Author: kannadanewsnow09

ನವದೆಹಲಿ: ಪ್ರತಿಯೊಬ್ಬ ಉದ್ಯೋಗಿ ತಿಂಗಳ ಕೊನೆಯಲ್ಲಿ ತಮ್ಮ ಸಂಬಳಕ್ಕಾಗಿ ಕಾಯುತ್ತಾರೆ. ಆದರೆ ಅನೇಕ ಕಂಪನಿಗಳು ಸಾಮಾನ್ಯವಾಗಿ ಸಂಬಳ ಪಾವತಿಗಳನ್ನು ಮುಂದೂಡುತ್ತವೆ. ಉದ್ಯೋಗಿಗಳು ಸಹ ಮೌನವಾಗಿರುತ್ತಾರೆ. ಆದರೆ ಸಂಬಳವನ್ನು ತಡೆಹಿಡಿಯುವುದು ಕಾನೂನಿನ ಪ್ರಕಾರ ಅಪರಾಧ. ಹಾಗಾದ್ರೆ ನೌಕರರು ತಮ್ಮ ಸಂಬಳ ವಿಳಂಬವಾದರೇ ಯಾವ ಕಾನೂನು ಕ್ರಮ ಕೈಗೊಳ್ಳಬಹುದು ಎನ್ನುವ ಬಗ್ಗೆ ಮುಂದೆ ಓದಿ. ಸಂಬಳವು ಒಂದು ತಿಂಗಳ ಕಠಿಣ ಪರಿಶ್ರಮಕ್ಕೆ ಗೌರವವಾಗಿದೆ. ಉದ್ಯೋಗದಾತರು ಸಾಮಾನ್ಯವಾಗಿ ನೆಪಗಳನ್ನು ನೀಡಿ ವೇತನವನ್ನು ನೀಡುವುದು ವಿಳಂಬ ಮಾಡುತ್ತಾರೆ ಮತ್ತು ಉದ್ಯೋಗಿಗಳು ಮೌನವಾಗಿರುತ್ತಾರೆ. ಆದರೆ ಸಂಬಳವನ್ನು ವಿಳಂಬ ಮಾಡುವುದು ಕಾನೂನುಬಾಹಿರ ಅಪರಾಧ. 1936 ರ ಭಾರತೀಯ ಕಾರ್ಮಿಕ ಕಾಯ್ದೆಯು ಪ್ರತಿಯೊಬ್ಬ ಉದ್ಯೋಗಿಯು ತಿಂಗಳ ಅಂತ್ಯದ 7 ದಿನಗಳ ಒಳಗೆ ತಮ್ಮ ಸಂಬಳವನ್ನು ಪಡೆಯಬೇಕು ಎಂದು ಹೇಳುತ್ತದೆ. ಸಣ್ಣ ಸಂಸ್ಥೆಗಳಿಗೆ (<1000 ಸಿಬ್ಬಂದಿ), ಇದು 7 ದಿನಗಳು. ಇದಕ್ಕಿಂತ ಹೆಚ್ಚಿನ ವಿಳಂಬಗಳು ಕಾನೂನುಬಾಹಿರ. ಸಂಬಳವನ್ನು ವಿಳಂಬ ಮಾಡುವ ಉದ್ಯೋಗದಾತರ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಬಹುದು. ವೇತನ ಪಾವತಿ ಕಾಯ್ದೆಯಡಿಯಲ್ಲಿ, ಉದ್ದೇಶಪೂರ್ವಕ ವಿಳಂಬವು ದಂಡ ಮತ್ತು…

Read More

ಕೆಎನ್ಎನ್ ಡಿಜಿಟಲ್ ಡೆಸ್ಕ್: ಅಣಬೆ ಕೃಷಿಯನ್ನು ಮಾಡುವುದು ಈಗ ಮತ್ತಷ್ಟು ಸುಲಭವಾಗಿದೆ. ಅದಕ್ಕಾಗಿ ಜಮೀನು ಇರಬೇಕು ಎಂದೇನೂ ಇಲ್ಲ. ನಿಮ್ಮ ಮನೆಯಲ್ಲೇ ಒಂದು ಬಕೆಟ್ ನಲ್ಲಿ ಅಣಬೆಯನ್ನು ಬೆಳೆಯಬಹುದಾಗಿದೆ. ಹಾಗಾದ್ರೇ ಬಕೆಟ್‌ಗಳಲ್ಲಿ ಮನೆಯಲ್ಲಿ ಅಣಬೆಗಳನ್ನು ಬೆಳೆಯೋದಕ್ಕೆ ಮುಂದಿನ ಹಂತಗಳನ್ನು ಅನುಸರಿಸಿ, ಬೆಳೆಯಿರಿ. ಹಂತ 1: ಹುಲ್ಲು ತಯಾರಿಸುವುದು ಸೂಕ್ತವಾದ ಒಣಹುಲ್ಲಿನ ಪ್ರಮಾಣವನ್ನು ಸಂಗ್ರಹಿಸುವ ಮೂಲಕ ಪ್ರಾರಂಭಿಸಿ. ಗೋಧಿ ಅಥವಾ ಓಟ್ ಸ್ಟ್ರಾ ಮಶ್ರೂಮ್ ಕೃಷಿಗೆ ಸೂಕ್ತವಾಗಿದೆ. ಒಣಹುಲ್ಲಿನ ತುಂಡುಗಳನ್ನು ಸುಮಾರು 2-4 ಇಂಚುಗಳಷ್ಟು ಉದ್ದದಲ್ಲಿ ಕತ್ತರಿಸಿ. ಹಂತ 2: ಒಣಹುಲ್ಲಿನ ಕುದಿಸುವುದು ಕತ್ತರಿಸಿದ ಒಣಹುಲ್ಲಿನ ದೊಡ್ಡ ಪಾತ್ರೆಯಲ್ಲಿ ಇರಿಸಿ ಮತ್ತು ಅದನ್ನು ನೀರಿನಿಂದ ಮುಚ್ಚಿ. ನೀರನ್ನು ಕುದಿಸಿ ಮತ್ತು ಒಣಹುಲ್ಲಿನ ಕ್ರಿಮಿನಾಶಕಕ್ಕೆ ಕುದಿಯಲು ಬಿಡಿ. ಕುದಿಸಿದ ನಂತರ, ಒಣಹುಲ್ಲಿನ ಕೋಣೆಯ ಉಷ್ಣಾಂಶಕ್ಕೆ ತಣ್ಣಗಾಗಲು ಬಿಡಿ. ಹಂತ 3: ಮಶ್ರೂಮ್ ಬೀಜಗಳನ್ನು ಪಡೆದುಕೊಳ್ಳುವುದು IIHR KVK ಹಿರೇಹಳ್ಳಿ ಇಂದ ಬೀಜ ಪಡೆಯಿರಿ. ವಿಶ್ವಾಸಾರ್ಹ ಪೂರೈಕೆದಾರರಿಂದ ಮಶ್ರೂಮ್ ಸ್ಪಾನ್ ಎಂದು ಕರೆಯಲ್ಪಡುವ ಅಣಬೆ ಬೀಜಗಳನ್ನು…

Read More

ಏಲಕ್ಕಿಯು ನೆರಳು-ಪ್ರೀತಿಯ ಸಸ್ಯವಾಗಿದೆ (ಸಿಯೋಫೈಟ್) ಮತ್ತು ಎತ್ತರದ, ನಿತ್ಯಹರಿದ್ವರ್ಣ ಅರಣ್ಯ ಮರಗಳ ಮೇಲಾವರಣದ ಅಡಿಯಲ್ಲಿ ಇಳಿಜಾರುಗಳಲ್ಲಿ ಆರ್ದ್ರ, ಉಪೋಷ್ಣವಲಯದ ನೈಸರ್ಗಿಕ ಆವಾಸಸ್ಥಾನದಲ್ಲಿ ಸಮುದ್ರ ಮಟ್ಟದಿಂದ 600 ರಿಂದ 2300 ಮೀ ವರೆಗೆ ಐಷಾರಾಮಿಯಾಗಿ ಬೆಳೆಯುತ್ತದೆ. ಮಧ್ಯಮ ನೆರಳು, ಹೆಚ್ಚಿನ ಆರ್ದ್ರತೆ ಮತ್ತು ತಂಪಾದ ಪರಿಸರವು ಅದರ ತೃಪ್ತಿಕರ ಬೆಳವಣಿಗೆ ಮತ್ತು ಉತ್ಪಾದನೆಗೆ ಅವಶ್ಯಕವಾಗಿದೆ. ಬೆಳೆಯುತ್ತಿರುವ ಪ್ರದೇಶಗಳಲ್ಲಿ ತಾಪಮಾನವು 10-30 ° C ನಿಂದ ಬದಲಾಗುತ್ತದೆ. ಸರಾಸರಿ ವಾರ್ಷಿಕ ಮಳೆಯು 200 ರಿಂದ 350 ಸೆಂ.ಮೀ ವರೆಗೆ 200 ದಿನಗಳವರೆಗೆ ಹರಡುತ್ತದೆ. ಇದು ಗಾಳಿ ಮತ್ತು ಬರಕ್ಕೆ ಹೆಚ್ಚು ಸೂಕ್ಷ್ಮವಾಗಿರುತ್ತದೆ. ಸಾಕಷ್ಟು ಹ್ಯೂಮಸ್ ಮತ್ತು ಎಲೆಗಳ ಅಚ್ಚು ಹೊಂದಿರುವ ಚೆನ್ನಾಗಿ ಬರಿದುಹೋದ, ಸಮೃದ್ಧ ಅರಣ್ಯ ಮಣ್ಣಿನಲ್ಲಿ ಬೆಳೆ ಉತ್ತಮವಾಗಿ ಬೆಳೆಯುತ್ತದೆ. ಸಸ್ಯವು ಸಾಕಷ್ಟು ಮೇಲ್ಮೈ ಆಹಾರ ಬೇರುಗಳನ್ನು ಹೊಂದಿರುವುದರಿಂದ, ಮಣ್ಣು ಮೂಲಭೂತವಾಗಿ ಚೆನ್ನಾಗಿ ಬರಿದಾಗಬೇಕು. ಸಮೃದ್ಧ ಮತ್ತು ಚೆನ್ನಾಗಿ ಬರಿದುಹೋದ ಮಣ್ಣಿನಲ್ಲಿ ಸ್ಥಾಪಿಸಲಾದ ಏಲಕ್ಕಿ ತೋಟಗಳು ಹೆಚ್ಚಿನ ಇಳುವರಿಯನ್ನು ನೀಡುವುದರ ಜೊತೆಗೆ, ಗಣನೀಯವಾಗಿ…

Read More

ಬೆಂಗಳೂರು : “ನಾನು ಪಕ್ಷದ ಶಿಸ್ತಿನ ಸಿಪಾಯಿ. ಯಾವತ್ತೂ ಕಾಂಗ್ರೆಸ್ ಪಕ್ಷಕ್ಕೆ ಬ್ಲಾಕ್ ಮೇಲ್ ಮಾಡುವವನಲ್ಲ. ನಾನು ಹಗಲು ರಾತ್ರಿ ದುಡಿದು ಪಕ್ಷ ಕಟ್ಟಿದ್ದೇನೆ. ಮುಂದೆಯೂ ಕಟ್ಟುತ್ತೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ. ದೆಹಲಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಭಾನುವಾರ ಪ್ರತಿಕ್ರಿಯೆ ನೀಡಿದರು. ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿದ್ದೀರಿ ಎಂಬ ಸುದ್ದಿ ಹರಿದಾಡುತ್ತಿರುವ ಬಗ್ಗೆ ಕೇಳಿದಾಗ, “ನನ್ನ ಮಾನಸಿಕ, ದೈಹಿಕ ಹಾಗೂ ರಾಜಕೀಯ ಆರೋಗ್ಯ ಸರಿಯಾಗಿದೆ. ನಾನು ಖರ್ಗೆ ಸಾಹೇಬರನ್ನು ಭೇಟಿ ಮಾಡಲು ಹೋಗುತ್ತಿದ್ದೇನೆ. ಡಿಸೆಂಬರ್ ತಿಂಗಳ ಒಳಗಾಗಿ ನೂರು ಕಾಂಗ್ರೆಸ್ ಕಚೇರಿಗಳಿಗೆ ಶಂಕುಸ್ಥಾಪನೆ ಮಾಡಲೇಬೇಕಾಗಿದೆ. ಗಾಂಧಿ ಭಾರತ ಎಂಬ ಪುಸ್ತಕ ರಚಿಸಿದ್ದೇನೆ. ಇದರ ಬಿಡುಗಡೆಗೆ ದಿನಾಂಕ ನಿಗದಿ ಮಾಡಬೇಕಾಗಿದೆ. ಸದ್ಯದಲ್ಲೇ ಸಂಸತ್ ಅಧಿವೇಶನ ಆರಂಭವಾಗಲಿದೆ. ಕಾಂಗ್ರೆಸ್ ಸಂಸ್ಥಾಪನಾ ದಿನ ಆಚರಣೆ ಮಾಡಬೇಕು. ಇದೆಲ್ಲವನ್ನು ಯಾರು ಮಾಡಬೇಕು? ನಾನೇ ಮಾಡಬೇಕು. ನಾನೇಕೆ ರಾಜಿನಾಮೆ ನೀಡಲಿ. ಈಗ ಅಂತಹ ಸಂದರ್ಭವಿಲ್ಲ” ಎಂದು ತಿಳಿಸಿದರು. “ಕಾಂಗ್ರೆಸ್ ಪಕ್ಷ ಎಲ್ಲಿಯವರೆಗೂ ಈ…

Read More

ಶಿವಮೊಗ್ಗ: ಜಿಲ್ಲೆಯ ಜಿಲ್ಲಾ ಪಂಚಾಯ್ತಿ ಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಕಲಗೋಡು ರತ್ನಾಕರ್ ರವರಿಗೆ ನಿಗಮ ಮಂಡಳಿಯಲ್ಲಿ ಸೂಕ್ತ ಸ್ಥಾನಮಾನ ನೀಡುವಂತೆ ಒತ್ತಾಯಿಸಿ ಹೊಸನಗರ ತಾಲೂಕು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ಅವರಲ್ಲಿ ನಿಯೋಗ ಮನವಿ ಮಾಡಿದೆ. ನಿಯೋಗದ ಪರವಾಗಿ ಮಾತನಾಡಿದ ಹೊಸನಗರ ತಾಲೂಕ್ ಗ್ಯಾರಂಟಿ ಸಮಿತಿ ಅಧ್ಯಕ್ಷ ಚಿದಂಬರಂ ಕಲಗೋಡು ರತ್ನಾಕರ್ ಕಾಂಗ್ರೆಸ್ ಪಕ್ಷದ ಚಿಹ್ನೆಯಲ್ಲಿ ಗ್ರಾಮ ಪಂಚಾಯ್ತಿ ಸದಸ್ಯನಿಂದ ನಿಂದ ಜಿಪಂ ಅಧ್ಯಕ್ಷ ಗಾದಿಗೆ ಏರುವ ಮೂಲಕ ಹೊಸನಗರ ತಾಲೂಕಿನಲ್ಲಿ ಪಕ್ಷವನ್ನು ಸಂಘಟಿಸಿದ್ದಾರೆ. ಅವರ ಪಕ್ಷ ನಿಷ್ಠೆ ಹಾಗೂ ಕ್ರೀಯಾಶೀಲತೆಯನ್ನು ಪಕ್ಷದ ಹೈಕಮಾಂಡ್ ಗುರುತಿಸಿ ಅವರಿಗೆ ಸೂಕ್ತ ಸ್ಥಾನಮಾನ ನೀಡಬೇಕೆಂದು ನಮ್ಮೆಲ್ಲರ ಹೆಬ್ಬಯಕೆಯಾಗಿದೆ. ಈ ನಿಟ್ಟಿನಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಹಾಗೂ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ಮುಖ್ಯಮಂತ್ರಿಗಳ ಬಳಿ ಚರ್ಚಿಸಿ ನಿಗಮ ಮಂಡಳಿ ಅಧ್ಯಕ್ಷ ಹುದ್ದೆ ನೀಡಲಿ ಎಂದು…

Read More

ಮಂಡ್ಯ : ಗ್ರಾಮೀಣ ಜನರ ಆರೋಗ್ಯ ಜಾಗೃತಿಗೆ ಉಚಿತ ಆರೋಗ್ಯ ಶಿಬಿರಗಳು ಸಹಕಾರಿಯಾಗಿವೆ. ಬಡ ಜನತೆ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ತೋರದೆ ತಜ್ಞ ವೈದ್ಯರು ಲಭ್ಯವಿದ್ದಾಗ ಶಿಬಿರದಲ್ಲಿ ಪಾಲ್ಗೊಂಡು ಉಚಿತ ಆರೋಗ್ಯದ ಸದುಪಯೋಗ ಪಡೆದುಕೊಳ್ಳಬೇಕೆಂದು ಶಾಸಕ ಕೆ.ಎಂ.ಉದಯ್ ಹೇಳಿದರು. ಮದ್ದೂರು ನಗರದ ಸಂಜೀವಿನಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಭಾನುವಾರ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ರಕ್ತದಾನ ಶಿಬಿರದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಇತ್ತಿಚಿನ ದಿನಗಳಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರಗಳು ಜನರ ಪಾಲಿಗೆ ಸಂಜೀವಿನಿಯಂತಾಗಿದೆ. ದಿನದಿಂದ ದಿನಕ್ಕೆ ಬಿಪಿ, ಶುಗರ್, ಹೃದ್ರೋಗ ಹಾಗೂ ಕಿಡ್ನಿಯಂತಹ ಹಲವು ಸಮಸ್ಯೆಗಳಿಗೆ ತುತ್ತಾಗುತ್ತಿರುವವರು ಹೆಚ್ಚಿನ ಸಂಖ್ಯೆಯಲ್ಲಿ ಕಂಡು ಬರುತ್ತಿದ್ದಾರೆ. ಇವು ಶ್ರೀಮಂತ ಖಾಯಿಲೆಗಳಾಗಿದ್ದು, ಬಡ ಜನರು ಆರ್ಥಿಕವಾಗಿ ಭರಿಸಲು ಅಸಾಧ್ಯವಾಗಿದೆ‌. ಹೀಗಾಗಿ ನಗರ ಹಾಗೂ ಗ್ರಾಮೀಣ ಭಾಗದ ಬಡ ಜನರಿಗೆ ಇಂತಹ ಉಚಿತ ಆರೋಗ್ಯ ತಪಾಸಣಾ ಶಿಬಿರಗಳ ಮೂಲಕ ಚಿಕಿತ್ಸೆಗೆ ಒಳಪಡಿಸಿದಾಗ ಮಾತ್ರ ಅವರನ್ನು ಸಂಕಷ್ಟದಿಂದ ಪಾರು ಮಾಡಲು ಸಾಧ್ಯವಾಗಲಿದೆ ಎಂದರು. ಈಗಾಗಲೇ…

Read More

ಬೆಂಗಳೂರು: ನಾಳೆ ಮತ್ತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಅಲ್ಲದೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜನ ಖರ್ಗೆ ಅವರನ್ನು ಭೇಟಿಯಾಗಲಿದ್ದಾರೆ. ಈ ವೇಳೆ ಸಂಪುಟ ಪುನಾರಚನೆ ಸೇರಿದಂತೆ ಇತರೆ ವಿಷಯಗಳ ಬಗ್ಗೆ ಚರ್ಚೆಯನ್ನು ನಡೆಸಲಿದ್ದಾರೆ ಎನ್ನಲಾಗುತ್ತಿದೆ. ನಾಳೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ದೆಹಲಿಗೆ ತೆರಳಿದ್ದಾರೆ. ನಾಳೆ ಮಧ್ಯಾಹ್ನ 1.30ಕ್ಕೆ ದೆಹಲಿಗೆ ಸಿಎಂ ಸಿದ್ಧರಾಮಯ್ಯ ಆಗಮಿಸಲಿದ್ದಾರೆ. ದೆಹಲಿಯ ಕರ್ನಾಟಕ ಭವನಕ್ಕೆ ಸಿಎಂ ಸಿದ್ಧರಾಮಯ್ಯ ಆಗಮಿಸಲಿದ್ದಾರೆ. ಆ ಬಳಿಕ ನಾಳೆ ಮಧ್ಯಾಹ್ನ 3 ಗಂಟೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಲಿದ್ದಾರೆ. ದೆಹಲಿಯ ರಾಜಾಜಿ ಮಾರ್ಗದಲ್ಲಿರುವಂತ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸಕ್ಕೆ ಭೇಟಿ ನೀಡಲಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ಮಹತ್ವದ ವಿಚಾರಗಳನ್ನು ಸಿಎಂ ಸಿದ್ಧರಾಮಯ್ಯ ಚರ್ಚೆ ನಡೆಸಲಿದ್ದಾರೆ ಎನ್ನಲಾಗುತ್ತಿದೆ. ಇದಲ್ಲದೇ ನಾಳೆ ಸಂಜೆ 5 ಗಂಟಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಿಎಂ ಸಿದ್ಧರಾಮಯ್ಯ ಭೇಟಿಯಾಗಲಿದ್ದಾರೆ. ಪ್ರಧಾನಿ ಮೋದಿ ಬಳಿಯಲ್ಲಿ ಕಬ್ಬು ಬೆಳೆಗಾರರ ಸಮಸ್ಯೆ, ಬೇಡಿಕೆಗಳ ಬಗ್ಗೆ…

Read More

ಬೆಳಗಾವಿ: ಚೆನ್ನಮ್ಮ ಕಿರು ಮೃಗಾಲಯದಲ್ಲಿ ಮತ್ತೊಂದು ಕೃಷ್ಣಮೃಗ ಸಾವನ್ನಪ್ಪಿದೆ. ಇಂದು ಸಂಜೆ ಚಿಕಿತ್ಸೆ ಫಲಿಸದೇ ಮತ್ತೊಂದು ಕೃಷ್ಣಮೃಗ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಬೆಳಗಾವಿ ತಾಲ್ಲೂಕಿನ ಭೂತರಾಮನಹಟ್ಟಿ ಬಳಿಯಿರುವಂತ ಚೆನ್ನಮ್ಮ ಕಿರು ಮೃಗಾಲಯದಲ್ಲಿ ಮತ್ತೊಂದು ಕೃಷ್ಣ ಮೃಗ ಸಾವನ್ನಪ್ಪಿದೆ. ನವೆಂಬರ್.13ರಂದು 8 ಕೃಷ್ಣಮೃಗಗಳು ಮೃತಪಟ್ಟಿದ್ದವು. ನಿನ್ನೆ ಒಂದೇ ದಿನ 20 ಕೃಷ್ಣಮೃಗಗಳು ಮೃತಪಟ್ಟಿದ್ದವು. ನಿನ್ನೆ ತಡರಾತ್ರಿ ಒಂದು, ಇಂದು ಸಂಜೆ ಗಂಡು ಕೃಷ್ಣಮೃಗ ಸಾವನ್ನಪ್ಪಿದೆ. ಚೆನ್ನಮ್ಮ ಕಿರು ಮೃಗಾಲಯದಲ್ಲಿ ಈವರೆಗೆ 30 ಕೃಷ್ಣಮೃಗಗಳು ಸಾವನ್ನಪ್ಪಿದಂತೆ ಆಗಿದೆ. https://kannadanewsnow.com/kannada/cm-siddaramaiah-to-meet-pm-modi-tomorrow-at-5-pm-discuss-sugarcane-growers-problems-and-demands/ https://kannadanewsnow.com/kannada/follow-these-steps-to-grow-mushrooms-in-a-bucket-at-home/

Read More

ಬೆಂಗಳೂರು: ನಾಳೆ ಸಂಜೆ 5 ಗಂಟೆಗೆ ಪ್ರಧಾನಿ ನರೇಂದ್ರ ಮೋದಿಯವರನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಭೇಟಿಯಾಗಲಿದ್ದಾರೆ. ಈ ವೇಳೆಯಲ್ಲಿ ಕಬ್ಬು ಬೆಳೆಗಾರರ ಸಮಸ್ಯೆ, ಬೇಡಿಕೆಗಳ ಬಗ್ಗೆ ಸಮಾಲೋಚನೆ ನಡೆಸಲಿದ್ದಾರೆ ಎನ್ನಲಾಗುತ್ತಿದೆ. ರಾಜ್ಯದಲ್ಲಿ ಕಬ್ಬು ಬೆಳೆಗಾರರು ದರ ನಿಗದಿ ಬಗ್ಗೆ ಪ್ರತಿಭಟನೆ ನಡೆಸುತ್ತಿದ್ದಂತ ಸಂದರ್ಭದಲ್ಲಿ ಸಿಎಂ ಸಿದ್ಧರಾಮಯ್ಯ ಅವರು ಸಮಸ್ಯೆ ಬಗ್ಗೆ ಚರ್ಚಿಸೋದಕ್ಕೆ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿದ್ದರು. ಕಬ್ಬಿಗೆ ದರ ನಿಗದಿಗೆ ಕೋರಿ ಪತ್ರದಲ್ಲಿ ಪ್ರಧಾನಿ ಮೋದಿಯವರನ್ನು ಸಿಎಂ ಸಿದ್ಧರಾಮಯ್ಯ ಮನವಿ ಮಾಡಿದ್ದರು. ನಾಳೆ ಈ ವಿಷಯವಾಗಿ ಚರ್ಚಿಸೋದಕ್ಕೆ ಸಂಜೆ 5 ಗಂಟೆಗೆ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಗೆ ಅವಕಾಶ ನೀಡಲಾಗಿದೆ. ಹೀಗಾಗಿ ನಾಳೆ ಪ್ರಧಾನಿ ಮೋದಿಯನ್ನು ಸಿಎಂ ಸಿದ್ಧರಾಮಯ್ಯ ಭೇಟಿಯಾಗಲಿದ್ದಾರೆ. ನಾಳೆ ಬೆಳಗ್ಗೆ 11 ಗಂಟೆಗೆ ದೆಹಲಿಗೆ ಪ್ರಯಾಣವನ್ನು ಸಿಎಂ ಸಿದ್ಧರಾಮಯ್ಯ ಬೆಳೆಸಲಿದ್ದಾರೆ. ಪ್ರಧಾನಿ ಮೋದಿ ಬೇಡಿಯಾಗಿ ಕಬ್ಬು ಬೆಳಎಗಾರರ ಸಮಸ್ಯೆ, ಬೇಡಿಕೆಗಳ ಬಗ್ಗೆ ಸಮಾಲೋಚನೆ ನಡೆಸಲಿದ್ದಾರೆ. https://kannadanewsnow.com/kannada/pm-modi-to-attend-nda-oath-taking-ceremony-at-gandhi-maidan-in-bihar-on-nov-20/ https://kannadanewsnow.com/kannada/follow-these-steps-to-grow-mushrooms-in-a-bucket-at-home/

Read More

ನವದೆಹಲಿ: ನವೆಂಬರ್ 20 ರಂದು ಬಿಹಾರದ ಗಾಂಧಿ ಮೈದಾನದಲ್ಲಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಮತ್ತು ಇತರ ಎನ್‌ಡಿಎ ನಾಯಕರು ಅದ್ಧೂರಿ ಸಂಜೆಗೆ ಹಾಜರಾಗುವ ನಿರೀಕ್ಷೆಯಿದೆ. ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಭರ್ಜರಿ ಜಯ ಸಾಧಿಸಿದ್ದು, ರಾಜ್ಯದ 243 ಸ್ಥಾನಗಳಲ್ಲಿ 202 ಸ್ಥಾನಗಳನ್ನು ಗೆದ್ದಿದೆ. ಒಕ್ಕೂಟದ ಎರಡು ಪ್ರಮುಖ ಪಕ್ಷಗಳಾದ ಬಿಜೆಪಿ ಮತ್ತು ನಿತೀಶ್ ಕುಮಾರ್ ಅವರ ಜೆಡಿ (ಯು) ಕ್ರಮವಾಗಿ 89 ಮತ್ತು 85 ಸ್ಥಾನಗಳನ್ನು ಗೆದ್ದಿವೆ. ಇದಕ್ಕೆ ವ್ಯತಿರಿಕ್ತವಾಗಿ, ಮಹಾಘಟಬಂಧನ್ ಅಲೆಯ ಪ್ರಭಾವದಿಂದ ಕುಸಿದು ಬಿತ್ತು. ಆರ್‌ಜೆಡಿ ಕೇವಲ 25 ಸ್ಥಾನಗಳನ್ನು ಗಳಿಸಿತು. ಕಾಂಗ್ರೆಸ್ 6 ಸ್ಥಾನಗಳಿಗೆ ಕುಸಿಯಿತು ಮತ್ತು ಎಡಪಕ್ಷಗಳು ಒಟ್ಟಾಗಿ ಕೇವಲ 3 ಸ್ಥಾನಗಳನ್ನು ಗಳಿಸಿದವು. ಬಿಎಸ್‌ಪಿ ಮತ್ತು ಐಐಪಿ ತಲಾ ಒಂದು ಸ್ಥಾನವನ್ನು ಪಡೆದುಕೊಂಡವು. ಬಿಹಾರ ಫಲಿತಾಂಶಗಳು ಹೊರಬಂದ ನಂತರ, ಗಮನವು ಈಗ ಬಿಹಾರದಲ್ಲಿ ಸರ್ಕಾರ ರಚನೆಯತ್ತ ತಿರುಗಿದೆ. ಜೆಡಿ…

Read More