Subscribe to Updates
Get the latest creative news from FooBar about art, design and business.
Author: kannadanewsnow09
ಚಂಡೀಗಢ: ನಟಿ ಮತ್ತು ಬಿಜೆಪಿ ಸಂಸದೆ ಕಂಗನಾ ರನೌತ್ ಅವರಿಗೆ ಕಪಾಳಮೋಕ್ಷ ಮಾಡಿದ ಆರೋಪದ ಮೇಲೆ ಸಿಐಎಸ್ಎಫ್ ಮಹಿಳಾ ಕಾನ್ಸ್ಟೇಬಲ್ಗೆ ಕೆಲವು ರೈತ ಗುಂಪುಗಳು ಶುಕ್ರವಾರ ಬೆಂಬಲ ವ್ಯಕ್ತಪಡಿಸಿದ್ದು, ಘಟನೆಗೆ ಮುಂಚಿನ ಘಟನೆಗಳ ಸಂಪೂರ್ಣ ಅನುಕ್ರಮದ ಬಗ್ಗೆ ಸಮಗ್ರ ತನಿಖೆಯ ಅಗತ್ಯವನ್ನು ಒತ್ತಿಹೇಳಿವೆ. ಕಾನ್ಸ್ಟೇಬಲ್ ಕುಲ್ವಿಂದರ್ ಕೌರ್ ವಿರುದ್ಧ ಯಾವುದೇ ಅನಗತ್ಯ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ರೈತರು ಜೂನ್ 9 ರಂದು ಮೊಹಾಲಿಯಲ್ಲಿ ಪ್ರತಿಭಟನೆ ನಡೆಸಲಿದ್ದಾರೆ. ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ಮಹಿಳಾ ಕಾನ್ಸ್ಟೇಬಲ್ಗೆ ಬೆಂಬಲ ವ್ಯಕ್ತಪಡಿಸಿದ ಪ್ರಮುಖ ಸಂಘಟನೆಗಳಲ್ಲಿ ಸೇರಿವೆ. ಎಸ್ಕೆಎಂ (ರಾಜಕೀಯೇತರ) ನಾಯಕ ಜಗಜಿತ್ ಸಿಂಗ್ ದಲ್ಲೆವಾಲ್ ಮತ್ತು ಕಿಸಾನ್ ಮಜ್ದೂರ್ ಸಂಘರ್ಷ ಸಮಿತಿಯ ಪ್ರಧಾನ ಕಾರ್ಯದರ್ಶಿ ಸರ್ವನ್ ಸಿಂಗ್ ಪಂಧೇರ್ ಅವರು ಈ ವಿಷಯದ ಬಗ್ಗೆ ಸರಿಯಾದ ತನಿಖೆಗಾಗಿ ಪಂಜಾಬ್ನ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಗೌರವ್ ಯಾದವ್ ಅವರನ್ನು ಭೇಟಿ ಮಾಡುವುದಾಗಿ ಹೇಳಿದರು. “ನಾವು…
ಬೆಂಗಳೂರು: ಸ್ಯಾಂಡಲ್ ವುಡ್ ರ್ಯಾಪ್ ಹಾಡುಗಾರ ಚೆಂದನ್ ಶೆಟ್ಟಿ ಹಾಗೂ ನಿವೇದಿತಾ ಡಿವೋರ್ಸ್ ಗಾಗಿ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯ ವಿಚಾರಣೆಯನ್ನು ನಡೆಸಿದಂತ ಫ್ಯಾಮಿಲಿ ಕೋರ್ಟ್, ವಿಚ್ಚೇದನ ಮಂಜೂರು ಮಾಡಿದೆ. ಇದರ ನಡುವೆ ಸ್ಯಾಂಡಲ್ ವುಡ್ ಸೆಲೆಬ್ರೆಟಿಗಳಿಬ್ಬರ ವಿವಾಹ ವಿಚ್ಚೇಧನದ ಹಿಂದಿನ ಸಿಕ್ರೇಟ್ ರಿವೀಲ್ ಆಗಿದೆ. ಅದೇನು ಅಂತ ಮುಂದೆ ಓದಿ. Rap ಸಾಂಗ್ ಹಾಡುಗಾರ ಚಂದನ್ ಶೆಟ್ಟಿ ಹಾಗೂ ಬಿಗ್ ಬಾಸ್ ಸ್ಪರ್ಧಿ ನಿವೇದಿತಾ ದಾಂಪತ್ಯ ಈಗ ಡಿವೋರ್ಸ್ ಹಂತಕ್ಕೆ ತಲುಪಿದೆ. ದಾಂಪತ್ಯದಲ್ಲಿ ಬಿರುಕು ಕಾಣಿಸಿಕೊಂಡ ಪರಿಣಾಮ ಇದೀಗ ಇಬ್ಬರೂ ಪರಸ್ಪರ ಒಪ್ಪಿಗೆ ಮೇರೆಗೆ ವಿಚ್ಚೇದನ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅಂದಹಾಗೇ ಕನ್ನಡದ ಬಿಗ್ ಬಾಸ್ ಸೀಸನ್-5ರಲ್ಲಿ ಕನ್ನಡ ರ್ಯಾಪ್ ಹಾಡುಗಳ ಮೂಲಕ ಮನೆ ಮಾತಾಗಿದ್ದಂತ ಚಂದನ್ ಶೆಟ್ಟಿ ಸ್ಪರ್ಧಿಯಾಗಿ ಭಾಗಿಯಾಗಿದ್ದರು. ಇದೇ ಬಿಗ್ ಬಾಸ್ ನಲ್ಲಿ ನಿವೇದಿತಾ ಕೂಡ ಪಾಲ್ಗೊಂಡಿದ್ದರು. ಇವರಿಬ್ಬರು ಆ ಸ್ಪರ್ಧೆಯಲ್ಲೇ ಪ್ರೀತಿಸೋದಕ್ಕೆ ಶುರು ಮಾಡಿದ್ದರು. ಬಿಗ್ ಬಾಸ್ ನಂತ್ರ ಮೈಸೂರಿನ ಯುವ ದಸರಾ…
ಬೆಂಗಳೂರು: ರ್ಯಾಪ್ ಹಾಡುಗಾರ ಚೆಂದನ್ ಶೆಟ್ಟಿ ಹಾಗೂ ಬಿಗ್ ಬಾಸ್ ಸ್ಪರ್ಧಿ ನಿವೇದಿತಾ ದಾಂಪತ್ಯದಲ್ಲಿ ಬಿರುಕು ಬಿಟ್ಟಿದೆ. ಹೀಗಾಗಿಯೇ ಬೆಂಗಳೂರಿನ ಶಾಂತಿನಗರದಲ್ಲಿರುವಂತ ಕೌಟುಂಬಿಕ ನ್ಯಾಯಲಯಕ್ಕೆ ವಿಚ್ಚೇದನಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಜೂನ್.6ರ ನಿನ್ನೆ ಸಲ್ಲಿಸಿದ್ದಂತ ವಿಚ್ಚೇದನ ಅರ್ಜಿಯ ವಿಚಾರಣೆಯನ್ನು ಇಂದು ವಿಚಾರಣೆ ನಡೆಸಿತು. ಬಳಿಕ ಚೆಂದನ್ ಶೆಟ್ಟಿ ಹಾಗೂ ನಿವೇದಿತಾ ವಿವಾಹ ವಿಚ್ಚೇದನಕ್ಕೆ ಕೋರ್ಟ್ ಅನುಮತಿ ನೀಡಿದೆ. ಹೀಗಾಗಿ 4 ವರ್ಷದ ಚೆಂದನ್ ಶೆಟ್ಟಿ-ನಿವೇದಿತಾ ದಾಂಪತ್ಯ ಜೀವನ ಅಂತ್ಯಗೊಂಡಂತೆ ಆಗಿದೆ. ಜೂನ್.6ರ ನಿನ್ನಯಂದು ಚೆಂದನ್ ಶೆಟ್ಟಿ ಹಾಗೂ ನಿವೇದಿತಾ ವಿವಾಹ ವಿಚ್ಚೇದನಕ್ಕಾಗಿ ಕೌಟುಂಬಿಕ ನ್ಯಾಯಲಯಕ್ಕೆ ಸ್ವ ಇಚ್ಚೆಯಿಂದ ಪರಸ್ಪರ ಒಪ್ಪಿ ಇಬ್ಬರೂ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಶಾಂತಿನಗರದ ಫ್ಯಾಮಿಲಿ ನ್ಯಾಯಾಲಯದ ನ್ಯಾಯಮೂರ್ತಿಗಳು ನಡೆಸಿದರು. ಇಂದಿನ ವಿಚಾರಣೆಗಾಗಿ ಚೆಂದನ್ ಶೆಟ್ಟಿ ಹಾಗೂ ನಿವೇದಿತಾ ಖುದ್ದು ಕೋರ್ಟ್ ಗೆ ಹಾಜರಾಗಿದ್ದರು. ಇಬ್ಬರು ಪರಸ್ಪರ ನಗು ನಗುತ್ತಲೇ ಕೋರ್ಟ್ ಗೆ ಹಾಜರಾಗಿದ್ದರು. ಬೆಂಗಳೂರಿನ ಶಾಂತಿನಗರದಲ್ಲಿರುವಂತ 2ನೇ ಹೆಚ್ಚುವರಿ ಕೌಟುಂಬಿಕ ನ್ಯಾಯಾಲಯಕ್ಕೆ ಹಾಜರಾದ ನಂತ್ರ, ನ್ಯಾಯಾಲಯವು ವಿವಾಹ…
ಬೆಂಗಳೂರು: ರಾಹುಲ್ ಗಾಂಧಿ ಅವರು ನ್ಯಾಯಾಲಯ ಹಾಗೂ ಕಾನೂನಿಗೆ ಗೌರವ ಕೊಟ್ಟು ವಿಚಾರಣೆಗೆ ಹಾಜರಾಗಿದ್ದಾರೆ. ಬಿಜೆಪಿ ನಾಯಕರಾದ ಯತ್ನಾಳ್ ಅವರೇ ಸಿಎಂ ಹುದ್ದೆಗೆ 2,500 ಕೋಟಿ ಹಾಗೂ ಮಾಧ್ಯಮಗಳಲ್ಲಿ ಬಂದಿದ್ದ ವರದಿ ಅನುಸಾರ ಸರ್ಕಾರಿ ಹುದ್ದೆಗೆ ಹಿಂದಿನ ಸರ್ಕಾರದ ರೇಟ್ ಕಾರ್ಡ್ ಅನ್ನು ಜಾಹೀರಾತು ರೂಪದಲ್ಲಿ ಕೊಟ್ಟಿದ್ದೆವು. ಈ ವಿಚಾರದಲ್ಲಿ ರಾಹುಲ್ ಗಾಂಧಿ ಅವರಿಗೂ ಈ ಪ್ರಕರಣಕ್ಕೂ ಸಂಬಂಧವೇ ಇಲ್ಲ. ಆದರೂ ಉದ್ದೇಶಪೂರ್ವಕವಾಗಿ ಅವರನ್ನು ಎಳೆದುತರಲಾಗಿದೆ ಎಂಬುದಾಗಿ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಬಿಜೆಪಿಯವರಲ್ಲಿ ದ್ವೇಷ ಹಾಗೂ ಸೇಡು ತುಂಬಿ ತುಳುಕುತ್ತಿದೆ. ಹೀಗಾಗಿ ಸುಳ್ಳು ಪ್ರಕರಣ ದಾಖಲಿಸಿದ್ದು, ಅದಕ್ಕೆ ಈ ಪ್ರಕರಣವೇ ಉದಾಹರಣೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಅವರು ಆಗಮಿಸಿ ನ್ಯಾಯಾಲಯದ ಮುಂದೆ ಹಾಜರಾಗಿದ್ದಾರೆ. ಡಿ.ಕೆ. ಸುರೇಶ್ ಅವರು ಜಾಮೀನು ನೀಡಿದ್ದಾರೆ. ಕಾರ್ಯಕರ್ತರು ಹಾಗೂ ಅಭಿಮಾನಿಗಳು ಬಂದು ಬೆಂಬಲ ನೀಡಿದ್ದಾರೆ. ಅವರೆಲ್ಲರಿಗೂ ಧನ್ಯವಾದ ತಿಳಿಸಿದರು. ಪರಿಷತ್ ಚುನಾವಣೆಯಲ್ಲಿ 3 ಕ್ಷೇತ್ರ ಗೆಲುವು ಆರು…
ಬೆಂಗಳೂರು: “ನೂತನ ಸಂಸದರು ಜನರ ಧ್ವನಿಯಾಗಿ ಕರ್ನಾಟಕ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ, ಮಲತಾಯಿ ಧೋರಣೆ ವಿರುದ್ಧ ಧ್ವನಿ ಎತ್ತಬೇಕು. ಯಾರೆಲ್ಲ ಕಾಂಗ್ರೆಸ್ ಗೆ ಮತ ಹಾಕದವರ ಮನ ಗೆಲ್ಲಬೇಕು ಎಂದು ರಾಹುಲ್ ಗಾಂಧಿ ಅವರು ಸಲಹೆ ನೀಡಿದರು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ರಾಹುಲ್ ಗಾಂಧಿ ಅವರ ಭೇಟಿ ಬಳಿಕ ಶಾಂಗ್ರಿಲಾ ಹೊಟೇಲ್ ನಲ್ಲಿ ಶಿವಕುಮಾರ್ ಅವರು ಶುಕ್ರವಾರ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಅವರು ಹೇಳಿದ್ದಿಷ್ಟು; “ರಾಹುಲ್ ಗಾಂಧಿ ಅವರು ಕರ್ನಾಟಕದ 28 ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಗಳ ಜತೆ ಚರ್ಚೆ ಮಾಡಿದರು. ಲೋಕಸಭೆಗೆ ಆಯ್ಕೆಯಾದ 9 ಸಂಸದರಿಗೆ ಅಭಿನಂದನೆ ಸಲ್ಲಿಸಿ ಯಾವ ರೀತಿ ಕಾರ್ಯನಿರ್ವಹಿಸಬೇಕು ಎಂದು ಕಿವಿಮಾತು ಹೇಳಿದರು. ಮೊದಲ ಬಾರಿಗೆ ಗೆದ್ದವರು ಕ್ಷೇತ್ರದಿಂದ ದೂರ ಉಳಿಯಬಾರದು. ಬೆಂಗಳೂರು ಹಾಗೂ ದೆಹಲಿಗಿಂತ ಹೆಚ್ಚಾಗಿ ಕ್ಷೇತ್ರದ ಜನರ ಸಂಪರ್ಕದಲ್ಲಿ ಇರಬೇಕು. ನಮ್ಮದೇ ಸರ್ಕಾರ ರಾಜ್ಯದಲ್ಲಿದ್ದು, ಅದರ ನೆರವು ಪಡೆದು ಜನರ ಪರವಾಗಿ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.…
ಬೆಂಗಳೂರು: ಪ್ರಧಾನಿ ಮೋದಿಯವರ ಸರ್ಕಾರ ರಚನೆ ಮತ್ತು ಸಂಸದರ ಖರೀದಿಯ ಕಸರತ್ತು ಮುಗಿದಿದ್ದರೆ ನೊಂದ ನೀಟ್ ಪರೀಕ್ಷಾರ್ಥಿಗಳ ಅಹವಾಲು ಆಲಿಸಲಿ. ನೀಟ್ ಪರೀಕ್ಷಾ ಅಕ್ರಮದ ಬಗ್ಗೆ ತನಿಖೆ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಒತ್ತಾಯಿಸಿದ್ದಾರೆ. ಈ ಕುರಿತಂತೆ ಇಂದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ನೀಟ್ ಫಲಿತಾಂಶದಲ್ಲಿ ಭಾರಿ ಅಕ್ರಮದ ನಡೆದಿರಬಹುದಾದ ಶಂಕೆ ದೇಶಾದ್ಯಂತ ವ್ಯಕ್ತವಾಗುತ್ತಿದ್ದು, ಪರೀಕ್ಷೆ ಬರೆದಿರುವ 24 ಲಕ್ಷ ಯುವಜನರು, ಅವರ ಪೋಷಕರಲ್ಲಿ ಮೂಡಿರುವ ಆತಂಕಕ್ಕೆ, ಪರೀಕ್ಷೆಯ ವಿಶ್ವಾಸಾರ್ಹತೆ ಬಗ್ಗೆ ಎದ್ದಿರುವ ಪ್ರಶ್ನೆಗಳಿಗೆ ಎನ್ಟಿಎ ಆಗಲಿ, ಕೇಂದ್ರದ ನರೇಂದ್ರ ಮೋದಿಯವರ ಸರ್ಕಾರವಾಗಲೀ ಉತ್ತರಿಸದೆ ಲಕ್ಷಾಂತರ ಯುವಜನರ ಭವಿಷ್ಯವನ್ನು ಮಣ್ಣುಪಾಲು ಮಾಡಲು ಹೊರಟಿದೆ. NEET (ನೀಟ್) ಪರೀಕ್ಷೆಯಲ್ಲಿ 67 ಅಭ್ಯರ್ಥಿಗಳಿಗೆ 720ಕ್ಕೆ 720 ಅಂಕಗಳು ಬಂದಿವೆ. ಅಂದರೆ 100% ಅಂಕಗಳು ಬಂದಿದೆ. ಆದರೆ ಈ ಹಿಂದೆ ಬಂದ ಟಾಪರ್ಗಳ ಸಂಖ್ಯೆ ಎಷ್ಟು? ಎಂಬುದನ್ನು ಹೋಲಿಕೆ ಮಾಡಿ ನೋಡಿದರೆ ಈ ಬಾರಿಯ ಫಲಿತಾಂಶದಲ್ಲಿ ಅಕ್ರಮದ ವಾಸನೆ ಬಡಿಯುತ್ತದೆ. 2019ರಲ್ಲಿ ಒಬ್ಬ ವಿದ್ಯಾರ್ಥಿ, 2020ರಲ್ಲಿ ಒಬ್ಬ,…
ಶಿವಮೊಗ್ಗ : ಮೆಸ್ಕಾಂನಿಂದ ವಿದ್ಯುತ್ ನಿರ್ವಹಣಾ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನಲೆಯಲ್ಲಿ ಜೂನ್.10ರಂದು ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಎಂ.ಆರ್ ಎಸ್ ವ್ಯಾಪ್ತಿಯ ಗ್ರಾಮಾಂತರದ ಗ್ರಾಮಗಳಲ್ಲಿ ಶಿವಮೊಗ್ಗದ 110 ಕೆವಿ ವಿ.ವಿ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಇರುವುದರಿಂದ ಜೂನ್ 10 ರಂದು ಬೆಳಗ್ಗೆ 09.00 ರಿಂದ ಸಂಜೆ 5.00ರವರೆಗೆ ಕರೆಂಟ್ ಇರೋದಿಲ್ಲ. ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಚಿಕ್ಕಲ್ಲು, ಗುರುಪುರ, ಪರುಲೆ, ಸಿದ್ದೇಶ್ವರನಗರ, ಶಾಂತಮ್ಮ ಲೇಔಟ್, ವೆಂಕಟೇಶನಗರ, ವಿದ್ಯಾನಗರ, ಗಣಪತಿ ಲೇಔಟ್, ಕಂಟ್ರಿಕ್ಲಬ್ ರಸ್ತೆ, ಎಂ.ಆರ್.ಎಸ್. ವಾಟರ್ ಸಪ್ಲೈ, ಎಂ.ಆರ್.ಎಸ್. ಕಾಲೋನಿ, ಹರಿಗೆ, ಮಲವಗೊಪ್ಪ, ವಡ್ಡಿನಕೊಪ್ಪ, ನಂಜಪ್ಪ ಲೇಔಟ್, ಪ್ರಿಯಾಂಕ ಲೇಔಟ್, ಬಿ.ಹೆಚ್.ರಸ್ತೆ (ಗಾಯತ್ರಿ ಕಲ್ಯಾಣ ಮಂಟಪದಿಂದ ಅಮೀರ್ ಅಹ್ಮದ್ ಸರ್ಕಲ್ವರೆಗೆ), ನೆಹರು ರಸ್ತೆ, ದುರ್ಗಿಗುಡಿ ಮುಖ್ಯರಸ್ತೆ, ಪಾರ್ಕ್ ಬಡಾವಣೆ, ಸರ್.ಎಂ.ವಿ.ರಸ್ತೆ, ಬಾಲ್ರಾಜ್ಅರಸ್ ರಸ್ತೆ, ಗಾಂದಿಪಾರ್ಕ್, ಲೂರ್ದು ನಗರ, ಕಾನ್ವೆಂಟ್ ರಸ್ತೆ, ಬಾಪೂಜಿನಗರ, ಚರ್ಚ್ ಕಾಂಪೌಂಡ್ ನಲ್ಲಿ ಕರೆಂಟ್ ಇರಲ್ಲ. ಟಿ.ಜಿ.ಎನ್.ಬಡಾವಣೆ, ಜೋಸೆಫ್ನಗರ, ಟ್ಯಾಂಕ್ಬೌಂಡ್ ರಸ್ತೆ, ಕುವೆಂಪು ರಂಗಮಂದಿರ ಮತ್ತು…
ಬೆಂಗಳೂರು: ಬಿಗ್ ಬಾಸ್ ಕನ್ನಡ ಸ್ಪರ್ಧೆಯಲ್ಲಿ ಪಾಲ್ಗೊಂಡು, ಅಲ್ಲಿಯೇ ಪರಿಚಯವಾಗಿದ್ದಂತ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಜೋಡಿ, ದಾಂಪತ್ಯಕ್ಕೆ ಕಾಲಿಟ್ಟಿತ್ತು. ಇದೀಗ ಕೆಲವೇ ವರ್ಷಗಳಲ್ಲೇ ಚಂದನ್ ಶೆಟ್ಟಿ-ನಿವೇದಿತಾ ದಾಂಪತ್ಯದಲ್ಲಿ ಬಿರುಕು ಬಿಟ್ಟಿದೆ. ಹೀಗಾಗಿ ವಿಚ್ಥೇದನಕ್ಕೆ ಇಬ್ಬರು ಸೆಲೆಬ್ರೆಟಿಗಳು ಅರ್ಜಿ ಸಲ್ಲಿಸಿರೋದಾಗಿ ತಿಳಿದು ಬಂದಿದೆ. Rap ಸಾಂಗ್ ಹಾಡುಗಾರ ಚಂದನ್ ಶೆಟ್ಟಿ ಹಾಗೂ ಬಿಗ್ ಬಾಸ್ ಸ್ಪರ್ಧಿ ನಿವೇದಿತಾ ದಾಂಪತ್ಯ ಈಗ ಡಿವೋರ್ಸ್ ಹಂತಕ್ಕೆ ತಲುಪಿದೆ. ದಾಂಪತ್ಯದಲ್ಲಿ ಬಿರುಕು ಕಾಣಿಸಿಕೊಂಡ ಪರಿಣಾಮ ಇದೀಗ ಇಬ್ಬರೂ ಪರಸ್ಪರ ಒಪ್ಪಿಗೆ ಮೇರೆಗೆ ವಿಚ್ಚೇದನ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಅಂದಹಾಗೇ ಕನ್ನಡದ ಬಿಗ್ ಬಾಸ್ ಸೀಸನ್-5ರಲ್ಲಿ ಕನ್ನಡ ರ್ಯಾಪ್ ಹಾಡುಗಳ ಮೂಲಕ ಮನೆ ಮಾತಾಗಿದ್ದಂತ ಚಂದನ್ ಶೆಟ್ಟಿ ಸ್ಪರ್ಧಿಯಾಗಿ ಭಾಗಿಯಾಗಿದ್ದರು. ಇದೇ ಬಿಗ್ ಬಾಸ್ ನಲ್ಲಿ ನಿವೇದಿತಾ ಕೂಡ ಪಾಲ್ಗೊಂಡಿದ್ದರು. ಇವರಿಬ್ಬರು ಆ ಸ್ಪರ್ಧೆಯಲ್ಲೇ ಪ್ರೀತಿಸೋದಕ್ಕೆ ಶುರು ಮಾಡಿದ್ದರು. ಬಿಗ್ ಬಾಸ್ ನಂತ್ರ ಮೈಸೂರಿನ ಯುವ ದಸರಾ ಕಾರ್ಯಕ್ರಮದ ವೇದಿಕೆಯಲ್ಲೇ ಚಂದನ್ ಶೆಟ್ಟಿ, ನಿವೇದಿತಾಗೆ ಪ್ರಪೋಸ್…
ಚಿತ್ರದುರ್ಗ: ರಾಜ್ಯದಲ್ಲಿ ಮಕ್ಕಳ ಪೋಷಕರೇ ಬೆಚ್ಚಿ ಬೀಳಿಸುವಂತ ಘಟನೆಯೊಂದು ನಡೆದಿದೆ. ಅದೇ ಬಾಲಕಿಯೊಬ್ಬಳನ್ನು ಚಾಕೋಲೇಟ್ ಕೊಡಿಸೋದಾಗಿ ಆಮಿಷ ಒಡ್ಡಿ, ಕರೆದೊಯ್ದ ವ್ಯಕ್ತಿಯೊಬ್ಬ, ಕತ್ತುಕೊಯ್ದು ಹತ್ಯೆಗೆ ಯತ್ನಿಸಿದ್ದಾನೆ. ಅದು ಎಲ್ಲಿ ಅಂತ ಮುಂದೆ ಓದಿ. ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಮಲ್ಲಸಿಂಗನಹಳ್ಳಿಯಲ್ಲಿ ಮನೆಯ ಮುಂದೆ ಆಟವಾಡುತ್ತಿದ್ದಂತ ಬಾಲಕಿಗೆ ಅದೇ ಗ್ರಾಮದ ಹನುಮಂತಪ್ಪ ಎಂಬಾತ ಚಾಕೋಲೇಟ್ ಆಸೆಯನ್ನು ತೋರಿಸಿದ್ದಾರೆ. ಹನುಮಂತಪ್ಪ ತೋರಿಸಿದಂತ ಚಾಕೋಲೇಟ್ ಆಸೆಗಾಗಿ, ಬಾಲಕಿ ಹೇಗೂ ತಮ್ಮೂರಿನವೇ ಅಲ್ವ ಅತಂ ಆತನೊಂದಿಗೆ ತೆರಳಿದ್ದಾಳೆ. ಆತ ಬಾಲಕಿಯನ್ನು ಊರಿನ ಸಮೀಪದ ಜಮೀನಿಗೆ ಕರೆದುಕೊಂಡು ಹೋಗಿ, ಕತ್ತು ಕೊಯ್ದಿದ್ದಾನೆ. ಹನುಮಂತಪ್ಪ ಬಾಲಕಿಯನ್ನು ಕತ್ತುಕೊಯ್ಯುತ್ತಿದ್ದಂತೆ, ಕಿರುಚಾಡಿದ್ದಾಳೆ. ಇದನ್ನು ಕೇಳಿದಂತ ಅಕ್ಕಪಕ್ಕದ ಜಮೀನಿನಲ್ಲಿ ಇದ್ದಂತ ಜನರು ಓಡಿ ಬಂದಿದ್ದಾರೆ. ಇದನ್ನು ಕಂಡು ಹನುಮಂತಪ್ಪ ಸ್ಥಳದಿಂದ ಕಾಲು ಕಿತ್ತಿದ್ದಾನೆ. ಕತ್ತುಕೊಯ್ದಿದ್ದರಿಂದ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಂತ ಬಾಲಕಿಯನ್ನು ಸ್ಥಳೀಯರು ಸಮೀಪದ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದಾರೆ. ಸೂಕ್ತ ಸಮಯದಲ್ಲಿ ಆಸ್ಪತ್ರೆಗೆ ದಾಖಲಿಸಿದ ಕಾರಣ ಬಾಲಕಿ ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಈ ಸಂಬಂಧ ಹೊಳಲ್ಕೆರೆ ಪೊಲೀಸ್…
ಕೇರಳ: ಕೇರಳ ಹೈಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ಉಳ್ಳಾಲ್ ಲಕ್ಷ್ಮೀನಾರಾಯಣ ಭಟ್ (82) ಅವರು ಗುರುವಾರ ನಿಧನರಾದರು. ಅವರಿಗೆ 91 ವರ್ಷ ವಯಸ್ಸಾಗಿತ್ತು. 1954ರಲ್ಲಿ ಮದ್ರಾಸ್ ಕಾನೂನು ಪದವಿ ಪಡೆದ ಭಟ್, 1955ರಲ್ಲಿ ಮದ್ರಾಸ್ ಹೈಕೋರ್ಟ್ ನಲ್ಲಿ ವಕೀಲಿ ವೃತ್ತಿ ಆರಂಭಿಸಿದರು. ಅವರು 1970ರಲ್ಲಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾಗಿ ನೇಮಕಗೊಂಡರು ಮತ್ತು 1980ರವರೆಗೆ ಸೇವೆ ಸಲ್ಲಿಸಿದರು. 1980 ರಲ್ಲಿ ಕೇರಳ ಹೈಕೋರ್ಟ್ನ ನ್ಯಾಯಾಧೀಶರಾಗಿ ನೇಮಕಗೊಂಡ ಅವರು ನಂತರ 1991 ರಲ್ಲಿ ಹೈಕೋರ್ಟ್ನ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿದರು. 1995ರ ಅಕ್ಟೋಬರ್ನಲ್ಲಿ ನಿವೃತ್ತರಾಗುವ ಮೊದಲು ಭಟ್ ಅವರು ಗುವಾಹಟಿ ಹೈಕೋರ್ಟ್ ಮತ್ತು ಮಧ್ಯಪ್ರದೇಶ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿದರು. ನಿವೃತ್ತರಾದ ನಂತರ, ನ್ಯಾಯಮೂರ್ತಿ ಭಟ್ ಅವರನ್ನು ನವದೆಹಲಿಯ ಕಸ್ಟಮ್ಸ್ ಅಬಕಾರಿ ಮತ್ತು ಚಿನ್ನದ ನಿಯಂತ್ರಣ ಮೇಲ್ಮನವಿ ನ್ಯಾಯಮಂಡಳಿಯ (ಸಿಇಜಿಎಟಿ) ಅಧ್ಯಕ್ಷರಾಗಿ ನೇಮಿಸಲಾಯಿತು, ಅಲ್ಲಿ ಅವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದರು. ಅವರನ್ನು ಸುಪ್ರೀಂ ಕೋರ್ಟ್ ಹಿರಿಯ ವಕೀಲರಾಗಿ…