Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ನಮ್ಮ ನೀರು ನಮ್ಮ ಹಕ್ಕು ಎಂದು ಹೇಳುತ್ತಾ ನಮ್ಮ ತೆರಿಗೆ ಹಣದಲ್ಲಿ ಅಣೆಕಟ್ಟುಗಳನ್ನು ಕಟ್ಟಿ ತಮಿಳುನಾಡಿಗೆ ನೀರು ಹರಿಸುತ್ತಾ ನಾವು ನೀರಗಂಟಿ ಕೆಲಸ ಮಾಡುತ್ತಿದ್ದೇವೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಅತೀವ ಬೇಸರ ವ್ಯಕ್ತಪಡಿಸಿದರು. ಬೆಂಗಳೂರಿನ ಕುವೆಂಪು ಕಲಾಕ್ಷೇತ್ರದಲ್ಲಿ ಕಾವೇರಿ ನದಿ ರಕ್ಷಣಾ ಸಮಿತಿ ಹಮ್ಮಿಕೊಂಡಿದ್ದ ಕಾವೇರಿ ನದಿ ನೀರಿನ ಹಂಚಿಕೆ ಕುರಿತ ಕಾರ್ಯಗಾರ, ವಿಚಾರ ಸಂಕಿರಣ ದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಕಾವೇರಿ ವಿಷಯದಲ್ಲಿ ನಮಗೆ ಅನ್ಯಾಯ ಆಗಿದೆ. ರಾಜ್ಯ ಬಹಳಷ್ಟು ಹಿಂದಕ್ಕೆ ಹೀಗಿದೆ. ಯಾವಾಗಲೂ ನಮ್ಮ ರಾಜ್ಯಕಿಂತ ನೆರೆ ರಾಜ್ಯಕ್ಕೆ ಅನುಕೂಲ ಆಗುತ್ತಿದೆ. ಕನ್ನಡಿಗರಲ್ಲಿ ಒಗ್ಗಟ್ಟು ಇಲ್ಲ. ನೀರಿನ ವಿಷಯದಲ್ಲಿಯೂ ಅದೇ ಆಗುತ್ತಿದೆ ಎಂದ ಅವರು; ಅವರು ಮೇಕೆದಾಟು ಯೋಜನೆ ಬಗ್ಗೆ ರಾಜ್ಯ ಕಾಂಗ್ರೆಸ್ ಸರಕಾರ ದ್ವಿಮುಖ ನೀತಿ ಅನುಸರಿಸುತ್ತಿದೆ ಎಂದು ಟೀಕಿಸಿದರು. ತಮಿಳುನಾಡಿನ ಡಿಎಂಕೆ ಜತೆ ನಮ್ಮ ಸಂಬಂಧ ರಾಜಕೀಯಕ್ಕೆ ಮಾತ್ರ ಸೀಮಿತ. ಡಿಎಂಕೆ ಜತೆ ಮೇಕೆದಾಟು ವಿಷಯ ಮಾತನಾಡುವುದಕ್ಕೆ ರಾಜಕೀಯ ಒಪ್ಪಂದ…
ನವದೆಹಲಿ: ಆನ್ಲೈನ್ ಟಿಕೆಟ್ ವೇದಿಕೆಯಾದ ಬುಕ್ಮೈಶೋ ಶನಿವಾರ ಹಾಸ್ಯನಟ ಕುನಾಲ್ ಕಮ್ರಾಗೆ ಸಂಬಂಧಿಸಿದ ಎಲ್ಲಾ ವಿಷಯಗಳನ್ನು ತೆಗೆದುಹಾಕಿದೆ ಎಂದು ವರದಿಯಾಗಿದೆ. ತನ್ನ ವೆಬ್ಸೈಟ್ನಲ್ಲಿ ಪಟ್ಟಿ ಮಾಡಲಾದ ಕಲಾವಿದರ ಪಟ್ಟಿಯಿಂದ ಕುನಾಲ್ ಕಮ್ರಾ ಅವರನ್ನು ತೆಗೆದುಹಾಕಲಾಗಿದೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ. ಯುವ ಶಿವಸೇನೆಯ ಪ್ರಧಾನ ಕಾರ್ಯದರ್ಶಿ ರಾಹುಲ್ ಎನ್ ಕನಾಲ್ ಬುಕ್ಮೈಶೋಗೆ ಬರೆದ ನಂತರ ಈ ಕ್ರಮ ಕೈಗೊಳ್ಳಲಾಗಿದೆ. ಕುನಾಲ್ ಕಮ್ರಾ ಅವರ ಮುಂಬರುವ ಕಾರ್ಯಕ್ರಮಗಳಿಗೆ ಟಿಕೆಟ್ ಮಾರಾಟವನ್ನು ಸುಗಮಗೊಳಿಸದಂತೆ ಟಿಕೆಟ್ ವೇದಿಕೆಯನ್ನು ಒತ್ತಾಯಿಸಿದರು. ಏಪ್ರಿಲ್ 2 ರಂದು ಬರೆದ ಪತ್ರವು ಕುನಾಲ್ ಕಮ್ರಾ ಅವರ ವಿವಾದಾತ್ಮಕ ವಿಷಯ ಮತ್ತು ಸಾರ್ವಜನಿಕ ಭಾವನೆಗಳ ಮೇಲೆ ಅದರ ಸಂಭಾವ್ಯ ಪರಿಣಾಮದ ಬಗ್ಗೆ ಕಳವಳಗಳನ್ನು ಎತ್ತಿ ತೋರಿಸುತ್ತದೆ. ಪತ್ರದಲ್ಲಿ, ರಾಹುಲ್ ಎನ್ ಕನಾಲ್, “ನಾನು, ರಾಹುಲ್ ಎನ್ ಕನಾಲ್, ಬುಕ್ಮೈಶೋ ಕಾರ್ಯಾಚರಣೆಗಳಿಗೆ ಸಂಬಂಧಿಸಿದಂತೆ ಮಹತ್ವದ ಸಾರ್ವಜನಿಕ ಹಿತಾಸಕ್ತಿಯ ವಿಷಯವನ್ನು ನಿಮ್ಮ ಗಮನಕ್ಕೆ ತರಲು ಸಂಬಂಧಪಟ್ಟ ನಾಗರಿಕನಾಗಿ ನನ್ನ ವೈಯಕ್ತಿಕ ಸಾಮರ್ಥ್ಯದಲ್ಲಿ ಈ ಪತ್ರವನ್ನು ಬರೆಯುತ್ತಿದ್ದೇನೆ”…
ಶಿವಮೊಗ್ಗ : ವ್ಯಕ್ತಿಯ ದೈಹಿಕ ಮತ್ತು ಮಾನಸಿಕ ವಿಕಾಸಕ್ಕೆ ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳು ಸಹಕಾರಿಯಾಗಿವೆ ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಅವರು ಹೇಳಿದರು. ಅವರು ಇಂದು ನಗರದ ನೆಹರೂ ಕ್ರೀಡಾಂಗಣದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಘಟಕ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದ್ದ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ತಮ್ಮ ಕಾರ್ಯಕ್ಷೇತ್ರದಲ್ಲಿ ದಿನನಿತ್ಯ ಒತ್ತಡದಿಂದ ದಿನಕಳೆಯುವ ನೌಕರರು ತಮ್ಮಲ್ಲಿರುವ ಸುಪ್ತ ಪ್ರತಿಭೆಯ ಅನಾವರಣಕ್ಕೆ ಹಾಗೂ ಕೆಲಕ್ಷಣಗಳಾದರೂ ಒತ್ತಡದ ಬದುಕಿನಿಂದ ಮುಕ್ತಗೊಳ್ಳಲು ಈ ಸ್ಪರ್ಧೆಗಳು ಸಹಕಾರಿಯಾಗಿವೆ ಎಂದರು. ಕ್ರೀಡಾಕೂಟದಲ್ಲಿ ಭಾಗವಹಿಸುವ ನೌಕರರು ಸ್ವೀಕರಿಸಿದ ಪ್ರಮಾಣದಂತೆ ಸ್ಪರ್ಧಾತ್ಮಕಭಾವದಿಂದ ಕ್ರೀಡೆಯಲ್ಲಿ ಭಾಗವಹಿಸಬೇಕು ಎಂದ ಅವರು ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲರೂ ವಿಜೇತರಾಗುವುದು ಸಾಧ್ಯವಿಲ್ಲ. ಆದರೆ ಸ್ಪರ್ಧಿಸುವ ಮನೋಭಾವ…
ಬೆಂಗಳೂರು: ನಗರದಲ್ಲಿ ಮತ್ತೊಂದು ಕೀಚಕ ಕೃತ್ಯ ಎಸಗಿರುವುದು ಬೆಳಕಿಗೆ ಬಂದಿದೆ. ಬ್ಯಾಡ್ಮಿಂಟನ್ ಕೋಟ್ ಒಬ್ಬರು 16 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿರುವಂತ ಘಟನೆ ವರದಿಯಾಗಿದೆ. ಬೆಂಗಳೂರಿನ ಹುಳಿಮಾವು ಬಳಿಯಲ್ಲಿರುವಂತ ಬ್ಯಾಡ್ಮಿಂಟನ್ ಕೇಂದ್ರದಲ್ಲಿ 16 ವರ್ಷದ ಬಾಲಕಿಯೊಬ್ಬಳು ಬ್ಯಾಡ್ಮಿಂಟನ್ ತರಬೇತಿಯನ್ನು ಪಡೆಯುತ್ತಿದ್ದರು. ಈ ಬಾಲಕಿಗೆ 26 ವರ್ಷದ ತಮಿಳುನಾಡು ಮೂಲಕ ಸುರೇಶ್ ಬಾಲಾಜಿ ಎಂಬಾತ ಕೋಚ್ ನೀಡುತ್ತಿದ್ದನು. ಕೋಚಿಂಗ್ ನೀಡುವ ನೆಪದಲ್ಲಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರೋದಾಗಿ ತಿಳಿದು ಬಂದಿದೆ. ಆಗಾಗ ಬಾಲಕಿಯನ್ನು ಮನೆಗೂ ಕೋಚ್ ಸುರೇಶ್ ಕರೆದೊಯ್ಯುತ್ತಿದ್ದನು ಎನ್ನಲಾಗುತ್ತಿದೆ. ಈ ಸಂಬಂಧ ಹುಳಿಮಾವು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಂದಹಾಗೇ ಬಾಲಕಿ ಕಳೆದ ಎರಡು ವರ್ಷಗಳಿಂದ ಬ್ಯಾಡ್ಮಿಂಟನ್ ತರಬೇತಿಯನ್ನು ಅಪ್ರಾಪ್ತ ಬಾಲಕಿ ಪಡೆಯುತ್ತಿದ್ದಳು. ರಜೆಗೆ ಅಜ್ಜಿಯ ಮನೆಗೆ ತೆರಳಿದ್ದಾಗಲೂ ಕೋಚ್ ಸುರೇಶ್ ಬಾಲಾಜಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಅಜ್ಜಿಯ ಮೊಬೈಲ್ ನಿಂದ ಕೋಚ್ ಸುರೇಶ್ ಗೆ ಅಪ್ರಾಪ್ತ ಬಾಲಕಿ ನಗ್ನ ಪೋಟೋ, ವೀಡಿಯೋ ಶೇರ್ ಮಾಡಿದ್ದಾಳೆ. ಈ…
ಶಿವಮೊಗ್ಗ : ಶತಶತಮಾನಗಳಿಂದ ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದವರನ್ನು, ಶೋ಼ಷಿತರನ್ನು ಮಾತ್ರವಲ್ಲದೇ ಸಮಾಜದ ಎಲ್ಲಾ ವರ್ಗದವರನ್ನು ದೃಷ್ಟಿಯಲ್ಲಿಟ್ಟುಕೊಂಡು ರೂಪಿಸಲಾದ ಗ್ಯಾರಂಟಿ ಯೋಜನೆಗಳು ಸರ್ವರ ಸರ್ವೋದಯಕ್ಕೆ ಸಹಕಾರಿಯಾಗಿವೆ ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಅವರು ಹೇಳಿದರು. ಅವರು ಇಂದು ನಗರದ ಕುವೆಂಪು ರಂಗಮಂದಿರದಲ್ಲಿ ಏರ್ಪಡಿಸಲಾಗಿದ್ದ ಡಾ|| ಬಾಬು ಜಗಜೀವನರಾಮ್ಜಯಂತಿ ಕಾರ್ಯಕ್ರಮದಲ್ಲಿ ಆಡಳಿತಾರೂಢ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳ ಕುರಿತು ವಾರ್ತಾ ಇಲಾಖೆಯು ಫಲಾನುಭವಿಗಳ ಯಶೋಗಾಥೆಗಳನ್ನಾಧರಿಸಿದ ಕಿರುಹೊತ್ತಿಗೆ ಗ್ಯಾರಂಟಿ ಸರ್ಕಾರದ ವಿಕಾಸಪಥವನ್ನು ಬಿಡುಗಡೆಗೊಳಿಸಿ ಮಾತನಾಡುತ್ತಿದ್ದರು. ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ಜನಿಸಿ, ಜನಸಾಮಾನ್ಯರ ನೋವು-ನಲಿವುಗಳನ್ನು ಸಮೀಪದಿಂದ ಬಲ್ಲವನಾಗಿದ್ದೇನೆ. ಅವರ ಸಂಕಷ್ಟಗಳಿಗೆ ಸ್ಪಂದಿಸಬೇಕೆಂಬ ಅದಮ್ಯ ಆಕಾಂಕ್ಷೆ ಹೊಂದಿದ್ದೇನೆ. ಜನಸಾಮಾನ್ಯರಿಗೆ ಸಹಕಾರಿಯಾಗುವಂತೆ ನನ್ನೆಲ್ಲಾ ಆಸೆ-ಕನಸುಗಳಿಗೆ ಗ್ಯಾರಂಟಿ ಯೋಜನೆಗಳ ರೂಪದಲ್ಲಿ ಮೂರ್ತರೂಪ ನೀಡಿ ಪ್ರಣಾಳಿಕೆಯ ಅನುಷ್ಟಾನ ಸಮಿತಿಯ ಉಪಾಧ್ಯಕ್ಷನಾಗಿ ಅವುಗಳನ್ನು ಜಾರಿಗೆ ತರುವಲ್ಲಿ ಶ್ರಮಿಸಿದ್ದೇನೆ. ಅದು ಇಂದು ಫಲಪ್ರದವಾಗಿರುವುದು ಅತ್ಯಂತ ಸಂತೋಷವೆನಿಸಿದೆ ಎಂದರು. ಈ ಎಲ್ಲಾ ಯೋಜನೆಗಳ…
ಬೆಂಗಳೂರು: ಒಳ ಮೀಸಲಾತಿ ಬಗ್ಗೆ ಅನುಮಾನ ಬೇಡ. ಜಾರಿ ಮಾಡೇ ಮಾಡ್ತೀವಿ. ನೀವು ಬೇಡ ಅಂದರೂ ನಾವು ಜಾರಿ ಮಾಡ್ತೀವಿ. ಸುಪ್ರೀಂಕೋರ್ಟ್ ಆದೇಶವನ್ನು ನಾವು ಖಚಿತವಾಗಿ ಪಾಲಿಸುತ್ತೇವೆ. ನಾಗಮೋಹನ್ ದಾಸ್ ಅವರು ಎರಡು ತಿಂಗಳ ಕಾಲಾವಧಿ ಕೇಳಿದ್ದಾರೆ. ನಾವು ಕೊಟ್ಟಿದ್ದೇವೆ. ಬಳಿಕ ಯಾರಿಗೂ ಅನ್ಯಾಯ ಆಗದಂತೆ ಜಾರಿ ಮಾಡುತ್ತೇವೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಘೋಷಿಸಿದ್ದಾರೆ. ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ಮೇಲೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ್ದ ಡಾ.ಬಾಬು ಜಗಜೀವನ ರಾಮ್ ಅವರ 118 ನೇ ಜನ್ಮ ದಿನೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಬಾಬು ಜಗಜೀವನ್ ರಾಮ್ ಸ್ವಾತಂತ್ರ್ಯ ಪ್ರೇಮಿ, ಸಾಮಾಜಿಕ ನ್ಯಾಯದ ಪರವಾಗಿದ್ದವರು. ಜಾತಿ ವ್ಯವಸ್ಥೆ ಕಾರಣದಿಂದ ಸಮಾಜದಲ್ಲಿ ಅಸಮಾನತೆ ಇದೆ. ಜಾತಿ ಇರುವವರೆಗೂ ಮೀಸಲಾತಿ ಇರಬೇಕು ಎಂದು ಸ್ಪಷ್ಟವಾದ ನಿಲುವು ಹೊಂದಿದ್ದರು ಎಂದು ವಿವರಿಸಿದರು. ನರೇಂದ್ರ ಮೋದಿಯವರು EWS ಹೆಸರಲ್ಲಿ ಶೇ10 ಕಲ್ಪಿಸಿದ ಬಳಿಕ ಎಲ್ಲರೂ ಮೀಸಲಾತಿ ಫಲಾನುಭವಿಗಳೇ ಆಗಿಬಿಟ್ಟಿದ್ದಾರೆ ಎಂದು ವಿವರಿಸಿದರು. ಸುಪ್ತ ಪ್ರತಿಭೆ ಹೊರಗೆ ತರುವ…
ಬೆಂಗಳೂರು: ಏಪ್ರಿಲ್ ಹಾಗೂ ಮೇ ತಿಂಗಳಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗಿರುವ ಬೆಳಗಾವಿ ವಿಭಾಗದ ವಿಜಯಪುರ ಹಾಗೂ ಬಾಗಲಕೋಟೆ, ಬೆಂಗಳೂರು ವಿಭಾಗದ ಚಿತ್ರದುರ್ಗ ಜಿಲ್ಲೆ ಹಾಗೂ ಕಲಬುರಗಿ ವಿಭಾಗದ ಎಲ್ಲಾ ಜಿಲ್ಲೆಗಳಲ್ಲಿ ಅಂಗನವಾಡಿ ಕೇಂದ್ರಗಳ ಅವಧಿಯನ್ನು ಬೆಳಗ್ಗೆ 8 ರಿಂದ ಮಧ್ಯಾಹ್ನ 1.30 ರವರೆಗೆ ನಿಗದಿಪಡಿಸಲಾಗಿದೆ. ಈ ಸಂಬಂಧ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಂಟಿ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದು, ಬೆಳಗಾವಿ ವಿಭಾಗದ ವಿಜಯಪುರ ಮತ್ತು ಬಾಗಲಕೋಟೆ, ಬೆಂಗಳೂರು ವಿಭಾಗದ – ಚಿತ್ರದುರ್ಗ ಜಿಲ್ಲೆ ಹಾಗೂ ಕಲ್ಬುರ್ಗಿ ವಿಭಾಗದ ಎಲ್ಲಾ ಜಿಲ್ಲೆಗಳಲ್ಲಿ ಏಪ್ರಿಲ್ ಮತ್ತು ಮೇ ಮಾಹೆಯಲ್ಲಿ ಬಿಸಿಲಿನ ತಾಪಮಾನ ತೀವ್ರವಾಗಿರುತ್ತದೆ ಎಂದಿದ್ದಾರೆ. ಈ ಹಿನ್ನೆಲೆಯಲ್ಲಿ ಅಂಗನವಾಡಿ ಕೇಂದ್ರಗಳ ಕಾರ್ಯನಿರ್ವಹಣಾ ಅವಧಿಯನ್ನು ಬೆಳಗ್ಗೆ 8.00 ಗಂಟೆಯಿಂದ ಮಧ್ಯಾಹ್ನ 01.30 ಗಂಟೆವರೆಗೆ ಸಮಯವನ್ನು ನಿಗಧಿಪಡಿಸಿ ಪ್ರತಿ ವರ್ಷ ಏಪ್ರಿಲ್ ಮತ್ತು ಮೇ ಮಾಹಗಳಿಗೆ ಅನ್ವಯಿಸುವಂತೆ ಉಲ್ಲೇಖಿತ ಪತ್ರದಲ್ಲಿ ಈಗಾಗಲೇ ಆದೇಶಿಸಲಾಗಿದೆ ಎಂದು ಹೇಳಿದ್ದಾರೆ. ಅದರಂತೆ ಇನ್ನು ಮುಂದೆ ಪುತಿ ವರ್ಷ ಕ್ರಮ ವಹಿಸಲು ಸೂಚಿಸಿದೆ.…
ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯಿಂದ 2025ರ ಎಸ್ ಎಸ್ ಎಲ್ ಸಿ ಪರೀಕ್ಷೆ-1ರ ಕೀ ಉತ್ತರಗಳನ್ನು ( Key Answer ) ಮಂಡಲಿಯ ಜಾಲತಾಣದಲ್ಲಿ ಪ್ರಕಟಿಸಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಶಾಲಾ ಶಿಕ್ಷಣ ಇಲಾಖೆ ಮಾಹಿತಿ ನೀಡಿದ್ದು, 2025ರ ಎಸ್.ಎಸ್.ಎಲ್.ಸಿ. ಪರೀಕ್ಷೆ-1ರ ವಿಷಯವಾರು ಕೀ ಉತ್ತರಗಳನ್ನು ದಿನಾಂಕ:04-04-2025 ಮಂಡಲಿಯ ಜಾಲತಾಣದಲ್ಲಿ http://kseab.karnataka.gov.in ಪ್ರಕಟಿಸಲಾಗಿದ್ದು, ವಿದ್ಯಾರ್ಥಿಗಳು / ಪೋಷಕರು / ಶಿಕ್ಷಕರಿಂದ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದೆ ಎಂದು ತಿಳಿಸಿದೆ. ಇನ್ನೂ ಮಂಡಲಿಯ ಜಾಲತಾಣ http://kseab.karnataka.gov.in ಲಿಂಕನ್ನು ಬಳಸಿ 2025ರ ಎಸ್.ಎಸ್.ಎಲ್.ಸಿ. ಪರೀಕ್ಷೆ-1ರ ಕೀ ಉತ್ತರಗಳಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳನ್ನು ಮಂಡಲಿಯ ಜಾಲತಾಣದ ಮೂಲಕ ದಿನಾಂಕ:06-04-2025ರ ಸಾಯಂಕಾಲ 5.30 ಗಂಟೆಯವರೆಗೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದಿದೆ. ಸದರಿ ಮಾಹಿತಿಯನ್ನು ತಮ್ಮ ಜಿಲ್ಲೆಯಲ್ಲಿ ಪ್ರಚುರಪಡಿಸಿ ವಿದ್ಯಾರ್ಥಿಗಳು / ಶಿಕ್ಷಕರಿಗೆ ಮಾಹಿತಿಯು ತಿಳಿಯುವಂತೆ ಕ್ರಮ ಕೈಗೊಳ್ಳಲು ತಿಳಿಸಿದೆ. ನಿಗದಿತ ದಿನಾಂಕದ ನಂತರ ಸಲ್ಲಿಸುವ ಆಕ್ಷೇಪಣೆಗಳನ್ನು ಮಂಡಲಿಯು ಪರಿಗಣಿಸುವುದಿಲ್ಲ ಎಂಬುದಾಗಿ ಕರ್ನಾಟಕ ಶಾಲಾ ಪರೀಕ್ಷೆ…
ಬೆಂಗಳೂರು: ನಗರದಲ್ಲಿ ಚಾಕುವಿನಿಂದ ಕುತ್ತಿಗೆ ಕೊಯ್ದು ಪತ್ನಿಯನ್ನು ಬರ್ಬರವಾಗಿ ಕೊಲೆ ಮಾಡಿರುವಂತ ಘಟನೆ ನಡೆದಿದೆ. ಅಕ್ರಮ ಸಂಬಂಧದ ಕಾರಣದಿಂದಾಗಿ ಪತಿ ಪತ್ನಿಯನ್ನು ಹತ್ಯೆ ಮಾಡಿರೋದಾಗಿ ಹೇಳಲಾಗುತ್ತಿದೆ. ಬೆಂಗಳೂರಿನ ದೊಡ್ಡ ತೋಗೂರು ಬಳಿಯ ಪ್ರಗತಿ ನಗರದಲ್ಲಿ ಇಂದು ಬೆಚ್ಚಿ ಬೀಳಿಸು ಘಟನೆ ನಡೆದಿದೆ. ಪತಿಯೊಬ್ಬ ತನ್ನ ಪತ್ನಿಯ ಕುತ್ತಿಗೆಯನ್ನು ಕೊಯ್ದು ಬರ್ಬರವಾಗಿ ಕೊಲೆ ಮಾಡಿರುವುದಾಗಿ ತಿಳಿದು ಬಂದಿದೆ. ದೊಡ್ಡ ತೋಗೂರು ಬಳಿಯ ಪ್ರಗತಿ ನಗರದ ಶಾರದಾ(35) ಎಂಬುವರನ್ನು ಪತಿ ಕೃಷ್ಣ ಚಾಕುವಿನಿಂದ ಕುತ್ತಿಗೆ ಕೊಯ್ದು ಹತ್ಯೆ ಮಾಡಿದ್ದಾರೆ. ಎಲೆಕ್ಟ್ರಾನಿಕ್ ಸಿಟಿಯ ತೋಗೂರು ಬಳಿಯ ಪ್ರಗತಿ ನಗರದಲ್ಲಿನ ಈ ಹತ್ಯೆ ಕಂಡು ಸಾರ್ವಜನಿಕರು ಬೆಚ್ಚಿ ಬಿದ್ದಿದ್ದಾರೆ. ನಡು ರಸ್ತೆಯಲ್ಲೇ ಪತ್ನಿ ಶಾರದ(35) ಕುತ್ತಿಗೆಯನ್ನು ಚಾಕುವಿನಿಂದ ಕೊಯ್ದು, ಪತಿ ಕೃಷ್ಣ ಸ್ಥಳದಿಂದ ಪರಾರಿಯಾಗಿದ್ದಾನೆ. ಅಕ್ರಮ ಸಂಬಂಧದ ಹಿನ್ನಲೆಯಲ್ಲಿ ಶಾರದಾ ಕೊಲೆ ಮಾಡಿರುವಂತ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/pagal-lover-attacks-woman-who-refused-to-fall-in-love-with-her-by-throwing-chilli-powder/ https://kannadanewsnow.com/kannada/bescom-launches-whatsapp-helpline-to-lodge-complaints-of-power-issues/
ಬೆಳಗಾವಿ: ಜಿಲ್ಲೆಯಲ್ಲಿ ವಿವಾಹಿತ ಮಹಿಳೆಯೊಬ್ಬರು ಪ್ರೀತಿಸಲು ನಿರಾಕರಿಸಿದ ಕಾರಣಕ್ಕೆ ಆಕೆಯ ಮೇಲೆ ಖಾರದಪುಡಿ ಎರಡಿ, ಕೊಡಲಿಯಿಂದ ಪಾಗಲ್ ಪ್ರೇಮಿಯೊಬ್ಬ ಹಲ್ಲೆ ನಡೆಸಿದಂತ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲ್ಲೂಕಿನ ಇದ್ದಲಹೊಂಡ ಗ್ರಾಮದ ಲಗಮಪ್ಪ ಪೂಜಾರಿ ಎಂಬಾತ ಅದೇ ಗ್ರಾಮದ ವಿವಾಹಿತ ಮಹಿಳೆ ಕಾಜಲ್ ಪೂಜಾರಿಯನ್ನು ಪ್ರೀತಿಸುವಂತೆ ಹಿಂದೆ ಬಿದ್ದಿದ್ದನು. ಈ ಪ್ರೀತಿಯನ್ನು ಮಹಿಳೆ ನಿರಾಕರಿಸಿದ್ದರು. ಇದೇ ಸಿಟ್ಟಿನಲ್ಲಿ ಇಂದು ಗಂಡ ಇಲ್ಲದ ಸಂದರ್ಭದಲ್ಲಿ ಮನೆಗೆ ನುಗ್ಗಿದಂತ ಪಾಗಲ್ ಪ್ರೇಮಿ ಲಗಮಪ್ಪ ಪೂಜಾರಿ, ವಿವಾಹಿತ ಮಹಿಳೆ ಕಾಜಲ್ ಪೂಜಾರಿಯನ್ನು ಪ್ರೀತಿಸುವಂತೆ ಒತ್ತಾಯಿಸಿದ್ದಾನೆ. 10 ಲಕ್ಷ ರೂಪಾಯಿ ಕೊಡುತ್ತೇನೆ. ಓಡಿ ಹೋಗೋಣ ಬಾ ಅಂತ ಕರೆದಿದ್ದಾನೆ. ಲಗಮಪ್ಪನ ಈ ಕರೆಗೆ ಕಾಜಲ್ ಒಪ್ಪಿಕೊಂಡಿಲ್ಲ. ಇದರಿಂದ ಸಿಟ್ಟಾದಂತ ಲಗಮಪ್ಪ ಆಕೆಯ ಮೇಲೆ ಖಾರದಪುಡಿ ಎರೆಚಿ ಕೊಡಲಿಯಿಂದ ಹಲ್ಲೆ ಮಾಡಿದ್ದಾನೆ. ಈ ಜಗಳ ಕೇಳಿ ಅಕ್ಕಪಕ್ಕದ ಮನೆಯವರಾದಂತ ಮಲ್ಲೇಶ ಪೂಜಾರಿ ಹಾಗೂ ಯಲ್ಲಪ್ಪ ಕರಿಕಟ್ಟಿ ಎಂಬುವರು ಹಲ್ಲೆ ತಡೆಯೋದಕ್ಕೆ ಯತ್ನಿಸಿದ್ದಾರೆ. ಹಲ್ಲೆ ತಡೆಯಲು ಯತ್ನಿಸಿದಂತ…