Subscribe to Updates
Get the latest creative news from FooBar about art, design and business.
Author: kannadanewsnow09
ನವದೆಹಲಿ: ಭಾರತೀಯ ರೈಲ್ವೆಯು ಡಿಸೆಂಬರ್ 21, 2025 ರ ಭಾನುವಾರದಂದು ಪ್ರಯಾಣಿಕರ ದರಗಳಲ್ಲಿ ಅಲ್ಪ ಹೆಚ್ಚಳವನ್ನು ಘೋಷಿಸಿತು. ಇದು ರಾಷ್ಟ್ರೀಯ ಸಾರಿಗೆದಾರರ ಹೆಚ್ಚುತ್ತಿರುವ ಕಾರ್ಯಾಚರಣೆಯ ವೆಚ್ಚವನ್ನು ಪರಿಹರಿಸುವ ಗುರಿಯನ್ನು ಹೊಂದಿದೆ. ಪರಿಷ್ಕೃತ ಸುಂಕ ರಚನೆಯು ಡಿಸೆಂಬರ್ 26, 2025 ರಿಂದ ಕಾರ್ಯರೂಪಕ್ಕೆ ಬರಲಿದೆ, ಇದು ಜುಲೈನಲ್ಲಿ ಹಿಂದಿನ ದರ ಹೆಚ್ಚಳದ ನಂತರ ಪ್ರಸ್ತುತ ಹಣಕಾಸು ವರ್ಷದಲ್ಲಿ ಎರಡನೇ ದರ ಪರಿಷ್ಕರಣೆಯನ್ನು ಸೂಚಿಸುತ್ತದೆ. ಹೊಸ ದರ ರಚನೆಯ ಒಂದು ನೋಟ ಈ ಹೆಚ್ಚಳವು “ಸೀಮಿತ” ಮತ್ತು ದೈನಂದಿನ ಪ್ರಯಾಣಿಕರು ಮತ್ತು ಕಡಿಮೆ ದೂರದ ಪ್ರಯಾಣಿಕರನ್ನು ರಕ್ಷಿಸಲು ನಿರ್ದಿಷ್ಟವಾಗಿ ವಿನ್ಯಾಸಗೊಳಿಸಲಾಗಿದೆ ಎಂದು ಸಚಿವಾಲಯ ಸ್ಪಷ್ಟಪಡಿಸಿದೆ. ವರ್ಗ- ಪರಿಷ್ಕೃತ ದರ- ದೂರ ಮಿತಿ ಉಪನಗರ (ಸ್ಥಳೀಯ) ರೈಲುಗಳು- ಯಾವುದೇ ಹೆಚ್ಚಳವಿಲ್ಲ- ಎಲ್ಲಾ ದೂರಗಳು ಮಾಸಿಕ ಸೀಸನ್ ಟಿಕೆಟ್ಗಳು (MST)- ಯಾವುದೇ ಹೆಚ್ಚಳವಿಲ್ಲ- ಎಲ್ಲಾ ದೂರಗಳು ಸಾಮಾನ್ಯ ವರ್ಗ (ಕಡಿಮೆ ದೂರ)- ಯಾವುದೇ ಹೆಚ್ಚಳವಿಲ್ಲ- 215 ಕಿ.ಮೀ ವರೆಗೆ ಸಾಮಾನ್ಯ ವರ್ಗ (ದೀರ್ಘ…
ಬೆಂಗಳೂರು: ಇಂದಿನಿಂದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನವನ್ನು ಸರ್ಕಾರ ಆರಂಭಿಸಿತ್ತು. ಮೊದಲ ದಿನವೇ ಬರೋಬ್ಬರಿ 60.16 ಲಕ್ಷ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆಯನ್ನು ಹಾಕಲಾಗಿದೆ. ಈ ಬಗ್ಗೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ನೀಡಿದ್ದು, ಡಿ.21ರ ಇಂದು 62.40 ಲಕ್ಷ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆಯನ್ನು ಹಾಕೋದಕ್ಕೆ ಗುರಿಯನ್ನು ಹೊಂದಲಾಗಿತ್ತು. ಆದರೇ 60.16 ಲಕ್ಷ ಮಕ್ಕಳಿಗೆ ಹಾಕಲು ಸಾಧ್ಯವಾಗಿದೆ ಎಂದಿದೆ. 62,40,114 ಲಕ್ಷ ಮಕ್ಕಳಿಗೆ ಪೋಲಿಯೋ ಲಸಿಕೆ ಗುರಿಯಲ್ಲಿ 60,16,322 ಲಕ್ಷ ಮಕ್ಕಳಿಗೆ ಪೋಲಿಯೋ ಹನಿಯನ್ನು ಹಾಕಲಾಗಿದೆ. ಮೊದಲ ದಿನವೇ ಶೇ.96ರಷ್ಟು ಗುರಿಯನ್ನು ಸಾಧಿಸಲಾಗಿದೆ ಎಂಬುದಾಗಿ ಮಾಹಿತಿ ನೀಡಿದೆ. ಅಂದಹಾಗೇ ಬಾಗಲಕೋಟೆಯಲ್ಲಿ 2,14,962 ಮಕ್ಕಳಿಗೆ, ಬಳ್ಳಾರಿಯಲ್ಲಿ 1,91,995, ಬೆಂಗಳೂರು ಗ್ರಾಮಾಂತರದಲ್ಲಿ 1,01,358, ಬಿಬಿಎಂಪಿ ವ್ಯಾಪ್ತಿಯಲ್ಲಿ 10,77,134, ಶಿವಮೊಗ್ಗ ಜಿಲ್ಲೆಯಲ್ಲಿ 1,32,196 ಮಕ್ಕಳು ಸೇರಿದಂತೆ ರಾಜ್ಯಾಧ್ಯಂತ 60,16,322 ಮಂದಿ 5 ವರ್ಷದೊಳಗಿನ ಮಕ್ಕಳಿಗೆ ಪಲ್ಸ್ ಪೊಲೀಯೋ ಲಸಿಕೆ ಹಾಕಿರುವುದಾಗಿ ತಿಳಿಸಿದೆ. ವರದಿ; ವಸಂತ ಬಿ ಈಶ್ವರಗೆರೆ… ಸಂಪಾದಕರು..…
ಶಿವಮೊಗ್ಗ: ಸುಪ್ರೀಂ ಕೋರ್ಟ್ ಶಿಕ್ಷಣದಲ್ಲಿ ಗುಣಾತ್ಮಕ ಬದಲಾವಣೆ ತರೋದಕ್ಕೆ ನಿವೃತ್ತಿ ಅಂಚಿನಲ್ಲಿರೋರನ್ನು ಹೊರತುಪಡಿಸಿ, ಉಳಿದ ಎಲ್ಲಾ ಶಿಕ್ಷಕರು ಶಿಕ್ಷಕರ ಅರ್ಹತಾ ಪರೀಕ್ಷೆ ( Teacher Eligibility Test-TET) ಬರೆಯಬೇಕೆಂದು ಆದೇಶಿಸಿದೆ. ಈ ಆದೇಶವನ್ನು ಪ್ರಶ್ನಿಸಿ ಸರ್ಕಾರವು ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸುವುದಾಗಿ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಸುಪ್ರೀಂ ಕೋರ್ಟ್ ಆದೇಶ ಸರಿಯಾಗಿದೆ. ಆದರೇ ಈಗ ಇರುವಂತ ಶಿಕ್ಷಕರು 20, 30 ವರ್ಷಗಳ ಹಿಂದೆ ನೇಮಕಗೊಂಡಿದ್ದಾರೆ. ಅವರು ಇಂದಿನ ಕಾಲಕ್ಕೆ ತಕ್ಕಂತೆ ಬದಲಾವಣೆ ಆಗಬೇಕು. ಈಗ ರಾಜ್ಯ ಸರ್ಕಾರ ಮುಂದಿನ 25 ವರ್ಷವನ್ನು ಗಮನದಲ್ಲಿ ಇಟ್ಟುಕೊಂಡು ಶಿಕ್ಷಕರನ್ನು ನೇಮಿಸಿಕೊಳ್ಳುತ್ತದೆ. ಸುಪ್ರೀಂ ಕೋರ್ಟ್ ಮಕ್ಕಳು ದಡ್ಡರಾಗುತ್ತಿದ್ದಾರೆ ಎಂದು ತಿಳಿದು ಟಿಇಟಿ ಬರೆಯಲು ಹೇಳಿರಬೇಕು ಎಂದರು. ಫಲಿತಾಂಶ ಸುಧಾರಣೆಯಲ್ಲಿ ಶ್ರಮಿಸಿದ ಶಿಕ್ಷಕರಿಗೆ ಅಭಿನಂದನೆ ಸಲ್ಲಿಸಿದ ಅವರು, ಶಾಲೆಗಳಲ್ಲಿ ಫಲಿತಾಂಶ ಸುಧಾರಣೆ ಎಂಬುದು ಓರ್ವ ಶಿಕ್ಷಕರಿಂದ ಮಾತ್ರ ಸಾಧ್ಯವಾಗುವುದಿಲ್ಲ ಬದಲಾಗಿ ಶಿಕ್ಷಕರ ಸಂಘಟಿತ ಶ್ರಮದಿಂದ…
ವಿಜಯಪುರ: `ಊರು ಉಪಕಾರ ಬಲ್ಲದೇ, ಹೆಣ ಶೃಂಗಾರ ಬಲ್ಲದೇ?’ ಎನ್ನುವುದೊಂದು ಗಾದೆಮಾತು. `ವೇದ ಸುಳ್ಳಾದರೂ ಗಾದೆ ಸುಳ್ಳಾಗದು’ ಎನ್ನುವುದು ಇನ್ನೊಂದು ಲೋಕೋಕ್ತಿ. ಆದರೆ, ಗಾದೆ ಕೂಡ ಒಮ್ಮೊಮ್ಮೆ ಸುಳ್ಳಾಗುತ್ತದೆ. ಇದಕ್ಕೆ ಭಾನುವಾರ ಇಲ್ಲಿ ನಡೆದ ಒಂದು ಅಪರೂಪದ ಕಾರ್ಯಕ್ರಮವೇ ಸಾಕ್ಷಿ. ಕೃತಜ್ಞತೆಯ ರೂಪದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲರಿಗೆ ರೈತಬಂಧುಗಳು ಸಮರ್ಪಿಸಿದ ತುಲಾಭಾರ ಇದಕ್ಕೆ ಕಾರಣವಷ್ಟೆ! ಇಂತಹ ಚಂದದ ಕಾರ್ಯಕ್ರಮಕ್ಕೆ ವೇದಿಕೆ ಒದಗಿಸಿದ್ದು, ಇಲ್ಲಿನ ಸಾತಲಿಂಗಯ್ಯ ಶಂಕರಯ್ಯ ಹಿರೇಮಠ ಅವರ ತೋಟದಲ್ಲಿ ಏರ್ಪಡಿಸಿದ್ದ ರೈತ ಕ್ಷೇತೋತ್ಸವ. ಇದರ ಸಾನ್ನಿಧ್ಯ ವಹಿಸಿದ್ದು ಇಲ್ಲಿನ ಹಿರೇಮಠದ ಶಿವಬಸವ ಶಿವಾಚಾರ್ಯ ಶ್ರೀಗಳು. ಇದನ್ನು ಆಯೋಜಿಸಿದ್ದು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ತಿಕೋಟಾ ತಾಲ್ಲೂಕು ಘಟಕ. ಬೋಧನೆಗಿಂತ ಪಾಲನೆಗೆ ಯಾವತ್ತೂ ಕಿಮ್ಮತ್ತು ಜಾಸ್ತಿ! ಎಂ ಬಿ ಪಾಟೀಲರು ಹಿಂದೆ 2013-18ರಲ್ಲಿ ಜಲಸಂಪನ್ಮೂಲ ಸಚಿವರಾಗಿ ತಿಕೋಟಾ ಪ್ರದೇಶಕ್ಕೆ ನೀಡಿರುವ ಕೊಡುಗೆ ಅಮೂಲ್ಯ. ಅವರ ಆಸಕ್ತಿಯಿಂದಾಗಿ ರೈತರ ಬಾಳು ಹಸನಾಗಿದೆ; ಒಂದು ಕಾಲದ…
ನಮಸ್ಕಾರ ಬಂಧುಗಳೇ ನಾವು ನಿಮ್ಮ ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಬಂಧುಗಳೇ ಪುರುಷ ಮತ್ತು ಮಹಿಳೆ ವಿವಾಹವಾಗಲು ಜಾತಕ ಓದುವುದು ಅನಾದಿ ಕಾಲದಿಂದಲೂ ನಾವು ಸಂಪ್ರದಾಯವಾಗಿ ಅನುಸರಿಸಿಕೊಂಡು ಬರುತ್ತಿರುವ ಪದ್ಧತಿಯಾಗಿದೆ. ಆ ಜಾತಕ ಹೊಂದಾಣಿಕೆಯ ವಾಸ್ಯ ಹೊಂದಾಣಿಕೆ ಎಂಬ ಒಂದು ಅಂಶವು ಕೆಲವರಿಗೆ ಸರಿಹೊಂದುವುದಿಲ್ಲ. ಹೀಗಿರುವಾಗ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಮದುವೆಯಾಗಬಾರದು. ಪುರುಷ ಮತ್ತು ಮಹಿಳೆ ಅಂತಹ ಹೊಂದಾಣಿಕೆಯಿಲ್ಲದೆ ಮದುವೆಯಾದಾಗ, ಅವರ ಜೀವನವು ಕಹಿಯಾಗುತ್ತದೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ಆದರೆ ಇಂದಿನ ಪರಿಸ್ಥಿತಿಯೇ…
ಶಿವಮೊಗ್ಗ : ಹಲವು ವರ್ಷಗಳಿಂದ ಸಾಗರಲನ್ನು ಜಿಲ್ಲೆ ಮಾಡಬೇಕು ಎಂಬ ಹಕ್ಕೊತ್ತಾಯವಿದೆ. ಅದಕ್ಕೆ ಪೂರಕವಾಗಿ ಜಿಲ್ಲಾ ಹೋರಾಟ ಸಮಿತಿ ಹೋರಾಟ ಮಾಡುತ್ತಾ ಬರುತ್ತಿದೆ. ಡಿ.31ರೊಳಗೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸದೆ ಹೋದಲ್ಲಿ, ಸಾಗರ ಜಿಲ್ಲೆ ಮಾಡಬೇಕೆಂಬ ಪ್ರಸ್ತಾಪ ನೆನಗುದಿಗೆ ಬಿದ್ದಂತೆ ಆಗಲಿದೆ ಎಂದು ಮಾಜಿ ಸಚಿವ ಹರತಾಳು ಹಾಲಪ್ಪ ಹೇಳಿದ್ದಾರೆ. ಇಂದು ಶಿವಮೊಗ್ಗದ ಸಾಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಡಿಸೆಂಬರ್.31ರ ಒಳಗಾಗಿ ಕೇಂದ್ರ ಸರ್ಕಾರ ಹೊಸ ಜಿಲ್ಲೆಯ ಪ್ರಸ್ತಾವನೆ ಸಲ್ಲಿಸಲು ರಾಜ್ಯಗಳಿಗೆ ಪತ್ರ ಬರೆದಿದೆ. ಒಂದೊಮ್ಮೆ ಜಿಲ್ಲೆ ಪ್ರಸ್ತಾಪ ರಾಜ್ಯಗಳಿಂದ ಕಳಿಸದೆ ಹೋದಲ್ಲಿ ಜನಗಣತಿ, ಜಾತಿಗಣತಿ ಮುಗಿಯುವವರೆಗೂ ಹೊಸ ಜಿಲ್ಲೆ ಬಗ್ಗೆ ಚರ್ಚೆ ನಡೆಯುವುದಿಲ್ಲ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸಾಗರ ಜಿಲ್ಲೆ ಮಾಡುವ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರಕ್ಕೆ ತಕ್ಷಣ ಕಳಿಸಬೇಕು ಎಂದು ಒತ್ತಾಯಿಸಿದರು. ಶಿವಮೊಗ್ಗ ಜಿಲ್ಲೆ ಹೊರತುಪಡಿಸಿದರೆ ಜಿಲ್ಲೆಯಾಗುವ ಸಾಧ್ಯತೆ ಇರುವುದು ಸಾಗರ ಉಪವಿಭಾಗ ಕೇಂದ್ರಕ್ಕೆ ಮಾತ್ರ. ಸಾಗರ, ಹೊಸನಗರ, ಸೊರಬ ಸೇರಿ ಮಲೆನಾಡು ಜಿಲ್ಲೆ ಮಾಡಲು ಅಗತ್ಯ ವಾತಾವರಣ ಇದೆ.…
ಶಿವಮೊಗ್ಗ : ಐದು ವರ್ಷದೊಳಗಿನ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸುವ ಮೂಲಕ ಅವರನ್ನು ಅಂಗವೈಕಲ್ಯದಿoದ ದೂರ ಇರಿಸಲು ಸಾಧ್ಯವಿದೆ ಎಂದು ಸಾಗರ ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ತಿಳಿಸಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಉಪವಿಭಾಗೀಯ ಆಸ್ಪತ್ರೆಯಲ್ಲಿ ಭಾನುವಾರ ಆರೋಗ್ಯ ಇಲಾಖೆ ವತಿಯಿಂದ ಏರ್ಪಡಿಸಿದ್ದ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಮಕ್ಕಳಿಗೆ ಹನಿ ಹಾಕುವ ಮೂಲಕ ಉದ್ಘಾಟಿಸಿ ಮಾತನಾಡಿದಂತ ಅವರು, ಮಕ್ಕಳಿಗೆ ಲಸಿಕೆ ಹಾಕಿಸಲು ಪೋಷಕರು ಹಿಂದೇಟು ಹಾಕಬೇಡಿ. ದೇಶದಲ್ಲಿ ಪಲ್ಸ್ ಪೋಲಿಯೋ ಲಸಿಕೆ ಹಾಕುವುದು ಪ್ರಾರಂಭವಾದ ನಂತರ ಮಕ್ಕಳ ಅಂಗವೈಕಲ್ಯ ಪ್ರಮಾಣ ಕಡಿಮೆಯಾಗಿದೆ. ಕಡ್ಡಾಯವಾಗಿ ಐದು ವರ್ಷದೊಳಗಿನ ಮಕ್ಕಳಿಗೆ ಲಸಿಕೆ ಹಾಕಿಸಬೇಕು. ದೇಶದ ಭವಿಷ್ಯವಾಗಿರುವ ಮಕ್ಕಳನ್ನು ಈಗಿನಿಂದಲೆ ಜೋಪಾನವಾಗಿ ನೋಡಿಕೊಳ್ಳುವುದು ನಮ್ಮೆಲ್ಲರ ಹೊಣೆಯಾಗಿದೆ. ಉಪವಿಭಾಗೀಯ ಆಸ್ಪತ್ರೆ ಸೇರಿ ಪ್ರಾಥಮಿಕ ಆರೋಗ್ಯ ಕೇಂದ್ರ, ಅಂಗನವಾಡಿ ಇನ್ನಿತರೆ ಕಡೆಗಳಲ್ಲಿ ಪೊಲೀಯೋ ಲಸಿಕೆ ಹಾಕುತ್ತಿದ್ದು ಪೋಷಕರು ಇದರ ಪ್ರಯೋಜನ ಪಡೆಯಬೇಕು ಎಂದರು. ಈ ವೇಳೆ ಸಿವಿಲ್ ಸರ್ಜನ್ ಡಾ.ನಾಗರಾಜ್, ಕಾರ್ಯನಿರ್ವಾಹಣಾಧಿಕಾರಿ ಶಿವಪ್ರಕಾಶ್, ಡಾ.ಶ್ರೀನಿವಾಸ್,…
ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಭಾನುವಾರ ರೋಜ್ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) (ವಿಬಿ-ಜಿ ರಾಮ್ ಜಿ) ಮಸೂದೆಗೆ ತಮ್ಮ ಒಪ್ಪಿಗೆ ನೀಡಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವಾಲಯ ತಿಳಿಸಿದೆ. ವಿರೋಧ ಪಕ್ಷದ ಪ್ರತಿಭಟನೆಗಳ ನಡುವೆಯೂ ವಿಬಿ-ಜಿ ರಾಮ್ ಜಿ ಮಸೂದೆ, 2025 ಅನ್ನು ಸಂಸತ್ತು ಅಂಗೀಕರಿಸಿತು. ಇದು ಅಸ್ತಿತ್ವದಲ್ಲಿರುವ ಗ್ರಾಮೀಣ ಉದ್ಯೋಗ ಕಾನೂನು, ಎಂಜಿಎನ್ಆರ್ಇಜಿಎ ಅನ್ನು ಬದಲಿಸಲು ಪ್ರಯತ್ನಿಸುತ್ತದೆ ಮತ್ತು ಪ್ರತಿ ಹಣಕಾಸು ವರ್ಷಕ್ಕೆ ಗ್ರಾಮೀಣ ಕುಟುಂಬಕ್ಕೆ 125 ದಿನಗಳ ವೇತನ ಉದ್ಯೋಗವನ್ನು ಖಾತರಿಪಡಿಸುತ್ತದೆ. ಸರ್ಕಾರದ ಪ್ರಕಾರ, ಹೊಸ ಯೋಜನೆಯು ‘ವಿಕ್ಷಿತ್ ಭಾರತ್ 2047’ ರ ರಾಷ್ಟ್ರೀಯ ದೃಷ್ಟಿಕೋನಕ್ಕೆ ಅನುಗುಣವಾಗಿ ಗ್ರಾಮೀಣಾಭಿವೃದ್ಧಿ ಚೌಕಟ್ಟನ್ನು ಸ್ಥಾಪಿಸುವ ಗುರಿಯನ್ನು ಹೊಂದಿದೆ.
ನವದೆಹಲಿ: ಗ್ರಾಮೀಣ ಉದ್ಯೋಗ ನೀತಿಯಲ್ಲಿ ಮಹತ್ವದ ಮೈಲಿಗಲ್ಲು ತರುವ ಪರಿವರ್ತನಾತ್ಮಕ ವಿಕಸಿತ ಭಾರತ – ರೋಜ್ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) ಖಾತ್ರಿ (ವಿಬಿ – ಜಿ ರಾಮ್ ಜಿ) ಮಸೂದೆ 2025ಕ್ಕೆ ಭಾರತದ ರಾಷ್ಟ್ರಪತಿ ಅಂಕಿತ ಹಾಕಿದ್ದಾರೆ. ಈ ಕಾಯ್ದೆ ಗ್ರಾಮೀಣ ಕುಟುಂಬಗಳಿಗೆ ಪ್ರತಿ ಹಣಕಾಸು ವರ್ಷದಲ್ಲಿ 125 ದಿನಗಳ ವೇತನ ಸಹಿತ ಉದ್ಯೋಗಖಾತ್ರಿಯನ್ನು ಖಚಿತಪಡಿಸುತ್ತದೆ ಮತ್ತು ಸಬಲೀಕರಣವನ್ನು ಉತ್ತೇಜಿಸುತ್ತದೆ. ಎಲ್ಲರನ್ನೊಳಗೊಂಡ ಪ್ರಗತಿ, ಅಭಿವೃದ್ಧಿ ಉಪಕ್ರಮಗಳ ಸಮನ್ವಯತೆ ಮತ್ತು ಗರಿಷ್ಠ ಸರ್ಕಾರಿ ಪ್ರಯೋಜನಗಳ ವಿತರಣೆಯ ಮೂಲಕ ಸಮೃದ್ಧ, ಸ್ಥಿತಿಸ್ಥಾಪಕತ್ವ ಮತ್ತು ಸ್ವಾವಲಂಬಿ ಗ್ರಾಮೀಣ ಭಾರತ ನಿರ್ಮಾಣಕ್ಕೆ ಭದ್ರ ಬುನಾದಿಯನ್ನು ಬಲವರ್ಧನೆಗೊಳಿಸಲಿದೆ. ಈ ಮೊದಲು ಸಂಸತ್, ವಿಕಸಿತ ಭಾರತ – ರೋಜ್ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) ಖಾತ್ರಿ (ವಿಬಿ – ಜಿ ರಾಮ್ ಜಿ) ಮಸೂದೆ 2025ಗೆ ಅನುಮೋದನೆ ನೀಡಿತ್ತು. ಆ ಮೂಲಕ ಭಾರತದ ಗ್ರಾಮೀಣ ಉದ್ಯೋಗ ಮತ್ತು ಅಭಿವೃದ್ಧಿ ಚೌಕಟ್ಟಿನ ನಿರ್ಣಾಯಕ ಸುಧಾರಣೆಗೆ ಅನುವು ಮಾಡಿಕೊಟ್ಟಿತು. ಈ ಕಾಯ್ದೆ 2005ರ…
ಗದಗ: ರಾಜ್ಯ ಸರ್ಕಾರ ಎಲ್ಲ ರಂಗದಲ್ಲಿಯೂ ವಿಫಲವಾಗಿದ್ದು, ಎಲ್ಲ ಇಲಾಖೆಗಳಲ್ಲಿ ಭ್ರಷ್ಟಾಚಾರ ಹೆಚ್ಚಾಗಿದ್ದು, ಅದರ ವಿರುದ್ಧ ಮಾತನಾಡದಂತೆ ವಿರೋಧ ಪಕ್ಷ, ರೈತರು, ಜನ ಸಾಮಾನ್ಯರನ್ನು ದಮನ ಮಾಡಲು ವ್ಯಕ್ತಿಯ ಸ್ವಾತಂತ್ರ್ಯ ಹರಣ ಮಾಡಲು ಸಂವಿಧಾನ ವಿರುದ್ಧ ದ್ವೇಷ ಭಾಷಣ ನಿಯಂತ್ರಣ ಕಾನೂನು ತಂದಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಗದಗನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಯಾವುದೇ ರೀತಿಯ ಅಭಿವೃದ್ಧಿ ಮಾಡಿಲ್ಲ. ಯಾವ ಇಲಾಖೆಯಲ್ಲಿಯೂ ಕೆಲಸ ಆಗುತ್ತಿಲ್ಲ. ಭ್ರಷ್ಟಾಚಾರ ಹೆಚ್ಚಾಗಿದೆ. ರಾಜ್ಯವನ್ನು ದಿವಾಳಿ ಮಾಡಿದ್ದಾರೆ. ಜನರು ಇದನ್ನು ವಿರೋಧ ಮಾಡಬಾರದು ಎಂದು ದ್ವೇಷ ಭಾಷಣದ ವಿರುದ್ಧ ಕಾನೂನು ಮಾಡಿದ್ದಾರೆ. ಕಾಂಗ್ರೆಸ್ ನವರೇ ಹೆಚ್ಚು ದ್ವೇಷ ಭಾಷಣ ಮಾಡಿದ್ದಾರೆ. ಈಗಾಗಲೇ ದ್ವೇಷ ಭಾಷಣ ಮಾಡುವುದನ್ನು ನಿಯಂತ್ರಿಸಲು ಬಿಎನ್ಎಸ್ ಕಾನೂನಿದೆ. ಇವರು ವಿರೋಧ ಪಕ್ಷ, ರೈತರನ್ನು, ಜನ ಸಾಮಾನ್ಯರನ್ನು ದಮನ ಮಾಡಲು ವ್ಯಕ್ತಿಯ ಸ್ವಾತಂತ್ರ್ಯ ಹರಣ ಮಾಡಲು ಸಂವಿಧಾನದ ವಿರುದ್ಧ ಈ ಕಾನೂನು ತಂದಿದ್ದಾರೆ ಎಂದು ಹೇಳಿದರು. ಜಿ. ರಾಮ್…














