Author: kannadanewsnow09

ಟರ್ಕಿ: ಅಂಕಾರಾ ಬಳಿಯ ಟರ್ಕಿಶ್ ಏರೋಸ್ಪೇಸ್ ಇಂಡಸ್ಟ್ರೀಸ್ (ಟುಸಾಸ್) ಪ್ರಧಾನ ಕಚೇರಿಯಲ್ಲಿ ಮಾರಣಾಂತಿಕ ದಾಳಿ ನಡೆಸಲಾಗಿದೆ ಎಂದು ಟರ್ಕಿ ಬುಧವಾರ ಹೇಳಿದೆ. ಆದರೆ ಮಾಧ್ಯಮಗಳು ಸ್ಥಳದಲ್ಲಿ ದೊಡ್ಡ ಸ್ಫೋಟವನ್ನು ವರದಿ ಮಾಡಿವೆ ಮತ್ತು ಅಲ್ಲಿ ಗುಂಡಿನ ವಿನಿಮಯದ ತುಣುಕನ್ನು ತೋರಿಸಿವೆ. ಈ ಸ್ಪೋಟದಲ್ಲಿ ಹಲವರು ಸಾವನ್ನಪ್ಪಿರುವುದಾಗಿ ಹೇಳಲಾಗುತ್ತಿದೆ. ಅಂಕಾರಾದ ಕಹ್ರಮನ್ಕಜಾನ್ನಲ್ಲಿರುವ ತುಸಾಸ್ ಸೌಲಭ್ಯಗಳ ಮೇಲೆ ಭಯೋತ್ಪಾದಕ ದಾಳಿ ನಡೆಸಲಾಯಿತು. ದುರದೃಷ್ಟವಶಾತ್, ನಾವು ಹುತಾತ್ಮರು ಮತ್ತು ಗಾಯಗೊಂಡ ಜನರನ್ನು ಆಸ್ಪತ್ರೆಗೆ ಸಾಗಿಸುತ್ತಿದ್ದೇವೆ ಎಂದು ಆಂತರಿಕ ಸಚಿವ ಅಲಿ ಯೆರ್ಲಿಕಾಯಾ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಹೇಳಿದ್ದಾರೆ. https://twitter.com/AliYerlikaya/status/1849076451074564307 ಸ್ಫೋಟ ಮತ್ತು ನಂತರದ ಗುಂಡಿನ ದಾಳಿಯ ಕಾರಣ ಸ್ಪಷ್ಟವಾಗಿಲ್ಲ, ಕೆಲವು ಮಾಧ್ಯಮ ವರದಿಗಳು ಆತ್ಮಾಹುತಿ ದಾಳಿ ನಡೆದಿದೆ ಎಂದು ಹೇಳಿವೆ. ತುರ್ತು ಸೇವೆಗಳನ್ನು ಸ್ಥಳಕ್ಕೆ ರವಾನಿಸಲಾಗಿದೆ ಎಂದು ಸರ್ಕಾರಿ ಸ್ವಾಮ್ಯದ ಅನಾಡೋಲು ಏಜೆನ್ಸಿ ವರದಿ ಮಾಡಿದೆ. ಟೆಲಿವಿಷನ್ ಚಿತ್ರಗಳು ಹಾನಿಗೊಳಗಾದ ಗೇಟ್ ಮತ್ತು ಪಾರ್ಕಿಂಗ್ ಸ್ಥಳದಲ್ಲಿ ಹತ್ತಿರದ ಘರ್ಷಣೆಯನ್ನು ತೋರಿಸಿವೆ. ಟುಸಾಸ್ ಟರ್ಕಿಯ ಪ್ರಮುಖ ರಕ್ಷಣಾ…

Read More

ಬೆಂಗಳೂರು: ರಾಜ್ಯದಲ್ಲಿ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಕೌಶಲ ಶೃಂಗಸಭೆ ನಡೆಸಲು ನಿರ್ಧರಿಸಲಾಗಿದೆ ಎಂದು ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವರಾದ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ. 2025ರ ಜನವರಿ ತಿಂಗಳಲ್ಲಿ 2-3 ದಿನಗಳ ಕಾಲ ನಡೆಯುವ ಈ ಶೃಂಗಸಭೆಗೆ ಕಾರ್ಪೋರೇಟ್‌ ಸಂಸ್ಥೆಗಳು, ಸ್ವಯಂ ಸೇವಾ ಸಂಸ್ಥೆಗಳು, ಶಿಕ್ಷಣ ಸಂಸ್ಥೆಗಳು, ಅನುದಾನಿತ ಸಂಸ್ಥೆಗಳು, ನಾಸ್ಕಂ, ಕೈಗಾರಿಕೆಗಳು, ಕೌಶಲ ತರಬೇತುದಾರರನ್ನು ಆಹ್ವಾನಿಸಲಾಗುವುದು. ಮುಂದಿನ 3-4 ವರ್ಷ ರಾಜ್ಯದ ಅಭಿವೃದ್ಧಿಗೆ ಸಂಬಂಧಿಸಿದಂತೆ ಸಲಹೆಗಳನ್ನು ನೀಡಬಹುದು. ನೀಲನಕ್ಷೆ ಸಿದ್ದಪಡಿಸಲಾಗುವುದು ಮತ್ತು ಬಜೆಟ್‌ನಲ್ಲಿ ಅನುದಾನ ಹಂಚಿಕೆಗೂ ಸಹಕಾರಿಯಾಗಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಯುವ ವಿದ್ಯಾರ್ಥಿಗಳಲ್ಲಿ ನಾವೀನ್ಯತೆ ಮತ್ತು ಉದ್ಯಮಶೀಲತೆಯನ್ನು ಉತ್ತೇಜಿಸುವ ಪ್ರಾಮುಖ್ಯತೆಯನ್ನು ಒತ್ತಿಹೇಳಿದ ಸಚಿವರು ವಿದ್ಯಾರ್ಥಿಗಳಲ್ಲಿ ಬಾಲ್ಯದಿಂದಲೇ ವೈಜ್ಞಾನಿಕ ಮನೋಭಾವ ಮತ್ತು ಮನಃಸ್ಥಿತಿಯನ್ನು ಬೆಳೆಸಲು ವಿದ್ಯಾರ್ಥಿಗಳನ್ನು ಚರ್ಚೆಗಳು, ರಸಪ್ರಶ್ನೆಗಳು ಮತ್ತು ವಿಜ್ಞಾನ ಪ್ರದರ್ಶನಗಳಂತಹ ಜ್ಞಾನಾಭಿವೃದ್ಧಿ ಕ್ಷೇತ್ರಗಳಲ್ಲಿ ತೊಡಗಿಸಿಕೊಳ್ಳುವಂತಹ ಕಾರ್ಯಕ್ರಮ ಚೌಕಟ್ಟನ್ನು ರೂಪಿಸಲು ಸಚಿವರು ಸಲಹೆ ನೀಡಿದರು. ಕರ್ನಾಟಕ ಸರ್ಕಾರದ ಉದ್ದೇಶವು ಅತ್ಯಂತ ಸ್ಪಷ್ಟವಾಗಿದ್ದು, ನಾವು ಕೇವಲ ಹೂಡಿಕೆಯ ತಾಣವಾಗಿ…

Read More

ಬೆಂಗಳೂರು: ನಗರದ ಬಾಬುಸಾಬ್ ಪಾಳ್ಯದಲ್ಲಿ ನಾಲ್ಕು ಹಂತದ ಕಟ್ಟಡಕ್ಕೆ ಅನುಮತಿ ಪಡೆದು ಆರು ಹಂತದ ಕಟ್ಟಡ ಕಟ್ಟಿದ್ದರ ಪರಿಣಾಮ, ಕುಸಿತಗೊಂಡು 8 ಕಾರ್ಮಿಕರು ಸಾವನ್ನಪ್ಪಿದ್ದರು. ಈ ಸಂಬಂಧ ಬಿಬಿಎಂಪಿಯಿಂದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರಾದಂತ ವಿನಯ್.ಕೆ ಅವರನ್ನು ಅಮಾನತುಗೊಳಿಸಿ ಆದೇಶಿಸಲಾಗಿದೆ. ಈ ಕುರಿತಂತೆ ಬಿಬಿಎಂಪಿಯ ಉಪ ಆಯುಕ್ತರು ನಡವಳಿಯನ್ನು ಹೊರಡಿಸಿದ್ದು,  ವಿನಯ್ ಕೆ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು (ಹೊರಮಾವು ಉಪ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ತಮ್ಮ ವ್ಯಾಪ್ತಿಯ ವಾರ್ಡ್‌-25, (ಹೊಸ ವಾರ್ಡ್-86), ನಿವೇಶನ ಸಂಖ್ಯೆ: 24, 7ನೇ ‘ಬಿ’ ಅಡ್ಡರಸ್ತೆ, ಅಂಜನಾದ್ರಿ ಎನ್‌ಕ್ಷೇವ್‌, ಬಾಬುಸಾಬ್ ಪಾಳ್ಯ ಇಲ್ಲಿ ಕಟ್ಟಡದ ಮಾಲೀಕರು ಅನಧಿಕೃತ / ನಕ್ಷೆಗೆ ವ್ಯತಿರಿಕ್ತವಾಗಿ ಕಟ್ಟಡ ನಿರ್ಮಾಣ ಮಾಡುತ್ತಿದ್ದು, ಕಟ್ಟಡವನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕಾಯ್ದೆ- 2020ರ ಕಟ್ಟಡ ಉಪವಿಧಿಗಳನ್ನು ಉಲ್ಲಂಘಿಸಿ ನಿರ್ಮಾಣ ಮಾಡಿರುವ ಕಟ್ಟಡದ ಭಾಗಗಳನ್ನು ತೆರವುಗೊಳಿಸಬೇಕೆಂದು ಉಲ್ಲೇಖ-(1)ರಂತೆ ಬಿ.ಬಿ.ಎಂ.ಪಿ ಕಾಯ್ದೆ 2020ರ ನಿಯಮ 248 (3)ರ ಅನ್ವಯ ಸ್ಥಿರೀಕರಣ ಆದೇಶ ಹೊರಡಿಸಿರುತ್ತಾರೆ ಎಂದಿದ್ದಾರೆ. ನಂತರ ಸಿರೀಕರಣ ಆದೇಶ…

Read More

ಬೆಂಗಳೂರು: ವೈದ್ಯಕೀಯ ವ್ಯಾಸಂಗದ ನಿರೀಕ್ಷೆಯಲ್ಲಿದ್ದಂತ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಕರ್ನಾಟಕದಲ್ಲಿ ಹೊಸದಾಗಿ 11 ಸರ್ಕಾರಿ ವೈದ್ಯಕೀಯ ಕಾಲೇಜುಗಳನ್ನು ಸ್ಥಾಪಿಸುವುದಾಗಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಘೋಷಿಸಿದ್ದಾರೆ. ಬಡ ವಿದ್ಯಾರ್ಥಿಗಳ ವೈದ್ಯಕೀಯ ಶಿಕ್ಷಣದ ಕನಸನ್ನು ನನಸು ಮಾಡಬೇಕೆಂಬ ಉದ್ದೇಶ ನಮ್ಮ ಸರ್ಕಾರದ್ದಾಗಿದೆ. ಈಗಾಗಲೇ ರಾಜ್ಯದ 22 ಜಿಲ್ಲೆಗಳಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜುಗಳು ಕಾರ್ಯನಿರ್ವಹಿಸುತ್ತಿವೆ. ಇನ್ನುಳಿದ 11 ಜಿಲ್ಲೆಗಳಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜುಗಳನ್ನು ತೆರೆಯಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಶರಣಪ್ರಕಾಶ್‌ ಪಾಟೀಲ್‌ ತಿಳಿಸಿದ್ದಾರೆ. ತುಮಕೂರು, ದಾವಣಗೆರೆ, ಚಿತ್ರದುರ್ಗ, ಬಾಗಲಕೋಟೆ, ಕೋಲಾರ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ವಿಜಯಪುರ, ವಿಜಯನಗರ ಹಾಗೂ ರಾಮನಗರ ಜಿಲ್ಲೆಗಳಲ್ಲಿ ವೈದ್ಯಕೀಯ ಕಾಲೇಜುಗಳು ತಲೆ ಎತ್ತಲಿವೆ. https://twitter.com/KarnatakaVarthe/status/1849015207408091562 https://kannadanewsnow.com/kannada/karnataka-assembly-bypolls-kpcc-clarifies-that-list-of-congress-candidates-is-fake/ https://kannadanewsnow.com/kannada/another-good-news-for-the-rural-people-of-the-state-home-health-scheme-to-be-implemented-from-tomorrow/ https://kannadanewsnow.com/kannada/heavy-rains-in-bengaluru-deputy-cm-dk-shivakumar-forms-committee-to-resolve-issues/

Read More

ಬೆಂಗಳೂರು: ನಿರಂತರ ಮಳೆಯಿಂದಾಗಿ ಬೆಂಗಳೂರು ನಗರದಲ್ಲಿನ ಐಟಿ ಕಂಪೆನಿಗಳು ಸೇರಿದಂತೆ ಉದ್ಯಮಗಳ ಮೇಲೆ ಉಂಟಾಗಿರುವ ಗಂಭೀರ ಪರಿಣಾಮಗಳನ್ನು ಸರ್ಕಾರ ಅತ್ಯಂತ ತೀವ್ರವಾಗಿ ಗಮನಿಸುತ್ತಿದೆ. ಸಮಸ್ಯೆಯನ್ನು ಪ್ರಾಮುಖ್ಯತೆಯ ಮೇರೆಗೆ ಗಮನಿಸಿ ಬಗೆ ಹರಿಸಲು ಡಿಸಿಎಂ ಡಿ.ಕೆ ಶಿವಕುಮಾರ್ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಬೆಂಗಳೂರು ನಗರ ಮತ್ತು ನಗರದ ನಿವಾಸಿಗಳಿಗೆ ತೀವ್ರ ಸವಾಲುಗಳಿಗೆ ಕಾರಣವಾಗಿರುವ ವಾತಾವರಣ ವೈಪರೀತ್ಯದಿಂದಾಗಿ 92 ಮಿಮೀ ನಿಂದ 157 ಮಿಮೀ ನಷ್ಟು ಭಾರೀ ಮಳೆಯಾಗಿ ಜನಜೀವನ ಜರ್ಜರಿತವಾಗಿದೆ, ಇದರ ಪರಿಣಾಮದಿಂದಾಗಿ ಐಟಿ ಕಂಪೆನಿಗಳು ಹಾಗೂ ಉದ್ಯೋಗಿಗಳು ತೊಂದರೆಗೀಡಾಗಿದ್ದಾರೆ ಎಂಬುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮನಗೊಂಡು ಸೂಕ್ತ ಕ್ರಮಗಳನ್ನು ಕೈಗೊಳ್ಳಲು ನಿರ್ದೇಶಿಸಿದ್ದಾರೆ ಎಂದೂ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಅದರಂತೆ ಪರಿಸ್ಥಿತಿಯನ್ನು ಅವಲೋಕಿಸಿ ಸೂಕ್ತ ಪರಿಹಾರೋಪಾಯಗಳನ್ನು ಕಲ್ಪಿಸಲು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಧ್ಯಕ್ಷತೆಯಲ್ಲಿ ಸಮಿತಿಯೊಂದನ್ನು ರಚಿಸಲಾಗಿದ್ದು, ಈ ಸಮಿತಿಯು ಐಟಿ, ಬಿಟಿ ಮತ್ತು ಸ್ಟಾರ್ಟಪ್ ವಿಷನ್ ಗ್ರೂಪ್‌ಗಳ ಮುಖ್ಯಸ್ಥರನ್ನು…

Read More

ಬೆಂಗಳೂರು: ಕರ್ನಾಟಕದ ಮೂರು ವಿಧಾನಸಭಾ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿರುವುದಾಗಿ ಆದೇಶ ಕಾಪಿಯೊಂದು ವೈರಲ್ ಆಗಿತ್ತು. ಆದರೇ ಅದು ನಕಲಿ ಎಂಬುದಾಗಿ ಕೆಪಿಸಿಸಿ ಸ್ಪಷ್ಟ ಪಡಿಸಿದೆ. ಎಐಸಿಸಿ ಜನರಲ್ ಸೆಕ್ರೇಟರಿ ಕೆ.ಸಿ ವೇಣುಗೋಪಾಲ್ ಅವರು ಬಿಡುಗಡೆ ಮಾಡಿದ್ದಾರೆ ಎನ್ನಲಾದಂತ ಕರ್ನಾಟಕ ವಿಧಾನಸಭೆಯ 3 ಉಪ ಚುನಾವಣೆಗಳ ಅಭ್ಯರ್ಥಿಗಳ ಪಟ್ಟಿಯು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಅದರಲ್ಲಿ ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಗೆ ಸಿ.ಪಿ ಯೋಗೇಶ್ವರ್ ಗೆ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ನೀಡಲಾಗಿದೆ. ಶಿಗ್ಗಾವಿ ವಿಧಾನಸಭಾ ಉಪ ಚುನಾವಣೆಯ ಕ್ಷೇತ್ರಕ್ಕೆ ವೈಶಾಲಿ ಕುಲಕರ್ಣಿ ಅವರಿಗೆ ಟಿಕೆಟ್ ನೀಡಿದ್ದರೇ, ಸಂಡೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಅನ್ನಪೂರ್ಣ ತುಕಾರಾಂ ಅವರಿಗೆ ಟಿಕೆಟ್ ನೀಡಿರುವುದಾಗಿ ಘೋಷಲಾಗಿದೆ ಎಂದು ಹೇಳಲಾಗಿತ್ತು. ಈ ಬಗ್ಗೆ ಸ್ಪಷ್ಟನೆ ನೀಡಿರುವಂತ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷವು, ವೈರಲ್ ಆಗಿರುವಂತ ಪಟ್ಟಿಯು ನಕಲಿಯಾಗಿದೆ. ಇನ್ನೂ ಕಾಂಗ್ರೆಸ್ ಪಕ್ಷದಿಂದ ಕರ್ನಾಟಕದ ಮೂರು ವಿಧಾನಸಭಾ ಉಪ ಚುನಾವಣೆಯ ಕ್ಷೇತ್ರಗಳಿಗೆ ಪಟ್ಟಿಯನ್ನು ಬಿಡುಗಡೆ ಮಾಡಿಲ್ಲ…

Read More

ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ಶ್ರೀಕೃಷ್ಣನ ಪ್ರಕಾರ ಯಾರಿಗೆ ಪಿತೃಗಳ ಆಶೀರ್ವಾದ ದೊರೆಯುತ್ತದೆಯೋ ಅವರಿಗೆ ಜೀವನದಲ್ಲಿ ಉನ್ನತಿ ಎಂಬುದು ದೊರೆಯುತ್ತದೆ. ಮನುಷ್ಯರು ಪಿತೃಗಳ ನೆನಪಿಗೋಸ್ಕರ ಅವರ ಫೋಟೋಗಳನ್ನು ಗೋಡೆಯ ಮೇಲೆ ಹಾಕುತ್ತಾರೆ. ಆದರೆ ಫೋಟೋಗಳನ್ನು ಗೋಡೆಯ ಮೇಲೆ ಹಾಕಬೇಕಾದರೆ ದಿಕ್ಕಿನ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ. ಈ ಒಂದು ಕಾರಣದಿಂದ ಪಿತೃಗಳಿಗೆ ಬೇಸರ ಉಂಟಾಗುತ್ತದೆ. ವಾಸ್ತು ಶಾಸ್ತ್ರದ ಪ್ರಕಾರ ಪೂರ್ವಜರ ಅಥವಾ ಪಿತೃಗಳ ಫೋಟೋವನ್ನು ಗೋಡೆಯ ಮೇಲೆ ಅಂಟಿಸಿದರೆ ಒಳ್ಳೆಯ ಫಲಗಳು ಲಭಿಸುತ್ತದೆ. ಒಂದು ವೇಳೆ ತಪ್ಪಾದ ದಿಕ್ಕಿನಲ್ಲಿ ಫೋಟೋಗಳನ್ನು ಹಾಕಿದರೆ ಅದರಿಂದ ನಕಾರಾತ್ಮಕ ಶಕ್ತಿ ಹೆಚ್ಚಾಗಿ ತೊಂದರೆಯನ್ನು ಸಹ ಅನುಭವಿಸಬೇಕಾಗುತ್ತದೆ. ಹಾಗಾದರೆ ವಾಸ್ತು ಶಾಸ್ತ್ರದ ಪ್ರಕಾರ ಪೂರ್ವಜರ ಫೋಟೋಗಳನ್ನು ಯಾವ ದಿಕ್ಕಿನಲ್ಲಿ ಇಡಬೇಕು ಎಂಬುದರ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ. ಫೋಟೋದಲ್ಲಿರುವ ಪೂರ್ವಜರು ಖುಷಿಯಿಂದ ನಗುನಗುತ್ತಾ ಇರುವಂತಹ ಫೋಟೋವನ್ನು ಗೋಡೆಯ ಮೇಲೆ ಹಾಕಬೇಕು.…

Read More

ಬೆಂಗಳೂರು: ರಾಜ್ಯದ ಮೂರು ವಿಧಾನಸಭಾ ಉಪ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಘೋಷಣೆ ಮಾಡಲಾಗಿದೆ. ಇಂದು ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡ ಸೈನಿಕ ಸಿ.ಪಿ ಯೋಗೇಶ್ವರ್ ಗೆ ಚನ್ನಪಟ್ಟಣಕ್ಕೆ ಟಿಕೆಟ್ ಘೋಷಣೆ ಮಾಡಲಾಗಿದೆ. ಈ ಸಂಬಂಧ ಎಐಸಿಸಿಯಿಂದ ಆದೇಶ ಹೊರಡಿಸಲಾಗಿದ್ದು, ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಗೆ ಸಿ.ಪಿ ಯೋಗೇಶ್ವರ್ ಗೆ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ನೀಡಿರುವುದಾಗಿ ತಿಳಿಸಿದೆ. ಇನ್ನೂ ಶಿಗ್ಗಾವಿ ವಿಧಾನಸಭಾ ಉಪ ಚುನಾವಣೆಯ ಕ್ಷೇತ್ರಕ್ಕೆ ವೈಶಾಲಿ ಕುಲಕರ್ಣಿ ಅವರಿಗೆ ಟಿಕೆಟ್ ನೀಡಿದ್ದರೇ, ಸಂಡೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಅನ್ನಪೂರ್ಣ ತುಕಾರಾಂ ಅವರಿಗೆ ಟಿಕೆಟ್ ನೀಡಿರುವುದಾಗಿ ಘೋಷಿಸಿದೆ. https://kannadanewsnow.com/kannada/another-good-news-for-the-rural-people-of-the-state-home-health-scheme-to-be-implemented-from-tomorrow/ https://kannadanewsnow.com/kannada/kannada-minds-should-unite-for-the-success-of-mandya-sahitya-sammelana-minister-n-chaluvarayaswamy/

Read More

ಬೆಂಗಳೂರು : ಮಂಡ್ಯ ಜಿಲ್ಲೆಯಲ್ಲಿ ಡಿ.20 ರಿಂದ 22ರವರಗೆ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅತ್ಯಂತ ಯಶಸ್ವಿಯಾಗಿ ನಡೆಯಲು ಕನ್ನಡದ ಎಲ್ಲಾ ಮನಸ್ಸುಗಳು ಒಂದಾಗಿ ಶ್ರಮಿಸಬೇಕಿದೆ ಎಂದು ಮಂಡ್ಯ ಜಿಲ್ಲಾ ಉಸ್ತವಾರಿ ಸಚಿವರು ಹಾಗೂ ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ತಿಳಿಸಿದರು. ವಿಕಾಸ ಸೌಧದ ತಮ್ಮ ಕೊಠಡಿಯಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕಾರ್ಯಕಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮಂಡ್ಯ ಜಿಲ್ಲೆಯ ಸೊಗಡಿನ ಜೊತೆಗೆ ರಾಜ್ಯದ ಬದುಕನ್ನು ಬೆಸೆಯುವ ಸ್ವರೂಪದಲ್ಲಿ ಕಾರ್ಯಕ್ರಮ ಆಯೋಜಿಸಬೇಕಿದೆ. ಇದರಲ್ಲಿ ಜಿಲ್ಲೆಯ ಎಲ್ಲಾ ಜನ ಪ್ರತಿನಿಧಿಗಳು ಸಂಘ ಸಂಸ್ಥೆಗಳು, ಸಾಹಿತಿಗಳು, ಚಿಂತಕರು, ಅಧಿಕಾರಿ ಸಿಬ್ಬಂದಿ ಹೆಚ್ಚಿನ ಕಾಳಜಿ, ಪರಿಶ್ರಮ ವಹಿಸಬೇಕು ಎಂದರು. ಮಂಡ್ಯದಲ್ಲಿ ನಡೆಯುವ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಆರ್ಥಿಕ ಇಲಾಖೆಯಿಂದ 25 ಕೋಟಿ ರೂ ಬಿಡುಗಡೆಗೆ ಶಿಫಾರಸು ಮಾಡಿದೆ. ಆದಷ್ಟು ಅದರ ಇತಿ ಮಿತಿಯೊಳಗೆ ವೆಚ್ಚ ನಿಯಂತ್ರಣ ಮಾಡಿಕೊಳ್ಳುವುದು ಸೂಕ್ತ ಎಂದು ಚಲುವರಾಯಸ್ವಾಮಿ ಅವರು…

Read More

ಬೆಂಗಳೂರು : “ಕೆಂಗೇರಿ ಕೆರೆಯಲ್ಲಿ ಮುಳುಗಿ ಮೃತಪಟ್ಟ ಇಬ್ಬರು ಮಕ್ಕಳ ಕುಟುಂಬಕ್ಕೆ ಬಿಬಿಎಂಪಿ ವತಿಯಿಂದ 5 ಲಕ್ಷ ಪರಿಹಾರ, ಮನೆಗೆ ನೀರು ನುಗ್ಗಿ ತೊಂದರೆ ಉಂಟಾಗಿರುವವರಿಗೆ ತಲಾ 10 ಸಾವಿರ ಪರಿಹಾರ, ವಸತಿ ಇಲ್ಲದವರಿಗೆ ವಾಸಿಸಲು ತಾತ್ಕಾಲಿಕ ವಸತಿ ಹಾಗೂ ಊಟದ ವ್ಯವಸ್ಥೆ ಮಾಡಿಕೊಡಲಾಗುವುದು ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದ್ದಾರೆ. ಇದರ ಜತೆಗೆ ನಗರದಾದ್ಯಂತ ಮುಲಾಜಿಲ್ಲದೆ ರಾಜಕಾಲುವೆ ಒತ್ತುವರಿ ತೆರವಿಗೆ ಸೂಚನೆ ನೀಡಲಾಗಿದ್ದು, ಮಳೆ ನೀರುಗಾಲುವೆಗಳನ್ನು ಸ್ವಚ್ಚಗೊಳಿಸಿ ಸರಾಗವಾಗಿ ನೀರು ಹರಿಯುವಂತೆ ಮಾಡಲು ವಿಶ್ವಬ್ಯಾಂಕಿನಿಂದ 1 ಸಾವಿರ ಕೋಟಿ ಸಾಲ ಪಡೆದು ಈಗಾಗಲೇ ಕೆಲಸ ಮಾಡಲಾಗುತ್ತಿದೆ” ಎಂದೂ ತಿಳಿಸಿದ್ದಾರೆ. ಮಳೆಯಿಂದ ಸಮಸ್ಯೆಗೆ ಒಳಗಾಗಿರುವ ಯಲಹಂಕದ ಕೇಂದ್ರಿಯ ವಿಹಾರ ವಸತಿ ಸಮುಚ್ಚಯ, ಬ್ಯಾಟರಾಯನಪುರದ ಮರಿಯಣ್ಣಪಾಳ್ಯ, ಕೆ ಆರ್ ಪುರಂನ ಹೊರಮಾವಿನ ಶ್ರೀ ಸಾಯಿ ಬಡಾವಣೆಗೆ ಶಿವಕುಮಾರ್ ಅವರು ಪಾಲಿಕೆ ಅಧಿಕಾರಿಗಳ ತಂಡದೊಂದಿಗೆ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಪರಿಹಾರ ಕಾರ್ಯ ವೀಕ್ಷಣೆ ಜತೆಗೆ ಅಪಾರ್ಟ್ ಮೆಂಟ್…

Read More