Author: kannadanewsnow09

ಮಂಡ್ಯ : ಗ್ರಾಮೀಣ ಭಾಗದ ಅಭಿವೃದ್ಧಿಗೆ ಸರಕಾರದಿಂದ ಹೆಚ್ಚಿನ ಅನುದಾನ ಪಡೆದು ಸರ್ವಾಂಗೀಣ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ಅಭಿವೃದ್ಧಿಗೆ ಬಿಡುಗಡೆಯಾಗುತ್ತಿರುವ ಅನುದಾನದ ಪ್ರತಿ ಪೈಸೆಯನ್ನೂ ಸದುಪಯೋಗ ಮಾಡಿಕೊಳ್ಳಲಾಗುತ್ತಿದೆ ಎಂದು ಶಾಸಕ ಕೆ.ಎಂ.ಉದಯ್ ಶುಕ್ರವಾರ ಹೇಳಿದರು. ಮದ್ದೂರು ತಾಲೂಕಿನ ಕೂಳಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರೆಕಲ್ ದೊಡ್ಡಿ, ಮೇಲದಾಸನದೊಡ್ಡಿ, ಕೊತ್ತಿಪುರ ಹಾಗೂ ಅಣ್ಣಹಳ್ಳಿದೊಡ್ಡಿ ಗ್ರಾಮಗಳಲ್ಲಿ ಅಂದಾಜು 3 ಕೋಟಿ ರೂ ವೆಚ್ಚದಲ್ಲಿ ಸಿಸಿ ರಸ್ತೆ ಮತ್ತು ಸಿಸಿ ಚರಂಡಿ ಕಾಮಗಾರಿಗಳಿಗೆ ಗುದ್ದಲಿಪೂಜೆ ನೆರವೇರಿಸಿ ಅವರು ಮಾತನಾಡಿದರು. ಮದ್ದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೆಲವು ಗ್ರಾಮಗಳಲ್ಲಿ ಇಂದಿಗೂ ಸಹ ಮೂಲಭೂತ ಸೌಕರ್ಯಗಳನ್ನು ಒದಗಿಸುವಲ್ಲಿ ಹಿಂದಿನ ಜನಪ್ರತಿನಿಧಿಗಳು ಸಾಕಷ್ಟು ನಿರ್ಲಕ್ಷ್ಯ ತೋರಿದ್ದಾರೆ. ಹೀಗಾಗಿ, ಗ್ರಾಮೀಣ ಭಾಗದ ಎಲ್ಲ ರಸ್ತೆಗಳು ಸಂಪೂರ್ಣ ಹದಗೆಟ್ಟಿವೆ. ಪ್ರಸ್ತುತ ಕಾಂಗ್ರೆಸ್ ಸರ್ಕಾರ 5 ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ನೀಡುವ ಜೊತೆಗೆ ಗ್ರಾಮೀಣಾಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುತ್ತಿದ್ದು, ಕೆಲವೆಡೆ ಹೊಸ ರಸ್ತೆಗಳ ನಿರ್ಮಾಣ, ಮರು ಡಾಂಬರೀಕರಣ, ದುರಸ್ತಿ ಕಾರ್ಯ ಪೂರ್ಣಗೊಂಡರೆ ಕೆಲವೆಡೆ…

Read More

ಬೆಂಗಳೂರು: ಕರ್ನಾಟಕ ವಿದ್ಯುತ್ ನಿಗಮದ (ಕೆಪಿಸಿಎಲ್) ಒಟ್ಟು 622 ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಡಿ.27 ಮತ್ತು 28ರಂದು ನಗರದಲ್ಲಿ ಮರು ಪರೀಕ್ಷೆ ನಡೆಸುತ್ತಿದ್ದು, ಬಿಗಿ ಕ್ರಮಗಳನ್ನು ಕೈಗೊಂಡಿದೆ. ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಈ ಹುದ್ದೆಗಳಿಗೆ ಮರು ಪರೀಕ್ಷೆ ನಡೆಸಲಾಗುತ್ತಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ. ಕೆಮಿಕಲ್ ಸೂಪರ್ ವೈಸರ್, ವಿವಿಧ ವಿಭಾಗಗಳ ಸಹಾಯಕ ಎಂಜಿನಿಯರ್ ಗಳ ನೇಮಕಕ್ಕೆ ಬೆಂಗಳೂರಿನ 17 ಕೇಂದ್ರಗಳಲ್ಲಿ ಡಿ.27ರಂದು ಲಿಖಿತ ಪರೀಕ್ಷೆ ನಡೆಯಲಿದೆ. ಒಟ್ಟು‌ 8,622 ಮಂದಿ ಪರೀಕ್ಷೆ ಬರೆಯಲು ಅರ್ಹತೆ ಪಡೆದಿದ್ದಾರೆ ಎಂದು ವಿವರಿಸಿದ್ದಾರೆ. ಡಿ.28ರಂದು ಕೆಮಿಸ್ಟ್, ವಿವಿಧ ವಿಭಾಗಗಳ ಕಿರಿಯ ಎಂಜಿನಿಯರ್ ಹುದ್ದೆಗಳಿಗೆ ಬೆಂಗಳೂರಿನ 21 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಒಟ್ಟು 10,136 ಮಂದಿ ಪರೀಕ್ಷೆ ಬರೆಯಲಿದ್ದಾರೆ ಎಂದರು. ಡಿ.28ರಂದು ಕನ್ನಡ ಭಾಷಾ ಪರೀಕ್ಷೆ ಕೂಡ ನಡೆಯಲಿದೆ ಎಂದು ಅವರು ಹೇಳಿದರು.

Read More

ದಾವಣಗೆರೆ : ಜಾತ್ಯಾತೀತ ಹಾಗೂ ಜನಪ್ರಿಯ ನಾಯಕರೆನಿಸಿದ್ದ ಶಾಮನೂರು ಶಿವಶಂಕರಪ್ಪನವರ ನಿಧನದಿಂದ ನಾಡಿಗೆ ಮತ್ತು ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಾಜಿ ಸಚಿವ ದಿ.ಶಾಮನೂರು ಶಿವಶಂಕರಪ್ಪ ಅವರ ನುಡಿನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಇಳಿವಯಸ್ಸಿನಲ್ಲಿಯೂ ಅತ್ಯಂತ ಕ್ರೀಯಾಶೀಲ ಶಾಮನೂರು ಶಿವಶಂಕರಪ್ಪ ಅವರು ದೇಶ ಕಂಡಂತಹ ಹಿರಿಯ ಶಾಸಕ, ಮಾಜಿ ಮಂತ್ರಿ ಹಾಗೂ ದಾವಣಗೆರೆಯ ನಗರಸಭೆ ಅಧ್ಯಕ್ಷರಾಗಿದ್ದರು. ಕಾಂಗ್ರೆಸ್ ಪಕ್ಷದಲ್ಲಿ ಖಜಾಂಚಿಯಾಗೀ ಸುಧೀರ್ಘ ಸೇವೆ ಸಲ್ಲಿಸಿದ್ದರು. ಇತ್ತೀಚೆಗೆ ಅವರ ಜನ್ಮದಿನಾಚರಣೆಯಲ್ಲಿ ಹಾಗೂ ದಾಲ್ ಮಿಲ್ ಉದ್ಘಾಟನೆಯಲ್ಲಿ ಪಾಲ್ಗೊಂಡಿದ್ದು, ಶ್ರೀಯುತರು ಶತಾಯುಷಿಗಳಾಗುತ್ತಾರೆ ಎಂಬ ನಂಬಿಕೆಯಿತ್ತು. ಅವರ ಅಗಲಿಕೆಯಿಂದ ನಾಡಿಗೆ ಮತ್ತು ಕಾಂಗ್ರೆಸ್ ಪಕ್ಷಕ್ಕೆ ತುಂಬಲಾರದ ನಷ್ಟವುಂಟಾಗಿದೆ. ತಮ್ಮ ಇಳಿವಯಸ್ಸಿನಲ್ಲಿಯೂ ಅತ್ಯಂತ ಕ್ರೀಯಾಶೀಲರಾಗಿದ್ದರು ಎಂದರು. ವೀರಶೈವ ಮಹಾಸಭಾದ ರಾಷ್ಟ್ರಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೆನು. ಬಿಜಾಪುರದ ಅಕ್ಕಮಹಾದೇವಿ ಮಹಿಳಾ ಕಾಲೇಜು ಹಾಗೂ ಸರ್ಕಾರಿ ಕಚೇರಿಗಳಲ್ಲಿ ಜಗದ್ಗುರು ಬಸವಣ್ಣನವರ ಛಾಯಾಚಿತ್ರ ಕಡ್ಡಾಯಗೊಳಿಸುವ ತೀರ್ಮಾನವನ್ನು ಅಭಿನಂದಿಸಲು ಸನ್ಮಾನ ಕಾರ್ಯಕ್ರಮವನ್ನು ಏರ್ಪಡಿಸಿದ್ದನ್ನು ಮುಖ್ಯಮಂತ್ರಿಗಳು…

Read More

ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಾಹಣಾ ಕಾಮಗಾರಿ ಹಿನ್ನೆಲೆಯಲ್ಲಿ 220/66/11 ಕೆ.ವಿ ಹೆಬ್ಬಾಳ ಉಪಕೇಂದ್ರ ವ್ಯಾಪ್ತಿಯಲ್ಲಿ ದಿನಾಂಕ 27.12.2025 (ಶನಿವಾರ) ರಂದು ಬೆಳಗ್ಗೆ 11:00 ಗಂಟೆಯಿಂದ ಸಂಜೆ 05:30 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. “ಗಂಗಾನಗರ, ಲಕ್ಷ್ಮಯ್ಹ್ ಬ್ಲಾಕ್, ವೀವರ್ ಕಾಲೋನಿ, ಸಿ.ಬಿ.ಐ ಕ್ವಾಟ್ರಸ್, ಆರ್.ಬಿ.ಐ ಕಾಲೋನಿ, ಸಿ.ಪಿ.ಯು ಬ್ಲಾಕ್, ಡಿ.ಜಿ.ಕ್ಯೂ ಕ್ವಾಟ್ರಸ್, ಮುನಿರಾಮಯ್ಯ ಬ್ಲಾಕ್, ಯು.ಎ.ಎಸ್ ಕ್ಯಾಂಪಸ್. ದಿನ್ನೂರ್ ಮುಖ್ಯ ರಸ್ತೆ, ಆರ್. ಟಿ ನಗರ, ಪಂಜಾಬ್ ನ್ಯಾಶನಲ್ ಬ್ಯಾಂಕ್, ಮುನನಪ್ಪಾ ಕಾಲೋನಿ, ಎಚ್.ಎಂ.ಟಿ ಬ್ಲಾಕ್,,ಚಾಮುಂಡಿನಗರ, ಮಾಜಿ ಸೈನಿಕರ ಕಾಲೋನಿ, ಆರ್ಟಿ ನಗರ ಪೊಲೀಸ್ ಠಾಣಾ ಪ್ರದೇಶ, ಅಶ್ವತ್ನಗರ, ಡಾಲರ್ಸ್ ಕಾಲೋನಿ, ಎಂಎಲ್ಎ ಲೇಔಟ್, ರತನ್ ಅಪರ್ಟ್ ಮೆಂಟ್, ಗಾಯತ್ರಿ ಅಪರ್ಟ್ ಮೆಂಟ್, ಫುಡ್ವರ್ಲ್ಡ ಆರ್ಟಿ ನಗರ, ನೃಪತುಂಗ ಬಡಾವಣೆ, ಕೃಷ್ಣಪ್ಪ ಬ್ಲಾಕ್.ಸಿಬಿಐ ಮುಖ್ಯರಸ್ತೆ, ಎಂಎಲ್ಎ ಲೇಔಟ್ನ ಭಾಗಗಳು, ಶಾಂತಿಸಾಗರ ಮುಖ್ಯ ರಸ್ತೆ, ಆರ್ಟಿ ನಗರ, ವೇಣುಗೋಪಾಲ ಲೇಔಟ್, ಜಡ್ಜಸ್ ಕಾಲೋನಿ, 80′ ರಸ್ತೆ, ವಿಶ್ವೇಶ್ವರ ಬ್ಲಾಕ್, ಕರಿಯಣ್ಣ…

Read More

ಮಂಡ್ಯ: ಜಿಲ್ಲೆಯ ಅಕ್ರಮ ಕಲ್ಲುಗಣಿಗಾರಿಕೆ ಕ್ವಾರೆಯಲ್ಲಿ ಟಿಪ್ಪರ್ ಸಮೇತ ಕೆಳಗೆ ಬಿದ್ದು ಚಾಲಕ ಸಾವನ್ನಪ್ಪಿದ್ದಾರೆ. ಕಲ್ಲು ತುಂಬಿದ ಟಿಪ್ಪರ್ ಆಯ ತಪ್ಪಿ 40 ಅಡಿ ಆಳದ ನೀರಿಗೆ ಬಿದ್ದಿರುವ ಟಿಪ್ಪರ್ ಲಾರಿ ಈ ಅವಘಡ ಸಂಭವಿಸಿದೆ. ಮಂಡ್ಯ ಜಿಲ್ಲೆ, ನಾಗಮಂಗಲ ತಾಲ್ಲೂಕಿನ ಜಟಕ ಗೇಟ್ ಬಳಿಯ ಕಲ್ಲು ಕ್ವಾರೆಯಲ್ಲಿ ಘಟನೆ ನಡೆದಿದೆ. ಟಿಪ್ಪರ್ ಚಾಲಕ ಚಾಲಕ ಲಚ್ಚಿ @ ಲಕ್ಷ್ಮಣ (38)ಮೃತ ದುರ್ದೈವಿಯಾಗಿದ್ದಾರೆ. ಈ ಜಾಗದಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಶ್ರೀ ಬಸವೇಶ್ವರ ಸ್ಟೋನ್ ಕ್ರಷರ್ ಅಗಿದೆ. ರವಿ& ಕಾಂತ ಎಂಬ ಸಹೋದರರ ಮಾಲಿಕತ್ವದಲ್ಲಿ ಅನುಮತಿ ಇಲ್ಲದೆ ನಡೆಯುತ್ತಿರೋ ಕ್ರಷರ್ ಇದಾಗಿದೆ. ಟಿಪ್ಪರ್ ಸಮೇತ 40 ಅಡಿ ಆಳವಾಗಿರೋ ನೀರಿರೋ ಜಾಗಕ್ಕೆ ಬಿದ್ದಿರುವ ಚಾಲಕ ಲಚ್ಚಿ ಮೃತ ದೇಹ ಮತ್ತು ಟಿಪ್ಪರ್. ಟಿಪ್ಪರ್ ಮೇಲೆತ್ತಲು ಸ್ಥಳದಲ್ಲಿ ಅಗ್ನಿಶಾಮಕ ಸಿಬ್ಬಂದಿಗಳಿಂದ. ಕಾರ್ಯಾಚರಣೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರಿಂದ ಸ್ಥಳ ಪರಿಶೀಲನೆ. ಬೆಳ್ಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ವರದಿ: ಗಿರೀಶ್ ರಾಜ್, ಮಂಡ್ಯ

Read More

ನಮ್ಮ ಹಿಂದಿನ ಜನ್ಮಗಳ ಕರ್ಮಗಳಿಂದಾಗಿಯೇ ನಾವು ಈ ಜನ್ಮದಲ್ಲಿ ಪೋಷಕರು, ಒಡಹುಟ್ಟಿದವರು, ಗಂಡ ಮತ್ತು ಹೆಂಡತಿಯರು, ಪ್ರೇಮಿಗಳು, ಸ್ನೇಹಿತರು ಮತ್ತು ಶತ್ರುಗಳು, ಸಂಬಂಧಿಕರು ಮುಂತಾದ ಎಲ್ಲಾ ಸಂಬಂಧಗಳನ್ನು ಪಡೆದುಕೊಳ್ಳುತ್ತೇವೆ. ಏಕೆಂದರೆ ನಾವು ಅವರಲ್ಲಿ ಪ್ರತಿಯೊಬ್ಬರಿಗೂ ಏನನ್ನಾದರೂ ನೀಡಬೇಕು ಅಥವಾ ಅವರಿಂದ ಏನನ್ನಾದರೂ ತೆಗೆದುಕೊಳ್ಳಬೇಕು. ಮಗುವಿನ ರೂಪದಲ್ಲಿ ಯಾರು ಬರುತ್ತಾರೆ? ಅದೇ ರೀತಿ, ನಮ್ಮ ಹಿಂದಿನ ಜನ್ಮದ ಸಂಬಂಧಿಯೊಬ್ಬರು ಮಗುವಿನಂತೆ ಜನಿಸುತ್ತಾರೆ. ಇದನ್ನು ಶಾಸ್ತ್ರಗಳಲ್ಲಿ ನಾಲ್ಕು ರೀತಿಯಲ್ಲಿ ವಿವರಿಸಲಾಗಿದೆ: ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ…

Read More

ದಾವಣಗೆರೆ : ರಾಜ್ಯ ಸರ್ಕಾರವು ಗ್ಯಾರಂಟಿಗಳಿಗೆ ಹಣ ಹೊಂದಿಸಿಕೊಳ್ಳಲು, ಖಾಲಿ ಆಗಿರುವ ಖಜಾನೆಯನ್ನು ಭರ್ತಿ ಮಾಡಿಕೊಳ್ಳಲು ಮದ್ಯದ ಅಂಗಡಿಗಳಿಗೆ ಪರವಾನಗಿ ನೀಡುವ ನೆಪದಲ್ಲಿ ಸುಲಿಗೆ ಮಾಡುತ್ತಿದೆ ಎಂದು ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಗಂಭೀರ ಆರೋಪಿಸಿದರು. ದಾವಣಗೆರೆಯಲ್ಲಿ ಗುರುವಾರ ದಿವಂಗತ ಶಾಮನೂರು ಶಿವಶಂಕರಪ್ಪ ಅವರ ಸ್ಮೃತಿ ಸ್ಥಳಕ್ಕೆ ತೆರಳಿ ನಮನ ಸಲ್ಲಿಸಿದ ನಂತರ ಕೇಂದ್ರ ಸಚಿವರು ಮಾಧ್ಯಮಗಳ ಜತೆ ಮಾತನಾಡಿದರು. ಮದ್ಯದಂಗಡಿ ಪರವಾನಗಿ ಒಂದಕ್ಕೆ ₹ 1.95 ಕೋಟಿ ದರವನ್ನು ರಾಜ್ಯ ಸರ್ಕಾರ ನಿಗದಿ ಮಾಡಿದೆ. ಇದು ಲೂಟಿನಲ್ಲೇ ಮತ್ತೇನು? ಜನರಿಗೆ ಇನ್ನು ದೊಡ್ಡ ಪ್ರಮಾಣದಲ್ಲಿ ಕುಡಿತದ ಚಟ ಹತ್ತಿಸಲು ಸರ್ಕಾರವೇ ಉತ್ತೇಜನ ನೀಡುತ್ತಿದೆ. ಇದೇ ರೀತಿ ಪ್ರತಿಯೊಂದು ಇಲಾಖೆಯನ್ನು ಲೂಟಿ ಮಾಡುತ್ತಿದೆ ಎಂದು ಕುಮಾರಸ್ವಾಮಿ ಅವರು ಆರೋಪ ಮಾಡಿದರು. ಪರಿಶಿಷ್ಟ ಜಾತಿ ಉಪ ಯೋಜನೆ (ಎಸ್‌ಸಿಎಸ್‌ಪಿ) ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆ (ಟಿಎಸ್‌ಪಿ) ಸೇರಿದಂತೆ ವಿವಿಧ ಯೋಜನೆಗಳ ಹಣ, ಅನುದಾನವನ್ನು ರಾಜ್ಯ ಸರ್ಕಾರ ದುರುಪಯೋಗ ಮಾಡಿಕೊಳ್ಳುತ್ತಿದೆ. ಎಷ್ಟು ಸಾಧ್ಯವೋ…

Read More

ಇದು ದತ್ತಾತ್ರೇಯನ ಕಥೆ; ಓದಿದ್ರೆ ನಿಮ್ಮ ಕಷ್ಟಗಳೆಲ್ಲ ಪರಿಹಾರ ಹಿಂದೂ ಸಂಪ್ರದಾಯದ ಪ್ರಕಾರ, ದತ್ತಾತ್ರೇಯ ಋಷಿ ಅತ್ರಿ ಮತ್ತು ಅವರ ಪತ್ನಿ ಅನಸೂಯಾ ಅವರ ಮಗ. ಅನಸೂಯಾ ಬಹಳ ಪರಿಶುದ್ಧ ಮತ್ತು ಸದ್ಗುಣಶೀಲ ಹೆಂಡತಿ. ಬ್ರಹ್ಮ, ವಿಷ್ಣು ಮತ್ತು ಶಿವನ ತ್ರಿಮೂರ್ತಿಗಳಿಗೆ ಸಮಾನವಾದ ಮಗನನ್ನು ಪಡೆಯಲು ಅವಳು ಕಠಿಣ ತಪಸ್ಸನ್ನು (ತಪಸ್ಸನ್ನು) ಮಾಡಿದ್ದಳು. ಪುರುಷ ತ್ರಿಮೂರ್ತಿಗಳ ಪತ್ನಿಯರಾದ ತ್ರಿಮೂರ್ತಿಗಳಾದ ಸರಸ್ವತಿ, ಲಕ್ಷ್ಮಿ ಮತ್ತು ಪಾರ್ವತಿ ದೇವಿಯು ಅನ್ಸೂಯಾ ಬಗ್ಗೆ ಅಸೂಯೆಪಟ್ಟರು ಮತ್ತು ಅವರ ಸದ್ಗುಣವನ್ನು ಪರೀಕ್ಷಿಸಲು ತಮ್ಮ ಗಂಡಂದಿರನ್ನು ಕೇಳಿದರು. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ…

Read More

ದನುರ್ಮಾಸ ದ ಮುಂಜಾನೆ ಈ ಸ್ತೋತ್ರ ಪಠಿಸಿರಿ ಮಹಾಲಕ್ಷ್ಮಿ ಸ್ಥಿರ ವಾಗಿ ನಿಲ್ಲುತ್ತಾಳೆ. ಶ್ರೀಭದ್ರಲಕ್ಷ್ಮೀ ಸ್ತೋತ್ರಂ ಶ್ರೀದೇವೀ ಪ್ರಥಮಂ ನಾಮ ದ್ವಿತೀಯಮಮೃತೋದ್ಭವಾ | ತೃತೀಯಂ ಕಮಲಾ ಪ್ರೋಕ್ತಾ ಚತುರ್ಥಂ ಲೋಕಸುಂದರೀ || ೧ || ಪಂಚಮಂ ವಿಷ್ಣುಪತ್ನೀತಿ ಷಷ್ಠಂ ಶ್ರೀವೈಷ್ಣವೀತಿ ಚ | ಸಪ್ತಮಂ ತು ವರಾರೋಹಾ ಅಷ್ಟಮಂ ಹರಿವಲ್ಲಭಾ || ೨ || ನವಮಂ ಶಾರ್ಙ್ಗಣೀ ಪ್ರೋಕ್ತಾ ದಶಮಂ ದೇವದೇವಿಕಾ | ಏಕಾದಶಂ ಮಹಾಲಕ್ಷ್ಮೀಃ ದ್ವಾದಶಂ ಲೋಕಸುಂದರೀ || ೩ || ಶ್ರೀಃ ಪದ್ಮಾ ಕಮಲಾ ಮುಕುಂದಮಹಿಷೀ ಲಕ್ಷ್ಮೀಸ್ತ್ರಿಲೋಕೇಶ್ವರೀ | ಮಾ ಕ್ಷೀರಾಬ್ಧಿ ಸುತಾಽರವಿಂದಜನನೀ ವಿದ್ಯಾ ಸರೋಜಾತ್ಮಿಕಾ || ೪ || ಸರ್ವಾಭೀಷ್ಟಫಲಪ್ರದೇತಿ ಸತತಂ ನಾಮಾನಿ ಯೇ ದ್ವಾದಶ | ಪ್ರಾತಃ ಶುದ್ಧತರಾಃ ಪಠಂತಿ ಸತತಂ ಸರ್ವಾನ್ ಲಭಂತೇ ಶುಭಾನ್ || ೫ || ಭದ್ರಲಕ್ಷ್ಮೀ ಸ್ತವಂ ನಿತ್ಯಂ ಪುಣ್ಯಮೇತಚ್ಛುಭಾವಹಂ | ಕಾಲೇ ಸ್ನಾತ್ವಾಪಿ ಕಾವೇರ್ಯಾಂ ಜಪ ಶ್ರೀವೃಕ್ಷಸನ್ನಿಧೌ || ೬ || || ಇತಿ ಶ್ರೀಭದ್ರಲಕ್ಷ್ಮೀ ಸ್ತೋತ್ರಂ ಸಂಪೂರ್ಣಂ…

Read More

ದಾವಣಗೆರೆ : ಕೇಂದ್ರ ಸರ್ಕಾರ ರೈಲ್ವೆ ಪ್ರಯಾಣ ದರ ಏರಿಕೆ ಮಾಡಿದೆ. ಜನಸಾಮಾನ್ಯರ ಮೇಲೆ ದರ ಏರಿಕೆ ಹೊರೆಯಾಗುತ್ತಿರುವ ಬಗ್ಗೆ ರಾಜ್ಯದ ಬಿಜೆಪಿ ನಾಯಕರು ಪ್ರಶ್ನಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಾ, ಕೇಂದ್ರ ಸರ್ಕಾರ ರೈಲು ಪ್ರಯಾಣ ದರ ಏರಿಕೆ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದರು. ಹಿರಿಯೂರು ಬಸ್ ಅಪಘಾತ: ತನಿಖೆ ನಡೆಸಲಾಗುವುದು ಚಿತ್ರದುರ್ಗದ ಹಿರಿಯೂರು ಬಳಿ ನಡೆದ ಬಸ್ ಮತ್ತು ಟ್ರಕ್ ಅಪಘಾತದ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸುತ್ತಾ, ಈ ಅಪಘಾತದಲ್ಲಿ ಟ್ರಕ್ ಚಾಲನ ತಪ್ಪಿರುವುದಾಗಿ ಮೇಲ್ನೋಟಕ್ಕೆ ಕಂಡು ಬರುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಟ್ರಕ್ ವಿಭಜಕವನ್ನು ದಾಟಿ ಬಸ್ ಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ 4 ಮಹಿಳೆಯರು ಹಾಗೂ ಒಂದು ಮಗು ಹಾಗೂ ಟ್ರಕ್ ಚಾಲಕ ಸಾವಿಗೀಡಾಗಿದ್ದಾರೆ. ಬಸ್ಸುಗಳು ಎಲ್ಲಾ ಸುರಕ್ಷತೆಯ ಕ್ರಮಗಳನ್ನು ಅನುಸರಿಸುವುದು ಅವಶ್ಯಕ. ಅಪಘಾತದ ಬಗ್ಗೆ ತನಿಖೆ ನಡೆಸಲಾಗುವುದು ಎಂದರು. ಕಾಂಗ್ರೆಸ್ ನ ಕಾರ್ಯಕಾರಣಿ ಸಭೆಯಲ್ಲಿ…

Read More