಆರೋಪಿಗಳನ್ನು ಪೊಲೀಸರ ವಶಕ್ಕೆ ಕೋರ್ಟ್ ನೀಡಿದೆ. ಈ ಆರೋಪಿಗಳನ್ನು ಮೂರು ಟೀಂ ಮಾಡಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ನಿನ್ನೆ ಕೋರ್ಟ್ ಗೆ ಹಾಜರುಪಡಿಸಿ, ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ 13 ಆರೋಪಿಗಳನ್ನು ಪೊಲೀಸರು ತಮ್ಮ ವಶಕ್ಕೆ ಹೆಚ್ಚಿನ ವಿಚಾರಣೆಗಾಗಿ ಪಡೆದಿದ್ದರು. ಈಗಾಗಲೇ ಸ್ಥಳ ಮಹಜರು ಪ್ರಕ್ರಿಯೆಯನ್ನು ನಡೆಸುತ್ತಿರೋ ಅನ್ನಪೂರ್ಣೇಶ್ವರಿ ನಗರ ಠಾಣೆಯ ಪೊಲೀಸರು ಹಲವರನ್ನು ವಿಚಾರಣೆಗೆ ಒಳಪಡಿಸುತ್ತಿದ್ದಾರೆ. ಕೊಲೆ ಪ್ರಕರಣದಲ್ಲಿ ಪ್ಲಾನ್ ಮಾಡಿ ಉತ್ತರ ನೀಡೋ ಸಾಧ್ಯತೆಯ ಬಗ್ಗೆ ಊಹೆ ಮಾಡಿರುವಂತ ಪೊಲೀಸರು, ಕೊಲೆ ಆರೋಪಿಗಳನ್ನು ಮೂರು ಟೀಂ ಮಾಡಿ, ವಿಚಾರಣೆ ನಡೆಸೋದಕ್ಕೆ ತಯಾರಿ ನಡೆಸಿದ್ದಾರೆ. ಪ್ಲಾನ್ ಮಾಡಿ ಉತ್ತರ ಕೊಡೋದಕ್ಕೆ ಅವಕಾಶ ನೀಡದಂತೆ ಮೂರು ಟೀಂಗಳನ್ನು ನಟ ದರ್ಶನ್ ಸೇರಿದಂತೆ 13 ಆರೋಪಿಗಳನ್ನು ಮಾಡಿ ವಿಚಾರಣೆಯನ್ನು ಪೊಲೀಸರು ನಡೆಸುತ್ತಿದ್ದಾರೆ ಎನ್ನಲಾಗುತ್ತಿದೆ.…

Read More

ಕುವೈತ್: ಕುವೈತ್ನ ದಕ್ಷಿಣ ಮಂಗಾಫ್ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಬೆಂಕಿಯಲ್ಲಿ ಕನಿಷ್ಠ 35 ಜನರು ಸಾವನ್ನಪ್ಪಿದ್ದಾರೆ ಎಂದು ಸರ್ಕಾರಿ ಸ್ವಾಮ್ಯದ ಕುವೈತ್ ಸುದ್ದಿ ಸಂಸ್ಥೆ (ಕುನಾ) ತಿಳಿಸಿದೆ. ಬುಧವಾರ ಮುಂಜಾನೆ ಬೆಂಕಿ ಕಾಣಿಸಿಕೊಂಡಿದ್ದು, ಕಟ್ಟಡವು ಬೆಂಕಿಗೆ ಆಹುತಿಯಾಗಿದೆ. ಮುಂಜಾನೆ ಪ್ರಾರಂಭವಾದ ಬೆಂಕಿ ಬೇಗನೆ ಕಟ್ಟಡದಾದ್ಯಂತ ಹರಡಿತು, ಅನೇಕರನ್ನು ಒಳಗೆ ಸಿಲುಕಿಸಿತು. ಬೆಂಕಿಯಲ್ಲಿ ಸಾವನ್ನಪ್ಪಿದವರಲ್ಲಿ ಐವರು ಕೇರಳಿಗರು ಸೇರಿದ್ದಾರೆ ಎಂದು ಒನ್ಮನೋರಮಾ ವರದಿ ಮಾಡಿದೆ. ಬೆಂಕಿಯ ಕಾರಣದ ಬಗ್ಗೆ ತನಿಖೆಯನ್ನು ಪ್ರಾರಂಭಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಂಕಿಯಿಂದಾಗಿ ಸುಮಾರು 43 ಜನರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಭಾರತದ ಐವರು ಸೇರಿದಂತೆ ಈವರೆಗೆ 35 ಮಂದಿ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗೋ ಸಾಧ್ಯತೆ ಇದೆ. https://kannadanewsnow.com/kannada/actress-harshika-ponacha-assault-case-court-rejects-anticipatory-bail-plea-of-accused/ https://kannadanewsnow.com/kannada/encounter-in-jammu-and-kashmirs-kathua-leaves-2-militants-1-crpf-personnel-dead/

Read More

ಬೆಂಗಳೂರು: ನಟಿ ಹರ್ಷಿಕಾ ಪೊಣಚ್ಚ ಹಾಗೂ ಭುವನ್ ಅವರ ಕಾರು ತಡೆದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೇ, ಹಲ್ಲೆ ನಡೆಸಿದ್ದರ ಸಂಬಂಧ ನಾಲ್ವರು ಆರೋಪಿಗಳ ವಿರುದ್ಧ ಕೇಸ್ ದಾಖಲಾಗಿತ್ತು. ಈ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದಂತ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ನಟಿ ಹರ್ಷಿಕಾ ಪೊಣಚ್ಚ, ಭುನವ್ ಪೊನ್ನಣ್ಣ ಮೇಲೆ ಹಲ್ಲೆ ಪ್ರಕರಣ ಸಂಬಂಧ ನಾಲ್ವರು ಆರೋಪಿಗಳು ನಿರೀಕ್ಷಣಾ ಜಾಮೀನಿಗಾಗಿ ಹೈಕೋರ್ಟ್ ಗೆ ಅರ್ಜಿಯನ್ನು ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದಂತ ಹೈಕೋರ್ಟ್ ನ್ಯಾಯಪೀಠವು, ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ಅಂದಹಾಗೇ ಬೆಂಗಳೂರಿನ ಫ್ರೆಜರ್ ಟೌನ್ ಪ್ರದೇಶದ ಪುಲಕೇಶಿ ನಗರದ ಮಸೀದಿ ರಸ್ತೆಯಲ್ಲಿ ಕಾರು ತಡೆದಿದ್ದಂತ ಆರೋಪಿಗಳು ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ನಡೆಸಿದ್ದರು. ಈ ಸಂಬಂಧ ಫರ್ವೇಜ್ ಆಲಿ ಫಹೀಮ್, ಶಾಬಾಜ್ ಖಾನ್, ದನೀಶ್ ಆಲಿ ಫರ್ವೇಜ್ ಸೇರಿದಂತೆ ನಾಲ್ವರ ವಿರುದ್ಧ ಕೇಸ್ ದಾಖಲಾಗಿತ್ತು. ಈ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನಿಗಾಗಿ ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. https://kannadanewsnow.com/kannada/encounter-in-jammu-and-kashmirs-kathua-leaves-2-militants-1-crpf-personnel-dead/ https://kannadanewsnow.com/kannada/at-least-35-people-including-four-indians-killed-in-kuwait-fire/

Read More

ನವದೆಹಲಿ: ಕಥುವಾ ಜಿಲ್ಲೆಯ ಕೂಟಾ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆಯ ಸಮಯದಲ್ಲಿ ಭಯೋತ್ಪಾದಕರೊಂದಿಗಿನ ಎನ್ಕೌಂಟರ್ನಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ಸಿಬ್ಬಂದಿ ಹುತಾತ್ಮರಾಗಿದ್ದಾರೆ. ಕೆಲವೇ ಗಂಟೆಗಳ ನಂತರ, ಜಮ್ಮು ಮತ್ತು ಕಾಶ್ಮೀರ ಪೊಲೀಸರು ಬುಧವಾರ ಈ ಪ್ರದೇಶದಲ್ಲಿ ಅಡಗಿದ್ದ ಇಬ್ಬರು ಭಯೋತ್ಪಾದಕನನ್ನು ಹೊಡೆದುರುಳಿಸಲಾಗಿದೆ. ಹತ್ಯೆಗೀಡಾದ ಉಗ್ರ ಮಂಗಳವಾರ ರಾತ್ರಿ ತನ್ನ ಸಹಚರನ ಸಾವಿನ ನಂತರ ಪರಾರಿಯಾಗುವಲ್ಲಿ ಯಶಸ್ವಿಯಾಗಿದ್ದ. ನಂತರ ಪೊಲೀಸರು ಮತ್ತು ಅರೆಸೈನಿಕ ಪಡೆಗಳು ಕೂಟಾ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದವು. ಇಬ್ಬರು ಉಗ್ರರು ಕಳೆದ ರಾತ್ರಿ ಗ್ರಾಮದ ಮನೆಯೊಂದಕ್ಕೆ ನುಗ್ಗಿ ನೀರು ಕೇಳಿದ್ದರು, ನಂತರ ಅವರು ಗುಂಡು ಹಾರಿಸಿ ನಾಗರಿಕನನ್ನು ಗಾಯಗೊಳಿಸಿದ್ದರು. ಬುಧವಾರ ಬೆಳಿಗ್ಗೆ, ಶೋಧ ಕಾರ್ಯಾಚರಣೆಯ ಸಮಯದಲ್ಲಿ, ಭಯೋತ್ಪಾದಕರು ಅರಣ್ಯ ಪ್ರದೇಶದಿಂದ ಜಂಟಿ ತಂಡದ ಮೇಲೆ ಗುಂಡು ಹಾರಿಸಿ ಸಿಆರ್ಪಿಎಫ್ ಸಿಬ್ಬಂದಿಯನ್ನು ಕೊಂದಿದ್ದರು. ಅವರು ಹಾರಿಸಿದ ಕೆಲವು ಗುಂಡುಗಳು ಕಥುವಾ ಎಸ್ಎಸ್ಪಿ ಅನಾಯತ್ ಅಲಿ ಚೌಧರಿ ಅವರ ವಾಹನ ಮತ್ತು ಜಮ್ಮು-ಸಾಂಬಾ-ಕಥುವಾ ವಲಯದ ಡಿಐಜಿ ಡಾ.ಸುನಿಲ್ ಗುಪ್ತಾ ಅವರ…

Read More

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ 13 ಆರೋಪಿಗಳನ್ನು ಬಂಧಿಸಲಾಗಿದೆ. ಅವರನ್ನು ತಮ್ಮ ವಶಕ್ಕೆ ಪಡೆದಿರುವಂತ ಪೊಲೀಸರು, ವಿಚಾರಣೆ ನಡೆಸುತ್ತಿದ್ದಾರೆ. ಇಂದು ಅನ್ನಪೂರ್ಣೇಶ್ವರಿ ನಗರ ಠಾಣೆಗೆ ದರ್ಶನ್ ಅಭಿಮಾನಿಗಳ ದಂಡೇ ನೆರೆದಿದ್ದು, ಹೈಡ್ರಾಮಾವೇ ನಡೆದಿದೆ. ಹೀಗಾಗಿ ಪೊಲೀಸರಿಂದ ಅವರನ್ನು ನಿಯಂತ್ರಿಸೋದಕ್ಕೆ ಲಾಠಿ ಚಾರ್ಜ್ ಕೂಡ ಮಾಡಲಾಗಿದೆ. ಬೆಂಗಳೂರಿಗೆ ಚಿತ್ರದುರ್ಗ ಮೂಲಕ ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿಕೊಂಡು ಬಂದು, ಆತ ಮೇಲೆ ಹಲ್ಲೆ ನಡೆಸಿ, ಹತ್ಯೆಗೈದು, ಮೋರಿಗೆ ಎಸೆದಂತ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ 13 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ನಿನ್ನೆ ಬೆಂಗಳೂರಿನ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹಾಜರುಪಡಿಸಿ, ಹೆಚ್ಚಿನ ವಿಚಾರಣೆಗಾಗಿ 6 ದಿನಗಳ ಕಾಲ ತಮ್ಮ ವಶಕ್ಕೆ ಪಡೆದಿದ್ದಾರೆ. ಇದೀಗ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ 13 ಆರೋಪಿಗಳನ್ನು ತೀವ್ರ ವಿಚಾರಣೆ ನಡೆಸಲಾಗುತ್ತಿದೆ. ಈ ಸಂದರ್ಭದಲ್ಲಿ ತಮ್ಮ ನೆಚ್ಚಿನ ನಟನನ್ನು ನೋಡೋದಕ್ಕೆ ಪೊಲೀಸ್ ಠಾಣೆಯ ಮುಂದೆ ಫ್ಯಾನ್ಸ್ ಭಾರೀ ದಂಡೇ ನೆರೆದಿದೆ. ಈ…

Read More

ಬೆಂಗಳೂರು: ಕರ್ತವ್ಯದ ಅವಧಿಯಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿ, ಸಿಬ್ಬಂದಿ ಮೊಬೈಲ್ ಬಳಸುವಂತಿಲ್ಲ. ಆಸ್ಪತ್ರೆಗಳಲ್ಲಿ ಕರ್ತವ್ಯದ ಅವಧಿಯಲ್ಲಿ ಮೊಬೈಲ್ ಬಳಕೆಯನ್ನು ನಿಷೇಧಿಸಿ ರಾಜ್ಯ ಸರ್ಕಾರ ಖಡಕ್ ಆದೇಶ ಹೊರಡಿಸಿದೆ. ಈ ಸಂಬಂಧ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ದೂರೊಂದನ್ನು ನೀಡಲಾಗಿತ್ತು. ಆ ದೂರಿನ ಅನ್ವಯ ಆರೋಗ್ಯ ಇಲಾಖೆಯಿಂದ ಆಸ್ಪತ್ರೆಗಳಲ್ಲಿ ಕರ್ತವ್ಯದ ಅವಧಿಯಲ್ಲಿ ಅಧಿಕಾರಿ, ಸಿಬ್ಬಂದಿ ಮೊಬೈಲ್ ಬಳಸುವಂತಿಲ್ಲ ಅಂತ ಆದೇಶ ಮಾಡಿದೆ. ಕೆಲ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವಂತ ವೈದ್ಯರು, ಶುಶ್ರೂಷಕರು, ಗ್ರೂಪ್-ಡಿ ಸಿಬ್ಬಂದಿಗಳು ರೋಗಿಗಳನ್ನು ಉಪಚಸುವಲ್ಲಿ ನಿರ್ಲಕ್ಷ್ಯ ತೋರಿಸುತ್ತಿದ್ದಾರೆ. ಚಿಕಿತ್ಸೆ ನೀಡದೇ ಮೊಬೈಲ್ ನೋಡುತ್ತಿರುವುದು ಆರೋಗ್ಯ ಸಚಿವರ ಗಮನಕ್ಕೆ ಬಂದಿದೆ ಎಂದು ಹೇಳಿದೆ. ಈ ಹಿನ್ನಲೆಯಲ್ಲಿ ರಾಜ್ಯದ ಸರ್ಕಾರಿ ಆಸ್ಪತ್ರೆಯ ಎಲ್ಲಾ ವೈದ್ಯರು ಹಾಗೂ ಸಿಬ್ಬಂದಿ ವರ್ಗದವರಿಗೆ ತಿಳಿಯಪಡಿಸುವುದೇನೆಂದರೇ, ಆಸ್ಪತ್ರೆಯ ಕರ್ತವ್ಯದ ಅವಧಿಯಲ್ಲಿ ಕರೆಗಳನ್ನು ಸ್ವೀಕರಿಸಲು ಮತ್ತು ಮಾಡುವಾಗ ಮಾತ್ರವೇ ಮೊಬೈಲ್ ಬಳಸುವುದು. ಇದರ ಹೊರತಾಗಿ ಇನ್ನಿತರೆ ಅಂದರೆ ಸಾಮಾಜಿಕ ಚಾಲತಾಣಕ್ಕಾಗಿ…

Read More

ನವದೆಹಲಿ: ಲೆಫ್ಟಿನೆಂಟ್ ಜನರಲ್ ಉಪೇಂದ್ರ ದ್ವಿವೇದಿ ಅವರನ್ನು ಮುಂದಿನ ಸೇನಾ ಮುಖ್ಯಸ್ಥರನ್ನಾಗಿ ಕೇಂದ್ರ ಸರ್ಕಾರ ನೇಮಿಸಿದೆ. ಜನರಲ್ ದ್ವಿವೇದಿ ಅವರು ಜೂನ್ 30 ರಂದು ಸೇನಾ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ರಕ್ಷಣಾ ಸಚಿವಾಲಯದ ವಕ್ತಾರ ಎ ಭರತ್ ಭೂಷಣ್ ಎಕ್ಸ್ (ಹಿಂದೆ ಟ್ವಿಟರ್) ನಲ್ಲಿ ತಿಳಿಸಿದ್ದಾರೆ. https://twitter.com/SpokespersonMoD/status/1800577330286600198

Read More

ಕೆಎನ್ಎನ್ ಸ್ಪೋರ್ಟ್ಸ್ ಡೆಸ್ಕ್: ನ್ಯೂಯಾರ್ಕ್ನ ನಸ್ಸೌ ಕೌಂಟಿ ಇಂಟರ್ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಮಂಗಳವಾರ (ಜೂನ್ 11) ಪಾಕಿಸ್ತಾನ ಮತ್ತು ಕೆನಡಾ ನಡುವಿನ 2024 ರ ಟಿ 20 ವಿಶ್ವಕಪ್ ಪಂದ್ಯದ ಸಮಯದಲ್ಲಿ ಹ್ಯಾರಿಸ್ ರವೂಫ್ ಇತಿಹಾಸದ ಪುಸ್ತಕಗಳಲ್ಲಿ ತಮ್ಮ ಹೆಸರನ್ನು ಬರೆದಿದ್ದಾರೆ. ಅದೇ ಐ20ಐ ಪಂದ್ಯಾವಳಿಯಲ್ಲಿ ಅತಿ ವೇಗದಲ್ಲಿ ವಿಕೆಟ್ ಪಡೆದ ವೇಗದ ಬೌಲರ್ ಎಂಬುದಾಗಿದೆ. ಶ್ರೇಯಸ್ ಮೊವ್ವಾ ಮತ್ತು ರವೀಂದರ್ ಪಾಲ್ ಸಿಂಗ್ ಅವರ ವಿಕೆಟ್ ಗಳನ್ನು ಪಡೆಯಲು ರವೂಫ್ ಎರಡು ವಿಕೆಟ್ ಓವರ್ ಮೂಲಕ ಪಂದ್ಯವನ್ನು ಪಾಕಿಸ್ತಾನದ ಪರವಾಗಿ ತಿರುಗಿಸಿದರು. ಟಾಸ್ ಗೆದ್ದ ಬಾಬರ್ ಅಜಮ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡ ನಂತರ, ರವೂಫ್ ಅವರನ್ನು ಪವರ್ಪ್ಲೇ ಕೊನೆಯಲ್ಲಿ ಆಕ್ರಮಣಕ್ಕೆ ಕರೆತರಲಾಯಿತು. ಆದಾಗ್ಯೂ, ಅವರ ಮೊದಲ ಓವರ್ 13 ರನ್ಗಳನ್ನು ಬಿಟ್ಟುಕೊಟ್ಟಿದ್ದರಿಂದ ಮರೆಯಲಾಗದು ಎಂದು ಸಾಬೀತುಪಡಿಸಿತು. ಆದಾಗ್ಯೂ, ಅವರು 10 ನೇ ಓವರ್ನಲ್ಲಿ ಕೇವಲ ಮೂರು ರನ್ಗಳನ್ನು ನೀಡಿ ಎರಡು ವಿಕೆಟ್ಗಳನ್ನು ಪಡೆಯುವ ಮೂಲಕ ತಿದ್ದುಪಡಿಗಳನ್ನು ಮಾಡಿದರು. ಇತಿಹಾಸ…

Read More

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯ ಹಿರಾನಗರ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಹಾಗೂ ಭಯೋತ್ಪಾದಕರ ನಡುವೆ ಗುಂಡಿನ ದಾಳಿ ನಡೆದಿದೆ ಎಂಬುದಾಗಿ ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಸೆಡಾ ಸೋಹಲ್ ಗ್ರಾಮದ ನಿವಾಸಿಗಳು ಹತ್ತಿರದಲ್ಲಿ ಎರಡರಿಂದ ಮೂರು ಬಂದೂಕುಧಾರಿಗಳನ್ನು ನೋಡಿದ ನಂತರ ಅಧಿಕಾರಿಗಳಿಗೆ ಮಾಹಿತಿ ನೀಡಿದರು. ಬಂದೂಕುಧಾರಿಗಳು ಹತ್ತಿರದ ಕಾಡುಗಳಿಗೆ ಪರಾರಿಯಾಗುವ ಮೊದಲು ಗುಂಡು ಹಾರಿಸಿದ್ದಾರೆ ಎಂದು ಆರೋಪಿಸಲಾಗಿದೆ. ಶಂಕಿತ ವ್ಯಕ್ತಿಗಳನ್ನು ಪತ್ತೆಹಚ್ಚಲು ಪೊಲೀಸರು ಮತ್ತು ಗಡಿ ಭದ್ರತಾ ಪಡೆ (ಬಿಎಸ್ಎಫ್) ಈ ಪ್ರದೇಶದಲ್ಲಿ ಜಂಟಿ ಕಾರ್ಯಾಚರಣೆಯನ್ನು ಪ್ರಾರಂಭಿಸಿವೆ. ಈ ಬಗ್ಗೆ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ. ಜಮ್ಮುವಿನ ರಿಯಾಸಿ ಜಿಲ್ಲೆಯಲ್ಲಿ ಯಾತ್ರಾರ್ಥಿಗಳಿಂದ ತುಂಬಿದ್ದ ಬಸ್ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ ಎರಡು ದಿನಗಳ ನಂತರ ಈ ಘಟನೆ ನಡೆದಿದೆ. ಭಯೋತ್ಪಾದಕ ದಾಳಿಯ ಹಿಂದೆ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾ ಕೈವಾಡವಿದೆ ಎಂದು ಭದ್ರತಾ ಅಧಿಕಾರಿಗಳು ಶಂಕಿಸಿದ್ದಾರೆ. ಭಯೋತ್ಪಾದಕರನ್ನು ಪತ್ತೆಹಚ್ಚುವ ವ್ಯಾಪಕ ಪ್ರಯತ್ನಗಳು ಮಂಗಳವಾರ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಭದ್ರತಾ ಸಿಬ್ಬಂದಿಯ 11 ತಂಡಗಳು…

Read More

ನವದೆಹಲಿ: ಮೋದಿ 3.0 ಸಚಿವ ಸಂಪುಟ ಸೇರಿದ್ದಂತ ಹೆಚ್.ಡಿ ಕುಮಾರಸ್ವಾಮಿಯವರು ತಾವು ಬೃಹತ್ ಕೈಗಾರಿಕಾ ಖಾತೆ ಸಚಿವರಾಗಿ ಅಧಿಕಾರ ವಹಿಸಿಕೊಂಡಿರೋದಾಗಿ ತಿಳಿಸಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಮಾನ್ಯ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರು ವಿಶ್ವಾಸವಿರಿಸಿ ಹಂಚಿಕೆ ಮಾಡಿರುವ ಕೇಂದ್ರ ಬೃಹತ್ ಕೈಗಾರಿಕೆ ಖಾತೆಯ ಸಚಿವರಾಗಿ ಅಧಿಕಾರ ವಹಿಸಿಕೊಳ್ಳಲಾಯಿತು ಎಂದು ತಿಳಿಸಿದ್ದಾರೆ. ಭಾರತವು ಜಗತ್ತಿನ 3ನೇ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮುವ ಸಂಕಲ್ಪ ತೊಟ್ಟಿರುವ ಪ್ರಧಾನಿಗಳ ಕನಸು ನನಸು ಮಾಡುವುದು, ಕೈಗಾರಿಕಾ ಕ್ಷೇತ್ರದಲ್ಲಿ ಉತ್ಪಾದನೆಯನ್ನು ಗಣನೀಯವಾಗಿ ಹೆಚ್ಚಿಸಿ ದೇಶಾದ್ಯಂತ ವಿಸ್ತೃತವಾಗಿ ಉದ್ಯೋಗ ಸೃಷ್ಟಿಸುವ ನಿಟ್ಟಿನಲ್ಲಿ ಕ್ರಿಯಾಶೀಲವಾಗಿ ಶ್ರಮಿಸಲಾಗುವುದು ಎಂದು ಹೇಳಿದ್ದಾರೆ. ಈ ಸಂದರ್ಭದಲ್ಲಿ ಸಚಿವಾಲಯದ ಅಧಿಕಾರಿಗಳ ಜತೆ ಸಭೆ ನಡೆಸಲಾಯಿತು ಅಂತ ಮಾಹಿತಿ ಹಂಚಿಕೊಂಡಿದ್ದಾರೆ. https://twitter.com/hd_kumaraswamy/status/1800545563378897033 https://kannadanewsnow.com/kannada/hunter-biden-found-guilty-of-all-three-charges-in-historic-federal-gun-trial/ https://kannadanewsnow.com/kannada/health-minister-dinesh-gundu-rao-launches-10-day-yoga-utsav-programme/

Read More