Subscribe to Updates
Get the latest creative news from FooBar about art, design and business.
Author: kannadanewsnow09
ನವದೆಹಲಿ : ಅಮೆರಿಕದ ಜನಪ್ರಿಯ ನಿಯತಕಾಲಿಕ ಟೈಮ್, ಬಿಡುಗಡೆ ಮಾಡಿರುವ ಜಗತ್ತಿನ ಪ್ರಮುಖ 100 ಪ್ರಭಾವಿ ಕಂಪನಿಗಳ ಪಟ್ಟಿಯಲ್ಲಿ ರಿಲಯನ್ಸ್ ಇಂಡಸ್ಟ್ರೀಸ್ ( Reliance Industries Limited ) ಸೇರಿದಂತೆ ಭಾರತದ ಮೂರು ಕಂಪನಿಗಳು ಸ್ಥಾನ ಪಡೆದುಕೊಂಡಿವೆ. ರಿಲಯನ್ಸ್ ಇಂಡಸ್ಟ್ರೀಸ್, ಸೀರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಮತ್ತು ಟಾಟಾ ಸಮೂಹವು ʼಟೈಮ್ʼ ಬಿಡುಗಡೆ ಮಾಡಿರುವ 100 ಕಂಪನಿಗಳಲ್ಲಿ ಸ್ಥಾನ ಪಡೆದುಕೊಂಡಿವೆ. ಈ ಪಟ್ಟಿಯನ್ನು 5 ವಿಭಾಗಗಳಾಗಿ ವರ್ಗೀಕರಿಸಲಾಗಿದೆ. ನಾಯಕ, ಆವಿಷ್ಕಾರ, ನಾವೀನ್ಯ, ಟೈಟಾನ್ (ಶಕ್ತಿಶಾಲಿ) ಮತ್ತು ಪ್ರವರ್ತಕ ಎಂದು ವರ್ಗೀಕರಿಸಲಾಗಿದೆ. ರಿಲಯನ್ಸ್ ಇಂಡಸ್ಟ್ರೀಸ್ ಮತ್ತು ಟಾಟಾ ಸಮೂಹವು ಟೈಟಾನ್ (ಶಕ್ತಿಶಾಲಿ) ವಿಭಾಗದಲ್ಲಿ ಸ್ಥಾನ ಪಡೆದುಕೊಂಡಿವೆ. ಸೀರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಪ್ರವರ್ತಕರ ವಿಭಾಗದಲ್ಲಿ ಸ್ಥಾನ ಪಡೆದುಕೊಂಡಿದೆ. ಟೈಮ್ ನಿಯತಕಾಲಿಕವು ರಿಲಯನ್ಸ್ ಇಂಡಸ್ಟ್ರೀಸ್ಗೆ ʼಭಾರತದ ಶಕ್ತಿʼ ಎನ್ನುವ ಉಪನಾಮವನ್ನು ನೀಡಿದೆ. ಜವಳಿ ಮತ್ತು ಪಾಲಿಸ್ಟರ್ ಉದ್ದಿಮೆಯಾಗಿ ಆರಂಭವಾದ ರಿಲಯನ್ಸ್ ಕಂಪನಿಯು ಇಂದು ಅತಿದೊಡ್ಡ ಮತ್ತು ಶಕ್ತಿಶಾಲಿ ಉದ್ಯಮ ಸಮೂಹವಾಗಿ ಹೊರಹೊಮ್ಮಿದೆ. ಮಾತ್ರವಲ್ಲ ದೇಶದ…
ನವದೆಹಲಿ: ಲೋಕಸಭಾ ಚುನಾವಣೆಯ ಕೊನೆಯ ಹಂತದ ಪ್ರಚಾರ ಮುಕ್ತಾಯದೊಂದಿಗೆ ಪ್ರಧಾನಿ ನರೇಂದ್ರ ಮೋದಿ ಗುರುವಾರ ಕನ್ಯಾಕುಮಾರಿಯ ಪ್ರಸಿದ್ಧ ವಿವೇಕಾನಂದ ರಾಕ್ ಮೆಮೋರಿಯಲ್ ನಲ್ಲಿ 45 ಗಂಟೆಗಳ ಸುದೀರ್ಘ ಧ್ಯಾನವನ್ನು ಪ್ರಾರಂಭಿಸಿದರು. ಸಂಜೆ ನಗರಕ್ಕೆ ಆಗಮಿಸಿದ ಪ್ರಧಾನಿ, ವಿವೇಕಾನಂದ ರಾಕ್ ಮೆಮೋರಿಯಲ್ ಗೆ ತೆರಳುವ ಮೊದಲು ಭಗವತಿ ಅಮ್ಮನ್ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು. ಹಿಂದೂ ತತ್ವಜ್ಞಾನಿ ಸ್ವಾಮಿ ವಿವೇಕಾನಂದರು ‘ಭಾರತ ಮಾತೆ’ ಬಗ್ಗೆ ದೈವಿಕ ದರ್ಶನ ಹೊಂದಿದ್ದರು ಎಂದು ನಂಬಲಾದ ಧ್ಯಾನ ಮಂಟಪದಲ್ಲಿ ಗುರುವಾರ ಸಂಜೆಯಿಂದ ಜೂನ್ 1 ರ ಸಂಜೆಯವರೆಗೆ ಮೋದಿ ಧ್ಯಾನ ಮಾಡಲಿದ್ದಾರೆ. https://twitter.com/ANI/status/1796189209104941072 ಮೋದಿ ಅವರ ಭೇಟಿಯ ಹಿನ್ನೆಲೆಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ಅವರ ವಾಸ್ತವ್ಯದ ಸಮಯದಲ್ಲಿ 2,000 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಭಾರತೀಯ ಕೋಸ್ಟ್ ಗಾರ್ಡ್ ಮತ್ತು ಭಾರತೀಯ ನೌಕಾಪಡೆ ಕೂಡ ಬಿಗಿಯಾದ ಜಾಗರೂಕತೆಯನ್ನು ಕಾಯ್ದುಕೊಳ್ಳುತ್ತಿವೆ. ಗುರುವಾರದಿಂದ ಶನಿವಾರದವರೆಗೆ ಕಡಲತೀರವು ಪ್ರವಾಸಿಗರಿಗೆ ಮಿತಿಯನ್ನು ಮೀರಿದೆ ಮತ್ತು ಖಾಸಗಿ ದೋಣಿಗಳನ್ನು ಸಾಗಿಸಲು ಅನುಮತಿಸಲಾಗುವುದಿಲ್ಲ ಎಂದು ಪಿಟಿಐ ವರದಿ ಮಾಡಿದೆ. 2014…
ಗದಗ: ಭ್ರಷ್ಟಾಚಾರ ಪ್ರೋತ್ಸಾಹಿಸುವ, ಭ್ರಷ್ಟಾರದಲ್ಲಿ ಮುಳುಗಿರುವ ಸರ್ಕಾರ ರಾಜ್ಯದಲ್ಲಿದೆ. ಇಡೀ ಕ್ಯಾಬಿನೆಟ್ ಭ್ರಷ್ಟಾಚಾರದಲ್ಲಿ ಮುಳುಗಿರುವುದರಿಂದ ಸಚಿವರ ರಾಜೀನಾಮೆ ಕೇಳುವ ನೈತಿಕತೆಯನ್ನು ಸಿಎಂ ಕಳೆದುಕೊಂಡಿದ್ದಾರೆ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆರೋಪಿಸಿದ್ದಾರೆ. ಗದಗನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎಸ್ ಸಿ ಎಸ್ ಟಿ ಉದ್ಧಾರ ಮಾಡುತ್ತೇವೆ ಅಂತಾ ಕಾಂಗ್ರೆಸ್ ಹೇಳಿಕೊಳ್ಳುತ್ತದೆ. ವಾಲ್ಮೀಕಿ ನಿಗಮದಲ್ಲಿ ಕೊಟ್ಟ ಹಣ, ಎಸ್ ಟಿ ಜನಾಂಗಕ್ಕೆ ಉಪಯೋಗವಾಗಬೇಕಿತ್ತು. ಆ ಹಣವನ್ನ ಲೂಟಿ ಮಾಡಿದ್ದಾರೆ. ಅದು ಹೇಗೆ ಬೇನಾಮಿ ಅಕೌಂಟ್ ಗಳ ಮೂಲಕ ಹಣ ವರ್ಗಾವಣೆಯಾಗಿದೆ. 14 ಅಕೌಂಟ್ ಗಳ ಮೂಲಕ ಬೇರೆ ಬೇರೆಕಡೆ ಹಣ ಹೋಗಿದೆ. ಚುನಾವಣೆ ಸಂದರ್ಭದಲ್ಲಿ ತೆಲಂಗಾಣ ಸಹಕಾರಿ ಸಂಘಕ್ಕೆ ಹೋಗಿದೆ. ಸಚಿವರು ಮೌಖಿಕ ಆದೇಶ ಕೊಟ್ಟಿಲ್ಲ ಅಂತಾ ಹೇಳುತ್ತಾರೆ. ನನ್ನ ಸಹಿ ನಕಲು ಆಗಿದೆ ಅಂತ ಎಂಡಿ ಹೇಳುತ್ತಾರೆ. ಇದರಲ್ಲಿ ಮೇಲಿನವರ ಶಾಮಿಲಾಗದೇ ಹಗರಣ ನಡೆಯಲು ಸಾಧ್ಯವಿಲ್ಲ 94 ಕೋಟಿ ರೂಪಾಯಿ ಮೇಲಿನ ಆಶೀರ್ವಾದ ಇಲ್ಲದೆ ದೋಚಲು ಸಾಧ್ಯವಿಲ್ಲ. ಈಗಾಗಲೇ ಮಂತ್ರಿಗಳು ರಾಜೀನಾಮೆ…
ಧನುಸ್ಸು ರಾಶಿಯವರಿಗೆ ಈ ಒಂದು ತಾಂತ್ರಿಕ ಅನುಷ್ಠಾನ ಮಾಡಿ ನೋಡಿ ಜೀವನ ಅದೃಷ್ಟದ ರೀತಿಯಲ್ಲಿ ಬದಲಾವಣೆಯಾಗುತ್ತದೆ.. ಮೂಲ ನಕ್ಷತ್ರದವರಿಗೆ ಯೆ,ಯೊ,ಬ,ಬಿ ಇವರಿಗೆ ನೀಮ್ಮಗೆ ಎಷ್ಟೇ ಸಮಸ್ಯೆಗಳು ಇದರು ಬಗ್ಗೆ ಆರಿಯುತ್ತದೆ. ಇದು ಹರಿ ವಾಕ್ ಸತ್ಯ ನೀವು ತಾಮ್ರದ ರ್ಸಪಗಳನು ತೆಗೆದುಕೊಂಡು ಪ್ರತಿ ಮಂಗಳವಾರ ಒಂದು ಶುಕ್ರವಾರ ಒಂದು ಹೀಗೆ 5 ಮಂಗಳವಾರ 5 ಶುಕ್ರವಾರ ಒಂದು ಕೆಂಪು ವಸ್ತ್ರದಲ್ಲಿ ಪೂಜೆ ಮಾಡಿ ಗಂಟು ಕಟ್ಟಿ ಇಡಿ5 ಮಂಗಳವಾರ 5 ಶುಕ್ರವಾರವಾದ ಮೇಲೆ ಯಾವುದಾದರೂ ಪುಣೆಯ ಕ್ಷೇತ್ರ ಶಿವನ ದೇವಾಲಯವೆ ಆಗಬೇಕು ಅಲ್ಲಿ ಹುಂಡಿಗೆ ಹಾಕಿ ಇಲ್ಲವೆಂದರೆ ಎಲ್ಲಾದರೂ ಹೋಮ ಮಾಡುತ್ತಿದರೆ ಹೋಮಕ್ಕೆ ಹಾಕಿ ಮನೆಗೆ ಬಂದು ಬಿಡಿ ನಂತರ ನೋಡಿ ಬದಲಾವಣೆ ನಂತರ ನನಗೆ ತಿಳಿಸಿ. ಮತ್ತೆ ಒಂದು ಮಾತು ರ್ಸಪಗಳನ್ನು ಒಂದೇ ಸಾರಿ ಮನೆಗೆ ತಂದು ಇಡಬಾರದು ಆ ದಿನವೇ ತರಬೇಕು ಇದು ತುಂಬಾ ಮುಖ್ಯ ನೆನಪಿರಲಿ. ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್…
ನವದೆಹಲಿ: 2024 ರ ಲೋಕಸಭಾ ಚುನಾವಣೆಯ ( Lok Sabha election 2024 ) ಏಳನೇ ಮತ್ತು ಕೊನೆಯ ಹಂತವು ಜೂನ್ 1 ರಂದು ನಡೆಯಲಿದೆ. ಚುನಾವಣೆ ಮುಗಿಯುತ್ತಿದ್ದಂತೆ, ಜೂನ್.4 ರಂದು ಫಲಿತಾಂಶವನ್ನು ನಿರ್ಣಯಿಸಲು ಎಲ್ಲರ ಕಣ್ಣುಗಳು ಚುನಾವಣೋತ್ತರ ಸಮೀಕ್ಷೆಗಳ ಮೇಲೆ ನೆಟ್ಟಿವೆ. ಇದರ ನಡುವೆ ಚುನಾವಣಾ ಪೂರ್ವ ಮತ್ತು ಚುನಾವಣೋತ್ತರ ಸಮೀಕ್ಷೆಗಳ ವರದಿಗಳ ಬಗ್ಗೆಯೂ ಚರ್ಚೆ ನಡೆಯುತ್ತಿದೆ. ಹಾಗಾದ್ರೇ ಚುನಾವಣಾ ಪೂರ್ವ ಮತ್ತು ಚುನಾವಣೋತ್ತರ ಸಮೀಕ್ಷೆ ಅಂದ್ರೆ ಏನು ಅಂತ ಮುಂದೆ ಓದಿ. ಏಳು ಹಂತಗಳ ಚುನಾವಣೆಗಳು ಮುಗಿಯುವ ಮೊದಲೇ, ಅಭಿಪ್ರಾಯ ಸಮೀಕ್ಷೆಗಳನ್ನು ನಡೆಸಲಾಗುವುದು. ಅಲ್ಲಿ ಮತದಾರರನ್ನು ಅವರು ಯಾರಿಗೆ ಮತ ಚಲಾಯಿಸಲಿದ್ದಾರೆ ಎಂದು ಕೇಳಲಾಗುತ್ತದೆ. ಫಲಿತಾಂಶಗಳಿಗೆ ಮೊದಲು ಸಾರ್ವಜನಿಕರ ಅಭಿಪ್ರಾಯವನ್ನು ಸಂಗ್ರಹಿಸಲು ಡೇಟಾವನ್ನು ವಿಶ್ಲೇಷಿಸಲಾಗುತ್ತದೆ. ಏತನ್ಮಧ್ಯೆ, ಮತದಾರರು ಮತದಾನ ಕೇಂದ್ರಗಳನ್ನು ತೊರೆದ ತಕ್ಷಣ ನಿರ್ಗಮನ ಸಮೀಕ್ಷೆಗಳನ್ನು ನಡೆಸಲಾಗುತ್ತದೆ. ಮತದಾರರು ಯಾವ ಅಭ್ಯರ್ಥಿ ಅಥವಾ ಪಕ್ಷವನ್ನು ಬೆಂಬಲಿಸುತ್ತಾರೆ ಎಂದು ಕೇಳಲಾಗುತ್ತದೆ. ಚುನಾವಣೋತ್ತರ ಮತ್ತು ಚುನಾವಣಾ ಪೂರ್ವ ಸಮೀಕ್ಷೆಗಳ ನಡುವಿನ ವ್ಯತ್ಯಾಸಗಳು…
ಬೆಂಗಳೂರು: ಯುವಕರಿಗೆ ನಿರುದ್ಯೋಗ ಭಾಗ್ಯ ಕರುಣಿಸಿ, ಸಾರಿಗೆ ಸಂಸ್ಥೆಗಳನ್ನು ಅವನತಿಯತ್ತ ಕೊಂಡ್ಯೊಯ್ದ ಹೆಗ್ಗಳಿಕೆ ತಮ್ಮದೇ ಅಲ್ಲವೇ? ಎಂಬುದಾಗಿ ಬಿಜೆಪಿ ವಿರುದ್ಧ ಸಿಎಂ ಸಿದ್ಧರಾಮಯ್ಯ ವಾಗ್ಧಾಳಿ ನಡೆಸಿದ್ದಾರೆ. ಇಂದು ಸುದೀರ್ಘ ಎಕ್ಸ್ ಪೋಸ್ಟ್ ಮಾಡಿರುವಂತ ಅವರು, ಸ್ವಾಮಿ ವಿರೋಧ ಪಕ್ಷದ ನಾಯಕರೇ, ನಿಮ್ಮ ಟ್ವೀಟ್ ನಿಮ್ಮ ಪರಮ ಅಜ್ಞಾನದ ಫಲವೋ? ಅಥವಾ ವಿರೋಧ ಪಕ್ಷದ ನಾಯಕ ಅಸ್ವಿತ್ವದಲ್ಲಿದ್ದಾರೆ ಎಂದು ಜನರಿಗೆ ತಿಳಿಸಲು ಟ್ವೀಟ್ ಮಾಡುತ್ತಿರೋ?? ಇದು ನಮ್ಮನ್ನೂ ಸೇರಿಸಿಕೊಂಡಂತೆ ರಾಜ್ಯದ ಜನಸಾಮಾನ್ಯರಿಗೂ ಅರ್ಥವಾಗದೆ ಇರುವ ಯಕ್ಷ ಪ್ರಶ್ನೆ ಎಂದಿದ್ದಾರೆ. ನೀವು ಸುಳ್ಳಿನ ಕೋಟೆಯನ್ನು ಎಷ್ಟೇ ದೊಡ್ಡದಾಗಿ ಕಟ್ಟಿದರೂ ಅದರ ಆಯುಷ್ಯ ಕಡಿಮೆ. ನಮ್ಮ ಸತ್ಯದ ಒಂದು ಏಟಿಗೆ ಅದು ಕುಸಿದುಬೀಳುತ್ತಲೇ ಇದೆ. ನೀವು ಮತ್ತೆ ಮತ್ತೆ ಸುಳ್ಳುಗಳನ್ನು ಹೇಳಿ ನಮ್ಮ ಕೈಗೆ ದೊಣ್ಣೆ ಕೊಟ್ಟು ಹೊಡೆಸಿಕೊಳ್ಳುತ್ತಲೇ ಇದ್ದೀರಿ. ಇದು ಮುಂದುವರಿಯಲಿ ಆಲ್ ದಿ ಬೆಸ್ಟ್ ಎಂದು ಗುಡುಗಿದ್ದಾರೆ. https://twitter.com/siddaramaiah/status/1796194659217072193 ಈಗ ಸತ್ಯದ ಮಾತುಗಳನ್ನು ಕೇಳುವಂತವರಾಗಿ. ಪ್ರಪ್ರಥಮವಾಗಿ ಸಾರಿಗೆ ಸಂಸ್ಥೆಗಳಲ್ಲಿ ಎಲೆಕ್ಟ್ರಿಕ್ ಬಸ್ಸುಗಳ ಸೇರ್ಪಡೆಯು…
ಬಾಗಲಕೋಟೆ: ಆಕೆಗೆ ನಾನು ಸ್ವಚ್ಚ ವಾಹಿನಿಯ ಸಾರಥಿಯಾಗಲೇ ಬೇಕು ಅನ್ನೋ ಛಲವಿತ್ತು. ಈ ಛಲವನ್ನು ಬಿಡದೇ ವಾಹನ ಚಾಲನೆ ಕಲಿತಂತ ಆಕೆ, ಕೊನೆಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸ್ವಚ್ಚ ವಾಹನದ ಸಾರಥಿಯಾಗಿದ್ದಾರೆ. ಯಾರು ಆಕೆ.? ಎಲ್ಲಿ ಅನ್ನೋ ಆಕೆಯ ಯಶೋಗಾಥೆಯನ್ನು ಮುಂದೆ ಓದಿ. ಸ್ವಚ್ಛ ಭಾರತ ಮಿಷನ್ (ಗ್ರಾ)ಯೋಜನೆ ಕರ್ನಾಟಕದಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಳ್ಳುತ್ತಿದೆ. ಈ ಮೂಲಕ ಗ್ರಾಮದಲ್ಲಿ ಮಹತ್ತರ ಬದಲಾವಣೆಗಳಾಗಿವೆ. ಸ್ವಚ್ಛ ಪರಿಸರ ನಿರ್ಮಾಣಕ್ಕಾಗಿ ಪ್ರತಿಯೊಬ್ಬ ಪ್ರಜೆಯೂ ಸ್ವಯಂ ಪ್ರೇರಣೆಯಿಂದ ಸ್ವಚ್ಚತಾ ಕಾರ್ಯದಲ್ಲಿ ತೊಡಗಿಕೊಳ್ಳುವ ಮೂಲಕ ಸ್ವಚ್ಛ ಭಾರತ ಕನಸನ್ನು ಯಶಸ್ವಿಗೊಳಿಸುತ್ತಿದ್ದಾರೆ. ಸ್ವ- ಸಹಾಯ ಸಂಘದ ಮಹಿಳೆಯರು ಈ ನಿಟ್ಟಿನಲ್ಲಿ ಒಂದು ಹೆಜ್ಜೆ ಮುಂದಿದ್ದಾರೆ. ಈ ಸಾಲಿನಲ್ಲಿ ಬಾಗಲಕೋಟೆ ಜಿಲ್ಲೆಯ ರಬಕವಿ- ಬನಹಟ್ಟಿ ತಾಲೂಕಿನ ಚಿಮ್ಮಡ ಗ್ರಾಮ ಪಂಚಾಯಿತಿಯ ಸ್ವಚ್ಛ ವಾಹಿನಿ ಚಾಲಕಿ ಸರೋಜಾ ಕೂಡ ಪ್ರಮುಖರಾಗಿದ್ದಾರೆ. ಇವರು ಪ್ರತಿದಿನ ಬೆಳಿಗ್ಗೆ ಪ್ರತಿ ವಾರ್ಡ್ ಹಾಗೂ ಗ್ರಾಮದ ಪ್ರಮುಖ ರಸ್ತೆಯ ಮೂಲಕ ಸಂಚರಿಸಿ ಕಸ ಸಂಗ್ರಹಿಸಿ ವಿಲೇವಾರಿ…
ಬೆಂಗಳೂರು: “ವಾಲ್ಮೀಕಿ ನಿಗಮದಲ್ಲಿನ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಯಾರೇ ತಪ್ಪು ಮಾಡಿದ್ದರೂ ಅವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು. ಯಾವುದೇ ಕಾರಣಕ್ಕೂ ತಪ್ಪಿತಸ್ಥರ ರಕ್ಷಣೆ ಪ್ರಶ್ನೆಯೇ ಇಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ದೆಹಲಿ ಪ್ರವಾಸದಿಂದ ಮರಳಿದ ನಂತರ ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಜತೆ ಗುರುವಾರ ಮಾತನಾಡಿದರು. ಅಕ್ರಮ ಹಣ ವರ್ಗಾವಣೆ ವಿಚಾರವಾಗಿ ವಿರೋಧ ಪಕ್ಷಗಳು ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸುತ್ತಿವೆ ಎಂದು ಕೇಳಿದಾಗ ಅವರು, “ರಾಜೀನಾಮೆ ಕೇಳುವುದು ವಿರೋಧ ಪಕ್ಷಗಳ ಧರ್ಮ, ಕೇಳುತ್ತಾರೆ. ನಾವು ಈ ಪ್ರಕರಣದ ಬಗ್ಗೆ ಪರಿಶೀಲಿಸುತ್ತಿದ್ದೇವೆ. ಮುಖ್ಯಮಂತ್ರಿಗಳು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. ಸತ್ಯಾಸತ್ಯತೆ ಪರಿಶೀಲಿಸುತ್ತೇವೆ. ಆಧಾರವಿಲ್ಲದೇ ಆರೋಪ ಮಾಡಿದ ಮಾತ್ರಕ್ಕೆ ನಾವು ಪ್ರತಿಕ್ರಿಯೆ ನೀಡಲು ಆಗುವುದಿಲ್ಲ. ತಪ್ಪು ಯಾರೇ ಮಾಡಿದರೂ ತಪ್ಪೇ. ತಕ್ಷಣವೇ ಎಫ್ಐಆರ್ ದಾಖಲಿಸಿ, ವ್ಯವಸ್ಥಾಪಕ ನಿರ್ದೇಶಕರ ಅಮಾನತು ಮಾಡಲಾಗಿದೆ. ತಪ್ಪು ಮಾಡಿರುವುದು ಸಾಬೀತಾದರೆ ಮುಲಾಜಿಲ್ಲದೇ ಕ್ರಮ ಕೈಗೊಳ್ಳಲಾಗುವುದು” ಎಂದರು. ಸಂತೋಷ್ ಪಾಟೀಲ್ ಪ್ರಕರಣದಲ್ಲಿ ಈಶ್ವರಪ್ಪ ರಾಜೀನಾಮೆ ಕೇಳಿದ್ದೀರಿ,…
ವಿಜಯನಗರ: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ನಿಲುವು ಸ್ಪಷ್ಟಪಡಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಆಗ್ರಹಿಸಿದ್ದಾರೆ. ಹೊಸಪೇಟೆಯಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಈ ರೀತಿಯಲ್ಲಿ ಘಟನೆಗಳು ಆಗಿವೆ, ಆಗಿಲ್ಲಾ ಅಂತ ನಾನು ಹೇಳುವುದಿಲ್ಲ. ಆದರೆ, ಹಿಂದಿನವರು ಏನು ಪಾಲನೆ ಮಾಡಿದ್ದರು, ಅದನ್ನು ಈಗಿನ ಸರ್ಕಾರವೂ ಮಾಡಬೇಕು. ಆದರೆ, ಇದೊಂದು ಭಂಡ ಸರ್ಕಾರ ಎಂದು ವಾಗ್ದಾಳಿ ನಡೆಸಿದರು. ಹಿಂದಿನ ಸರ್ಕಾರದ ಅವಧಿಯಲ್ಲಿ ಗುತ್ತಿಗೆದಾರ ಸಾವಿನ ವಿಚಾರದಲ್ಲಿ ಈಶ್ವರಪ್ಪನವರದ್ದೇನು ಕೂಡ ತಪ್ಪಿರಲಿಲ್ಲ ಆದರೂ, ಈಶ್ವರಪ್ಪ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದರು. ಈಶ್ವರಪ್ಪ ಅವರ ವಿಚಾರದಲ್ಲಿ ವಿಪಕ್ಷನಾಯಕರಿದ್ದ ಸಿದ್ದರಾಮಯ್ಯನವರು ಮಾಡಿದ ರೋಷಾವೇಶ ಈಗ ಯಾಕೆ ಇಲ್ಲಾ. ಈಗ ಅವರೇ ಸಿಎಂ, ಅವರ ಸಚಿವ ಸಂಪುಟದ ಸಚಿವರ ವ್ಯಾಪ್ತಿಯ ವಾಲ್ಮೀಕಿ ನಿಗಮ್ ಹಣ ಲೂಟಿ ಆಗಿದೆ. 14 ಅಕೌಂಟ್ ಗಳ ಮೂಲಕ ಹಗಲು ದರೊಡೆಯಾಗಿದೆ. ಆತ್ಮಹತ್ಯೆ ಮಾಡಿಕೊಂಡ ನಿಗಮದ ಅಧಿಕಾರಿ ಡೆತ್ ನೋಟ್ ನಲ್ಲಿ…
ಬೆಂಗಳೂರು: ರಾಜ್ಯದ ರಾಜಧಾನಿ ಬೆಂಗಳೂರಲ್ಲಿ ಬೆಚ್ಚಿ ಬೀಳಿಸೋ ಘಟನೆ ನಡೆದಿದೆ. ಅದೇ ಹಾಡ ಹಗಲೇ ಮೆಡಿಕಲ್ ಶಾಪ್ ಮಾಲೀಕರೊಬ್ಬರ ಮೇಲೆ ಮಚ್ಚು ಬೀಸಿರುವಂತ ಪುಂಡನೊಬ್ಬ ಹಪ್ತಾ ವಸೂಲಿ ಮಾಡಿರೋ ಘಟನೆ ನಡೆದಿದೆ. ಬೆಂಗಳೂರಿನ ಲಿಂಗರಾಜಪುರ ಬಳಿಯಲ್ಲಿ ಮೆಡಿಕಲ್ ಶಾಪ್ ಗೆ ಮಚ್ಚು ಹಿಡಿದು ತೆರಳಿರುವಂತ ಪುಂಡನೊಬ್ಬ, ಹಣ ಕೊಡು, ಇಲ್ಲ ಅಂದ್ರೆ ಮಚ್ಚಿನಿಂದ ಹಲ್ಲೆ ಮಾಡೋದಾಗಿ ಹೆದರಿಸಿದ್ದಾನೆ. ಮಚ್ಚು ಬೀಸಿ ಹಲ್ಲೆ ಮಾಡೋದಾಗಿ ಹೆದರಿಸಿದ್ದರಿಂದ ಹೆದರಿದಂತ ಮೆಡಿಕಲ್ ಶಾಪ್ ಮಾಲೀಕ, ಆತನಿಗೆ ಹಣ ನೀಡಿದ್ದಾನೆ ಎನ್ನಲಾಗಿದೆ. ಇನ್ನೂ ಮಚ್ಚು ಬೀಸಿ ಮೆಡಿಕಲ್ ಶಾಪ್ ಶೋ ಕೇಸ್ ಗ್ಲಾಸ್ ಕೂಡ ಒಡೆದಿರುವಂತ ಪುಂಡ, ಕೆಲ ಕಾಲ ಆತಂಕ ಸೃಷ್ಠಿಸುವಂತೆ ಮಾಡಿದ್ದಾನೆ. ಆತನ ವರ್ತನೆಯಿಂದ ಬೆಚ್ಚಿ ಬಿದ್ದಂತ ಮೆಡಿಕಲ್ ಶಾಪ್ ಮಾಲೀಕ ಹಣ ನೀಡಿದ್ದಾರೆ. ಹಣ ಪಡೆಯುತ್ತಿದ್ದಂತೆ ಅಲ್ಲಿಂದ ಕಾಲ್ ಕಿತ್ತಿರೋದಾಗಿ ಹೇಳಲಾಗುತ್ತಿದೆ. ಮಚ್ಚು ಬೀಸಿ ಪುಂಡಾಟ ಮೆರೆದಂತ ಪುಂಡನ ಕೃತ್ಯ ಮೆಡಿಕಲ್ ಶಾಪ್ ನಲ್ಲಿದ್ದಂತ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈಗ ಸೋಷಿಯಲ್ ಮೀಡಿಯಾದಲ್ಲೂ ವೈರಲ್…