Author: kannadanewsnow09

ಬೆಂಗಳೂರು: 2025ನೇ ಸಾಲಿನ ಬಿ. ಇಡಿ. ದಾಖಲಾತಿ ಸಂಬಂಧ ಅರ್ಜಿ ಸಲ್ಲಿಸಲು ಅಧಿಸೂಚನೆಯನ್ನು ಹೊರಡಿಸಲಾಗಿದ್ದು, 2025ನೇ ಅಕ್ಟೋಬರ್ 03 ರಿಂದ ನವೆಂಬರ್ 03 ರ ವರೆಗೆ ಅರ್ಜಿ ಸಲ್ಲಿಸಿ ದಾಖಲೆಗಳನ್ನು ನೋಡಲ್ ಕೇಂದ್ರಗಳಲ್ಲಿ ಪರಿಶೀಲಿಸಿಕೊಳ್ಳಲು ಸೂಚಿಸಲಾಗಿತ್ತು. ಅದರಂತೆ ಅರ್ಜಿ ಸಲ್ಲಿಸಿದವರಲ್ಲಿ 28976 ಅರ್ಹ ಮತ್ತು 6793 ಅಪೇಕ್ಷಿತ ಅಭ್ಯರ್ಥಿಗಳ ಪಟ್ಟಿಯನ್ನು ಇಲಾಖೆಯ ಜಾಲತಾಣ https://schooleducation.karnataka.gov.in ರಲ್ಲಿ ಪ್ರಕಟಿಸಲಾಗಿದೆ. ಇವರಲ್ಲಿ 6174 ಮಂದಿ ಅಭ್ಯರ್ಥಿಗಳು ಪತ್ರಿಕಾ ಪ್ರಕಟಣೆ ನೀಡಿದರೂ, ನೋಡಲ್ ಕೇಂದ್ರದವರು ಫೋನ್ ಮೂಲಕ ಸಂಪರ್ಕಿಸಿ ತಿಳಿಸಿ ಹೇಳಿದರೂ ಸಹಾ ದಾಖಲೆಗಳ ಪರಿಶೀಲನೆಯನ್ನು ಮಾಡಿಸಿಕೊಂಡಿರುವುದಿಲ್ಲ. ಆದರೂ ಇವರಿಗೆ ದಾಖಲೆಗಳನ್ನು ಪರಿಶೀಲಿಸಿಕೊಂಡು ಅಪ್‌ಡೇಟ್ ಮಾಡಿಸಿಕೊಳ್ಳಲು ಇನ್ನೊಂದು ಅವಕಾಶವನ್ನು ನೀಡಿ ಈ ಮೂಲಕ ಅಂತಿಮ ಸೂಚನೆಯನ್ನು ನೀಡಲಾಗಿದೆ. ಈ ಎರಡೂ ಪಟ್ಟಿಗಳಲ್ಲಿರುವ ಪ್ರತಿಯೊಬ್ಬ ಅಭ್ಯರ್ಥಿಯೂ ಪಟ್ಟಿಯಲ್ಲಿ ನೀಡಲಾಗಿರುವ ಕೋಡ್ ಸಂಖ್ಯೆಯನುಸಾರ ಪಟ್ಟಿಯನ್ನು ಪುನಃ ಪರಿಶೀಲಿಸಿಕೊಳ್ಳತಕ್ಕದು ಮತ್ತು ಅದರಲ್ಲಿ ಯಾವುದೇ ತಪ್ಪು ಅಥವಾ ದೋಷ ಇದ್ದರೆ 2025ನೇ ನವೆಂಬರ್ 15 ರೊಳಗೆ ಸಂಬಂಧಿತ ನೋಡಲ್ ಕೇಂದ್ರಕ್ಕೆ ಎಲ್ಲಾ ಮೂಲ…

Read More

ಕಲಬುರ್ಗಿ: ದಿನಾಂಕ 16-11-2025ರಂದು ಚಿತ್ತಾಪೂರ ಪಟ್ಟಣದಲ್ಲಿ ಆರ್ ಎಸ್ ಎಸ್ ಪಥ ಸಂಚಲನ ಹಾಗೂ ಕಾರ್ಯಕ್ರಮಕ್ಕೆ ಷರತ್ತು ಬದ್ಧ ಅನುಮತಿಯನ್ನು ನೀಡಿ ತಹಶೀಲ್ದಾರ್ ಅಧಿಕೃತ ಆದೇಶ ಮಾಡಿದ್ದಾರೆ. ಈ ಕುರಿತಂತೆ ಚಿತ್ತಾಪೂರ ತಹಶೀಲ್ದಾರ್ ಹಾಗೂ ತಾಲ್ಲೂಕು ದಂಡಾಧಿಕಾರಿಗಳು ಅನುಮತಿಸಿ ಪತ್ರದಲ್ಲಿ ಆದೇಶ ಮಾಡಿದ್ದು, ಚಿತ್ತಾಪೂರ ಪಟ್ಟಣದಲ್ಲಿ ಆರ್,ಎಸ್,ಎಸ್ ಕಾರ್ಯಕ್ರಮ ನಡೆಸಲು ಅನುಮತಿ ನೀಡಬೇಕೆಂದು ಉಲ್ಲೇಖ (1) ರನ್‌ವಯ ಅಶೋಕ ಪಾಟೀಲ ರವರು ಅರ್ಜಿಯನ್ನು ಸಲ್ಲಿಸಿರುತ್ತಾರೆ. ಹಾಗೂ ಮಾನ್ಯ ಉಚ್ಚ ನ್ಯಾಯಲಯ ಕಲಬುರಗಿ ಪೀಠದಲ್ಲಿ WP NO. 203166/2025 ರ ಪ್ರಕರಣ ದಾಖಲಿಸಿರುತ್ತಾರೆ. ಮಾನ್ಯ ನ್ಯಾಯಾಲಯದ ನಿರ್ದೇಶನದಂತೆ ದಿನಾಂಕ: 28-10-2025 ರಂದು ಶಾಂತಿ ಸಭೆ ನಡೆಸಲಾಗಿರುತ್ತದೆ. ಹಾಗೂ ದಿನಾಂಕ: 30-10-2025 ರಂದು ಮಾನ್ಯ ಉಚ್ಚ ನ್ಯಾಯಲಯ ಕಲಬುರಗಿ ಪೀಠದಲ್ಲಿ ನೀಡಿದ ನಿರ್ದೇಶನದಂತೆ ದಿನಾಂಕ: 05-11-2025 ರಂದು ಮಾನ್ಯ ಅಡ್ವಕೇಟ್ ಜನರಲ್ ಬೆಂಗಳೂರು ರವರ ಕಛೇರಿಯಲ್ಲಿ ಮತ್ತೊಮ್ಮೆ ಶಾಂತಿ ಸಭೆಯನ್ನು ಅರ್ಜಿದಾರರು ಮತ್ತು ಅವರ ವಕೀಲರ ಜೊತೆ ನಡೆಸಲಾಯಿತು. ಮಾನ್ಯ ನ್ಯಾಯಲಯದ ನಿರ್ದೇಶನದಂತೆ ಹಾಗೂ…

Read More

ಬೆಂಗಳೂರು: 2025-26ನೇ ಸಾಲಿಗೆ ಆಶಾ ಕಾರ್ಯಕರ್ತೆಯರಿಗೆ ತಂಡ ಆಧಾರಿತ ಪ್ರೋತ್ಸಾಹಧನವನ್ನು ಪಾವತಿಸಲು ಮೂರನೇ ತ್ರೈಮಾಸಿಕ ಕಂತಿನ ಅನುದಾನವನ್ನು ಬಿಡುಗಡೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಸಂಬಂಧ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ನಿರ್ದೇಶಕರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು ಇವರ ಪತ್ರದಲ್ಲಿ ಮೇಲೆ ಕ್ರಮ ಸಂಖ್ಯೆ (2) ರಲ್ಲಿ ಓದಲಾದ ಆದೇಶದಲ್ಲಿ 2025-26ನೇ ಸಾಲಿನ ಆಯವ್ಯಯ ಘೋಷಣೆಯ ಕಂಡಿಕೆ 148 ರನ್ವಯ ಆಯುಷ್ಮಾನ್ ಆರೋಗ್ಯ ಮಂದಿರಗಳಾಗಿ ಮೇಲ್ದರ್ಜೆಗೇರದ ಆರೋಗ್ಯ ಉಪಕೇಂದ್ರಗಳು ಮತ್ತು ನಗರ ಪ್ರದೇಶದ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ರೂ.1000/- ಗಳ (ಒಂದು ಸಾವಿರ ರೂಪಾಯಿಗಳು) ತಂಡ ಆಧಾರಿತ ಪ್ರೋತ್ಸಾಹಧನವನ್ನು ಪಾವತಿಸಲು ಹಾಗೂ ಇದಕ್ಕಾಗಿ ತಗಲುವ ವೆಚ್ಚ ರೂ. 1800.48 ಲಕ್ಷಗಳನ್ನು ಲೆಕ್ಕಶೀರ್ಷಿಕೆ:2211-00-103-0-11-324 ರಡಿ ಒದಗಿಸಲಾದ ರೂ.2500.00 ಲಕ್ಷಗಳ ಅನುದಾನದಲ್ಲಿ ಭರಿಸಲು ಅನುಮೋದನೆ ನೀಡಲಾಗಿರುತ್ತದೆ. ಈ ಆದೇಶದನ್ವಯ ಆಶಾ ಕಾರ್ಯಕರ್ತೆಯರಿಗೆ ತಂಡ ಆಧಾರಿತ ಪ್ರೋತ್ಸಾಹಧನವನ್ನು ಪಾವತಿಸಲು ಲೆಕ್ಕಶೀರ್ಷಿಕೆ: 2211-00-103-0-11-324…

Read More

ಮುಂಬೈ: ಪುಣೆ ನಗರದ ಹೊರವಲಯದಲ್ಲಿರುವ ನವಲೆ ಸೇತುವೆಯ ಸೆಲ್ಫಿ ಪಾಯಿಂಟ್‌ನಲ್ಲಿ ಗುರುವಾರ ಸಂಜೆ ಎರಡು ಟ್ರಕ್‌ಗಳು, ಹಲವಾರು ಕಾರುಗಳು ಮತ್ತು ಸಣ್ಣ ವಾಹನಗಳು ಬೆಂಕಿಗೆ ಆಹುತಿಯಾದ ಭೀಕರ ಅಪಘಾತದಲ್ಲಿ ಕನಿಷ್ಠ ಎಂಟು ಜನರು ಸಜೀವ ದಹನವಾಗಿ ಸಾವನ್ನಪ್ಪಿದ್ದಾರೆ ಮತ್ತು 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳು ನಡೆಯುತ್ತಿವೆ. ಪುಣೆ-ಬೆಂಗಳರು ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ಈ ಘಟನೆ ಸುಮಾರು 17:30 ಗಂಟೆಯ ಸುಮಾರಿಗೆ ನಡೆದಿದೆ ಎಂದು ಪುಣೆ ಪೊಲೀಸರು ಮತ್ತು ಅಗ್ನಿಶಾಮಕ ದಳದ ಅಧಿಕಾರಿಗಳು ತಿಳಿಸಿದ್ದಾರೆ. https://twitter.com/ANI/status/1988974962766672148 ಅಪಘಾತದ ಶಬ್ದ ಮತ್ತು ಬೆಂಕಿಯ ಶಬ್ದವು ಪ್ರದೇಶವನ್ನು ಬೆಚ್ಚಿಬೀಳಿಸಿದೆ. ಘಟನೆ ವರದಿಯಾದ ತಕ್ಷಣ, ಪುಣೆ ಪೊಲೀಸರು ಮತ್ತು ಪುಣೆ ಮುನ್ಸಿಪಲ್ ಕಾರ್ಪೊರೇಷನ್ ತಂಡಗಳು ಸ್ಥಳಕ್ಕೆ ಧಾವಿಸಿದವು. ಅಪಘಾತದ ನಂತರ ಎರಡು ಟ್ರಕ್‌ಗಳು ಬೆಂಕಿಗೆ ಆಹುತಿಯಾಗಿವೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಸಿಂಹಗಡ್ ರಸ್ತೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇದುವರೆಗಿನ ಲಭ್ಯವಿರುವ ಮಾಹಿತಿ ಮತ್ತು ತನಿಖೆಯ ಪ್ರಕಾರ, ಒಂದು ಟ್ರಕ್‌ ಕಾರಿಗೆ ಡಿಕ್ಕಿ ಹೊಡೆದ…

Read More

ಬೆಂಗಳೂರು: KSET-25ರ ಪರಿಷ್ಕೃತ ಕೀ ಉತ್ತರಗಳನ್ನು KEA ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ. ಅಭ್ಯರ್ಥಿಗಳಿಂದ ಬಂದ ಆಕ್ಷೇಪಣೆಗಳನ್ನು ವಿಷಯ ತಜ್ಞರು ಪರಿಶೀಲಿಸಿದ ನಂತರ ಪರಿಷ್ಕೃತ ಕೀ ಉತ್ತರಗಳನ್ನು ಪ್ರಕಟಿಸಲಾಗಿದೆ. ವಿವರಗಳಿಗೆ ವೆಬ್ ಸೈಟ್ http://kea.kar.nic.in ನೋಡಬಹುದು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕರಾದಂತ ಹೆಚ್.ಪ್ರಸನ್ನ  ಮಾಹಿತಿ ನೀಡಿದ್ದಾರೆ. ಈ ಕುರಿತಂತೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು,  ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆಸೆಟ್)-2025 ಅನ್ನು ದಿನಾಂಕ:02.11.2025 ರಂದು ನಡೆಸಲಾಗಿದ್ದು, ಪತ್ರಿಕೆ-1 ಮತ್ತು ಪತ್ರಿಕೆ-2ರ ಒಟ್ಟು 33 ವಿಷಯಗಳಿಗೆ ಕೀ ಉತ್ತರಗಳನ್ನು ಕೆಇಎ ವೆಬ್‌ಸೈಟ್‌ನಲ್ಲಿ ದಿನಾಂಕ:04.11.2025 ಪ್ರಕಟಿಸಿ, ಉತ್ತರಗಳಿಗೆ ಆಕ್ಷೇಪಣೆಗಳಿದ್ದಲ್ಲಿ ದಿನಾಂಕ:06.11.2025ರಂದು ಸಂಜೆ 3.00 ಗಂಟೆಯೊಳಗೆ ಸಲ್ಲಿಸಲು ಕಾಲಾವಕಾಶ ನೀಡಲಾಗಿತ್ತು ಎಂದಿದ್ದಾರೆ. ಅದರಂತೆ, ಈ ಕೆಳಕಂಡ 07 ವಿಷಯಗಳಿಗೆ ಸಂಬಂಧಿಸಿದಂತೆ ಅಭ್ಯರ್ಥಿಗಳಿಂದ ಯಾವುದೇ ಆಕ್ಷೇಪಗಳು ಸ್ವೀಕೃತವಾಗಿಲ್ಲದಿರುವುದರಿಂದ ಇವುಗಳ ಯಾವುದೇ ಉತ್ತರಗಳಲ್ಲಿ ಬದಲಾವಣೆಗಳಿರುವುದಿಲ್ಲ ಎಂಬುದಾಗಿ ಎಂಬುದಾಗಿ ತಿಳಿಸಿದ್ದಾರೆ. ಉಳಿದಂತೆ ಪತ್ರಿಕೆ-1 ಮತ್ತು 26 ವಿಷಯಗಳ ಬಗ್ಗೆ ಅಭ್ಯರ್ಥಿಗಳಿಂದ ಅಕ್ಷೇಪಣೆಗಳು ಸ್ವೀಕೃತವಾಗಿವೆ. ಸ್ವೀಕೃತವಾದ ಎಲ್ಲಾ ಆಕ್ಷೇಪಣೆಗಳನ್ನು…

Read More

ನವದೆಹಲಿ: ಗುರುವಾರ ಭಾರತೀಯ ಶಾಲಾ ಪ್ರಮಾಣಪತ್ರ ಪರೀಕ್ಷಾ ಮಂಡಳಿ (CISCE) 2026 ರ 10 ಮತ್ತು 12 ನೇ ತರಗತಿ ಪರೀಕ್ಷೆಗಳ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ವಿದ್ಯಾರ್ಥಿಗಳು cisce.org ನ ಅಧಿಕೃತ ವೆಬ್‌ಸೈಟ್‌ನಿಂದ ವಿವರವಾದ ದಿನಾಂಕ ಹಾಳೆಗಳನ್ನು ಡೌನ್‌ಲೋಡ್ ಮಾಡಬಹುದು. ಫೆಬ್ರವರಿಯಲ್ಲಿ ಪ್ರಾರಂಭವಾಗುವ ICSE, ISC 2026 ಪರೀಕ್ಷೆಗಳು ವೇಳಾಪಟ್ಟಿಯ ಪ್ರಕಾರ, ISC 12 ನೇ ತರಗತಿ ಪರೀಕ್ಷೆಗಳು ಫೆಬ್ರವರಿ 12, 2026 ರಂದು ಪ್ರಾರಂಭವಾಗಿ ಏಪ್ರಿಲ್ 6, 2026 ರಂದು ಮುಕ್ತಾಯಗೊಳ್ಳಲಿವೆ, ಆದರೆ ICSE 10 ನೇ ತರಗತಿ ಪರೀಕ್ಷೆಗಳು ಫೆಬ್ರವರಿ 17 ರಿಂದ ಮಾರ್ಚ್ 30, 2026 ರವರೆಗೆ ನಿಗದಿಯಾಗಿವೆ. 2025 ರಲ್ಲಿ, ICSE ಪರೀಕ್ಷೆಗಳು ಫೆಬ್ರವರಿ 18 ರಂದು ಪ್ರಾರಂಭವಾದರೆ, ISC ಪರೀಕ್ಷೆಗಳು ಫೆಬ್ರವರಿ 13 ರಂದು ಪ್ರಾರಂಭವಾದವು, ಆದ್ದರಿಂದ ಇದರರ್ಥ 2026 ರ ಅವಧಿಯು ಕೆಲವು ದಿನಗಳ ಮುಂಚಿತವಾಗಿ ಪ್ರಾರಂಭವಾಗುತ್ತದೆ. ದಿನಾಂಕ ಹಾಳೆಗಳು ಎಲ್ಲಾ ಸ್ಟ್ರೀಮ್‌ಗಳಲ್ಲಿ 120 ಕ್ಕೂ ಹೆಚ್ಚು ವಿಷಯಗಳನ್ನು ಒಳಗೊಂಡಿದೆ ICSE ವೇಳಾಪಟ್ಟಿಯು…

Read More

ಶಿವಮೊಗ್ಗ : ನವೆಂಬರ್.15ರಂದು ಸಾಗರದ ನಗರಸಭೆ ಆವರಣದಲ್ಲಿರುವಂತ ಗಾಂಧಿ ಮೈದಾನದಲ್ಲಿ ಬೆಳಗ್ಗೆ 11 ಗಂಟೆಯಿಂದ ರಾತ್ರಿ 8.30ರವರೆಗೆ 2025ನೇ ಸಾಲಿನ ಅವ್ವ ಮಹಾಸಂತೆ ನಡೆಯಲಿದೆ ಎಂಬುದಾಗಿ ಜೀವನ್ಮುಖಿ ಸಂಸ್ಥೆಯ ಪ್ರತಿಭಾ ತಿಳಿಸಿದ್ದಾರೆ. ಬುಧವಾರದಂದು ಸಾಗರದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಜೀವನ್ಮುಖಿ ಮತ್ತು ಚರಕ ವಿವಿಧೋದ್ದೇಶ ಮಹಿಳಾ ಸಂಸ್ಥೆಗಳ ಸಹಕಾರದೊಂದಿಗೆ 3ನೇ ಅವ್ವ ಮಹಾಸಂತೆ ನವೆಂಬರ್.15ರಂದು ಆಯೋಜಿಸಲಾಗಿದೆ. ಈ ಅವ್ವ ಮಹಾಸಂತೆಯನ್ನು ಗ್ರಾಹಕರಾಗಿ ಬನ್ನಿ ಮಹಿಳಾ ಕುಶಲಕರ್ಮಿಗಳನ್ನು ಬೆಂಬಲಿಸಿ ಘೋಷವಾಕ್ಯದಡಿ ನಡೆಸಲಾಗುತ್ತಿದೆ. ಮಹಿಳಾ ಉದ್ಯಮಿ ಸರೋಜಿನಿ ಎಸ್. ನಾಯ್ಕ್ ಅವ್ವ ಸಂತೆಯನ್ನು ಉದ್ಘಾಟಿಸಲಿದ್ದು, ಚರಕ ಸಂಸ್ಥೆಯ ಮಹಾಲಕ್ಷಿ ಅಧ್ಯಕ್ಷತೆ ವಹಿಸಲಿದ್ದು, ನಗರಸಭೆ ಅಧ್ಯಕ್ಷೆ ಮೈತ್ರಿ ಪಾಟೀಲ್, ಪೌರಾಯುಕ್ತ ಎಚ್.ಕೆ.ನಾಗಪ್ಪ ಉಪಸ್ಥಿತರಿರುವರು ಎಂದು ಹೇಳಿದರು. 3ನೇ ಅವ್ವ ಮಹಾಸಂತೆಯನ್ನು ಅತ್ಯಂತ ವಿಶೇಷವಾಗಿ ಆಯೋಜಿಸಲಾಗಿದೆ. ರಾಜ್ಯದ ಬೇರೆಬೇರೆ ಭಾಗಗಳಿಂದ ಕುಶಲಕರ್ಮಿಗಳ ಗೃಹೋತ್ಪನ್ನಗಳು, ಕೈಮಗ್ಗ ವಸ್ತುಗಳು, ಸ್ಥಳೀಯ ಸಾಂಪ್ರದಾಯಿಕ ತಿನಿಸುಗಳು ಸಂತೆಯಲ್ಲಿ ಲಭ್ಯವಿರುತ್ತದೆ. ಚರಕ ಸಂಸ್ಥೆಯ ಕೈಮಗ್ಗ ವಸ್ತುಗಳು, ಇಕ್ರಾ ಸಂಸ್ಥೆಯ…

Read More

ಮೈಸೂರು: ನೈರುತ್ಯ ರೈಲ್ವೆ ವಾರಾಂತ್ಯಗಳಲ್ಲಿ ಪ್ರಯಾಣಿಕರ ಹೆಚ್ಚುವರಿ ಸಂಚಾರವನ್ನು ನಿರ್ವಹಿಸಲು ಹಾಗೂ ಶ್ರೀ ಸತ್ಯ ಸಾಯಿ ಪ್ರಶಾಂತಿ ನಿಲಯಂನಲ್ಲಿ ನಡೆಯಲಿರುವ ಶ್ರೀ ಸತ್ಯ ಸಾಯಿ ಬಾಬಾ ಶತಮಾನೋತ್ಸವ ಆಚರಣೆಯ ಹಿನ್ನೆಲೆಯಲ್ಲಿ, ಕೆ.ಎಸ್.ಆರ್. ಬೆಂಗಳೂರು – ಅಶೋಕಪುರಂ ನಡುವೆ ಟ್ರೈವೀಕ್ಲಿ ಕಾಯ್ದಿರಿಸದ ವಿಶೇಷ ಮೆಮು ರೈಲುಗಳನ್ನು (ರೈಲು ಸಂಖ್ಯೆ 06213/06214) ಸಂಚರಿಸಲು ನಿರ್ಧರಿಸಿದೆ. ಈ ವಿಶೇಷ ರೈಲುಗಳು ಶುಕ್ರವಾರ, ಶನಿವಾರ ಮತ್ತು ಭಾನುವಾರ ದಿನಗಳಲ್ಲಿ ಸಂಚರಿಸಲಿದ್ದು, ಒಟ್ಟು 18 ಟ್ರಿಪ್ ಸಂಚರಿಸಲಿದೆ. ಈ ಸೇವೆಗಳು 2025ರ ನವೆಂಬರ್ 14ರಿಂದ ಡಿಸೆಂಬರ್ 28ರವರೆಗೆ ಮುಂದುವರೆಯಲಿವೆ. ಆದರೆ ನವೆಂಬರ್ 21, 22 ಮತ್ತು 23, 2025 ರಂದು ಈ ರೈಲುಗಳು ಸಂಚರಿಸವುದಿಲ್ಲ. ರೈಲು ಸಂಖ್ಯೆ. 06213 ಕೆ.ಎಸ್.ಆರ್. ಬೆಂಗಳೂರು ನಿಲ್ದಾಣದಿಂದ ಮಧ್ಯಾಹ್ನ 12:15 ಕ್ಕೆ ಹೊರಟು, ಮಧ್ಯಾಹ್ನ 3:40 ಕ್ಕೆ ಅಶೋಕಪುರಂ ತಲುಪಲಿದೆ. ರೈಲು ಸಂಖ್ಯೆ. 06214 ಅಶೋಕಪುರಂನಿಂದ ಸಂಜೆ 4:10 ಕ್ಕೆ ಹೊರಟು, ರಾತ್ರಿ 8:00 ಕ್ಕೆ ಕೆ.ಎಸ್.ಆರ್. ಬೆಂಗಳೂರು ತಲುಪಲಿದೆ. ಈ 8 ಕೋಚ್‌ಗಳ…

Read More

ನವದೆಹಲಿ: ಮುಧೋಳದಲ್ಲಿ ಕಬ್ಬು ತುಂಬಿದ್ದ ಟ್ರ್ಯಾಕ್ಟರುಗಳು ಬೆಂಕಿಗೆ ಆಹುತಿಯಾಗಿರುವ ಘಟನೆಯ ಬಗ್ಗೆ ತೀವ್ರ ಆಘಾತ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು; ರಾಜ್ಯ ಸರಕಾರ ತಕ್ಷಣವೇ ಮಧ್ಯಪ್ರವೇಶಿಸಿ ಬಿಕ್ಕಟ್ಟನ್ನು ತಿಳಿಗೊಳಿಸಬೇಕು. ಕಬ್ಬು ಬೆಳೆಗಾರರ ಸಂಕಷ್ಟ ಮತ್ತೆ ಸೃಷ್ಟಿಯಾಗದಂತೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು ಎಂದು ರಾಜ್ಯ ಸರಕಾರವನ್ನು ಒತ್ತಾಯಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಕಬ್ಬು ಬೆಳೆಗಾರರ ಸಂಕಷ್ಟ ಬಿಗಡಾಯಿಸಿದೆ. ಮುದೋಳದ ಸಕ್ಕರೆ ಕಾರ್ಖಾನೆಯ ಯಾರ್ಡ್‌ʼನಲ್ಲಿ ನಿಂತಿದ್ದ ಕಬ್ಬು ತುಂಬಿದ್ದ ಟ್ರಾಕ್ಟರುಗಳು ಬೆಂಕಿಗೆ ಆಹುತಿ ಆಗಿರುವುದು ನನಗೆ ತೀವ್ರ ದಿಗ್ಭ್ರಮೆ ಉಂಟು ಮಾಡಿದೆ. ಕಾಂಗ್ರೆಸ್ ಸರಕಾರದ ವೈಫಲ್ಯಕ್ಕೆ ಇದು ಸ್ಪಷ್ಟ ನಿದರ್ಶನ ಎಂದು ಟೀಕಿಸಿದರು. ಬೆಳಗಾವಿಯಲ್ಲಿ ರೈತರು ಹೋರಾಟಕ್ಕಿಳಿದಾಗ ಆ ಕ್ಷಣಕ್ಕೇನೋ ಅವರ ಮೂಗಿಗೆ ತುಪ್ಪ ಸವರಿದ ಸರಕಾರವು, ಇಡೀ ಕಬ್ಬು ಬೆಳೆಗಾರರ ಬಿಕ್ಕಟ್ಟನ್ನು ನಿರ್ವಹಿಸುವಲ್ಲಿ ಘೋರ ವೈಫಲ್ಯ ಕಂಡಿತು. ಅದರ ಪರಿಣಾಮವೇ ಮುಧೋಳದಲ್ಲಿ ರೈತರ ತಾಳ್ಮೆಯ ಕಟ್ಟೆಯೊಡೆಯುಂತೆ ಮಾಡಿದೆ ಎಂದು ಸಚಿವರು ದೂರಿದ್ದಾರೆ. ಅಕ್ಕಿ ಮೇಲೆ…

Read More

ಬೆಂಗಳೂರು: ಮಾನವ-ವನ್ಯಪ್ರಾಣಿ ಸಂಘರ್ಷ ತಪ್ಪಿಸಲು ದ್ರೋಣ್ ಕ್ಯಾಮರಾಗಳ ನಿಗಾ ಹೆಚ್ಚಿಸಿ, ಕೃಪಾಕರ ಸೇನಾನಿ-ಸಂಜಯ್ ಗುಬ್ಬಿ ಸೇರಿದಂತೆ ತಜ್ಞರ ಜೊತೆ ಚರ್ಚಿಸಿ ವೈಜ್ಞಾನಿಕ ಮಾರ್ಗಗಳನ್ನು ರೂಪಿಸಿ ಎನ್ನುವ ಸೂಚನೆಗಳನ್ನು ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಗತ್ಯ ಸಿಬ್ಬಂದಿ, ಅನುದಾನ ಸೇರಿ ಸರ್ಕಾರದಿಂದ ಎಲ್ಲಾ ನೆರವು ನೀಡಲಾಗುವುದು ಎಂದು ಭರವಸೆ ನೀಡಿದರು.‌ ವಯಸ್ಸಾದ ಕಾರಣಕ್ಕೆ ಮತ್ತು ಹೊಸ ಯುವ ಹುಲಿಗಳ ದಾಳಿಯಿಂದ ಗಾಯಗೊಂಡ ಹಾಗೂ ಇನ್ನಿತರೆ ಕಾರಣಗಳಿಂದ ಅರಣ್ಯ ಪ್ರದೇಶದಿಂದ ಹೊರಗೆ ಸಂಚರಿಸುತ್ತಿರುವ 15-20 ಹುಲಿಗಳನ್ನು ದ್ರೋಣ್ ಕ್ಯಾಮರಾ ನೆರವಿನಿಂದ ತಕ್ಷಣ ಹಿಡಿಯಲು ಕ್ರಮ ಜರುಗಿಸಿ ಎನ್ನುವ ಸೂಚನೆ ನೀಡಿದರು. ಈಗಾಗಲೇ ಎಂಟು ಕುಮ್ಕಿ ಆನೆಗಳನ್ನು ಕಾರ್ಯಾಚರಣೆಗೆ ಬಳಸಲಾಗುತ್ತಿದ್ದು ಅಗತ್ಯಕ್ಕೆ ತಕ್ಕಂತೆ ಸಿಬ್ಬಂದಿ ಮತ್ತು ಸ್ಕ್ವಾಡ್ ಗಳ ಸಂಖ್ಯೆಯನ್ನು ಸಂಘರ್ಷ ಪೀಡಿತ ಅರಣ್ಯ ಪ್ರದೇಶದಲ್ಲಿ ಬಳಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು. ಈ ಬಗ್ಗೆ ಸಮಗ್ರ ಚರ್ಚೆ ನಡೆಸಿದ ಬಳಿಕ ಮುಖ್ಯಮಂತ್ರಿಗಳು, ಮಾನವ ವನ್ಯ ಜೀವಿ ಸಂಘರ್ಷ ನಿಯಂತ್ರಣಕ್ಕೆ ಈ ಕೆಳಗಿನ ಎಂಟು ಅಂಶದ ಕಾರ್ಯಕ್ರಮಕ್ಕೆ ಅಸ್ತು…

Read More