Subscribe to Updates
Get the latest creative news from FooBar about art, design and business.
Author: kannadanewsnow09
ಶಿವಮೊಗ್ಗ: ಶಿಕ್ಷಕರ ದಿನಾಚರಣೆಯಂದು ನೀಡಲಾಗುವಂತ ರಾಜ್ಯ ಮಟ್ಟದ ಅತ್ಯುತ್ತಮ ಉಪನ್ಯಾಸಕ ಪ್ರಶಸ್ತಿಗೆ ಸಾಗರದ ಜೂನಿಯರ್ ಕಾಲೇಜಿನ ಕನ್ನಡ ಉಪನ್ಯಾಸಕ ಸರ್ಫರಾಜ್ ಚಂದ್ರಗುತ್ತಿಗೆ ಸಂದಿತ್ತು. ಇಂತಹ ಅವರ ನಿವಾಸಕ್ಕೆ ತೆರಳಿದಂತ ಕಾಂಗ್ರೆಸ್ ಮುಖಂಡರಾದಂತ ಮಾಜಿ ತಾಲ್ಲೂಕು ಪಂಚಾಯ್ತಿ ಸದಸ್ಯ ಸೋಮಶೇಖರ್ ಲ್ಯಾವಿಗೆರೆ ಸೇರಿದಂತೆ ಇತರರು ಸನ್ಮಾನಿಸಿ, ಅಭಿನಂದಿಸಿದರು. ಸೆಪ್ಟೆಂಬರ್.5ರಂದು ಶಿಕ್ಷಕರ ದಿನಾಚರಣೆಯ ಪ್ರಯುಕ್ತ ರಾಜ್ಯ ಸರ್ಕಾರವು 2025-26ನೇ ಸಾಲಿನ ಅತ್ಯುತ್ತಮ ಉಪನ್ಯಾಸಕ ರಾಜ್ಯ ಪ್ರಶಸ್ತಿಯನ್ನು ಸಾಗರದ ಜ್ಯೂನಿಯರ್ ಕಾಲೇಜಿನ ಕನ್ನಡ ಉಪನ್ಯಾಸಕರಾದ ಗುಡ್ಡೆಕೌತಿ ಟೀಚರ್ಸ್ ಕಾಲೋನಿ ನಿವಾಸಿಯಾದ ಸರ್ಫ಼ರಾಜ್ ಚಂದ್ರಗುತ್ತಿಯವರನ್ನು ಆಯ್ಕೆ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಇಂದು ಅವರ ನಿವಾಸಕ್ಕೆ ತೆರಳಿದಂತ ಮಾಜಿ ತಾಲ್ಲೂಕು ಪ೦ಚಾಯ್ತಿ ಸದಸ್ಯರಾದ ಸೋಮಶೇಖರ್ ಲ್ಯಾವಿಗೆರೆ, ನಾಡಕಲಸಿ ಗ್ರಾ.ಪ೦ ಸದಸ್ಯರಾದ ಮಹಾಬಲೇಶ್ ಕೌತಿ, ನಗರ ಕಾಂಗ್ರೆಸ್ ಪ್ರಧಾನಕಾರ್ಯದರ್ಶಿ ದಿನೇಶ್.ಡಿ. ಮುಖಂಡರುಗಳಾದ ಗಿರೀಶ್ ಕೋವಿ, ಗುರು ಶಿರವಾಳ, ಹರೀಶ್ ಶಿರವಾಳ ಸದಸ್ಯರು ಗ್ರಾ.ಪ೦. ಭೀಮನೇರಿ, ಶಿಕ್ಷಕರಾದ ಶೇಖರಪ್ಪ, ಜಬಿಉಲ್ಲಾ ಖಾನ್, ಬಸವರಾಜಪ್ಪ, ಗಣೇಶ್, ಮಹೇಂದ್ರ ಹಾಗೂ ಇತರರು ಸನ್ಮಾನಿಸಿ ಅಭಿನಂದಿಸಿದರು. https://kannadanewsnow.com/kannada/children-splashed-over-the-ganapati-procession-in-the-sea-video-goes-viral-parents-apologize/…
ಶಿವಮೊಗ್ಗ: ಸಾಗರ ನಗರದಲ್ಲಿ ಜನ್ನತ್ ಗಲ್ಲಿ ಗಣಪತಿ ಮೂರ್ತಿ ವಿಸರ್ಜನಾ ಮೆರವಣಿಗೆಯ ಸಂದರ್ಭದಲ್ಲಿ ಬಾಲಕರಿಬ್ಬರು ಉಗಿದಂತ ವೀಡಿಯೋ ವೈರಲ್ ಆಗಿದೆ. ಈ ವೀಡಿಯೋ ವೈರಲ್ ಆದ ಬೆನ್ನಲ್ಲೇ ಚಿಕ್ಕ ಮಕ್ಕಳು ತಿಳಿಯದೇ ಹೀಗೆ ಮಾಡಿದ್ದಾರೆ. ಅವರ ಪರವಾಗಿ ನಾವು ಕ್ಷಮೆಯನ್ನು ಯಾಚಿಸುತ್ತೇವೆ ಅಂತ ಪೋಷಕರು ಕ್ಷಮೆಯಾಚಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದಲ್ಲಿ ಇಂದು ಜನ್ನತ್ ಗಲ್ಲಿಯ ಗಣಪತಿ ಮೂರ್ತಿಯನ್ನು ರಾಜಬೀದಿಯಲ್ಲಿ ಉತ್ಸವದ ಮೂಲದ ವಿಸರ್ಜನೆಗೆ ಮೆರವಣಿಗೆಯಲ್ಲಿ ಕೊಂಡೊಯ್ಯಲಾಗಿತ್ತು. ಗಣಪತಿಯನ್ನು ಮೆರವಣಿಗೆಯಲ್ಲಿ ಕೊಂಡೊಯ್ಯುತ್ತಿದ್ದಂತ ಸಂದರ್ಭದಲ್ಲಿ ಅನ್ಯ ಕೋಮಿನ ಬಾಲಕರಿಬ್ಬರು ಮನೆಯ ಮೇಲಿನಿಂದ ಉಗಿಯುತ್ತಿರುವಂತ ವೀಡಿಯೋ ವೈರಲ್ ಆಗಿದೆ. ಈ ವೀಡಿಯೋ ವೈರಲ್ ಆಗುತ್ತಿದ್ದಂತೆ ಹಿಂದೂ ಪರ ಸಂಘಟನೆಗಳಿಂದ ಸ್ಥಳದಲ್ಲಿಯೇ ಪ್ರತಿಭಟನೆಯನ್ನು ನಡೆಸಲಾಯಿತು. ಗಣೇಶ ಮೂರ್ತಿಗೆ ಅಪಮಾನ ಮಾಡಿದವರ ವಿರುದ್ಧ ಕಾನೂನು ಕ್ರಮಕ್ಕೂ ಒತ್ತಾಯಿಸಲಾಯಿತು. ಪರಿಸ್ಥಿತಿಯ ಗಂಭೀರತೆಯನ್ನು ಅರಿತಂತ ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಅವರು, ವೈರಲ್ ಆಗಿರುವಂತ ವೀಡಿಯೋದಲ್ಲಿ ಇಬ್ಬರು ಬಾಲಕರಲ್ಲಿ ಓರ್ವ ಮೆರವಣಿಗೆಯ ಮೇಲೆ ಉಗಿದಿರುವುದು ಕಂಡು ಬಂದಿದೆ.…
ಶಿವಮೊಗ್ಗ: ಜಿಲ್ಲೆಯ ಸಾಗರದಲ್ಲಿ ಮೆರವಣಿಗೆ ಸಂದರ್ಭದಲ್ಲಿ ಗಣೇಶ ಮೂರ್ತಿಗೆ ಬಾಲಕರು ಅಪಮಾನ ಮಾಡಿರುವಂತ ಘಟನೆ ನಡೆದಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಕೈಗೊಳ್ಳುವುದಾಗಿ ಎಸ್ಪಿ ಮಿಥುನ್ ತಿಳಿಸಿದ್ದಾರೆ. ಈ ಕುರಿತಂತೆ ಸಾಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಅವರು, ಸಾಗರದಲ್ಲಿ ಗಣೇಶ ಮೂರ್ತಿ ಮೆರವಣಿಗೆ ವೇಳೆ ಬಾಲಕರು ಅಪಮಾನ ಮಾಡಿದ್ದಾಗಿ ತಿಳಿದು ಬಂದಿದೆ. ಈ ಘಟನೆ ಕುರಿತು ತಾಯಿ ಹಾಗೂ ಇಬ್ಬರು ಮಕ್ಕಳನ್ನು ವಿಚಾರಣೆ ನಡೆಸಲಾಗಿದೆ ಎಂದರು. ಈಗಾಗಲೇ ಘಟನೆ ಸಂಬಂಧ ಹಿಂದೂಪರ ಸಂಘಟನೆಗಳ ಮುಖಂಡರ ಜೊತೆಗೂ ಮಾತುಕತೆ ನಡೆಸಲಾಗಿದೆ. ಈ ಘಟನೆಯ ಬಗ್ಗೆ ಹಿಂದೂ ಸಂಘಟನೆಯ ಮುಖಂಡರಿಗೂ ಮನವರಿಕೆ ಮಾಡಿಕೊಡಲಾಗಿದೆ ಎಂದರು. https://kannadanewsnow.com/kannada/shocking-11-year-old-girl-gives-birth-to-a-child-after-being-repeatedly-raped-by-a-married-man/ https://kannadanewsnow.com/kannada/from-september-22-a-social-and-educational-survey-will-be-initiated-in-the-state-providing-this-information-is-mandatory/
ಕೆಲವರು ಮಾಟ, ಮಂತ್ರ, ವಶೀಕರಣವನ್ನು ನಂಬೋದಿಲ್ಲ,ಇವತ್ತಿಗೂ ಪ್ರಪಂಚದ ಎಲ್ಲಾ ಭಾಗಗಳಲ್ಲಿ ವಾಮಾಚಾರದ ಬಗ್ಗೆ ಜನರಲ್ಲಿ ಭಯವಿದೆ,ಆದರೆ ಇನ್ನೂ ಕೆಲವರು ಇವುಗಳಲ್ಲಿ ನಂಬಿಕೆ ಇಟ್ಟಿರುತ್ತಾರೆ. ಎಲ್ಲವೂ ಅವರವರ ನಂಬಿಕೆಗೆ ಬಿಟ್ಟಿದ್ದುಮನೆ ಮುಂದೆ ನಿಂಬೆಕಾಯಿ, ಕುಂಕುಮ, ಕುಂಬಳಕಾಯಿ ಇದ್ರೆ ಇವೆಲ್ಲಾ ಮಾಟದ ಸಂಕೇತನಿಮ್ಮ ಮನೆ ಮುಂದೆ ನಿಂಬೆಕಾಯಿ, ಕುಂಕುಮ, ಕುಂಬಳಕಾಯಿ ಯಾರಾದ್ರೂ ಇಟ್ಟು ಹೋದ್ರೆ ನೋ ಡೌಟ್ ನಿಮ್ಮ ಹಾಗೂ ನಿಮ್ಮ ಮನೆ ಮೇಲೆ ಮಾಟ ಮಂತ್ರ ವಶೀಕರಣವಾಗಿದೆ ಎಂದರ್ಥ. ಬನ್ನಿ ನೋಡೋಣ ಇನ್ಯಾವೆಲ್ಲಾ ಲಕ್ಷಣ ಇವೆ ಎಂದು ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ. ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಇಲ್ಲಿ ಪರಿಹಾರ ಶತಸಿದ್ಧ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ…
ಇಲ್ಲಿ ಕೊಟ್ಟಿರುವ ಶ್ಲೋಕವನ್ನು ಗ್ರಹಣ ಮುಗಿಯುವವರೆಗೂ ಪಠಿಸಿ ಗ್ರಹಣ ಮೋಕ್ಷಾ ನಂತರ ದಕ್ಷಿಣೆ ಅಕ್ಕಿ ದಾನ ಮಾಡಬಹುದು ಶ್ಲೋಕ : ಯೋ ಸೌ ವಜ್ರಧರೋ ದೇವಃ ಆದಿತ್ಯಾನಾಂ ಪ್ರಭುರ್ಮತಃ | ಚಂದ್ರ ಗ್ರಹೋಪರಾಗೋತ್ಥ ಗ್ರಹಪೀಡಾಂ ವ್ಯಪೋಹತು || 1 || ಯೋ ಸೌ ದಂಡಧರೋ ದೇವಃ ಯಮೋ ಮಹಿಷವಾಹನಃ | ಚಂದ್ರ ಗ್ರಹೋಪರಾಗೋತ್ಥ ಗ್ರಹಪೀಡಾಂ ವ್ಯಪೋಹತು || 2 || ಯೋ ಸೌ ಶೂಲಧರೋ ದೇವಃ ಪಿನಾಕೀ ವೃಷವಾಹನಃ | ಚಂದ್ರ ಗ್ರಹೋಪರಾಗೋತ್ಥ ಗ್ರಹಪೀಡಾಂ ವ್ಯಪೋಹತು || 3 || ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ಗ್ರಹಣಕಾಲದಲ್ಲಿ ಪಾಲಿಸ ಬೇಕಾದ ಆಚರಣೆಗಳು :- ಗ್ರಹಣದ ಆಚರಣೆ ಶಾಸ್ತ್ರದ ವಚನ, ಎಂದರೆ ಭಗವಂತನ ಆದೇಶ.…
ಬೆಂಗಳೂರು: ಒಂದು ದೇಶ ಒಂದು ಚುನಾವಣೆಯು ಈ ಕಾಲಘಟ್ಟದಲ್ಲಿ ಅತ್ಯಗತ್ಯವಾಗಿದೆ. ಇದರಿಂದ ರಾಜ್ಯ ಮತ್ತು ದೇಶಕ್ಕೆ ಒಳಿತಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ವಿಶ್ಲೇಷಿಸಿದ್ದಾರೆ. ಮಲ್ಲೇಶ್ವರದ ಹವ್ಯಕ ಭವನದಲ್ಲಿ ಇಂದು ಏರ್ಪಡಿಸಿದ್ದ ಒಂದು ದೇಶ ಒಂದು ಚುನಾವಣೆ ಕುರಿತ ವಿದ್ಯಾರ್ಥಿ ಪ್ರಮುಖರ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. ಆಡಳಿತ ಸುಧಾರಣೆ ಜೊತೆಗೇ ಸಾವಿರಾರು ಕೋಟಿ ಹಣವನ್ನು ಉಳಿಸುವ ಕ್ರಮ ಇದು ಎಂದು ಮೆಚ್ಚುಗೆ ಸೂಚಿಸಿದರು. ಕೆಟ್ಟ ವಿಚಾರಗಳು ಬಹಳ ಬೇಗ ಜನರನ್ನು ತಲುಪುತ್ತವೆ. ಒಳ್ಳೆಯ ವಿಚಾರ ಜನರನ್ನು ತಲುಪಲು ಸ್ವಲ್ಪ ತಡ ಆಗುತ್ತದೆ. ಆದ್ದರಿಂದ ನಾವು ನಮ್ಮ ಜಿಲ್ಲೆ, ವಿಧಾನಸಭಾ ಕ್ಷೇತ್ರಗಳಲ್ಲಿ ಈ ಒಳ್ಳೆಯ ವಿಚಾರದ ಕುರಿತು ಜಾಗೃತಿ ಮೂಡಿಸಬೇಕು. ವಿವಿಧ ಕ್ಷೇತ್ರಗಳ ಸಮಾಜದ ಗಣ್ಯರ ಮಧ್ಯೆ ಚರ್ಚೆ ಮಾಡಬೇಕು. ಕಾಲೇಜಿನ ವಿದ್ಯಾರ್ಥಿ, ವಿದ್ಯಾರ್ಥಿನಿಯರ ನಡುವೆ ಚರ್ಚೆ ನಡೆಸಬೇಕು ಎಂದು ಮನವಿ ಮಾಡಿದರು. ನರೇಂದ್ರ ಮೋದಿಜೀ ಅವರ ದಿಟ್ಟ ನಾಯಕತ್ವದಲ್ಲಿ ಭಾರತವು ಅತ್ಯಂತ ವೇಗದಲ್ಲಿ ಬೆಳವಣಿಗೆ ಸಾಧಿಸುತ್ತಿದೆ.…
ಚಿಕ್ಕಬಳ್ಳಾಪುರ: ಪ್ರಿಯತಮೆ ತನ್ನ ನಂಬರ್ ಬ್ಲಾಕ್ ಮಾಡಿದ್ದಕ್ಕೆ ಮನನೊಂದು ವಿದ್ಯಾರ್ಥಿಯೊಬ್ಬ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ಚಿಕ್ಕಬಳ್ಳಾಪುರ ತಾಲ್ಲೂಕಿನ ಪೇರೇಸಂದ್ರ ಗ್ರಾಮದ ಖಾಸಗಿ ಕಾಲೇಜಿನ ಹಾಸ್ಟೆಲ್ ನಲ್ಲಿ ನಡೆದಿದೆ. ಲವರ್ ನಂಬರ್ ಬ್ಲಾಕ್ ಮಾಡಿದ್ದಕ್ಕೆ ಮನೊಂದು ಆತ್ಮಹತ್ಯೆ ಮಾಡಿಕೊಂಡಾತನನ್ನು ಕೇರಳದ ವಯನಾಡು ಮೂಲದ ಮೊಹಮ್ಮದ್ ಶಬ್ಬೀರ್(26) ಆಗಿದ್ದಾರೆ. ಈತ ಪ್ರತಿಷ್ಠಿತ ಖಾಸಗಿ ಕಾಲೇಜೊಂದರಲ್ಲಿ ಆರ್ ಸಿ ಟಿ ಎನ್ನುವ ಅಲೈಡ್ ಸೈನ್ಸ್ ಕೋರ್ಸ್ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದನು. ಕೆಲವೇ ತಿಂಗಳಲ್ಲಿ ಮೊಹಮ್ಮದ್ ಶಬ್ಬೀರ್ ವ್ಯಾಸಂಗ ಕೂಡ ಮುಕ್ತಾಯಗೊಳ್ಳುತ್ತಿತ್ತು. ಆದರೇ ಇಂದು ಬೆಳಗ್ಗೆ ಹಾಸ್ಟೆಲ್ ರೂಮಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಹಾಸ್ಟೆಲ್ ರೂಮಿನ ಕಿಟಕಿಗೆ ಟವೆಲ್ ಕಟ್ಟಿ, ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ನೇಣಿಗೂ ಮುನ್ನ ಮೊಹಮ್ಮದ್ ಶಬ್ಬೀರ್ ಡೆತ್ ನೋಟ್ ಬರೆದಿದ್ದು, ಅದರಲ್ಲಿ ನಾನು ನಿನ್ನನ್ನು ಯಾವಾಗಲೂ ಪ್ರೀತಿ ಮಾಡುತ್ತೇನೆ. ನನ್ನ ಪ್ರೀತಿ ಯಾವಾಗಲೂ ನಿರಂತರವಾಗಿದೆ. ನೀನೇ ಮೊದಲು, ನೀನೇ ಕೊನೆ ಎಂಬುದಾಗಿ ಬರೆದಿದ್ದಾನೆ. https://kannadanewsnow.com/kannada/marriage-registration-in-the-state-is-still-simple-just-sit-and-submit-the-application-like-this/ https://kannadanewsnow.com/kannada/shocking-11-year-old-girl-gives-birth-to-a-child-after-being-repeatedly-raped-by-a-married-man/
ಬೆಂಗಳೂರು: ರಾಜ್ಯದಲ್ಲಿ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಮೂಲಕ ವಿವಾಹ ನೋಂದಣಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸೋ ಪ್ರಕ್ರಿಯೆ ಜಾಲ್ತಿಯಲ್ಲಿದೆ. ಇದು ಕೆಲವರಿಗೆ ತಿಳಿದಿದ್ದರೇ, ಮತ್ತೆ ಕೆಲವರಿಗೆ ತಿಳಿದಿಲ್ಲ. ನೀವು ಮ್ಯಾರೇಜ್ ಸರ್ಟಿಫಿಕೇಟ್ ಗೆ ಅರ್ಜಿ ಸಲ್ಲಿಸಬೇಕು ಅನ್ನೋ ಯೋಚನೆಯಲ್ಲಿದ್ದರೇ, ಜಸ್ಟ್ ಮನೆಯಲ್ಲೇ ಕುಳಿತು, ಆನ್ ಲೈನ್ ಮೂಲಕ ನಾವು ಹೇಳುವಂತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿ. ರಾಜ್ಯ ಸರ್ಕಾರದಿಂದ ವಿವಾಹ ನೋಂದಣಿಯ ಆನ್ ಲೈನ್ ಪ್ರಕ್ರಿಯೆಯನ್ನು ಜಾರಿಗೊಳಿಸಲಾಗಿದೆ. ಆಪ್ ಲೈನ್ ಜೊತೆಗೆ, ನೀವು ರಾಜ್ಯದ ಯಾವುದೇ ಮೂಲೆಯಲ್ಲಿದ್ದರೂ, ಎಲ್ಲೇ ಮದುವೆಯಾಗಿದ್ದರೂ ಮ್ಯಾರೇಜ್ ಸರ್ಟಿಫಿಕೇಟ್ ಪಡೆಯಲು ಆನ್ ಲೈನ್ ಮೂಲಕ ಅರ್ಜಿಯನ್ನು ಕುಳಿತಲ್ಲಿಯೇ ಸಲ್ಲಿಸಬಹುದಾಗಿದೆ. ಆದರೇ ಇದಕ್ಕಾಗಿ ಕೆಲ ದಾಖಲೆಗಳನ್ನು ಸಲ್ಲಿಸುವುದು ಕಡ್ಡಾಯವಾಗಿದೆ. ಮ್ಯಾರೇಜ್ ಸರ್ಟಿಫಿಕೇಟ್ ಪಡೆಯಲು ಈ ದಾಖಲೆಗಳು ಕಡ್ಡಾಯ ಮದುವೆ ಲಗ್ನ ಪತ್ರಿಕೆ ದಂಪತಿಗಳ ಒಂದು ಪೋಟೋ ಪತಿಯ ಆಧಾರ್ ಕಾರ್ಡ್ ಪತ್ನಿಯ ಆಧಾರ್ ಕಾರ್ಡ್ ಮೂವರು ಸಾಕ್ಷಿದಾರರ ಆಧಾರ್ ಕಾರ್ಡ್ ಈ ಮೇಲ್ಕಂಡ ದಾಖಲೆಗಳನ್ನು ಪಿಡಿಎಫ್ ಮಾಡಿ,…
ಬೆಂಗಳೂರು: ದೇಶದ ಜನತೆ ಕಾಂಗ್ರೆಸ್ ಪಕ್ಷದ ಬಗ್ಗೆ ಏಕೆ ವಿಶ್ವಾಸವನ್ನು ಕಳೆದುಕೊಂಡಿದ್ದಾರೆ ಎಂದು ಚರ್ಚಿಸಬೇಕು ಅಥವಾ ಚಿಂತನೇ ಮಾಡಬೇಕೆ ವಿನಾ ಕಾಂಗ್ರೆಸ್ ಪಕ್ಷವು ಇವಿಎಂ ಬಗ್ಗೆ ಪ್ರಶ್ನೆ ಮಾಡುತ್ತಿರುವುದು ಮುರ್ಖತನದ ಪರಮಾವಧಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಟೀಕಿಸಿದ್ದಾರೆ. ನಗರದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ದೇಶದ ಭವಿಷ್ಯದ ದೃಷ್ಟಿಯಿಂದ ನರೇಂದ್ರ ಮೋದಿ ಜೀ ಅವರಿಂದ ಮಾತ್ರ ಭಾರತವನ್ನು ಮುನ್ನಡೆಸುವುದಕ್ಕೆ ಸಾಧ್ಯವೆಂದು ದೇಶದ ಜನ ಒಪ್ಪಿಕೊಂಡಿದ್ದಾರೆ. ಆದರೆ ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇದನ್ನು ಒಪ್ಪಿಕೊಳ್ಳುವುದಕ್ಕೆ ತಯಾರಿಲ್ಲದೆ ಪ್ರಸ್ತುತ ಇವಿಎಂ ಮೇಲೆ ದೂರುವುದು ಮತ್ತು ದೋಷಪೂರಿತ ಎಂದು ಕಾಂಗ್ರೆಸ್ ಹೇಳುತ್ತಿರುವುದು ಹುಚ್ಚುತನದ ಪರಮಾವಧಿ ಎಂದು ವ್ಯಂಗ್ಯವಾಡಿದರು. ರಾಹುಲ್ ಗಾಂಧಿ ಮತ್ತು ಸಿದ್ದರಾಮಯ್ಯನªರಿಗೆ ಇವಿಎಂ ಮೇಲೆ ಏಕೆ ವಿಶ್ವಾಸ ಕಡಿಮೆ ಆಗಿದೆ ಎಂದು ಪ್ರಶ್ನಿಸಿದರು. ರಾಹುಲ್ ಗಾಂಧಿಯವರು ಸತತವಾಗಿ 3 ಬಾರಿ ಕೇಂದ್ರ ಲೋಕಸಭಾ ಚುನಾವಣೆಯ ಸೋಲನ್ನು ಒಪ್ಪಿಕೊಂಡಿದ್ದಾರೆ ಎಂದು ತಿಳಿಸಿದರು. ಬ್ಯಾಲೆಟ್ ಪೇಪರ್…
ಧರ್ಮಸ್ಥಳ: ಶವ ಹೂತಿಟ್ಟಿದ್ದಾಗಿ ತಪ್ಪೊಪ್ಪಿಗೆ ಹೇಳಿಕೆ ನೀಡಿ ಮಾಸ್ಕ್ ಮ್ಯಾನ್ ಚಿನ್ನಯ್ಯಗೆ ನ್ಯಾಯಾಂಗ ಬಂಧನವಾಗಿ ಜೈಲುಪಾಲಾಗಿದ್ದಾರೆ. ಈ ಬೆನ್ನಲ್ಲೇ ಧರ್ಮಸ್ಥಳ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದ್ದು, ಸೌಜನ್ಯ ಮಾವ ವಿಠಲ್ ಗೌಡಗೆ ತಲೆ ಬುರುಡೆ ಐಡಿಯಾ ನೀಡಿದ್ದೇ ಗಿರೀಶ್ ಮಟ್ಟಣ್ಣನವರ್ ಎಂಬುದಾಗಿ ತಿಳಿದು ಬಂದಿದೆ. ಈ ಬಗ್ಗೆ ಎಸ್ಐಟಿ ಎದುರು ಸೌಜನ್ಯ ಮಾವ ವಿಠ್ಠಲ್ ಗೌಡ ಅವರೇ ಹೇಳಿಕೆ ನೀಡಿದ್ದಾರೆ ಎನ್ನಲಾಗುತ್ತಿದೆ. ಕಾಡಿನಲ್ಲಿ ತಲೆ ಬುರುಡೆ ಹುಡುಕಿ ತರುವಂತೆ ಐಡಿಯಾ ನೀಡಿದ್ದೇ ಗಿರೀಶ್ ಮಟ್ಟಣ್ಣನವರ್ ಎಂಬುದಾಗಿ ಹೇಳಿದ್ದಾರೆ ಎನ್ನಲಾಗುತ್ತಿದೆ. ಗಿರೀಶ್ ಮಟ್ಟಣ್ಣನವರ ಪ್ಲಾನ್ ನಂತೆ ವಿಠ್ಠಲ್ ಗೌಡ ಅವರು ಒಂದು ವರ್ಷದ ಹಿಂದೆ ಬುರುಡೆ ತಂದಿದ್ದರಂತೆ. ಬಂಗ್ಲೆಗುಡ್ಡದಿಂದ ಬುರುಡೆ ಹುಡುಕಿ ತಂದಿದ್ದರಂತೆ. ವಿಠ್ಠಲ್ ಗೌಡಗೆ ಕಾರಿನ ಚಾಲಕನಾಗಿ ಪ್ರದೀಪ್ ಗೌಡ ಸಾಥ್ ನೀಡಿದ್ದರಂತೆ. ವಿಠ್ಠಲ್ ಗೌಡ ಮತ್ತು ಪ್ರದೀಪ್ ಬೆಂಗಳೂರಿಗೆ ಪ್ರಯಾಣ ಮಾಡಿದ್ದಾರೆ. ಕಾರಿನಲ್ಲೇ ಬುರುಡೆ ಬೆಂಗಳೂರಿಗೆ ವಿಠ್ಠಲ್ ಗೌಡ ಕೊಂಡೊಯ್ದಿದ್ದಾರೆ. ಬೆಂಗಳೂರಲ್ಲಿ ತಲೆ ಬುರುಡೆಯೊಂದಿಗೆ ವಿಠ್ಠಲ್ ಗೌಡ, ಪ್ರದೀವ್ ಅವರು…














