Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ದೀಪಾವಳಿ/ಛತ್ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿರ್ವಹಿಸಲು ಹುಬ್ಬಳ್ಳಿ-ಕೊಲ್ಲಂ, ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್-ಸಂತ್ರಗಾಚಿ, ಯಶವಂತಪುರ-ಕೊಟ್ಟಾಯಂ ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್-ಕಲಬುರಗಿ ಮತ್ತು ಹುಬ್ಬಳ್ಳಿ-ಮುಜಾಫರ್ಪುರ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್ಪ್ರೆಸ್ ರೈಲುಗಳನ್ನು ಓಡಿಸಲು ನೈಋತ್ಯ ರೈಲ್ವೆ ನಿರ್ಧರಿಸಿದೆ. ವಿವರಗಳು ಈ ಕೆಳಗಿನಂತಿವೆ: ಹುಬ್ಬಳ್ಳಿ-ಕೊಲ್ಲಂ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ರೈಲು ಸಂಚಾರ ರೈಲು ಸಂಖ್ಯೆ 07313 ಎಸ್ಎಸ್ಎಸ್ ಹುಬ್ಬಳ್ಳಿ-ಕೊಲ್ಲಂ ವಿಶೇಷ ಎಕ್ಸ್ಪ್ರೆಸ್ ರೈಲು ಅಕ್ಟೋಬರ್ 26 ರಂದು ಎಸ್ಎಸ್ಎಸ್ ಹುಬ್ಬಳ್ಳಿಯಿಂದ ಮಧ್ಯಾಹ್ನ 3:15ಕ್ಕೆ ಹೊರಟು ಮರುದಿನ ಸಂಜೆ 5:10 ಕ್ಕೆ ಕೊಲ್ಲಂ ನಿಲ್ದಾಣವನ್ನು ತಲುಪಲಿದೆ. ಹಿಂದಿರುಗುವ ಪ್ರಯಾಣದಲ್ಲಿ, ರೈಲು ಸಂಖ್ಯೆ 07314 ಅಕ್ಟೋಬರ್ 27 ರಂದು ಕೊಲ್ಲಂನಿಂದ ರಾತ್ರಿ 8:30 ಕ್ಕೆ ಹೊರಟು, ಮರುದಿನ ರಾತ್ರಿ 8:45 ಕ್ಕೆ ಹುಬ್ಬಳ್ಳಿ ತಲುಪಲಿದೆ. ಈ ರೈಲು ಹಾವೇರಿ, ರಾಣಿಬೆನ್ನೂರು, ದಾವಣಗೆರೆ, ಬೀರೂರು, ಅರಸೀಕೆರೆ, ತುಮಕೂರು, ಚಿಕ್ಕಬಾಣಾವರ, ಎಸ್ಎಂವಿಟಿ ಬೆಂಗಳೂರು, ಕೃಷ್ಣರಾಜಪುರಂ, ಬಂಗಾರಪೇಟೆ, ಸೇಲಂ, ಕರೂರ್,…
ಬೆಂಗಳೂರು: ಡಾನಾ ಚಂಡಮಾರುತದ ಹಿನ್ನಲೆಯಲ್ಲಿ ಅಕ್ಟೋಬರ್ 25 ರಂದು ಹೊರಡುವ ರೈಲು ಸಂಖ್ಯೆ 22883 ಪುರಿ-ಯಶವಂತಪುರ ಗರೀಬ್ ರಥ ಸಾಪ್ತಾಹಿಕ ಎಕ್ಸ್ಪ್ರೆಸ್, ಅಕ್ಟೋಬರ್ 26 ರಂದು ಹೊರಡುವ ರೈಲು ಸಂಖ್ಯೆ 22884 ಯಶವಂತಪುರ-ಪುರಿ ಗರೀಬ್ ರಥ ಸಾಪ್ತಾಹಿಕ ಎಕ್ಸ್ಪ್ರೆಸ್ ಮತ್ತು ಅಕ್ಟೋಬರ್ 27 ರಂದು ಹೊರಡುವ ರೈಲು ಸಂಖ್ಯೆ 12510 ಗುವಾಹಟಿ- ಎಸ್ಎಂವಿಟಿ ಬೆಂಗಳೂರು ಟ್ರೈ-ವೀಕ್ಲಿ ಎಕ್ಸ್ಪ್ರೆಸ್ ರೈಲುಗಳ ಸಂಚಾರ ಪೂರ್ವ ಕರಾವಳಿ ಮತ್ತು ಈಶಾನ್ಯ ಗಡಿ ರೈಲ್ವೆ ವಲಯವು ರದ್ದು ಪಡಿಸಲಾಗಿದೆ ಎಂದು ಸೂಚಿಸಿದೆ. ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್: ದೀಪಾವಳಿ ಹಬ್ಬದ ಪ್ರಯುಕ್ತ ಏಕಮುಖ ವಿಶೇಷ ರೈಲುಗಳ ಸಂಚಾರ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿರ್ವಹಿಸಲು ಮತ್ತು ಪ್ರಯಾಣಿಕರ ಅನುಕೂಲಕ್ಕಾಗಿ ನೈಋತ್ಯ ರೈಲ್ವೆಯಿಂದ ಹೆಚ್ಚುವರಿ ವಿಶೇಷ ಎಕ್ಸ್ ಪ್ರೆಸ್ ರೈಲುಗಳನ್ನು ಓಡಿಸಲು ವ್ಯವಸ್ಥೆ ಮಾಡಲಾಗಿದೆ. ವಿವರಗಳು ಈ ಕೆಳಗಿನಂತಿವೆ: ರೈಲು ಸಂಖ್ಯೆ 07323 ಎಸ್ಎಸ್ಎಸ್ ಹುಬ್ಬಳ್ಳಿ-ಯಶವಂತಪುರ ಒನ್ ವೇ ವಿಶೇಷ ಎಕ್ಸ್ ಪ್ರೆಸ್ ರೈಲು ಅಕ್ಟೋಬರ್…
ಬೆಂಗಳೂರು: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿರ್ವಹಿಸಲು ಮತ್ತು ಪ್ರಯಾಣಿಕರ ಅನುಕೂಲಕ್ಕಾಗಿ ನೈಋತ್ಯ ರೈಲ್ವೆಯಿಂದ ಹೆಚ್ಚುವರಿ ವಿಶೇಷ ಎಕ್ಸ್ ಪ್ರೆಸ್ ರೈಲುಗಳನ್ನು ಓಡಿಸಲು ವ್ಯವಸ್ಥೆ ಮಾಡಲಾಗಿದೆ. ವಿವರಗಳು ಈ ಕೆಳಗಿನಂತಿವೆ: ರೈಲು ಸಂಖ್ಯೆ 07323 ಎಸ್ಎಸ್ಎಸ್ ಹುಬ್ಬಳ್ಳಿ-ಯಶವಂತಪುರ ಒನ್ ವೇ ವಿಶೇಷ ಎಕ್ಸ್ ಪ್ರೆಸ್ ರೈಲು ಅಕ್ಟೋಬರ್ 30, 2024 ರಂದು (ಬುಧವಾರ) ಎಸ್ಎಸ್ಎಸ್ ಹುಬ್ಬಳ್ಳಿಯಿಂದ ಬೆಳಿಗ್ಗೆ 8:00 ಗಂಟೆಗೆ ಹೊರಟು ಅದೇ ದಿನ ಮಧ್ಯಾಹ್ನ 3:45 ಕ್ಕೆ ಯಶವಂತಪುರ ನಿಲ್ದಾಣ ತಲುಪಲಿದೆ. ಈ ರೈಲು ಹಾವೇರಿ, ರಾಣಿಬೆನ್ನೂರು, ದಾವಣಗೆರೆ, ಬೀರೂರು, ಅರಸೀಕೆರೆ ಮತ್ತು ತುಮಕೂರು ನಿಲ್ದಾಣಗಳಲ್ಲಿ ನಿಲ್ಲಲಿದೆ. ರೈಲು ಸಂಖ್ಯೆ 07324 ಯಶವಂತಪುರ – ಕಲಬುರಗಿ ಒನ್ ವೇ ವಿಶೇಷ ಎಕ್ಸ್ಪ್ರೆಸ್ ರೈಲು ಅಕ್ಟೋಬರ್ 30, 2024 ರಂದು (ಬುಧವಾರ) ಯಶವಂತಪುರದಿಂದ ಸಂಜೆ 5:15 ಕ್ಕೆ ಹೊರಟು, ಮರುದಿನ ಅಂದರೆ ಅಕ್ಟೋಬರ್ 31, 2024 ರಂದು (ಗುರುವಾರ) ಬೆಳಗಿನ ಜಾವ 4:15 ಕ್ಕೆ ಕಲಬುರಗಿ ತಲುಪಲಿದೆ. ಮಾರ್ಗದಲ್ಲಿ ಈ…
ಧಾರವಾಡ : ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃಧ್ಧಿ ನಿಗಮದಿಂದ 2024-25ನೇ ಸಾಲಿಗೆ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಉದ್ಯಮ ಶೀಲತಾ ಅಭಿವೃದ್ದಿ ಯೋಜನೆ, ಉದ್ಯಮ ಶೀಲತಾ ಅಭಿವೃದ್ದಿ ಸ್ವಾವಲಂಬಿ ಸಾರಥಿ ಯೋಜನೆ, ಮೈಕ್ರೋ ಕ್ರೆಡಿಟ್ (ಪ್ರೇರಣಾ) ಯೋಜನೆ ಹಾಗೂ ಗಂಗಾ ಕಲ್ಯಾಣ ಯೋಜನೆಗಳಡಿ ಸಹಾಯಧನ ಮತ್ತು ಸಾಲ ಸೌಲಭ್ಯ ಒದಗಿಸಲು ಪರಿಶಿಷ್ಟ ಪಂಗಡದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಗ್ರಾಮ ಒನ್, ಕರ್ನಾಟಕ ಒನ್ ಮತ್ತು ಹುಬ್ಬಳ್ಳಿ ಧಾರವಾಡ ಒನ್ ಕೇಂದ್ರಗಳಲ್ಲಿ ಸೇವಾ ಸಿಂಧು ಪೋರ್ಟಲ್ https://sevasindhu.karnataka.gov,in ಮೂಲಕ ನವೆಂಬರ 23, 2024 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಲ್ಯಾಣ ಮಿತ್ರ ಸಹಾಯವಾಣಿ ಸಂಖ್ಯೆ : 9482-300-400 ಹಾಗೂ ನಿಗಮದ ವೆಬ್ಸೈಟ್, ಜಿಲ್ಲಾ ವ್ಯವಸ್ಥಾಪಕರ ಕಛೇರಿಗಳನ್ನು ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. https://kannadanewsnow.com/kannada/8-bjp-mlas-join-congress-sd-somashekar/ https://kannadanewsnow.com/kannada/the-support-of-new-youth-is-getting-in-a-big-way-in-shiggavi-basavaraj-bommai/
ಹಾವೇರಿ: ಶಿಗ್ಗಾವಿಯಲ್ಲಿ ಅದ್ಭುತವಾದ ಬೆಂಬಲ ದೊರೆಯುತ್ತಿದೆ. ನಮ್ಮ ಆತ್ಮೀಯರು, ಹಿರಿಯರ ಬೆಂಬಲದ ಜೊತೆಗೆ ಹೊಸ ಯುವಕರ ಬೆಂಬಲ ದೊಡ್ಡ ಪ್ರಮಾಣದಲ್ಲಿ ಸಿಗುತ್ತಿದೆ. ಈ ಬಾರಿ ಚುನಾವಣೆಯಲ್ಲಿ ದೊಡ್ಡ ಜನಶಕ್ತಿ ನಮ್ಮ ಪರವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಶಿಗ್ಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಿಗ್ಯಾವಿಯಲ್ಲಿ ಈ ಬಾರಿ ಹೊಸ ಯುವಕರ ತಂಡ ನಮ್ಮ ಜೊತೆಗೆ ದೊಡ್ಡ ಪ್ರಮಾಣದಲ್ಲಿ ಬರುತ್ತಿದೆ ಎಂದರು. ದಕ್ಷಿಣ ಕನ್ನಡ ಉಡುಪಿ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ನಡೆದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಆಯ್ಕೆ ಆಗಿದ್ದು, ಅದು ಸಂಸದ ಕೋಟ ಶ್ರೀವಿವಾಸ ಪೂಜಾರಿ ಅವರಿಂದ ಖಾಲಿಯಾಗಿದ್ದ ಸ್ಥಾನ. ಅಲ್ಲಿ ಜನ ಪ್ರತಿನಿಧಿಗಳು ನಮ್ಮ ಪರವಾಗಿದ್ದಾರೆ. ಅಲ್ಲದೇ, ಕಳೆದ ಒಂದೂವರೆ ವರ್ಷದಿಂದ ರಾಜ್ಯ ಸರ್ಕಾರದ ದುರಾಡಳಿತದ ವಿರುದ್ಧ ಜನರು ಮತ ಹಾಕಿದ್ದಾರೆ. ಅಲ್ಲಿ ಪಜ್ಞಾವಂತ ಮತದಾರರಿದ್ದಾರೆ. ಗ್ರಾಮ ಪಂಚಾಯತಿ, ಸ್ಥಳೀಯ ನಗರಸಭೆಯ ಸದಸ್ಯರು ಮತದಾನ ಮಾಡಿದ್ದಾರೆ ಎಂದರು. ರಾಜ್ಯ ಸರ್ಕಾರ…
ಬೆಂಗಳೂರು: ಅಂತೂ ಇಂತೂ ಅಳೆದು ತೂಗಿ ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಗೆ ಜೆಡಿಎಸ್ ಹಾಗೂ ಬಿಜೆಪಿ ನಾಯಕರು ಮೈತ್ರಿ ಅಭ್ಯರ್ಥಿಯಾಗಿ, ಎನ್ ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಹೆಸರು ಘೋಷಣೆ ಮಾಡಿದ್ದಾರೆ. ಇಂತಹ ಅವರು ನಾಳೆ ಮಧ್ಯಾಹ್ನ 12 ಗಂಟೆಗೆ ಎನ್ ಡಿಎ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ. ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವಂತ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ನಿವಾಸದಲ್ಲಿ ಜೆಡಿಎಸ್ ಹಾಗೂ ಬಿಜೆಪಿಯ ನಾಯಕರು ಸೇರಿ ಈ ಸಂಬಂಧ ಅಂತಿಮ ಚರ್ಚೆಯನ್ನು ನಡೆಸಿದರು. ಈ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು, ಎನ್ ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಅವರನ್ನು ಇವತ್ತು ನಮ್ಮ ಅಭ್ಯರ್ಥಿ ಅಂತ ಘೋಷಣೆ ಮಾಡಿದ್ದೇವೆ. ಪ್ರಧಾನಿ ಮೋದಿ ಅವರ ಆಶೀರ್ವಾದವಿದೆ. ಮೋದಿ ಅವರ ಬೆಂಬಲದಿಂದ ಕುಮಾರಸ್ವಾಮಿ, ಅಶೋಕ್ ಎಲ್ಲರೂ ಒಟ್ಟಾಗಿ ಸೇರಿದ್ದೇವೆ. ನೂರಕ್ಕೆ ನೂರು ಚುನಾವಣೆಯಲ್ಲಿ ನಿಂತು ಗೆಲುವು ಸಾಧಿಸಲಿದ್ದಾರೆ ಎಂದರು. ನಂತ್ರ ಮಾತನಾಡಿದಂತ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು…
ಬೆಂಗಳೂರು: ಬಿಜೆಪಿಯ 8 ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುವುದಾಗಿ ಕರ್ನಾಟಕ ಮೂರು ವಿಧಾನಸಭಾ ಉಪ ಚುನಾವಣೆಯ ಹೊತ್ತಿನಲ್ಲೇ ಸ್ಪೋಟಕ ಹೇಳಿಕೆಯನ್ನು ಶಾಸಕ ಎಸ್.ಟಿ ಸೋಮಶೇಖರ್ ಹೇಳಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಯಶವಂತಪುರ ಕ್ಷೇತ್ರದ ಶಾಸಕ ಎಸ್.ಟಿ ಸೋಮಶೇಖರ್ ಅವರು ಬೆಂಗಳೂರು ನಗರದ ಇಬ್ಬರು ಶಾಸಕರು ಸೇರಿದಂತೆ 8 ಮಂದಿ ಬಿಜೆಪಿ ಶಾಸಕರು ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಗೊಳ್ಳುವುದಾಗಿ ತಿಳಿಸಿದರು. ಅಂದಹಾಗೇ ಇಂದು ತೀವ್ರ ಕುತೂಹಲ ಮೂಡಿಸಿದ್ದಂತ ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಗೆ ಜೆಡಿಎಸ್ ಹಾಗೂ ಬಿಜೆಪಿಯ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಅವರ ಹೆಸರನ್ನು ಘೋಷಿಸಲಾಗಿದೆ. ಈ ಮೂಲಕ ಸೈನಿಕನಿಗೆ ಟಕ್ಕರ್ ಕೊಡಲು ಉಭಯ ನಾಯಕರು ಸಜ್ಜಾಗಿದ್ದಾರೆ. https://kannadanewsnow.com/kannada/school-children-seriously-injured-after-cement-brick-falls-from-under-construction-building/ https://kannadanewsnow.com/kannada/nikhil-kumaraswamy-to-contest-as-nda-candidate-from-channapatna-bs-yediyurappa/
ದೊಡ್ಡಬಳ್ಳಾಪುರ: ಇಲ್ಲಿನ ಶಾಲೆಯೊಂದರ ಮೇಲೆ ನಿರ್ಮಾಣ ಹಂತದ ಕಟ್ಟಡ ಮೇಲಿನಿಂದ ಸಿಮೆಂಟ್ ಇಟ್ಟಿಗೆ ಬಿದ್ದ ಪರಿಣಾಮ, ಶಾಲೆಯಲ್ಲಿ ಪಾಠ ಕೇಳುತ್ತಿದ್ದಂತ ಮಕ್ಕಳಿಗೆ ಗಂಭೀರ ಗಾಯವಾಗಿರುವುದಾಗಿ ತಿಳಿದು ಬಂದಿದೆ. ದೊಡ್ಡಬಳ್ಳಾಪುರದ ಕುಂಬಾರಪೇಟೆಯಲ್ಲಿನ ಶಾಲೆಯೊಂದರ ಪಕ್ಕದಲ್ಲೇ ಕಟ್ಟಡಣವೊಂದನ್ನು ನಿರ್ಮಾಣ ಮಾಡಲಾಗುತ್ತಿತ್ತು. ಇಂದು ಆಕಸ್ಮಾತ್ ನಿರ್ಮಾಣ ಹಂತದ ಕಟ್ಟಡದಿಂದ ಸಿಮೆಂಟ್ ಇಟ್ಟಿಗೆ ಶಾಲೆಯ ಮೇಲ್ಛಾವಣಿಯ ಮೇಲೆ ಬಿದ್ದಿದೆ. ಶಾಲೆಯ ಮೇಲ್ಛಾವಣಿ ಸಿಮೆಂಟ್ ಶೀಟ್ ಆಗಿದ್ದರಿಂದ ಸಿಮೆಂಟ್ ಇಟ್ಟಿಗೆ ಬಿದ್ದ ಪರಿಣಾಮ ಸೀಟ್ ಹೊಡೆದು, ಅದರಡಿಯಲ್ಲಿ ಶಾಲೆಯಲ್ಲಿ ಕುಳಿತು ವ್ಯಾಸಂಗ ಮಾಡುತ್ತಿದ್ದಂತ ಮಕ್ಕಳ ಮೇಲೆಯೇ ಬಿದ್ದಿದೆ. ಸಿಮೆಂಟ್ ಇಟ್ಟಿಗೆ ಬಿದ್ದ ಪರಿಣಾಮ ಕೆಲ ಮಕ್ಕಳು ಗಂಭೀರವಾಗಿ ಗಾಯಗೊಂಡಿರುವುದಾಗಿ ತಿಳಿದು ಬಂದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/nikhil-kumaraswamy-to-contest-as-nda-candidate-from-channapatna-bs-yediyurappa/ https://kannadanewsnow.com/kannada/big-shock-for-zomato-swiggy-users-platform-fee-hike-in-some-cities/
ನವದೆಹಲಿ: ಆನ್ಲೈನ್ ಆಹಾರ ವಿತರಣಾ ಪ್ಲಾಟ್ಫಾರ್ಮ್ಗಳಾದ ಜೊಮಾಟೊ ಮತ್ತು ಸ್ವಿಗ್ಗಿ ಹಬ್ಬದ ಋತುವಿನ ಮಧ್ಯೆ ಕೆಲವು ನಗರಗಳಲ್ಲಿ ಪ್ಲಾಟ್ಫಾರ್ಮ್ ಶುಲ್ಕವನ್ನು ಹೆಚ್ಚಿಸಿವೆ. ಎರಡು ಪ್ರತಿಸ್ಪರ್ಧಿಗಳು ಈಗ ರಾಷ್ಟ್ರ ರಾಜಧಾನಿಯಲ್ಲಿ ಪ್ಲಾಟ್ ಫಾರ್ಮ್ ಶುಲ್ಕವಾಗಿ 10 ರೂ.ಗಳನ್ನು ವಿಧಿಸುತ್ತಿದ್ದಾರೆ. ಹಬ್ಬದ ಋತುವಿನ ದಟ್ಟಣೆಯ ಮಧ್ಯೆ ಕಂಪನಿಯು ತನ್ನ ಪ್ಲಾಟ್ಫಾರ್ಮ್ ಶುಲ್ಕವನ್ನು 10 ರೂ.ಗೆ ಹೆಚ್ಚಿಸಿದೆ ಎಂಬ ವರದಿಯ ಬಗ್ಗೆ ಸ್ಪಷ್ಟಪಡಿಸಿದ ಜೊಮಾಟೊ, “ನಾವು ನಿನ್ನೆ (ಬುಧವಾರ) ಕೆಲವು ನಗರಗಳಲ್ಲಿ ಪ್ಲಾಟ್ಫಾರ್ಮ್ ಶುಲ್ಕವನ್ನು ಹೆಚ್ಚಿಸಿದ್ದೇವೆ” ಎಂದು ಹೇಳಿದೆ. ರಾಷ್ಟ್ರ ರಾಜಧಾನಿಯಲ್ಲಿ, ಜೊಮಾಟೊ ಈಗ “ಹಬ್ಬದ ಋತುವಿನ ಪ್ಲಾಟ್ಫಾರ್ಮ್ ಶುಲ್ಕ” ವಾಗಿ 10 ರೂ.ಗಳನ್ನು ವಿಧಿಸುತ್ತಿದೆ. “ನಮ್ಮ ಪ್ಲಾಟ್ಫಾರ್ಮ್ ಶುಲ್ಕದಲ್ಲಿ ಇಂತಹ ಬದಲಾವಣೆಗಳು ವಾಡಿಕೆಯ ವ್ಯವಹಾರ ವಿಷಯವಾಗಿದೆ ಮತ್ತು ಕಾಲಕಾಲಕ್ಕೆ ಮಾಡಲಾಗುತ್ತದೆ ಮತ್ತು ನಗರದಿಂದ ನಗರಕ್ಕೆ ಬದಲಾಗಬಹುದು” ಎಂದು ಕಂಪನಿಯು ಯಾವ ನಗರಗಳಲ್ಲಿ ಪ್ಲಾಟ್ಫಾರ್ಮ್ ಶುಲ್ಕವನ್ನು ಹೆಚ್ಚಿಸಿದೆ ಮತ್ತು ಎಷ್ಟು ಹೆಚ್ಚಿಸಿದೆ ಎಂಬುದನ್ನು ನಿರ್ದಿಷ್ಟಪಡಿಸದೆ ಹೇಳಿದೆ. “ನಾವು ನಿನ್ನೆ ಕೆಲವು ನಗರಗಳಲ್ಲಿ ಪ್ಲಾಟ್ಫಾರ್ಮ್ ಶುಲ್ಕವನ್ನು ಹೆಚ್ಚಿಸಿದ್ದೇವೆ.…
ನವದೆಹಲಿ: ಭಾರತೀಯ ವಿಮಾನಯಾನ ಸಂಸ್ಥೆಗಳು ಪ್ರತಿದಿನ ಹೆಚ್ಚುತ್ತಿರುವ ಬೆದರಿಕೆಗಳ ನಡುವೆ ಹೆಚ್ಚಿನ ಎಚ್ಚರಿಕೆ ವಹಿಸುತ್ತಿರುವುದರಿಂದ, ಗುರುವಾರ ಸುಮಾರು 85 ವಿಮಾನಗಳಿಗೆ ಹೊಸ ಬಾಂಬ್ ಬೆದರಿಕೆಗಳು ಬಂದಿವೆ. ಇದರಲ್ಲಿ 20 ಏರ್ ಇಂಡಿಯಾ, 20 ಇಂಡಿಗೊ, 20 ವಿಸ್ತಾರಾ ಮತ್ತು 25 ಅಕಾಸಾ ಏರ್ ವಿಮಾನಗಳು ಸೇರಿವೆ. ಬಾಂಬ್ ಬೆದರಿಕೆಯ ಕಾರಣದಿಂದಾಗಿ ಹಲವು ವಿಮಾನಗಳ ಹಾರಾಟದಲ್ಲಿ ವ್ಯತ್ತಯ ಕೂಡ ಉಂಟಾಗಿದೆ. ಸದ್ಯ ಬಾಂಬ್ ಬೆದರಿಕೆ ಕರೆಯ ನಂತ್ರ ಬಾಂಬ್ ನಿಷ್ಕ್ರೀಯ ದಳದಿಂದ ತಪಾಸಣೆ ನಡೆಸಲಾಗುತ್ತಿದೆ. https://kannadanewsnow.com/kannada/important-information-for-ration-card-beneficiaries-get-e-kyc-done-otherwise-they-will-not-get-ration/ https://kannadanewsnow.com/kannada/nikhil-kumaraswamy-to-contest-as-nda-candidate-from-channapatna-bs-yediyurappa/