Author: kannadanewsnow09

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಹೆಚ್ ಆರ್ ಎಂ ಎಸ್ ತಂತ್ರಾಂಶದಲ್ಲಿ ಈ ಕೂಡಲೇ ಪಿಎಂಜೆಜೆಬಿವೈ ಮತ್ತು ಪಿಎಂ ಎಸ್ ಬಿ ವೈ ಮಾಹಿತಿಯನ್ನು ದಾಖಲಿಸುವಂತೆ ಸರ್ಕಾರ ಸೂಚಿಸಿದೆ. ಈ ಕುರಿತಂತೆ ಮಾಹಿತಿ ಬಿಡುಗಡೆ ಮಾಡಿರುವಂತ ಸರ್ಕಾರವು,  ಎಲ್ಲಾ ಪ್ರಮುಖ ಬ್ಯಾಂಕ್‌ಗಳಲ್ಲಿ ಒದಗಿಸುತ್ತಿರುವ ವೇತನ ಖಾತೆಯ ಯೋಜನೆಯ ಲಾಭವನ್ನು ಪಡೆಯಲು ನಿಮ್ಮ ಬ್ಯಾಂಕ್‌ ಖಾತೆಯನ್ನು ವೇತನ ಖಾತೆ ಯೋಜನೆಯಡಿ ಮಾರ್ಪಡಿಸಲು ಈ ಮೂಲಕ ತಿಳಿಸಿದೆ. ಆರ್ಥಿಕ ಇಲಾಖೆ ಪತ್ರ ಸಂಖ್ಯೆ: FD-CAM/160/2023 ದಿನಾಂಕ:06/09/2023 ರನ್ವಯ, ಪ್ರತಿ ಉದ್ಯೋಗಿಗಳಿಗೆ ಎರಡು ಅಮೂಲ್ಯವಾದ ವಿಮಾ ಯೋಜನೆಗಳಾದ – ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಬಿಮಾ ಯೋಜನೆ (PMJJBY) ಮತ್ತು ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆ (PMSBY) ಯನ್ನು ತೆರೆಯಲು ಕೋರಲಾಗಿದೆ. ಈ ಯೋಜನೆಯನ್ನು ತಮ್ಮ ವೇತನ ಖಾತೆ ಬ್ಯಾಂಕ್‌ ಮುಖಾಂತರ ಪಡೆಯಬಹುದಾಗಿದೆ. ಹೆಚ್ಚಿನ ವಿವರಕ್ಕಾಗಿ https://www.jansuraksha.gov.in/ ಲಿಂಕ್‌ ಅನ್ನು ಪ್ರವೇಶಿಸಿ. ಪ್ರಧಾನ ಮಂತ್ರಿ ಜೀವನ ಜ್ಯೋತಿ ಬೀಮ ಯೋಜನೆ (ಪಿಎಂಜೆಜೆಬಿವೈ) ಪ್ರಧಾನಮಂತ್ರಿ ಜೀವನ್‌ ಜ್ಯೋತಿ…

Read More

ಬೆಂಗಳೂರಿನ: ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಸಮರ್ಪಕವಾಗಿ ಕೈಗೊಳ್ಳಲಾಗುತ್ತಿದ್ದು, ಕೆಲವು ಸಾರ್ವಜನಿಕರು ಗಣತಿದಾರರು ತಮ್ಮ ಪಡಿತರ ಚೀಟಿಯ ರದ್ದತಿಗೆ ಬಂದಿದ್ದಾರೆಂಬ ತಪ್ಪು ಕಲ್ಪನೆಯಿಂದ ಸರಿಯಾದ ಮಾಹಿತಿ ನೀಡಲು ಸಹಕರಿಸದೆ ಸಮೀಕ್ಷೆಗೆ ಅಡ್ಡಿಯಾಗುತ್ತಿರುವುದು ಕಂಡುಬಂದಿರುತ್ತದೆ. ಈ ಸಮೀಕ್ಷೆಯು ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾಗಿದ್ದು, ಹಿಂದುಳಿದ ವರ್ಗಗಳ ಹಾಗೂ ಇತರೆ ಎಲ್ಲ ಜನರ ಸಾಮಾಜಿಕ ಮತ್ತು ಶೈಕ್ಷಣಿಕ ದತ್ತಾಂಶವನ್ನು ಸಂಗ್ರಹಿಸಲು ಮಾತ್ರ ನಡೆಸಲಾಗುತ್ತಿದೆ. ಯಾವುದೇ ಪಡಿತರ ಚೀಟಿ ರದ್ದತಿ ಕಾರ್ಯವನ್ನು ಸಮೀಕ್ಷೆಯಲ್ಲಿ ಮಾಡಲಾಗುವುದಿಲ್ಲ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಿ ಜಗದೀಶ ಅವರು ಸ್ಪಷ್ಟಪಡಿಸಿದ್ದಾರೆ. ರಾಜ್ಯಾದ್ಯಂತ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಅಸಮಾನತೆಗಳನ್ನು ಹೋಗಲಾಡಿಸುವ ಯೋಜನೆಗಳನ್ನು ರೂಪಿಸಲು ಈ ದತ್ತಾಂಶ ಸಹಕಾರಿಯಾಗಲಿದೆ. ಹಾಗಾಗಿ ಸಾರ್ವಜನಿಕರು ಈ ಸಮೀಕ್ಷೆ ಬಗ್ಗೆ ಯಾವುದೇ ತಪ್ಪು ಕಲ್ಪನೆ ಹೊಂದದೆ ಮತ್ತು ವದಂತಿಗಳಿಗೆ ಕಿವಿಕೊಡದೇ ನಿಶ್ಚಿಂತೆಯಿಂದ ಭಾಗವಹಿಸಿ ಸಮೀಕ್ಷೆಯನ್ನು ಯಶಸ್ವಿಗೊಳಿಸಲು ಸಹಕರಿಸಬೇಕೆಂದು ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ.

Read More

ಬೆಂಗಳೂರು ಗ್ರಾಮಾಂತ: ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಹಳ್ಳಿ ಪಟ್ಟಣ ಪಂಚಾಯಿತಿಯಿಂದ ಸಂಗ್ರಹಿಸಲಾದಂತ ತ್ಯಾಜ್ಯ ನಿರ್ವಹಣೆಯನ್ನು ಸರಿಯಾಗಿ ಮಾಡುತ್ತಿಲ್ಲ. ಪ್ರತಿದಿನದಗ್ರಾಮದ ಬಾಶೆಟ್ಟಹಳ್ಳಿ ಕೆರೆಯಲ್ಲಿ ಸುರಿಯುತ್ತಿದ್ದಾರೆ. ಹೀಗೆ ತ್ಯಾಜ್ಯ ಸುರಿಯುತ್ತಿರುವಂತ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವಂತೆ ಬಾಶೆಟ್ಟಿಹಳ್ಳಿ ಜನಧ್ವನಿ ವೇದಿಕೆ ಆಗ್ರಹಿಸಿದೆ. ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಬಾಶೆಟ್ಟಹಳ್ಳಿ ಜನಧ್ವನಿ ವೇದಿಕೆಯ ಮುಖಂಡರಾದಂತ ಸುದರ್ಶನ್, ಕೃಷ್ಣಮೂರ್ತಿ, ಸದಾನಂದ, ಜಿ.ಮುನಿರಾಜ್, ಟೈಲರ್ ಮೂರ್ತಿ, ರಾಜಶೇಖರ್, ಮಧು ಕುಮಾರ್ ಅವರು, ದಿನಂಪ್ರತಿ ಬಾಶೆಟ್ಟಹಳ್ಳಿಯ ಕೆರೆಗೆ  ರಾಶಿಗಟ್ಟಲೇ ಕಸವನ್ನು ಪಟ್ಟಣ ಪಂಚಾಯ್ತಿಯಿಂದ ಸುರಿಯಲಾಗುತ್ತಿದೆ. ಅಲ್ಲದೇ ಸಮೀಪದಲ್ಲಿ ಇರುವಂತ ಕಾರ್ಖಾನೆಗಳಿಂದ ಕೆರೆಗೆ ರಸಾಯನಿಕ ಮಿಶ್ರಿತ ನೀರು ಹರಿದು ಬಂದು ಮತ್ತಷ್ಟು ಕಲುಷಿತಗೊಳ್ಳುತ್ತಿದೆ ಎಂಬುದಾಗಿ ಆಕ್ರೋಶ ಹೊರ ಹಾಕಿದ್ದಾರೆ. ತ್ಯಾಜ್ಯ ನಿರ್ವಹಣೆ ಘಟಕವನ್ನು ನಿರ್ಮಿಸಿ, ಅಲ್ಲಿ ತ್ಯಾಜ್ಯ ಸಂಸ್ಕರಣೆಯನ್ನು ಮಾಡಬೇಕಿದ್ದಂತ ಬಾಶೆಟ್ಟಹಳ್ಳಿ ಪಟ್ಟಣ ಪಂಚಾಯ್ತಿ ಆ ಕೆಲಸವನ್ನೇ ಮಾಡುತ್ತಿಲ್ಲ. ಇದರ ಬದಲಾಗಿ ಕೆರೆಯ ಬಳಿಯಲ್ಲೇ ಪಟ್ಟಣ ಪಂಚಾಯ್ತಿಯಿಂದ ಕಸ ಸುರಿದು ರಾಶಿ ಮಾಡಲಾಗುತ್ತಿದೆ. ಈ ಕಸದಲ್ಲಿನ ಪೇಪರ್,…

Read More

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಾಗಿದ್ದಂತ ಪೋಟೋ ಜರ್ನಲಿಸ್ಟ್ ಒಬ್ಬರ ಪುತ್ರಿ ಪಿಯುಸಿಯಲ್ಲಿ ಶೇ.96ಕ್ಕಿಂತ ಹೆಚ್ಚು ಅಂಕ ಪೆಡದಿದ್ದರು. ಆ ಮೂಲಕ ಮೆಡಿಕಲ್ ಸೀಟ್ ಪಡೆದಿದ್ದರು. ಇಂತಹ ಪೋಟೋ ಜರ್ನಲಿಸ್ಟ್ ಪುತ್ರಿಯನ್ನು ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಅಭಿನಂದಿಸಿದ್ದಾರೆ. ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿರುವಂತ ಅವರು, SSLC & PUCಯಲ್ಲಿ ಶೇ.96ಕ್ಕಿಂತ ಹೆಚ್ಚು ಅಂಕ ಪಡೆದು KUWJ ಪ್ರತಿಭಾ ಪುರಸ್ಕಾರಕ್ಕೆ ಭಾಜನರಾಗಿದ್ದ ತುಮಕೂರು ಜಿಲ್ಲೆಯ ಶಿರಾದ ಫೋಟೋ ಜರ್ನಲಿಸ್ಟ್ ನಾಗರಾಜ್ ಅವರ ಪುತ್ರಿ ಕು.ನಾಗಶ್ರೀ ಅವರು ಮೆರಿಟ್ ಮೇಲೆ ಮೆಡಿಕಲ್ ಸೀಟ್ ಪಡೆದಿದ್ದು ಹೆಮ್ಮೆಯ ಸಂಗತಿ. ನಾಗಶ್ರೀ ಅವರನ್ನು ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅಭಿನಂದಿಸಿದ್ದಾಗಿ ತಿಳಿಸಿದ್ದಾರೆ. https://twitter.com/kuwj_r/status/1972682001976000755 https://kannadanewsnow.com/kannada/good-news-for-registered-construction-workers-in-the-state-applications-invited-for-medical-expense-subsidy/ https://kannadanewsnow.com/kannada/breaking-inhuman-incident-in-the-state-womans-hair-pulled-pressed-with-feet-horrific-attack/

Read More

ನವದೆಹಲಿ: 2026 ರ ಜಂಟಿ ಪ್ರವೇಶ ಪರೀಕ್ಷೆ (ಜೆಇಇ ಮುಖ್ಯ) ಬರೆಯಲು ಯೋಜಿಸುತ್ತಿರುವ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (National Testing Agency -NTA) ಒಂದು ಪ್ರಮುಖ ಸಲಹೆಯನ್ನು ನೀಡಿದೆ. ಯಾವುದೇ ವ್ಯತ್ಯಾಸಗಳು, ದೂರುಗಳು ಅಥವಾ ನಂತರದ ಹಂತದಲ್ಲಿ ನಿರಾಕರಣೆಯನ್ನು ತಪ್ಪಿಸಲು, ಜೆಇಇ ಮುಖ್ಯ 2026 ಕ್ಕೆ ಅರ್ಜಿ ಸಲ್ಲಿಸುವ ಮೊದಲು ಅಗತ್ಯವಿರುವ ಎಲ್ಲಾ ದಾಖಲೆಗಳನ್ನು ನವೀಕರಿಸಲಾಗಿದೆಯೆ ಎಂದು ಎನ್‌ಟಿಎ ಆಕಾಂಕ್ಷಿಗಳನ್ನು ಖಚಿತಪಡಿಸಿಕೊಳ್ಳುವಂತೆ ಕೇಳಿದೆ. ಕಳೆದ ಕೆಲವು ವರ್ಷಗಳಂತೆ, ಎನ್‌ಟಿಎ ಜೆಇಇ ಮುಖ್ಯ 2026 ಅನ್ನು ( JEE Main 2026 ) ಎರಡು ಅವಧಿಗಳಲ್ಲಿ ನಡೆಸಲಿದೆ: ಸೆಷನ್ 1 ಜನವರಿ 2026 ರಲ್ಲಿ ನಡೆಯಲಿದೆ ಮತ್ತು ಎರಡನೇ ಅವಧಿ ಏಪ್ರಿಲ್ 2026 ರಲ್ಲಿ ನಡೆಯಲಿದೆ. ಟೈಮ್ಸ್ ನೌ ಡಿಜಿಟಲ್ ವರದಿ ಮಾಡಿರುವಂತೆ, ಜೆಇಇ ಮುಖ್ಯ 2026 ಸೆಷನ್ 1 ರ ಆನ್‌ಲೈನ್ ಅರ್ಜಿ ನಮೂನೆಯು ಅಕ್ಟೋಬರ್ 2025 ರಲ್ಲಿ ಎನ್‌ಟಿಎ ವೆಬ್‌ಸೈಟ್‌ನಲ್ಲಿ ಲಭ್ಯವಿರುತ್ತದೆ. ಸದ್ಯಕ್ಕೆ, ಆಕಾಂಕ್ಷಿಗಳು ಜನವರಿ ಅವಧಿಗೆ ಮಾತ್ರ…

Read More

ಕಲಬುರ್ಗಿ: ರಾಜ್ಯದ ಅಭಿವೃದ್ಧಿ ಸಂಪೂರ್ಣ ಕುಂಠಿತಗೊಂಡಿದೆ. ಜನರು ಕುಪಿತರಾಗಿದ್ದಾರೆ. ಎಲ್ಲಿ ನಮ್ಮ ಮೇಲೆ ಬೀಳುತ್ತಾರೋ ಎಂಬಂತಿದೆ ಸಚಿವರ ಪರಿಸ್ಥಿತಿ. ರಾಜ್ಯ ಸರಕಾರ ತೀಕ್ಷ್ಣ- ತ್ವರಿತವಾಗಿ ಕ್ರಮ ಕೈಗೊಳ್ಳಬೇಕಿತ್ತು ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ತಿಳಿಸಿದ್ದಾರೆ. ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಕೆಲವೆಡೆ ಶೇ 100ರಷ್ಟು ಬೆಳೆ ನಾಶವಾಗಿದೆ. ನಾನು ರಾಜ್ಯಾಧ್ಯಕ್ಷ ವಿಜಯೇಂದ್ರ ಮತ್ತು ಸ್ಥಳೀಯ ನಾಯಕರು ಸಮಸ್ಯೆ ಇರುವಲ್ಲಿಗೆ ತೆರಳಿ ಸರಕಾರದ ಗಮನ ಸೆಳೆಯುತ್ತೇವೆ ಎಂದು ಹೇಳಿದರು. ರೈತರಿಗೆ ಪರಿಹಾರ ಮೊದಲು ಕೊಡಿ ಎಂದು ಆಗ್ರಹಿಸಿದರು. ಅಧಿಕಾರದಲ್ಲಿ ಇರುವವರು ಸಮಸ್ಯೆ ಪರಿಹಾರಕ್ಕೆ ಆದ್ಯತೆ ಕೊಡಬೇಕು ಎಂದು ಪ್ರಶ್ನೆಗೆ ಉತ್ತರಿಸಿದರು. ವಿಜಯೇಂದ್ರ ಅವರು ತೀರ್ಮಾನಿಸಿ ಒಂದೆರಡು ದಿನದಲ್ಲೇ ಇಲ್ಲಿಗೆ ಬಂದಿದ್ದೇವೆ. ಉಸ್ತುವಾರಿ ಸಚಿವರು ಅವರವರ ಜಿಲ್ಲೆಗೆ ಹೋಗಿ ಉಸ್ತುವಾರಿ ಕಾರ್ಯ ಮಾಡಬೇಕಿತ್ತು. ರೈತರ ಸಮಸ್ಯೆ ಪರಿಹರಿಸಬೇಕಿತ್ತು. ಪರಿಹಾರ ಕೊಡಬೇಕಿತ್ತು ಎಂದು ಅವರು ಇನ್ನೊಂದು ಪ್ರಶ್ನೆಗೆ ಉತ್ತರ ಕೊಟ್ಟರು. ಬಿಹಾರ ಚುನಾವಣೆ ನಂತರ ಮೋದಿ ಸರಕಾರಕ್ಕೆ ಅಂತ್ಯ…

Read More

ಬೆಂಗಳೂರು: ಅಕ್ಟೋಬರ್.2ರಂದು ಗಾಂಧಿ ಜಯಂತಿ ಪ್ರಯುಕ್ತ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ನಿಷೇಧ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಆದೇಶಿಸಿದೆ. ದಿನಾಂಕ: 02-10-2025 (ಗುರುವಾರ) ದಂದು “ಗಾಂಧಿ ಜಯಂತಿ” ಪ್ರಯುಕ್ತ ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವಿಶೇಷ ಆಯುಕ್ತರು(ಆರೋಗ್ಯ & ಶಿಕ್ಷಣ) ರವರು ತಿಳಿಸಿದ್ದಾರೆ. ಬೆಂಗಳೂರು ಪಶ್ಚಿಮ ನಗರ ಪಾಲಿಕೆ ಆಯುಕ್ತರಿಂದ ಜಾತಿಗಣತಿ ತರಬೇತಿ ಕಾರ್ಯಗಾರಕ್ಕೆ ಭೇಟಿ ಹಾಗೂ ಪರಿಶೀಲನೆ ಬೆಂಗಳೂರು ಪಶ್ಚಿಮ ನಗರ ಪಾಲಿಕೆ ಆಯುಕ್ತರಿಂದ ಸಾಮಾಜಿಕ ಶೈಕ್ಷಣಿಕ ಸಮೀಕ್ಷಾ ಕಾರ್ಯ 2025ರ ತರಬೇತಿ ಕಾರ್ಯಗಾರಕ್ಕೆ ಭೇಟಿ ಹಾಗೂ ಪರಿಶೀಲನೆ: ಬೆಂಗಳೂರು ಪಶ್ಚಿಮ ನಗರ ಪಾಲಿಕೆ ಆಯುಕ್ತರಾದ ಡಾ. ರಾಜೇಂದ್ರ ಕೆ. ವಿ. ರವರು ಸಾಮಾಜಿಕ, ಶೈಕ್ಷಣಿಕ ಸಮೀಕ್ಷಾ ಕಾರ್ಯ 2025ರ ತರಬೇತಿ ಕಾರ್ಯಗಾರಕ್ಕೆ ಭೇಟಿ ನೀಡಿ ಗಣತಿದಾರರಿಗೆ ಹಾಗೂ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದರು. ಆಯುಕ್ತರು ಗೋವಿಂದರಾಜ ನಗರ ವಿಧಾನಸಭಾ ಕ್ಷೇತ್ರದಲ್ಲಿ…

Read More

ಶಿವಮೊಗ್ಗ: ಗ್ಯಾರಂಟಿ ಯೋಜನೆಗಳು ಜನ ಸಾಮಾನ್ಯರ ಜೀವನದಲ್ಲಿ ಆರ್ಥಿಕ ಸ್ವಾವಲಂಭನೆಯ ಜೊತೆಗೆ ಅವರ ಜೀವನ ಗುಣಮಟ್ಟವನ್ನು ಸುಧಾರಿಸುತ್ತಿದೆ ಎಂದು ಗ್ಯಾರಂಟಿ ಯೋಜನೆಯ ತಾಲ್ಲೂಕು ಘಟಕದ ಅಧ್ಯಕ್ಷ ಮಧು ಎಚ್.ಎಂ. ತಿಳಿಸಿದರು. ಶಿವಮೊಗ್ಗ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ರಾಜ್ಯ ಸರ್ಕಾರ ಜಾರಿಗೆ ತಂದಿರುವ ಮಹತ್ವಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳು ಜಿಲ್ಲೆಯಲ್ಲಿ ಯಶಸ್ವಿಯಾಗಿ ಜಾರಿಯಾಗಿದ್ದು, ಇದರಲ್ಲಿ ಅನ್ನಭಾಗ್ಯ ಯೋಜನೆಯು ಹಸಿವು ಮುಕ್ತ ಜಿಲ್ಲೆಯನ್ನಾಗಿಸಲು ಸಹಕಾರಿಯಾಗಿದೆ ಎಂದರು. ಬಡವರ ಆಶಾಕಿರಣವಾಗಿರುವ ಅನ್ನಭಾಗ್ಯ ಯೋಜನೆಯು ಹಸಿವು ಮುಕ್ತ ಭಾರತ ಮತ್ತು “ಸುಸ್ಥಿರ ಅಭಿವೃದ್ಧಿ ಗುರಿ 2030” ತಲುಪಲು ಸಹಕಾರಿಯಾಗಿದೆ ಎಂದರು. 1.20 ಲಕ್ಷ ವಾರ್ಷಿಕ ಆದಾಯ ಹೊಂದಿರುವ ಅಥವಾ ಐ.ಟಿ. ಪಾವತಿ ಮಾಡುತ್ತಿರುವ ಕುಟುಂಬಗಳ ಬಿ.ಪಿ.ಎಲ್. ಕಾರ್ಡುಗಳನ್ನು ಅನರ್ಹ ಮಾಡಲಾಗುತ್ತಿದೆ ಎಂದು ತಿಳಿಸಿದರು. ಮಹಿಳೆಯರ ಸಬಲೀಕರಣ ಮಾಡಲು ಸಹಕಾರಿಯಾಗಿರುವ ಗೃಹಲಕ್ಷ್ಮೀ ಯೋಜನೆಯ ಹಣವು ಜೂನ್-25 ಮಾಹೆಯವರೆಗೆ ಬಿಡುಗಡೆಯಾಗಿದೆ, 2044 ಐಟಿ,…

Read More

ಶಿವಮೊಗ್ಗ : ಲೀಡ್ ಬ್ಯಾಂಕ್‌ಗಳು ಗ್ರಾಮೀಣ ಮತ್ತು ಹೋಬಳಿ ಮಟ್ಟದಲ್ಲಿ ತಮ್ಮ ಹೊಸ ಶಾಖೆಗಳನ್ನು ತೆರೆಯುವ ಮೂಲಕ ಈ ಭಾಗದ ಜನರಿಗೆ ಸರ್ಕಾರದ ಯೋಜನೆಗಳನ್ನು ಪಡೆಯಲು ಅನುಕೂಲ ಮಾಡಿಕೊಡಬೇಕು ಎಂದು ಜಿ.ಪಂ ಸಿಇಓ ಹೇಮಂತ್.ಎನ್ ಸಲಹೆ ನೀಡಿದರು. ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್ ಶಿವಮೊಗ್ಗ ಇವರ ವತಿಯಿಂದ ಸೋಮವಾರ ಜಿಲ್ಲಾ ಪಂಚಾಯತ್ ನಜೀರ್‌ಸಾಬ್ ಸಭಾಂಗಣದಲ್ಲಿ ಆಯೋಜಿಸಿದ್ದ ಡಿಸಿಸಿ-ಡಿಎಲ್‌ಆರ್‌ಸಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಗ್ರಾಮೀಣ ಹಾಗೂ ಹೋಬಳಿ ಮಟ್ಟದಲ್ಲಿ ಸರ್ಕಾರದ ಯೋಜನೆಗಳ ಫಲಾನುಭವಿಗಳ ಸಂಖ್ಯೆ ಹೆಚ್ಚಾಗಿದ್ದು, ಲೀಡ್ ಬ್ಯಾಂಕ್‌ಗಳು ಆ ಭಾಗದಲ್ಲಿ ತಮ್ಮ ಬ್ರಾಂಚ್‌ಗಳನ್ನು ಸ್ಥಾಪಿಸಿಕೊಳ್ಳಬೇಕು. ಭದ್ರಾವತಿಯ ಗ್ರಾಮೀಣ ಹಾಗೂ ಹೋಬಳಿಗಳಲ್ಲಿ ಈಗಾಗಲೇ ಐಡಿಬಿಐ ಬ್ಯಾಂಕ್ ತನ್ನ ಬ್ರಾಂಚ್ ತೆರೆದಿದೆ. ಸೊರಬ, ಮುಡುಬ, ದೊಡಮಘಟ್ಟ ಭಾಗಗಳಲ್ಲಿ ಬ್ಯಾಂಕ್‌ಗಳ ಅವಶ್ಯಕತೆ ಇದೆ. ಹಾಗೂ ಇಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸರ್ಕಾರದ ಯೋಜನೆಗಳ ಫಲಾನುಭವಿಗಳೂ ಕೂಡ ಇದ್ದಾರೆ. ಹಾಗಾಗಿ ಈ ಭಾಗಗಳಲ್ಲಿ ಶಾಖೆಯನ್ನು ತೆರೆದರೆ ರೈತರಿಗೆ, ಸ್ವ ಉದ್ಯೋಗಿಗಳಿಗೆ ಅನುಕೂಲವಾಗುತ್ತದೆ ಎಂದು ಸಲಹೆ ನೀಡಿದರು. ರ್ಕಾರದಿಂದ…

Read More

ಬೆಂಗಳೂರು: ರಾಜ್ಯಾಧ್ಯಂತ ಶೇ.70ರಿಂದ 95ರಷ್ಟು ಮಹಿಳೆಯರ ಜೀವನ ಮಟ್ಟವು ಗ್ಯಾರಂಟಿಗಳಿಂದ ಸುಧಾರಣೆಯಾಗಿರುವುದಾಗಿ ಲೋಕನೀತಿ – ಸಿಎಸ್‌ಡಿಎಸ್‌, ಬೆಂಗಳೂರು ವಿಶ್ವವಿದ್ಯಾಲಯ ಹಾಗೂ ಇಂಡೆಸ್‌ ಆಕ್ಷನ್‌ ಸಂಸ್ಥೆಗಳು ಜಂಟಿಯಾಗಿ ನಡೆಸಿದ ಅಧ್ಯಯನದಿಂದ ಬಹಿರಂಗವಾಗಿದೆ. ಈ ಕುರಿತಂತೆ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ರಾಜ್ಯ ಸರ್ಕಾರ ಜಾರಿಗೆ ತಂದ ಗ್ಯಾರಂಟಿ ಯೋಜನೆಗಳು ಗ್ರಾಮೀಣ ಮಟ್ಟದಲ್ಲಿ ಮಹಿಳಾ ಸಬಲೀಕರಣಕ್ಕೆ ಹೊಸ ಆಯಾಮ ನೀಡಿದ್ದು, ರಾಜ್ಯಾದ್ಯಂತ ಶೇ.70 ರಿಂದ 95 ರಷ್ಟು ಮಹಿಳೆಯರ ಜೀವನ ಮಟ್ಟ ಸುಧಾರಣೆಯಾಗಿದೆ ಎಂದಿದೆ. ಶಕ್ತಿ, ಗೃಹಜ್ಯೋತಿ ಉಳಿತಾಯದ ಹಣ ಮತ್ತು ಗೃಹಲಕ್ಷ್ಮಿ ಹಣವನ್ನು ಪ್ರಮುಖವಾಗಿ ಆಹಾರ ಪದಾರ್ಥಗಳ ಖರೀದಿಗೆ ಬಳಸುತ್ತಿದ್ದಾರೆ. ಇದರ ಪರಿಣಾಮವಾಗಿ ಶೇ.88 ರಷ್ಟು ಕುಟುಂಬಗಳು ಉತ್ತಮ ಮತ್ತು ಪೌಷ್ಟಿಕಾಂಶಯುಕ್ತ ಆಹಾರವನ್ನು ಸೇವಿಸುತ್ತಿದ್ದಾರೆ. ಶೇ.83 ರಷ್ಟು ಮಹಿಳೆಯರು ವೈದ್ಯಕೀಯ ಚಿಕಿತ್ಸೆ, ಆಸ್ಪತ್ರೆ ವೆಚ್ಚ, ಪರೀಕ್ಷೆಗಳು ಮತ್ತು ಔಷಧಿಗಳ ಬಗ್ಗೆ ಹೆಚ್ಚು ಚಿಂತಿಸದೆ ತಮ್ಮ ಆರೋಗ್ಯದ ಮೇಲೆ ಕಾಳಜಿ ವಹಿಸಲು ಗ್ಯಾರಂಟಿಗಳು ಸಹಕಾರಿಯಾಗಿವೆ. ಈ ಅಂಶಗಳು ಲೋಕನೀತಿ – ಸಿಎಸ್‌ಡಿಎಸ್‌, ಬೆಂಗಳೂರು ವಿಶ್ವವಿದ್ಯಾಲಯ ಹಾಗೂ ಇಂಡೆಸ್‌…

Read More