Subscribe to Updates
Get the latest creative news from FooBar about art, design and business.
Author: kannadanewsnow09
ಹಾಸನ: ಜಿಲ್ಲೆಯ ಬಳಿಯಲ್ಲಿ ಎರಡು ಕಾರುಗಳ ನಡುವೆ ಮುಖಾಮುಖಿ ಢಿಕ್ಕಿಯಾಗಿ ಭೀಕರ ಅಪಘಾತವಾಗಿದೆ. ಈ ಅಪಘಾತದಲ್ಲಿ ಸಿಐಡಿ ವಿಭಾಗದ ಡಿವೈಎಸ್ಪಿ ಮೊಹಮ್ಮದ್ ರಫಿ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರ ಸ್ಥಿತಿ ಗಂಭೀರವಾಗಿರುವುದಾಗಿ ತಿಳಿದು ಬಂದಿದೆ. ಹಾಸನ ನಗರದಿಂದ ಅರಕಲಗೂಡಿಗೆ ಖಾಸಗಿ ಕೆಲಸ ನಿಮಿತ್ತ ಸಿಐಡಿ ಡಿವೈಎಸ್ಪಿ ಮೊಹಮ್ಮದ್ ರಫಿ ಅವರು ಎರಿಟಿಗಾ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆಯಲ್ಲಿ ಹಾಸನದ ಕಡೆಯಿಂದ ಬರುತ್ತಿದ್ದಂತ ಇನ್ನೋವಾ ಕಾರು ಡಿಕ್ಕಿಯಾಗಿ ಭೀಕರ ಅಪಘಾತ ಉಂಟಾಗಿದೆ. ಇನ್ನೋವಾ ಕಾರು ಹಾಗೂ ಎರಿಟಿಗಾ ಕಾರಿನ ನಡುವೆ ನಡೆದಂತ ಅಪಘಾತದಲ್ಲಿ ಸಿಐಡಿ ಡಿವೈಎಸ್ಪಿ ಮೊಹಮ್ಮದ್ ರಫಿ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇದೀಗ ಅವರ ಸ್ಥಿತಿ ಗಂಭೀರವಾಗಿರುವುದಾಗಿ ತಿಳಿದು ಬಂದಿದೆ. ಈ ಸಂಬಂಧ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/bomb-attack-on-japans-ruling-party-headquarters-suspect-arrested-on-the-spot/ https://kannadanewsnow.com/kannada/breaking-muda-scam-cm-faces-trouble-again-wife-parvathy-accused-of-land-irregularities/
ಬೆಂಗಳೂರು: ಸ್ಯಾಂಡಲ್ ವುಡ್ ನಿರ್ಮಾಪಕ ಕೆ.ಮಂಜು ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವುದಾಗಿ ತಿಳಿದು ಬಂದಿದೆ. ಸೋಷಿಯಲ್ ಮೀಡಿಯಾದಲ್ಲಿ ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವಂತ ಪೋಟೋಗಳು ವೈರಲ್ ಆಗಿದ್ದಾವೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವಂತ ನಿರ್ಮಾಪಕ ಕೆ.ಮಂಜು ಅವರು, ವೈದ್ಯರ ಸಲಹೆ ಮೇರೆಗೆ ಜನರಲ್ ಬಾಡಿ ಚೆಕಪ್ ಮಾಡಿಸಿಕೊಳ್ಳಲು ಆಸ್ಪತ್ರೆಗೆ ದಾಖಲಾಗಿದ್ದೆನು ಎಂದಿದ್ದಾರೆ. ನನಗೆ ಈ ಹಿಂದೆ ಆಪರೇಷನ್ ಆಗಿತ್ತು, ಅದರ ನೋವು ಕೂಡ ಸಣ್ಣದಾಗಿ ಕಾಣಿಸಿಕೊಂಡಿತ್ತು. ಈ ಹಿನ್ನಲೆಯಲ್ಲೂ ಆಸ್ಪತ್ರೆಗೆ ದಾಖಲಾಗಿ ಇಸಿಜಿ ಸೇರಿದಂತೆ ಇತರೆ ಪರೀಕ್ಷೆಗೆ ಒಳಗಾಗಿದ್ದೇನೆ. ನಾನು ಆರೋಗ್ಯವಾಗಿದ್ದು, ಯಾರು ಭಯ ಪಡುವ ಅಗತ್ಯವಿಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದ್ದಾರೆ. https://kannadanewsnow.com/kannada/fir-filed-against-sandalwood-actor-mayur-patel-over-land-dispute/ https://kannadanewsnow.com/kannada/bomb-attack-on-japans-ruling-party-headquarters-suspect-arrested-on-the-spot/
ಮಂಡ್ಯ: ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಬಹಳ ದಿನ ಉಳಿಯಲಿಲ್ಲ. ಜನರು ಮತ್ತು ಆ ಪಕ್ಷದ ಶಾಸಕರೇ ಸರ್ಕಾರವನ್ನು ತೆಗೆಯುತ್ತಾರೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಭವಿಷ್ಯ ನುಡಿದರು. ಮಂಡ್ಯದಲ್ಲಿ ಉದ್ಯೋಗ ಮೇಳದ ಸಮಾರೋಪದ ನಂತರ ಮಾಧ್ಯಮಗಳ ಜತೆ ಅವರು ಮಾತನಾಡಿದರು. 2028ರವರೆಗೆ ಈ ಸರ್ಕಾರ ನಡೆಯಲ್ಲ. ಕಾಂಗ್ರೆಸ್ ಶಾಸಕರಲ್ಲೇ ಅಸಮಾಧಾನದ ಬೇಗುದಿ ಇದೆ. ಅದು ಯಾವಾಗ ಅಸ್ಪೋಟ ಆಗುತ್ತದೆ ಎನ್ನುವುದು ಗೊತ್ತಿಲ್ಲ. ಕಾದು ನೋಡೋಣ. ನಾವು ಅವರ ಸರ್ಕಾರ ಅಲ್ಲಾಡಿಸುತ್ತೇವೆ ಎನ್ನುವುದು ಸರಿಯಲ್ಲ, ಅವರ ಶಾಸಕರು ಮತ್ತು ಜನರೇ ಸರ್ಕಾರದ ಬುಡ ಅಲ್ಲಾಡಿಸುತ್ತಿದ್ದಾರೆ ಎಂದು ಮಾರ್ಮಿಕವಾಗಿ ಹೇಳಿದರು ಸಚಿವರು. ಸರ್ಕಾರದ ನಿಷ್ಕ್ರಿಯತೆಯಿಂದ ಶಾಸಕರು ಹಳ್ಳಿಗೆ ಹೋಗಿ ಜನರನ್ನು ಭೇಟಿ ಮಾಡದಂತಹ ವಾತಾವರಣ ಸೃಷ್ಟಿಯಾಗಿದೆ. ಸರ್ಕಾರದ ನಡವಳಿಕೆ ಬಗ್ಗೆ ಅವರಲ್ಲೇ ವಿಪರೀತ ಅಸಮಾಧಾನ ಇದೆ, ಅದು ಸ್ಪೋಟವಾಗುತ್ತದೆ ಎಂದು ಕುಮಾರಸ್ವಾಮಿ ಅವರು ಹೇಳಿದರು. 2028ರ ವರೆಗೆ ಈ ಸರ್ಕಾರ ನಡೆಯಲ್ಲ ಎನ್ನುವುದು ಖಚಿತ. ಮತ್ತೆ ನಾನೇ ಮುಖ್ಯಮಂತ್ರಿ ಆಗುತ್ತೇನೆ ಎಂದು ಜನರು…
ಬೆಂಗಳೂರು: ಭೂಮಿ ವ್ಯಾಜ್ಯಕ್ಕೆ ಸಂಬಂಧಿಸಿದಂತೆ ದಾಂಧಲೆ ನಡೆಸಿದ ಕಾರಣ, ಮಹಿಳೆಯೊಬ್ಬರು ನೀಡಿದಂತ ದೂರಿನ ಹಿನ್ನಲೆಯಲ್ಲಿ ಸ್ಯಾಂಡಲ್ ವುಡ್ ನಟ ಮಯೂರ್ ಪಟೇಲ್ ವಿರುದ್ಧ ಎಫ್ಐಆರ್ ದಾಖಲಾಗಿದೆ. 14.5 ಎಕರೆ ಜಮೀನು ವಿಚಾರ ಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿತ್ತು. ಹೀಗಿದ್ದರೂ ಕೋರ್ಟ್ ಆದೇಶ ಮೀರಿ ಆ ಜಮೀನಿಗೆ ನಿರ್ಮಿಸಲಾಗಿದ್ದಂತ ಕಾಂಪೌಂಡ್ ಅನ್ನು ಜೆಸಿಬಿ ಕೊಂಡೊಯ್ದು ಸ್ಯಾಂಡಲ್ ವುಡ್ ನಟ ಮಯೂರ್ ಪಟೇಲ್ ಕೆಡವಿ ದಾಂಧಲೆ ನಡೆಸಿದ್ದರು. ಜೊತೆಗೆ ಅಲ್ಲೇ ಶೆಡ್ ಕೂಡ ನಿರ್ಮಿಸಿದ್ದರು. ಈ ಹಿನ್ನಲೆಯಲ್ಲಿ ಜಮೀನು ಮಾಲೀಕರಾದಂತ ಶಾಲಿನಿ ಎಂಬುವರು ಹೆಚ್ ಎಸ್ ಆರ್ ಲೇಔಟ್ ಪೊಲೀಸ್ ಠಾಣೆಗೆ ತೆರಳಿ ನಟ ಮಯೂರ್ ಪಟೇಲ್ ವಿರುದ್ಧ ಕೋರ್ಟ್ ಆದೇಶ ಉಲ್ಲಂಘಿಸಿ ದಾಂಧಲೆ ನಡೆಸಿ, ಜಮೀನಿನ ಕಾಂಪೌಂಡ್ ಕೆಡವಿ ಹಾಕಿದ್ದರ ವಿರುದ್ಧ ದೂರು ನೀಡಿದ್ದರು. ಅವರ ವಿರುದ್ಧ ಕಾನೂನು ಕ್ರಮಕ್ಕೂ ಒತ್ತಾಯಿಸಿದ್ದರು. ಶಾಲಿನಿ ಎಂಬುವರು ನೀಡಿದಂತ ದೂರಿನ ಹಿನ್ನಲೆಯಲ್ಲಿ ಸ್ಯಾಂಡಲ್ ವುಡ್ ನಟ ಮಯೂರ್ ಪಟೇಲ್ ವಿರುದ್ಧ ಹೆಚ್ ಎಸ್ ಆರ್ ಲೇಔಟ್…
ನವದೆಹಲಿ: ಛತ್ತೀಸ್ಗಢದ ನಾರಾಯಣಪುರ ಜಿಲ್ಲೆಯಲ್ಲಿ ಶನಿವಾರ ನಕ್ಸಲರು ಸುಧಾರಿತ ಸ್ಫೋಟಕ ಸಾಧನ (ಐಇಡಿ) ಸ್ಫೋಟಿಸಿದಾಗ ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ಐಟಿಬಿಪಿ) ಇಬ್ಬರು ಸಿಬ್ಬಂದಿ ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ. ಅಬುಜ್ಮಾದ್ ಪ್ರದೇಶದ ಕೊಡ್ಲಿಯಾರ್ ಗ್ರಾಮದ ಬಳಿ ಮಧ್ಯಾಹ್ನ 12 ಗಂಟೆ ಸುಮಾರಿಗೆ ಭದ್ರತಾ ಸಿಬ್ಬಂದಿಯ ಜಂಟಿ ತಂಡಗಳು ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ಈ ಘಟನೆ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ. https://kannadanewsnow.com/kannada/bomb-attack-on-japans-ruling-party-headquarters-suspect-arrested-on-the-spot/ https://kannadanewsnow.com/kannada/breaking-muda-scam-cm-faces-trouble-again-wife-parvathy-accused-of-land-irregularities/
ಹೈದರಾಬಾದ್: ತೆಲಂಗಾಣ ಲೋಕಸೇವಾ ಆಯೋಗ (Telangana Public Service Commission – TPSC) ಗ್ರೂಪ್ 1 ಸೇವೆಗಳ ಆಕಾಂಕ್ಷಿಗಳು ಮುಖ್ಯ ಪರೀಕ್ಷೆಯನ್ನು ಮುಂದೂಡುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ ಕೇಂದ್ರ ಸಚಿವ ಬಂಡಿ ಸಂಜಯ್ ಕುಮಾರ್ ( Union Minister Bandi Sanjay Kumar ) ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹೈದರಾಬಾದ್ನ ನಾಗರಿಕ ಸೇವೆಗಳು ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕೋಚಿಂಗ್ ಸಂಸ್ಥೆಗಳ ಕೇಂದ್ರವಾದ ಅಶೋಕ್ ನಗರದಲ್ಲಿ ಅಭ್ಯರ್ಥಿಗಳು ಪ್ರತಿಭಟನೆ ನಡೆಸಿದರು. ಆಕಾಂಕ್ಷಿಗಳನ್ನು ಭೇಟಿಯಾದ ನಂತರ, ಕೇಂದ್ರ ಸಚಿವರು ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಅವರನ್ನು ಭೇಟಿ ಮಾಡಲು ಮತ್ತು ಆಕಾಂಕ್ಷಿಗಳ ಕಳವಳಗಳನ್ನು ತಿಳಿಸಲು “ಚಲೋ ಸೆಕ್ರೆಟರಿಯೇಟ್” ರ್ಯಾಲಿಯನ್ನು ನಡೆಸಿದರು. ಮುಖ್ಯ ಪರೀಕ್ಷೆಯ ವೇಳಾಪಟ್ಟಿ ಮತ್ತು ನೇಮಕಾತಿ ಪ್ರಕ್ರಿಯೆ ಮತ್ತು ಮೀಸಲಾತಿಯ ಮೇಲೆ ಕೆಲವು ಸರ್ಕಾರಿ ಆದೇಶಗಳ ಪರಿಣಾಮದ ಬಗ್ಗೆ ಆಕಾಂಕ್ಷಿಗಳು ತಮ್ಮ ಕಳವಳಗಳನ್ನು ವ್ಯಕ್ತಪಡಿಸಿದರು. https://kannadanewsnow.com/kannada/farmers-should-not-be-disheartened-state-government-is-pro-farmer-madhu-bangarappa/ https://kannadanewsnow.com/kannada/bengaluru-power-outages-in-these-areas-from-tomorrow-till-october-23/
ಶಿವಮೊಗ್ಗ: ಬಗರ್ಹುಕುಂ ಸಾಗುವಳಿದಾರರನ್ನು ಒಕ್ಕಲೆಬ್ಬಿಸುವುದಿಲ್ಲ. ಯಾವುದೇ ರೈತರು ಧೃತಿಗೆಡಬಾರದು. ಸರ್ಕಾರ ರೈತರ ಪರವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ತಿಳಿಸಿದರು. ಲೋಕೋಪಯೋಗಿ ಭವನದಲ್ಲಿನ ಸಭೆ ನಂತರ ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು, ಅ.21 ಕ್ಕೆ ಸಾಗರದಲ್ಲಿ ಅರಣ್ಯ ಭೂಮಿ ಸಮಸ್ಯೆ ಕುರಿತು ಪ್ರತಿಭಟನೆ ನಡೆಸಲಾಗುತ್ತಿದೆ. ಆದರೆ ಸರ್ಕಾರ ಶರಾವತಿ ಮುಳುಗಡೆ ಸಂತ್ರಸ್ತರು ಮತ್ತು ಬಗರ್ಹುಕುಂ ಸಾಗುವಳಿದಾರರ ಪರವಾಗಿ ಕೆಲಸ ಮಾಡುತ್ತಿದೆ. ಶರಾವತಿ ಸಂತ್ರಸ್ತರಿಗೆ ನ್ಯಾಯ ಒದಗಿಸುವ ಸಂಬಂಧ ಸುಪ್ರೀಂ ಕೋರ್ಟ್ನಲ್ಲಿ ಉತ್ತಮ ನ್ಯಾಯವಾದಿಗಳನ್ನು ನೇಮಿಸಿ ಐಎ ಹಾಕಲಾಗುವುದು. ಮುಳುಗಡೆ ಸಂತ್ರಸ್ತರಿಗೆ ಪುನರ್ವಸತಿ ಮತ್ತು ನ್ಯಾಯ ಒದಗಿಸಲು ಎಲ್ಲ ಪ್ರಯತ್ನವನ್ನು ಸರ್ಕಾರ ನಡೆಸುತ್ತಿದೆ. ರೈತರಿಗೆ ಒಳ್ಳೆಯ ಸುದ್ದಿಯನ್ನೇ ನಿಡುತ್ತೇವೆ. ಕೋರ್ಟ್ ವಿಚಾರ ಸೂಕ್ಷö್ಮವಾಗಿದ್ದು ಹುಷಾರಾಗಿ ಕ್ರಮ ಕೈಗೊಳ್ಳಲಾಗುತ್ತಿದೆ. ಇದು ಇಂದಿನ ಸಮಸ್ಯೆಯಲ್ಲ. ಹಾಗಾಗಿ ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ. ಸಂತ್ರಸ್ತರು ಧೃತಿಗೆಡಬಾರದು ಎಂದರು. ಸಂತ್ರಸ್ತರ ಪರವಾದ ಹೋರಾಟವನ್ನು ನಿಲ್ಲಿಸುವುದಿಲ್ಲ. ಅದಕ್ಕಾಗಿ ಜನಪ್ರತಿನಿಧಿಗಳು, ಅಧಿಕಾರಿಗಳನ್ನೊಳಗೊಂಡ ಸಮಿತಿ ರಚಿಸಲಾಗುವುದು. ಮುಳುಗಡೆಗೆ ಸಂಬಂಧಪಟ್ಟಂತೆ ಚಿಕ್ಕಮಗಳೂರು ಮತ್ತು ಶಿವಮೊಗ್ಗ…
ಬಾಡಿದ ತುಳಸಿಗಿಡವನ್ನು ಏನು ಮಾಡಬೇಕು? ಉತ್ತರ: ತುಳಸಿ ಒಂದು ಸಸ್ಯ. ಆ ಸಸ್ಯದಲ್ಲಿರುವ ಜೀವಕ್ಕೆ ಎಷ್ಟು ಆಯುಷ್ಯವಿದೆಯೋ ಅಷ್ಟು ದಿವಸ ಇರುತ್ತದೆ. ಆ ನಂತರ ಗಿಡ ಬಾಡಿ(ಸತ್ತು) ಹೋಗುತ್ತದೆ. ತುಳಸಿಕಟ್ಟೆಯ ಅಥವ ಮನೆಯ ಹತ್ತಿರದ ಬಾಡಿ ಹೋದ ತುಳಸೀ ಗಿಡವನ್ನು ಅವಶ್ಯವಾಗಿ ತೆಗೆಯಬಹುದು. ತೆಗೆದು ಹೊಸ ಸಸಿಯನ್ನು ತಂದು ನೆಡಬೇಕು. ಬಾಡಿ ಹೋದ ಗಿಡವನ್ನು, ಮಂಗಳವಾರ, ಶುಕ್ರವಾರ, ಅಮಾವಾಸ್ಯಾ, ಪೌರ್ಣಮಿ, ಸಂಕ್ರಾಂತಿಗಳಂದು ತೆಗೆಯಬಾರದು.. ದ್ವಾದಶಿಯಂತೂ ಸರ್ವಥಾ ತೆಗೆಯಬಾರದು. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರು ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9686268564 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ…
ಬೆಂಗಳೂರು: ನಗರದಲ್ಲಿ ತುರ್ತು ವಿದ್ಯುತ್ ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳುತ್ತಿರುವ ಕಾರಣ ನಾಳೆಯಿಂದ ಭಾನುವಾರದವರೆಗೆ ಅಂದರೆ ಅಕ್ಟೋಬರ್.23ರವರೆಗೆ ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಈ ಬಗ್ಗೆ ಬೆಸ್ಕಾಂ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಬೆಂಗಳೂರು: “66/11ಕೆ.ವಿ ಟೆಲಿಕಾಂ” ಸ್ಟೇಷನ್ ನಲ್ಲಿ 11ಕೆ,ವಿ ಬ್ಯಾಂಕ್-2 ನ ಬ್ರೇಕರಗಳನ್ನು ಬದಲಿಸುವ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ದಿನಾಂಕ 20.10.2024 ರಿಂದ 23.10.2024 ರವರೆಗೆ ಬೆಳಿಗ್ಗೆ 10:00 ಗಂಟೆಯಿಂದ ರಾತ್ರಿ 22:00 ಗಂಟೆಯವರೆಗೆ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುವುದು ಎಂದಿದೆ. ನಾಳೆಯಿಂದ ಅಕ್ಟೋಬರ್.23ರವರೆಗೆ ಈ ಏರಿಯಾದಲ್ಲಿ ಕರೆಂಟ್ ಇರೋದಿಲ್ಲ ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು: “ಓಬಳೇಶ್ ಕಾಲೋನಿ, ರ್ಸಸ್ ಗರ್ಡನ್, ರಾಯಪುರ, ಬಿನ್ನಿ ಪೇಟ್, ಪಾದರಾಯನಪುರ, ಜೆಜೆಆರ್ ನಗರ, ಗೋಪಾಲನ್ ಮಾಲ್, ಮೈಸೂರು ರಸ್ತೆ 1ನೇ, 2ನೇ, 3ನೇ ಕ್ರಾಸ್, ಮೋಮಿಂಪುರ, ಜಂಥಾ ಕಾಲೋನಿ, ಶಾಮನಾ ಗರ್ಡನ್, ರ್ಫತ್ ನಗರ, ರಂಗನಾಥ್ ಕಾಲೋನಿ, ಹೊಸಹಳ್ಳಿ ಮುಖ್ಯರಸ್ತೆ, ಪರ್ಕ್ ನಾವು ಬಿನ್ನಿ ಪೇಟೆ, ಅಂಜನಪ್ಪ ಗರ್ಡನ್, ದೊರೆಸ್ವಾಮಿ ನಗರ…
ಶಿವಮೊಗ್ಗ: ಮೂರು ಎಕರೆಗಿಂತ ಹೆಚ್ಚು ಜಮೀನು ಹೊಂದಿರುವ ಮತ್ತು 2015ರ ನಂತರದ ಅರಣ್ಯ ಒತ್ತುವರಿಯನ್ನು ಮಾತ್ರ ತೆರವು ಮಾಡಬೇಕು ಎಂಬುದಾಗಿ ಜಿಲ್ಲಾ ಉಸ್ತುವಾರಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ ಸಚಿವ ಮಧು ಎಸ್ ಬಂಗಾರಪ್ಪ ಸೂಚಿಸಿದ್ದಾರೆ. ಈ ಮೂಲಕ ಬಗರ್ ಹುಕುಂ ಸಾಗುವಳಿದಾರರಿಗೆ ಬಿಗ್ ರಿಲೀಫ್ ನೀಡಿದ್ದಾರೆ. ಇಂದು ಶಿವಮೊಗ್ಗದ ಲೋಕಪಯೋಗಿ ಭವನದಲ್ಲಿ “ಅರಣ್ಯ ಇಲಾಖೆ”ಯ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಯಿತು. ಅರಣ್ಯ ಒತ್ತುವರಿ ತೆರವು ಕಾನೂನು ಪ್ರಕ್ರಿಯೆಯಲ್ಲಿ ಅಧಿಕಾರಿಗಳು ಮೂರು ಎಕರೆಗಿಂತ ಹೆಚ್ಚು ಜಮೀನು ಹೊಂದಿರುವ ಮತ್ತು 2015ರ ನಂತರದ ಅರಣ್ಯ ಒತ್ತುವರಿಯನ್ನು ಮಾತ್ರ ತೆರವು ಮಾಡಬೇಕು ಎಂಬ ಸ್ಪಷ್ಟ ಸೂಚನೆಯನ್ನು ಈಗಾಗಲೇ ಸಚಿವರು ತಿಳಿಸಿದ್ದಾರೆ. ಆದರೆ ಅರಣ್ಯ ಇಲಾಖೆಯ ಕೆಲ ಅಧಿಕಾರಿಗಳು ಮುಗ್ದ ಹಾಗೂ ಬಡ ರೈತರ ಜಮೀನು ಒತ್ತುವರಿ ವಿಚಾರದಲ್ಲಿ 3 ಎಕರೆ ಹೊಂದಿರುವ ರೈತರಿಗೂ ತೊಂದರೆ ನೀಡಿ ಒಕ್ಕಲೆಬ್ಬಿಸುವ ಕಾರ್ಯದಲ್ಲಿ ತೊಡಗಿರುವ ವಿಷಯ ನನ್ನ ಗಮನಕ್ಕೆ ಬಂದಿದ್ದು, ಈ ವರ್ತನೆ ಸರಿಯಲ್ಲ. ಅಧಿಕಾರಿಗಳು ರೈತರೊಂದಿಗೆ ತಾಳ್ಮೆಯಿಂದ…