Author: kannadanewsnow09

ರಾಮನಗರ: ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ನಾವೇ ಗೆಲ್ಲುತ್ತೇವೆ ಎಂಬುದಾಗಿ ಸಹೋದರ ಡಿ.ಕೆ ಸುರೇಶ್ ಪರವಾಗಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಗೆಲುವಿನ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ. ರಾಮನಗರ ಜಿಲ್ಲೆಯ ಕನಕಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಲೋಕಸಭಾ ಚುನಾವಣೆಯಲ್ಲಿ ನಾವೇ ಗೆಲ್ಲುತ್ತೇವೆ ಎಂಬುದಾಗಿ ಹೇಳಿದರು. ಈ ಮೂಲಕ ಸಹೋದರ ಡಿ.ಕೆ ಸುರೇಶ್ ಗೆಲ್ಲುವ ಬಗ್ಗೆ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ. “ಮೋದಿ ಅವರ ನೂರು ದಿನಗಳ ಕಾರ್ಯಕ್ರಮ ರಾಜಕೀಯ ತಂತ್ರದ ಭಾಗವಷ್ಟೇ. ಜನರ ಮನಸ್ಥಿತಿಯನ್ನು ಸಜ್ಜು ಮಾಡುವ ವ್ಯಾಖ್ಯಾನ ಬಿಟ್ಟರೆ ಇದರಲ್ಲಿ ಬೇರೆನೂ ಇಲ್ಲ” ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಹೇಳಿದರು. “ನಾವು ಸಹ ರಾಜಕೀಯ ತಂತ್ರ ಹೊಂದಿದ್ದೇವೆ. ಪ್ರತಿಯೊಂದು ಪಕ್ಷವು ಒಂದೊಂದು ತಂತ್ರ ಅನುಸರಿಸುತ್ತವೆ. ಎಕ್ಸಿಟ್ ಪೋಲ್ ಸುಳ್ಳಾಗಲಿದೆ. ಇಂಡಿಯಾ ಒಕ್ಕೂಟ ಬಹುಮತ ಪಡೆಯುತ್ತದೆ ಮತ್ತು ಸರ್ಕಾರ ರಚಿಸುತ್ತದೆ” ಎಂದು ಹೇಳಿದರು. https://kannadanewsnow.com/kannada/mysuru-over-50-people-fall-ill-after-consuming-food-at-griha-pravesh-programme-one-elderly-woman-dies/ https://kannadanewsnow.com/kannada/workers-you-will-get-all-these-facilities-from-the-state-government/

Read More

ಬೆಂಗಳೂರು: ಲೋಕಸಭಾ ಚುನಾವಣೆಯ ಎಕ್ಸಿಟ್ ಪೋಲ್ ಫಲಿತಾಂಶ ಬಂದ ಬಳಿಕ ರಾಜ್ಯದ ಆಡಳಿತ ಪಕ್ಷದ ಮುಖಂಡರಿಗೆ, ಮಾನ್ಯ ಮುಖ್ಯಮಂತ್ರಿಯಾದಿಯಾಗಿ ಸಚಿವರಿಗೂ ಕೂಡ ಎದೆಬಡಿತ ಹೆಚ್ಚಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ವಿಶ್ಲೇಷಿಸಿದರು. ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಸಣ್ಣದಲ್ಲ; ಇದರ ಆಳ ಮತ್ತು ಅಗಲ ಇನ್ನೂ ಹೆಚ್ಚಾಗಿದೆ. ಕೂಡಲೇ ಸಚಿವ ನಾಗೇಂದ್ರರ ರಾಜೀನಾಮೆ ಪಡೆಯಲು ನಾವು ಆಗ್ರಹಿಸಿದ್ದರೂ ಮುಖ್ಯಮಂತ್ರಿಗಳು ಇನ್ನೂ ಮನಸ್ಸು ಮಾಡಿಲ್ಲ ಎಂದು ಆಕ್ಷೇಪಿಸಿದರು. ತೆಲಂಗಾಣಕ್ಕೆ ಹಣ ವರ್ಗಾವಣೆ, ನಕಲಿ ಕಂಪನಿ ಹೆಸರಿನಲ್ಲಿ ಬ್ಯಾಂಕ್ ಖಾತೆ ತೆರೆದು ಹಣ ವರ್ಗಾಯಿಸಿದ್ದು ಬಯಲಾಗಿದೆ. ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಹೈಕಮಾಂಡಿಗೋಸ್ಕರ ಈ ಎಸ್‍ಟಿ ಅಭಿವೃದ್ಧಿ ನಿಗಮದ 187 ಕೋಟಿ ಹಣವನ್ನು ತೆಲಂಗಾಣಕ್ಕೆ ವರ್ಗಾಯಿಸಿದ್ದಾರೆ. ಬೇರೆ ಬೇರೆ ಖಾತೆಗಳಿಂದ ಈ ಹಣ ಚುನಾವಣೆಗೆ ದುರುಪಯೋಗ ಆಗಿದೆ ಎಂದು ಆರೋಪಿಸಿದರು. ಸಿಬಿಐ ತನಿಖೆಗೆ ಕೋರಿ ಯೂನಿಯನ್ ಬ್ಯಾಂಕ್ ಕೂಡ ಪತ್ರ ಬರೆದಿದೆ.…

Read More

ಮೈಸೂರು: ಜಿಲ್ಲೆಯಲ್ಲಿ ಗೃಹ ಪ್ರವೇಶ ಕಾರ್ಯಕ್ರಮದಲ್ಲಿ ಊಟ ಸೇವಿಸಿದಂತ 50ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದಾರೆ. ಅಲ್ಲದೇ ತೀವ್ರವಾಗಿ ಅಸ್ವಸ್ಥಗೊಂಡಿದ್ದಂತ ಓರ್ವ ವೃದ್ಧೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರೋ ಘಟನೆ ನಡೆದಿದೆ. ಮೈಸೂರು ತಾಲೂಕಿನ ಮಾರ್ಬಳ್ಳಿಯಲ್ಲಿ ಮೇ.31ರಂದು ಗೃಹ ಪ್ರವೇಶ ಕಾರ್ಯಕ್ರಮವೊಂದನ್ನು ಆಯೋಜಿಸಲಾಗಿತ್ತು. ಈ ವೇಳೆಯಲ್ಲಿ ಊಟ ಸೇವಿಸಿದಂತ ಒಂದೇ ಕುಟುಂಬದ 50ಕ್ಕೂ ಹೆಚ್ಚು ಜನರಲ್ಲಿ ವಾಂತಿ ಬೇಧಿ ಕಾಣಿಸಿಕೊಂಡಿದೆ. ಅವರನ್ನು ಮೈಸೂರಿನ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಮೇ.31ರಂದು ಮಾರ್ಬಳ್ಳಿಯಲ್ಲಿ ನಡೆದಿದ್ದಂತ ಗೃಹ ಪ್ರವೇಶದಲ್ಲಿ 300ಕ್ಕೂ ಹೆಚ್ಚು ಜನರು ಊಟ ಮಾಡಿದ್ದರು. ಮಾರ್ಬಳ್ಳಿ ಬಿಟ್ಟು ಬೇರೆ ಗ್ರಾಮದಿಂದಲೂ ಬಂದು ಊಟ ಮಾಡಿದ್ದರು. ಮಾರ್ಬಳ್ಳಿ ಗ್ರಾಮದಲ್ಲಿ ಊಟ ಮಾಡಿದವರಿಗೆ ಮಾತ್ರವೇ ವಾಂತಿ, ಬೇಧಿ ಕಾಣಿಸಿಕೊಂಡಿದೆ. ಆದ್ರೇ ಬೇರೆ ಊರಿನಿಂದ ಬಂದು ಊಟ ಮಾಡಿದಂತ ಯಾರಿಗೂ ಅಸ್ವಸ್ಥತೆ ಕಾಣಿಸಿಕೊಂಡಿಲ್ಲ. https://kannadanewsnow.com/kannada/workers-you-will-get-all-these-facilities-from-the-state-government/ https://kannadanewsnow.com/kannada/wont-be-surprised-if-siddaramaiah-govt-brands-peddler-as-innocent-just-because-he-is-brother-bjp/

Read More

ನವದೆಹಲಿ: ಓಲಾ ಎಲೆಕ್ಟ್ರಿಕ್ ತನ್ನ ಆರಂಭಿಕ ಸಾರ್ವಜನಿಕ ಕೊಡುಗೆ (ಐಪಿಒ) ಗೆ ಮುಂಚಿತವಾಗಿ ನಿರ್ವಹಣಾ ವೆಚ್ಚವನ್ನು ನಿಯಂತ್ರಿಸಲು ಮುಂಬರುವ ವಾರಗಳಲ್ಲಿ ಸಂಸ್ಥೆಯಾದ್ಯಂತ ಸುಮಾರು 400-500 ಜನರನ್ನು ವಜಾಗೊಳಿಸಲು ಯೋಜಿಸುತ್ತಿದೆ ಎಂದು ಎಕನಾಮಿಕ್ ಟೈಮ್ಸ್ ವರದಿ ಮಾಡಿದೆ. ವಜಾಗೊಳಿಸಬೇಕಾದ ಉದ್ಯೋಗಿಗಳ ನಿಖರ ಸಂಖ್ಯೆಯನ್ನು ಇನ್ನೂ ಅಂತಿಮಗೊಳಿಸಲಾಗುತ್ತಿದೆ. ಕಂಪನಿಯ ನಾಯಕತ್ವವು ಪ್ರಸ್ತುತ ಸಂಸ್ಥೆಯಾದ್ಯಂತ ನಿರೀಕ್ಷಿಸಲಾದ ವಜಾಗೊಳಿಸುವಿಕೆಯ ಪ್ರಮಾಣವನ್ನು ನಿರ್ಧರಿಸುತ್ತಿದೆ. ಮೂಲಗಳನ್ನು ಉಲ್ಲೇಖಿಸಿ ವರದಿಯು, ಕೆಲವು ಪೀಡಿತ ಉದ್ಯೋಗಿಗಳನ್ನು ಕಡಿಮೆ ವೆಚ್ಚದಲ್ಲಿ ಹೊಸ ನೇಮಕಾತಿಗಳೊಂದಿಗೆ ಬದಲಾಯಿಸಬಹುದು ಎಂದು ಉಲ್ಲೇಖಿಸಿದೆ. ಆದಾಗ್ಯೂ, ಒಟ್ಟಾರೆ ಉದ್ಯೋಗಿಗಳ ಸಂಖ್ಯೆ ಕಡಿಮೆಯಾಗುತ್ತದೆ ಎಂದು ವರದಿ ತಿಳಿಸಿದೆ. ಕೆಲವು ತಂಡಗಳು ಈಗಾಗಲೇ ಕಡಿತಗಳ ಸಂಖ್ಯೆಯನ್ನು ಅಂತಿಮಗೊಳಿಸಿವೆ ಎಂದು ವರದಿಯಲ್ಲಿ ಉಲ್ಲೇಖಿಸಲಾದ ವಿಷಯದ ಬಗ್ಗೆ ತಿಳಿದಿರುವ ವ್ಯಕ್ತಿಯೊಬ್ಬರು ತಿಳಿಸಿದ್ದಾರೆ. ಓಲಾ ಸಂಸ್ಥಾಪಕ ಭವಿಶ್ ಅಗರ್ವಾಲ್ ಎಲ್ಲಾ ಇಲಾಖೆಗಳಲ್ಲಿ ವೆಚ್ಚವನ್ನು ಕಡಿಮೆ ಮಾಡಲು ಒತ್ತಾಯಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಡಿಸೆಂಬರ್ನಲ್ಲಿ, ಓಲಾ ಎಲೆಕ್ಟ್ರಿಕ್ ತನ್ನ ಕರಡು ಐಪಿಒ ದಾಖಲೆಗಳನ್ನು ಸಲ್ಲಿಸಿದಾಗ, ಕಂಪನಿಯು ಅಕ್ಟೋಬರ್ 2023 ರ…

Read More

ಬೆಂಗಳೂರು: ಇಂದು ವಿಧಾನಪರಿಷತ್ ಚುನಾವಣೆ ಬಿಜೆಪಿ ಅಭ್ಯರ್ಥಿಗಳಾದ ಸಿ.ಟಿ.ರವಿ, ಎನ್.ರವಿಕುಮಾರ್ ಮತ್ತು ಎಂ.ಜಿ. ಮುಳೆ ಅವರು ವಿಧಾನಸೌಧದ 1ನೇ ಮಹಡಿ, ಕೊಠಡಿ ಸಂಖ್ಯೆ 121ರಲ್ಲಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ರಾಜ್ಯದ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ, ರಾಜ್ಯದ ಮಾಜಿ ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ್, ವಿಧಾನಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ರಾಜ್ಯಸಭಾ ಸದಸ್ಯ ಲೆಹರ್ ಸಿಂಗ್, ಶಾಸಕರಾದ ಗೋಪಾಲಯ್ಯ, ಮುನಿರತ್ನ, ಸುನಿಲ್ ಕುಮಾರ್, ಸುರೇಶ್, ಮಾನಪ್ಪ ವಜ್ಜಲ, ವಿಧಾನ ಪರಿಷತ್ ಸದಸ್ಯರಾದ ಛಲವಾದಿ ನಾರಾಯಣಸ್ವಾಮಿ, ಹನುಮಂತ ನಿರಾಣಿ ಅವರು ಉಪಸ್ಥಿತರಿದ್ದರು. https://kannadanewsnow.com/kannada/modis-100-day-programme-part-of-political-strategy-dy-cm-d-raja-k-shivakumar/ https://kannadanewsnow.com/kannada/workers-you-will-get-all-these-facilities-from-the-state-government/

Read More

ಬೆಂಗಳೂರು : “ಮೋದಿ ಅವರ ನೂರು ದಿನಗಳ ಕಾರ್ಯಕ್ರಮ ರಾಜಕೀಯ ತಂತ್ರದ ಭಾಗವಷ್ಟೇ. ಜನರ ಮನಸ್ಥಿತಿಯನ್ನು ಸಜ್ಜು ಮಾಡುವ ವ್ಯಾಖ್ಯಾನ ಬಿಟ್ಟರೆ ಇದರಲ್ಲಿ ಬೇರೆನೂ ಇಲ್ಲ” ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಹೇಳಿದರು. ವಿಧಾನಸೌಧದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯಿಸಿದರು. “ನಾವು ಸಹ ರಾಜಕೀಯ ತಂತ್ರ ಹೊಂದಿದ್ದೇವೆ. ಪ್ರತಿಯೊಂದು ಪಕ್ಷವು ಒಂದೊಂದು ತಂತ್ರ ಅನುಸರಿಸುತ್ತವೆ. ಎಕ್ಸಿಟ್ ಪೋಲ್ ಸುಳ್ಳಾಗಲಿದೆ. ಇಂಡಿಯಾ ಒಕ್ಕೂಟ ಬಹುಮತ ಪಡೆಯುತ್ತದೆ ಮತ್ತು ಸರ್ಕಾರ ರಚಿಸುತ್ತದೆ” ಎಂದು ಹೇಳಿದರು. ಮಳೆ ಹಾನಿ ಪ್ರದೇಶಗಳಿಗೆ ಭೇಟಿ: ಬೆಂಗಳೂರಿನ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡುವಿರಾ ಎಂದು ಕೇಳಿದಾಗ “ಖಂಡಿತವಾಗಿ ಭೇಟಿ ನೀಡುತ್ತೇನೆ. ಹೆಚ್ಚು ಮಳೆ ಸುರಿದು ತೊಂದರೆ ಉಂಟಾಗಿರುವ ಭಾಗಗಳನ್ನು ಪರಿಶೀಲನೆ ನಡೆಸಲಾಗುವುದು” ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ತಿಳಿಸಿದರು. “ಪರಿಷತ್ ಚುನಾವಣೆ ಮತದಾನ ಮುಗಿದ ನಂತರ ಅಧಿಕಾರಿಗಳ ಸಭೆ ನಡೆಸಲಾಗುವುದು. ತೊಂದರೆಗಳನ್ನು ನಿವಾರಿಸಲಾಗುವುದು” ಎಂದರು. https://kannadanewsnow.com/kannada/wont-be-surprised-if-siddaramaiah-govt-brands-peddler-as-innocent-just-because-he-is-brother-bjp/ https://kannadanewsnow.com/kannada/workers-you-will-get-all-these-facilities-from-the-state-government/

Read More

ಬೆಂಗಳೂರು: ನಗರದಲ್ಲಿ ರೇವ್ ಪಾರ್ಟಿ ಮೂಲಕ ಬೆಂಗಳೂರು ಮಾನ ರಾಷ್ಟ್ರೀಯ ಮಟ್ಟದಲ್ಲಿ ಹರಾಜಾಗಿದೆ. ಈಗ ಬ್ರದರ್ ಎನ್ನುವ ಕಾರಣಕ್ಕೆ ಸಿದ್ಧರಾಮಯ್ಯ ಸರ್ಕಾರವು ಈ ಪೆಡ್ಲರ್ ಗೂ ಅಮಾಯಕ ಪಟ್ಟ ಕಟ್ಟಿದರೇ ಅಚ್ಚರಿ ಇಲ್ಲ ಅಂತ ಕರ್ನಾಟಕ ಬಿಜೆಪಿ ವಾಗ್ಧಾಳಿ ನಡೆಸಿದೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಬಿಜೆಪಿ, ಅಧಿಕಾರದಲ್ಲಿರುವ ಕರ್ನಾಟಕ ಕಾಂಗ್ರೆಸ್ ರಾಜಧಾನಿ ಬೆಂಗಳೂರನ್ನು ಆ ದಿನಗಳ ಗತ ವೈಭವಕ್ಕೆ ಕರೆದುಕೊಂಡು ಹೋಗಲು ಗೂಂಡಾಗಿರಿ, ದಾದಾಗಿರಿಗೆ ಮುನ್ನುಡಿ ಬರೆದು ರೇವ್ ಪಾರ್ಟಿಗೆ ಅವಕಾಶ ನೀಡಿದೆ ಅಂತ ಗುಡುಗಿದೆ. ರಾಜಧಾನಿಯಲ್ಲಿ ಇತ್ತೀಚೆಗೆ ನಡೆದ ರೇವ್ ಪಾರ್ಟಿ, ದೇಶದಲ್ಲಿ ಬೆಂಗಳೂರಿನ ಮಾನ ಹರಾಜು ಹಾಕಿತ್ತು. ಇದೀಗ ಪಾರ್ಟಿಗೆ ಡ್ರಗ್ಸ್ ಸಪ್ಲೈ ಮಾಡಿದ ಡಿಜೆ ಹಳ್ಳಿಯ ಶರೀಫ್ ಸಿಕ್ಕಿ ಬಿದ್ದಿದ್ದಾನೆ ಎಂದು ಹೇಳಿದೆ. ಬ್ರದರ್ ಎನ್ನುವ ಕಾರಣಕ್ಕೆ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಈ ಪೆಡ್ಲರ್‌ಗೂ ಅಮಾಯಕ ಪಟ್ಟ ಕಟ್ಟಿದರೆ ಅಚ್ಚರಿ ಇಲ್ಲ ಎಂಬುದಾಗಿ ಹೇಳಿದೆ. https://twitter.com/BJP4Karnataka/status/1797547727120998419 https://kannadanewsnow.com/kannada/mlc-elections-congress-candidate-from-south-west-teachers-constituency-dr-k-k-manjunath-kumar-casts-his-vote/ https://kannadanewsnow.com/kannada/workers-you-will-get-all-these-facilities-from-the-state-government/

Read More

ಮಡಿಕೇರಿ: ಇಂದು ವಿಧಾನಪರಿಷತ್ತಿನ 6 ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ. ಬೆಳಿಗ್ಗೆ 8 ಗಂಟೆಯಿಂದ ಮತದಾನ ಆರಂಭಗೊಂಡಿದ್ದು, ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ. ಈ ಸಂದರ್ಭದಲ್ಲಿ ನೈರುತ್ಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಕೆ.ಕೆ ಮಂಜುನಾಥ್ ಕುಮಾರ್ ಮತದಾನ ಮಾಡಿದರು. ಮಡಿಕೇರಿಯಲ್ಲಿ ನೈರುತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಡಾ.ಕೆ.ಕೆ ಮಂಜುನಾಥ್ ಕುಮಾರ್ ಕುಶಾಲನಗರದ ಸರ್ಕಾರಿ ಪ್ರಾಥಮಿತ ಶಾಲಾ ಮತಗಟ್ಟೆಯಲ್ಲಿ ಮತದಾನ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದಂತ ಅವರು, ಈ ಬಾರಿ ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಗೆಲುವು ಸಾಧಿಸೋ ವಿಶ್ವಾಸವಿದೆ ಅಂತ ತಿಳಿಸಿದರು. https://kannadanewsnow.com/kannada/another-blunder-by-kea-in-cet-exam-increased-anxiety-among-thousands-of-students/ https://kannadanewsnow.com/kannada/workers-you-will-get-all-these-facilities-from-the-state-government/

Read More

ಬೆಂಗಳೂರು: ಮೂರು ದಿನಗಳ ಹಿಂದೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಪ್ರಕಟಿಸಿರುವಂತ ಸಾಮಾನ್ಯ ಪ್ರವೇಶ ಪರೀಕ್ಷೆ-2024ರಲ್ಲಿ ಮತ್ತೊಂದು ಎಡವಟ್ಟನ್ನು ಮಾಡಲಾಗಿದೆ. ಈ ಕಾರಣದಿಂದಾಗಿ 3 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಆಂತಕಕ್ಕೆ ಒಳಗಾವಂತೆ ಕೆಇಎ ಮಾಡಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಶನಿವಾರ ಸಂಜೆಯಂದ ಸಾಮಾನ್ಯ ಪ್ರವೇಶ ಪರೀಕ್ಷೆ(KCET-2024)ರ ಫಲಿತಾಂಶವನ್ನು ಪ್ರಕಟಿಸಲಾಗಿತ್ತು. ಈ ಪರೀಕ್ಷೆಯಲ್ಲಿ ಕೆಲವರು ಪರೀಕ್ಷೆಗೆ ಹಾಜರಾಗಿದ್ದರೂ ಗೈರು ಎಂಬುದಾಗಿ ಎಡವಟ್ಟು ಮಾಡಿದ್ರೇ, ಮತ್ತೆ ಕೆಲವ್ದಯಾರ್ಥಿಗಳ Rankಗೆ ತಡೆಯಾಗಿದ್ದು, ನೂರಾರು ಸಂಖ್ಯೆ ವಿದ್ಯಾರ್ಥಿಗಳು, ಪೋಷಕರು ಮಲ್ಲೇಶ್ವರಂ ಕೆಇಎ ಕಚೇರಿಯ ಮುಂಭಾಗದಲ್ಲಿ ಜಮಾಯಿಸಿದ್ದಾರೆ. ಈಗಾಗಲೇ ಕೆಇಎಯಿಂದ ಸಿಇಟಿ ಪರೀಕ್ಷೆಯಲ್ಲಿ ಪಠ್ಯದಲ್ಲಿ ಇಲ್ಲದ ವಿಷಯಗಳ ಬಗ್ಗೆ 50 ಪ್ರಶ್ನೆಗಳನ್ನು ಕೇಳುವ ಮೂಲಕ ಎಡವಟ್ಟು ಮಾಡಲಾಗಿತ್ತು. ಬಳಿಕ ತಪ್ಪು ಸರಿಪಡಿಸಿಕೊಂಡು ಗ್ರೇಸ್ ಅಂಕ ಕೂಡ ನೀಡಲಾಗಿತ್ತು. ಈಗ ಕೆಲವರಿಗೆ ಪರೀಕ್ಷೆ ಹಾಜರಾಗಿದ್ರು ಕೂಡ ಗೈರಾಗಿದ್ದಾರೆಂದು ರಿಸಲ್ಟ್ ಬಂದಿದೆ. ಕೆಲ ವಿಧ್ಯಾರ್ಥಿಗಳ ಸಿಇಟಿ ರ್ಯಾಕಿಂಗ್ ಗೆ ತಡೆಯಾಗಿದ್ದು, ನೂರಾರು ಸಂಖ್ಯೆಯಲ್ಲಿ ಮಲೇಶ್ವರಂ ಕೆಇಎ ಕಛೇರಿ ಮುಂಭಾಗದಲ್ಲಿ ಪೋಷಕರು, ವಿಧ್ಯಾರ್ಥಿಗಳು ಜಮಾಯಿಸಿದ್ದಾರೆ. ನಮ್ಮ…

Read More

ಬೆಂಗಳೂರು: ಸಿಲಿಕಾನ್ ಸಿಟಿ ಇಂದು ಅಕ್ಷರಶಃ ಭಾರೀ ಮಳೆಯಿಂದಾಗಿ ತತ್ತರಿಸಿ ಹೋಗಿದೆ. ಸತತ ಒಂದು ಗಂಟೆಗೂ ಹೆಚ್ಚು ಕಾಲ ಸುರಿದಂತ ಮಳೆಯಿಂದಾಗಿ ನಗರದ ಪ್ರಮುಖ 58 ರಸ್ತೆಗಳು ಜಲಾವೃತಗೊಂಡಿದ್ದರೇ, 39 ಕಡೆ ಮರ ಬಿದ್ದು ಸಂಚಾರ ಅಸ್ತವ್ಯಸ್ಥಗೊಂಡಿದೆ. ಈ ಕುರಿತಂತೆ ಬೆಂಗಳೂರು ಸಂಚಾರ ಪೊಲೀಸ್ ಇಲಾಖೆಯ ಜಂಟಿ ಪೊಲೀಸ್ ಆಯುಕ್ತರು ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ನೀಡಿದ್ದು, ಬೆಂಗಳೂರಲ್ಲಿ ಭಾರೀ ಮಳೆಯಿಂದಾಗಿ  ಪ್ರಮುಖ ರಸ್ತೆಗಳಲ್ಲಿ 58 ಸ್ಥಳಗಳಲ್ಲಿ ನೀರು ನಿಂತಿದೆ. 39 ಸ್ಥಳಗಳಲ್ಲಿ ಮರಗಳು ಬಿದ್ದಿವೆ. ದಟ್ಟಣೆ ಹೆಚ್ಚಾಗಿದೆ. ರಸ್ತೆಗಳನ್ನು ತೆರವುಗೊಳಿಸಲು ನಾಗರಿಕ ಸಂಸ್ಥೆಗಳು ಕೆಲಸ ಮಾಡುತ್ತಿವೆ ಎಂದಿದ್ದಾರೆ. https://twitter.com/Jointcptraffic/status/1797278939485720919 ಬೆಂಗಳೂರಲ್ಲಿ ಭಾರೀ ಮಳೆ: ಜನತೆಗೆ ಸಂಚಾರ ಪೊಲೀಸರಿಂದ ಈ ಸಲಹೆ ಬೆಂಗಳೂರಲ್ಲಿ ಸತತ ಒಂದು ಗಂಟೆ ಸುರಿದಂತ ಭಾರೀ ಮಳೆಯಿಂದಾಗಿ ರಸ್ತೆಗಳು ಜಲಾವೃತಗೊಂಡಿದ್ದಾವೆ. ಎಲ್ಲೆಲ್ಲೂ ನೀರು ನುಗ್ಗಿ ಸಂಚಾರ ಅಸ್ತವ್ಯಸ್ಥಗೊಂಡಿದೆ. ಮೆಜೆಸ್ಟಿಕ್ ಸೇರಿದಂತೆ ವಿವಿಧೆಡೆಯಲ್ಲಿ ಮಳೆಯಿಂದಾಗಿ ಅಲ್ಲಲ್ಲಿ ಮರಗಳು ಮುರಿದು ಬಿದ್ದು, ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ. ಈ ಹಿನ್ನಲೆಯಲ್ಲಿ…

Read More