Subscribe to Updates
Get the latest creative news from FooBar about art, design and business.
Author: kannadanewsnow09
ನವದೆಹಲಿ: ಕಳೆದ ವಾರ ಏಪ್ರಿಲ್ 15 ರಂದು ಸಂಸತ್ತು ಅಂಗೀಕರಿಸಿದ ವಕ್ಫ್ (ತಿದ್ದುಪಡಿ) ಮಸೂದೆ, 2025 ರ ವಿರುದ್ಧ ಸಲ್ಲಿಸಲಾದ ಪ್ರಕರಣವನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುವ ಸಾಧ್ಯತೆಯಿದೆ. ಇತ್ತೀಚೆಗೆ ಮುಕ್ತಾಯಗೊಂಡ ಬಜೆಟ್ ಅಧಿವೇಶನದಲ್ಲಿ ಸಂಸತ್ತಿನ ಎರಡೂ ಸದನಗಳು ವಿವಾದಾತ್ಮಕ ಮಸೂದೆಯನ್ನು ಅಂಗೀಕರಿಸಿದವು. ನಂತರ ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷ ಸೇರಿದಂತೆ ಹಲವಾರು ಪಕ್ಷಗಳ ನಾಯಕರು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯ ಶಾಸನದ ವಿರುದ್ಧ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದರು. ಕಾಯ್ದೆಯ ಸಿಂಧುತ್ವವನ್ನು ಪ್ರಶ್ನಿಸಿ ಇಲ್ಲಿಯವರೆಗೆ ಸುಪ್ರೀಂ ಕೋರ್ಟ್ನಲ್ಲಿ 10 ಕ್ಕೂ ಹೆಚ್ಚು ಅರ್ಜಿಗಳನ್ನು ಸಲ್ಲಿಸಲಾಗಿದೆ. ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ಇತರ ಹಲವಾರು ಶಾಸನಗಳಿಗೆ ಮಾಡಿದಂತೆ ಈ ಕಾಯ್ದೆಯ ಸಿಂಧುತ್ವವನ್ನು ಪಕ್ಷವು ಪ್ರಶ್ನಿಸಲಿದೆ ಎಂದು ಕಾಂಗ್ರೆಸ್ ರಾಜ್ಯಸಭಾ ಸಂಸದ ಜೈರಾಮ್ ರಮೇಶ್ ಶುಕ್ರವಾರ ಘೋಷಿಸಿದರು. ತರುವಾಯ, ಅಖಿಲ ಭಾರತ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ಅಧ್ಯಕ್ಷ ಅಸ್ಸಾವುದ್ದೀನ್ ಓವೈಸಿ, ಕಾಂಗ್ರೆಸ್ ಸಂಸದ ಮೊಹಮ್ಮದ್ ಜಾವೇದ್ ಕೂಡ ಸುಪ್ರೀಂ ಕೋರ್ಟ್ನಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮಾರಾಟವಾಗುತ್ತಿರುವಂತ ಔಷಧಿಗಳ ಗುಣಮಟ್ಟದ ಬಗ್ಗೆ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯು ಶಾಕಿಂಗ್ ಮಾಹಿತಿಯನ್ನು ಬಹಿರಂಗಪಡಿಸಿದೆ. ಅದೇನು ಅಂತ ಮುಂದೆ ಓದಿ. ಈ ಕುರಿತಂತೆ ರಾಜ್ಯ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯು ಮಾಹಿತಿ ನೀಡಿದ್ದು, ಔಷಧ ಆಡಳಿತವು ರಾಜ್ಯದಲ್ಲಿ ತಯಾರಾಗುವ ಮತ್ತು ಮಾರಾಟಕ್ಕಾಗಿ ಸರಬರಾಜಾಗುತ್ತಿರುವ ಔಷಧಗಳ ಮತ್ತು ಕಾಂತಿವರ್ಧಕಗಳ ಮೇಲೆ ನಿಯಮಾನುಸಾರ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳುವುದು ಮತ್ತು ಉತ್ತಮ ಗುಣಮಟ್ಟದ, ಸುರಕ್ಷಿತ ಹಾಗೂ ಪರಿಣಾಮಕಾರಿ ಔಷಧಗಳನ್ನು ಸರ್ಕಾರ ನಿಗದಿ ಪಡಿಸಿದ ಬೆಲೆಗಳಲ್ಲಿ ಗ್ರಾಹಕರಿಗೆ ದೊರಕುವಂತೆ ಮಾಡುವುದೇ ಇಲಾಖೆಯ ಮುಖ್ಯ ಉದ್ದೇಶವಾಗಿರುತ್ತದೆ. ಅಂತೆಯೇ ಇಲಾಖೆಯ ಆಹಾರ ಸುರಕ್ಷತಾ ವಿಭಾಗವು ಸಾರ್ವಜನಿಕರು ಸೇವಿಸುವ ಆಹಾರದ ಗುಣಮಟ್ಟ ಮತ್ತು ಸುರಕ್ಷತಾ ಅಂಶಗಳನ್ನು ಖಾತರಿಪಡಿಸುವ ಮೂಲಕ ಸಾರ್ವಜನಿಕರ ಆರೋಗ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದೆ. ಔಷಧ ಆಡಳಿತ: ಔಷಧ ಆಡಳಿತ ವಿಭಾಗದ ಅಮಲು ಜಾರಿ ಅಧಿಕಾರಿಗಳು ಸಾರ್ವಜನಿಕ ಆರೋಗ್ಯ ದೃಷ್ಠಿಯಿಂದ ಮಾರ್ಚ್ 2025ರ ಮಾಹೆಯಲ್ಲಿ ಒಟ್ಟು 1,891 ಔಷಧ ಮಾದರಿಗಳನ್ನು…
ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟವಾಗಿದೆ. ಪರೀಕ್ಷೆಗೆ ಹಾಜರಾದಂತ 6,37,805 ವಿದ್ಯಾರ್ಥಿಗಳಲ್ಲಿ 4,68,439 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಒಟ್ಟಾರೆ ಶೇಕಡವಾರು ಪ್ರಮಾಣ 73.45ರಷ್ಟು ಆಗಿದೆ. ಇದರ ಜೊತೆಗೆ ದ್ವಿತೀಯ ಪಿಯುಸಿ ಪರೀಕ್ಷೆ-2 ಹಾಗೂ ಪರೀಕ್ಷೆ-3ಕ್ಕೆ ದಿನಾಂಕವನ್ನು ಹಾಗೂ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ದ್ವಿತೀಯ ಪಿಯುಸಿ ಪರೀಕ್ಷೆ-1 ಅನ್ನು ದಿನಾಂಕ 01-03-2025ರಿಂದ 20-03-2025ರವರೆಗೆ ಒಟ್ಟು 1.171 ಪರೀಕ್ಷಾ ಕೇಂದ್ರಗಳಲ್ಲಿ ರಾಜ್ಯಾಧ್ಯಂತ ನಡೆಸಲಾಯಿತು. ಉತ್ತರ ಪತ್ರಿಕೆಗಳ ಮೌಲ್ಯ ಮಾಪನ ಕಾರ್ಯವನ್ನು 76 ಮೌಲ್ಯಮಾಪನ ಕೇಂದ್ರಗಳಲ್ಲಿ ದಿನಾಂಕ 21-03-2025ರಿಂದ 02-04-2025ರವರೆಗೆ 28,092 ಮೌಲ್ಯ ಮಾಪಕರಿಂದ ನಡೆಸಲಾಯಿತು. ಇಂದು ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ ಪ್ರಕಟಿಸಲಾಗಿದೆ. ಎಲ್ಲಾ ಕಾಲೇಜುಗಳಲ್ಲಿ ಫಲಿತಾಂಶವನ್ನು ಇಂದ ಮಧ್ಯಾಹ್ನ 1.30 ಗಂಟೆಗಳ ನಂತ್ರ ಪ್ರಕಟಿಸಲಾಗುತ್ತದೆ. ಹೀಗಿದೆ ಜಿಲ್ಲಾವಾರು ಶೇಕಡವಾರು ಉತ್ತೀರ್ಣ ಫಲಿತಾಂಶ ಉಡುಪಿ – ಶೇ.93.90 ದಕ್ಷಿಣ ಕನ್ನಡ – ಶೇ.93.57 ಬೆಂಗಳೂರು ದಕ್ಷಿಣ – ಶೇ.85.36 ಕೊಡಗು – ಶೇ.83.84 ಬೆಂಗಳೂರು ಉತ್ತರ – ಶೇ.83.31 ಉತ್ತರ ಕನ್ನಡ –…
ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟವಾಗಿದೆ. ಪರೀಕ್ಷೆಗೆ ಹಾಜರಾದಂತ 6,37,805 ವಿದ್ಯಾರ್ಥಿಗಳಲ್ಲಿ 4,68,439 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಒಟ್ಟಾರೆ ಶೇಕಡವಾರು ಪ್ರಮಾಣ 73.45ರಷ್ಟು ಆಗಿದೆ. ಹಾಗಾದ್ರೇ ಜಿಲ್ಲಾವಾರು ಫಲಿತಾಂಶದ ಮಾಹಿತಿ ಮುಂದಿದೆ ಓದಿ. ದ್ವಿತೀಯ ಪಿಯುಸಿ ಪರೀಕ್ಷೆ-1 ಅನ್ನು ದಿನಾಂಕ 01-03-2025ರಿಂದ 20-03-2025ರವರೆಗೆ ಒಟ್ಟು 1.171 ಪರೀಕ್ಷಾ ಕೇಂದ್ರಗಳಲ್ಲಿ ರಾಜ್ಯಾಧ್ಯಂತ ನಡೆಸಲಾಯಿತು. ಉತ್ತರ ಪತ್ರಿಕೆಗಳ ಮೌಲ್ಯ ಮಾಪನ ಕಾರ್ಯವನ್ನು 76 ಮೌಲ್ಯಮಾಪನ ಕೇಂದ್ರಗಳಲ್ಲಿ ದಿನಾಂಕ 21-03-2025ರಿಂದ 02-04-2025ರವರೆಗೆ 28,092 ಮೌಲ್ಯ ಮಾಪಕರಿಂದ ನಡೆಸಲಾಯಿತು. ಇಂದು ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ ಪ್ರಕಟಿಸಲಾಗಿದೆ. ಎಲ್ಲಾ ಕಾಲೇಜುಗಳಲ್ಲಿ ಫಲಿತಾಂಶವನ್ನು ಇಂದ ಮಧ್ಯಾಹ್ನ 1.30 ಗಂಟೆಗಳ ನಂತ್ರ ಪ್ರಕಟಿಸಲಾಗುತ್ತದೆ. ಹೀಗಿದೆ ಜಿಲ್ಲಾವಾರು ಶೇಕಡವಾರು ಉತ್ತೀರ್ಣ ಫಲಿತಾಂಶ ಉಡುಪಿ – ಶೇ.93.90 ದಕ್ಷಿಣ ಕನ್ನಡ – ಶೇ.93.57 ಬೆಂಗಳೂರು ದಕ್ಷಿಣ – ಶೇ.85.36 ಕೊಡಗು – ಶೇ.83.84 ಬೆಂಗಳೂರು ಉತ್ತರ – ಶೇ.83.31 ಉತ್ತರ ಕನ್ನಡ – ಶೇ.82.93 ಶಿವಮೊಗ್ಗ – ಶೇ.79.91 ಬೆಂಗಳೂರು…
ಬೆಂಗಳೂರು: ಶಿವಮೊಗ್ಗ ಡಿಸಿಸಿ ಬ್ಯಾಂಕ್ ನಲ್ಲಿ ನಕಲಿ ಚಿನ್ನ ಅಡವಿಟ್ಟು ಅಕ್ರಮ ನಡೆಸಿದ ಪ್ರಕರಣ ಸಂಬಂಧ ಬ್ಯಾಂಕ್ ನ ಅಧ್ಯಕ್ಷ ಆರ್.ಎಂ ಮಂಜುನಆಥ ಗೌಡ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿದ್ದಾರೆ. ಬೆಂಗಳೂರಿನ ಅಪೆಕ್ಸ್ ಬ್ಯಾಂಕ್ ನ ಅತಿಥಿ ಗೃಹದಲ್ಲಿದ್ದಂತ ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ ಮಂಜುನಾಥ ಗೌಡ ಅವರನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿದ್ದಾರೆ. ಇನ್ನೂ ಶಿವಮೊಗ್ಗ ಡಿಸಿಸಿ ಬ್ಯಾಂಕ್ ನಲ್ಲಿ ನಕಲಿ ಚಿನ್ನ ಅಡವಿಟ್ಟ ಪ್ರಕರಣ ಸಂಬಂಧ ಮತ್ತೊಬ್ಬ ಸಿಬ್ಬಂದಿಯನ್ನೂ ಇಡಿ ಅಧಿಕಾರಿಗಳು ವಶಕ್ಕೆ ಪಡೆದಿರುವುದಾಗಿ ಮೂಲಗಳಿಂದ ಮಾಹಿತಿ ತಿಳಿದು ಬಂದಿದೆ. ಅಂದಹಾಗೇ 2014 ರಿಂದ 15ರಲ್ಲಿ ಶಿವಮೊಗ್ಗ ಡಿಸಿಸಿ ಬ್ಯಾಂಕ್ ನಲ್ಲಿ ನಕಲಿ ಚಿನ್ನಾಭರಣ ಅಡವಿಟ್ಟು ಬರೋಬ್ಬರಿ 62.77 ಕೋಟಿ ಸಾಲ ಪಡೆಯಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಬೆಂಗಳೂರು, ಶಿವಮೊಗ್ಗ ಸೇರಿದಂತೆ ಐದು ಕಡೆಯಲ್ಲಿ ದಾಳಿ ನಡೆಸಿದ್ದಾರೆ. ಈ ಪ್ರಕಣದಲ್ಲಿ ಅಕ್ರಮ ನಡೆದಾಗ ಬ್ಯಾಂಕ್ ನ…
ಬೆಂಗಳೂರು: ಇಂದು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರ ಫಲಿತಾಂಶ ಪ್ರಕಟವಾಗಿದೆ. ಈ ಬೆನ್ನಲ್ಲೇ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2ಕ್ಕೆ ಪುನರಾವರ್ತಿತ ಮತ್ತು ಫಲಿತಾಂಶ ಉತ್ತಮಪಡಿಸಿಕೊಳ್ಳುವ ವಿದ್ಯಾರ್ಥಿಗಳಿಗೆ ಅವಕಾಶವನ್ನು ನೀಡಲಾಗಿದೆ. ಆ ಬಗ್ಗೆ ಮಾಹಿತಿ ಮುಂದಿದೆ ಓದಿ. ಈ ಬಗ್ಗೆ ಶಾಲಾ ಪರೀಕ್ಷೆ ಮತ್ತು ಮೌಲ್ಯ ಮಾಪನ ಇಲಾಖೆಯಿಂದ ಮಾಹಿತಿ ನೀಡಲಾಗಿದ್ದು ಪರೀಕ್ಷೆ-2ಕ್ಕೆ ಪರೀಕ್ಷಾ ಶುಲ್ಕ ಪಾವತಿಸಲು ಹಾಗೂ ಪುನರಾವರ್ತಿತ ಅಪೂರ್ಣ ಹಾಗೂ ಫಲಿತಾಂಶ ಉತ್ತಮ ಪಡಿಸಿಕೊಳ್ಳುವ ವಿದ್ಯಾರ್ಥಿಗಳು ಮಾಹಿತಿಯನ್ನು ಪ್ರಾಂಶುಪಾಲರು ಪರೀಕ್ಷಾ ತಂತ್ರಾಂಶದಲ್ಲಿ ಇಂದೀಕರಿಸಲು ದಂಡ ರಹಿತ ಕೊನೆಯ ದಿನಾಂಕ 08-04-2025ರಿಂದ 15-04-2025 ಆಗಿರುತ್ತದೆ. ದಂಡ ಸಹಿತ ಕೊನೆಯ ದಿನಾಂಕ 16-04-2025 ರಿಂದ 17-04-2025 ಆಗಿದೆ. ಪ್ರಾಂಶುಪಾಲರು ಪರೀಕ್ಷಾ ಶುಲ್ಕವನ್ನು ಒಂದೇ ಕಂತಿನಲ್ಲಿ ಸಂದಾಯ ಮಾಡಬೇಕಾದ ಕೊನೆಯ ದಿನಾಂಕ ದಂಡ ರಹಿತ 16-04-2025 ಆಗಿದ್ದರೇ, ದಂಡ ಸಹಿತ 19-04-2025 ಆಗಿದೆ. ಪ್ರಾಂಶುಪಾಲರು ಪರೀಕ್ಷಾ ಅರ್ಜಿಗಳನ್ನು ಮೂಲ ಚಲನ್ ಸಹಿತ ಜಿಲ್ಲಾ ಉಪ ನಿರ್ದೇಶಕರ ಕಚೇರಿಗೆ ಕಡ್ಡಾಯವಾಗಿ ಸಲ್ಲಿಸಲು ದಿನಾಂಕ 16-04-2025ರಿಂದ 19-04-2025…
ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟವಾಗಿದೆ. ಶೇ.93.90ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಉಡುಪಿ ಪ್ರಥಮ ಸ್ಥಾನ ಗಳಿಸಿದರೇ, ಶೇ.73.45ರಷ್ಟು ಫಲಿತಾಂಶ ಪಡೆಯುವ ಮೂಲಕ ಯಾದಗಿರಿ ಕೊನೆಯ ಸ್ಥಾನವನ್ನು ಪಡೆದುಕೊಂಡಿದೆ. ಇದೀಗ ವಿದ್ಯಾರ್ಥಿಗಳು ಉತ್ತರ ಪತ್ರಿಕೆ ಸ್ಕ್ಟಾನ್ಡ್ ಪ್ರತಿ, ಮರು ಮೌಲ್ಯ ಮಾಪನದ ಕುರಿತು ಮಾಹಿತಿ ಬಿಡುಗಡೆ ಮಾಡಿದ್ದು, ಆ ಮಾಹಿತಿ ಮುಂದಿದೆ ಓದಿ. 2025ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರ ವಿದ್ಯಾರ್ಥಿಗಳ ಫಲಿತಾಂಶದ ಪಟ್ಟಿ KSEABಯ ಪಿಯು ಪರೀಕ್ಷಾ ಪೋರ್ಟಲ್ ಲಾಗಿನ್ ಮೂಲಕ ಆಯಾ ಕಾಲೇಜುಗಳಿಗೆ ಕಳುಹಿಸಲಾಗಿರುತ್ತದೆ. ಉತ್ತರ ಪತ್ರಿಕೆಯ ಸ್ಕ್ಯಾನಿಂಗ್ ಪ್ರತಿ ಹಾಗೂ ಮರು ಮೌಲ್ಯ ಮಾಪನ ಶುಲ್ಕವನ್ನು ಪಾವತಿಸಲು ಆನ್ ಲೈನ್ ಮತ್ತು ಆಫ್ ಲೈನ್ ನಲ್ಲಿ ಚಲನ್ ಮುಖಾಂತರ ಪಾವತಿಸಲು ಅವಕಾಶವಿರುತ್ತದೆ ಎಂದು ಶಾಲಾ ಪರೀಕ್ಷೆ ಮತ್ತು ಮೌಲ್ಯ ಮಾಪನ ಇಲಾಖೆ ತಿಳಿಸಿದೆ. ಉತ್ತರ ಪತ್ರಿಕೆಯ ಸ್ಕ್ಯಾನ್ಡ್ ಪ್ರತಿಗಾಗಿ ಅರ್ಜಿ ಸಲ್ಲಿಸಲು ದಿನಾಂಕ 08-04-2025ರಿಂದ 13-04-2025ರವರೆಗೆ ಅವಕಾಶ ನೀಡಿದೆ. ಉತ್ತರ ಪತ್ರಿಕೆಯ ಸ್ಕ್ಯಾನ್ಡ್ ಪ್ರತಿ ಡೌನ್…
ಬೆಂಗಳೂರು: ಕರ್ನಾಟಕ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರ ಫಲಿತಾಂಶ ಪ್ರಕಟವಾಗಿದೆ. ಈ ಬಾರಿ ಉಡುಪಿ ಜಿಲ್ಲೆಗೆ ಪ್ರಥಮವನ್ನು ಪಡೆದುಕೊಂಡಿದ್ದರೇ, ಯಾದಗಿರಿ ಜಿಲ್ಲೆ ಕೊನೆಯ ಸ್ಥಾನ ಪಡೆದುಕೊಂಡಿದೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದಂತ ಶಾಲಾ ಶಿಕ್ಷಣ ಸಚಿವ ಮಧು ಎಸ್ ಬಂಗಾರಪ್ಪ ಅವರು, ವಾಣಿಜ್ಯ ವಿಭಾಿ ಶೇ.76.07ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಕಲಾ ವಿಭಾಗದಲ್ಲಿ ಸಂಜನಾ ಬಾಯಿ ಮೊದಲ ರ್ಯಾಂಕ್ ಪಡೆದಿದ್ದಾರೆ. ಬಳ್ಳಾರಿ ಜಿಲ್ಲೆ ಪಿಯು ಕಾಲೇಜಿನ ವಿದ್ಯಾರ್ಥಿನಿ ಆಗಿದ್ದಾರೆ ಎಂದರು. ರಾಮನಗ 69.71, ಕೊಪ್ಪಳ 67.20, ಬಳ್ಳಾರಿ 64.41, ಚಿತ್ರದುರ್ಗ 59.87, ಕೋಲಾರ 72.45, ಬೀದರ್ 67.31, ಬೆಳಗಾವಿ 65.37ರಷ್ಟು ಫಲಿತಾಂಶ ಬಂದಿದೆ ಎಂದರು. ಕರ್ನಾಟಕ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿ (ಕೆಎಸ್ಇಎಬಿ) ಮಂಗಳವಾರ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿದೆ. ಫಲಿತಾಂಶಕ್ಕಾಗಿ ಕಾಯುತ್ತಿರುವ ವಿದ್ಯಾರ್ಥಿಗಳು ತಮ್ಮ ಕರ್ನಾಟಕ ದ್ವಿತೀಯ ಪಿಯುಸಿ ಸ್ಕೋರ್ ಕಾರ್ಡ್ ಗಳನ್ನು ಕೆಎಸ್ ಇಎಬಿಯ ಅಧಿಕೃತ ವೆಬ್ ಸೈಟ್ ನಲ್ಲಿ karresults.nic.in ಮತ್ತು kseab.karnataka.gov.in ಪರಿಶೀಲಿಸಬಹುದು. ಮಾರ್ಚ್ 1…
ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನ ಕೆಲ ಪ್ರದೇಶಗಳಲ್ಲಿ ತುರ್ತು ವಿದ್ಯುತ್ ನಿರ್ವಹಣಾ ಕಾಮಗಾರಿಯ ಹಿನ್ನಲೆಯಲ್ಲಿ, ನಾಳೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಈ ಬಗ್ಗೆ ಶಿವಮೊಗ್ಗ ಜಿಲ್ಲೆಯ ಸಾಗರದ ಮೆಸ್ಕಾಂ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದಿನಾಂಕ 08-04-2025ರಂದು ಸಾಗರ ನಗರ ಉಪ ವಿಭಾಗದ ಘಟಕ-1ರಲ್ಲಿ ತುರ್ತು ವಿದ್ಯುತ್ ನಿರ್ವಹಣಾ ಕಾರ್ಯವನ್ನು ಕೈಗೊಳ್ಳಲಾಗುತ್ತಿದೆ. ಈ ಹಿನ್ನಲೆಯಲ್ಲಿ ಈ ಕೆಳಗಿನ ಸಾಗರ ತಾಲ್ಲೂಕಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದಿದೆ. ನಾಳೆ ಸಾಗರ ತಾಲ್ಲೂಕಿನ ಈ ಏರಿಯಾಗಳಲ್ಲಿ ಕರೆಂಟ್ ಇರಲ್ಲ ನಾಳೆ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಬಸವನಹೊಳೆ, ಜಂಬಗಾರು, ಶಿವಮೊಗ್ಗ ರಸ್ತೆ, ಹೆಚ್.ಕೆ ಹೆಚ್ ಲೇಔಟ್, ತ್ಯಾಗರ್ತಿ ಕ್ರಾಸ್ ನಲ್ಲಿ ಪವರ್ ಕಟ್ ಆಗಲಿದೆ. ಇದಲ್ಲದೇ ಜಂಬಗಾರು ಮಹಿಳಾ ಹಾಸ್ಟೆಲ್ ಬಳಿ ಮತ್ತು ಜಂಬಗಾರು ಆಶ್ರಯ ಲೇಔಟ್ ಹತ್ತಿರದ ಸುತ್ತಮುತ್ತಲ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಮನವಿ ಮಾಡಿದೆ. ವರದಿ: ವಸಂತ ಬಿ ಈಶ್ವರಗೆರೆ https://kannadanewsnow.com/kannada/overseas-job-fair-to-be-held-soon-minister-dr-sharanprakash-patil/…
ಬೆಂಗಳೂರು: ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ ಕಲ್ಪಿಸಲು ಸರ್ಕಾರದ ವತಿಯಿಂದ ರಾಜ್ಯದ ವಿವಿಧೆಡೆ ಉದ್ಯೋಗ ಮೇಳಗಳನ್ನು ಆಯೋಜಿಸುವುದರ ಜತೆಗೆ ಆರೋಗ್ಯ ವೃತ್ತಿಪರರಿಗಾಗಿ ಸಾಗರೋತ್ತರ ಉದ್ಯೋಗ ಮೇಳ ಆಯೋಜಿಸಲು ನಿರ್ಧರಿಸಲಾಗಿದೆ. “ಜರ್ಮನಿ, ಜಪಾನ್, ಇಟಲಿ ಮತ್ತಿತರ ರಾಷ್ಟ್ರಗಳಿಂದ ನರ್ಸ್, ಅರೆ ವೈದ್ಯಕೀಯ ಮುಂತಾದ ಆರೋಗ್ಯ ವೃತ್ತಿಪರರಿಗೆ ಸಾಕಷ್ಟು ಬೇಡಿಕೆ ಇದೆ. ಹೀಗಾಗಿ ಮುಂದಿನ ಮೂರು ತಿಂಗಳಲ್ಲಿ ಈ ಆರೋಗ್ಯ ವೃತ್ತಿಪರರಿಗಾಗಿಯೇ ಸಾಗರೋತ್ತರ ಉದ್ಯೋಗ ಮೇಳವನ್ನು ಕೌಶಲ್ಯಾಭಿವೃದ್ಧಿ ಇಲಾಖೆಯಿಂದ ಆಯೋಜಿಸಲಾಗುವುದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ್ ಪ್ರಕಾಶ್ ಪಾಟೀಲ್ ಎಂದಿದ್ದಾರೆ. “ರಾಜ್ಯದ ಆರೋಗ್ಯ ವೃತ್ತಿಪರರಿಗೆ ವಿದೇಶಗಳಲ್ಲಿ ಸಾಕಷ್ಟು ಬೇಡಿಕೆ ಇದ್ದರೂ ಭಾಷೆ ಎಂಬುದು ಅವರಿಗೆ ಅಡ್ಡಿಯಾಗುತ್ತಿದೆ. ಹೀಗಾಗಿ ರಾಜ್ಯದ ನರ್ಸಿಂಗ್ ಕಾಲೇಜುಗಳಲ್ಲಿ ಜರ್ಮನ್ ಮತ್ತು ಜಾಪಾನೀಸ್ ಭಾಷೆಯನ್ನು ಪರಿಚಯಿಸಲು ಕೂಡ ನಿರ್ಧರಿಸಲಾಗಿದೆ. ಆ ಮೂಲಕ ಭಾಷಾ ಸಮಸ್ಯೆಯನ್ನು ಬಗೆಹರಿಸಲಾಗುವುದು” ಎಂದು ತಿಳಿಸಿದ್ದಾರೆ. ಕೌಶಲ್ಯಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹಾಗೂ ರಾಜ್ಯ ಸರ್ಕಾರದ ನಿವೃತ್ತ ಅಪರ ಮುಖ್ಯ ಕಾರ್ಯದರ್ಶಿ…