Author: kannadanewsnow09

ಬೆಂಗಳೂರು: ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು, ನೈಋತ್ಯ ರೈಲ್ವೆ ಬೆಂಗಳೂರು ಕಂಟೋನ್ಮೆಂಟ್ ಮತ್ತು ಬೀದರ್ ನಡುವೆ ಪ್ರತಿ ದಿಕ್ಕಿನಲ್ಲಿ ವಿಶೇಷ ಎಕ್ಸ್ಪ್ರೆಸ್ ರೈಲು ಸೇವೆಯನ್ನು ಒದಗಿಸಲಿದೆ. ರೈಲು ಸಂಖ್ಯೆ 07063 ಬೀದರ್ – ಬೆಂಗಳೂರು ಕಂಟೋನ್ಮೆಂಟ್ ವಿಶೇಷ ಎಕ್ಸ್ಪ್ರೆಸ್ ರೈಲು 2025ರ ಅಕ್ಟೋಬರ್ 4ರಂದು (ಶನಿವಾರ) ಬೀದರ್ ನಿಂದ ಮಧ್ಯಾಹ್ನ 2:40ಕ್ಕೆ ಹೊರಟು, ಮರುದಿನ ಬೆಳಿಗ್ಗೆ 5:00ಕ್ಕೆ ಬೆಂಗಳೂರು ಕಂಟೋನ್ಮೆಂಟ್ ತಲುಪಲಿದೆ. ಹಿಂತಿರುಗುವ ದಿಕ್ಕಿನಲ್ಲಿ, ರೈಲು ಸಂಖ್ಯೆ 07064 ಬೆಂಗಳೂರು ಕಂಟೋನ್ಮೆಂಟ್ – ಬೀದರ್ ವಿಶೇಷ ಎಕ್ಸ್ಪ್ರೆಸ್ ರೈಲು 2025ರ ಅಕ್ಟೋಬರ್ 5ರಂದು (ಭಾನುವಾರ) ರಾತ್ರಿ 10:30ಕ್ಕೆ ಬೆಂಗಳೂರು ಕಂಟೋನ್ಮೆಂಟ್ ನಿಂದ ಹೊರಟು, ಮರುದಿನ ಮಧ್ಯಾಹ್ನ 2:40ಕ್ಕೆ ಬೀದರ್ ತಲುಪಲಿದೆ. ಮಾರ್ಗಮಧ್ಯೆ ರೈಲುಗಳಿಗೆ ಯಲಹಂಕ, ಧರ್ಮಾವರಂ, ಅನಂತಪುರ, ಗುಂತಕಲ್, ಆದೋನಿ, ಮಂತ್ರಾಲಯಂ ರೋಡ್, ರಾಯಚೂರು, ಯಾದಗಿರಿ, ವಾಡಿ, ಶಹಾಬಾದ್, ಕಲಬುರಗಿ, ಕಮಲಾಪುರ ಮತ್ತು ಹುಮನಾಬಾದ್ ನಿಲ್ದಾಣಗಳಲ್ಲಿ ನಿಲುಗಡೆಗಳನ್ನು ಕಲ್ಪಿಸಲಾಗಿದೆ. ಈ ವಿಶೇಷ ರೈಲು 24 ಬೋಗಿಗಳ ಸಂಯೋಜನೆಯೊಂದಿಗೆ ಓಡಲಿದೆ. ಇದರಲ್ಲಿ — 1…

Read More

ಶಿವಮೊಗ್ಗ : ರಾಷ್ಟಮಟ್ಟದ ದಸರಾ ಕುಸ್ತಿ ಪಂದ್ಯಾವಳಿ ಅಕ್ಟೋಬರ್.1 ಮತ್ತು 2ರಂದು ಸಾಗರದ ಗಾಂಧಿನಗರದ ಸಂಗೊಳ್ಳಿ ರಾಯಣ್ಣ ಕ್ರೀಡಾಂಗಣದಲ್ಲಿ ಮಧ್ಯಾಹ್ನ 2 ಗಂಟೆಯಿoದ ನಡೆಯಲಿದೆ ಎಂದು ಗಾಂಧಿನಗರ ಯುವಜನ ಸಂಘದ ಅಧ್ಯಕ್ಷ ಸಂತೋಷ್  ಹೇಳಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಕರ್ನಾಟಕ ಕರ‍್ಯನಿರತ ಪತ್ರಕರ್ತರ ಭವನದಲ್ಲಿ ಮಂಗಳವಾರ ಕರೆಯಲಾಗಿದ್ದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಸಂಘದ ಸುವರ್ಣ ಮಹೋತ್ಸವ ಅಂಗವಾಗಿ ಬಂಗಾರದ ಬೆಡಗು ಶೀರ್ಷಿಕೆಯಡಿ ಎರಡು ದಿನಗಳ ಕುಸ್ತಿ ಪಂದ್ಯಾವಳಿ ನಡೆಯಲಿದೆ ಎಂದರು. ಕಳೆದ 49 ವರ್ಷಗಳಿಂದ ಗಾಂಧಿನಗರ ಯುವಜನ ಸಂಘ ಕಲೆ, ಸಾಹಿತ್ಯ, ಸಾಂಸ್ಕೃತಿಕ, ಜಾನಪದ ಸೇರಿ ಹತ್ತು ಹಲವು ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದು ಪ್ರತಿ ವರ್ಷ ದಸರಾ ಕುಸ್ತಿ ನಡೆಸುವ ಮೂಲಕ ದೇಶಾದ್ಯಂತ ಪ್ರಸಿದ್ದಿಯನ್ನು ಪಡೆದಿದೆ. ಸಂಘವು ಸುವರ್ಣ ಮಹೋತ್ಸವ ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಎರಡು ದಿನ ವಿಶೇಷ ಕುಸ್ತಿ ಪಂದ್ಯಾವಳಿ ಹಮ್ಮಿಕೊಂಡಿದ್ದು, ಬೆಳ್ಳಿಗದೆ, ಬಂಗಾರದ ಬಳೆ, ಅಖಾಡ ಬಳೆ, ಪರ್ಸಿ ಬಳೆ ಸೇರಿ ಆಕರ್ಷಕ ನಗದು ಬಹುಮಾನ ಇರುತ್ತದೆ ಎಂದು…

Read More

ನವದೆಹಲಿ: ಬಿಡದಿ ಟೌನ್‌ ಶಿಪ್‌ ಹೆಸರಿನಲ್ಲಿ ಏನೆಲ್ಲಾ ದಂಧೆ ನಡೆಯುತ್ತಿದೆ ಎನ್ನುವುದು ಗೊತ್ತಿದೆ. ಬಡರೈತರಿಂದ ಭೂಮಿ ಕಿತ್ತುಕೊಂಡು ಬೇಕು ಬೇಕಾದವರಿಗೆ ಹಂಚಿಕೊಳ್ಳಲು ಹೊರಟಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು. ನವದೆಹಲಿಯಲ್ಲಿ ಸೋಮವಾರ ತಮ್ಮ ಗೃಹ ಕಚೇರಿಯಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಸಚಿವರು; ಈಗಾಗಲೇ 2-3 ಸಾವಿರ ಎಕರೆ ಭೂಮಿ ಏನೇನ್ ಆಗಿದೆ ಅಂಥ ಗೊತ್ತು. ಕರ್ನಾಟಕದ ಸಂಪತ್ತು ಲೂಟಿ ಹೊಡೆಯುವುದನ್ನು ತಡೆಯಲು ಐದು ವರ್ಷ ಜನ ಅಧಿಕಾರ ಕೊಡಬೇಕು. ಆಗ ನನ್ನ ಶಕ್ತಿ ಏನೆಂದು ತೋರಿಸುತ್ತೇನೆ. ಇಲ್ಲವಾದರೆ ಈಗಿರುವ ವ್ಯವಸ್ಥೆಯಲ್ಲಿ ನಿಮ್ಮ ಕರ್ಮಗಳನ್ನು ತೊಳೆಯಲು ಸಾಧ್ಯವಿಲ್ಲ ಎಂದು ಹೇಳಿದರು. 2006 ರಲ್ಲಿ ನಾನು ಐದು ಟೌನ್ ಶಿಪ್ ಮಾಡುವ ನಿರ್ಧಾರ ಮಾಡಿದ್ದು ನಿಜ. ಬಿಡದಿಯ ಬಳಿ ಟೌನ್ ಶಿಫ್ ಮಾಡುವುದು ನನ್ನ ಕಾರ್ಯಕ್ರಮವೇ ಆಗಿತ್ತು. ಡಿಕೆಶಿ ಅವರನ್ನೇ ಕೇಳಬಯಿಸುತ್ತೇನೆ. ಆ ಯೋಜನೆ ವಿರುದ್ಧ ಕಾಂಗ್ರೆಸ್ ನಾಯಕರೇ ಆಗಿದ್ದ ಹೆಚ್.ಡಿ. ಪಾಟೀಲ್‌, ಉಗ್ರಪ್ಪ ಅವರ ನೇತೃತ್ವದಲ್ಲಿ ರಚನೆ…

Read More

ಬೆಂಗಳೂರು: ರಾಜ್ಯ ಸರ್ಕಾರವು ಗ್ರೇಟರ್ ಬೆಂಗಳೂರು ಪ್ರಾಧಿಕಾರದ 5 ನಗರ ಪಾಲಿಕೆಗಳನ್ನು ಮರು ವಿಂಗಡಣೆ ಮಾಡಿ ಕರಡು ವಾಡ್೯ ವಾರು ಕ್ಷೇತ್ರ ಪುನರ್ ವಿಂಗಡಣೆಯ ಅಧಿಸೂಚನೆಯನ್ನು ಇಂದು ಹೊರಡಿಸಿದೆ. ಈ ಕುರಿತಂತೆ ಕರ್ನಾಟಕ ರಾಜ್ಯಪತ್ರ ಹೊರಡಿಸಲಾಗಿದ್ದು, ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 183 ಬಿಬಿಎಸ್ 2025, ದಿನಾಂಕ:02-09-2025ರಲ್ಲಿ ಸರ್ಕಾರವು ಗ್ರೇಟರ್ ಬೆಂಗಳೂರು ಪ್ರದೇಶದ ವ್ಯಾಪ್ತಿಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ 1) ಬೆಂಗಳೂರು ಕೇಂದ್ರ ನಗರ ಪಾಲಿಕೆ, 2) ಬೆಂಗಳೂರು ಪೂರ್ವ ನಗರ ಪಾಲಿಕೆ, 3) ಬೆಂಗಳೂರು ಪಶ್ಚಿಮ ನಗರ ಪಾಲಿಕೆ, 4) ಬೆಂಗಳೂರು ಉತ್ತರ ನಗರ ಪಾಲಿಕೆ, 5) ಬೆಂಗಳೂರು ದಕ್ಷಿಣ ನಗರ ಪಾಲಿಕೆಗಳಿಗೆ ಸಂಬಂಧಿಸಿದಂತೆ, ಸದರಿ ಕಾಯ್ದೆಯ ಪ್ರಕರಣ 29ರ ಉಪ ಪ್ರಕರಣ (1) ಮತ್ತು (3) ಗಳನ್ವಯ ವಾರ್ಡ್‌ಗಳ ಪುನರ್ ವಿಂಗಡಣೆಗಾಗಿ 03 ತಿಂಗಳ ಅವಧಿಗೆ ಸೀಮಿತವಾಗಿ, ಮುಖ್ಯ ಆಯುಕ್ತರು, ಗ್ರೇಟರ್ ಬೆಂಗಳೂರು ಪ್ರಾಧಿಕಾರ, ಬೆಂಗಳೂರು ಇವರ ಅಧ್ಯಕ್ಷತೆಯಲ್ಲಿ ವಾರ್ಡ್‌ಗಳ ಪುನರ್ ವಿಂಗಡಣಾ ಆಯೋಗವನ್ನು ರಚಿಸಲಾಗಿತ್ತು. ಹಾಗೂ ಸರ್ಕಾರದ ಆದೇಶ ಸಂಖ್ಯೆ: ನಅಇ…

Read More

ಬೆಂಗಳೂರು : ವಿಲಾಸಿ ಸೀರೆಗಳಿಗೆ ಹೆಸರುವಾಸಿಯಾದ ವಿಆರ್‌ಕೆ ಹೆರಿಟೇಜ್ ನಿಂದ ಇದೀಗ “ಥ್ರೆಡ್ಸ್ ಆಫ್ ಹೆರಿಟೇಜ್” ಆಯೋಜಿಸಲಾಗಿದೆ. ಇದು ಭಾರತೀಯ ಕರಕುಶಲ ಮತ್ತು ಜವಳಿ ಸಂಪ್ರದಾಯದ ಕಲೆಯ ಎಕ್ಸ್ ಕ್ಲೂಸಿವ್ ಆದಂಥ ಪ್ರದರ್ಶನವಾಗಿದೆ. ಒಟ್ಟಾರೆಯಾಗಿ ಈ ಪ್ರದರ್ಶನದಲ್ಲಿ ದೇಶದಾದ್ಯಂತದ ಒಂಬತ್ತು ವಿಶಿಷ್ಟ ಸೀರೆ ನೇಯ್ಗೆಗಳನ್ನು ಒಂದೆಡೆ ಕಲೆ ಹಾಕಲಾಗಿದೆ. ಅದರಲ್ಲಿ ಕಾಂಜೀವರಂ, ಬನಾರಸಿ, ಗದ್ವಾಲ್, ಪೈಥಾಣಿ, ಪರಾಣ್ ಪಠೋಲ, ಝರಿ ಕೋಟಾ, ಕಲಾಂಕರಿ, ಮೈಸೂರು ರೇಷ್ಮೆ ಹಾಗೂ ಬಾಂಧನಿ ಒಳಗೊಂಡಿದೆ. ಇದರಲ್ಲಿ ಪ್ರತಿಯೊಂದು ಸಹ ಭಾರತದ ಸಾಂಸ್ಕೃತಿಕ ಶ್ರೀಮಂತಿಕೆ ಹಾಗೂ ಕುಸುರಿಗಾರಿಕೆಯ ಗಾಥೆಯನ್ನು ಹೇಳುವ ರೀತಿಯಲ್ಲಿ ಇದೆ. ಈ ಪ್ರದರ್ಶನವನ್ನು ಉದ್ಘಾಟಿಸಿದವರು ಅದ್ಭುತ ನೇಯ್ಗೆಗೆ ಹೆಸರಾದ- ಗುಜರಾತ್ ನ ಅಹಮದಾಬಾದ್ ನವರಾದ ಪ್ರವೀಣ್ ಭಾಯ್ ಸಿ ಪಠೋಲ್ ವಾಲಾ. ಪರಂಪರೆಯ ಮಾತಿನ ಮೂಲಕವಾಗಿ ಅವರು ಪ್ರೇಕ್ಷಕರನ್ನು ಆಕರ್ಷಿಸಿದರು. ತುಂಬ ಒಳನೋಟಗಳನ್ನು ಹೊಂದಿದ್ದಂಥ ಸೆಷನ್ ಅವರದಾಗಿತ್ತು. ಅದರಲ್ಲಿ ಝರಿ ಕೋಟಾದ ನೇಯ್ಗೆಯ ಸೂಕ್ಷ್ಮ ತಂತ್ರಗಳು ಹಾಗೂ ಅದರ ಪರಂಪರೆಯ ಬಗ್ಗೆ ತುಂಬ ಚೆನ್ನಾಗಿ…

Read More

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಮೊದಲು ಪರಿಹಾರ ಘೋಷಣೆ ಮಾಡಿ ನಂತರ ವೈಮಾನಿಕ ಸಮೀಕ್ಷೆ ಮಾಡಬೇಕಿತ್ತು. ಪರಿಹಾರವನ್ನೇ ತಿಳಿಸದೆ ಕೇವಲ ಸಮೀಕ್ಷೆ ಮಾಡಲಾಗುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ದೂರಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಆಗಿರುವ ಪ್ರವಾಹದ ಸ್ಥಿತಿ ವೀಕ್ಷಿಸಲು ಸಿಎಂ ಸಿದ್ದರಾಮಯ್ಯ ವೈಮಾನಿಕ ಸಮೀಕ್ಷೆ ಮಾಡುತ್ತಿದ್ದಾರೆ. ಎಲ್ಲ ರಸ್ತೆಗಳಲ್ಲಿ ಗುಂಡಿ ಇರುವುದರಿಂದ ಹಾಗೂ ರಸ್ತೆ ತಡೆದು ಜನರು ಪ್ರತಿಭಟಿಸುವುದರಿಂದ ಭಯಗೊಂಡ ಮುಖ್ಯಮಂತ್ರಿ ಹೆಲಿಕಾಪ್ಟರ್‌ನಲ್ಲಿ ವೀಕ್ಷಣೆ ಮಾಡುತ್ತಿದ್ದಾರೆ. ಜೋಳ ತೊಗರಿ ಸೇರಿದಂತೆ ಪ್ರತಿ ಬೆಳೆಗಳ ಹಾನಿ, ಮನೆ ಹಾನಿ, ಶಾಲೆ ಹಾನಿಗೆ ಎಷ್ಟು ಪರಿಹಾರ ನೀಡಲಾಗುತ್ತದೆ ಎಂದು ಸರ್ಕಾರ ಘೋಷಣೆ ಮಾಡಬೇಕಿತ್ತು. ಆದರೆ ಈವರೆಗೆ ಸರ್ಕಾರ ಆದೇಶ ಮಾಡಿಲ್ಲ. ಒಂದು ಕಡೆ ಖಜಾನೆ ಖಾಲಿಯಾಗಿದೆ. ಮತ್ತೊಂದು ಕಡೆ ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡಲು ಸಿದ್ಧತೆ ನಡೆದಿದೆ ಎಂದು ದೂರಿದರು. ಮುಖ್ಯಮಂತ್ರಿಗಳು ಸಚಿವರ ತಂಡ ರಚಿಸಬೇಕಿತ್ತು. ಅಧಿಕಾರಿಗಳ ಸಭೆ ಕರೆದು ನೋಡಲ್‌ ಅಧಿಕಾರಿಗಳನ್ನು ನಿಯೋಜಿಸಬೇಕಿತ್ತು. ಪುನರ್ವಸತಿ ಕೇಂದ್ರಗಳಲ್ಲಿ ಸರಿಯಾಗಿ ಆಹಾರ…

Read More

ಮಂಡ್ಯ: ದೀಪಾವಳಿ ಹಬ್ಬದ ಅಂಗವಾಗಿ ಹಸಿರು ಪಟಾಕಿ ಮಾರಾಟಕ್ಕೆ ಮಾತ್ರ ಜಿಲ್ಲೆಯಲ್ಲಿ ಅವಕಾಶ ನೀಡಲಾಗಿದೆ. ಹಸಿರು ಪಟಾಕಿ ಹೊರತು ಪಡಿಸಿ ಬೇರೆ ಪಟಾಕಿ ಮಾರಾಟ ಮಾಡಿದರೆ ಶಿಸ್ತುಬದ್ಧ ಕ್ರಮ ಜಾರಿಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ ಕುಮಾರ ಅವರು ಹೇಳಿದರು. ಇಂದು (ಸೆ.30) ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಪಟಾಕಿ ಮಾರಾಟ ಮಾಡಲು ತಾತ್ಕಾಲಿಕ ಪರವಾನಿಗೆ ನೀಡುವ ಸಂಬಂಧ ಆಯೋಜಿಸಲಾಗಿದ್ದ ಪೂರ್ವ ಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಅಕ್ಟೋಬರ್ 18 ರಿಂದ 23 ರವರೆಗೆ ಮಾತ್ರ ಪಟಾಕಿ ಮಾರಾಟಗಾರರಿಗೆ ತಾತ್ಕಾಲಿಕ ಪರವಾನಗಿ ನೀಡಲಾಗುವುದು. ಜಿಲ್ಲಾಡಳಿತ ಹಾಗೂ ತಾಲ್ಲೂಕು‌ ಆಡಳಿತ ಪಟಾಕಿ ಮಾರಾಟಕ್ಕೆ ಸ್ಥಳ ನಿಗದಿ ಮಾಡಲಿದೆ. ನಿಗಧಿಪಡಿಸಿದ ಸ್ಥಳದಲ್ಲಿ ಮಾತ್ರ ಪಟಾಕಿ‌ ಅಂಗಡಿಗಳನ್ನು ತೆರೆಯಬೇಕು ಎಂದು ಹೇಳಿದರು. ತಾಲ್ಲೂಕು ಮಟ್ಟದಲ್ಲಿ ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗುವುದು, ತಹಶೀಲ್ದಾರ್ ನೇತೃತ್ವದ ಸಮಿತಿಯು ಆಯಾ ತಾಲೂಕು ಮಟ್ಟದಲ್ಲಿ ಪಟಾಕಿ ಮಾರಾಟಗಾರರಿಗೆ ಮಳಿಗೆಗಳನ್ನು ತೆರೆಯಲು ಅನುಮತಿ ನೀಡುವ ಸಂದರ್ಭದಲ್ಲಿ ಸೂಕ್ತ ಜಾಗವನ್ನು ಗುರುತಿಸಿ ಅನುಮತಿ…

Read More

ಪಾಟ್ನಾ: ವಿಧಾನಸಭಾ ಚುನಾವಣೆಗೆ ಮುನ್ನ ಬಿಹಾರದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (SIR) ನಂತರ ಚುನಾವಣಾ ಆಯೋಗವು ಮಂಗಳವಾರ ಅಂತಿಮ ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಪರಿಷ್ಕೃತ ಪಟ್ಟಿಯನ್ನು ಚುನಾವಣಾ ಸಮಿತಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಲಭ್ಯವಾಗುವಂತೆ ಮಾಡಲಾಗಿದೆ. ಬಿಹಾರದಲ್ಲಿ ವಿಧಾನಸಭಾ ಚುನಾವಣೆಯನ್ನು ಈ ಮತದಾರರ ಪಟ್ಟಿಯನ್ನು ಬಳಸಿಕೊಂಡು ನಡೆಸಲಾಗುವುದು. ಜಿಲ್ಲಾ ಮ್ಯಾಜಿಸ್ಟ್ರೇಟ್‌ಗಳಾಗಿಯೂ ಸೇವೆ ಸಲ್ಲಿಸುವ ಎಲ್ಲಾ ಜಿಲ್ಲಾ ಚುನಾವಣಾ ಅಧಿಕಾರಿಗಳಿಗೆ ಪಟ್ಟಿಯ ಭೌತಿಕ ಪ್ರತಿಗಳನ್ನು ವಿತರಿಸಲಾಗುವುದು ಎಂದು ಬಿಹಾರದ ಮುಖ್ಯ ಚುನಾವಣಾ ಅಧಿಕಾರಿ (CEO) ಹೇಳಿದ್ದಾರೆ. ಇದಲ್ಲದೆ, ಅಂತಿಮ ಪಟ್ಟಿಯನ್ನು ಎಲ್ಲಾ ಮಾನ್ಯತೆ ಪಡೆದ ರಾಷ್ಟ್ರೀಯ ಮತ್ತು ರಾಜ್ಯ ರಾಜಕೀಯ ಪಕ್ಷಗಳೊಂದಿಗೆ ಹಂಚಿಕೊಳ್ಳಲಾಗುತ್ತದೆ. https://kannadanewsnow.com/kannada/shepherds-should-not-be-included-in-st-appeal-from-shri-maharishi-valmiki-welfare-development-association-to-tahsildar-in-sorab/ https://kannadanewsnow.com/kannada/green-signal-for-temporary-selection-of-guest-lecturers-from-the-state-government-these-conditions-apply/

Read More

ಶಿವಮೊಗ್ಗ: ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡ (ಎಸ್‌.ಟಿ)ಕ್ಕೆ ಸೇರಿಸಬಾರದು ಎಂದು ಆಗ್ರಹಿಸಿ ಸೊರಬ ತಾಲ್ಲೂಕು ಶ್ರೀ ಮಹರ್ಷಿ ವಾಲ್ಮೀಕಿ ಕ್ಷೇಮಾಭಿವೃದ್ಧಿ ಸಂಘದಿಂದ ಪಟ್ಟಣದ ತಾಲೂಕು ಕಚೇರಿ ಮುಂಭಾಗ ಮಂಗಳವಾರ ಪ್ರತಿಭಟನೆ ನಡೆಸಿ, ತಹಶೀಲ್ದಾರ್ ಮಂಜುಳಾ ಬಿ. ಹೆಗಡಾಳ್ ಅವರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಶಿವಮೊಗ್ಗ ಜಿಲ್ಲೆಯ ಸೊರಬದಲ್ಲಿ ಪ್ರತಿಭಟನೆಯ ನೇತೃತ್ವ ವಹಿಸಿದ್ದ ಸಂಘದ ಅಧ್ಯಕ್ಷ ಎಸ್. ಗಣಪತಿ ಮಾತನಾಡಿ, ಕುರುಬ ಸಮುದಾಯ ಆರ್ಥಿಕವಾಗಿ, ಶೈಕ್ಷಣಿಕವಾಗಿ, ಸಾಮಾಜಿಕವಾಗಿ, ರಾಜಕೀಯವಾಗಿ ಮತ್ತು ಔದ್ಯೋಗಿಕವಾಗಿ ಸದೃಢವಾಗಿದೆ. ಆದ್ದರಿಂದ, ಸದೃಢ ಸಮುದಾಯವನ್ನು ಹಿಂದುಳಿದಿರುವ ಪರಿಶಿಷ್ಟ ಪಂಗಡಕ್ಕೆ ಸೇರಿಸುವುದು ಸಂವಿಧಾನ ವಿರೋಧಿಯಾಗಿದೆ. ಅನ್ಯ ಸಮುದಾಯಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವುದು ಸರಿಯಲ್ಲ. ಈ ನಿರ್ಧಾರ ಕೈಬಿಡಬೇಕು. ಇಲ್ಲವಾದಲ್ಲಿರಾಜ್ಯದಾದ್ಯಂತ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು. ಹಿಂದುಳಿದ ವರ್ಗದ ಪ್ರವರ್ಗ-1ರಲ್ಲಿರುವ ಬೆಸ್ತ, ಅಂಬಿಗ, ಕಬ್ಬಲಿಗ, ಕಬ್ಬೇರ, ಕೂಲಿ ಮುಂತಾದ ಸಮುದಾದವರಿಗೆ ನಕಲಿ ಎಸ್ಟಿ ಪ್ರಮಾಣ ಪತ್ರ ನೀಡುವುದನ್ನು ನಿಲ್ಲಿಸಬೇಕು. ನಾಯಕ ತಳವಾರ ಜಾತಿಗೆ ಸೇರಿಲ್ಲದವರು ವಾಮ ಮಾರ್ಗದಲ್ಲಿ ಪರಿಶಿಷ್ಟ ಪಂಗಡದ…

Read More

ಶಿವಮೊಗ್ಗ: ವಿವಿಧ ಸಂಘಟನೆಗಳಲ್ಲಿ ಸೇವೆ ಮಾಡಿದ ಅನುಭವ ತಮಗಿದ್ದು, ಕನ್ನಡ ರಕ್ಷಣಾ ವೇದಿಕೆ ಅಪ್ಪುಸೇನೆ ಮೂಲಕ ಪಟ್ಟಣ ಸೇರಿದಂತೆ ಹಳ್ಳಿಗಳಲ್ಲಿ ಸಂಘಟನೆ ಮಾಡಿ ಕನ್ನಡ ನಾಡು ನುಡಿಯ ಸೇವೆ ಮಾಡಲಾಗುವುದು ಎಂದು ಕನ್ನಡ ರಕ್ಷಣಾ ವೇದಿಕೆ ಅಪ್ಪುಸೇನೆ ತಾಲ್ಲೂಕು ಅಧ್ಯಕ್ಷ ಮಂಜುನಾಥ್ ಉಪ್ಪಳ್ಳಿ ಹೇಳಿದರು. ಇಂದು ಶಿವಮೊಗ್ಗ ಜಿಲ್ಲೆಯ ಸೊರಬ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕನ್ನಡ ರಕ್ಷಣಾ ವೇದಿಕೆ ಅಪ್ಪುಸೇನೆಯ ಪದಾಧಿಕಾರಿಗಳ ಆಯ್ಕೆ ಸಭೆಯಲ್ಲಿ ಸಂಘಟನೆಯ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿ ಮಾತನಾಡಿದಂತ ಅವರು, ಕನ್ನಡ ನಾಡು,ನುಡಿಯ ಬಗ್ಗೆ ಕನ್ನಡಿಗರಾಗಿ ಅಭಿಮಾನವಿರಬೇಕು. ಯಾವುದೇ ವ್ಯಕ್ತಿ ಹೋರಾಡುವ ಜನಪರ ಕಾರ್ಯಗಳಿಗೆ ಇವತ್ತು ಬೆಲೆ ಇದೆ. ಕನ್ನಡದ ನೆಲ,ಜಲದ ಪ್ರಶ್ನೆ ಎದುರಾದಗ ಹೋರಾಟಕ್ಕೆ ಸಿದ್ಧವಿರಬೇಕು ಎಂದರು. ಜಿಲ್ಲಾ ಗೌರವಾಧ್ಯಕ್ಷ ಪ್ರವೀಣ್ ಹಿರೇಇಡಗೋಡು ಪದಾಧಿಕಾರಿಗಳಿಗೆ ಪ್ರಮಾಣ ಪತ್ರ ವಿತರಿಸಿ ಮಾತನಾಡಿ, ಕನ್ನಡ ರಕ್ಷಣಾ ವೇದಿಕೆ ಅಪ್ಪುಸೇನೆ ವತಿಯಿಂದ ಕನ್ನಡ ಪರ ಕೆಲಸಗಳ ಜತೆಗೆ ಸಮಾಜ ಸೇವೆ, ರಕ್ತದಾನ ಶಿಬಿರ, ವನಮಹೋತ್ಸವ, ರೋಗಿಗಳಿಗೆ ಸಹಾಯಹಸ್ತ ಇನ್ನಿತರೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ…

Read More