Author: kannadanewsnow09

ಶಿವಮೊಗ್ಗ: ಜಿಲ್ಲೆಯ ಸಾಗರದ ಚಂದ್ರಮಾವಿನ ಕೊಪ್ಪಲು ಬಳಿ ರೈಲಿಗೆ ತಲೆ ಕೊಟ್ಟು ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗುತ್ತಿದೆ. ಈ ಘಟನೆಯಲ್ಲಿ ವ್ಯಕ್ತಿಯ ತಲೆಗೆ ಗಂಭೀರವಾದಂತ ಗಾಯವಾಗಿದೆ. ಶಿವಮೊಗ್ಗ ಜಿಲ್ಲೆಯ ಸಾಗರದ ತಾಳಗುಪ್ಪದಿಂದ ಮೈಸೂರಿಗೆ ಹೊರಡುವ ರೈಲು ಗಾಡಿ ಸಂಖ್ಯೆ 16205 ಇಂದು ಮದ್ಯಾಹ್ನ ಸಾಗರ ಪಟ್ಟಣದ ಚಂದ್ರಮಾವಿನಕೊಪ್ಪಲು ಬಳಿ ಹಾದು ಹೋಗುವ ಸಮಯದಲ್ಲಿ ಈ ಘಟನೆ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದಂತ ವ್ಯಕ್ತಿಯನ್ನು ಹೊಸನಗರ ತಾಲೂಕಿನ ಮುಗುಡ್ತಿ ಗ್ರಾಮದ ನರೇಂದ್ರ ಕುಮಾರ್(61) ಎಂಬುದಾಗಿ ಹೇಳಲಾಗುತ್ತಿದೆ. ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಯತ್ನಿಸಿದಂತ ಸಂದರ್ಭದಲ್ಲಿ ತಲೆಗೆ ಗಂಭೀರವಾಗಿ ಗಾಯವಾಗಿದೆ. ಗಾಯಾಳುವನ್ನು ಸಾಗರ ಉಪ ವಿಭಾಗೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಸಾಗರದಲ್ಲಿ ಚಿಕಿತ್ಸೆ ನಂತ್ರ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ಕರೆದೊಯ್ಯಲಾಗಿದೆ. ನರೇಂದ್ರ ಕುಮಾರ್ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಯತ್ನಿಸಿದ್ದೋ ಅಥವಾ ರೈಲು ಚಲಿಸುತ್ತಿದ್ದಂತ ಸಂದರ್ಭದಲ್ಲಿ ಕಾಲು ಜಾರಿ ಬಿದ್ದಿರೋದೋ ಎಂಬುದು ಪೊಲೀಸರ ತನಿಖೆಯಿಂದ ತಿಳಿಯಬೇಕಿದೆ. ಸಾಗರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. https://kannadanewsnow.com/kannada/betting-app-case-ed-attaches-assets-belonging-to-yuvraj-uthappa-sonu-sood/ https://kannadanewsnow.com/kannada/big-news-for-the-attention-of-the-people-of-the-state-here-is-information-about-the-schemes-available-from-various-corporations-of-the-karnataka-government/

Read More

ಚೆನ್ನೈ: ಅಕ್ರಮ ಆನ್‌ಲೈನ್ ಬೆಟ್ಟಿಂಗ್ ಅರ್ಜಿಗೆ ಸಂಬಂಧಿಸಿದ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಭಾರತದ ಮಾಜಿ ಕ್ರಿಕೆಟಿಗರಾದ ಯುವರಾಜ್ ಸಿಂಗ್ ಮತ್ತು ರಾಬಿನ್ ಉತ್ತಪ್ಪ, ತೃಣಮೂಲ ಕಾಂಗ್ರೆಸ್ ಸಂಸದ ಮತ್ತು ನಟ ಮಿಮಿ ಚಕ್ರವರ್ತಿ ಮತ್ತು ಬಾಲಿವುಡ್ ನಟ ಸೋನು ಸೂದ್ ಅವರಿಗೆ ಸೇರಿದ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿರುವುದಾಗಿ ಜಾರಿ ನಿರ್ದೇಶನಾಲಯ ಶುಕ್ರವಾರ ತಿಳಿಸಿದೆ. ಈ ಪ್ರಕರಣವು ರೂ. 1,000 ಕೋಟಿಗೂ ಹೆಚ್ಚು ಮೌಲ್ಯದ ಅಪರಾಧದ ಶಂಕಿತ ಆದಾಯವನ್ನು ಒಳಗೊಂಡಿದೆ ಎಂದು ಅಧಿಕೃತ ಮೂಲಗಳನ್ನು ಉಲ್ಲೇಖಿಸಿ ಪಿಟಿಐ ಶುಕ್ರವಾರ ವರದಿ ಮಾಡಿದೆ. ಅಧಿಕಾರಿಗಳ ಪ್ರಕಾರ, ಬಹು ರಾಜ್ಯಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮತ್ತು ಸಂಕೀರ್ಣ ಹಣಕಾಸು ಮಾರ್ಗಗಳ ಮೂಲಕ ದೊಡ್ಡ ಮೊತ್ತದ ಹಣವನ್ನು ರವಾನಿಸಿದ ಅಕ್ರಮ ಬೆಟ್ಟಿಂಗ್ ವೇದಿಕೆಗಳ ಜಾಲದ ಬಗ್ಗೆ ನಡೆಯುತ್ತಿರುವ ತನಿಖೆಯ ಭಾಗವಾಗಿ ಹಣ ವರ್ಗಾವಣೆ ತಡೆ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಲಗತ್ತುಗಳನ್ನು ಕೈಗೊಳ್ಳಲಾಗಿದೆ. ಕಾನೂನುಬಾಹಿರ ಬೆಟ್ಟಿಂಗ್ ಚಟುವಟಿಕೆಗಳ ಮೂಲಕ ಉತ್ಪತ್ತಿಯಾಗುವ ಹಣವನ್ನು ಪತ್ತೆಹಚ್ಚುವುದು ಮತ್ತು ಈ ಆದಾಯದಿಂದ ಪಡೆದಿರುವ ಅಥವಾ…

Read More

ಬೆಂಗಳೂರು: ಬುದ್ಧ ಬಸವ ಗಾಂಧಿ ಸಾಂಸ್ಕೃತಿಕ ಟ್ರಸ್ಟ್ (ರಿ), ನೀಡುವ ಲೋಹಿಯಾ ಪ್ರಶಸ್ತಿಗೆ ಈ ಬಾರಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಆಯ್ಕೆ ಮಾಡಲಾಗಿತ್ತು. ಇಂತಹ ಅವರಿಗೆ ಇಂದು ನಡೆದಂತ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಇಂದು ಬೆಂಗಳೂರು ಶೇಷಾದ್ರಿಪುರಂನಲ್ಲಿರುವ ಶೇಷಾದ್ರಿಪುರಂ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಿದ್ದಂತ ಸಮಾರಂಭದಲ್ಲಿ ಗಾಂಧಿ ಭವನದ ಅಧ್ಯಕ್ಷರಾದ ಡಾ.ವೂಡೇ ಪಿ ಕೃಷ್ಣ, ಪ್ರಜಾವಾಣಿ ಸಂಪಾದಕರಾದ ರವೀಂದ್ರ ಭಟ್, ಕನ್ನಡ ಪ್ರಭ ಸಂಪಾದಕರಾದ ರವಿ ಹೆಗಡೆ, ಮುಖ್ಯ ಅತಿಥಿಗಳಾಗಿ ದೂರದರ್ಶನ ಕಾರ್ಯಕ್ರಮ ಮುಖ್ಯಸ್ಥರಾದ ಎಚ್.ಎನ್.ಆರತಿ, ಶ್ರೀ ತ್ಯಾಗರಾಜ ಕೋ ಆಪರೇಟಿವ್ ಬ್ಯಾಂಕ್‌ನ ಅಧ್ಯಕ್ಷರಾದ ಡಾ.ಎಂ.ಆರ್.ವೆಂಕಟೇಶ್ ಜೊತೆಗೂಡಿ ಪ್ರಶಸ್ತಿ ಪ್ರದಾನ ಮಾಡಿದರು. ಈ ಕಾರ್ಯಕ್ರಮವನ್ನು ಪ್ರಜಾವಾಣಿ ಸಂಪಾದಕರಾದ ರವೀಂದ್ರ ಭಟ್ ಐನಕೈ ಅವರು ಕಾರ್ಯಕ್ರಮ ಉದ್ಘಾಟಿಸಿದರೇ, ಕನ್ನಡ ಪ್ರಭ ಸಂಪಾದಕರಾದ ರವಿ ಹೆಗಡೆ ಅವರು ಅಭಿನಂದನಾ ಭಾಷಣ ಮಾಡಿದರು. ರೈತ, ಜನಪರ ಹೋರಾಟ, ಸಾಮಾಜಿಕ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿನ ಸೇವೆ ಹಾಗೂ ಪತ್ರಕರ್ತರ ಸಂಘಟನೆಯಲ್ಲಿ ಸಲ್ಲಿಸಿರುವ…

Read More

ಶಿವಮೊಗ್ಗ: ಜಿಲ್ಲೆಯ ಜಿಲ್ಲಾ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ಅಧ್ಯಕ್ಷರಾಗಿ ಸಾಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಸ್ತ್ರೀ ರೋಗ ತಜ್ಞ ಡಾ.ನಾಗೇಂದ್ರಪ್ಪ ಅವರು ಆಯ್ಕೆಯಾಗಿದ್ದಾರೆ. ಶಿವಮೊಗ್ಗ ಜಿಲ್ಲಾ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ಅಧ್ಯಕ್ಷರಾಗಿ ಸ್ತ್ರೀ ರೋಗ ತಜ್ಞ ಡಾ.ನಾಗೇಂದ್ರಪ್ಪ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅವರಿಗೆ ಕೆಎನ್ಎನ್ ಸಂಸ್ಥೆಯಿಂದಲೂ ಅಭಿನಂದನೆ, ಶುಭಾಶಯಗಳನ್ನು ತಿಳಿಸುತ್ತಿದೆ. ಈ ಹಿಂದೆಯೇ ಹಲವು ಹುದ್ದೆ ನಿರ್ವಹಿಸಿದ್ದ ಡಾ.ನಾಗೇಂದ್ರಪ್ಪ, ಡಿಹೆಚ್ಓ, ಡಿಎಸ್ಓಗೆ ಧನ್ಯವಾದ ಶಿವಮೊಗ್ಗ ಜಿಲ್ಲಾ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದಲ್ಲಿ ವಿವಿಧ ಪದಾಧಿಕಾರಿಯ ಹುದ್ದೆಯನ್ನು ಡಾ.ನಾಗೇಂದ್ರಪ್ಪ ನಿರ್ವಹಿಸಿದ್ದರು. ಆ ಬಳಿಕ ಇದೀಗ ಜಿಲ್ಲಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ತಮ್ಮ ಅವಿರೋಧ ಆಯ್ಕೆಯ ಹಿಂದೆ ಮೆಗ್ಗಾನ್ ಜಿಲ್ಲಾ ಸರ್ಜನ್ ಹಾಗೂ ಈ ಹಿಂದಿನ ನಿಕಪೂರ್ವ ಜಿಲ್ಲಾಧ್ಯಕ್ಷರಾದಂತ ಡಾ.ಸಿದ್ದನಗೌಡ ಪಾಟೀಲ್ ಅವರು ಕಾರಣವೆಂದು ಡಾ.ನಾಗೇಂದ್ರಪ್ಪ ಸ್ಮರಿಸಿದ್ದಾರೆ. ಜೊತೆಗೆ ಶಿವಮೊಗ್ಗ ಡಿಹೆಚ್ಓ ಡಾ.ನಟರಾಜ್ ನಾಯ್ಕ್, ಡಿಎಸ್ಓ ಡಾ.ನಾಗರಾಜ್ ಹಾಗೂ ಡಿಹೆಚ್ಓ ಕಚೇರಿಯ ಅಧಿಕಾರಿ ಡಾ.ಗುಡ್ಡಪ್ಪ ಕಸವಿ ಅವರಿಗೆ ಧನ್ಯವಾದವನ್ನು ಡಾ.ನಾಗೇಂದ್ರಪ್ಪ ತಿಳಿಸಿದ್ದಾರೆ. ಮಾಜಿ ಸಿಎಂ ದಿವಂಗತ…

Read More

ಶಿವಮೊಗ್ಗ: ಜಿಲ್ಲೆಯ ಸಾಗರದಲ್ಲಿ ರೈಲಿಗೆ ತಲೆಕೊಟ್ಟು ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿರುವಂತ ಘಟನೆ ನಡೆದಿದೆ. ಈ ಘಟನೆಯಲ್ಲಿ ವ್ಯಕ್ತಿಯ ತಲೆಗೆ ಗಂಭೀರವಾಗಿ ಪೆಟ್ಟು ಬಿದ್ದಿರುವುದಾಗಿ ಹೇಳಲಾಗುತ್ತಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ಚಂದ್ರಮಾವಿನ ಕೊಪ್ಪಲು ಬಳಿಯಲ್ಲಿ ವ್ಯಕ್ತಿಯೊಬ್ಬ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಈ ವೇಳೆ ಅಪರಿಚಿತ ವ್ಯಕ್ತಿಯ ತಲೆಗೆ ಗಂಭೀರವಾದಂತ ಗಾಯವಾಗಿದೆ. ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿದ್ದನ್ನು ಕಂಡಂತ ಸ್ಥಳೀಯರು ಆತನನ್ನು ರಕ್ಷಿಸಿ, ಸಾಗರ ಉಪ ವಿಭಾಗೀಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದಾರೆ. ಆತ್ಮಹತ್ಯೆಗೆ ಯತ್ನಿಸಿದಂತ ವ್ಯಕ್ತಿ ಯಾರು ಎನ್ನುವುದು ತಿಳಿದು ಬರಬೇಕಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ. ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು… https://kannadanewsnow.com/kannada/should-your-whatsapp-messages-auto-delete-after-24-hours-this-is-all-you-need-to-do/ https://kannadanewsnow.com/kannada/big-news-for-the-attention-of-the-people-of-the-state-here-is-information-about-the-schemes-available-from-various-corporations-of-the-karnataka-government/

Read More

ಕೆಎನ್ಎನ್ ಡಿಜಿಟಲ್ ಡೆಸ್ಕ್: ಗೌಪ್ಯತೆ ಮತ್ತು ಬಳಕೆದಾರ ಅನುಭವವನ್ನು ಹೆಚ್ಚಿಸಲು WhatsApp ಹಲವಾರು ಶಕ್ತಿಶಾಲಿ ವೈಶಿಷ್ಟ್ಯಗಳನ್ನು ನೀಡುತ್ತದೆ, ಆದರೆ ಅನೇಕ ಬಳಕೆದಾರರಿಗೆ ಅದರ ಕೆಲವು ಉಪಯುಕ್ತ ಪರಿಕರಗಳ ಬಗ್ಗೆ ಇನ್ನೂ ತಿಳಿದಿಲ್ಲ. ಅಂತಹ ಒಂದು ವೈಶಿಷ್ಟ್ಯವು 24 ಗಂಟೆಗಳ ಒಳಗೆ ಸ್ವೀಕರಿಸುವವರ ಚಾಟ್‌ನಿಂದ ಸಂದೇಶಗಳನ್ನು ಸ್ವಯಂಚಾಲಿತವಾಗಿ ಅಳಿಸಲು ನಿಮಗೆ ಅನುಮತಿಸುತ್ತದೆ. ಕೆಲವು ಜನರು ಈಗಾಗಲೇ ಇದನ್ನು ಬಳಸುತ್ತಿದ್ದರೂ, ಹಲವರಿಗೆ ಇದು ಹೇಗೆ ಕಾರ್ಯನಿರ್ವಹಿಸುತ್ತದೆ ಎಂದು ಇನ್ನೂ ತಿಳಿದಿಲ್ಲ. ಹಾಗಾದ್ರೆ ಆ ಸೆಟ್ಟಿಂಗ್ಸ್ ಮಾಡೋದು ಹೇಗೆ ಅಂತ ಮುಂದೆ ಓದಿ.. WhatsApp ವೈಶಿಷ್ಟ್ಯ: 24 ಗಂಟೆಗಳಲ್ಲಿ ಸಂದೇಶಗಳನ್ನು ಸ್ವಯಂಚಾಲಿತವಾಗಿ ಅಳಿಸಿಹಾಕಿ ನಿಮ್ಮ ಸಂದೇಶಗಳು 24 ಗಂಟೆಗಳ ಒಳಗೆ ಇತರ ವ್ಯಕ್ತಿಯ ಚಾಟ್‌ನಿಂದ ಕಣ್ಮರೆಯಾಗುವಂತೆ ಮಾಡಲು, ನೀವು WhatsApp ನ ಕಣ್ಮರೆಯಾಗುವ ಸಂದೇಶಗಳ ವೈಶಿಷ್ಟ್ಯವನ್ನು ಬಳಸಬಹುದು. ಅದನ್ನು ಬಳಸುವ ಮೊದಲು, ಸಂದೇಶಗಳು ಸ್ವಯಂಚಾಲಿತವಾಗಿ ತೆಗೆದುಹಾಕಲ್ಪಡುವ ಮೊದಲು ಎಷ್ಟು ಸಮಯದವರೆಗೆ ಇರುತ್ತವೆ ಎಂಬುದನ್ನು ನೀವು ಹೊಂದಿಸಬೇಕು. WhatsApp ಕಣ್ಮರೆಯಾಗುವ ಸಂದೇಶಗಳನ್ನು ಹೇಗೆ ಸಕ್ರಿಯಗೊಳಿಸುವುದು ಹಂತ ಹಂತದ…

Read More

ಗದಗ: ಜಿಲ್ಲೆಯ ಆಯುಷ್ ಇಲಾಖೆಯ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇದೀಗ ಮಹತ್ವದ ದಾಖಲೆಗಳನ್ನು ಪರಿಶೀಲನೆಯಲ್ಲಿ ತೊಡಗಿದ್ದಾರೆ. ಗದಗ ಲೋಕಾಯುಕ್ತ ಸಿಪಿಐ ಪರಮೇಶ್ ನೇತೃತ್ವದ ಲೋಕಾಯುಕ್ತ ಅಧಿಕಾರಿಗಳ ತಂಡವು ಜಿಲ್ಲಾ ಆಯುಷ್ ಇಲಾಖೆಯ ಕಚೇರಿ ಮೇಲೆ ದಾಳಿ ನಡೆಸಿದೆ. ಆಯುಷ್ ಇಲಾಖೆಯಲ್ಲಿ ಭ್ರಷ್ಟಾಚಾರ ಆಡಿಯೋ ವೈರಲ್ ಬೆನ್ನಲ್ಲೇ ಈ ದಾಳಿ ನಡೆಸಿರೋದಾಗಿ ತಿಳಿದು ಬಂದಿದೆ. https://kannadanewsnow.com/kannada/use-these-tips-to-control-blood-sugar-levels-naturally/ https://kannadanewsnow.com/kannada/big-news-for-the-attention-of-the-people-of-the-state-here-is-information-about-the-schemes-available-from-various-corporations-of-the-karnataka-government/

Read More

ಈ ಪಾನೀಯಗಳು ಔಷಧಿಗಳನ್ನು ಬದಲಾಯಿಸುವುದಿಲ್ಲ, ಆದರೆ ನಿರಂತರವಾಗಿ “ದಿನಕ್ಕೆ ಕೇವಲ ಒಂದು ಅಥವಾ ಎರಡು” ಬಳಸಿದಾಗ ಅವು ರಕ್ತದಲ್ಲಿನ ಸಕ್ಕರೆಯನ್ನು ಸ್ಥಿರಗೊಳಿಸಲು, ಜೀರ್ಣಕ್ರಿಯೆಯನ್ನು ಬೆಂಬಲಿಸಲು, ಉರಿಯೂತವನ್ನು ಕಡಿಮೆ ಮಾಡಲು ಮತ್ತು ಒಟ್ಟಾರೆ ಚಯಾಪಚಯ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ನಿಯಮಿತ ವ್ಯಾಯಾಮ, ಸಮತೋಲಿತ ಊಟ ಮತ್ತು ಉತ್ತಮ ನಿದ್ರೆಯೊಂದಿಗೆ ಅವುಗಳನ್ನು ಜೋಡಿಸಿ, ಮತ್ತು ನಿಮ್ಮ ಶಕ್ತಿಯ ಮಟ್ಟಗಳು ಮತ್ತು ಗ್ಲೂಕೋಸ್ ನಿಯಂತ್ರಣದಲ್ಲಿ ಸುಸ್ಥಿರ ಸುಧಾರಣೆಗಳನ್ನು ನೀವು ಗಮನಿಸಬಹುದು. ಅಲೋವೆರಾ ಮತ್ತು ನಿಂಬೆ ಪಾನೀಯ ಅಲೋವೆರಾ ಮತ್ತು ನಿಂಬೆ ಪಾನೀಯ: ಇನ್ಸುಲಿನ್ ಸೂಕ್ಷ್ಮತೆಯನ್ನು ಬೆಂಬಲಿಸುವ ಚಯಾಪಚಯ ವರ್ಧಕ ಅಲೋವೆರಾ ಜೆಲ್ ಇನ್ಸುಲಿನ್ ಸೂಕ್ಷ್ಮತೆಯನ್ನು ಹೆಚ್ಚಿಸುವ ಮತ್ತು ಸುಗಮ ಜೀರ್ಣಕ್ರಿಯೆಯನ್ನು ಉತ್ತೇಜಿಸುವ ಸಂಯುಕ್ತಗಳನ್ನು ಹೊಂದಿರುತ್ತದೆ. ನಿಂಬೆಯೊಂದಿಗೆ ಸಂಯೋಜಿಸಿದಾಗ, ಇದು ಆರೋಗ್ಯಕರ ಯಕೃತ್ತಿನ ಕಾರ್ಯವನ್ನು ಬೆಂಬಲಿಸುವ ರಿಫ್ರೆಶ್ ಡಿಟಾಕ್ಸ್ ಪಾನೀಯವಾಗುತ್ತದೆ “ರಕ್ತದಲ್ಲಿನ ಸಕ್ಕರೆ ನಿಯಂತ್ರಣಕ್ಕೆ ಅತ್ಯಗತ್ಯ ಅಂಶವಾಗಿದೆ. ಅಲೋವೆರಾ ನಿಂಬೆ ಪಾನೀಯವನ್ನು ಹೇಗೆ ತಯಾರಿಸುವುದು: 2 ಚಮಚ ತಾಜಾ ಅಲೋವೆರಾ ಜೆಲ್ ಅನ್ನು ಹೊರತೆಗೆಯಿರಿ. 1…

Read More

ಶ್ರೀನಗರ: ಇತ್ತೀಚೆಗೆ ಮಹಿಳಾ ವೈದ್ಯರ ಮುಖದಿಂದ ಮುಸುಕನ್ನು ತೆಗೆದಿದ್ದಕ್ಕಾಗಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಕೋರಿ ಪಿಡಿಪಿ ನಾಯಕಿ ಇಲ್ಟಿಜಾ ಮುಫ್ತಿ ಶುಕ್ರವಾರ ಪೊಲೀಸರಿಗೆ ದೂರು ನೀಡಿದ್ದಾರೆ. ಆದಾಗ್ಯೂ, ಜೆಡಿ-ಯು ಮುಖ್ಯಸ್ಥರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆಯೇ ಎಂಬುದರ ಕುರಿತು ಪೊಲೀಸರಿಂದ ಯಾವುದೇ ಮಾಹಿತಿ ಬಂದಿಲ್ಲ. ಮುಸ್ಲಿಮರಲ್ಲಿ, ವಿಶೇಷವಾಗಿ ಮಹಿಳೆಯರಲ್ಲಿ ಅಪಾರ ಯಾತನೆ ಮತ್ತು ನೋವನ್ನುಂಟುಮಾಡಿದ ಒಂದು ನೀಚ ಘಟನೆಯನ್ನು ನಿಮ್ಮ ಗಮನಕ್ಕೆ ತರಲು ನಾನು ಬರೆಯುತ್ತಿದ್ದೇನೆ. ಕೆಲವು ದಿನಗಳ ಹಿಂದೆ, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಸರ್ಕಾರಿ ಸಮಾರಂಭದಲ್ಲಿ ಸಾರ್ವಜನಿಕವಾಗಿ ಸಾರ್ವಜನಿಕವಾಗಿ ನೋಡುತ್ತಿದ್ದಾಗ ಯುವ ಮುಸ್ಲಿಂ ವೈದ್ಯರ ‘ನಖಾಬ್’ ಅನ್ನು ಕೆಡವಿದಾಗ ನಾವು ಆಘಾತ, ಭಯಾನಕತೆ ಮತ್ತು ಆತಂಕದಿಂದ ನೋಡಿದ್ದೇವೆ ಎಂದು ಮುಫ್ತಿ ಕೋಥಿಬಾಗ್ ಎಸ್‌ಎಚ್‌ಒಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ವಿಷಯವನ್ನು ಇನ್ನಷ್ಟು ಹದಗೆಡಿಸಿದ ವಿಷಯವೆಂದರೆ ಉಪಮುಖ್ಯಮಂತ್ರಿ ಸೇರಿದಂತೆ ಸುತ್ತಮುತ್ತಲಿನ ಜನರ ಅಸಮಾಧಾನಕರ ಪ್ರತಿಕ್ರಿಯೆ, ಅವರು ನಕ್ಕರು ಮತ್ತು ಸಂತೋಷದಿಂದ ವೀಕ್ಷಿಸಿದರು ಎಂದು ಅವರು ಹೇಳಿದರು. ಆಕೆಯ ‘ನಖಾಬ್’…

Read More

ಬೆಂಗಳೂರು: ರಾಜ್ಯ ರಾಜಧಾನಿಯ ಸಮೀಪ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸಲು `ಬೆಂಗಳೂರು ಇಂಟರ್ನ್ಯಾಷನಲ್ ಏರ್ಪೋರ್ಟ್ ಲಿಮಿಟೆಡ್’ನ (ಬಿಐಎಎಲ್) ಅನುಮತಿ ಬೇಕೆನ್ನುವುದು ನಮ್ಮ ಅರಿವಿನಲ್ಲಿದೆ. ಇದಕ್ಕೆ 2033ರವರೆಗೂ ಕಾಲಾವಕಾಶವಿದೆ. ಹೀಗಾಗಿಯೇ, ದೂರದೃಷ್ಟಿ ಇಟ್ಟುಕೊಂಡು ಈಗಿನಿಂದಲೇ ಉಳಿದ ಕೆಲಸಗಳನ್ನು ನಾವು ಆರಂಭಿಸಿದ್ದೇವೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ಶುಕ್ರವಾರ ಹೇಳಿದ್ದಾರೆ. ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಕುರಿತು ಸಂಸತ್ ಅಧಿವೇಶನದಲ್ಲಿ ಪ್ರಸ್ತಾಪವಾಗಿರುವ ಹಿನ್ನೆಲೆಯಲ್ಲಿ ಅವರು ಪ್ರತಿಕ್ರಿಯಿಸಿದ್ದಾರೆ. ದೇವನಹಳ್ಳಿಯ ಸಮೀಪದಲ್ಲಿ ಈಗ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಕ್ರಿಯವಾಗಿದೆ. ಇದು ಆರಂಭವಾಗುವಾಗಲೇ 2033ರವರೆಗೂ 150 ಕಿ.ಮೀ. ಸುತ್ತಮುತ್ತಲಿನ ಪ್ರದೇಶದಲ್ಲಿ ಮತ್ತೊಂದು ವಿಮಾನ ನಿಲ್ದಾಣ ನಿರ್ಮಿಸಬಾರದೆಂಬ ಷರತ್ತು ಇದೆ. ಏತನ್ಮಧ್ಯೆ ಹೊಸದೆಹಲಿ ಮತ್ತು ನವೀ ಮುಂಬೈಗಳಲ್ಲಿ ಇಂತಹ ಷರತ್ತುಗಳನ್ನು ಸಡಿಲಿಸಿ, ಎರಡನೆಯ ಏರ್ಪೋರ್ಟುಗಳ ನಿರ್ಮಾಣಕ್ಕೆ ಅವಕಾಶ ಮಾಡಿಕೊಡಲಾಗಿದೆ. ಇದನ್ನು ಸಂದರ್ಭ ನೋಡಿಕೊಂಡು ಬಗೆಹರಿಸಿಕೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ. ಒಂದು ವಿಮಾನ ನಿಲ್ದಾಣ ಬರಬೇಕೆಂದರೆ ಸ್ಥಳದ ಆಯ್ಕೆ, ಅದರ ಪರಿಶೀಲನೆ, ಭೂಸ್ವಾಧೀನ, ಪರಿಹಾರ…

Read More