Author: kannadanewsnow09

ಬೆಂಗಳೂರು: ಸಿಎ ಫೌಂಡೇಶನ್ ಪರೀಕ್ಷಾ ಪೂರ್ವ ಆನ್ ಲೈನ್ ತರಬೇತಿಗೆ ಸಮಾಜ ಕಲ್ಯಾಣ ಇಲಾಖಎಯಿಂದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಕುರಿತಂತೆ ಸಮಾಜ ಕಲ್ಯಾಣ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಇಂದಿರಾ ಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರವು ಕರ್ನಾಟಕದ ಪರಿಶಿಷ್ಟ ಜಾತಿಯ ಪ್ರಥಮ ಪಿಯುಸಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ CA ಫೌಂಡೇಶನ್ ಪರೀಕ್ಷಾ ಪೂರ್ವ ಆನ್‌ಲೈನ್ ತರಬೇತಿಗೆ ಅರ್ಜಿ ಆಹ್ವಾನಿಸಿದೆ, ಅರ್ಜಿ ಸಲ್ಲಿಸಿ ನಿಮ್ಮ ಕನಸನ್ನು ನನಸಾಗಿಸಿಕೊಳ್ಳಿ ಎಂದಿದೆ. ಈ ಕೆಳಗೆ ನೀಡಿರುವ ವೆಬ್‌ಸೈಟ್ ಮುಖಾಂತರ ಅರ್ಜಿ ಸಲ್ಲಿಸಬಹುದು: https://igccd.karnataka.gov.in ​ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಸೆಪ್ಟೆಂಬರ್ 20, 2025 ಆಗಿದೆ. https://twitter.com/SWDGoK/status/1961760678651523139 https://kannadanewsnow.com/kannada/medical-and-dental-counseling-after-the-mc-result-kea/ https://kannadanewsnow.com/kannada/courts-cant-stand-in-way-of-new-online-gaming-act-centre-tells-karnataka-hc/

Read More

ಬೆಂಗಳೂರು: ಎಂಜಿನಿಯರಿಂಗ್‌ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಎರಡನೇ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಶನಿವಾರ ಪ್ರಕಟಿಸಿದ್ದು, ಸೀಟು ಹಂಚಿಕೆಯಾದವರು ಸೆ.3ರೊಳಗೆ ಕಾಲೇಜಿಗೆ ವರದಿ ಮಾಡಿಕೊಳ್ಳಲು ಸೂಚನೆ ನೀಡಿದೆ. ವೈದ್ಯಕೀಯ, ದಂತ ವೈದ್ಯಕೀಯ ಕೋರ್ಸ್‌ ಗಳ ಎರಡನೇ ಸುತ್ತಿನ ಅಂತಿಮ ಫಲಿತಾಂಶವನ್ನು ಎಂಸಿಸಿ ಫಲಿತಾಂಶ ಹೊರಬಿದ್ದ ನಂತರ ಪ್ರಕಟಿಸಲಾಗುವುದು. ಅಲ್ಲಿಯವರೆಗೂ ಈ ಕೋರ್ಸ್‌ಗಳಿಗೆ ಸೀಟು ಹಂಚಿಕೆಯಾದವರಿಗೆ ಯಾವುದೇ ಛಾಯ್ಸ್‌ ಆಯ್ಕೆಗೆ ಅವಕಾಶ ಇರುವುದಿಲ್ಲ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್‌.ಪ್ರಸನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ವೈದ್ಯಕೀಯ ಕೋರ್ಸ್‌ಗಳಿಗೆ ಸಂಬಂಧಿಸಿದಂತೆ ಅಖಿಲ ಭಾರತ ಮಟ್ಟದ ಎರಡನೇ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ವಿಳಂಬವಾಗುತ್ತಿರುವ ಕಾರಣ ಯುಜಿಸಿಇಟಿ ಅಭ್ಯರ್ಥಿಗಳ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ. ಹಾಗೂ ಅವರಿಗೆ ಅನುಕೂಲ ಆಗಲಿ ಎನ್ನುವ ಕಾರಣಕ್ಕೆ ನಾಲ್ಕು ಛಾಯ್ಸ್‌ ಗಳ ಆಯ್ಕೆಗೂ ಅವಕಾಶ ನೀಡಲಾಗಿದೆ ಎಂದು ಅವರು ವಿವರಿಸಿದ್ದಾರೆ. ವೈದ್ಯಕೀಯ, ದಂತ ವೈದ್ಯಕೀಯ ಕೋರ್ಸ್‌ಗಳನ್ನು ಹೊರತುಪಡಿಸಿ, ಇತರ ಎಲ್ಲ ಕೋರ್ಸ್‌ಗಳ ಪ್ರವೇಶ…

Read More

ತುಮಕೂರು: ಗುಬ್ಬಿ ರೈಲು ನಿಲ್ದಾಣದಲ್ಲಿ ಲಘು ರಸ್ತೆ ಮೇಲ್ಸೇತುವೆ ನಿರ್ಮಾಣ ಕಾಮಗಾರಿಗೆ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಶಂಕುಸ್ಥಾಪನೆ ನೆರವೇರಿಸಿದರು. ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವರಾದ ವಿ.ಸೋಮಣ್ಣ ಅವರು ಇಂದು ತುಮಕೂರು ಜಿಲ್ಲೆಯ ಗುಬ್ಬಿ ರೈಲು ನಿಲ್ದಾಣದಲ್ಲಿ ಲೈಟ್ ರೋಡ್ ಓವರ್ ಬ್ರಿಡ್ಜ್ (ಆರ್‌ಒಬಿ) ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. ಈ ಯೋಜನೆಯನ್ನು ₹20 ಕೋಟಿ ಅಂದಾಜು ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗಿದೆ. ಸಭೆಯನ್ನುದ್ದೇಶಿಸಿ ಮಾತನಾಡಿದ ವಿ.ಸೋಮಣ್ಣ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು “ಒಂದೇ ನಾಣ್ಯದ ಎರಡು ಮುಖಗಳಂತೆ” ಅಭಿವೃದ್ಧಿಗಾಗಿ ಒಟ್ಟಾಗಿ ಕೆಲಸ ಮಾಡಬೇಕು ಎಂದು ಹೇಳಿದರು. ಪ್ರಸಕ್ತ ವರ್ಷದಲ್ಲಿ ಭಾರತ ಸರ್ಕಾರವು ಭಾರತೀಯ ರೈಲ್ವೆಗೆ ₹2.65 ಲಕ್ಷ ಕೋಟಿ ಮೀಸಲಿಟ್ಟಿದೆ, ಅದರಲ್ಲಿ ₹49,000 ಕೋಟಿಯನ್ನು ಕರ್ನಾಟಕ ರಾಜ್ಯದ ಯೋಜನೆಗಳಿಗೆ ನೀಡಲಾಗಿದೆ ಎಂದರು. ಗುಬ್ಬಿ ರೈಲು ನಿಲ್ದಾಣವನ್ನು ಅಮೃತ ಭಾರತ ನಿಲ್ದಾಣ ಅಭಿವೃದ್ಧಿ ಯೋಜನೆಯಡಿಯಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ. ಇದು ಪ್ರಯಾಣಿಕರ ಸೌಲಭ್ಯಗಳು ಮತ್ತು ಮೂಲಸೌಕರ್ಯಗಳನ್ನು ಹೆಚ್ಚಿಸುತ್ತದೆ ಎಂದು ಅವರು ಹೇಳಿದರು. ಈ…

Read More

ಬೆಂಗಳೂರು: ಕರ್ನಾಟಕದ ಹಂಗಾಮಿ ಡಿಜಿ ಮತ್ತು ಐಜಿಪಿಯಾಗಿ ಡಾ.ಎಂ.ಎ ಸಲೀಂ ಅವರನ್ನು ಸರ್ಕಾರ ನೇಮಕ ಮಾಡಿತ್ತು. ಇದೀಗ ಅವರನ್ನು ನೂತನ ಡಿಜಿ ಮತ್ತು ಐಜಿಪಿಯಾಗಿ ಖಾಯಂಗೊಳಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ಅಧಿಸೂಚನೆ ಹೊರಡಿಸಲಾಗಿದ್ದು, ಡಾ. ಎಂ. ಎ. ಸಲೀಂ, ಐಪಿಎಸ್ (ಕೆಎನ್: 1993), ಪೊಲೀಸ್ ಮಹಾನಿರ್ದೇಶಕರು, ಅಪರಾಧ ತನಿಖಾ ಇಲಾಖೆ, ವಿಶೇಷ ಘಟಕಗಳು ಮತ್ತು ಆರ್ಥಿಕ ಅಪರಾಧಗಳು, ಬೆಂಗಳೂರು, ಕರ್ನಾಟಕ, ಬೆಂಗಳೂರು ಇವರನ್ನು ಕರ್ನಾಟಕ ಮಹಾನಿರ್ದೇಶಕರು ಮತ್ತು ಪೊಲೀಸ್ ಮಹಾನಿರ್ದೇಶಕರು (ಪೊಲೀಸ್ ಪಡೆಯ ಮುಖ್ಯಸ್ಥರು) ಹುದ್ದೆಗೆ ನೇಮಕ ಮಾಡಲಾಗಿದೆ. ಐಪಿಎಸ್ (ವೇತನ) ನಿಯಮಗಳು, 2016 ರ ವೇತನ ಮ್ಯಾಟ್ರಿಕ್ಸ್‌ನಲ್ಲಿ ಅಪೆಕ್ಸ್ ಸ್ಕೇಲ್, ಲೆವೆಲ್-17 ಅಂದರೆ ರೂ.2,25,000/- (ನಿಗದಿತ) ಹುದ್ದೆಗೆ ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಅಸ್ತಿತ್ವದಲ್ಲಿರುವ ಖಾಲಿ ಹುದ್ದೆಯಲ್ಲಿ ಮುಂದಿನ ಆದೇಶದವರೆಗೆ ನೇಮಕ ಮಾಡಲಾಗಿದೆ ಎಂದಿದೆ. https://kannadanewsnow.com/kannada/bmtc-bus-services-starting-from-today-to-nelamangala-bus-station-minister-ramalinga-reddy/ https://kannadanewsnow.com/kannada/courts-cant-stand-in-way-of-new-online-gaming-act-centre-tells-karnataka-hc/

Read More

ಬೆಂಗಳೂರು: ಕರ್ನಾಟಕದ ಹಂಗಾಮಿ ಡಿಜಿ ಮತ್ತು ಐಜಿಪಿಯಾಗಿ ಡಾ.ಎಂ.ಎ ಸಲೀಂ ಅವರನ್ನು ಸರ್ಕಾರ ನೇಮಕ ಮಾಡಿತ್ತು. ಇದೀಗ ಅವರನ್ನು ನೂತನ ಡಿಜಿ ಮತ್ತು ಐಜಿಪಿಯಾಗಿ ಖಾಯಂಗೊಳಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ಅಧಿಸೂಚನೆ ಹೊರಡಿಸಲಾಗಿದ್ದು, ಡಾ. ಎಂ. ಎ. ಸಲೀಂ, ಐಪಿಎಸ್ (ಕೆಎನ್: 1993), ಪೊಲೀಸ್ ಮಹಾನಿರ್ದೇಶಕರು, ಅಪರಾಧ ತನಿಖಾ ಇಲಾಖೆ, ವಿಶೇಷ ಘಟಕಗಳು ಮತ್ತು ಆರ್ಥಿಕ ಅಪರಾಧಗಳು, ಬೆಂಗಳೂರು, ಕರ್ನಾಟಕ, ಬೆಂಗಳೂರು ಇವರನ್ನು ಕರ್ನಾಟಕ ಮಹಾನಿರ್ದೇಶಕರು ಮತ್ತು ಪೊಲೀಸ್ ಮಹಾನಿರ್ದೇಶಕರು (ಪೊಲೀಸ್ ಪಡೆಯ ಮುಖ್ಯಸ್ಥರು) ಹುದ್ದೆಗೆ ನೇಮಕ ಮಾಡಲಾಗಿದೆ. ಐಪಿಎಸ್ (ವೇತನ) ನಿಯಮಗಳು, 2016 ರ ವೇತನ ಮ್ಯಾಟ್ರಿಕ್ಸ್‌ನಲ್ಲಿ ಅಪೆಕ್ಸ್ ಸ್ಕೇಲ್, ಲೆವೆಲ್-17 ಅಂದರೆ ರೂ.2,25,000/- (ನಿಗದಿತ) ಹುದ್ದೆಗೆ ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಅಸ್ತಿತ್ವದಲ್ಲಿರುವ ಖಾಲಿ ಹುದ್ದೆಯಲ್ಲಿ ಮುಂದಿನ ಆದೇಶದವರೆಗೆ ನೇಮಕ ಮಾಡಲಾಗಿದೆ ಎಂದಿದೆ. https://kannadanewsnow.com/kannada/bmtc-bus-services-starting-from-today-to-nelamangala-bus-station-minister-ramalinga-reddy/ https://kannadanewsnow.com/kannada/courts-cant-stand-in-way-of-new-online-gaming-act-centre-tells-karnataka-hc/

Read More

ಬೆಂಗಳೂರು ಗ್ರಾಮಾಂತರ: ನೆಲಮಂಗಲ‌ದ‌ ಬಸ್ ನಿಲ್ದಾಣಕ್ಕೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಭೇಟಿ ನೀಡಿದರು. ಬಿಎಂಟಿಸಿ ಬಸ್ ನಿಲ್ದಾಣ ಬಳಕೆಗೆ ಸಿದ್ಧಗೊಂಡಿರುವ ಕಾರಣ, ಎರಡು ವರುಷಗಳ ನಂತರ ಇಂದಿನಿಂದ‌ ಬಿ.ಎಂ.ಟಿ.ಸಿ ಬಸ್ಸುಗಳ ಕಾರ್ಯಚರಣೆ‌ ಆರಂಭಕ್ಕೆ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಸಾರಿಗೆ ಹಾಗೂ ಮುಜರಾಯಿ ಖಾತೆ ಸಚಿವ ರಾಮಲಿಂಗಾರೆಡ್ಡಿ ಅವರು ನೆಲಮಂಗಲ ಬಸ್ ನಿಲ್ದಾಣದ‌ ಕಾಮಗಾರಿಯ ಪರಿವೀಕ್ಷಣೆ‌ ನಡೆಸಿದರು.‌ 2023 ರಲ್ಲಿ ಪ್ರಾರಂಭವಾದ ಬಸ್ ನಿಲ್ದಾಣದ ಕಾಮಗಾರಿಯು ಕಾರಣಾಂತರಗಳಿಂದ ಆಮೆಗತಿಯಲ್ಲಿ ಸಾಗುತ್ತಿದ್ದು, ಇದರಿಂದ ಸಾರ್ವಜನಿಕ ಪ್ರಯಾಣಿಕರಿಗೆ ಸಮರ್ಪಕ ಸಾರಿಗೆ ಸೌಲಭ್ಯದಿಂದ ವಂಚಿತರಾಗಿದ್ದರು. ಈ‌ ವಿಷಯವು ಸಾರಿಗೆ ಸಚಿವರ ಗಮನಕ್ಕೆ ಬಂದ ಕೂಡಲೇ ನೆಲಮಂಗಲ ಶಾಸಕ ಶ್ರೀನಿವಾಸ್, ವ್ಯವಸ್ಥಾಪಕ ನಿರ್ದೇಶಕರು ಕೆ‌ಎಸ್ ಆರ್ ಟಿ ಸಿ, ವ್ಯವಸ್ಥಾಪಕ ನಿರ್ದೇಶಕರು ಬಿಎಂಟಿಸಿ ಹಾಗೂ ನೆಲಮಂಗಲ ನಗರಸಭಾ ಅಧ್ಯಕ್ಷರೊಂದಿಗೆ ನೆಲಮಂಗಲ ಪಟ್ಟಣದಲ್ಲಿ ನಿರ್ಮಾಣ ಹಂತದಲ್ಲಿರುವ ಬಸ್ ನಿಲ್ದಾಣದ ಪರಿಶೀಲನೆ ನಡೆಸಿದರು. ಬಿಎಂಟಿಸಿ ವಾಹನಗಳ ಕಾರ್ಯಾಚರಣೆಗೆ ನಿಗದಿಪಡಿಸಿರುವ ನಾಲ್ಕು ಬಸ್ ಬೇಗಳಲ್ಲಿ ಎರಡು ಬಸ್ ಬೇ ಗಳ…

Read More

ಬೆಂಗಳೂರು: ಧರ್ಮಸ್ಥಳದಲ್ಲಿ ಶವ ಹೂತಿದ್ದಾಗಿ ಹೇಳಿದ್ದ ಚಿನ್ನಯ್ಯ ಬಂಧನದ ವಿಚಾರವಾಗಿ ಎಸ್ಐಟಿ ತನಿಖೆ ಚುರುಕುಗೊಳಿಸಿದೆ. ದೂರುದಾರ ಜಯಂತ್ ಮನೆ ಮೇಲೆ ದಾಳಿ ನಡೆಸಿದರುವಂತ ವೇಳೆಯಲ್ಲಿ ಬೆಂಗಳೂರಿನ ನನ್ನ ಮನೆಯಲ್ಲಿ ಮೂರು ದಿನ ಚಿನ್ನಯ್ಯ ಇದ್ದಿದ್ದು ನಿಜ ಎಂಬುದಾಗಿ ಹೇಳಿದ್ದಾರೆ. ಈ ಕುರಿತಂತೆ ಪ್ರತಿಕ್ರಿಯಿಸಿರುವಂತ ದೂರುದಾರ ಜಯಂತ್ ಬೆಂಗಳೂರಿನ ನನ್ನ ಮನೆಯಲ್ಲಿ ಮೂರು ದಿನ ಚಿನ್ನಯ್ಯ ಇದ್ದಿದ್ದು ನಿಜ. ಪ್ರಕರಣ ಇಲ್ಲಿಯವರೆಗೆ ಬರುತ್ತೆ ಎಂದು ನನಗೆ ಗೊತ್ತಿರಲಿಲ್ಲ. ದೆಹಲಿಗೆ ಬುರುಡೆ ತೆಗೆದುಕೊಂಡು ಹೋಗಿದ್ದು ನಿಜ. ನಾವು ನಾಲ್ಕು ಜನರು ಕಾರಿನಲ್ಲಿ ದೆಹಲಿಗೆ ಹೋಗಿದ್ದೆವು. ನಾನು, ಚಿನ್ನಯ್ಯ, ಸುಜಾತಾ, ಮಟ್ಟಣ್ಣನವರ್ ದೆಹಲಿಗೆ ಹೋಗಿದ್ದೆವು ಎಂಬುದಾಗಿ ತಿಳಿಸಿದ್ದಾರೆ. ಬೆಂಗಳೂರಿನಿಂದ ದೆಹಲಿಗೆ ಬುರುಡೆ ತೆಗೆದುಕೊಂಡು ಹೋಗಿದ್ದೆವು. ದೆಹಲಿಯಿಂದ ಮಂಗಳೂರಿಗೆ ಬುರುಡೆ ತಂದಿದ್ದೇವೆ. ಒಂದು ವರ್ಷದ ಹಿಂದೆ ಓರ್ವ ಸ್ವಾಮೀಜಿಯನ್ನು ಭೇಟಿ ಆಗಿದ್ದಾರೆ. ಚಿನ್ನಯ್ಯ ಜೊತೆಗೆ ಇದ್ದವರೆಲ್ಲ ಸ್ವಾಮೀಜಿ ಭೇಟಿಯಾಗಿದ್ದಾರೆ. ಯಾವ ಮಠ, ಯಾವ ಸ್ವಾಮೀಜಿ ಎಂದು ಚಿನ್ನಯ್ಯ ಜೊತೆಗಿದ್ದವರೇ ಹೇಳಲಿ ಎಂದರು. ಈ ಪ್ರಕರಣದಲ್ಲಿ ನಾನು ಯಾವುದೇ…

Read More

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರ ಅಮಾನತ್ತಿಗೆ ಸಂಬಂಧಿಸಿದಂತೆ ಕೋರ್ಟ್ ತಡೆಯಾಜ್ಞೆ ನೀಡಿದ ಬಗ್ಗೆ ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ. ಸರ್ಕಾರಿ ನೌಕರನನ್ನು ಅಮಾನತ್ತಿನಲ್ಲಿಟ್ಟು ಸಕ್ಷಮ ಪ್ರಾಧಿಕಾರವು ಹೊರಡಿಸಿದ ಆದೇಶಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು ಮಧ್ಯಂತರ ತಡೆಯಾಜ್ಞೆ ನೀಡಿದ ಸಂದರ್ಭದಲ್ಲಿ ಅವನಿಗೆ ಸ್ಥಳನಿಯುಕ್ತಿ ಬಗ್ಗೆ ಆದೇಶ ಹೊರಡಿಸಲಾಗಿದೆ. 1. ಸರ್ಕಾರಿ ನೌಕರನನ್ನು ಅಮಾನತ್ತಿನಲ್ಲಿರಿಸಿ ಸಕ್ಷಮ ಪ್ರಾಧಿಕಾರವು ಹೊರಡಿಸಿದ ಆದೇಶಕ್ಕೆ ಸಂಬಂಧಿಸಿದಂತೆ ಮಾನ್ಯ ನ್ಯಾಯಾಲಯವು ಮಧ್ಯಂತರ ತಡೆಯಾಜ್ಞೆ ನೀಡಿದ ಸಂದರ್ಭದಲ್ಲಿ ಸಕ್ಷಮ ಪ್ರಾಧಿಕಾರದಿಂದ ಸ್ಥಳನಿಯುಕ್ತಿ ಆದೇಶ (Order of Posting) ಪಡೆಯದೆ, ಅಮಾನತ್ತಿನಲ್ಲಿರಿಸುವ ಪೂರ್ವದಲ್ಲಿ ಅವನು ಹೊಂದಿದ್ದ ಹುದ್ದೆಯ ಪ್ರಭಾರವನ್ನು ತಾನಾಗಿಯೇ ವಹಿಸಿಕೊಂಡಿರುವ/ವಹಿಸಿಕೊಳ್ಳುತ್ತಿರುವ ಪ್ರಕರಣಗಳು ಸರ್ಕಾರದ ಗಮನಕ್ಕೆ ಬಂದಿರುತ್ತವೆ. ಈ ಹಿನ್ನೆಲೆಯಲ್ಲಿ, ಸೃಷ್ಟಿಕರಣ ನೀಡುವುದು ಅಗತ್ಯವೆಂದು ಭಾವಿಸಿದೆ. 2. ಸರ್ಕಾರಿ ನೌಕರನನ್ನು ಅಮಾನತ್ತಿನಲ್ಲಿರಿಸಿ ಹೊರಡಿಸಲಾದ ಆದೇಶವನ್ನು ಮಾನ್ಯ ನ್ಯಾಯಾಲವು ರದ್ದುಪಡಿಸಿದ ಸಂದರ್ಭದಲ್ಲಿ ಅವನಿಗೆ ಸ್ಥಳನಿಯುಕ್ತಿ ಆದೇಶ (Order of Posting) ನೀಡುವುದಕ್ಕೆ ಸಂಬಂಧಿಸಿದಂತೆ, ಉಲ್ಲೇಖಿತ ದಿನಾಂಕ:11.10.1989 ರ ಅಧಿಕೃತ ಜ್ಞಾಪನದಲ್ಲಿ ವಿವರವಾದ ಸೂಚನೆಗಳನ್ನು…

Read More

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ದಿನಾಂಕ: 29-08-2025 ರಂದು ಸಂಚಾರಿ/ಮೊಬೈಲ್ ಟ್ಯಾಂಕರ್ ಹಾಗೂ ಕೆರೆ ಅಂಗಳದ ಶಾಶ್ವಾತ/ತಾತ್ಕಾಲಿಕ ಕಲ್ಯಾಣಿಗಳಲ್ಲಿ ಒಟ್ಟು 1.14 ಲಕ್ಷ ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಲಾಗಿರುತ್ತದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ವಲಯವಾರು ಗಣೇಶ ಮೂರ್ತಿಗಳ ವಿಸರ್ಜನೆ ಮಾಡಿರುವ ವಿವರ: ಪೂರ್ವ ವಲಯ: 36,725 ಪಶ್ಚಿಮ ವಲಯ: 12,874 ದಕ್ಷಿಣ ವಲಯ: 52,181 ಬೊಮ್ಮನಹಳ್ಳಿ ವಲಯ: 1,330 ದಾಸರಹಳ್ಳಿ ವಲಯ: 503 ಮಹದೇವಪುರ ವಲಯ: 3,299 ಆರ್.ಆರ್.ನಗರ ವಲಯ: 4,105 ಯಲಹಂಕ ವಲಯ: 3,385 ಒಟ್ಟು: 1,14,402 https://kannadanewsnow.com/kannada/due-to-the-violation-of-the-conditions-of-abhiman-studio-the-land-has-been-re-acquired-minister-eshwar-khandre/ https://kannadanewsnow.com/kannada/courts-cant-stand-in-way-of-new-online-gaming-act-centre-tells-karnataka-hc/

Read More

ಬೆಂಗಳೂರು: ಅಭಿಮಾನ್ ಸ್ಟುಡಿಯೋ ಷರತ್ತು ಉಲ್ಲಂಘನೆ ಮಾಡಲಾಗಿದೆ. ಈ ಹಿನ್ನಲೆಯಲ್ಲಿ ಭೂಮಿ ಮರು ವಶಕ್ಕೆ ಸೂಚನೆ ನೀಡಲಾಗಿದೆ ಎಂಬುದಾಗಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಅಭಿಮಾನ್ ಸ್ಟುಡಿಯೋಗೆ ಕೆಂಗೇರಿ ಹೋಬಳಿ ಸರ್ವೆ ನಂ.26ರಲ್ಲಿ 20 ಎಕರೆ ಜಮೀನು ಮಾರಾಟವಾಗಿದೆ. 1970ರಲ್ಲಿ 6 ಸಾವಿರಕ್ಕೆ 20 ಎಕರೆ ಜಮೀನು ಮಾರಾಟ ಆಗಿದೆ. ಕೆಲವು ಷರತ್ತುಗಳನ್ನ ಹಾಕಿ ಜಮೀನು ನೀಡಲಾಗಿದೆ ಎಂದರು. ಅಭಿಮಾನ್ ಸ್ಟುಡಿಯೋ ಕೆಲಸಕ್ಕಾಗಿ ಬಳಕೆ ಮಾಡಬೇಕೆಂಬ ಷರತ್ತು ವಿಧಿಸಲಾಗಿತ್ತು. ಆರ್ಥಿಕ ಸಮಸ್ಯೆ ಕಾರಣ ನೀಡಿ ಮಾರಾಟಕ್ಕೆ ಅವಕಾಶ ಕೇಳಿದ್ದರು. 10 ಎಕರೆ ಜಮೀನು ಮಾರಾಟಕ್ಕೆ ಅವಕಾಶ ಕೇಳಿದ್ದರು. ಆದರೇ ಎಲ್ಲಾ ಷರತ್ತುಗಳನ್ನು ಉಲ್ಲಂಘನೆ ಮಾಡಿದ್ದಾರೆ. 14.37 ಕೋಟಿಗೆ 1 ಎಕರೆ ಜಮೀನು ಮಾರಾಟಕ್ಕೆ ಮುಂದಾಗಿದ್ದಾರೆ. ಷರತ್ತು ಉಲ್ಲಂಘನೆ ಆಗಿದ್ದರಿಂದ ಭೂಮಿ ಮರು ವಶಕ್ಕೆ ಸೂಚನೆ ನೀಡಲಾಗಿದೆ ಎಂದರು. ಕೋರ್ಟ್ ನಲ್ಲಿ ಕೂಡ ಅಭಿಮಾನ್ ಸ್ಟುಡಿಯೋ ಜಾಗದ ವಿಚಾರವಿದೆ. ವಿಷ್ಣು ಸೇನಾ ಸಮಿತಿ ಅಧ್ಯಕ್ಷರು ಸ್ಮಾರಕ…

Read More