Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಮೋದಿ ಸರ್ಕಾರ ಸಂಸತ್ತಿನಲ್ಲಿ ಯಾವುದೇ ಚರ್ಚೆ ಮಾಡದೇ ವಿಬಿ ಜಿ ರಾಮ್ ಜಿ ಮಸೂದೆ ಅಂಗೀಕರಿಸಿದ್ದಾರೆ. ಮನರೇಗಾ ಯೋಜನೆ ಕಾಯ್ದೆ ಸುಧಾರಿಸಿದ್ದೇವೆ ಎಂದು ಹೇಳುತ್ತಿದ್ದಾರೆ. ಇವರು ಸುಧಾರಿಸಿಯೂ ಇಲ್ಲ, ಸಬಲೀಕರಣ ಮಾಡಿಲ್ಲ. ಮನರೇಗಾ ಕಾಯ್ದೆಯನ್ನು ತೆಗೆದು ಹಾಕಿದ್ದಾರೆ ಎಂಬುದಾಗಿ ಕೇಂದ್ರ ಸರ್ಕಾರದ ವಿರುದ್ಧ ಗ್ರಾಮೀಣಾಭಿವೃದ್ಧಿ ಸಚಿವರಾದ ಪ್ರಿಯಾಂಕ್ ಖರ್ಗೆ ಹಿಗ್ಗಾಮುಗ್ಗಾ ವಾಗ್ಧಾಳಿ ನಡೆಸಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಕಳೆದ 19-20 ವರ್ಷಗಳಿಂದ ಉದ್ಯೋಗ ಖಾತರಿ ಯೋಜನೆಯು ಗ್ರಾಮೀಣ ಪ್ರದೇಶದಲ್ಲಿ ಜೀವನೋಪಾಯದ ಗ್ಯಾರಂಟಿ ನೀಡಿತ್ತು. ಮೋದಿ ಸರ್ಕಾರ ಈ ಗ್ಯಾರಂಟಿ ಕಸಿದುಕೊಂಡಿದೆ. ಬೇಡಿಕೆ ಆಧಾರಿತ ಯೋಜನೆ, ವಿತರಣೆ ಆಧಾರಿತ ಯೋಜನೆಯಾಗಿದೆ. ಈ ಹಿಂದೆ ಕೇಂದ್ರ ಸರ್ಕಾರ ಸಂಪೂರ್ಣ ಜವಾಬ್ದಾರಿ ತೆಗೆದುಕೊಂಡಿತ್ತು. ಈಗ ಇದು ಕಾಯ್ದೆಯಾಗಿ ಉಳಿದಿಲ್ಲ. ಇತರೆ ಸರ್ಕಾರಿ ಯೋಜನೆಗಳಲ್ಲಿ ಒಂದಾಗಿದೆ ಎಂದಿದ್ದಾರೆ. ಮೋದಿ ಸರ್ಕಾರ ವಿಬಿ ಜಿ ರಾಮ್ ಜಿ ಬಿಲ್ ತಂರುವ ಮೂಲಕ 3 ಪ್ರಮುಖ ಸಂವಿಧಾನಿಕ ಹಕ್ಕು ಮೊಟಕುಗೊಳಿಸಿದೆ.ಜೀವನೋಪಾಯದ ಹಕ್ಕು ಕಸಿದಿರುವುದು, ಪಂಚಾಯಿತಿಗಳ ಹಕ್ಕು ಕಸಿದಿದೆ. ರಾಜ್ಯ…
ಬೆಳಗಾವಿ: 2025ಕ್ಕಿಂತ 2026ರಲ್ಲಿ ಕಷ್ಟಗಳು, ಸವಾಲುಗಳು ಹೆಚ್ಚಿರಲಿವೆ. 2026ಕ್ಕೆ ಜಗತ್ತೇ ಮುಳುಗುತ್ತೆ. ಶೇ.7-8% ನಷ್ಟು ಜಗತ್ತೇ 2026ರಲ್ಲಿ ಮುಳುಗಿ ಹೋಗುತ್ತದೆ ಎಂಬುದಾಗಿ ಹೊಸ ವರ್ಷ ಸಮೀಪಿಸುತ್ತಿರುವ ಸಂದರ್ಭದಲ್ಲೇ ಕೋಡಿಮಠ ಶ್ರೀಗಳು ಶಾಕಿಂಗ್ ಭವಿಷ್ಯವನ್ನು ನುಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಸಂಕ್ರಾಂತಿ ಫಲದಲ್ಲಿ ಸೂರ್ಯನು ಉತ್ತರಾಯಣದ ಕಡೆ ಹೋಗುತ್ತಾನೆ. ಇದು ರಾಜ-ಮಹಾರಾಜರು, ವ್ಯಾಪಾರಸ್ಥರಿಗೆ, ದುಡಿಮೆದಾರರಿಗೆ ಉತ್ತಮ ಲಾಭ ತಂದುಕೊಡಲಿದೆ ಎಂದಿದ್ದಾರೆ. 2025ಕ್ಕಿಂತ 2026ರಲ್ಲಿ ಕಷ್ಟಗಳು, ಸವಾಲುಗಳು ಹೆಚ್ಚಾಗಿ ಇರಲಿದ್ದಾವೆ. ಯುಗಾದಿ ಕಳೆದ ಮೇಲೆ ಮಳೆ, ಬೆಳೆ ಬಗ್ಗೆ ರೈತರು, ಭೂಮಿ ಬಗ್ಗೆ ಹೇಳುತ್ತೇನೆ. ಆದರೇ 2026ರಲ್ಲಿ ಜಗತ್ತಿಗೆ ಕಷ್ಟಗಳ ಸರಮಾಲೆಯನ್ನೇ ತರಲಿದೆ ಎಂಬುದಾಗಿ ಶಾಕಿಂಗ್ ಭವಿಷ್ಯ ನುಡಿದರು. 2026ರಲ್ಲಿ ಭಾರೀ ಪ್ರಮಾಣದಲ್ಲಿ ಮಳೆ, ಪ್ರವಾಹ ಎದುರಾಗಲಿದೆ. ಆಪತ್ತಿನಿಂದಾಗಿ ಏಳೆಂಟು ಪರ್ಸೆಂಟ್ ಈ ಜಗತ್ತೇ ಮುಳುಗುವ ಲಕ್ಷಣ ಗೋಚರಲಾಗುತ್ತಿದೆ ಎಂಬುದಾಗಿ ಹೇಳುವ ಮೂಲಕ, ಜಗತ್ತು ಮುಳುಗೋ ಶಾಕಿಂಗ್ ವಿಷಯವನ್ನು ತಮ್ಮ ಭವಿಷ್ಯದಲ್ಲಿ ತೆರೆದಿಟ್ಟಿದ್ದಾರೆ. ಅಲ್ಲದೇ ಯುಗಾದಿಯ ನಂತ್ರ ನಿಖವಾದ, ವಿಸ್ತೃತ ಮಾಹಿತಿ ನೀಡುವುದಾಗಿ…
ಬೆಳಗಾವಿ: ರಾಜ್ಯದಲ್ಲಿ ಅಧಿಕಾರ ಗದ್ದುಗೆಯ ಕಿತ್ತಾಟದ ನಡುವೆ, ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಕುರಿತು ಕೋಡಿಮಠದ ಶ್ರೀಗಳು ಸ್ಪೋಟಕ ಭವಿಷ್ಯ ನುಡಿದಿದ್ದಾರೆ. ರಾಜ್ಯ ರಾಜಕಾರಣದ ಬಗ್ಗೆ ಕೋಡಿಮಠ ಶ್ರೀ ನುಡಿದಂತ ಆ ಸ್ಪೋಟಕ ಭವಿಷ್ಯವನ್ನು ಮುಂದೆ ಓದಿ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು, ಹಾಲು ಮತದ ಸಮಾಜದವರಿಂದ ಅಧಿಕಾರ ಕಿತ್ತುಕೊಳ್ಳೋದು ಅಷ್ಟು ಸುಲಭವಾದುದ್ದಲ್ಲ. ಅದು ಕಷ್ಟವಾಗಿದೆ. ಸಿದ್ಧರಾಮಯ್ಯ ಅವರು ತಾವಾಗಿಯೇ ಅಧಿಕಾರ ಬಿಟ್ಟು ಕೊಟ್ರೆ ಮಾತ್ರವೇ ಬೇರೆಯವರಿಗೆ ಅವಕಾಶ ಸಿಗಬಹುದು ಎಂಬುದಾಗಿ ತಿಳಿಸಿದ್ದಾರೆ. ಇನ್ನೂ ಸಿಎಂ ಆಗೋ ಕನಸಿನಲ್ಲಿದ್ದಂತ ಡಿಕೆ ಶಿವಕುಮಾರ್ ಅವರಿಗೆ, ಸಿದ್ಧರಾಮಯ್ಯ ತಾನಾಗಿಯೇ ಅಧಿಕಾರ ಬಿಟ್ಟುಕೊಟ್ಟರೆ ಮಾತ್ರವೇ ಅದು ಸಾಧ್ಯವಾಗಲಿದೆ. ಇಲ್ಲ ಅಂದರೇ ಡಿಕೆಶಿಗೆ ಅಧಿಕಾರ ಸಿಗೋದಿಲ್ಲ ಎಂಬುದಾಗಿ ಮಾರ್ಮಿಕವಾಗಿ ನುಡಿದಿದ್ದಾರೆ. https://kannadanewsnow.com/kannada/difficulties-and-challenges-will-increase-in-2026-kodimath-sris-shocking-prediction-about-the-new-year/
ಬೆಳಗಾವಿ: 2025ಕ್ಕಿಂತ 2026ರಲ್ಲಿ ಕಷ್ಟಗಳು, ಸವಾಲುಗಳು ಹೆಚ್ಚಿರಲಿವೆ. 2026ಕ್ಕೆ ಜಗತ್ತೇ ಮುಳುಗುತ್ತೆ ಎಂಬುದಾಗಿ ಹೊಸ ವರ್ಷ ಸಮೀಪಿಸುತ್ತಿರುವ ಸಂದರ್ಭದಲ್ಲೇ ಕೋಡಿಮಠ ಶ್ರೀಗಳು ಶಾಕಿಂಗ್ ಭವಿಷ್ಯವನ್ನು ನುಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಸಂಕ್ರಾಂತಿ ಫಲದಲ್ಲಿ ಸೂರ್ಯನು ಉತ್ತರಾಯಣದ ಕಡೆ ಹೋಗುತ್ತಾನೆ. ಇದು ರಾಜ-ಮಹಾರಾಜರು, ವ್ಯಾಪಾರಸ್ಥರಿಗೆ, ದುಡಿಮೆದಾರರಿಗೆ ಉತ್ತಮ ಲಾಭ ತಂದುಕೊಡಲಿದೆ ಎಂದಿದ್ದಾರೆ. 2025ಕ್ಕಿಂತ 2026ರಲ್ಲಿ ಕಷ್ಟಗಳು, ಸವಾಲುಗಳು ಹೆಚ್ಚಾಗಿ ಇರಲಿದ್ದಾವೆ. ಯುಗಾದಿ ಕಳೆದ ಮೇಲೆ ಮಳೆ, ಬೆಳೆ ಬಗ್ಗೆ ರೈತರು, ಭೂಮಿ ಬಗ್ಗೆ ಹೇಳುತ್ತೇನೆ. ಆದರೇ 2026ರಲ್ಲಿ ಜಗತ್ತಿಗೆ ಕಷ್ಟಗಳ ಸರಮಾಲೆಯನ್ನೇ ತರಲಿದೆ ಎಂಬುದಾಗಿ ಶಾಕಿಂಗ್ ಭವಿಷ್ಯ ನುಡಿದರು. 2026ರಲ್ಲಿ ಭಾರೀ ಪ್ರಮಾಣದಲ್ಲಿ ಮಳೆ, ಪ್ರವಾಹ ಎದುರಾಗಲಿದೆ. ಆಪತ್ತಿನಿಂದಾಗಿ ಏಳೆಂಟು ಪರ್ಸೆಂಟ್ ಈ ಜಗತ್ತೇ ಮುಳುಗುವ ಲಕ್ಷಣ ಗೋಚರಲಾಗುತ್ತಿದೆ ಎಂಬುದಾಗಿ ಹೇಳುವ ಮೂಲಕ, ಜಗತ್ತು ಮುಳುಗೋ ಶಾಕಿಂಗ್ ವಿಷಯವನ್ನು ತಮ್ಮ ಭವಿಷ್ಯದಲ್ಲಿ ತೆರೆದಿಟ್ಟಿದ್ದಾರೆ. ಅಲ್ಲದೇ ಯುಗಾದಿಯ ನಂತ್ರ ನಿಖವಾದ, ವಿಸ್ತೃತ ಮಾಹಿತಿ ನೀಡುವುದಾಗಿ ತಿಳಿಸಿದ್ದಾರೆ.
ಶಿವಮೊಗ್ಗ: ಸಾಗರದಲ್ಲಿ ದ್ವೇಷ ಭಾಷಣ ಮಸೂದೆಗೆ ತೀವ್ರ ವಿರೋಧವನ್ನು ಬಿಜೆಪಿ ವ್ಯಕ್ತ ಪಡಿಸಿದೆ. ಯಾವುದೇ ಕಾರಣಕ್ಕೂ ಈ ಮಸೂದೆಗೆ ರಾಜ್ಯಪಾಲರು ಅಂಕಿತ ಹಾಕದಂತೆ ಮಾಜಿ ಸಚಿವ, ರಾಜ್ಯ ಬಿಜೆಪಿ ಉಪಾಧ್ಯಕ್ಷ ಹರತಾಳು ಹಾಲಪ್ಪ ನೇತೃತ್ವದಲ್ಲಿ ಸಾಗರ ತಾಲ್ಲೂಕು ಬಿಜೆಪಿಯಿಂದ ಪ್ರತಿಭಟನೆ ನಡೆಸಿ ಆಗ್ರಹಿಸಲಾಯಿತು. ಇಂದು ಶಿವಮೊಗ್ಗದ ಸಾಗರ ನಗರದ ಸಾಗರ ಹೋಟೆಲ್ ಸರ್ಕಲ್ ನಲ್ಲಿ ಬಿಜೆಪಿ ನಗರ, ಗ್ರಾಮಾಂತರ ಮಂಡಲದಿಂದ ದ್ವೇಷ ಭಾಷಣ ಮಸೂದೆ ವಿರುದ್ಧ ಪ್ರತಿಭಟನೆ ನಡೆಸಲಾಯಿತು. ಜನರ ವಾಕ್ ಸ್ವಾತಂತ್ರ್ಯದ ಹಕ್ಕನ್ನೇ ಕಸಿದುಕೊಳ್ಳುತ್ತಿರುವಂತ ಮಸೂದೆಗೆ ರಾಜ್ಯಪಾಲರು ಅಂಕಿತ ಹಾಕದಂತೆ ಒತ್ತಾಯಿಸಿದರು. ಈ ವೇಳೆ ಮಾತನಾಡಿದಂತ ಮಾಜಿ ಸಚಿವ, ರಾಜ್ಯ ಬಿಜೆಪಿ ಉಪಾಧ್ಯಕ್ಷ ಹರತಾಳು ಹಾಲಪ್ಪ ಅವರು, ಈ ಕಾಯಿದೆ ನಾವು ಒಪ್ಪಿಕೊಂಡರೇ ಭಾರತದ ಸಂವಿಧಾನಕ್ಕೆ ವಿರುದ್ಧದ ಕಾನೂನಾಗಲಿದೆ. ರೈತರು ಸರ್ಕಾರದ ವಿರುದ್ಧ ಧ್ವನಿ ಎತ್ತುವಂತಿಲ್ಲ. ಧರ್ಮಕ್ಕೆ ಆದ ಅನ್ಯಾಯ ಪ್ರತಿಭಟಿಸುವಂತಿಲ್ಲ. ಹೋರಾಟಗರರನ್ನು ಹಣೆಯುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ಇದಕ್ಕೆ ರಾಜ್ಯಪಾಲರು ಅಂಕಿತ ಹಾಕಬಾರದು ಎಂದು ಒತ್ತಾಯಿಸಿದರು. ರಾಜ್ಯ ಕಾಂಗ್ರೆಸ್…
ಶ್ರೀರಾಘವೇಂದ್ರಸ್ವಾಮಿಗಳ ಸಂಕ್ಷಿಪ್ತ ಜೀವನದ ವಿವರಗಳು ಮೂಲರೂಪ : ಶಂಕುಕರ್ಣ ಅವತಾರಗಳು : ಪ್ರಹ್ಲಾದರಾಜರು, ಬಾಹ್ಲೀಕರಾಜರು, ವ್ಯಾಸರಾಜರು, ಶ್ರೀ ರಾಘವೇಂದ್ರ ಗುರುಸಾರ್ವಭೌಮರು. ಮನೆತನ : ಷಾಷ್ಠಿಕ ವಂಶದ ಬೀಗಮುದ್ರೆ ಮನೆತನ ಗೋತ್ರ : ಗೌತಮ ಮುತ್ತಾತ : ಶ್ರೀ ಕೃಷ್ಣಭಟ್ಟ ತಾತ : ಶ್ರೀ ಕನಕಾಚಲ ಭಟ್ಟ ತಂದೆ : ಶ್ರೀ ತಿಮ್ಮಣ್ಣ ಭಟ್ಟ ತಾಯಿ : ಶ್ರೀಮತಿ ಗೋಪಿಕಾಂಬ ಅಕ್ಕ : ಶ್ರೀಮತಿ ವೇಂಕಟಾಂಬಾ ಅಣ್ಣ : ಶ್ರೀ ಗುರುರಾಜಾಚಾರ್ಯ ಜನನ : ಕ್ರಿ.ಶ. 1595ನೇ ಮನ್ಮಥನಾಮ ಸಂವತ್ಸರ ಫಾಲ್ಗುಣ ಶುದ್ಧ ಸಪ್ತಮಿ ಗುರುವಾರ/ಶುಕ್ರವಾರ ಜನ್ಮ ನಕ್ಷತ್ರ : ಮೃಗಶಿರಾ ಜನ್ಮಸ್ಥಳ : ಭುವನಗಿರಿ ಪೂರ್ವಾಶ್ರಮದ ಹೆಸರು : ವೇಂಕಟನಾಥ ಚೌಲ ಹಾಗೂ ಅಕ್ಷರಾಭ್ಯಾಸ : ಕ್ರಿ.ಶ. 1597-98ನೇ ಹೇವಿಲಂಬಿ ಸಂವತ್ಸರ ಭಾವ ಹಾಗೂ ಪ್ರಾಥಮಿಕ ಗುರುಗಳು : ಶ್ರೀ ಲಕ್ಷ್ಮೀನರಸಿಂಹಾಚಾರ್ಯರು ಉಪನಯನ : ಕ್ರಿ.ಶ. 1602ನೇ ಶುಭಕೃತ ಸಂವತ್ಸರ ಉನ್ನತ ವಿದ್ಯಾಭ್ಯಾಸ : ಶ್ರೀ ಸುಧೀಂದ್ರತೀರ್ಥರಲ್ಲಿ ವಿವಾಹ : ಕ್ರಿ.ಶ.…
ಬೆಂಗಳೂರು:ಕರ್ನಾಟಕದಲ್ಲಿ ಲೋಕಸಭೆ, ವಿಧಾನಸಭೆಗಷ್ಟೇ ಬಿಜೆಪಿ, ಜೆಡಿಎಸ್ ಮೈತ್ರಿ ಆಗಿದೆ. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜೆಡಿಎಸ್ ಸ್ವತಂತ್ರವಾಗಿ ಸ್ಪರ್ಧೆ ಮಾಡಲಿದೆ ಎಂದು ಮಾಜಿ ಪ್ರಧಾನಿಗಳು, ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ. ದೇವೇಗೌಡರು ಹೇಳಿದರು. ಪಕ್ಷದ ರಾಜ್ಯ ಕಚೇರಿಗೆ ಶುಕ್ರವಾರ ಬೆಳಗ್ಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮಗಳ ಜತೆ ಅವರು ಮಾತನಾಡಿದರು. ಲೋಕಸಭೆ ಚುನಾವಣೆಯಲ್ಲಿ ಉತ್ತಮ ಮೈತ್ರಿ ಆಗಿದೆ. ಅದು ವಿಧಾನಸಭೆ ಚುನಾವಣೆಯಲ್ಲಿ ಕೂಡ ಮುಂದುವರಿಯುತ್ತದೆ. ಆದರೆ ಪಕ್ಷ ಕಟ್ಟುವ ದೃಷ್ಟಿಯಿಂದ ಸ್ಥಳೀಯ ಸಂಸ್ಥೆಗಳ ಚುನಾವಣೆ ಬಹಳ ಮುಖ್ಯ. ಸ್ಥಳೀಯ ಚುನಾವಣೆಯ ಸೀಟು ಹಂಚಿಕೆ ಬಗ್ಗೆ ನರೇಂದ್ರ ಮೋದಿ ಅವರು, ಅಮಿತ್ ಶಾ ಅವರೊಂದಿಗೆ ಚರ್ಚೆ ನಡೆಸಲು ಆಗುತ್ತದೆಯೇ? ಎಂದು ಮಾಜಿ ಪ್ರಧಾನಿಗಳು ಹೇಳಿದರು. ಜೆಡಿಎಸ್ ಮತ್ತು ಬಿಜೆಪಿ ನಡುವೆ ಸಂಬಂಧ ಚೆನ್ನಾಗಿದೆ. ನರೇಂದ್ರ ಮೋದಿ ಅವರು ಹಾಗೂ ಅಮಿತ್ ಶಾ ಅವರೊಂದಿಗೆ ನಮ್ಮ ಬಾಂಧವ್ಯ ಉತ್ತಮವಾಗಿದೆ. ನಮ್ಮ ಶಕ್ತಿ ಎಲ್ಲೆಲ್ಲಿ ಇದೆಯೋ ಅಲೆಲ್ಲಾ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಮತ್ತು ನಗರ ಪಾಲಿಕೆಗಳಲ್ಲಿ…
ಬೆಂಗಳೂರು: ಮೈಸೂರು ಅರಮನೆ ದ್ವಾರದ ಮುಂಭಾಗದಲ್ಲಿ ನಿನ್ನೆ ಸಂಭವಿಸಿದ ಹೀಲಿಯಂ ಸಿಲಿಂಡರ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು. ಗೃಹಕಚೇರಿ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಘಟನೆಯಲ್ಲಿ ಬಲೂನ್ ಮಾರುತ್ತಿದ್ದ ಲಕ್ನೋ ಮೂಲದ ಎನ್ನಲಾದ ವ್ಯಕ್ತಿ ಮೃತಪಟ್ಟಿದ್ದಾನೆ. ಸಣ್ಣಪುಟ್ಟ ವಸ್ತುಗಳ ಮಾರಾಟ ಮಾಡುವವರ ಮೇಲೆ ಯಾವುದೇ ರೀತಿಯ ನಿಯಂತ್ರಣ ಇಲ್ಲ ಎಂಬುದು ಕಾಣಿಸುತ್ತಿದೆ. ಪ್ರವಾಸಿಗರು ಬರುವುದರಿಂದ ಹೆಚ್ಚಿನ ರೀತಿಯಲ್ಲಿ ಕ್ರಮ ತೆಗೆಕೊಳ್ಳಬೇಕು. ಇದೆಲ್ಲವೆನ್ನು ಸೂಕ್ಷ್ಮದೃಷ್ಟಿಯಿಂದ ನೋಡಬೇಕು. ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮ ತೆಗೆದುಕೊಳ್ಳುವಂತೆ ಸೂಚನೆ ನೀಡಿದ್ದೇನೆ. ಬಲೂನ್ ವ್ಯಾಪಾರಿಗೆ ಹೀಲಿಯಂ ಸಿಲಿಂಡರ್ ಹೇಗೆ ಸಿಕ್ಕಿದೆ, ಎಲ್ಲಿ ಖರೀದಿಸಿದ್ದ ಅದೆಲ್ಲವನ್ನು ತನಿಖೆ ಮಾಡಿ ವರದಿ ನೀಡಲಿದ್ದಾರೆ ಎಂದರು. ನಾನು ಸಿಡಬ್ಲೂಸಿ ಸದಸ್ಯ ಅಲ್ಲ. ಹಾಗಾಗಿ ಸಭೆಯಲ್ಲಿ ಪಾಲ್ಗೊಳ್ಳಲು ದೆಹಲಿಗೆ ಹೋಗುತ್ತಿಲ್ಲ. ಸಭೆಯಲ್ಲಿ ಕರ್ನಾಟಕದ ಬೆಳವಣಿಗೆಗಳ ಬಗ್ಗೆ ಚರ್ಚೆ ಆದರೆ ಗೊತ್ತಾಗುತ್ತದೆ ಎಂದಾ ಅವರು, ಹೊಸ…
ತುಮಕೂರು : ಭೂಮಿಗೆ ಬಂಗಾರದ ಬೆಲೆ ಬಂದಿರುವ ಹಿನ್ನೆಲೆಯಲ್ಲಿ ಕೆಲವರು ನಕಲಿ ದಾಖಲೆ ಸೃಷ್ಟಿಸಿ ಅರಣ್ಯ ಭೂಮಿ ಕಬಳಿಸಲು ಯತ್ನಿಸುತ್ತಿದ್ದು, ಕೂಡಲೇ ಪೊಲೀಸ್ ದೂರು ದಾಖಲಿಸುವುದರ ಜೊತೆಗೆ ಅರಣ್ಯ ಅಪರಾಧ ಕಾಯಿದೆಯಡಿಯೂ ಪ್ರಕರಣ ದಾಖಲಿಸುವಂತೆ ಅರಣ್ಯ, ಪರಿಸರ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ ಬಿ ಖಂಡ್ರೆ ಸೂಚಿಸಿದ್ದಾರೆ. ತುಮಕೂರಿನಲ್ಲಿಂದು ಇಂದು ಸಂಜೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ತುಮಕೂರು ಬಯಲು ಸೀಮೆ ಇಲ್ಲಿ ಇರುವ ಅರಣ್ಯ ಪ್ರದೇಶವೇ ಕಡಿಮೆ. ಇದರಲ್ಲಿ ಒತ್ತುವರಿಯೂ ಆಗಿದೆ. ಜೊತೆಗೆ ಕೆಲವರು ನಕಲಿ ದಾಖಲೆ ಸೃಷ್ಟಿಸಿ ಅರಣ್ಯದ ಮೇಲೆ ಹಕ್ಕು ಚಲಾಯಿಸುತ್ತಿದ್ದರೆ, ಇನ್ನು ಕೆಲವು ಕಡೆ ಅಕ್ರಮ ಮಂಜೂರಾತಿ ಆಗಿದೆ ಈ ಬಗ್ಗೆ ಅರಣ್ಯಾಧಿಕಾರಿಗಳು ಯಾವುದೇ ಒತ್ತಡಕ್ಕೆ ಮಣಿಯದೆ ತಕ್ಷಣವೇ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು. ಚಿರತೆ ಸೆರೆಗೆ ಬೋನಿಡಲು ಸೂಚನೆ: ತುಮಕೂರು ಜಿಲ್ಲೆಯ 50ಕ್ಕೂ ಹೆಚ್ಚು ಗ್ರಾಮಗಳಲ್ಲಿ ಚಿರತೆ – ಮಾನವ ಸಂಘರ್ಷವಿದ್ದು ಜನ ಜಾನುವಾರುಗಳ ಮೇಲೆ ದಾಳಿ ಮಾಡುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿರುವ ಬಗ್ಗೆ…
ಮಂಡ್ಯ : ಗ್ರಾಮೀಣ ಭಾಗದ ಅಭಿವೃದ್ಧಿಗೆ ಸರಕಾರದಿಂದ ಹೆಚ್ಚಿನ ಅನುದಾನ ಪಡೆದು ಸರ್ವಾಂಗೀಣ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ಅಭಿವೃದ್ಧಿಗೆ ಬಿಡುಗಡೆಯಾಗುತ್ತಿರುವ ಅನುದಾನದ ಪ್ರತಿ ಪೈಸೆಯನ್ನೂ ಸದುಪಯೋಗ ಮಾಡಿಕೊಳ್ಳಲಾಗುತ್ತಿದೆ ಎಂದು ಶಾಸಕ ಕೆ.ಎಂ.ಉದಯ್ ಶುಕ್ರವಾರ ಹೇಳಿದರು. ಮದ್ದೂರು ತಾಲೂಕಿನ ಕೂಳಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರೆಕಲ್ ದೊಡ್ಡಿ, ಮೇಲದಾಸನದೊಡ್ಡಿ, ಕೊತ್ತಿಪುರ ಹಾಗೂ ಅಣ್ಣಹಳ್ಳಿದೊಡ್ಡಿ ಗ್ರಾಮಗಳಲ್ಲಿ ಅಂದಾಜು 3 ಕೋಟಿ ರೂ ವೆಚ್ಚದಲ್ಲಿ ಸಿಸಿ ರಸ್ತೆ ಮತ್ತು ಸಿಸಿ ಚರಂಡಿ ಕಾಮಗಾರಿಗಳಿಗೆ ಗುದ್ದಲಿಪೂಜೆ ನೆರವೇರಿಸಿ ಅವರು ಮಾತನಾಡಿದರು. ಮದ್ದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೆಲವು ಗ್ರಾಮಗಳಲ್ಲಿ ಇಂದಿಗೂ ಸಹ ಮೂಲಭೂತ ಸೌಕರ್ಯಗಳನ್ನು ಒದಗಿಸುವಲ್ಲಿ ಹಿಂದಿನ ಜನಪ್ರತಿನಿಧಿಗಳು ಸಾಕಷ್ಟು ನಿರ್ಲಕ್ಷ್ಯ ತೋರಿದ್ದಾರೆ. ಹೀಗಾಗಿ, ಗ್ರಾಮೀಣ ಭಾಗದ ಎಲ್ಲ ರಸ್ತೆಗಳು ಸಂಪೂರ್ಣ ಹದಗೆಟ್ಟಿವೆ. ಪ್ರಸ್ತುತ ಕಾಂಗ್ರೆಸ್ ಸರ್ಕಾರ 5 ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ನೀಡುವ ಜೊತೆಗೆ ಗ್ರಾಮೀಣಾಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುತ್ತಿದ್ದು, ಕೆಲವೆಡೆ ಹೊಸ ರಸ್ತೆಗಳ ನಿರ್ಮಾಣ, ಮರು ಡಾಂಬರೀಕರಣ, ದುರಸ್ತಿ ಕಾರ್ಯ ಪೂರ್ಣಗೊಂಡರೆ ಕೆಲವೆಡೆ…














