Author: kannadanewsnow09

ನವದೆಹಲಿ: ಬಿಹಾರ ಮತ್ತು ಆಂಧ್ರಪ್ರದೇಶದಲ್ಲಿ ಮೂಲಸೌಕರ್ಯಗಳನ್ನು ಹೆಚ್ಚಿಸುವ ಗುರಿಯನ್ನು ಹೊಂದಿರುವ 6,798 ಕೋಟಿ ರೂ.ಗಳ ಅಂದಾಜು ವೆಚ್ಚದ ಎರಡು ಮಹತ್ವದ ರೈಲ್ವೆ ಯೋಜನೆಗಳಿಗೆ ಕ್ಯಾಬಿನೆಟ್ ಅಕ್ಟೋಬರ್ 24 ರಂದು ಅನುಮೋದನೆ ನೀಡಿದೆ. ಅನುಮೋದಿತ ಎರಡು ಯೋಜನೆಗಳೆಂದರೆ – (ಎ) ನರ್ಕಟಿಯಾಗಂಜ್-ರಕ್ಸೌಲ್-ಸೀತಾಮರ್ಹಿ-ದರ್ಭಂಗಾ ಮತ್ತು ಸೀತಾಮರ್ಹಿ-ಮುಜಾಫರ್ಪುರ ವಿಭಾಗವನ್ನು 256 ಕಿ.ಮೀ ವ್ಯಾಪ್ತಿಯ ದ್ವಿಗುಣಗೊಳಿಸುವುದು ಮತ್ತು (ಬಿ) ಅಮರಾವತಿ ಮೂಲಕ ಎರ್ರುಪಲೆಮ್ ಮತ್ತು ನಂಬೂರು ನಡುವೆ 57 ಕಿ.ಮೀ ಉದ್ದದ ಹೊಸ ಮಾರ್ಗವನ್ನು ನಿರ್ಮಿಸುವುದು. “ನರ್ಕಟಿಯಾಗಂಜ್-ರಕ್ಸೌಲ್-ಸೀತಾಮರ್ಹಿ-ದರ್ಭಂಗಾ ಮತ್ತು ಸೀತಾಮರ್ಹಿ-ಮುಜಾಫರ್ಪುರ ವಿಭಾಗವನ್ನು ದ್ವಿಗುಣಗೊಳಿಸುವುದರಿಂದ ನೇಪಾಳ, ಈಶಾನ್ಯ ಭಾರತ ಮತ್ತು ಗಡಿ ಪ್ರದೇಶಗಳಿಗೆ ಸಂಪರ್ಕವನ್ನು ಬಲಪಡಿಸುತ್ತದೆ ಮತ್ತು ಸರಕು ರೈಲುಗಳ ಜೊತೆಗೆ ಪ್ರಯಾಣಿಕರ ರೈಲುಗಳ ಸಂಚಾರಕ್ಕೆ ಅನುಕೂಲವಾಗುತ್ತದೆ, ಇದರಿಂದಾಗಿ ಈ ಪ್ರದೇಶದ ಸಾಮಾಜಿಕ-ಆರ್ಥಿಕ ಬೆಳವಣಿಗೆಗೆ ಕಾರಣವಾಗುತ್ತದೆ. ಹೊಸ ರೈಲು ಮಾರ್ಗ ಯೋಜನೆ ಎರ್ರುಪಾಲೆಮ್-ಅಮರಾವತಿ-ನಂಬೂರು ಆಂಧ್ರಪ್ರದೇಶದ ಎನ್ಟಿಆರ್ ವಿಜಯವಾಡ ಮತ್ತು ಗುಂಟೂರು ಜಿಲ್ಲೆಗಳು ಮತ್ತು ತೆಲಂಗಾಣದ ಖಮ್ಮಮ್ ಜಿಲ್ಲೆಯ ಮೂಲಕ ಹಾದುಹೋಗುತ್ತದೆ ಎಂದು ಸರ್ಕಾರ ಹೇಳಿಕೆಯಲ್ಲಿ ತಿಳಿಸಿದೆ. ಈ ಎರಡು…

Read More

ಮೈಸೂರು: ಪ್ರವಾಸಿಗರಿ ಬಿಗ್ ಶಾಕ್ ಎನ್ನುವಂತೆ ಮೈಸೂರು ಆಡಳಿತ ಮಂಡಳಿಯಿಂದ ಅರಮನೆ ಪ್ರವೇಶ ಶುಲ್ಕವನ್ನು ಹೆಚ್ಚಳ ಮಾಡಿ ಆದೇಶಿಸಿದೆ.  ಈ ಸಂಬಂಧ ಮೈಸೂರಿನ ಅರಮನೆ ಆಡಳಿತ ಮಂಡಳಿಯಿಂದ ಪರಿಷ್ಕೃತ ಪ್ರವೇಶ ದರದ ಆದೇಶವನ್ನು ಮಾಡಲಾಗಿದೆ. ವಿದೇಶಿಕರ ಪ್ರವೇಶ ಶುಲ್ಕವನ್ನು 1000ಕ್ಕೆ ಏರಿಕೆ ಮಾಡಲಾಗಿದೆ. ಈ ಹಿಂದೆ 100 ಇದ್ದಂತ ಪ್ರವೇಶ ದರವನ್ನು 900ಕ್ಕೆ ಹೆಚ್ಚಿಸಲಾಗಿದೆ. ಇನ್ನೂ ಭಾರತೀಯ ವಯಸ್ಕರಿಗೆ ಪ್ರವೇಶ ಶುಲ್ಕವನ್ನು 100 ರೂ ನಿಂದ 120 ರೂಗೆ ಏರಿಕೆ ಮಾಡಲಾಗಿದೆ. 10 ರಿಂದ 18 ವರ್ಷದೊಳಗಿನ ಮಕ್ಕಳಿಗೆ ರೂ.70, ಪ್ರವಾಸಕ್ಕೆ ಬರುವಂತ ವಿದ್ಯಾರ್ಥಿಗಳಿಗೆ ತಲಾ ರೂ.50 ದರವನ್ನು ನಿಗದಿ ಪಡಿಸಲಾಗಿದೆ. ಇನ್ನೂ ಅರಮನೆ ಒಳಗಿನ ಚಪ್ಪಲಿ ಸ್ಟಾಂಡ್, ಲಗೇಜ್ ಕೊಠಡಿಗೆ ವಿಧಿಸಲಾಗುತ್ತಿದ್ದಂತ ದರವನ್ನು ರದ್ದುಗೊಳಿಸಲಾಗಿದೆ. ಉಚಿತ ಸೇವೆ ನೀಡಲು ಅರಮನೆ ಆಡಳಿತ ಮಂಡಳಿ ನಿರ್ಧರಿಸಿರುವುದಾಗಿ ಆದೇಶದಲ್ಲಿ ತಿಳಿಸಲಾಗಿದೆ. https://kannadanewsnow.com/kannada/sanjiv-khanna-appointed-as-next-chief-justice-of-india/ https://kannadanewsnow.com/kannada/a-rare-drum-artist-in-the-state-you-will-be-shocked-to-hear-about-his-achievements/

Read More

ನವದೆಹಲಿ: ಹಾಲಿ ಸಿಜೆಐ ಡಿ.ವೈ.ಚಂದ್ರಚೂಡ್ ಅವರು ಕೇಂದ್ರ ಕಾನೂನು ಸಚಿವಾಲಯಕ್ಕೆ ಪತ್ರ ಬರೆದ ಕೆಲವೇ ದಿನಗಳಲ್ಲಿ ರಾಷ್ಟ್ರಪತಿಗಳು ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರನ್ನು ಭಾರತದ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಿದ್ದಾರೆ. ಈ ನೇಮಕಾತಿ ನವೆಂಬರ್ 11 ರಿಂದ ಜಾರಿಗೆ ಬರಲಿದೆ. ಈ ಕುರಿತು ಟ್ವೀಟ್ ಮಾಡಿರುವ ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್, ಭಾರತದ ಸಂವಿಧಾನವು ನೀಡಿರುವ ಅಧಿಕಾರವನ್ನು ಚಲಾಯಿಸಿ, ಗೌರವಾನ್ವಿತ ರಾಷ್ಟ್ರಪತಿಗಳು, ಭಾರತದ ಗೌರವಾನ್ವಿತ ಮುಖ್ಯ ನ್ಯಾಯಮೂರ್ತಿಗಳೊಂದಿಗೆ ಸಮಾಲೋಚಿಸಿದ ನಂತರ, ಭಾರತದ ಸುಪ್ರೀಂ ಕೋರ್ಟ್ನ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರನ್ನು ನವೆಂಬರ್ 11 ರಿಂದ ಜಾರಿಗೆ ಬರುವಂತೆ ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲು ಸಂತೋಷಪಡುತ್ತಾರೆ ಎಂದು ತಿಳಿಸಿದ್ದಾರೆ. https://twitter.com/arjunrammeghwal/status/1849464974193950825 https://kannadanewsnow.com/kannada/channapatna-by-election-nikhils-announcement-of-alliance-candidate-was-pre-planned-says-mla-uday/ https://kannadanewsnow.com/kannada/a-rare-drum-artist-in-the-state-you-will-be-shocked-to-hear-about-his-achievements/

Read More

ಮಂಡ್ಯ : ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಅವರನ್ನು ಘೋಷಣೆ ಮಾಡಿರುವುದು ಪೂರ್ವ ನಿಯೋಜಿತ ಎಂದು ಮದ್ದೂರು ಕ್ಷೇತ್ರದ ಶಾಸಕ ಕೆ.ಎಂ.ಉದಯ್ ಅಚ್ಚರಿ ಹೇಳಿಕೆ ನೀಡಿದ್ದಾರೆ. ಮದ್ದೂರು ಪಟ್ಟಣದ ಶಿವಪುರದ ಶಾಸಕರ ಕಛೇರಿಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಅವರನ್ನು ಕಣಕ್ಕಿಳಿಸುವ ಬಗ್ಗೆ ಅವರ ಕುಟುಂಬದಲ್ಲಿ ಈ ಹಿಂದೆಯೇ ತೀರ್ಮಾನವಾಗಿತ್ತು. ಆದ್ರೆ ಜನಗಳ ಸಿಂಪತಿ ಗಿಟ್ಟಿಸಿಕೊಳ್ಳಲು ಈ ರೀತಿಯ ದೊಂಬರಾಟ ಮಾಡ್ತಿದ್ದರು ಎಂದು ಕಿಡಿಕಾರಿದರು. ಹೀಗಾಗಿ ನನಗೆ ಟಿಕೆಟ್ ಖಚಿತ ಎಂದು ಅರಿತಿದ್ದ ನಿಖಿಲ್ ಕ್ಷೇತ್ರದಾದ್ಯಂತ ಮಿಂಚಿನ ಪ್ರಚಾರ ಕೈಗೊಂಡಿದ್ದರು. ಮೈತ್ರಿ ಅಭ್ಯರ್ಥಿಯಾಗಿ ಯೋಗೇಶ್ವರ್ ಕಣಕ್ಕಿಳಿಸುವುದಾಗಿ ಕಾಟಾಚಾರದ ಮಾತುಗಳನ್ನು ಹೇಳುತ್ತಿದ್ದರು. ಆದ್ರೆ, ದೇವೇಗೌಡ್ರು ಹಾಗೂ ಕುಮಾರಸ್ವಾಮಿಗೆ ಕ್ಷೇತ್ರವನ್ನು ಬಿಟ್ಟು ಕೊಡಲು ಸುತಾರಾಂ ಇಷ್ಟವಿರಲಿಲ್ಲ. ಹೀಗಾಗಿ ಯೋಗೇಶ್ವರ್ ಬಿಜೆಪಿ ತೊರೆಯುವವರೆಗೂ ಕಾಯ್ದುಕೊಂಡಿದ್ದ ಕುಮಾರಸ್ವಾಮಿ ಈಗ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಅವರನ್ನು ಘೋಷಣೆ ಮಾಡಿದ್ದಾರೆ. ಈ ಚುನಾವಣೆಯಲ್ಲೂ ನಿಖಿಲ್ ಗೆ ಸೋಲು…

Read More

ಬೆಂಗಳೂರು: ನಗರದ ಬಾಬುಸಾಬ್ ಪಾಳ್ಯದಲ್ಲಿನ ಕಟ್ಟಡ ಕುಸಿತ ಘಟನೆ ಹಸಿರಾಗೋ ಮುನ್ನವೇ ಬೆಂಗಳೂರಲ್ಲಿ ಮತ್ತೊಂದು ಕಟ್ಟಡ ಕುಸಿತದ ಸ್ಥಿತಿಯಲ್ಲಿ ಇರುವುದಾಗಿ ತಿಳಿದು ಬಂದಿದೆ. ಬೆಂಗಳೂರಿನ ಬಸವೇಶ್ವರ ನಗರದ ಭದ್ರಪ್ಪ ಲೇಔಟ್ ನಲ್ಲಿರುವಂತ 3 ಅಂತಸ್ತಿನ ಕಟ್ಟಡ ನೆಲ ಮಹಡಿಯಲ್ಲಿ ಬಿರುಕು ಕಾಣಿಸಿಕೊಂಡಿದೆ. ಹೀಗಾಗಿ ಕುಸಿಯುವ ಹಂತಕ್ಕೂ ಕಟ್ಟಡ ತಲುಪಿದೆ. ಮೂರು ಅಂತಸ್ತಿನ ಕಟ್ಟಡ ಕುಸಿಯುವ ಹಂತಕ್ಕೆ ತಲುಪಿರುವ ಕಾರಣ ಅದರಲ್ಲಿದ್ದಂತ 25 ಮಂದಿಯನ್ನು ಸ್ಥಳಾಂತರಿಸಲಾಗಿದೆ. ಈ ವಿಷಯ ತಿಳಿದು ಶಾಸಕ ಗೋಪಾಲಯ್ಯ ಅವರು ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. https://kannadanewsnow.com/kannada/big-shock-to-illegal-building-owners-map-violators-in-bengaluru-bbmp-orders-eviction/ https://kannadanewsnow.com/kannada/school-education-department-issues-warning-to-teachers-in-the-state-fixes-action/

Read More

ಬೆಂಗಳೂರು: ನಗರಲ್ಲಿನ ಅಕ್ರಮ ಕಟ್ಟಡ ಮಾಲೀಕರು, ನಕ್ಷೆ ಉಲ್ಲಂಘಿಸಿ ಕಟ್ಟಡ ನಿರ್ಮಾಣ ಮಾಡಿದವರಿಗೆ ಬಿಬಿಎಂಪಿ ಬಿಗ್ ಶಾಕ್ ನೀಡಿದೆ. ಅದೇ ಅಕ್ರಮವಾಗಿ ಕಟ್ಟಿದ ಕಟ್ಟಡ, ನಕ್ಷೆ ಉಲ್ಲಂಘಿಸಿ ಕಟ್ಟಿದ ಕಟ್ಟಡಗಳನ್ನು ತೆರವುಗೊಳಿಸಲು ಆದೇಶಿಸಿದೆ. ಬೆಂಗಳೂರು ನಗರದಲ್ಲಿ ನಕ್ಷೆ ಉಲ್ಲಂಘಿಸಿ ನಿರ್ಮಿಸಲಾಗುತ್ತಿರುವ ಕಟ್ಟಡಗಳು ಹಾಗೂ ಅನಧಿಕೃತ ನಿರ್ಮಾಣಗಳನ್ನು ತೆರವುಗೊಳಿಸಲು ವಲಯ ಆಯುಕ್ತರಿಗೆ ಜವಾಬ್ದಾರಿ ನೀಡಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಆದೇಶ ಹೊರಡಿಸಿದ್ದಾರೆ. ನಗರದಲ್ಲಿ ಮಂಜೂರಾಗುವ ಕಟ್ಟಡ ನಕ್ಷೆಗಳನ್ನು ಆನ್‌ಲೈನ್‌ನಲ್ಲಿ ಪ್ರಕಟಿಸಲಾಗುತ್ತದೆ. ಈ ನಕ್ಷೆ ಮಂಜೂರಾದ 30 ದಿನಗಳೊಳಗೆ ಕಟ್ಟಡ ಮಾಲೀಕರು ಅಥವಾ ಅವರ ಪ್ರತಿನಿಧಿಗಳ ಸಮ್ಮುಖದಲ್ಲಿ ʼಬಿಲ್ಡಿಂಗ್‌ ಪ್ಲಿಂಥ್‌ ಲೈನ್‌ʼ ಅನ್ನು ನಗರ ಯೋಜನೆ ಅಧಿಕಾರಿಗಳು ಗುರುತು ಮಾಡಿಕೊಡಬೇಕು. ಅದನ್ನು ಕೇಂದ್ರ ಹಾಗೂ ವಲಯ ಕಚೇರಿಯ ಜಂಟಿ ನಿರ್ದೇಶಕರು ದೃಢೀಕರಿಸಬೇಕು ಎಂದಿದ್ದಾರೆ. ವಾರ್ಡ್‌ನಲ್ಲಿ ಕಿರಿಯ, ಸಹಾಯಕ ಎಂಜಿನಿಯರ್‌, ಸಹಾಯಕ ಕಾರ್ಯಪಾಲಕ ಎಂಜಿನಿಯರ್‌, ಕಾರ್ಯಪಾಲಕ ಎಂಜಿನಿಯರ್‌ಗಳು ಮಂಜೂರಾದ ನಕ್ಷೆಯ ವಿವರ ಪಡೆದುಕೊಂಡು ಅದರ ಅನುಸಾರ ಕಟ್ಟಡ ನಿರ್ಮಾಣ ಪ್ರಗತಿಯಲ್ಲಿರುವುದನ್ನು ಕಾಲಕಾಲಕ್ಕೆ ಖಾತ್ರಿಪಡಿಸಿಕೊಳ್ಳಬೇಕು.…

Read More

ಬೆಂಗಳೂರು: ನಿರ್ಧಿಷ್ಟಪಡಿಸಿದ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವವರು ಯಾವುದೇ ಶಿಕ್ಷಕರು ಸಂಘ ಸಂಸ್ಥೆಗಳ ಚುನಾವಣೆಯಲ್ಲಿ ಸ್ಪರ್ಧಿಸಲು ಅಥವಾ ಚುನಾವಣಾ ಪ್ರಚಾರ ಕಾರ್ಯದಲ್ಲಿ ಸಕ್ರಿಯವಾಗಿ ಭಾಗವಹಿಸಲು ಮತ್ತು ಪದಾಧಿಕಾರಿಯಾಗಲು ಅವಕಾಶವಿಲ್ಲದಿರುವ ಎಂಬುದಾಗಿ ಶಾಲಾ ಶಿಕ್ಷಣ ಇಲಾಖೆ ಸ್ಪಷ್ಟ ಪಡಿಸಿದೆ. ಒಂದು ವೇಳೆ ಈ ನಿಯಮವನ್ನು ಮೀರಿದ್ರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಅಧಿಕೃತ ಜ್ಞಾಪನ ಹೊರಡಿಸಿದ್ದು, ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು [ಶಿಕ್ಷಕರ ವರ್ಗಾವಣೆ ನಿಯಂತ್ರಣ] ಅಧಿನಿಯಮ-2020 [2020ರ ಕರ್ನಾಟಕ ಅಧಿನಿಯಮ ಸಂಖ್ಯೆ: 04) ಸೆಕ್ಷನ್-8(1) ರಲ್ಲಿ ಹಾಗೂ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು [ಶಿಕ್ಷಕರ ವರ್ಗಾವಣೆ ನಿಯಂತ್ರಣ] ನಿಯಮಗಳು-2020ರ ನಿಯಮ-15ರಲ್ಲಿ ಕಲ್ಪಿಸಿರುವ ಅವಕಾಶಗಳಂತೆ ನಿರ್ಧಿಷ್ಟಪಡಿಸಿದ ಹುದ್ದೆಗಳಿಗೆ (Specified post) ಲಿಖಿತ ಪರೀಕ್ಷೆ ನಡೆಸುವ ಮೂಲಕ ಅಯ್ಕೆಯಾದ ಶಿಕ್ಷಕರನ್ನು ಕೌನ್ಸಿಲಿಂಗ್ ಮೂಲಕ ನಿರ್ಧಿಷ್ಟಪಡಿಸಿದ ಹುದ್ದೆಗೆ ಸ್ಥಳ ನಿಯುಕ್ತಿಗೊಳಿಸಲಾಗಿರುತ್ತದೆ. ಈ ಸಂಬಂಧ ಉಲ್ಲೇಖಿತ-3 ರಲ್ಲಿ ಹೊರಡಿಸಲಾಗಿರುವ ಅಧಿಸೂಚನೆಯ (ಪುಟ ಸಂ-2 ಕ್ರ.ಸಂ-8, ಪುಟ ಸಂ4 ಕ್ರ.ಸಂ-9…

Read More

ಬೆಂಗಳೂರು: ಕೆರೆಗಳ ನಡುವೆ ಸಂಪರ್ಕ, ರಾಜಕಾಲುವೆ ಪಕ್ಕ 50 ಅಡಿ ಅಂತರದಲ್ಲಿ ಕಟ್ಟಡ ನಿರ್ಮಾಣಕ್ಕೆ ತಡೆ, ರಾಜಕಾಲುವೆ ಪಕ್ಕದಲ್ಲಿ 300 ಕಿ.ಮೀ. ಉದ್ದ ರಸ್ತೆ ನಿರ್ಮಾಣ, ಚರಂಡಿಗಳ ಹೂಳೆತ್ತುವುದು, ಅಪಾಯಕಾರಿ, ಅನಧಿಕೃತ ಕಟ್ಟಗಳ ಸಮೀಕ್ಷೆ ಹಾಗೂ ತೆರವು, ಕಾನೂನು ತಿದ್ದುಪಡಿ ಅಥವಾ ಸುಗ್ರೀವಾಜ್ಞೆ ಮೂಲಕ ಅಧಿಕಾರಿಗಳಿಗೆ ಹೆಚ್ಚಿನ ಅಧಿಕಾರ… ಇವಿಷ್ಟು ಬೆಂಗಳೂರು ನಗರದಲ್ಲಿ ಅತಿವೃಷ್ಠಿಯಿಂದ ಉದ್ಭವಿಸುವ ಸಮಸ್ಯೆಗಳ ಶಾಶ್ವತ ಪರಿಹಾರಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬಿಬಿಎಂಪಿ ಮತ್ತಿತರ ಅಧಿಕಾರಿಗಳಿಗೆ ಗುರುವಾರ ನೀಡಿರುವ ಸೂಚನೆಗಳಾಗಿವೆ. ಬೆಂಗಳೂರಿನಲ್ಲಿ ಅತಿವೃಷ್ಠಿ ವಿಪತ್ತು ನಿರ್ವಹಣೆ ಮತ್ತಿತರ ವಿಷಯಗಳ ಕುರಿತು ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬಿಬಿಎಂಪಿ ಮತ್ತಿತರ ಅಧಿಕಾರಿಗಳ ಜತೆ ತುರ್ತುಸಭೆ ನಡೆಸಿದರು. ಸಭೆ ನಂತರ ಮಾಧ್ಯಮಗೋಷ್ಠಿ ನಡೆಸಿದ ಉಪಮುಖ್ಯಮಂತ್ರಿಗಳು ಸಭೆಯಲ್ಲಿ ಕೈಗೊಂಡ ನಿರ್ಣಯಗಳು ಹಾಗೂ ಅಧಿಕಾರಿಗಳಿಗೆ ನೀಡಿರುವ ಸೂಚನೆಗಳ ಬಗ್ಗೆ ಮಾಹಿತಿ ನೀಡಿದರು. “ಇಂದು ಬೆಂಗಳೂರು ನಗರದಲ್ಲಿ ಅತಿವೃಷ್ಠಿ ಸಮಸ್ಯೆ ನಿವಾರಣೆಗಾಗಿ ಹಲವು ಪ್ರಮುಖ ತೀರ್ಮಾನ ಕೈಗೊಂಡಿದ್ದು, ಅಧಿಕಾರಿಗಳಿಗೆ ಕೆಲವು ನಿರ್ದೇಶನ ನೀಡಿದ್ದೇನೆ.…

Read More

ಬೆಂಗಳೂರು: ರಾಜ್ಯದ ಅಧಿಸೂಚಿತ, ದಾಖಲಿತ ಅರಣ್ಯ ಮತ್ತು ಪರಿಭಾವಿತ ಅರಣ್ಯ ಭೂಮಿಗಳ ಸಮಗ್ರ ದಾಖಲೀಕರಣಕ್ಕಾಗಿ 15 ದಿನಗಳಲ್ಲಿ ತಜ್ಞರ ಸಮಿತಿ ರಚಿಸಲು ಅರಣ್ಯ ಮತ್ತು ಕಂದಾಯ ಸಚಿವರ ಜಂಟಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ. ವನ್ ಸಂರಕ್ಷಣ ಏವಂ ಸಂವರ್ಧನ ಅಧಿನಿಯಮ 1980ರ ನಿಯಮ 16ರಡಿ ಹೊಸದಾಗಿ ತಜ್ಞರ ಸಮಿತಿ ರಚಿಸಲು ಅವಕಾಶವಿದ್ದು, ಈ ನೂತನ ಸಮಿತಿ ರಾಜ್ಯದ ಅಧಿಸೂಚಿತ ಮತ್ತು ದಾಖಲಿತ ಅರಣ್ಯದ ಸಮಗ್ರ ದಾಖಲೀಕರಣ ರಚಿಸುವದೊಂದಿಗೆ ಪ್ರಸ್ತುತ ಪರಿಭಾವಿತ ಅರಣ್ಯ ಪ್ರದೇಶದ ನ್ಯೂನತೆಗಳನ್ನು ಪರೀಶಿಲಿಸಿ, ಸರಿಪಡಿಸಿ 6 ತಿಂಗಳೊಳಗೆ ಕ್ರೋಡಿಕೃತ ವರದಿ ಸಲ್ಲಿಸಲಿದೆ. ಕೇಲವು ಪರಿಭಾವಿತ ಅರಣ್ಯ ಎಂದು ಗುರುತಿಸಿರುವ ಪ್ರದೇಶದಲ್ಲಿ ಅಧಿಸೂಚಿತ ಅರಣ್ಯ, ಪಟ್ಟಾಭೂಮಿ, ಸರ್ಕಾರಿ ಕಚೇರಿ, ಶಾಲೆ ಕಾಲೇಜುಗಳೂ ಇವೆ ಹೀಗಾಗಿ ಇದರ ಪರೀಶಿಲನೆ ಆಗಬೇಕು ಎಂಬ ಬೇಡಿಕೆ ಹಿನ್ನೆಲೆಯಲ್ಲಿ ಅರಣ್ಯ ಸಚಿವ ಈಶ್ವರ ಖಂಡ್ರೆ ಮತ್ತು ಕಂದಾಯ ಸಚಿವ ಕೃಷ್ಣಬೈರೇಗೌಡ ಅವರ ಸಹ ಅಧ್ಯಕ್ಷತೆಯಲ್ಲಿಂದು ವಿಕಾಸಸೌಧದಲ್ಲಿ ಮಹತ್ವದ ಸಭೆ ನಡೆಸಲಾಯಿತು. ಗೋದಾವರ್ಮನ್ ತಿರುಮಲ್ಪಾಡ್ V/s…

Read More

ಬೆಂಗಳೂರು: ಯಾಸಿರ್ ಅಹ್ಮದ್ ಖಾನ್ ಪಠಾಣ್ ಅವರನ್ನು ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಪಕ್ಷದ ವರಿಷ್ಠರು ಆಯ್ಕೆ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು. ಚನ್ನಪಟ್ಟಣ ಕ್ಷೇತ್ರಕ್ಕೆ ನಿಖಿಲ್ ಕುಮಾರಸ್ವಾಮಿಯವರನ್ನು ಜೆಡಿಎಸ್ ಅಭ್ಯರ್ಥಿಯಾಗಿ ಆಯ್ಕೆ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಚನ್ನಪಟ್ಟಣ ಕ್ಷೇತ್ರಕ್ಕೆ ಬಿಜೆಪಿ ಅಥವಾ ಜೆಡಿಎಸ್ ನವರು ಯಾರನ್ನು ಅಭ್ಯರ್ಥಿಯಾಗಿ ಕಣಕ್ಕೆ ಇಳಿಸುತ್ತಾರೆಂಬುದು ನಮಗೆ ಮುಖ್ಯವಲ್ಲ. ನಮ್ಮ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ ಅವರು ಚನಪಟ್ಟಣ ಕ್ಷೇತ್ರದಲ್ಲಿ ಗೆಲುವು ಸಾಧಿಸಲಿದ್ದಾರೆ ಎಂದರು. https://kannadanewsnow.com/kannada/belekeri-port-illegal-ore-missing-case-congress-mla-satish-sail-arrested/ https://kannadanewsnow.com/kannada/minister-ishwar-khandre-gives-good-news-to-farmers-cultivating-forest-land-in-the-state/

Read More