Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವದ ಗೃಹ ಆರೋಗ್ಯ ಯೋಜನೆಗೆ ಇಂದು ಚಾಲನೆ ದೊರೆತಿದೆ. ಬೆಂಗಳೂರಿನ ವಿಧಾನ ಸೌಧದ ಬ್ಯಾಂಕ್ವೀಟ್ ಹಾಲ್ ನಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಅವರು ದೀಪ ಬೆಳಗಿಸುವ ಮೂಲಕ ಯೋಜನೆಗೆ ಚಾಲನೆ ನೀಡಿದರು. ಕೋಲಾರ ಜಿಲ್ಲೆಯಿಂದ ಯೋಜನೆ ಪ್ರಾರಂಭಿಸಲಾಗಿದ್ದು, ಸಾಂಕೇತಿಕವಾಗಿ ನಾಲ್ವರಿಗೆ ಔಷಧಿಗಳನ್ನ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಗೃಹ ಆರೋಗ್ಯ ಯೋಜನೆಯ ರೂವಾರಿ ಆಗಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಇದೊಂದು ದೂರದೃಷ್ಟಿಯ ಯೋಜನೆಯಾಗಿದ್ದು, ಗ್ರಾಮೀಣ ಪ್ರದೇಶದ ಜನರ ಜೀವ ರಕ್ಷಣೆಯಲ್ಲಿ ಮಹತ್ವದ ಪಾತ್ರ ವಹಿಸಲಿದೆ ಎಂದರು. ರಾಜ್ಯದಲ್ಲಿ ಶೇಕಡಾ 26.9% ರಷ್ಟು ರಕ್ತದೊತ್ತಡ, ಶೇಕಡಾ 15.6% ರಷ್ಟು ಮಧುಮೇಹ ರೋಗಗಳಿಂದ ಜನರು ಬಳಲುತ್ತಿದ್ದು, ಇದರಿಂದ ಉಂಟುಗುತ್ತಿರುವ ಮರಣ ಹಾಗೂ ಅನಾರೋಗ್ಯ ತೊಡಕುಗಳನ್ನ ತಡೆಗಟ್ಟವುದು ಗೃಹ ಆರೋಗ್ಯ ಯೋಜನೆಯ ಮುಖ್ಯ ಗುರಿಯಾಗಿದೆ. ಅಲ್ಲದೇ ರಾಜ್ಯದಲ್ಲಿ ಶೇಕಡಾ 11.5 % ರಷ್ಟು ಬಾಯಿ ಕ್ಯಾನ್ಸರ್; ಶೇಕಡಾ 26 % ರಷ್ಟು ಸ್ತನ ಕ್ಯಾನ್ಸರ್ ಹಾಗೂ ಶೇಕಡಾ 18.3 % ರಷ್ಟು…
ಬೆಂಗಳೂರು: 2010ರ ಬೇಲೆಕೇರಿ ಬಂಧರಿನಲ್ಲಿನ ಅದಿರು ನಾಪತ್ತೆ ಪ್ರಕರಣ ಸಂಬಂಧದ ತೀರ್ಪನ್ನು ಕೋರ್ಟ್ ಪ್ರಕಟಿಸಿದೆ. ಕಾರವಾರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರು ಅಪರಾಧಿ ಎಂಬುದಾಗಿ ತನ್ನ ತೀರ್ಪಿನಲ್ಲಿ ಕೋರ್ಟ್ ಪ್ರಕಟಿಸಿದೆ. ಆದರೇ ಶಿಕ್ಷೆಯ ಪ್ರಮಾಣವನ್ನು ನಾಳೆ ಪ್ರಕಟಿಸುವುದಾಗಿ ತಿಳಿಸಿದೆ. ಈ ಸಂಬಂಧ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ವಾದ-ಪ್ರತಿವಾದವನ್ನು ಆಲಿಸಿತ್ತು. ಬೇಲೆಕೇರಿ ಅದಿರು ನಾಪತ್ತೆ ಪ್ರಕರಣ ಸಂಬಂಧ ತೀರ್ಪು ಪ್ರಕಟಿಸಿದ್ದು, ಬೇಲೆಕೇರಿಯಲ್ಲಿ ಸೀಜ್ ಆಗಿದ್ದಂತ 11,312 ಮೆಟ್ರಿಕ್ ಟನ್ ಅದಿರನ್ನು ಅನುಮತಿ ಇಲ್ಲದೇ ಸಾಗಾಟ ಮಾಡಲಾಗಿತ್ತು. ಈ ಸಂಬಂಧ ಒಟ್ಟು 6 ಪ್ರಕರಣಗಳು ದಾಖಲಾಗಿದ್ದವು. ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರು ವಾದ ಪ್ರತಿವಾದವನ್ನು ಆಲಿಸಿ, ಕಾಂಗ್ರೆಸ್ ಶಾಸಕ ಸತೀಶ್ ಸೈಲ್, ಮಹೇಶ್ ಬಿಳಿಯೆ, ಮಲ್ಲಿಕಾರ್ಜುನ ಶಿಪ್ಪಿಂಗ್ ಅವರನ್ನು ದೋಷಿ ಎಂಬುದಾಗಿ ತೀರ್ಪು ನೀಡಿದೆ. ಅಂದಹಾಗೇ ಕೇಂದ್ರ ಸರ್ಕಾರದ ತನಿಖಾ ಸಂಸ್ಥೆ ಸಿಬಿಐ ನಿಂದ ಬೇಲೇಕೇರಿ ಅದಿರು ನಾಪತ್ತೆ ಪ್ರಕರಣ ಸಂಬಂಧ ತನಿಖೆ ನಡೆಸಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಲಾಗಿತ್ತು. ಈ…
ಕೊಪ್ಪಳ: ಜಿಲ್ಲೆಯ ಮರಕುಂಬಿ ಗ್ರಾಮದ ದಲಿತ ಮೇಲಿನ ದೌರ್ಜನ್ಯ ಪ್ರಕರಣ ಸಂಬಂಧ ಬಂಧಿತರಾಗಿದ್ದಂತ 101 ಆರೋಪಿಗಳಲ್ಲಿ 98 ಮಂದಿಗೆ ಜೀವಾವಧಿ ಶಿಕ್ಷೆಯನ್ನು ನೀಡಿ ಕೋರ್ಟ್ ಆದೇಶಿಸಿದೆ. ಇಂದು ಕೊಪ್ಪಳ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರು ತೀರ್ಪು ಪ್ರಕಟಿಸಿದ್ದು, ಮರಕುಂಬಿ ಗ್ರಾಮ ದಲಿತರ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿದ್ದಂತ 101 ಆರೋಪಿಗಳಲ್ಲಿ 98 ಆರೋಪಿಗಳಿಗೆ ಜೀವಾವಧಿ ಶಿಕ್ಷೆಯನ್ನು ವಿಧಿಸಿ ಆದೇಶಿಸಿದ್ದಾರೆ. ಇನ್ನೂ ಮೂವರು ಆರೋಪಿಗಳಇಗೆ ಐದು ವರ್ಷ ಕಠಿಣ ಶಿಕ್ಷೆಯನ್ನು ತಲಾ 2 ಸಾವಿರ ದಂಡವನ್ನು ವಿಧಿಸಿದ್ದಾರೆ. ಇನ್ನೂ ಜೀವಾವಧಿ ಶಿಕ್ಷೆಗೆ ಒಳಗಾದಂತ 98 ಅಪರಾಧಿಗಳಿಗೆ ತಲಾ 5 ಸಾವಿರ ದಂಡವನ್ನು ವಿಧಿಸಿದ್ದಾರೆ. https://kannadanewsnow.com/kannada/bengaluru-building-collapse-three-accused-sent-to-14-day-judicial-custody/ https://kannadanewsnow.com/kannada/a-rare-drum-artist-in-the-state-you-will-be-shocked-to-hear-about-his-achievements/
ಬೆಂಗಳೂರು: ನಗರದ ಬಾಬುಸಾಬ್ ಪಾಳ್ಯದಲ್ಲಿ 6 ಅಂತಸ್ಥಿನ ಕಟ್ಟಡವೊಂದು ಕುಸಿದು ಬಿದ್ದು 8 ಮಂದಿ ಸಾವನ್ನಪ್ಪಿದ್ದರು. ಈ ಪ್ರಕರಣದಲ್ಲಿ ಬಂಧಿತರಾಗಿದ್ದಂತ ಮೂವರು ಆರೋಪಿಗಳಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶಿಸಿದೆ. ಬೆಂಗಳೂರಿನ ಬಾಬುಸಾಬ್ ಪಾಳ್ಯದಲ್ಲಿನ ಕಟ್ಟಡ ಕುಸಿತ ದುರಂತ ಪ್ರಕರಣ ಸಂಬಂಧ ಹೆಣ್ಣೂರು ಠಾಣೆಯ ಪೊಲೀಸರಿಂದ ಮುನಿರಾಜು ರೆಡ್ಡಿ, ಭುವನ್ ರೆಡ್ಡಿ ಹಾಗೂ ಮುನಿಯಪ್ಪ ಎಂಬುವರನ್ನು ಬಂಧಿಸಲಾಗಿತ್ತು. ಇಂದು ಬಂಧಿತ ಆರೋಪಿಗಳನ್ನು ಬೆಂಗಳೂರಿನ 11ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಬಂಧಿತ ಮೂವರು ಆರೋಪಿಗಳಿಗೆ ನ್ಯಾಯಾಥೀಶರು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದ್ದಾರೆ. ಈ ಮೂಲಕ ಕಟ್ಟಡ ಕುಸಿದು 8 ಮಂದಿ ಸಾವಿಗೆ ಕಾರಣವಾದಂತ ಮೂವರು ಆರೋಪಿಗಳು ಜೈಲುಪಾಲಾಗಿದ್ದಾರೆ. https://kannadanewsnow.com/kannada/a-rare-drum-artist-in-the-state-you-will-be-shocked-to-hear-about-his-achievements/ https://kannadanewsnow.com/kannada/8-bjp-mlas-join-congress-sd-somashekar/
ಬೆಂಗಳೂರು: ನಗರದಲ್ಲಿ ಗುತ್ತಿಗೆದಾರರೊಬ್ಬರಿಂದ ಬರೋಬ್ಬರಿ 16 ಲಕ್ಷ ಲಂಚವನ್ನು ಸ್ವೀಕರಿಸುತ್ತಿದ್ದಾಗಲೇ ಬೆಸ್ಕಾಂ ಎಇಇ, ಎಇ ಇಬ್ಬರೂ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಬೆಂಗಳೂರಿನ ಅವಲಹಳ್ಳಿಯ ವಿಭಾಗದ ಬೆಸ್ಕಾಂ ಎಇಇ ರಮೇಶ್ ಬಾಬು ಹಾಗೂ ಎಇ ನಾಗೇಶ್ ಎಂಬುವರು ಗುತ್ತಿಗೆದಾರರೊಬ್ಬರಿಂದ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಸಂಬಂಧ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಲಾಗಿತ್ತು. ಇಂದು 16 ಲಕ್ಷ ಲಂಚದ ಹಣವನ್ನು ಪಡೆಯುತ್ತಿದ್ದಾಲೇ ಬೆಸ್ಕಾಂ ಎಇಇ ರಮೇಶ್ ಬಾಬು ಹಾಗೂ ಎಇ ನಾಗೇಶ್ ಲೋಕಾಯುಕ್ತ ಪೊಲೀಸರು ರೆಡ್ ಹ್ಯಾಂಡ್ ಆಗೇ ಹಿಡಿದಿದ್ದಾರೆ. ಈ ಸಂಬಂಧ ಇಬ್ಬರನ್ನು ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿದ್ದಾರೆ. https://kannadanewsnow.com/kannada/cm-siddaramaiah-files-appeal-in-hc-challenging-permission-for-muda-probe/ https://kannadanewsnow.com/kannada/a-rare-drum-artist-in-the-state-you-will-be-shocked-to-hear-about-his-achievements/
ಬೆಂಗಳೂರು: ಮುಡಾ ಹಗರಣ ಸಂಬಂಧ ಸಿಎಂ ಸಿದ್ಧರಾಮಯ್ಯ ವಿರುದ್ಧದ ತನಿಖೆಗೆ ರಾಜ್ಯಪಾಲರು ಅನುಮತಿ ನೀಡಿದ್ದರು. ಈ ಕ್ರಮವನ್ನು ಪ್ರಶ್ನಿಸಿ ಹೈಕೋರ್ಟ್ ಏಕಸದಸ್ಯ ಪೀಠಕ್ಕೆ ಅರ್ಜಿಯನ್ನು ಸಿಎಂ ಸಲ್ಲಿಸಿದ್ದರು. ಈ ಅರ್ಜಿಯ ವಾದ ಪ್ರತಿವಾದ ಆಲಿಸಿದ್ದಂತ ನ್ಯಾಯಪೀಠವು ರಾಜ್ಯಪಾಲರ ನಿರ್ಧಾರವನ್ನು ಎತ್ತಿ ಹಿಡಿದಿತ್ತು. ಈಗ ಈ ತೀರ್ಪು ರದ್ದುಗೊಳಿಸುವಂತೆ ವಿಭಾಗೀಯ ಪೀಠಕ್ಕೆ ಸಿಎಂ ಸಿದ್ಧರಾಮಯ್ಯ ಮೇಲ್ಮನವಿ ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣವನ್ನು ತನಿಖೆ ನಡೆಸಲು ರಾಜ್ಯಪಾಲರು ಅನುಮತಿ ನೀಡಿದ್ದರು. ಇದನ್ನು ಪ್ರಶ್ನಿಸಿ ಹೈಕೋರ್ಟ್ ಗೆ ಸಿದ್ಧರಾಮಯ್ಯ ಅರ್ಜಿ ಸಲ್ಲಿಸಿದ್ದರು. ಹೈಕೋರ್ಟ್ ಏಕಸದಸ್ಯ ನ್ಯಾಯಪೀಠವು ರಾಜ್ಯಪಾಲರ ಕ್ರಮವನ್ನು ಎತ್ತಿ ಹಿಡಿದಿತ್ತು. ಹೀಗಾಗಿ ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಹೈಕೋರ್ಟ್ ಏಕಸದಸ್ಯ ನ್ಯಾಯಪೀಠದ ತೀರ್ಪು ರದ್ದುಗೊಳಿಸುವಂತೆ ವಿಭಾಗೀಯ ನ್ಯಾಯಪೀಠಕ್ಕೆ ಮೇಲ್ಮನವಿ ಅರ್ಜಿಯನ್ನು ಸಲ್ಲಿಸಿದ್ದಾರೆ. https://kannadanewsnow.com/kannada/congress-announces-candidate-for-shiggaon-yasir-ahmed-khan-pathan-to-contest/ https://kannadanewsnow.com/kannada/a-rare-drum-artist-in-the-state-you-will-be-shocked-to-hear-about-his-achievements/
ಬೆಂಗಳೂರು: ಕರ್ನಾಟಕ ವಿಧಾನಸಭಾ ಉಪ ಚುನಾವಣೆಗೆ ಎರಡು ಕ್ಷೇತ್ರಗಳಿಗೆ ಅಭ್ಯರ್ಥಿಯನ್ನು ಕಾಂಗ್ರೆಸ್ ಘೋಷಿಸಿತ್ತು. ಇಂದು ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಯಾಸಿರ್ ಅಹ್ಮದ್ ಖಾನ್ ಪಠಾಣ್ ಅವರಿಗೆ ಟಿಕೆಟ್ ಘೋಷಿಸಿದೆ. ಕರ್ನಾಟಕದ ಸಂಡೂರು ವಿಧಾನ ಸಭಾ ಉಪ ಚುನಾವಣೆಗೆ ಇ.ಅನ್ನಪೂರ್ಣ ಅವರಿಗೆ ಟಿಕೆಟ್ ನೀಡಲಾಗಿದೆ. ಚನ್ನಪಟ್ಟಣ ವಿಧಾನ ಸಭಾ ಕ್ಷೇತ್ರದ ಉಪ ಚುನಾವಣೆಗೆ ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರಿದಂತೆ ಸಿ.ಪಿ ಯೋಗೇಶ್ವರ್ ಗೆ ಟಿಕೆಟ್ ಘೋಷಿಸಲಾಗಿದೆ. ಇಂದು ಕಾಂಗ್ರೆಸ್ ಪಕ್ಷದಿಂದ ಶಿಗ್ಗಾವಿ ಉಪ ಚುನಾವಣೆಗೆ ಯಾಸಿರ್ ಅಹ್ಮದ್ ಖಾನ್ ಪಠಾಣ್ ಟಿಕೆಟ್ ನೀಡಲಾಗಿದೆ. ಅಂದಹಾಗೆ ಸಂಡೂರು, ಶಿಗ್ಗಾಂವ್ ಮತ್ತು ಚನ್ನಪಟ್ಟಣಕ್ಕೆ ನವೆಂಬರ್.13ರಂದು ಮತದಾನ ನಡೆಯಲಿದೆ. ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಅಕ್ಟೋಬರ್.25, 2024 ಕೊನೆಯ ದಿನವಾಗಿದೆ. ನಾಮಪತ್ರ ಹಿಂಪಡೆಯಲು ಅಕ್ಟೋಬರ್.30, 2024 ಲಾಸ್ಟ್ ಡೇಟ್. ನವೆಂಬರ್.23ರಂದು ಫಲಿತಾಂಶ ಪ್ರಕಟವಾಗಲಿದೆ. ಈಗಾಗಲೇ ಬಿಜೆಪಿಯಿಂದ ಸಂಡೂರು ಮತ್ತು ಶಿಗ್ಗಾಂವ್ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ. ಜೆಡಿಎಸ್ ಪಕ್ಷದಿಂದ ಮೈತ್ರಿ ಅಭ್ಯರ್ಥಿಯಾಗಿ ಚನ್ನಪಟ್ಟಣಕ್ಕೆ ನಿಖಿಲ್ ಕುಮಾರಸ್ವಾಮಿಗೆ ಟಿಕೆಟ್…
ಬೆಂಗಳೂರು: ಮೈಸೂರಿನ ಮುಡಾದಲ್ಲಿ ನಡೆದಿರುವಂತ ಅಕ್ರಮ ಸಂಬಂಧ ಈಗಾಗಲೇ ಇಡಿ ಅಧಿಕಾರಿಗಳಿಂದ ಕಚೇರಿ ಮೇಲೆ ದಾಳಿ ನಡೆಸಲಾಗಿತ್ತು. ಈ ನಂತ್ರ ಅಧಿಕಾರಿಗಳಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ. ಮೈಸೂರಿನ ಮುಡಾ ಕಚೇರಿಯ ಅಧಿಕಾರಿಗಳಿಗೆ ಜಾರಿ ನಿರ್ದೇಶನಾಲದಯ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ಇಡಿ ಅಧಿಕಾರಿಗಳಿಂದ ಮುಡಾ ಅಧಿಕಾರಿ ಶ್ರುತಿ ಹಾಗೂ ತಹಶೀಲ್ದಾರ್ ರಾಜಶೇಖರ್ ಎಂಬುವರಿಗೆ ನೋಟಿಸ್ ನೀಡಲಾಗಿದೆ. ಇನ್ನೂ ಎಫ್ ಡಿಸಿ ರವಿ ಹಾಗೂ ಪ್ರಶಾಂತ್ ಎಂಬುವರಿಗೂ ಇಡಿ ನೋಟಿಸ್ ನೀಡಿದೆ. ಇಡಿ ನೀಡಿರುವಂತ ನೋಟಿಸ್ ನಲ್ಲಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ. ಈ ಮೂಲಕ ಮುಡಾ ಸೈಟ್ ಹಂಚಿಕೆ ಅಕ್ರಮ ಪ್ರಕರಣಕ್ಕೆ ಮತ್ತೊಂದು ಬಿಗ್ ಟ್ವಿಸ್ಟ್ ಸಿಕ್ಕಂತೆ ಆಗಿದೆ. https://kannadanewsnow.com/kannada/mandya-in-a-shocking-incident-a-single-woman-barged-into-her-house-in-broad-daylight-threatened-her-and-robbed-her/ https://kannadanewsnow.com/kannada/a-rare-drum-artist-in-the-state-you-will-be-shocked-to-hear-about-his-achievements/
ಮಂಡ್ಯ: ಜಿಲ್ಲೆಯಲ್ಲಿ ಬೆಚ್ಚಿ ಬೀಳಿಸೋ ಘಟನೆ ಎನ್ನುವಂತೆ ಮನೆಯೊಂದರಲ್ಲಿ ಒಂಟಿಯಾಗಿದ್ದಂತ ಮಹಿಳೆಯನ್ನು ಹೆದರಿಸಿದಂತ ಇಬ್ಬರು ಮುಸುಕುದಾರಿಗಳು, ಮಾರಕಾಸ್ತ್ರಗಳಿಂದ ಹೆದರಿಸಿ ನಗದು, ಚಿನ್ನಾಭರಣ ದೋಚಿ ಪರಾರಿಯಾಗಿರುವಂತ ಘಟನೆ ನಡೆದಿದೆ. ಹೌದು ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಮೆಳ್ಳಹಳ್ಳಿಯಲ್ಲಿ ಹಾಡು ಹಗಲೇ ಮನೆಗೆ ನುಗ್ಗಿ ಮಹಿಳೆಯನ್ನ ಹೆದರಿಸಿ ಕಳ್ಳತನ ನಡೆಸಲಾಗಿದೆ. ಹರ್ಷಿತಾ ಎಂಬಾಕೆ ಮನೆಯಲ್ಲಿ ಒಬ್ಬರೇ ಇದ್ದುದ್ದನ್ನ ಗಮನಿಸಿದ ಇಬ್ಬರು ಮುಸುಕುದಾರಿಗಳು ಮನೆಗೆ ನುಗ್ಗಿ ಮಾರಕಾಸ್ತ್ರದಿಂದ ಹೆಸರಿಸಿದ್ದಾರೆ. ಆ ಬಳಿಕ ಬೀರುವಿನಲ್ಲಿದ್ದ ಸುಮಾರು 25ಗ್ರಾಂ ಚಿನ್ನಾಭರಣ ಹಾಗೂ 1.60ಲಕ್ಷ ನಗದ ದೋಚಿ ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಡಿವೈಎಸ್ಪಿ ಕೃಷ್ಣಪ್ಪ, ಸರ್ಕಲ್ ಇನ್ಸ್ಪೆಕ್ಟರ್ ಶಿವಕುಮಾರ್ ಹಾಗೂ ಪಿಎಸ್ಐ ಪುಟ್ಟಮಾದು ನೇತೃತ್ವದಲ್ಲಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಕೆ.ಎಂ.ದೊಡ್ಡಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವರದಿ: ಗಿರೀಶ್ ರಾಜ್, ಮಂಡ್ಯ https://kannadanewsnow.com/kannada/mother-dumps-newborn-baby-on-highway-road/ https://kannadanewsnow.com/kannada/a-rare-drum-artist-in-the-state-you-will-be-shocked-to-hear-about-his-achievements/
ಬೆಂಗಳೂರು: ನವಜಾತ ಶಿಶುವೊಂದನ್ನು ಹೆದ್ದಾರಿ ಬದಿಯಲ್ಲೇ ತಾಯಿಯೊಬ್ಬಳು ಬಿಸಾಕಿ ಹೋಗಿರುವಂತ ಘಟನೆ ನೆಲಮಂಗಲದ ಬಳಿಯ ಕೆಂಪಲಿಂಗನಹಳ್ಳಿ ಬಳಿಯಲ್ಲಿ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಬಳಿಯ ಕೆಂಪಲಿಂಗನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನವಜಾತ ಶಿಶುವೊಂದನ್ನು ನಾಯಿಗಳು ಎಳೆದಾಡಿ ತಿನ್ನುತ್ತಿದ್ದದ್ದನ್ನು ದಾರಿ ಹೋಕರು ಗಮನಿಸಿದ್ದಾರೆ. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಪೊಲೀಸರು, ಆರೋಗ್ಯ ಇಲಾಖೆಯ ಸಿಬ್ಬಂದಿ ಆಗಮಿಸಿ, ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ನಾಯಿಗಳು ಎಳೆದಾಡಿ ತಿನ್ನುತ್ತಿದ್ದದ್ದು ನವಜಾತ ಶಿಶು ಎಂಬುದಾಗಿ ತಿಳಿದು ಬಂದಿದೆ. ಈ ಸಂಬಂದ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/railway-passengers-these-special-trains-will-be-arranged-on-the-occasion-of-diwali-and-chhath/ https://kannadanewsnow.com/kannada/8-bjp-mlas-join-congress-sd-somashekar/