Subscribe to Updates
Get the latest creative news from FooBar about art, design and business.
Author: kannadanewsnow09
ಆಂಧ್ರಪ್ರದೇಶ: ಹಿರಿಯ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಮತ್ತು ಅವರ ಪಕ್ಷವು 16 ಲೋಕಸಭಾ ಮತ್ತು 130 ವಿಧಾನಸಭಾ ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಈ ಹಿನ್ನಲೆಯಲ್ಲಿ ಜೂನ್.9ರಂದು ಆಂಧ್ರಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಅವರ ತೆಲುಗು ದೇಶಂ ಪಕ್ಷ (ಟಿಡಿಪಿ) 2024 ರ ಆಂಧ್ರಪ್ರದೇಶ ವಿಧಾನಸಭಾ ಚುನಾವಣೆ ಮತ್ತು ಲೋಕಸಭಾ ಚುನಾವಣೆಗಳಲ್ಲಿ ಮುನ್ನಡೆ ಸಾಧಿಸಿದೆ, ಪಕ್ಷದ ಪುನರುತ್ಥಾನದ ಹಿಂದಿನ ಪ್ರೇರಕ ಶಕ್ತಿಯಾಗಿ ನಾಯ್ಡು ಅವರನ್ನು ಇರಿಸಿದೆ. 2019 ರ ರಾಜ್ಯ ಚುನಾವಣೆಯಲ್ಲಿ, ವೈಎಸ್ ಜಗನ್ ಮೋಹನ್ ರೆಡ್ಡಿ ನೇತೃತ್ವದ ಯುವಜನ ಶ್ರಮಿಕ ರೈತ ಕಾಂಗ್ರೆಸ್ ಪಕ್ಷ (ವೈಎಸ್ಆರ್ಸಿಪಿ) 175 ಸ್ಥಾನಗಳಲ್ಲಿ 151 ಸ್ಥಾನಗಳನ್ನು ಗೆಲ್ಲುವ ಮೂಲಕ ಅದ್ಭುತ ವಿಜಯವನ್ನು ಗಳಿಸಿತು. ಕಡಪ, ಕರ್ನೂಲ್, ನೆಲ್ಲೂರು ಮತ್ತು ವಿಜಯನಗರಂ ಸೇರಿದಂತೆ ಪ್ರಮುಖ ಜಿಲ್ಲೆಗಳಲ್ಲಿ ವೈಎಸ್ಆರ್ಸಿಪಿ ಜಯಭೇರಿ ಬಾರಿಸಿದೆ. ಏತನ್ಮಧ್ಯೆ, ಆಡಳಿತಾರೂಢ ಟಿಡಿಪಿ ಕೇವಲ 23 ಸ್ಥಾನಗಳನ್ನು ಗಳಿಸುವಲ್ಲಿ ಯಶಸ್ವಿಯಾಗಿದೆ ಮತ್ತು ಜನಸೇನಾ ಪಕ್ಷ (ಜೆಎಸ್ಪಿ) ಮೈತ್ರಿಕೂಟವು…
ಬೆಂಗಳೂರು: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಸಿಎನ್ ಮಂಜುನಾಥ್ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಕನಕಪುರದ ಬಂಡೆಯನ್ನು ಛಿದ್ರ ಛಿದ್ರಗೊಳಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಡಾ.ಸಿಎನ್ ಮಂಜುನಾಥ್ ಅವರನ್ನು ಮತದಾರರು ಈ ಬಾರಿ ಕೈ ಹಿಡಿದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ ಸುರೇಶ್ ಭಾರಿ ಅಂತರದಿಂದ ಸೋಲು ಕಂಡಿದ್ದಾರೆ. ಈ ಸೋಲಿನ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಡಿ.ಕೆ ಸುರೇಶ್ ಅವರು, ನಾನು ಬಿಜೆಪಿ ಅಭ್ಯರ್ಥಿ ಡಾ.ಸಿಎನ್ ಮಂಜುನಾಥ್ ಗೆ ಅಭಿನಂದನೆ ಸಲ್ಲಿಸುತ್ತೇನೆ. ಮತದಾರರ ತೀರ್ಪಿಗೆ ತಲೆ ಭಾಗುತ್ತೇನೆ ಎಂದರು. ರಾಜ್ಯಕ್ಕೆ ಒಳ್ಳೇದಾಗಲಿ. ಕ್ಷೇತ್ರಕ್ಕೆ ಒಳ್ಳೇದಾಗಲಿ. ನಾನು ನನ್ನ ಕ್ಷೇತ್ರದಲ್ಲಿ ಪಕ್ಷದ ಕಾರ್ಯಕರ್ತನಾಗಿ ಜೊತೆಗೆ ಇರುತ್ತೇನೆ. ನಾನು ನಿಮ್ಮಲ್ಲಿ ಬೆಳೆದವನು. ನಿಮ್ಮ ಜೊತೆಗೆ ಓಡಾಡಿದವನು. ಆ ಕೆಲಸ ನಿರಂತರವಾಗಿ ಇರುತ್ತೇನೆ. ಪ್ರಜಾ ಪ್ರಭುತ್ವ ವ್ಯವಸ್ಥೆಯಲ್ಲಿ ಸೋಲು ಗೆಲುವು ಇದ್ದದ್ದೇ ಎಂಬುದಾಗಿ ತಿಳಿಸಿದರು. https://kannadanewsnow.com/kannada/big-news-lok-sabha-election-results-2019-three-former-cms-win-in-karnataka/ https://kannadanewsnow.com/kannada/breaking-stock-market-plunges-again-investors-lose-rs-26-lakh-crore/
ಹಾಸನ: ಜಿಲ್ಲೆಯ ಲೋಕಸಭಾ ಕ್ಷೇತ್ರ ಜೆಡಿಎಸ್ ಭದ್ರಕೋಟೆ ಎಂಬುದಾಗಿಯೇ ಬಿಂಬಿತವಾಗಿತ್ತು. ಕಳೆದ 25 ವರ್ಷಗಳಿಂದ ಜೆಡಿಎಸ್ ಪಕ್ಷದ ಹೊರತಾಗಿ ಬೇರೆ ಯಾರೂ ಸಂಸದರು ಆಗಿರಲಿಲ್ಲ. ಇಂತಹ ಕ್ಷೇತ್ರದಲ್ಲಿ ಜೆಡಿಎಸ್ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಛಿದ್ರ ಛಿದ್ರವಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಇಂದು ನಡೆದಂತ ಲೋಕಸಭಾ ಚುನಾವಣೆಯ ಮತಏಣಿಕೆಯ 18ನೇ ಸುತ್ತಿನಲ್ಲಿ, ಹಾಸನ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ 6,64,848 ಮತಗಳನ್ನು ಪಡೆದಿದ್ದರು. ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರು, 6,21,255 ಮತಗಳನ್ನು ಪಡೆದಿದ್ದರು. ಬರೋಬ್ಬರಿ 43,588 ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಗೆಲುವು ಸಾಧಿಸಿದ್ದಾರೆ. ಅಂದಹಾಗೇ ಹಾಸನ ಲೋಕಸಭಾ ಕ್ಷೇತ್ರದ 2024ರ ಚುನಾವಣೆಯಲ್ಲಿ 13,48,966 ಮತಗಳು ಚಲಾವಣೆಯಾಗಿದ್ದವು. ಇದುವರೆಗೆ 13,28,820 ಮತಗಳ ಏಣಿಕೆ ಕಾರ್ಯ ಪೂರ್ಣಗೊಂಡಿದೆ. ಇನ್ನೂ ಕೇವಲ 26,146 ಮತಗಳ ಏಣಿಕೆ ಮಾತ್ರವೇ ಬಾಕಿ ಉಳಿದಿದೆ. ಇದರಲ್ಲಿ 42,187 ಮತಗಳ ಅಂತರವನ್ನು ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಕಾಯ್ದುಕೊಂಡಿದ್ದು, ಗೆಲುವಿನ…
ಚಿತ್ರದುರ್ಗ: ಲೋಕಸಭಾ ಚುನಾವಣೆಗೆ ನಡೆದಿದ್ದಂತ ಮತದಾನದ ನಂತ್ರ ಇಂದು ಮತಏಣಿಕೆ ಕಾರ್ಯ ನಡೆಯಿತು. ಈ ಮತಏಣಿಕೆಯಲ್ಲಿ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಭರ್ಜರಿ ಗೆಲುವು ಸಾಧಿಸಿ್ದದಾರೆ. ಇಂದು ಲೋಕಸಭಾ ಚುನಾವಣೆಗೆ ನಡೆದಂತ ಮತದಾನದ ಮತಏಣಿಕೆ ಕಾರ್ಯ ನಡೆಯಿತು. ಚಿತ್ರದುರ್ಗ ಲೋಕಸಭಾ ಚುನಾವಣಾ ಮತಏಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಿಎನ್ ಚಂದ್ರಪ್ಪ ಅವರು 5,75,404 ಮತಗಳನ್ನು ಗಳಿಸಿದ್ರೇ, ಬಿಜೆಪಿಯ ಗೋವಿಂದ ಕಾರಜೋಳ ಅವರು 6,14,890 ಮತಗಳನ್ನು ಪಡೆದರು. ಒಟ್ಟಾರೆಯಾಗಿ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಗೋವಿಂದ ಕಾರಜೋಳ ಅವರು 45849 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಮುಧೋಳ ವ್ಯಕ್ತಿಗೆ ಚಿತ್ರದುರ್ಗ ಲೋಕಸಭಾ ಕ್ಷೇತ್ರವು ಕೈ ವಶವಾದಂತೆ ಆಗಿದೆ. https://kannadanewsnow.com/kannada/tamil-nadu-bjp-president-annamalai-loses-lok-sabha-elections/ https://kannadanewsnow.com/kannada/big-news-lok-sabha-election-results-2019-three-former-cms-win-in-karnataka/
ತಮಿಳುನಾಡು: ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದಂತ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈಗೆ ಬಿಗ್ ಶಾಕ್ ನೀಡಲಾಗಿದೆ. ಲೋಕಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಕಂಡಿದ್ದಾರೆ. ತಮಿಳುನಾಡಿನ ಕೊಯಮತ್ತೂರು ಲೋಕಸಭಾ ಕ್ಷೇತ್ರದಿಂದ 2024ರ ಚುನಾವಣೆಗೆ ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಕಣಕ್ಕೆ ಇಳಿದಿದ್ದರು. ಇಂತಹ ಅವರು ಇಂದು ಪ್ರಕಟವಾದಂತ ಲೋಕಸಭಾ ಚುನಾವಣೆಯ ಫಲಿತಾಂಶದಲ್ಲಿ 17 ಸಾವಿರ ಮತಗಳ ಅಂತರದಿಂದ ಸೋಲು ಕಂಡಿರುವುದಾಗಿ ತಿಳಿದು ಬಂದಿದೆ. ಲೋಕಸಭಾ ಚುನಾವಣೆಯ ಕೊಯಮತ್ತೂರು ಕ್ಷೇತ್ರದಲ್ಲಿ ಅಣ್ಣ ಮಲೈ ಅವರು 17 ಸಾವಿರ ಮತಗಳ ಅಂತರದಿಂದ ಸೋಲು ಕಂಡಿದ್ದು, ಬಿಗ್ ಶಾಕ್ ನೀಡಿದಂತೆಯೇ ಆಗಿದೆ. https://kannadanewsnow.com/kannada/breaking-stock-market-plunges-again-investors-lose-rs-26-lakh-crore/ https://kannadanewsnow.com/kannada/big-news-lok-sabha-election-results-2019-three-former-cms-win-in-karnataka/
ಬೆಂಗಳೂರು: RTE ಅಡಿಯಲ್ಲಿ ಮಕ್ಕಳ ದಾಖಲಾತಿಗಾಗಿ ಸೀಟು ಹಂಚಿಕೆ ಪ್ರಕ್ರಿಯೆ ನಾಳೆ ಆನ್ ಲೈನ್ ಮೂಲಕ ನಡೆಯಲಿದೆ. ಈ ಮೂಲಕ ಮೊದಲ ಸುತ್ತಿನಲ್ಲಿ ಆರ್ ಟಿಇ ಅಡಿಯಲ್ಲಿ ದಾಖಲಾತಿಗೆ ನಾಳೆ ಸೀಟು ಹಂಚಿಕೆಯನ್ನು ಶಆಲಾ ಶಿಕ್ಷಣ ಇಲಾಖೆ ಮಾಡಲಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ ಪ್ರಾಥಮಿಕ ಶಿಕ್ಷಣ ವಿಭಾಗದ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ‘ಉಚಿತ ಮತ್ತು ಕಡ್ಡಾಯ ಶಿಕ್ಷಣಕ್ಕಾಗಿ ಮಕ್ಕಳ ಹಕ್ಕು ಕಾಯಿದೆ 2009 ರ ಸೆಕ್ಷನ್ 12(1)(ಬಿ) ಮತ್ತು 12(1)(ಸಿ) ಅಡಿ 2024-25ನೇ ಸಾಲಿಗೆ ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಲ್ಲಿ ದಾಖಲಾತಿಗೆ ಮೊದಲ ಸುತ್ತಿನ ಆನ್ಲೈನ್ ಸೀಟು ಹಂಚಿಕೆ ಪ್ರಕ್ರಿಯೆಯನ್ನು ನಡೆಸಲು ದಿನಾಂಕ: 05.06.2024 ನಿಗದಿಪಡಿಸಲಾಗಿತ್ತು ಎಂದಿದ್ದಾರೆ. ಪ್ರಸ್ತುತ ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆಯ ಹಿನ್ನೆಲೆಯಲ್ಲಿ ಆರ್.ಟಿ.ಇ ಮೊದಲ ಸುತ್ತಿನ ಆನ್ಲೈನ್ ಸೀಟು ಹಂಚಿಕೆ ಪ್ರಕ್ರಿಯೆಯನ್ನು ಮುಂದೂಡಿದ್ದು ದಿನಾಂಕ :07.06.2024ರಂದು ನಡೆಸಲಾಗುವುದು. ಹೆಚ್ಚಿನ ವಿವರಗಳಿಗೆ ಇಲಾಖಾ ಅಧಿಕೃತ ವೆಬ್ಸೈಟ್ http://www.schooleducation.karnataka.gov.in ಜಾಲತಾಣಕ್ಕೆ ಭೇಟಿ ನೀಡಿ, ಮಾಹಿತಿ…
ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಬಗ್ಗೆ ಚುನಾವಣಾ ಆಯೋಗದಿಂದ ಅಧಿಕೃತ ಘೋಷಣೆ ಮಾತ್ರವೇ ಬಾಕಿ ಉಳಿಸಿದೆ. ಇತ್ತೀಚಿನ ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶದ ವಿವರದಂತೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಯವರು 647736 ಮತಗಳನ್ನು ಪಡೆದಿದ್ದರು. ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು 407678 ಪಡೆದಿದ್ದರು. JDS ಅಭ್ಯರ್ಥಿ ಕುಮಾರಸ್ವಾಮಿ 240158 ಮತಗಳ ಮುನ್ನಡೆಯನ್ನು ಕಾಯ್ದುಕೊಂಡಿದ್ದರು. ಅಂತಿಮ ಮತಏಣಿಕೆ ಮಾತ್ರವೇ ಬಾಕಿ ಉಳಿದಿದ್ದು, ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರು ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಮಂಡ್ಯ ಲೋಕಸಭಾ ಕ್ಷೇತ್ರ ಬಿಜೆಪಿ-ಜೆಡಿಎಸ್ ತೆಕ್ಕೆಗೆ ಹೋದಂತೆ ಆಗಿದೆ. https://kannadanewsnow.com/kannada/prajwal-revanna-loses-in-hassan-congress-candidate-shreyas-patel-wins/ https://kannadanewsnow.com/kannada/in-mandya-former-cm-hd-kumaraswamy-is-leading-by-54658-votes/
ಹಾಸನ: ಜಿಲ್ಲೆಯಲ್ಲಿ ತೀವ್ರ ಕುತೂಹಲ ಕೆರಳಿಸಿದ್ದಂತ ಲೋಕಸಭಾ ಚುನಾವಣೆ ಫಲಿತಾಂಶ ಹೊರ ಬಿದ್ದಿದೆ. ಅಶ್ಲೀಲ ಪ್ರಕರಣದಲ್ಲಿ ಎಸ್ಐಟಿ ವಶದಲ್ಲಿರುವಂತ ಪ್ರಜ್ವಲ್ ರೇವಣ್ಣ ಸೋಲು ಕಂಡಿತ್ತು, ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಗೆಲುವು ಸಾಧಿಸಿದ್ದಾರೆ. ಕಳೆದ 25 ವರ್ಷಗಳಿಂದ ಹಾಸನ ಲೋಕಸಭಾ ಕ್ಷೇತ್ರವು ಜೆಡಿಎಸ್ ತೆಕ್ಕೆಯಾಗಿತ್ತು. ಈ ಕ್ಷೇತ್ರದಲ್ಲಿ ಅಶ್ಲೀಲ ವೀಡಿಯೋ ಪ್ರಕರಣ ಬೆಳಕಿಗೆ ಬಂದ ನಂತ್ರ, ಸಂಸದ ಪ್ರಜ್ವಲ್ ರೇವಣ್ಣ ಅವರು ಹೀನಾಯ ಸೋಲು ಕಂಡಿದ್ದಾರೆ. ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ವಿರುದ್ಧ 25 ವರ್ಷಗಳ ಬಳಿಕ ಹಾಸನ ಸಿಂಹಾಸದ ಕಾಂಗ್ರೆಸ್ ಪಾಲಾಗಿದೆ. ಕೈ ಅಭ್ಯರ್ಥಿ ಶ್ರೇಯಸ್ ಪಟೇಲ್ ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಬಗ್ಗೆ ಅಧಿಕೃತ ಘೋಷಣೆ ಮಾತ್ರವೇ ಬಾಕಿ ಉಳಿದಿದೆ. https://kannadanewsnow.com/kannada/bjps-vishweshwar-hegde-kageri-wins-in-uttara-kannada/ https://kannadanewsnow.com/kannada/in-mandya-former-cm-hd-kumaraswamy-is-leading-by-54658-votes/
ಉತ್ತರ ಕನ್ನಡ: ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದಂತ ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಬಗ್ಗೆ ಚುನಾವಣಾ ಆಯೋಗದಿಂದ ಅಧಿಕೃತ ಘೋಷಣೆ ಮಾತ್ರವೇ ಬಾಕಿ ಉಳಿದಿದೆ. ತೀವ್ರ ಕುತೂಹಲ ಕೆರಳಿಸಿದ್ದಂತ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ಕಾಂಗ್ರೆಸ್ ಪಕ್ಷದ ಅಂಜಲಿ ನಿಂಬಾಳ್ಕರ್ ನಡುವೆ ತೀವ್ರ ಹಣಾ ಹಣಿಯೇ ಏರ್ಪಟ್ಟಿತ್ತು. ಆರಂಭದಿದ್ದಲೂ ಮುನ್ನಡೆ ಕಾಯ್ದುಕೊಂಡು ಬಂದಿದ್ದಂತ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು, ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಈ ಬಗ್ಗೆ ಚುನಾವಣಾ ಆಯೋಗದಿಂದ ಅಧಿಕೃತ ಘೋಷಣೆ ಮಾತ್ರವೇ ಬಾಕಿ ಉಳಿದಿದೆ. https://kannadanewsnow.com/kannada/assam-lok-sabha-election-results-live-updates-nda10-inc4-bjp-seeks-majority-for-third-term/ https://kannadanewsnow.com/kannada/in-mandya-former-cm-hd-kumaraswamy-is-leading-by-54658-votes/
ಶಿವಮೊಗ್ಗ: ಜಿಲ್ಲೆಯ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಕೆ.ಎಸ್ ಈಶ್ವರಪ್ಪ ಸ್ಪರ್ಧೆಯ ನಡುವೆಯೂ ಬಿಜೆಪಿ ಅಭ್ಯರ್ಥಿ ಬಿ.ವೈ ರಾಘವೇಂದ್ರ ಭರ್ಜರಿ ಗೆಲುವು ಸಾಧಿಸಿದ್ದಾರೆ. ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಬಿ.ವೈ ರಾಘವೇಂದ್ರ, ಕಾಂಗ್ರೆಸ್ ಪಕ್ಷದಿಂದ ಗೀತಾ ಶಿವರಾಜ್ ಕುಮಾರ್ ಹಾಗೂ ಪಕ್ಷೇತರ ಅಭ್ಯರ್ಥಿಯಾಗಿ ಕೆ.ಎಸ್ ಈಶ್ವರಪ್ಪ ಕಣದಲ್ಲಿದ್ದರು. ಇಂದು ಲೋಕಸಭಾ ಚುನಾವಣೆಯ ಮತಏಣಿಕೆ ಕಾರ್ಯ ನಡೆಯುತ್ತಿದ್ದು, ಈವರೆಗಿನ ಮತಏಣಿಕೆ ಮಾಹಿತಿಯಂತೆ ಬಿಜೆಪಿಯ ಬಿವೈ ರಾಘವೇಂದ್ರ ಅವರು 4,88,710 ಮತಗಳನ್ನು ಗಳಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ 3,28,479 ಮತಗಳನ್ನು ಪಡೆದಿದ್ದಾರೆ. ಪಕ್ಷೇತರ ಅಭ್ಯರ್ಥಿ ಕೆ.ಎಸ್ ಈಶ್ವರಪ್ಪ 17,867 ಮತಗಳನ್ನು ಗಳಿಸಿದ್ದಾರೆ. ಒಟ್ಟಾರೆಯಾಗಿ ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬಿವೈ ರಾಘವೇಂದ್ರ ಅವರು ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಗಿಂತ 1,40,231 ಮತಗಳ ಮುನ್ನಡೆಯ ಮೂಲಕ ಗೆಲುವು ಸಾಧಿಸಿದ್ದಾರೆ. ಈ ಬಗ್ಗೆ ಚುನಾವಣಾ ಆಯೋಗದಿಂದ ಅಧಿಕೃತ ಘೋಷಣೆ ಮಾತ್ರವೇ ಬಾಕಿ ಉಳಿದಿದೆ. https://kannadanewsnow.com/kannada/jds-candidate-mallesh-babu-wins-in-kolar-official-announcement-awaited/ https://kannadanewsnow.com/kannada/assam-lok-sabha-election-results-live-updates-nda10-inc4-bjp-seeks-majority-for-third-term/