Author: kannadanewsnow09

ಬೆಂಗಳೂರು: ಸರಕಾರದ ಕೆಟ್ಟ ನಡೆಯನ್ನು ವಿರೋಧಿಸಲು ಇಡೀ ರಾಜ್ಯದಲ್ಲಿ ರೈತರು ಮುಂದಾಗಿದ್ದಾರೆ. ಬಿಜೆಪಿ ಮುಖಂಡತ್ವ ರೈತರ ಪರವಾಗಿ ನಿಲ್ಲುವ ತೀರ್ಮಾನ ಮಾಡಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ತಿಳಿಸಿದ್ದಾರೆ. ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಮೊದಲಿನಿಂದಲೂ ರೈತಪರ ನಿಲುವನ್ನು ತೆಗೆದುಕೊಂಡಿದೆ. ಕಾಂಗ್ರೆಸ್ಸಿನ ರೈತವಿರೋಧಿ ನೀತಿಯನ್ನು ಖಂಡಿಸುವುದಲ್ಲದೇ ವಿರೋಧಿಸುತ್ತೇವೆ ಎಂದು ತಿಳಿಸಿದರು. ಅತಿವೃಷ್ಟಿ ಆದಾಗ ಎಲ್ಲರಿಗಿಂತ ಮೊದಲು ನಾವೇ ಹೋಗಿದ್ದೇವೆ. ವಿಜಯೇಂದ್ರ, ನಾನು ಮತ್ತು ಅಶೋಕ್ ಅವರು ತೆರಳಿದ್ದೇವೆ ಎಂದು ಪ್ರಶ್ನೆಗೆ ಉತ್ತರವಾಗಿ ವಿವರಿಸಿದರು. ನಾವು ಹೋಗುವ ವರೆಗೆ ಸರಕಾರ ಎಚ್ಚತ್ತುಕೊಂಡಿರಲಿಲ್ಲ ಎಂದು ತಿಳಿಸಿದರು. ನಾನು ಮತ್ತು ವಿಪಕ್ಷ ನಾಯಕ ಆರ್.ಅಶೋಕ್ ಅವರು ನಾಳೆ ಗುಂಡ್ಲುಪೇಟೆಗೆ ಹೋಗಲಿದ್ದೇವೆ ಎಂದರು. ಬೆಳಗಾವಿಯಲ್ಲಿ ಸರಕಾರ ತಕ್ಷಣ ಕಬ್ಬು ಬೆಳೆಗೆ ಬೆಲೆ ನಿಗದಿಪಡಿಸಬೇಕು. ಹಳೆಯ ಬಾಕಿ ಸಿಗದೇ ರೈತರು ಕಂಗಾಲಾಗಿದ್ದು, ಅದನ್ನು ವಾಪಸ್ ಕೊಡಿಸಬೇಕು ಎಂದು ಒತ್ತಾಯಿಸಿದರು. ನಮ್ಮ ಪಕ್ಷದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಈಗಾಗಲೇ ಬೆಳಗಾವಿಯಲ್ಲಿ ಬೀಡು ಬಿಟ್ಟಿದ್ದಾರೆ. ನಾಳೆ…

Read More

ಬೆಂಗಳೂರು: “ಬಿಹಾರದಲ್ಲಿ ಬದಲಾವಣೆ ತರಲು ಮಹಾಘಟಬಂಧನಕ್ಕೆ ಮತ ಹಾಕಿ, ತೇಜಸ್ವಿ ಯಾದವ್ ಮುಖ್ಯಮಂತ್ರಿಯಾಗಬೇಕು ಎಂದು ಮತದಾರರಿಗೆ ಮನವಿ ಮಾಡಿದ್ದೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಬೆಂಗಳೂರು ಕೌಶಲ್ಯ ಶೃಂಗಸಭೆ 2025 ಕಾರ್ಯಕ್ರಮ ನಡೆದ ಖಾಸಗಿ ಹೊಟೇಲ್ ಬಳಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಮಂಗಳವಾರ ಪ್ರತಿಕ್ರಿಯೆ ನೀಡಿದರು. ಬಿಹಾರ ಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿರುವ ಬಿಹಾರಿ ಮತದಾರರಿಗೆ ವೇತನ ಸಹಿತ ರಜೆ ನೀಡುವಂತೆ ಬರೆದಿರುವ ಪತ್ರದ ಬಗ್ಗೆ ಕೇಳಿದಾಗ, “ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಮೊದಲ ಹಕ್ಕು. ನಮ್ಮ ಮತ ನಮ್ಮ ಹಕ್ಕು. ಹೀಗಾಗಿ ನಮ್ಮ ದೇಶದಲ್ಲಿ ನಮ್ಮ ಜನ ಮತದಾನ ಮಾಡಿ ಚುನಾವಣಾ ಪ್ರಕ್ರಿಯೆಯಲ್ಲಿ ಭಾಗಿಯಾಗಬೇಕು. ಕಾಂಗ್ರೆಸ್ ಪಕ್ಷದ ಅಧ್ಯಕ್ಷನಾಗಿ ಎಲ್ಲಾ ಸಂಸ್ಥೆಗಳು ಬಿಹಾರದ ಮತದಾರರಿಗೆ ವತನ ಸಹಿತ ರಜೆ ನೀಡಬೇಕು ಎಂದು ಮನವಿ ಮಾಡಿದ್ದೇನೆ” ಎಂದು ತಿಳಿಸಿದರು. ಬಿಹಾರದ ಜನ ಬದಲಾವಣೆ ಬಯಸಿದ್ದಾರೆ ಬಿಹಾರ ಚುನಾವಣೆಯಲ್ಲಿ ಆರ್ ಜೆಡಿ ಹಾಗೂ ಕಾಂಗ್ರೆಸ್ ಬಹಳಷ್ಟು ಆತ್ಮ ವಿಶ್ವಾಸದಲ್ಲಿದೆ ಎಂದು ಕೇಳಿದಾಗ,…

Read More

ಮಂಡ್ಯ: ಯಾವುದೇ ರಾಜಕೀಯ ಹಿನ್ನಲೆಯಿಲ್ಲದ ಒಬ್ಬ ಸಾಮಾನ್ಯ ರೈತ ಕುಟುಂಬದ ಮಗನಾಗಿ ಜಿಲ್ಲೆಯ ರೈತರಿಗೆ ಅನುಕೂಲ ಕಲ್ಪಿಸಬೇಕೆಂಬ ಉದ್ದೇಶದಿಂದ ಕೃಷಿ ವಿಶ್ವವಿದ್ಯಾಲಯವನ್ನು ತಂದಿದ್ದೇನೆ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು. ಮದ್ದೂರು ನಗರದ ಖಾಸಗಿ ಸಮುದಾಯ ಭವನದಲ್ಲಿ ಮಂಗಳವಾರ ಆಯೋಜಿಸಿದ್ದ ಮಂಡ್ಯ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಗೆ ನೂತನವಾಗಿ ಆಯ್ಕೆಯಾಗಿರುವ ನಿರ್ದೇಶಕರಗಳಿಗೆ ಅಭಿನಂದನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಡಿಸಿಸಿ ಬ್ಯಾಂಕ್ ಚುನಾವಣಾ ಇತಿಹಾಸದಲ್ಲಿ ಎಂದು ಸಹ 12 ಸ್ಥಾನಗಳಲ್ಲಿ 9 ಸ್ಥಾನಗಳು ಅವಿರೋಧವಾಗಿ ಆಯ್ಕೆಯಾಗಿರಲಿಲ್ಲ. ಈ ಚುನಾವಣೆಯಲ್ಲಿ ಜಿಲ್ಲೆಯ ಕಾಂಗ್ರೆಸ್ ಶಾಸಕರು, ಮಾಜಿ ಅಧ್ಯಕ್ಷ ಜೋಗಿಗೌಡ ಅವರ ಉಸ್ತುವಾರಿಯಲ್ಲಿ 9 ಸ್ಥಾನಗಳನ್ನು ಅವಿರೋಧವಾಗಿ ಆಯ್ಕೆಯಾಗಲು ಸಾಧ್ಯವಾಗಿದ್ದು, ಇನ್ನು ಮೂರು ಸ್ಥಾನಗಳಿಗೆ ಚುನಾವಣೆ ನಡೆದು 2 ರಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಜಯಭೇರಿ ಬಾರಿಸಿದ್ದಾರೆ ಎಂದು ಹರ್ಷ ವ್ಯಕ್ತಪಡಿಸಿದರು. ಜಿಲ್ಲೆಯ ರೈತರ ಹಿತ ದೃಷ್ಟಿಯಿಂದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಚಿವ ಸಂಪುಟದ ಸದಸ್ಯರ…

Read More

ಚಹಾ ಎಂದರೆ ಒಣಗಿದ ಎಲೆಗಳು, ಕೆಲವೊಮ್ಮೆ ಇತರ ಸೇರ್ಪಡೆಗಳೊಂದಿಗೆ. ತಂಬಾಕು, ಅದೇ ರೀತಿ, ಒಣಗಿದ ತಂಬಾಕು ಎಲೆಗಳು ಮತ್ತು ಇತರ ಪದಾರ್ಥಗಳನ್ನು ಒಳಗೊಂಡಿದೆ. ಈ ಹೋಲಿಕೆ ಎಂದರೆ ಚಹಾ ಸೇದುವುದು ಸಾಧ್ಯ. ಆದರೆ ಚಹಾ ಸೇದುವುದು ಸುರಕ್ಷಿತ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ. ಈ ಲೇಖನವು ಒಬ್ಬ ವ್ಯಕ್ತಿಯು ಚಹಾ ಸೇದಬಹುದೇ ಮತ್ತು ಹಾಗೆ ಮಾಡುವುದು ಸುರಕ್ಷಿತವೇ ಎಂಬುದನ್ನು ವಿವರಿಸುತ್ತದೆ. ಇದು ಯಾವುದೇ ಪ್ರಯೋಜನಗಳು ಅಥವಾ ಅಪಾಯಗಳು ಇದೆಯೇ ಮತ್ತು ಚಹಾ ಸೇದುವುದಕ್ಕೆ ಸಂಬಂಧಿಸಿದ ಕಾನೂನುಬದ್ಧತೆಗಳನ್ನು ಸಹ ಪರಿಶೋಧಿಸುತ್ತದೆ. ಧೂಮಪಾನಕ್ಕಾಗಿ ಚಹಾವನ್ನು ಮಾರಾಟ ಮಾಡುವ ಕಂಪನಿಗಳು, ಅದರಲ್ಲಿ ನಿಕೋಟಿನ್ ಅಥವಾ ಟಾರ್ ಇಲ್ಲದಿರುವುದರಿಂದ, ಅದು ತಂಬಾಕು ಹೊಗೆಗಿಂತ ಆರೋಗ್ಯಕರ ಎಂದು ವಾದಿಸುತ್ತವೆ. ಇದು ನಿಜವಾಗಿದ್ದರೂ, ಚಹಾ ಸೇದುವುದು ಸುರಕ್ಷಿತ ಎಂದು ಇದು ಸಾಬೀತುಪಡಿಸುವುದಿಲ್ಲ. ಹಲವಾರು ಅಧ್ಯಯನಗಳು ನಿಕೋಟಿನ್ ಅಲ್ಲದ ಧೂಮಪಾನ ಉತ್ಪನ್ನಗಳು ಇನ್ನೂ ಹಾನಿಕಾರಕವಾಗಬಹುದು ಎಂದು ಸೂಚಿಸುತ್ತವೆ. ಒಬ್ಬ ವ್ಯಕ್ತಿಯು ಇನ್ನೂ ಹಾನಿಕಾರಕ ರಾಸಾಯನಿಕಗಳನ್ನು ಉಸಿರಾಡಬಹುದು ಮತ್ತು ಹೊಗೆ ಶ್ವಾಸಕೋಶಗಳಿಗೆ ಹಾನಿ ಮಾಡಬಹುದು.…

Read More

ನವದೆಹಲಿ: ದೇಶದಲ್ಲಿ ಮತ್ತೊಂದು ಭೀಕರ ರೈಲು ಅಪಘಾತ ಎನ್ನುವಂತೆ ಛತ್ತೀಸ್ ಗಢದ ಬಿಲಾಸ್ ಪುರದಲ್ಲಿ ನಡೆದಿದೆ. ಪ್ರಯಾಣಿಕರ ಹಾಗೂ ಸರಕು ರೈಲಿನ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ, ಇಬ್ಬರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವುದಾಗಿ ತಿಳಿದು ಬಂದಿದೆ. ಛತ್ತೀಸ್‌ಗಢದ ಬಿಲಾಸ್‌ಪುರ ಜಿಲ್ಲೆಯಲ್ಲಿ ಮಂಗಳವಾರ ಜೈರಾಮನಗರ ನಿಲ್ದಾಣದ ಬಳಿ ಪ್ರಯಾಣಿಕ ರೈಲು ಸರಕು ರೈಲಿಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ. ಆರಂಭಿಕ ಮಾಹಿತಿಯ ಪ್ರಕಾರ, ಸ್ಥಳೀಯ ಪ್ರಯಾಣಿಕ ರೈಲು ಮತ್ತು ಸರಕು ರೈಲು ನಡುವೆ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಸಾವುನೋವುಗಳ ವರದಿಗಳಿವೆ. ಇಲ್ಲಿಯವರೆಗೆ, ಇಬ್ಬರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ರಕ್ಷಣಾ ಮತ್ತು ಪರಿಹಾರ ತಂಡಗಳು ಸ್ಥಳಕ್ಕೆ ತಲುಪಿದ್ದು, ಗಾಯಾಳುಗಳಿಗೆ ಸಹಾಯ ಮಾಡಲು ಮತ್ತು ಹಾನಿಯನ್ನು ನಿರ್ಣಯಿಸಲು ಪ್ರಯತ್ನಗಳು ನಡೆಯುತ್ತಿವೆ. ಅಧಿಕಾರಿಗಳು ಸ್ಥಳದಲ್ಲಿ ತನಿಖೆ ಮತ್ತು ಪರಿಶೀಲನೆಯನ್ನು ಮುಂದುವರಿಸುತ್ತಿರುವುದರಿಂದ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ. https://kannadanewsnow.com/kannada/if-necessary-i-will-go-to-delhi-to-meet-my-superiors-for-a-ministerial-post-mla-gopalakrishna-belur/ https://kannadanewsnow.com/kannada/breaking-petition-challenging-the-order-making-permission-mandatory-in-public-places-high-court-adjourns-verdict/

Read More

ಶಿವಮೊಗ್ಗ : ಕೆಲವರು ಕೆಪಿಸಿ ಜಾಗವನ್ನು ನಿಮ್ಮ ಹೆಸರಿಗೆ ಮಂಜೂರು ಮಾಡಿಸಿ ಕೊಡುತ್ತೇವೆ ಎಂದು ರೈತರಿಂದ ಹಣ ವಸೂಲಿ ಮಾಡುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಕುಂದಾಪುರ ಮೂಲದ ವ್ಯಕ್ತಿಯೊಬ್ಬ ಜನರಿಂದ ಹಣ ವಸೂಲಿ ಮಾಡುತ್ತಿದ್ದು ಸಾರ್ವಜನಿಕರು ಹಣ ಕೊಟ್ಟು ಮೋಸ ಹೋಗಬೇಡಿ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಎಂಬುದಾಗಿ ರೈತರಿಗೆ ಕಿವಿಮಾತು ಹೇಳಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಉಪವಿಭಾಗಾಧಿಕಾರಿಗಳ ಸಭಾಂಗಣದಲ್ಲಿ ಮಂಗಳವಾರ ಹೆದ್ದಾರಿ ಪ್ರಾಧಿಕಾರ, ನಗರಸಭೆ, ಪಿಡಬ್ಲ್ಯೂಡಿ ಮತ್ತು ಮೆಸ್ಕಾಂ ಅಧಿಕಾರಿಗಳ ಜೊತೆ ಸಭೆ ನಡೆಸಿದ ಅವರು, ಕೆಪಿಸಿ ವಶದಲ್ಲಿರುವ ಭೂಮಿಯನ್ನು ಮಂಜೂರು ಮಾಡುತ್ತಿದ್ದಾರೆ ಎನ್ನುವ ವದಂತಿ ಹಬ್ಬಿಸುತ್ತಿದ್ದು ಇದು ಸಂಪೂರ್ಣ ಸತ್ಯಕ್ಕೆ ದೂರವಾದ ಸಂಗತಿ ಎಂದು ಹೇಳಿದರು. ಆಣೆಕಟ್ಟು ನಿರ್ಮಾಣ ಸಂದರ್ಭದಲ್ಲಿ ಕೆಪಿಸಿ ಒಂದಷ್ಟು ಭೂಮಿ ವಶಪಡಿಸಿಕೊಂಡಿದೆ. ಅದನ್ನು ಪುನಃ ಸಂತ್ರಸ್ತರಿಗೆ ಕೊಡುವ ಪ್ರಸ್ತಾಪ ಸದ್ಯ ಸರ್ಕಾರದ ಎದುರು ಇಲ್ಲ. ಈ ಬಗ್ಗೆ ಮುಂದೆ ನಾನು ಪ್ರಯತ್ನ ಮಾಡುತ್ತೇನೆ. ಆದರೆ ಕೆಲವು…

Read More

ಶಿವಮೊಗ್ಗ : ಅಗತ್ಯ ಬಿದ್ದರೆ ಸಚಿವ ಸ್ಥಾನಕ್ಕಾಗಿ ವರಿಷ್ಟರನ್ನು ಭೇಟಿಯಾಗಲು ದೆಹಲಿಗೆ ತೆರಳುತ್ತೇನೆ. ನಾನು ಮೂರು ಬಾರಿ ಗೆದ್ದಿರುವ ಹಿರಿಯ ಹಾಗೂ ರಾಜ್ಯಮಟ್ಟದಲ್ಲಿ ಗುರುತಿಸಿಕೊಂಡ ಶಾಸಕನಾಗಿದ್ದು ನನಗೆ ಸಚಿವ ಸ್ಥಾನ ಸಿಗುವ ವಿಶ್ವಾಸ ಇದೆ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಉಪವಿಭಾಗಾಧಿಕಾರಿಗಳ ಕಚೇರಿ ಆವರಣದಲ್ಲಿ ಮಂಗಳವಾರ ಪತ್ರಕರ್ತರ ಜೊತೆ ಮಾತನಾಡಿದ ಅವರು, ಹಿಂದುಳಿದ ವರ್ಗಕ್ಕೆ ಸೇರಿದ ನನಗೆ ಸಚಿವ ಸ್ಥಾನ ಕೊಡಿ ಎಂದು ದೆಹಲಿಗೆ ಹೋಗಿದ್ದಾಗ ವರಿಷ್ಟರನ್ನು ಭೇಟಿಯಾಗಿ ಮನವಿ ಮಾಡಿದ್ದೇನೆ. ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳ ಬಳಿ ಕೇಳಿದ್ದೇನೆ. ಸಚಿವ ಸ್ಥಾನ ಸಿಗುವ ವಿಶ್ವಾಸ ಇದೆ. ನನ್ನ ಹಕ್ಕನ್ನು ಕೇಳಲು ಯಾವುದೇ ಮುಜುಗರ ಇಲ್ಲ. ದೆಹಲಿಗೆ ಹೋಗಲು ಸಹ ಸಿದ್ದನಿದ್ದೇನೆ ಎಂದು ತಿಳಿಸಿದರು. ನಮ್ಮ ಪಕ್ಷದಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ನಾನು ಹಿಂದಿನಿಂದಲೂ ಹೇಳುತ್ತಾ ಬಂದಿದ್ದೇನೆ. ಮುಖ್ಯಮಂತ್ರಿ ಬದಲಾವಣೆ, ಸಚಿವರ ಬದಲಾವಣೆ ಶಾಸಕರ ಕೈನಲ್ಲಿ ಇಲ್ಲ.…

Read More

ಶಿವಮೊಗ್ಗ : ನವೆಂಬರ್ 9ರಂದು ಗಾಂಧಿನಗರದ ಸಂಗೊಳ್ಳಿ ರಾಯಣ್ಣ ರಂಗಮಂದಿರದಲ್ಲಿ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರಿಗೆ ಮಲೆನಾಡು ಲೋಹಿಯಾ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ ಎಂದು ಗಾಂಧಿನಗರ ಯುವಜನ ಸಂಘದ ಅಧ್ಯಕ್ಷ ಸಂತೋಷ್ ಸದ್ಗುರು ತಿಳಿಸಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ ಜನ್ಮದಿನ ಸಂದರ್ಭದಲ್ಲಿ ಸಂಘವು ಪ್ರಶಸ್ತಿ ಘೋಷಣೆ ಮಾಡಿದ್ದು, ಅದನ್ನು ನವೆಂಬರ್ 9ರಂದು ನಡೆಯುವ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಂಜೆ 7ಕ್ಕೆ ಪ್ರದಾನ ಮಾಡಲಾಗುತ್ತಿದೆ ಎಂದರು. ಕನ್ನಡ ರಾಜ್ಯೋತ್ಸವ ಅಂಗವಾಗಿ ನ. 7,8 ಮತ್ತು 9ರಂದು ನಗರವ್ಯಾಪ್ತಿಯ ವಿವಿಧ ಸಂಘ-ಸಂಸ್ಥೆಗಳು, ಅಧಿಕಾರಿಗಳನ್ನು ಒಳಗೊಂಡ ತಂಡಗಳ ನಡುವೆ ಸಂಗೊಳ್ಳಿ ರಾಯಣ್ಣ ಕ್ರೀಡಾಂಗಣದಲ್ಲಿ ಸೌಹಾರ್ದ ಕ್ರಿಕೇಟ್ ಪಂದ್ಯಾವಳಿ ನಡೆಯಲಿದ್ದು, ವಿಜೇತ ತಂಡಕ್ಕೆ ಆಕರ್ಷಕ ನಗದು ಬಹುಮಾನ ಇರುತ್ತದೆ. ದೀಪಾವಳಿ ಸಂದರ್ಭದಲ್ಲಿ ಗಾಂಧಿನಗರ ಭಾಗದ ಮಹಿಳೆಯರಿಗೆ ಏರ್ಪಡಿಸಿದ್ದ ರಂಗೋಲಿ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಗುತ್ತದೆ. ನಂತರ…

Read More

ಶಿವಮೊಗ್ಗ: ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳಸಿಕೊಳ್ಳಲು ಎನ್.ಎಸ್.ಎಸ್. ಸಹಕಾರಿ. ಕಾಲೇಜು ದಿನಗಳಲ್ಲಿ ವಿದ್ಯಾರ್ಥಿಗಳು ಎನ್.ಎಸ್.ಎಸ್. ಸೇರುವ ಮೂಲಕ ಸಾಮಾಜಿಕ ಮೌಲ್ಯವನ್ನು ಅಳವಡಿಸಿಕೊಳ್ಳಬೇಕು ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ತಿಳಿಸಿದರು. ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಎಸ್.ಎಸ್.ಬೋಗ್ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ನೆಲ್ಲಿಬೀಡು ಗ್ರಾಮದಲ್ಲಿ ಹೆಗ್ಗೋಡಿನ ಎಸ್.ರೂಪಶ್ರೀ ಪದವಿಪೂರ್ವ ಕಾಲೇಜು ಹಮ್ಮಿಕೊಂಡಿದ್ದ ಒಂದು ವಾರಗಳ ಎನ್.ಎಸ್.ಎಸ್. ಶಿಬಿರದ ಸಮಾರೋಪ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದಂತ ಅವರು,  ವಿದ್ಯಾರ್ಥಿಗಳಲ್ಲಿ ನೈತಿಕ ಮೌಲ್ಯ ಬೆಳೆಸುವಲ್ಲಿ ಎನ್.ಎಸ್.ಎಸ್. ಪ್ರಮುಖಪಾತ್ರ ವಹಿಸುತ್ತದೆ. ಸಾರ್ವಜನಿಕ ಬದುಕು, ಪರಿಸರ ಸ್ವಚ್ಚತೆ, ಕೃಷಿ, ಮನುಷ್ಯ ಸಂಬಂಧ, ಜೀವನ ರೂಪಿಸಿಕೊಳ್ಳುವುದು ಸೇರಿ ವಿವಿಧ ಹಂತದಲ್ಲಿ ಸಹಕಾರಿಯಾಗುತ್ತದೆ. ಶಿಕ್ಷಣದ ಜೊತೆಗೆ ಇಂತಹ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಕಡ್ಡಾಯ ಪಾಲ್ಗೊಳ್ಳಬೇಕು. ಬಹುತೇಕ ಮಕ್ಕಳಿಗೆ ಗ್ರಾಮೀಣ ಬದುಕಿನ ಪರಿಚಯ ಇರುವುದಿಲ್ಲ. ಎನ್.ಎಸ್.ಎಸ್. ಗ್ರಾಮೀಣ ಬದುಕಿನ ಚಿತ್ರಣ ತೆರೆದಿಡುತ್ತದೆ ಎಂದರು. ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ವಿದ್ಯಾಭಿವೃದ್ದಿ ಸಂಘದ ಅಧ್ಯಕ್ಷ ಕೇಶವ ಸಂಪೆಕೈ, ವಿದ್ಯಾರ್ಥಿಗಳಲ್ಲಿ ನಾನು…

Read More

ನವದೆಹಲಿ : ಗುಜರಾತ್‌ನ ಜಾಮ್‌ನಗರದಲ್ಲಿ ಇರುವ ವಂತಾರ ಯೋಜನೆ ಮತ್ತು ಅದರ ಎರಡು ಸಂಬಂಧಿತ ಸಂಸ್ಥೆಗಳಾದ ಗ್ರೀನ್ ಝೂಲಾಜಿಕಲ್ ರೆಸ್ಕ್ಯೂ ಮತ್ತು ರಿಕವರಿ ಸೆಂಟರ್ (GZRRC) ಮತ್ತು ರಾಧಾಕೃಷ್ಣ ದೇವಾಲಯ ಆನೆ ಕಲ್ಯಾಣ ಟ್ರಸ್ಟ್ (RKTEWT)ನ ಅತ್ಯುತ್ತಮ ಪದ್ಧತಿಗಳು ಮತ್ತು ಕೆಲಸವನ್ನು ಸಿಐಟಿಎಸ್ ಬಹಿರಂಗವಾಗಿ ಶ್ಲಾಘಿಸಿದೆ. ವಿಶ್ವದಾದ್ಯಂತ ಅಳಿವಿನ ಅಂಚಿನಲ್ಲಿ ಇರುವ ವಿವಿಧ ಪ್ರಭೇದದ ಕಾಡು ಪ್ರಾಣಿಗಳು ಮತ್ತು ಪಕ್ಷಿಗಳ ಅಕ್ರಮ ವ್ಯಾಪಾರದ ಮೇಲ್ವಿಚಾರಣೆ ಮಾಡುವ ಸಂಸ್ಥೆ ಸಿಐಟಿಇಎಸ್ (the Convention on International Trade in Endangered Species of Wild Fauna and Flora). ಅಂದ ಹಾಗೆ ಇದಕ್ಕೂ ಮುನ್ನ ಭಾರತದ ಸರ್ವೋಚ್ಚ ನ್ಯಾಯಾಲಯವು (ಸುಪ್ರೀಂ ಕೋರ್ಟ್) ವಂತಾರಕ್ಕೆ ಕ್ಲೀನ್ ಚಿಟ್ ನೀಡಿತ್ತು. ಎರಡೂ ಸಂಸ್ಥೆಗಳು ಅತ್ಯಂತ ಉನ್ನತ ಗುಣಮಟ್ಟದಲ್ಲಿ ಕಾರ್ಯನಿರ್ವಹಿಸುತ್ತವೆ ಎಂದು ತನ್ನ ತನಿಖಾ ವರದಿಯಲ್ಲಿ CITES ಹೇಳಿದೆ. ಪ್ರಾಣಿಗಳಿಗೆ ಆಧುನಿಕ ವ್ಯವಸ್ಥೆಯ ನೆಲೆಗಳು, ವೈದ್ಯಕೀಯ ಆರೈಕೆ ಮತ್ತು ಸುಧಾರಿತ ಸೌಲಭ್ಯಗಳು ಲಭ್ಯವಿದೆ. ವರದಿಯ ಪ್ರಕಾರ, ಈ…

Read More