Author: kannadanewsnow09

ಜೀವನದಲ್ಲಿ ಬರೀ ಕಷ್ಟಗಳನ್ನೇ ಎದುರಿಸುತ್ತಿದ್ದೀರಿ ಎಂದಾದರೆ ಈ ಹನುಮಾನ್ ಮಂತ್ರ ಜಪಿಸಿ..! ॥ ಶ್ರೀ ಆಂಜನೇಯ ದಂಡಕಂ ॥ ಶ್ರೀ ಆಂಜನೇಯಂ ಪ್ರಸನ್ನಾಂಜನೇಯಂ ಪ್ರಭಾದಿವ್ಯಕಾಯಂ ಪ್ರಕೀರ್ತಿ ಪ್ರದಾಯಂ ಭಜೇ ವಾಯುಪುತ್ರಂ ಭಜೇ ವಾಲಗಾತ್ರಂ ಭಜೇಹಂ ಪವಿತ್ರಂ ಭಜೇ ಸೂರ್ಯಮಿತ್ರಂ ಭಜೇ ರುದ್ರರೂಪಂ ಭಜೇ ಬ್ರಹ್ಮತೇಜಂ ಬಟಂಚುನ್ ಪ್ರಭಾತಂಬು ಸಾಯಂತ್ರಮುನ್ ನೀನಾಮಸಂಕೀರ್ತನಲ್ ಜೇಸಿ ನೀ ರೂಪು ವರ್ಣಿಂಚಿ ನೀಮೀದ ನೇ ದಂಡಕಂ ಬೊಕ್ಕಟಿನ್ ಜೇಯ ಶ್ರೀ ಕ್ಷೇತ್ರ ಸಿಗಂಧೂರ ಚೌಡೇಶ್ವರಿ ದೇವಿಯ ಆರಧಾನೆ ಮಾಡುವ ವಿದ್ಯಾಧರ್ ತಂತ್ರಿ ಗುರುಗಳಿಂದ ನಿಮ್ಮ ಸಮಸ್ಯೆಗಳಿಗೆ ಫೋನ್ ನಲ್ಲಿ ಪರಿಹಾರ ಸಿಗುತ್ತೆ ಕರೆ ಮಾಡಿರಿ 9686268564 ಸ್ನೇಹಿತರೇ ನೀವು ಈಗಾಗಲೇ ಹಲವು ದೇವಸ್ಥಾನ ಸುತ್ತಿಬಂದರು ಮತ್ತು ಹಲವು ಜನ ಪಂಡಿತರನ್ನು ಭೇಟಿ ಮಾಡಿದ್ದರು ಸಹ ನಿಮ್ಮ ಕಷ್ಟಗಳಿಗೆ ಪರಿಹಾರ ಸಿಕಿಲ್ಲ ಅಂದರೆ ಈ ಕೂಡಲೇಒಮ್ಮೆ ಕರೆ ಮಾಡಿರಿ 9686268564  ಗುರುಜಿ ಅವರು ಜ್ಯೋತಿಷ್ಯ ಶಾಸ್ತ್ರದಲ್ಲಿ ಸಾಕಷ್ಟು ಪಾಂಡಿತ್ಯ ಹೊಂದಿದ್ದಾರೆ ಹಾಗೆಯೇ ಸಮಸ್ಯೆಗಳಿಗೆ ನಿಖರ ರೀತಿಯಲ್ಲಿ ಪರಿಹಾರ ಮಾಡಿಕೊಡುತ್ತಾರೆ,…

Read More

ಶಿವಮೊಗ್ಗ: ರಾಜ್ಯದಲ್ಲಿ ಹತ್ತಾರು, ನೂರಾರು ಕಲಾವಿದರ ನಡುವೆ ಅಪರೂಪದ ಡೊಳ್ಳು ಕಲಾವಿದ ಇವರು. ತಮ್ಮ ಜೀವನವನ್ನೇ ಡೊಳ್ಳು ಪ್ರದರ್ಶನಕ್ಕೆ ಮುಡುಪಾಗಿಟ್ಟಿರುವಂತ ಇವರು, ತಮ್ಮ ಕಲೆಯನ್ನು ಪ್ರದರ್ಶಿಸಿದ್ದು ಮಾತ್ರ ರಾಜ್ಯವಷ್ಟೇ ಅಲ್ಲ, ಹೊರ ರಾಜ್ಯ, ವಿದೇಶಗಳಲ್ಲಿ. ಮಾಜಿ ಸಿಎಂ ದಿವಂಗದ ಎಸ್ ಬಂಗಾರಪ್ಪ ಅವರ ಪ್ರೋತ್ಸಾಹಕ್ಕೆ ಹುರಿದುಂಬಿ ನೀಡಿದ್ದು ಮಾತ್ರ ನೂರಾರು ಡೊಳ್ಳು ಪ್ರದರ್ಶನ. ಆ ಕಲಾವಿದ ಯಾರು.? ಅಂತಹ ಸಾಧನೆ ಏನು ಎನ್ನುವ ಬಗ್ಗೆ ಮುಂದೆ ಓದಿ. ನೀವೇ ಶಾಕ್ ಆಗ್ತೀರಿ. ಹೌದು.. ಕರುನಾಡಿನ ಕೀರ್ತಿಯನ್ನು ವಿದೇಶದಲ್ಲಿ ಮೊಳಗಿಸಿ, ಕನ್ನಡಮ್ಮನ ಸಂಸ್ಕೃತಿಯನ್ನು ಹೊರ ರಾಜ್ಯದವರು, ಪ್ರಪಂಚದ ಜನರೇ ಬೆರಗುಗೊಳಿಸುವಂತೆ ಡೊಳ್ಳಿನ ಮೂಲಕ ಪ್ರದರ್ಶನ ನೀಡಿದ ಅಪರೂಪದ ಕಲಾವಿದ ಅಂದ್ರೇ ಅದು ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಕಣ್ಣೂರು ಗ್ರಾಮದ ಜಿ.ಸಿ ಮಂಜಪ್ಪ. ಡೊಳ್ಳೆಂದರೇ ಇವರು, ಇವರೆಂದರೇ ಡೊಳ್ಳು ಎನ್ನುವಷ್ಟು ಹೊಂದಿಕೊಂಡು, ಅದರಲ್ಲೇ ಪಳಗಿ, ತನ್ನ ಕಲಾ ಸಿರಿವಂತಿಕೆಯನ್ನು ಮೆರೆದ ಮೇರು ಕಲಾವಿದ ಜಿ.ಸಿ ಮಂಜಪ್ಪ. ಯಾರಿವರು ಜಿ.ಸಿ ಮಂಜಪ್ಪ.? ಶಿವಮೊಗ್ಗ ಜಿಲ್ಲೆ ಸಾಗರ…

Read More

ಬೆಂಗಳೂರು: ನಗರದಲ್ಲಿ ಬೆಸ್ಕಾಂನಿಂದ ( BESCOM ) ತುರ್ತು ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳುತ್ತಿರುವುದರಿಂದ ದಿನಾಂಕ 24-10-2024ರ ಇಂದು ನಗರದ ಕೆಲ ಪ್ರದೇಶಗಳಲ್ಲಿ ಬೆಳಿಗ್ಗೆ 11 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ( Power Cut ) ಉಂಟಾಗಲಿದೆ. ಇಂದು ಪತ್ರಿಕಾ ಪ್ರಕಟಣೆಯಲ್ಲಿ ಬೆಸ್ಕಾಂ ಮಾಹಿತಿ ನೀಡಿದ್ದು,  ಕೆಪಿಟಿಸಿಎಲ್‌ ವತಿಯಿಂದ 66/11ಕೆ.ವಿ ಪಾಟರಿ ರೋಡ್” ಸ್ಟೇಷನ್ ನಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಅಕ್ಟೋಬರ್‌ 24, 2024ರ ಇಂದು ಬೆಳಿಗ್ಗೆ 11 ಗಂಟೆಯಿಂದ ಸಂಜೆ 4ರವರೆಗೆ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುವುದಾಗಿ ತಿಳಿಸಿದೆ. ಇಂದು ಈ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ “ಹಳೆ ಬೈಯಪ್ಪನಹಳ್ಳಿ, ನಾಗೇನಪಾಳ್ಯ, ಸತ್ಯನಗರ, ಗಜೇಂದ್ರನಗರ, ಎಸ್.ಕುಮಾರ್ ಲೇಔಟ್, ಆಂಧ್ರ ಬ್ಯಾಂಕ್ ರಸ್ತೆ, ಕುಕ್ಸನ್ ರಸ್ತೆ, ಡೇವಿಸ್ ರಸ್ತೆ, ರಿರ‍್ಡ್ಸ್ ಪರ‍್ಕ್ ರಸ್ತೆ, ಆಯಿಲ್ ಮಿಲ್ ರಸ್ತೆ, ಸದಾಶಿವ ದೇವಸ್ಥಾನ ರಸ್ತೆ, ಕಾಮನಹಳ್ಳಿ ಮುಖ್ಯರಸ್ತೆ, ಕೆ.ಹಚ್.ಬಿ ಕಾಲೋನಿ, ಜೈಭಾರತ್ ನಗರ, ಸಿ.ಕೆ. ಗರ‍್ಡನ್, ಡಿ’ಕೋಸ್ಟಾ ಲೇಔಟ್, ಹಚಿನ್ಸ್…

Read More

ಬೆಂಗಳೂರು: ರಾಜ್ಯದ ಉಪ ಲೋಕಾಯುಕ್ತರಾದ ನ್ಯಾಯಮೂರ್ತಿ ಕೆ. ಎನ್‌. ಫಣೀಂದ್ರ ಅವರು ಅಕ್ಟೋಬರ್‌ 24 ಹಾಗೂ 25 ರಂದು ಬೆಂಗಳೂರು ನಗರ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಯಲಹಂಕ ಉಪ ನಗರದಲ್ಲಿರುವ ಅಂಬೇಡ್ಕರ್‌ ಭವನ ಸಭಾಂಗಣದಲ್ಲಿ ಇಂದು ಸಾರ್ವಜನಿಕ ಕುಂದುಕೊರತೆ ಅಹವಾಲು ಸ್ವೀಕಾರ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ. ಯಲಹಂಕ ಹಾಗೂ ಬೆಂಗಳೂರು ಪೂರ್ವ ತಾಲೂಕುಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರ ಕುಂದು ಕೊರತೆ, ದೂರು ವಿಚಾರಣೆ ಹಾಗೂ ವಿವಿಧ ಪ್ರಕರಣಗಳ ವಿಲೇವಾರಿಗೆ ಸಂಬಂಧಿಸಿದಂತೆ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ. ಅಕ್ಟೋಬರ್‌ 24ರ ಇಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1.30ರ ವರೆಗೆ ಹಾಗೂ ಮಧ್ಯಾಹ್ನ 2.30 ರಿಂದ ಸಂಜೆ 5 ರ ವರೆಗೆ ಅಹವಾಲುಗಳನ್ನು ಸ್ವೀಕರಿಸಿದ ಬಳಿಕ ನ್ಯಾಯಮೂರ್ತಿಗಳು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸಹಯೋಗದೊಂದಿಗೆ ನಡೆಯಲಿರುವ ‘ಕರ್ನಾಟಕ ಲೋಕಾಯುಕ್ತ ಕಾಯ್ದೆ’ ಕುರಿತ ಕಾನೂನು ಅರಿವು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಅಹವಾಲು ಸ್ವೀಕಾರ ಕಾರ್ಯಕ್ರಮದ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಿ. ಜಗದೀಶ್…

Read More

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗೃಹ ಆರೋಗ್ಯ ಯೋಜನೆಗೆ ಕ್ಷಣಗಣನೆ ಆರಂಭವಾಗಿದೆ. ಗ್ರಾಮೀಣ ಪ್ರದೇಶದ ಜನರ ಆರೋಗ್ಯ ರಕ್ಷಣೆ ವಿಚಾರದಲ್ಲಿ ಒಂದು ದೂರದೃಷ್ಟಿಯ ಯೋಜನೆ ಜಾರಿಗೆ ತರುವುದಾಗಿ ಘೋಷಿಸಿದ್ದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಇದೀಗ ‘ಗೃಹ ಆರೋಗ್ಯ’ ಹೆಸರಲ್ಲಿ ಯೋಜನೆಯನ್ನ ಅನುಷ್ಠಾನಕ್ಕೆ ತರುತ್ತಿದ್ದಾರೆ. ಇಂದು ಸಿಎಂ ಸಿದ್ದರಾಮಯ್ಯ ಈ ಯೋಜನೆಗೆ ಚಾಲನೆ ನೀಡಲಿದ್ದು, ಕೋಲಾರ ಜಿಲ್ಲೆಯಿಂದ ಯೋಜನೆ ಆರಂಭವಾಗಿ, ಜನವರಿ ತಿಂಗಳಿನಲ್ಲಿ ರಾಜ್ಯಾದ್ಯಂತ ಯೋಜನೆ ಜಾರಿಗೆ ಬರಲಿದೆ. ಅಸಾಂಕ್ರಾಮಿಕ ರೋಗಗಳನ್ನ ಹತೋಟಿಗೆ ತರುವುದು ಗೃಹ ಆರೋಗ್ಯ ಯೋಜನೆಯ ಮುಖ್ಯ ಗುರಿಯಾಗಿದೆ. ದೇಶದಲ್ಲಿ ಅಸಾಂಕ್ರಾಮಿಕ ರೋಗಗಳ (NCD) ಹೆಚ್ಚುತ್ತಿವೆ. ವಿಶೇಷವಾಗಿ ಕರ್ನಾಟಕದಲ್ಲಿ ಶೇಕಡಾ 26.9% ರಷ್ಟು ರಕ್ತದೊತ್ತಡ, ಶೇಕಡಾ 15.6% ರಷ್ಟು ಮಧುಮೇಹ ರೋಗಗಳಿಂದ ಜನರು ಬಳಲುತ್ತಿದ್ದು, ಇದರಿಂದ‌ ಉಂಟುಗುತ್ತಿರುವ ಮರಣ ಹಾಗೂ ಅನಾರೋಗ್ಯ ತೊಡಕುಗಳನ್ನ ತಡೆಗಟ್ಟಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಗೃಹ ಆರೋಗ್ಯ ಯೋಜನೆಯನ್ನ ಪರಿಚಯಿಸಿದ್ದಾರೆ. ಅಲ್ಲದೇ ರಾಜ್ಯದಲ್ಲಿ ಶೇಕಡಾ 11.5 % ರಷ್ಟು ಬಾಯಿ ಕ್ಯಾನ್ಸರ್; ಶೇಕಡಾ…

Read More

ಬೆಂಗಳೂರು: ಕರ್ನಾಟಕದ ಎರಡು ಕ್ಷೇತ್ರಗಳಿಗೆ ವಿಧಾನ ಸಭಾ ಉಪ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳ ಅಧಿಕೃತ ಪಟ್ಟಿಯನ್ನು ಪ್ರಕಟಿಸಲಾಗಿದೆ.  ಎಐಸಿಸಿಯ ಜನರಲ್ ಸೆಕ್ರೆಟರಿ ಕೆ.ಸಿ ವೇಣುಗೋಪಾಲ್ ಅಧಿಕೃತ ಪಟ್ಟಿ ಬಿಡುಗಡೆ ಮಾಡಿದ್ದಾರೆ. ಅಸ್ಸಾಂನ ಒಂದು ಕ್ಷೇತ್ರ ಹಾಗೂ ಕರ್ನಾಟಕದ ಎರಡು ವಿಧಾನ ಸಭಾ ಉಪ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದ್ದಾರೆ. ಕರ್ನಾಟಕದ ಸಂಡೂರು ವಿಧಾನ ಸಭಾ ಉಪ ಚುನಾವಣೆಗೆ ಇ.ಅನ್ನಪೂರ್ಣ ಅವರಿಗೆ ಟಿಕೆಟ್ ನೀಡಲಾಗಿದೆ. ಚನ್ನಪಟ್ಟಣ ವಿಧಾನ ಸಭಾ ಕ್ಷೇತ್ರದ ಉಪ ಚುನಾವಣೆಗೆ ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರಿದಂತೆ ಸಿ.ಪಿ ಯೋಗೇಶ್ವರ್ ಗೆ ಟಿಕೆಟ್ ಘೋಷಿಸಲಾಗಿದೆ. ಆದರೆ ಶಿಗ್ಗಾವಿ ವಿಧಾನ ಸಭಾ ಕ್ಷೇತ್ರದ ಉಪ ಚುನಾವಣೆಗೆ ಅಭ್ಯರ್ಥಿ ಘೋಷಿಸಿಲ್ಲ. ಅಂದಹಾಗೆ ಸಂಡೂರು, ಶಿಗ್ಗಾಂವ್ ಮತ್ತು ಚನ್ನಪಟ್ಟಣಕ್ಕೆ ನವೆಂಬರ್.13ರಂದು ಮತದಾನ ನಡೆಯಲಿದೆ. ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಅಕ್ಟೋಬರ್.25, 2024 ಕೊನೆಯ ದಿನವಾಗಿದೆ. ನಾಮಪತ್ರ ಹಿಂಪಡೆಯಲು ಅಕ್ಟೋಬರ್.30, 2024 ಲಾಸ್ಟ್ ಡೇಟ್. ನವೆಂಬರ್.23ರಂದು ಫಲಿತಾಂಶ ಪ್ರಕಟವಾಗಲಿದೆ. ಈಗಾಗಲೇ ಬಿಜೆಪಿಯಿಂದ ಸಂಡೂರು ಮತ್ತು ಶಿಗ್ಗಾಂವ್ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು…

Read More

ಬೆಂಗಳೂರು: ಕರ್ನಾಟಕದ ವಿಧಾನ ಸಭಾ ಉಪ ಚುನಾವಣೆಗೆ ಎರಡು ಕ್ಷೇತ್ರಗಳಿಗೆ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಘೋಷಣೆ ಮಾಡಲಾಗಿದೆ. ಎಐಸಿಸಿಯ ಜನರಲ್ ಸೆಕ್ರೆಟರಿ ಕೆ.ಸಿ ವೇಣುಗೋಪಾಲ್ ಅಧಿಕೃತ ಪಟ್ಟಿ ಬಿಡುಗಡೆ ಮಾಡಿದ್ದಾರೆ. ಅಸ್ಸಾಂನ ಒಂದು ಕ್ಷೇತ್ರ ಹಾಗೂ ಕರ್ನಾಟಕದ ಎರಡು ವಿಧಾನ ಸಭಾ ಉಪ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದ್ದಾರೆ. ಕರ್ನಾಟಕದ ಸಂಡೂರು ವಿಧಾನ ಸಭಾ ಉಪ ಚುನಾವಣೆಗೆ ಇ.ಅನ್ನಪೂರ್ಣ ಅವರಿಗೆ ಟಿಕೆಟ್ ನೀಡಲಾಗಿದೆ. ಚನ್ನಪಟ್ಟಣ ವಿಧಾನ ಸಭಾ ಕ್ಷೇತ್ರದ ಉಪ ಚುನಾವಣೆಗೆ ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರಿದಂತೆ ಸಿ.ಪಿ ಯೋಗೇಶ್ವರ್ ಗೆ ಟಿಕೆಟ್ ಘೋಷಿಸಲಾಗಿದೆ. ಆದರೆ ಶಿಗ್ಗಾವಿ ವಿಧಾನ ಸಭಾ ಕ್ಷೇತ್ರದ ಉಪ ಚುನಾವಣೆಗೆ ಅಭ್ಯರ್ಥಿ ಘೋಷಿಸಿಲ್ಲ. ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು

Read More

ಶಿವಮೊಗ್ಗ: ಇಂದು ಜಿಲ್ಲೆಯ ಸೊರಬ ತಾಲ್ಲೂಕಿನ ಉಳವಿ ಗ್ರಾಮದಲ್ಲಿ ಸೊರಬ ಪೊಲೀಸ್ ಠಾಣೆಯ ವತಿಯಿಂದ ಸಾರ್ವಜನಿಕರ ಕುಂದು ಕೊರತೆ ಅಹವಾಲು ಸ್ವೀಕಾರ ಸಭೆಯನ್ನು, ಸೊರಬ ಪೊಲೀಸ್ ಠಾಣೆಯ ಪಿಎಸ್ಐ ನಾಗರಾಜ್ ಅವರು ನಡೆಸಿದರು. ಈ ಸಭೆಗೆ ಸಿಪಿಐ ಬರಬೇಕಾಗಿತ್ತು. ತುರ್ತು ಕಾರ್ಯದ ನಿಮಿತ ಬೇರೆಡೆಗೆ ತೆರಳಿದ್ದರಿಂದ ಬರಲಾಗಲಿಲ್ಲ. ಹೀಗಾಗಿ ತಾವು ಆಗಮಿಸಿ, ಸಭೆ ನಡೆಸುತ್ತಿರುವುದಾಗಿ ಹೇಳಿದ ಅವರು, ಉಳವಿಯಲ್ಲಿ ವಾಹನಗಳ ಸಂಚಾರ ಸಮಸ್ಯೆ ಇದೆ. ವಾಹನಗಳ ನಿಲುಗಡೆಯ ಸಮಸ್ಯೆ ಆಗುತ್ತಿರುವುದು ಕಂಡು ಬಂದಿದೆ. ಆ ಎಲ್ಲಾ ಸಮಸ್ಯೆಯನ್ನು ಸ್ಥಳೀಯ ಆಡಳಿತದ ಜೊತೆಗೂಡಿ ಬಗೆ ಹರಿಸುವುದಾಗಿ ತಿಳಿಸಿದರು. ರಸ್ತೆ ಬದಿಯಲ್ಲಿ ವಾಹನ ಸವಾರರು ನಿಲ್ಲಿಸಬಾರದು. ಸೂಕ್ತ ಸ್ಥಳಗಳಲ್ಲಿ ತಮ್ಮ ವಾಹನಗಳನ್ನು ಪಾರ್ಕ್ ಮಾಡುವಂತೆ ಮನವಿಯನ್ನು ಮಾಡಿದರು. ಗಾಂಜಾ ಬೆಳೆಯೋರ ಬಗ್ಗೆ ಮಾಹಿತಿ ಕೊಡಿ ಉಳವಿಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗಾಂಜಾ ಬೆಳೆಯುವ ಮಾಹಿತಿ ಇದ್ದರೇ ತಮ್ಮೊಂದಿಗೆ ಹಂಚಿಕೊಳ್ಳಿ. ಪೊಲೀಸ್ ಇಲಾಖೆಯು ಮಾಹಿತಿದಾರರ ಹೆಸರನ್ನು ಬಹಿರಂಗ ಪಡಿಸುವುದಿಲ್ಲ. ಗಂಜಾ ಬೆಳೆಯುವುದು ತಪ್ಪು, ಅಪರಾಧ ಕೂಡ. ಇಂತಹ…

Read More

ಚೆನ್ನೈ: ಕಾಂಚೀಪುರಂ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗವು ಮಹತ್ವದ ತೀರ್ಪಿನಲ್ಲಿ, ರೌಂಡಿಂಗ್ ಆಫ್ ದೋಷದಿಂದಾಗಿ ತಪ್ಪಾಗಿ ಶುಲ್ಕ ವಿಧಿಸಿದ ಗ್ರಾಹಕರಿಗೆ 50 ಪೈಸೆ ಹಿಂದಿರುಗಿಸದಂತ ಅಂಚೆ ಇಲಾಖೆ 15,000 ಮರುಪಾವತಿಸುವಂತೆ ನಿರ್ದೇಶನ ನೀಡಿದೆ. ಈ ನಿರ್ಧಾರವು ಮರುಪಾವತಿಯನ್ನು ಕಡ್ಡಾಯಗೊಳಿಸುವುದಲ್ಲದೆ, ಮಾನಸಿಕ ಯಾತನೆ, ಅನ್ಯಾಯದ ವ್ಯಾಪಾರ ಅಭ್ಯಾಸ ಮತ್ತು ಸೇವೆಯ ಕೊರತೆಗೆ ಕಾರಣವಾದ ದೂರುದಾರ ಎ. ಮಾನಶಾ ಅವರಿಗೆ 10,000 ರೂ.ಗಳ ಪರಿಹಾರವನ್ನು ನೀಡುವಂತೆ ಇಂಡಿಯಾ ಪೋಸ್ಟ್ಗೆ ಆದೇಶಿಸುತ್ತದೆ. ಹೆಚ್ಚುವರಿಯಾಗಿ, ಆಯೋಗವು ಅಂಚೆ ಇಲಾಖೆಗೆ (ಡಿಒಪಿ) 5,000 ರೂ.ಗಳ ದಾವೆ ವೆಚ್ಚವನ್ನು ವಿಧಿಸಿದೆ. ಪ್ರಕರಣದ ಹಿನ್ನೆಲೆ ಡಿಸೆಂಬರ್ 13, 2023 ರಂದು ಮಾನಶಾ ನೋಂದಾಯಿತ ಪತ್ರವನ್ನು ಕಳುಹಿಸಲು ಪೊಜಿಚಲೂರು ಅಂಚೆ ಕಚೇರಿಗೆ ಭೇಟಿ ನೀಡಿದಾಗ ಈ ಘಟನೆ ನಡೆದಿದೆ. ಪೂರ್ಣ ಮೊತ್ತವನ್ನು ಪ್ರತಿಬಿಂಬಿಸುವ ರಸೀದಿಯನ್ನು ಪಡೆಯುವ ನಿರೀಕ್ಷೆಯಲ್ಲಿ ಅವರು 30 ರೂ.ಗಳನ್ನು ನಗದು ರೂಪದಲ್ಲಿ ಪಾವತಿಸಿದರು. ಆದರೆ, ರಸೀದಿಯಲ್ಲಿ ಕೇವಲ 29.50 ರೂ. ವ್ಯತ್ಯಾಸವನ್ನು ಗಮನಿಸಿದ ನಂತರ, ಮಾನಶಾ ಉಳಿದ 50…

Read More

ಟರ್ಕಿ: ಅಂಕಾರಾ ಬಳಿಯ ಟರ್ಕಿಶ್ ಏರೋಸ್ಪೇಸ್ ಇಂಡಸ್ಟ್ರೀಸ್ (ಟಿಯುಎಸ್ಎಎಸ್) ಪ್ರಧಾನ ಕಚೇರಿಯ ಮೇಲೆ ಬುಧವಾರ ನಡೆದ ಭಯೋತ್ಪಾದಕ ದಾಳಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು 14 ಜನರು ಗಾಯಗೊಂಡಿದ್ದಾರೆ. ಘಟನಾ ಸ್ಥಳದಲ್ಲಿ ಇಬ್ಬರು ದಾಳಿಕೋರರನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂದು ಟರ್ಕಿಯ ಆಂತರಿಕ ಸಚಿವ ಅಲಿ ಯೆರ್ಲಿಕಾಯಾ ತಿಳಿಸಿದ್ದಾರೆ. ಗುಂಡಿನ ದಾಳಿಯ ನಂತರ ದೊಡ್ಡ ಸ್ಫೋಟ ಸಂಭವಿಸಿದೆ ಎಂದು ಪ್ರತ್ಯಕ್ಷದರ್ಶಿಗಳು ವರದಿ ಮಾಡಿದ್ದಾರೆ, ಇದು ಪ್ರದೇಶದ ಭದ್ರತಾ ಪರಿಸ್ಥಿತಿಯ ಬಗ್ಗೆ ಎಚ್ಚರಿಕೆಯನ್ನು ಹೆಚ್ಚಿಸಿದೆ. “ಅಂಕಾರಾದ ಕಹ್ರಮನ್ಕಜಾನ್ನಲ್ಲಿರುವ ತುಸಾಸ್ ಸೌಲಭ್ಯಗಳ ಮೇಲೆ ಭಯೋತ್ಪಾದಕ ದಾಳಿ ನಡೆಸಲಾಯಿತು. ದುರದೃಷ್ಟವಶಾತ್, ಹುತಾತ್ಮರು ಮತ್ತು ಗಾಯಗೊಂಡ ವ್ಯಕ್ತಿಗಳು ಇದ್ದಾರೆ” ಎಂದು ಯೆರ್ಲಿಕಾಯಾ ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ ಎಕ್ಸ್ನಲ್ಲಿ ಬರೆದಿದ್ದಾರೆ. ಸ್ಫೋಟ ಮತ್ತು ನಂತರದ ಗುಂಡಿನ ದಾಳಿಯ ನಿಖರ ಕಾರಣ ಇನ್ನೂ ಸ್ಪಷ್ಟವಾಗಿಲ್ಲ, ಆದಾಗ್ಯೂ ಕೆಲವು ಮಾಧ್ಯಮಗಳು ಇದು ಆತ್ಮಾಹುತಿ ದಾಳಿಯಾಗಿರಬಹುದು ಎಂದು ಊಹಿಸಿವೆ. ಸರ್ಕಾರಿ ಸ್ವಾಮ್ಯದ ಅನಾಡೋಲು ಏಜೆನ್ಸಿ ವರದಿ ಮಾಡಿದಂತೆ ತುರ್ತು ಸೇವೆಗಳನ್ನು ತ್ವರಿತವಾಗಿ ಸ್ಥಳಕ್ಕೆ ರವಾನಿಸಲಾಗಿದೆ.…

Read More