Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಶಿಗ್ಗಾವಿ ಸವಣೂರು ಕ್ಷೇತ್ರಕ್ಕೆ ನನ್ನನ್ನು ಬಿಜೆಪಿ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿರುವುದಕ್ಕೆ ನಮ್ಮೆಲ್ಲರ ನೆಚ್ಚಿನ ನಾಯಕರಾದ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ. ನಡ್ಡಾ, ಕೇಂದ್ರ ಗೃಹ ಸಚಿವರಾದ ಅಮಿತ್ ಶಾ, ರಾಜ್ಯ ಉಸ್ತುವಾರಿ ರಾಧಾಮೋಹನ್ ಅಗರವಾಲ್ ಅವರಿಗೆ ಅಭಿನಂದನೆ. ಸಲ್ಲಿಸುತ್ತೇನೆ ಎಂದು ಶಿಗ್ಗಾವಿ ಸವಣೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಹೇಳಿದ್ದಾರೆ. ಭಾನುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನನ್ನ ಮೇಲೆ ವಿಶ್ವಾಸ ಇಟ್ಟು ಟಿಕೆಟ್ ನೀಡಿದ ಕೇಂದ್ರ ನಾಯಕರಿಗೆ, ರಾಜ್ಯದ ನಾಯಕರಾದ ಮಾಜಿ ಸಿಎಂ ಬಿ. ಎಸ್. ಯಡಿಯೂರಪ್ಪ, ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ, ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಷಿ ಅವರಿಗೆ ಧನ್ಯವಾದ ತಿಳಿಸುತ್ತೇನೆ ಎಂದರು. ಪ್ರಮುಖವಾಗಿ ನಮ್ಮ ತಂದೆ ತಾಯಿಯ ಆಶೀರ್ವಾದದ ಫಲದಿಂದ ನನಗೆ ಈ ಅವಕಾಶ ಸಿಕ್ಕಿದೆ. ನಮ್ಮ ತಂದೆ ಶಿಗ್ಗಾವಿ ಸವಣೂರಿನಲ್ಲಿ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿ ಮಾಡಿರುವ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿಕೊಂಡು, ಅಲ್ಲಿನ ಜನರ ಅಪೇಕ್ಷೆಯಂತೆ ನಮ್ಮ ಪಕ್ಷದ ವರಿಷ್ಠರು ನನಗೆ ಟಿಕೆಟ್…
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಕೆಲವೇ ದಿನಗಳಲ್ಲಿ ಒಮರ್ ಅಬ್ದುಲ್ಲಾ ಅವರು ಕಾಶ್ಮೀರ ಮ್ಯಾರಥಾನ್ ಗಾಗಿ ಬೀದಿಗಿಳಿದು 21 ಕಿ.ಮೀ ಓಡುವ ಮೂಲಕ ವೈಯಕ್ತಿಕ ಮೈಲಿಗಲ್ಲನ್ನು ದಾಖಲಿಸಿದ್ದಾರೆ. ನ್ಯಾಷನಲ್ ಕಾನ್ಫರೆನ್ಸ್ ನಾಯಕ ತನ್ನ ಪ್ರಭಾವಶಾಲಿ ಓಟದ ನವೀಕರಣ ಮತ್ತು ದೃಶ್ಯಗಳನ್ನು ಹಂಚಿಕೊಳ್ಳಲು ಎಕ್ಸ್ ಗೆ ಹೋದರು. “ನಾನು ಇಂದು ನನ್ನ ಬಗ್ಗೆ ತುಂಬಾ ಸಂತೋಷವಾಗಿದ್ದೇನೆ. ನಾನು ಕಾಶ್ಮೀರ ಹಾಫ್ ಮ್ಯಾರಥಾನ್ – 21 ಕಿ.ಮೀ ಅನ್ನು ಪ್ರತಿ ಕಿ.ಮೀ.ಗೆ ಸರಾಸರಿ 5 ನಿಮಿಷ 54 ಸೆಕೆಂಡುಗಳಲ್ಲಿ ಪೂರ್ಣಗೊಳಿಸಿದೆ” ಎಂದು ಅವರು ಪೋಸ್ಟ್ನಲ್ಲಿ ತಿಳಿಸಿದ್ದಾರೆ. https://twitter.com/OmarAbdullah/status/1847854829588078827 “ನಾನು ನನ್ನ ಜೀವನದಲ್ಲಿ ಎಂದಿಗೂ 13 ಕಿ.ಮೀ.ಗಿಂತ ಹೆಚ್ಚು ಓಡಿಲ್ಲ ಮತ್ತು ಅದೂ ಒಮ್ಮೆ ಮಾತ್ರ. ಇಂದು ನಾನು ನನ್ನಂತಹ ಇತರ ಹವ್ಯಾಸಿ ಓಟಗಾರರ ಉತ್ಸಾಹದಿಂದ ಪ್ರೇರಿತನಾಗಿ ಮುಂದುವರಿಯುತ್ತಿದ್ದೇನೆ. ಸರಿಯಾದ ತರಬೇತಿ ಇಲ್ಲ, ಓಡುವ ಯೋಜನೆ ಇಲ್ಲ, ಪೌಷ್ಟಿಕಾಂಶವಿಲ್ಲ. ದಾರಿಯುದ್ದಕ್ಕೂ ಒಂದು ಬಾಳೆಹಣ್ಣು ಮತ್ತು ಒಂದೆರಡು ಖಜೂರ್ ಅನ್ನು ಎತ್ತಿಕೊಂಡರು. ನನ್ನನ್ನು…
ನವದೆಹಲಿ: ಸಮೀಕ್ಷೆಯಲ್ಲಿ ಭಾಗವಹಿಸಿದ ಅರ್ಧಕ್ಕಿಂತ ಹೆಚ್ಚು ಆರೋಗ್ಯ ಕಾರ್ಯಕರ್ತರು ತಮ್ಮ ಕೆಲಸದ ಸ್ಥಳವು “ಅಸುರಕ್ಷಿತ” ಎಂದು ಭಾವಿಸುತ್ತಾರೆ. ವಿಶೇಷವಾಗಿ ರಾಜ್ಯ ಮತ್ತು ಕೇಂದ್ರ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಎಂಬುದಾಗಿ ಅಧ್ಯಯನದಿಂದ ತಿಳಿದು ಬಂದಿದೆ. ವರ್ಧಮಾನ್ ಮಹಾವೀರ್ ವೈದ್ಯಕೀಯ ಕಾಲೇಜು (ವಿಎಂಎಂಸಿ), ಸಫ್ದರ್ಜಂಗ್ ಆಸ್ಪತ್ರೆ ಮತ್ತು ನವದೆಹಲಿಯ ಏಮ್ಸ್ನ ತಜ್ಞರ ನೇತೃತ್ವದ ಈ ಅಧ್ಯಯನವು ಭಾರತೀಯ ಆರೋಗ್ಯ ವ್ಯವಸ್ಥೆಗಳಲ್ಲಿ ಭದ್ರತಾ ಮೂಲಸೌಕರ್ಯಗಳಲ್ಲಿನ ಗಮನಾರ್ಹ ಅಂತರಗಳನ್ನು ಎತ್ತಿ ತೋರಿಸಿದೆ. ‘ಎಪಿಡೆಮಿಯಾಲಜಿ ಇಂಟರ್ನ್ಯಾಷನಲ್’ ಜರ್ನಲ್ನ ಇತ್ತೀಚಿನ ಸಂಚಿಕೆಯಲ್ಲಿ ಪ್ರಕಟವಾದ “ಭಾರತೀಯ ಆರೋಗ್ಯ ವ್ಯವಸ್ಥೆಗಳಲ್ಲಿ ಕೆಲಸದ ಸ್ಥಳದ ಸುರಕ್ಷತೆ ಮತ್ತು ಭದ್ರತೆ: ಒಂದು ಅಡ್ಡ-ವಿಭಾಗ ಸಮೀಕ್ಷೆ” ಆರೋಗ್ಯ ವ್ಯವಸ್ಥೆಗಳಲ್ಲಿ ಚಾಲ್ತಿಯಲ್ಲಿರುವ ಸುರಕ್ಷತೆ ಮತ್ತು ಭದ್ರತಾ ಕ್ರಮಗಳನ್ನು ಸುಧಾರಿಸುವ ತುರ್ತು ಅಗತ್ಯವನ್ನು ಒತ್ತಿ ಹೇಳಿದೆ. ಈ ಸಮೀಕ್ಷೆಯು ವಿಎಂಸಿ ಮತ್ತು ಸಫ್ದರ್ಜಂಗ್ ಆಸ್ಪತ್ರೆಯ ಡಾ.ಕಾರ್ತಿಕ್ ಚಾದರ್ ಮತ್ತು ಡಾ.ಜುಗಲ್ ಕಿಶೋರ್, ನವದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯ (ಏಮ್ಸ್) ಡಾ.ರಿಚಾ ಮಿಶ್ರಾ, ಡಾ.ಸೆಮಂತಿ ದಾಸ್, ಡಾ.ಇಂದ್ರ ಶೇಖರ್…
ಬೆಂಗಳೂರು: ಕೆಲಸ ಖಾಲಿ ಇರುವ ಕಡೆ ಅಂಗವಿಕಲರಿಗೆ ಸರ್ಕಾರ ಉದ್ಯೋಗವನ್ನು ನೀಡಬೇಕು ಎಂದು ಮಾಜಿ ಸಚಿವರು ಹಾಗೂ ಹಾಲಿ ಶಾಸಕರಾದ ಕೆ. ಗೋಪಾಲಯ್ಯ ಅವರು ಆಗ್ರಹಿಸಿದರು. ನಂದಿನಿ ಲೇಔಟ್ ನ ಶಂಕರನಗರ ಆಟದ ಮೈದಾನದಲ್ಲಿ ಡಾ. ನವೀನ ಗೌಡ ಅವರು ಕಾಂತ ಕ್ಲಿನಿಕ್ ವತಿಯಿಂದ ಆಯೋಜಿಸಿದ್ದ ವಿಕಲಚೇತನರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ವಿಕಲಚೇತನರಿಗೆ ಉಚಿತವಾಗಿ ಆರೋಗ್ಯ ತಪಾಸಣೆ ಮಾಡುವಂತಹ ಇಂತಹ ಕಾರ್ಯಕ್ರಮಗಳು ಪ್ರತಿ ವರ್ಷವೂ ನಡೆಯಬೇಕು. ಕಾಂತ ಕ್ಲಿನಿಕ್ ಉತ್ತಮವಾದ ಕಾರ್ಯಕ್ರಮವನ್ನು ಆಯೋಜಿಸಿದ್ದಾರೆ. ಇಂದಿನ ವಿಕಲಚೇತನರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮದವು ಯಶಸ್ವಿಯಾಗಲಿ ಇದರ ಸದುಪಯೋಗವನ್ನು ಪಡೆದುಕೊಂಡು ಆರೋಗ್ಯದ ಕಡೆ ಗಮನಹರಿಸಿ ಎಂದು ಸಲಹೆ ನೀಡಿದರು. ಇದೇ ಸಂದರ್ಭದಲ್ಲಿ ಮಾಜಿ ಶಾಸಕ ನೆ.ಲ. ನರೇಂದ್ರ ಬಾಬು, ಫ್ರೀಡಂ ಟಿವಿಯ ಮುಖ್ಯಸ್ಥರಾದ ನಾಗರಾಜ್, ಡಾ. ನಾಗೇಂದ್ರ ಸೇರಿದಂತೆ ಇತರರು ಹಾಜರಿದ್ದರು.
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರ ಕಳೆದುಕೊಳ್ಳುವ ಭಯದಿಂದ ಜಾತಿ ಗಣತಿ ಬಿಡುಗಡೆ ಮಾಡುವುದಾಗಿ ಹೇಳುತ್ತಿದ್ದಾರೆ. ಮೊದಲು ಅದನ್ನು ಬಹಿರಂಗ ಪಡೆಸಲಿ, ಸಾರ್ವಜನಿಕ ಚರ್ಚೆಯಾಗಲಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ. ಭಾನುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜಾತಿ ಜನಗಣತಿ ಕುರಿತು ಅಖಿಲ ಭಾರತ ವೀರಶೈವ ಮಹಾಸಭೆ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ತಮ್ಮನ್ನು ಭೇಟಿ ಮಾಡಿರುವ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಜಾತಿ ಗಣತಿ ವಿಚಾರದಲ್ಲಿ ನಮ್ಮ ನಿಲುವು ಸ್ಪಷ್ಟವಾಗಿದೆ. ಇದು ಜಾತಿ ಗಣತಿಯಲ್ಲ. ಸಾಮಾಜಿಕ ಆರ್ಥಿಕ ಸಮೀಕ್ಷೆ, ರಾಜ್ಯ ಸರ್ಕಾರಕ್ಕೆ ಜಾತಿ ಗಣತಿ ಮಾಡುವ ಅಧಿಕಾರ ಇಲ್ಲ. ಕೇಂದ್ರ ಸರ್ಕಾರಕ್ಕೆ ಮಾತ್ರ ಜಾತಿ ಗಣತಿ ಮಾಡುವ ಅಧಿಕಾರವಿದೆ. ಬಿಹಾರ ಸರ್ಕಾರದ ಜಾತಿ ಗಣತಿಗೂ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಇವರು ಯಾವುದೋ ಸಮೀಕ್ಷೆ ಮಾಡಿ ಅದಕ್ಕೆ ಜಾತಿ ಗಣತಿಯ ಲೇಪನ ಮಾಡುತ್ತಿದ್ದಾರೆ ಎಂದು ಹೇಳಿದರು. ಇನ್ನು ಈ ವರದಿ ವೈಜ್ಞಾನಿಕವಾಗಿಯೂ…
ಬೆಂಗಳೂರು: ನಗರದ ಬಿಬಿಎಂಪಿ ವ್ಯಾಪ್ತಿಯ 110 ಹಳ್ಳಿಗಳ ನಿವಾಸಿಗಳಿಗೆ ಕಾವೇರಿ ನೀರು ಒದಗಿಸುವ ಸಂಬಂಧ ಕಾವೇರಿ 5ನೇ ಹಂತದ ಯೋಜನೆಗೆ ಜಾಲನೆ ನೀಡಲಾಗಿತ್ತು. ಈ ಬಳಿಕ ಬಿಬಿಎಂಪಿಯಿಂದ ಕಾವೇರಿ ನೀರು ಸಂಪರ್ಕ ಅಭಿಯಾನವನ್ನು ಆರಂಭಿಸಿದ್ದು, ಕಾವೇರಿ ನೀರು ಸಂಪರ್ಕ ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಬಿಬಿಎಂಪಿ ವ್ಯಾಪ್ತಿಯ 110 ಹಳ್ಳಿಗಳ ನಿವಾಸಿಗಳು ಕಾವೇರಿ ನೀರಿನ ಹೊಸ ಸಂಪರ್ಕವನ್ನು ಪಡೆಯಲು ಜಲಮಂಡಳಿಯ ಜಾಲತಾಣದ ಮೂಲಕ ಅಥವಾ ಮಂಡಳಿಯ ಸಮೀಪದ ವಲಯ ಕಚೇರಿಯಲ್ಲಿ ಆಫ್ಲೈನ್ ಮೂಲಕವೂ ಅರ್ಜಿ ಸಲ್ಲಿಸಬಹುದು. ʼಸಕಾಲʼ ನಿಯಮದಂತೆ ಶುಲ್ಕ ಸಹಿತ ಅರ್ಜಿ ಸ್ವೀಕರಿಸಿದ 15 ರಿಂದ 45 ದಿನಗಳಲ್ಲಿ ನೀರಿನ ಸಂಪರ್ಕವನ್ನು ನೀಡಲಾಗುವುದು. ಈಗಾಗಲೇ 55 ಸಾವಿರ ಸಂಪರ್ಕಗಳನ್ನು ನೀಡಲಾಗಿದೆ ಎಂದು ಜಲಮಂಡಳಿ ಅಧ್ಯಕ್ಷರಾದ ರಾಮ್ಪ್ರಸಾತ್ ಮನೋಹರ್ ತಿಳಿಸಿದ್ದಾರೆ. https://twitter.com/KarnatakaVarthe/status/1847646841174683669 ಬಿಬಿಎಂಪಿ ವ್ಯಾಪ್ತಿಯ 110 ಹಳ್ಳಿಗಳ ಜನರು ಹೊಸದಾಗಿ ಕಾವೇರಿ ನೀರಿನ ಸಂಪರ್ಕಕ್ಕಾಗಿ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಬಿಬಿಎಂಪಿಯ ಅಧಿಕೃತ ವೆಬ್ ಸೈಟ್ https://owc.bwssb.gov.in/consumer ಗೆ ಭೇಟಿ ನೀಡಿ…
ಬೆಂಗಳೂರು: ನಾಳೆ ಚನ್ನಪಟ್ಟಣ ಉಪ ಚುನಾವಣೆಗೆ ಅಭ್ಯರ್ಥಿಯನ್ನು ಫೈನಲ್ ಮಾಡಿ, ಘೋಷಣೆ ಮಾಡಲಾಗುತ್ತದೆ ಎಂಬುದಾಗಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು ಹೇಳಿದ್ದಾರೆ. ಇಂದು ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಗೆ ಅಭ್ಯರ್ಥಿ ಫೈನಲ್ ಮಾಡುವ ಸಂಬಂಧ ಜೆಡಿಎಸ್ ಹಾಗೂ ಬಿಜೆಪಿ ನಾಯಕರ ಸಭೆ ನಡೆಸಲಾಯಿತು. ಈ ಸಭೆಯಲ್ಲಿ ಕೇಂದ್ರ ಸಚಿವರಾದ HD ಕುಮಾರಸ್ವಾಮಿ, ಶಾಸಕಾಂಗ ಪಕ್ಷದ ನಾಯಕರಾದ ಸುರೇಶ್ ಬಾಬು, ಮಾಜಿ ಸಚಿವರಾದ ಸಾ.ರಾ.ಮಹೇಶ್, ಸಿ ಎಸ್ ಪುಟ್ಟರಾಜು, ವೆಂಕಟರಾವ್ ನಾಡಗೌಡ, ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ, ಸಂಸದ ಮಲ್ಲೇಶ್ ಬಾಬು, ಮಾಜಿ ಶಾಸಕರಾದ ಸುರೇಶ್ ಗೌಡ, ಡಾ.ಅನ್ನದಾನಿ, ಕೊಪ್ಪಳ ಚಂದ್ರಶೇಖರ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಾದ ವಿಜಯೇಂದ್ರ, ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾದ ಅಶೋಕ್ ಭಾಗಿಯಾಗಿದ್ದರು. ಈ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು ಅವರು, ಜೆಡಿಎಸ್ ಹಾಗೂ ಬಿಜೆಪಿ ಎರಡು ಪಕ್ಷಗಳು ಒಪ್ಪಿದಂತ ಒಮ್ಮತದ ಅಭ್ಯರ್ಥಿಯನ್ನು ನಾಳೆ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ…
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆ ಘೋಷಣೆಯಾಗಿದೆ. ಇದಕ್ಕೆ ತಯಾರಿಯಲ್ಲಿ ಅಭ್ಯರ್ಥಿಗಳು ತೊಡಗಿದ್ದಾರೆ. ಈ ಹೊತ್ತಿನಲ್ಲೇ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್ ಷಡಕ್ಷರಿಗೆ ಸರ್ಕಾರಿ ವಸತಿ ಗೃಹ ತೆರವಿಗೆ ಲೋಕೋಪಯೋಗಿ ಇಲಾಖೆ ಸೂಚಿಸಿದೆ. ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿದ್ದಂತ ಸಿ.ಎಸ್ ಷಡಕ್ಷರಿ ಅವರು ಈ ಹಿಂದೆ ಶಿವಮೊಗ್ಗದ ಲೆಕ್ಕಾಧಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಈ ವೇಳೆಯಲ್ಲಿ ಲೋಕೋಪಯೋಗಿ ಇಲಾಖೆ ವ್ಯಾಪ್ತಿಯ ಸರ್ಕಾರಿ ವಸತಿ ಗೃಹದಲ್ಲಿ ವಾಸವಾಗಿದ್ದರು. ಶಿವಮೊಗ್ಗದಿಂದ ಕೋಲಾರಕ್ಕೆ ಅವರನ್ನು ವರ್ಗಾವಣೆಗೊಳಿಸಿದ ನಂತ್ರವೂ, ಶಿವಮೊಗ್ಗದ ಸರ್ಕಾರಿ ವಸತಿ ಗೃಹವನ್ನು ಖಾಲಿ ಮಾಡಿರಲಿಲ್ಲ. ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್ ಷಡಕ್ಷರಿ ಅವರಿಗೆ ಶಿವಮೊಗ್ಗದಲ್ಲಿನ ಲೋಕೋಪಯೋಗಿ ಇಲಾಖೆ ನೀಡಿದ್ದಂತ ವಸತಿ ಗೃಹವನ್ನು ತೆರವುಗೊಳಿಸುವಂತೆ ಕಾರ್ಯಪಾಲಕ ಎಂಜಿನಿಯರ್ ಸೂಚಿಸಿದ್ದಾರೆ ಎಂಬುದಾಗಿ ಹೇಳಲಾಗುತ್ತಿದೆ. ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ ಸೂಚನೆಯ ಮೇರೆಗೆ ಶಿವಮೊಗ್ಗದ ಸರ್ಕಾರಿ ವಸತಿ ಗೃಹವನ್ನು ಸಿಎಸ್ ಷಡಕ್ಷರಿ ತೆರವುಗೊಳಿಸುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ. https://kannadanewsnow.com/kannada/whoever-contests-channapatna-by-election-i-will-be-the-candidate-dk-shivakumar/ https://kannadanewsnow.com/kannada/breaking-muda-scam-cm-faces-trouble-again-wife-parvathy-accused-of-land-irregularities/
ಬೆಂಗಳೂರು: “ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಯಾರೇ ನಿಂತರೂ ನಾನೇ ಅಭ್ಯರ್ಥಿ ಎಂದು ನಮ್ಮ ಪಕ್ಷದ ನಾಯಕರುಗಳು ಹಾಗೂ ಕಾರ್ಯಕರ್ತರಿಗೆ ಹೇಳಿದ್ದೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಉಪಚುನಾವಣೆ ಪಕ್ಷದ ಅಭ್ಯರ್ಥಿ ಆಯ್ಕೆ ಸಂಬಂಧ ಶನಿವಾರದಂದು ಕ್ಷೇತ್ರದ ನಾಯಕರು ಹಾಗೂ ಕಾರ್ಯಕರ್ತರ ಸಭೆ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದರು. ಚನ್ನಪಟ್ಟಣ ಕಾಂಗ್ರೆಸ್ ಕಾರ್ಯಕರ್ತರ ಅಭಿಪ್ರಾಯವೇನು ಎಂದು ಕೇಳಿದಾಗ, “ಅವರೆಲ್ಲರೂ ನನ್ನ ಜನ. ಪಕ್ಷದಿಂದ ಯಾರು ನಿಲ್ಲುತ್ತಾರೆ ಎಂದು ನೋಡಬೇಡಿ. ಯಾರೇ ನಿಂತರೂ ನಾನೇ ಅಭ್ಯರ್ಥಿ ಎಂದು ಕೆಲಸ ಮಾಡಿ. ವಿರೋಧ ಪಕ್ಷದ ನಾಯಕರು ಹೆದರಿ ಶರಣಾಗುತ್ತಿದ್ದಾರೆ. ಅವರು ಅಷ್ಟು ದುರ್ಬಲರಾಗುತ್ತಾರೆ ಎಂದು ನಾನು ಭಾವಿಸಿರಲಿಲ್ಲ. ರಾತ್ರಿಯೆಲ್ಲಾ ಸಭೆಗಳು ನಡೆದಿವೆ. ಜೆಡಿಎಸ್ ನವರೇ ಸೀಟು ಬಿಟ್ಟುಕೊಡುತ್ತಿದ್ದಾರೆ ಎಂದು ಯಾರೋ ಕರೆ ಮಾಡಿ ಹೇಳಿದರು. ಅದು ಎಷ್ಟು ಸತ್ಯವೋ ನನಗೆ ಗೊತ್ತಿಲ್ಲ. ಇರಲಿ, ಅವರು ಏನಾದರೂ ಮಾಡಿಕೊಳ್ಳಲಿ” ಎಂದು ತಿಳಿಸಿದರು. ಮೈತ್ರಿಯಿಂದ ಯಾರಾದರೂ ಅಚ್ಚರಿ ಅಭ್ಯರ್ಥಿ ನಿಮ್ಮ…
ಬೆಂಗಳೂರು: ರಾಜ್ಯದಲ್ಲಿ ಆರೋಗ್ಯ ಇಲಾಖೆ, ಸರ್ಕಾರಿ ಆಸ್ಪತ್ರೆಗಳಲ್ಲಿ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವುದರ ಜೊತೆಗೆ ಬೆಂಗಳೂರಿನ ಖಾಸಗಿ ವಲಯದ ಆಸ್ಪತ್ರೆಗಳಲ್ಲಿ ಹೆಲ್ತ್ ಟೂರಿಸಮ್ ಗೆ ಉತ್ತೇಜನ ನೀಡವತ್ರ ಅಗತ್ಯ ಕ್ರಮ ಕೈಗೊಳ್ಳಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮುಂದಾಗಿದ್ದಾರೆ. ಬೆಂಗಳೂರಿನ ಆರೋಗ್ಯ ಸೌಧದಲ್ಲಿ ಇಂದು ಪ್ರತಿಷ್ಠಿತ ಖಾಸಗಿ ಆಸ್ಪತ್ರೆಗಳ ಪ್ರತಿನಿಧಿಗಳ ಜೊತೆ ಸಭೆ ನಡೆಸಿದ ಸಚಿವರು, ಹೆಲ್ತ್ ಟೂರಿಸಮ್ ಬೆಳೆಸಲು ಸರ್ಕಾರದಿಂದ ಆಗಬೇಕಾಗಿರುವ ಕಾರ್ಯಗಳ ಕುರಿತು ಖಾಸಗಿ ವಲಯದ ವೈದ್ಯಕೀಯ ತಜ್ಞರೊಂದಿಗೆ ಸಮಾಲೋಚನೆ ನಡೆಸಿದರು. ಸಭೆ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವರು, ಹೊರ ರಾಜ್ಯ ಹಾಗೂ ವಿದೇಶಗಳಿಂದ ಸಾಕಷ್ಟು ಸಂಖ್ಯೆಯಲ್ಲಿ ಬೆಂಗಳೂರಿಗೆ ಜನರು ಬರುತ್ತಾರೆ. ಇಲ್ಲಿಗೆ ಬರುವ ಜನರಿಗೆ ಇಲ್ಲಿಯ ಅತ್ಯಾದುನಿಕ ಆರೋಗ್ಯ ಸೌಲಭ್ಯಗಳು, ಹಾಗೂ ಚಿಕಿತ್ಸೆ ಬಗ್ಗೆ ಒಂದು ಭರವಸೆ ಮೂಡಿಸಬೇಕಾಗಿದೆ. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯಿಂದ ಖಾಸಗಿ ಆಸ್ಪತ್ರೆಗಳ ಗುಣಮಟ್ಟದ ಚಿಕಿತ್ಸೆ ಕುರಿತು ಸರ್ಕಾರ ಸರ್ಟಿಫೈ ಮಾಡುವ ಕ್ರಮಗಳು ಆಗಬೇಕಿದೆ. ಸರ್ಕಾರದಿಂದ ಈ ರೀತಿಯ ಕ್ರಮಗಳನ್ನ ತೆಗೆದುಕೊಂಡಾಗ ಜನರಿಗೆ ವಿಶ್ವಾಸ…