Author: kannadanewsnow09

ಬೆಂಗಳೂರು: ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿ ಪಿ ಯೋಗೇಶ್ವರ್ ಅವರು ನಾಮಪತ್ರ ಸಲ್ಲಿಸಿದ ನಂತರ ಅವರ ಪುತ್ರಿ ನಿಶಾ ಯೋಗೇಶ್ವರ್ ಅವರು ಡಿಸಿಎಂ ಡಿ ಕೆ ಶಿವಕುಮಾರ್ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳ ಮೂಲಕ ಮಾಡುತ್ತಿರುವ ಆಪಾದನೆಗಳು ಸತ್ಯಕ್ಕೆ ದೂರವಾಗಿವೆ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಮಾಧ್ಯಮ ಸಲಹೆಗಾರ ಪಿ.ತ್ಯಾಗರಾಜ್ ಸ್ಪಷ್ಟ ಪಡಿಸಿದ್ದಾರೆ. ಇಂದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಕಳೆದ ಲೋಕಸಭೆ ಚುನಾವಣೆಗೆ ಮೊದಲು ನಿಶಾ ಯೋಗೇಶ್ವರ್ ಅವರು ಕುಮಾರಕೃಪಾದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಒಮ್ಮೆ ಭೇಟಿ ಮಾಡಿದ್ದರು ಎಂದಿದ್ದಾರೆ. ಆಗ ಡಿಸಿಎಂ ಅವರು ತಂದೆ-ಮಗಳ ವಿಚಾರದಲ್ಲಿ ತಾನು ತಲೆ ಹಾಕುವುದಿಲ್ಲ. ಅಪ್ಪ-ಮಗಳನ್ನು ದೂರ ಮಾಡಿದ ಅಪಕೀರ್ತಿಗೆ ನಾನು ಒಳಗಾಗಲು ಬಯಸುವುದಿಲ್ಲ. ನಿಮ್ಮ ಕುಟುಂಬ ವಿಚಾರದಲ್ಲಿ ನಾನು ತಲೆ ಹಾಕಿಲ್ಲ, ಈಗಲೂ ಹಾಕುವುದಿಲ್ಲ. ಮುಂದೆಯೂ ಹಾಕುವುದಿಲ್ಲ. ನಿಮ್ಮ ತಂದೆಯ ಜತೆ ಮಾತನಾಡಿ ನೀವೇ ಸಮಸ್ಯೆಯನ್ನು ಬಗೆಹರಿಸಿಕೊಳ್ಳಿ ಎಂದು ಬುದ್ದಿವಾದ ಹೇಳಿ ಕಳುಹಿಸಿದ್ದರು ಎಂದು…

Read More

ಬಳ್ಳಾರಿ : ಸಂಡೂರು ವಿಧಾನಸಭೆ ಉಪಚುನಾವಣೆಗೆ ಚುನಾವಣಾ ವೆಚ್ಚ ಉಸ್ತುವಾರಿ ಮಾಡಲು ಚುನಾವಣಾ ಆಯೋಗದಿಂದ ಮುರಳಿರಾವ್ ಆರ್.ಜೆ ಅವರನ್ನು ಚುನಾವಣಾ ವೆಚ್ಚದ ವೀಕ್ಚಕರನ್ನಾಗಿ ನಿಯೋಜಿಸಲಾಗಿದ್ದು, ಚುನಾವಣಾ ವೆಚ್ಚಕ್ಕೆ ಸಂಬಂಧಿಸಿದ ದೂರುಗಳೇನಾದರೂ ಇದ್ದಲ್ಲಿ ಸಾರ್ವಜನಿಕರು ಇವರ ಮೊ.9141142754 ಗೆ ಸಂಪರ್ಕಿಸಬಹುದು ಎಂದು ಸಂಡೂರು ವಿಧಾಸಭೆ ಉಪಚುನಾವಣೆಯ ಚುನಾವಣಾಧಿಕಾರಿ ರಾಜೇಶ್.ಹೆಚ್.ಡಿ ಅವರು ತಿಳಿಸಿದ್ದಾರೆ. ಸಂಡೂರು ವಿಧಾನಸಭೆ ಉಪಚುನಾವಣೆ-2024ಕ್ಕೆ ಒಟ್ಟು 13 ನಾಮಪತ್ರ ಸಲ್ಲಿಕೆ ಸಂಡೂರು ವಿಧಾನಸಭೆ ಉಪಚುನಾವಣೆ ನಿಮಿತ್ಯ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ಶುಕ್ರವಾರದಂದು ಮೂವರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು. ಕರ್ನಾಟಕ ಜನತಾ ಪಕ್ಷದ ಅಭ್ಯರ್ಥಿ ಎನ್.ಅಂಜಿನಪ್ಪ, ಪಕ್ಷೇತರ ಅಭ್ಯರ್ಥಿಯಾಗಿ ಟಿ.ಎಂ.ಮಾರುತಿ ಮತ್ತು ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಬಂಗಾರಿ ಹನುಮಂತ ಅವರು ಮೂರು ನಾಮಪತ್ರ ಸೇರಿದಂತೆ ಒಟ್ಟು ಮೂವರು ಅಭ್ಯರ್ಥಿಗಳಿಂದ 5 ನಾಮಪತ್ರ ಸಲ್ಲಿಕೆಯಾಗಿವೆ. ಚುನಾವಣೆಗೆ ಅಧಿಸೂಚನೆ ಪ್ರಕಟಗೊಂಡ ದಿನದಿಂದ ಇಲ್ಲಿಯವರೆಗೆ ಒಟ್ಟು ಏಳು ಅಭ್ಯರ್ಥಿಗಳು ಒಟ್ಟು 13 ನಾಮಪತ್ರ ಸಲ್ಲಿಸಿದ್ದಾರೆ. ಅದರಲ್ಲಿ ಸ್ವತಂತ್ರ ಅಭ್ಯರ್ಥಿಗಳಾಗಿ ಎನ್.ವೆಂಕಣ್ಣ, ಟಿ.ರ‍್ರಿಸ್ವಾಮಿ, ಬಂಗಾರಿ ಅನಿಲ್ ಕುಮಾರ್, ಟಿ.ಎಂ.ಮಾರುತಿ…

Read More

ಬಳ್ಳಾರಿ : ಸಂಡೂರು ವಿಧಾನಸಭೆ ಉಪಚುನಾವಣೆ ನಿಮಿತ್ಯ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ಶುಕ್ರವಾರದಂದು ಮೂವರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು. ಕರ್ನಾಟಕ ಜನತಾ ಪಕ್ಷದ ಅಭ್ಯರ್ಥಿ ಎನ್.ಅಂಜಿನಪ್ಪ, ಪಕ್ಷೇತರ ಅಭ್ಯರ್ಥಿಯಾಗಿ ಟಿ.ಎಂ.ಮಾರುತಿ ಮತ್ತು ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಬಂಗಾರಿ ಹನುಮಂತ ಅವರು ಮೂರು ನಾಮಪತ್ರ ಸೇರಿದಂತೆ ಒಟ್ಟು ಮೂವರು ಅಭ್ಯರ್ಥಿಗಳಿಂದ 5 ನಾಮಪತ್ರ ಸಲ್ಲಿಕೆಯಾಗಿವೆ. ಚುನಾವಣೆಗೆ ಅಧಿಸೂಚನೆ ಪ್ರಕಟಗೊಂಡ ದಿನದಿಂದ ಇಲ್ಲಿಯವರೆಗೆ ಒಟ್ಟು ಏಳು ಅಭ್ಯರ್ಥಿಗಳು ಒಟ್ಟು 13 ನಾಮಪತ್ರ ಸಲ್ಲಿಸಿದ್ದಾರೆ. ಅದರಲ್ಲಿ ಸ್ವತಂತ್ರ ಅಭ್ಯರ್ಥಿಗಳಾಗಿ ಎನ್.ವೆಂಕಣ್ಣ, ಟಿ.ರ‍್ರಿಸ್ವಾಮಿ, ಬಂಗಾರಿ ಅನಿಲ್ ಕುಮಾರ್, ಟಿ.ಎಂ.ಮಾರುತಿ ಇವರುಗಳು ಒಂದೊAದು ನಾಮಪತ್ರ ಸಲ್ಲಿಸಿದ್ದರೆ, ಭಾರತೀಯ ರಾಷ್ಟಿçÃಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಈ.ಅನ್ನಪೂರ್ಣ ಅವರು ನಾಲ್ಕು ನಾಮಪತ್ರ ಸಲ್ಲಿಸಿದ್ದಾರೆ. ಅದೇರೀತಿಯಾಗಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಬಂಗಾರಿ ಹನುಮಂತ ಅವರು ನಾಲ್ಕು ನಾಮಪತ್ರ ಸಲ್ಲಿಸಿದ್ದಾರೆ. ಕರ್ನಾಟಕ ಜನತಾ ಪಕ್ಷದ ಅಭ್ಯರ್ಥಿಯಾಗಿ ಎನ್.ಅಂಜಿನಪ್ಪ ಅವರು ಒಂದು ನಾಮಪತ್ರ ಸಲ್ಲಿಸಿದ್ದಾರೆ. ಅ.28ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನ.30 ರಂದು…

Read More

ಬೆಂಗಳೂರು: ಗೆಜೆಟ್‌ನಲ್ಲಿ ತಪ್ಪಾಗಿ ನಮೂದಿಸಿದ್ದರಿಂದಾಗಿ ವಿಜಯಪುರ ಜಿಲ್ಲೆಯ ತಿಕೋಟಾ ತಾಲ್ಲೂಕಿನ ಹೊನವಾಡ ಗ್ರಾಮದ 1,200 ಎಕರೆ ವಕ್ಫ್ ಆಸ್ತಿ ಎನ್ನುವ ಗೊಂದಲ ಸೃಷ್ಟಿಯಾಗಿದೆಯಷ್ಟೆ. ಇಲ್ಲಿ 11 ಎಕರೆ ಮಾತ್ರ ವಕ್ಫ್ ಗೆ ಸೇರಿದ್ದು, ಇದರಲ್ಲಿ 10 ಎಕರೆ 14 ಗುಂಟೆಯಲ್ಲಿ ಖಬರಸ್ತಾನವಿದೆ. ಉಳಿದ 24 ಗುಂಟೆಯಲ್ಲಿ ಈದ್ಗಾ, ಮಸೀದಿ ಇತ್ಯಾದಿ ಕಟ್ಟಡಗಳಿವೆ. ಉಳಿದ ಜಮೀನೆಲ್ಲ ರೈತರಿಗೆ ಸೇರಿದೆ. ಇದನ್ನು ತಹಸೀಲ್ದಾರ್ ಮತ್ತು ಜಿಲ್ಲಾಧಿಕಾರಿಗಳು ಕೂಡ ಸ್ಪಷ್ಟಪಡಿಸಿದ್ದಾರೆ ಎಂದು ಆ ಜಿಲ್ಲೆಯ ಉಸ್ತುವಾರಿಯೂ ಆಗಿರುವ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಸ್ಪಷ್ಟಪಡಿಸಿದ್ದಾರೆ. ಶನಿವಾರ ಇಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, `ವಿಜಯಪುರ ಜಿಲ್ಲೆಯಲ್ಲಿ 1974, 1978 ಮತ್ತು 2016ರಲ್ಲಿ ವಕ್ಫ್ ಆಸ್ತಿಗಳ ಅಧಿಸೂಚನೆ ಹೊರಬಿದ್ದಿದೆ. ವಕ್ಫ್ ಆಸ್ತಿ ಇರುವುದು ವಿಜಯಪುರ ನಗರದ ವ್ಯಾಪ್ತಿಯಲ್ಲಿರುವ ಮಹಾಲಬಾಗಾಯತದಲ್ಲಿ. ಆದರೆ 1974ರ ಗೆಜೆಟ್ ನಲ್ಲಿ ಮಹಾಲಬಾಗಾಯತದ ಪಕ್ಕ ಬ್ರ್ಯಾಕೆಟ್ ನಲ್ಲಿ ಹೊನವಾಡ ಎಂದು ಬರೆದು ಬಿಟ್ಟಿದ್ದಾರೆ. ಈ ವಿಷಯವನ್ನು ರೈತರು ನಮ್ಮ…

Read More

ಬೆಂಗಳೂರು: ಭಾರತೀಯ ಅಂಚೆ ಇಲಾಖೆ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್‍ಗಳ ಮೂಲಕ ಮನೆ ಬಾಗಿಲಿನಲ್ಲೇ ಪಿಂಚಣಿದಾರರು ಸುಲಭವಾಗಿ ಡಿಜಿಟಲ್ ಜೀವನ ಪ್ರಮಾಣ ಪತ್ರವನ್ನು ಸಲ್ಲಿಸಲು ವ್ಯವಸ್ಥೆ ಕಲ್ಪಿಸಲಾಗಿದೆ. ಪಿಂಚಣಿದಾರರು ಅಥವಾ ಕುಟುಂಬದ ಪಿಂಚಣಿದಾರರು ತಮ್ಮ ಹತ್ತಿರದ ಅಂಚೆ ಕಚೇರಿಯಲ್ಲಿ ಅಥವಾ ಪೋಸ್ಟ್ ಮ್ಯಾನ್ ಮೂಲಕ ರೂ.70 ಶುಲ್ಕ ನೀಡುವುದರೊಂದಿಗೆ ಕೆಲವೇ ನಿಮಿಷಗಳಲ್ಲಿ ಆಧಾರ್ ಸಂಖ್ಯೆ, ಮೊಬೈಲ್ ಸಂಖ್ಯೆ, ಪಿಪಿಒ ಸಂಖ್ಯೆ ಮತ್ತು ಪಿಂಚಣಿದಾರರ ಬ್ಯಾಂಕ್ ಖಾತೆಯ ವಿವರಗಳೊಂದಿಗೆ ತಮ್ಮ ಬೆರಳಚ್ಚು ಪರಿಶೀಲಿಸಿ ಡಿಜಿಟಲ್ ಜೀವನ ಪ್ರಮಾಣ ಪತ್ರವನ್ನು ನ.30 ರೊಳಗಾಗಿ ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ವೆಬ್‍ಸೈಟ್ www.ippbonline.com ಮತ್ತು marketing@ippbonline.in ಸಂಪರ್ಕಿಸಲು ಅಂಚೆ ಅಧೀಕ್ಷಕರು ತಿಳಿಸಿದ್ದಾರೆ. https://kannadanewsnow.com/kannada/important-information-for-government-employees-state-govt-fixes-minimum-monthly-insurance-premium-rate/ https://kannadanewsnow.com/kannada/shivamogga-the-kannada-jyothi-rathyatra-at-ulavi-in-soraba-was-accorded-a-grand-welcome/

Read More

ಶಿವಮೊಗ್ಗ: ಜಿಲ್ಲೆಯ ಸೊರಬ ತಾಲ್ಲೂಕಿನ ಉಳವಿಗೆ ಇಂದು “ಕನ್ನಡ ಜ್ಯೋತಿ ರಥಯಾತ್ರೆ” ಆಗಮಿತು. ಕನ್ನಡ ಸಾಹಿತ್ಯ ರಥವನ್ನು ಅದ್ಧೂರಿಯಾಗಿ ಸ್ವಾಗತಿಸಿದಂತ ಉಳವಿಯ ಗ್ರಾಮಸ್ಥರು, ಆತ್ಮೀಯವಾಗಿ ಬೀಳ್ಕೊಡುಗೆ ಕೊಟ್ಟರು. ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಉಳವಿ ಗ್ರಾಮಕ್ಕೆ 87ನೇ ಅಖಿಲ ಭಾರತ ಕನ್ನ ಸಾಹಿತ್ಯ ಸಮ್ಮೇಳನದ ಅಂಗವಾಗಿ ರಾಜ್ಯಾಧ್ಯಂತ ಸಂಚರಿಸುತ್ತಿರುವಂತ “ಕನ್ನಡ ಜ್ಯೋತಿ ರಥ ಯಾತ್ರೆಗೆ ಆಗಮಿಸಿತು. ಉಳವಿ ಹಾಗೂ ದೂಗುರು ಗ್ರಾಮ ಪಂಚಾಯ್ತಿಯ ಅಧಿಕಾರಿಗಳು, ಸಿಬ್ಬಂದಿಗಳು, ಉಳವಿಯ ಗ್ರಾಮಸ್ಥರು ಸೇರಿ ಕನ್ನಡ ಜ್ಯೋತಿ ರಥಯಾತ್ರೆಗೆ ಪೂರ್ಣಕುಂಭದೊಂದಿಗೆ ಅದ್ದೂರಿ ಸ್ವಾಗತತವನ್ನು ಕೋರಿದರು. ಈ ವೇಳೆ ಮಾತನಾಡಿದಂತ ಉಪನ್ಯಾಸಕ ಶಿವಕುಮಾರ್ ಅವರು, ಕನ್ನಡ ಭಾಷೆ, ಕನ್ನಡ ನಾಡು ಉಳಿಯಲು, ಬೆಳೆಯಲು, ನಿರಂತತೆ ಕಾಪಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಈ ವರ್ಷ ಮಂಡ್ಯದಲ್ಲಿ ನಡೆಯುವಂತಹ 87ನೇ ಸಾಹಿತ್ಯ ಸಮ್ಮೇಳನದ ಅಂಗವಾಗಿ “ಕನ್ನಡ ಜ್ಯೋತಿ ರಥ” ಉಳವಿ ಗ್ರಾಮಕ್ಕೆ ಬಂದಿದೆ. ಅದರನ್ನು ಅದ್ದೂರಿಯಾಗಿ ಸ್ವಾಗತಿಸಿ ಬೀಳ್ಕೊಡಲಾಗುತ್ತಿದೆ ಎಂದರು. ಇದೇ ಸಂದರ್ಭದಲ್ಲಿ ರಥಯಾತ್ರೆಯಲ್ಲಿ ಪಾಲ್ಗೊಂಡಿದ್ದಂತ ಜಿಲ್ಲಾ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದಂತ…

Read More

ನವದೆಹಲಿ : ದೇಶದ ಪ್ರಮುಖ ಉದ್ಯಮಿ ಮುಖೇಶ್ ಅಂಬಾನಿ ಅವರ ಕಂಪನಿ ರಿಲಯನ್ಸ್ ಜಿಯೋ ಈ ದೀಪಾವಳಿಗೆ ಜಿಯೋ ಭಾರತ್ 4 ಜಿ ಫೋನ್‌ಗಳ ಬೆಲೆಯನ್ನು ಶೇ 30 ರಷ್ಟು ಕಡಿತಗೊಳಿಸಿದೆ. ಈ ಸೀಮಿತ ಅವಧಿಯ ಕೊಡುಗೆಯ ಅಡಿಯಲ್ಲಿ, ₹999 ನ ಜಿಯೋಭಾರತ್ ಮೊಬೈಲ್ ಫೋನ್ ಈಗ ₹699ರ ವಿಶೇಷ ಬೆಲೆಗೆ ಲಭ್ಯವಿದೆ. ಜಿಯೋಭಾರತ್ ಫೋನ್ ಅನ್ನು 123 ರೂ.ಗೆ ರೀಚಾರ್ಜ್ ಮಾಡಬಹುದು. ಈ ಮಾಸಿಕ ಟ್ಯಾರಿಫ್ ಯೋಜನೆಯಲ್ಲಿ ಅನಿಯಮಿತ ಉಚಿತ ಧ್ವನಿ ಕರೆಗಳು, 14 ಜಿಬಿ ಡೇಟಾ ಸಹ ಒಳಗೊಂಡಿದೆ. ಜಿಯೋದ ಮಾಸಿಕ ₹123ಗಳ ರೀಚಾರ್ಜ್ ಯೋಜನೆ ಇತರ ಆಪರೇಟರ್ ಗಳಿಗಿಂತ 40 ಪ್ರತಿಶತ ಅಗ್ಗವಾಗಿದೆ. ಏಕೆಂದರೆ ಇತರ ನೆಟ್‌ವರ್ಕ್‌ಗಳ ಫೀಚರ್ ಫೋನ್‌ಗಳ ಮಾಸಿಕ ರೀಚಾರ್ಜ್ ಕನಿಷ್ಠ ₹ 199 ಇದೆ. ಇದು ಜಿಯೋಗಿಂತ 76 ರೂಪಾಯಿ ಹೆಚ್ಚು ದುಬಾರಿಯಾಗಿದೆ. ಅಂದರೆ, ಜಿಯೋ ಗ್ರಾಹಕರಿಗೆ ಪ್ರತಿ ರೀಚಾರ್ಜ್ ನಲ್ಲಿ ತಿಂಗಳಿಗೆ ₹ 76 ಉಳಿಯಲಿದೆ. ತಿಂಗಳಿಗೆ ₹76 ರಂತೆ 9…

Read More

ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಪ್ರವಾಸ ಕೈಗೊಂಡಿದ್ದ ಗೃಹಸಚಿವ ಡಾ. ಜಿ. ಪರಮೇಶ್ವರ್ ಅವರು ಕುಂಸಿ ಪೊಲೀಸ್ ಠಾಣೆಗೆ ದಿಢೀರ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಈ ವೇಳೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ವಿವಿಧ ಪ್ರಕರಣಗಳಲ್ಲಿ ಸೀಜ್ ಮಾಡಿದಂತ ವಾಹನಗಳ ಸ್ಥಳಕ್ಕೆ ಭೇಟಿ ಮಾಡಿ ಪರಿಶೀಲಿಸಿದಂತ ಗೃಹ ಸಚಿವ ಡಾ.ಜಿ ಪರಮೇಶ್ವರ್, ಆ ಬಳಿಕ ಠಾಣಾಧಿಕಾರಿಗಳ ಬಳಿಯಲ್ಲಿ ಎಷ್ಟು ವಾಹನ ಸೀಜ್ ಮಾಡಿದ್ದೀರಿ.? ಯಾವ ಯಾವ ಕೇಸಲ್ಲಿ ವಾಹನಗಳನ್ನು ಹಿಡಿದಿಟ್ಟುಕೊಂಡಿದ್ದೀರಿ ಎಂಬುದಾಗಿ ಲೆಕ್ಕ ಕೇಳಿದರು. ಆಗ ಸರಿಯಾಗಿ ಉತ್ತರಿಸದಂತ ಠಾಣಾಧಿಕಾರಿಯನ್ನು ತರಾಟೆಗೆ ತೆಗೆದುಕೊಂಡು, ಸೂಕ್ತವಾದ ರಿಜಿಸ್ಟಾರ್ ಇಟ್ಟು, ಎಲ್ಲಾ ಮಾಹಿತಿಯನ್ನು ದಾಖಲಿಸುವಂತೆ ಸೂಚಿಸಿದರು. ಶಾಸಕರಾದ ಗೋಪಾಲಕೃಷ್ಣ ಬೇಳೂರು, ಮಂಜುನಾಥ್ ಭಂಡಾರಿ, ಬಲ್ಕಿಶ್ ಭಾನು, ಪೂರ್ವ ವಲಯ ಐಜಿಪಿ ರಮೇಶ್ ಬಾನೋತ್, SP ಮಿಥುನ್ ಕುಮಾರ್, ಪೊಲೀಸ್ ಇನ್ಸ್ಪೆಕ್ಟರ್ ದೀಪಕ್ ಇದ್ದರು. https://kannadanewsnow.com/kannada/big-shock-to-illegal-building-owners-in-bengaluru-deputy-cm-dk-shivakumar-announces-eviction/ https://kannadanewsnow.com/kannada/qadri-agrees-to-withdraw-from-shiggaon-seat-after-minister-zameer-ahmeds-persuasion-succeeds/

Read More

ಬೆಂಗಳೂರು : ಶಿಗ್ಗಾವ್ ಉಪ ಚುನಾವಣೆಯಲ್ಲಿ ಬಂಡಾಯ ಅಭ್ಯರ್ಥಿ ಯಾಗಿ ನಾಮಪತ್ರ ಸಲ್ಲಿಸಿದ್ದ ಅಜ್ಜಂ ಪೀರ್ ಖಾದ್ರಿ ಮನವೊಲಿಸುವಲ್ಲಿ ಸಚಿವ ಜಮೀರ್ ಅಹಮದ್ ಖಾನ್ ಯಶಸ್ವಿಯಾಗಿದ್ದು, ಕಣ ದಿಂದ ಹಿಂದೆ ಸರಿಯಲು ಒಪ್ಪಿದಾರೆ. ಮುಖ್ಯಮಂತ್ರಿ ಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್, ವಖ್ಫ್ ಬೋರ್ಡ್ ಮಾಜಿ ಅಧ್ಯಕ್ಷ ಅನ್ವರ್ ಬಾಷಾ, ಧಾರವಾಡ ಅಂಜುಮನ್ ಅಧ್ಯಕ್ಷ ಇಸ್ಮಾಯಿಲ್ ತಮಟ್ ಗಾರ್ ಜತೆಗೂಡಿ ಖಾದ್ರಿ ಅವರನ್ನು ಶುಕ್ರವಾರ ಮಧ್ಯರಾತ್ರಿ ಶಿಗ್ಗಾವ್ ನಿಂದ ಬೆಂಗಳೂರಿಗೆ ಕರೆತಂದಿದ್ದ ಜಮೀರ್ ಅಹಮದ್ ಖಾನ್ ಅವರು, ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭೇಟಿ ಮಾಡಿಸಿದರು. ಮಾತುಕತೆ ವೇಳೆ, ಖಾದ್ರಿ ಅವರಿಗೆ ರಾಜಕೀಯ ವಾಗಿ ಮುಂದಿನ ದಿನಗಳಲ್ಲಿ ಸೂಕ್ತ ಸ್ಥಾನಮಾನದ ಭರವಸೆ ನೀಡಲಾಗಿದ್ದು, ಅ . 30 ರಂದು ನಾಮಪತ್ರ ವಾಪಸ್ ಪಡೆಯುವುದು ಬಹುತೇಕ ಖಚಿತ ವಾಗಿದೆ. ಆದರೆ, ಕಾರ್ಯಕರ್ತರು ಹಾಗೂ ಅಭಿಮಾನಿಗಳ ಜತೆ ಮಾತನಾಡಿ ಅವರನ್ನು ಒಪ್ಪಿಸಿ ಕಾಂಗ್ರೆಸ್…

Read More

ಬೆಂಗಳೂರು: ಬಿಜೆಪಿ ನಿಲುವು ಅತ್ಯಂತ ಸ್ಪಷ್ಟವಾಗಿದೆ. ವಕ್ಫ್ ಕಾಯಿದೆ ಹೆಸರು ಹೇಳಿಕೊಂಡು ರೈತರು ಬೀದಿಪಾಲಾಗಬಾರದು. ಆ ನಿಟ್ಟಿನಲ್ಲಿ ಸರಕಾರ ಎಚ್ಚರಿಕೆ ವಹಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಗ್ರಹಿಸಿದರು. ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ರೈತರಿಗೆ ನ್ಯಾಯ ಕೊಡಿಸುವ ನಿಟ್ಟಿನಲ್ಲಿ ಬಿಜೆಪಿ ಯಾವ ಹಂತಕ್ಕೆ ಹೋಗಲೂ ಸಿದ್ಧವಿದೆ ಎಂದು ಪ್ರಕಟಿಸಿದÀರು. ನಾವು ಹೋರಾಟಕ್ಕೂ ಇಳಿಯುತ್ತೇವೆ; ಆದರೆ, ರೈತರಿಗೆ ಅನ್ಯಾಯ ಆಗಲು ನಾವು ಬಿಡುವುದಿಲ್ಲ ಎಂದು ಎಚ್ಚರಿಸಿದರು. ವಕ್ಫ್ ಕಾಯಿದೆ ಹೆಸರಿನಲ್ಲಿ ರೈತರ ಜಮೀನನ್ನು ಹೊಡೆದುಕೊಳ್ಳುವ ಹುನ್ನಾರವೂ ನಡೆಯುತ್ತಿದೆ. ಮೊನ್ನೆ ವಿಜಾಪುರದಲ್ಲಿ ಅಧಿಕಾರಿಗಳು ರೈತರಿಗೆ ನೋಟಿಸ್ ನೀಡಿದ್ದಾರೆ. ರೈತರು ಹಲವಾರು ದಶಕಗಳಿಂದ ಕೃಷಿ ಮಾಡುತ್ತಿದ್ದ ಜಮೀನು ಕೂಡ ವಕ್ಫ್ ಆಸ್ತಿ ಎಂದು ಅಧಿಕಾರಿಗಳ ಮೂಲಕ ನೋಟಿಸ್ ನೀಡುತ್ತಿದ್ದಾರೆ. ಅಲ್ಪಸಂಖ್ಯಾತರನ್ನು ಸದಾ ತುಷ್ಟೀಕರಣ ಮಾಡುವ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರಕಾರದ ಬೆಂಬಲ ವಕ್ಫ್ ಬೋರ್ಡ್‍ಗೆ ಇರುವುದು ಸ್ಪಷ್ಟವಾಗಿ ಗೋಚರವಾಗುತ್ತಿದೆ ಎಂದು…

Read More