Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಸೈಬರ್ ವಂಚನೆಗೆ ( Syber Crime ) ಒಳಗಾದವರ ನೆರವಿಗಾಗಿ ರಾಷ್ಟ್ರೀಯ ಸೈಬರ್ ಸಹಾಯವಾಣಿ ಆರಂಭಿಸಲಾಗಿದೆ. ನೀವು ಸೈಬರ್ ವಂಚನೆಗೆ ಒಳಗಾದ ಸಂದರ್ಭದಲ್ಲಿ ಗೋಲ್ಡನ್ ಅವರ್ ( Golden Hour ) ಎಂಬುದಾಗಿ ವಂಚನೆಗೆ ಒಳಗಾದ ಕೂಡಲೇ ಈ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ದೂರು ನೀಡಿದ್ರೆ ನಿಮ್ಮ ಹಣ ಮರಳಿ ಬರಲಿದೆ. ಅದು ಹೇಗೆ ಅಂತ ಮುಂದೆ ಓದಿ. ದೇಶದಲ್ಲಿ ಸೈಬರ್ ವಂಚನೆಗೆ ಒಳಗಾದವರ ನೆರವಿಗೆಂದು ರಾಷ್ಟ್ರೀಯ ಸೈಬರ್ ಸಹಾಯವಾಣಿ ಸ್ಥಾಪಿಸಲಾಗಿದೆ. ಇದನ್ನು ಸ್ಥಾಪಿಸಿ ನಾಲ್ಕು ವರ್ಷ ಕಳೆದಿದ್ದರೂ ಗೋಲ್ಡನ್ ಅವರ್ ನಲ್ಲಿ ಅಂದರೆ ಕೃತ್ಯ ನಡೆದ ಒಂದು ತಾಸಿನ ಒಳಗಾಗಿ ಸಹಾಯವಾಣಿ ಸಂಖ್ಯೆ 1930ಗೆ ಕರೆ ಮಾಡಿದ್ರೆ ನಿಮ್ಮ ಬ್ಯಾಂಕ್ ಖಾತೆಯಿಂದ ಕದ್ದ ಹಣವನ್ನು ಮರಳಿ ಪಡೆಯಬಹುದಾಗಿದೆ. ಇದು ತಿಳಿಯದಂತ ಅನೇಕರು ಈ ಸಹಾಯವಾಣಿ ಸಂಖ್ಯೆಗೆ ಕರೆ ಮಾಡುವುದೇ ವಿರಳವಾಗಿದೆ. ಎನ್ ಸಿ ಆರ್ ಪಿ ಸಹಾಯವಾಣಿ ಸಂಖ್ಯೆಗೆ ಸೈಬರ್ ವಂಚನೆಗೆ ಒಳಗಾದವರು ಈವರೆಗೆ ನೆರವು ಕೋರಿರೋದು…
ಚಿಕ್ಕಮಗಳೂರು: ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವರಾದ ವಿ. ಸೋಮಣ್ಣ ಅವರು ಬೀರೂರು ರೈಲು ನಿಲ್ದಾಣವನ್ನು ಪರಿಶೀಲಿಸಿ, ಶಿವನಿ ನಿಲ್ದಾಣದಲ್ಲಿ ಯಶವಂತಪುರ–ವಾಸ್ಕೋ ಡ ಗಾಮಾ ಎಕ್ಸ್ಪ್ರೆಸ್ ರೈಲು ಹೆಚ್ಚುವರಿ ನಿಲುಗಡೆಗಾಗಿ ಹಸಿರು ನಿಶಾನೆ ತೋರಿಸಿದರು. ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವರಾದ ವಿ. ಸೋಮಣ್ಣ ಅವರು ಇಂದು ರೈಲು ಸಂಖ್ಯೆ 17309 ಯಶವಂತಪುರ–ವಾಸ್ಕೋ ಡ ಗಾಮಾ ಎಕ್ಸ್ಪ್ರೆಸ್ ರೈಲು ಶಿವನಿ ರೈಲು ನಿಲ್ದಾಣದಲ್ಲಿ ಹೆಚ್ಚುವರಿ ನಿಲುಗಡೆಗಾಗಿ ಹಸಿರು ನಿಶಾನೆ ತೋರಿಸಿದರು. ಇದೇ ಸಂದರ್ಭದಲ್ಲಿ ಅವರು ಬೀರೂರು ರೈಲು ನಿಲ್ದಾಣದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳನ್ನು ಮತ್ತು ಸೌಲಭ್ಯಗಳನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು ನೈರುತ್ಯ ರೈಲ್ವೆ ವ್ಯಾಪ್ತಿಯಲ್ಲಿ 61ಕ್ಕೂ ಹೆಚ್ಚು ಅಮೃತ ಭಾರತ ಸ್ಟೇಷನ್ ಯೋಜನೆ ಕಾಮಗಾರಿಗಳು ನಡೆಯುತ್ತಿವೆ ಎಂದು ತಿಳಿಸಿದರು. ಇವು ಪ್ರಯಾಣಿಕರ ಸೌಲಭ್ಯಗಳನ್ನು ಹಾಗೂ ಮೂಲಸೌಕರ್ಯವನ್ನು ಪರಿವರ್ತಿಸುವ ಉದ್ದೇಶ ಹೊಂದಿವೆ ಎಂದು ಹೇಳಿದರು. ಅವರು ಚಿಕ್ಕಜಜೂರು–ಬಳ್ಳಾರಿ ದ್ವಿಪಥ (185 ಕಿ.ಮೀ.) ಕಾಮಗಾರಿ ₹3340 ಕೋಟಿಗಳ ವೆಚ್ಚದಲ್ಲಿ ಕಾರ್ಯಗತಗೊಳ್ಳುತ್ತಿದೆ ಎಂದು…
ಶಿವಮೊಗ್ಗ: ನಾಳೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಉಳವಿಯ ಪತ್ರೆಸಾಲು, ಕಾನಹಳ್ಳಿ ಅಂದರೆ ಗಡೇಗದ್ದೆ ಗ್ರಾಮದಲ್ಲಿ ಮಂಡ್ಲಿಮನೆ ಶ್ರೀ ಬಸವಣ್ಣ ದೇವರ ನೂತನ ವಿಗ್ರಹ ಪ್ರತಿಷ್ಠಾಪನೆ ಮತ್ತು ನೂತನ ದೇವಾಲಯ ಲೋಕಾರ್ಪಣೆಯಾಗಲಿದೆ. ಇದಕ್ಕಾಗಿ ಈಗಾಗಲೇ ಅಂತಿಮ ಹಂತದ ಸಿದ್ಧತೆಗಳು ಪೂರ್ಣಗೊಂಡಿವೆ. ಈ ಬಗ್ಗೆ ಮಂಡ್ಲಿಮನೆ ಶ್ರೀ ಬಸವಣ್ಣ ಸೇವಾ ಸಮಿತಿ ಮತ್ತು ಕರ್ಜಿಕೊಪ್ಪ ಗ್ರಾಮಸ್ಥರು ಕನ್ನಡ ನ್ಯೂಸ್ ನೌಗೆ ಮಾಹಿತಿ ನೀಡಿದ್ದು, ಇಂದು ಬೆಳಗ್ಗೆ 7 ಗಂಟೆಗೆ ವಿವಿಧ ಪೂಜಾ ಕೈಂಕರ್ಯಗಳು, ಹೋಮ-ಹವನಗಳು ನೆರವೇರಿಸಲಾಯಿತು. ಸಂಜೆ 4 ಗಂಟೆಗೆ ಮಂಗಳ ವಾದ್ಯ ಮತ್ತು ಪೂರ್ಣಕುಂಭ ಸಮೇತ ನೂತನ ಬಸವಣ್ಣ ದೇವರ ವಿಗ್ರಹದ ಮೆರವಣಿಗೆ ನಡೆಯಿತು. ಸಂಜೆ 6.30ಕ್ಕೆ ಏಕಾದಶ ರುದ್ರದ ಮೂಲಕ ಪೂಜೆ ಆರಂಭಗೊಂಡು, ಕಂಕಣ ಧಾರಣೆ ನೆರವೇರಿತು ಎಂದು ತಿಳಿಸಿದ್ದಾರೆ. ನಾಳೆ ಬೆಳಗ್ಗೆ ಬ್ರಾಹ್ಮಿ ಮುಹೂರ್ತದಲ್ಲಿ ನೂತನ ವಿಗ್ರಹಕ್ಕೆ ಅಷ್ಟಬಂಧ ಕ್ರಿಯೆ ನೆರವೇರಲಿದೆ. ಆಶೀರ್ವಾದ ಪೂರ್ವಕ ನಾಮಕರಣ ಬಲಿಪೂಜೆ, ಅಷ್ಟೋತ್ತರ, ಮಹಾಮಂಗಳಾರತಿ, ಪ್ರಸಾದ ವಿನಿಯೋದ ಬಳಿಕ ಮಧ್ಯಾಹ್ನ 1 ಗಂಟೆಗೆ…
ರಾಜಸ್ಥಾನ: ಇಲ್ಲಿನ ಫಲೋಡಿ ಜಿಲ್ಲೆಯ ಮಾತೋಡಾ ಪ್ರದೇಶದಲ್ಲಿ ನಿಂತಿದ್ದಂತ ಟ್ರಕ್ ಗೆ ಟೆಂಪೋ ಟ್ರಾವೆಲ್ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ 18 ಯಾತ್ರಾರ್ಥಿಗಳು ಸಾವನ್ನಪ್ಪಿದ್ದಾರೆ. ಇನ್ನೂ ಈ ಅಪಘಾತದಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಜೋಧ್ ಪುರ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮೃತರನ್ನು ಜೋಧ್ ಪುರದ ಸುರ್ಸಾಗರ್ ನ ಮಾಲಿ ಸಮುದಾಯದವರು ಎಂಬುದಾಗಿ ತಿಳಿದು ಬಂದಿದೆ. ಬಿಕಾನೇರ್ ನ ಕೊಲಾಯತ್ ದೇಗುಲದಿಂದ ವಾಪಾಸ್ ಆಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. https://twitter.com/PTI_News/status/1985008698637287699 https://kannadanewsnow.com/kannada/what-are-the-duties-of-gram-panchayat-watermen-pump-operators-and-mechanics-in-the-state-here-is-the-information/ https://kannadanewsnow.com/kannada/useful-information-for-the-public-these-are-the-duties-of-the-village-accountant/
ರಾಜಸ್ಥಾನ: ರಾಜಸ್ಥಾನದಲ್ಲಿ ನಿಲ್ಲಿಸಿದ್ದ ಟ್ರೇಲರ್ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 18 ಭಕ್ತರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ರಾಜಧಾನಿ ಜೈಪುರದಿಂದ ಸುಮಾರು 400 ಕಿ.ಮೀ ದೂರದಲ್ಲಿರುವ ಫಲೋಡಿ ಜಿಲ್ಲೆಯಿಂದ ಈ ಅಪಘಾತ ವರದಿಯಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ. ಬಿಕಾನೇರ್ನ ಕೊಲಾಯತ್ಗೆ ಭೇಟಿ ನೀಡಿದ ನಂತರ ಭಕ್ತರು ಜೋಧ್ಪುರದ ಸುರ್ಸಾಗರ್ನಿಂದ ಹಿಂತಿರುಗುತ್ತಿದ್ದರು. ಈ ದುಃಖದ ಸಮಯದಲ್ಲಿ ಸರ್ಕಾರ ಸಂತ್ರಸ್ತರೊಂದಿಗೆ ನಿಂತಿದೆ ಎಂದು ಮುಖ್ಯಮಂತ್ರಿ ಭಜನ್ ಲಾಲ್ ಶರ್ಮಾ ಹೇಳಿದ್ದಾರೆ. https://kannadanewsnow.com/kannada/another-good-news-for-the-women-of-the-state-akka-pade-to-be-launched-on-november-19th/ https://kannadanewsnow.com/kannada/what-are-the-duties-of-gram-panchayat-watermen-pump-operators-and-mechanics-in-the-state-here-is-the-information/
ಬೆಂಗಳೂರು: ಬಿಜೆಪಿ ನಾಯಕರು ‘ಲಾಲ್ಬಾಗ್ ಉಳಿಸಿ’ ಎಂದು ನಾಟಕವಾಡುತ್ತಿದ್ದಾರೆ. ಲಾಲ್ಬಾಗ್ ಬಗ್ಗೆ ನಿಮ್ಮದು ಕಾಳಜಿಯೋ? ರಾಜಕೀಯವೋ? ಎಂಬುದಾಗಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಪ್ರಶ್ನಿಸಿದ್ದಾರೆ. ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ನಿಮಗೆ ಲಾಲ್ಬಾಗ್ ಬಗ್ಗೆ ನಿಜವಾಗಿಯೂ ಕಾಳಜಿ ಇದ್ದರೆ, ಇಡೀ ಯೋಜನೆಯನ್ನು ರದ್ದುಪಡಿಸಲು ಹಠ ಹಿಡಿಯುವ ಬದಲು, ಸುರಂಗದ ಪ್ರವೇಶ ಮತ್ತು ನಿರ್ಗಮನಕ್ಕೆ ಪರ್ಯಾಯ ಜಾಗವನ್ನು ಸೂಚಿಸುವ ಧೈರ್ಯ ತೋರಿ. ಅದನ್ನು ಬಿಟ್ಟು, ಜನರ ದಾರಿ ತಪ್ಪಿಸುವ ರಾಜಕೀಯ ಗಿಮಿಕ್ ಏಕೆ? ಎಂದು ಕೇಳಿದ್ದಾರೆ. ನಿಮ್ಮ ದ್ವಂದ್ವ ನೀತಿಗೆ ಇದಕ್ಕಿಂತ ಸಾಕ್ಷಿ ಬೇಕೇ? ಎಂಬುದಾಗಿ ಈ ಕೆಳಗಿನಂತೆ ಪಟ್ಟಿ ನೀಡಿದ್ದಾರೆ. ಡಾ. ಎಂ.ಎಚ್. ಮರಿಗೌಡರು ಲಾಲ್ಬಾಗ್ ಅನ್ನು 240 ಎಕರೆಗೆ ವಿಸ್ತರಿಸಿ, ತೋಟಗಾರಿಕಾ ಕ್ಷೇತ್ರಕ್ಕೆ ಮಹತ್ತರ ಕೊಡುಗೆ ನೀಡಿದರು. 2003ರಲ್ಲಿ ಕಾಂಗ್ರೆಸ್ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದ ಶ್ರೀ ಎಸ್ಎಂ ಕೃಷ್ಣ ಅವರು ಲಾಲ್ಬಾಗ್ನ ಪುನರುಜ್ಜೀವನಕ್ಕಾಗಿ ₹17 ಕೋಟಿ ಮಂಜೂರು ಮಾಡಿದ್ದರು. ಎರಡು ಬಾರಿ ಅಧಿಕಾರದಲ್ಲಿದ್ದ ಬಿಜೆಪಿ ಲಾಲ್ಬಾಗ್ಗೆ ಏನು ಕೊಡುಗೆ…
ವಿಜಯಪುರ: ಜನಪ್ರತಿನಿಧಿ ಅಂದ್ರೆ ತಮ್ಮನ್ನು ಅರಸಿ ಬರುವಂತ ಜನರ ಕಷ್ಟವನ್ನು ಕೇಳಿ, ಅದಕ್ಕೆ ಸೂಕ್ತ ರೀತಿಯಲ್ಲಿ ಪ್ರತಿಸ್ಪಂದಿಸೋದು. ಹೀಗೆ ಪ್ರತಿಸ್ಪಂದಿಸಿದಾಗಲೇ ಜನಪ್ರತಿನಿಧಿ ಅಂದ್ರೆ ಹೀಗೆ ಇರಬೇಕು ಎಂಬುದಾಗೇ ಅನೇಕರು ಹೇಳುತ್ತಾರೆ. ಇದಕ್ಕೆ ಸಾಕ್ಷಿ ಎನ್ನುವಂತೆ ಸಚಿವ ಎಂ.ಬಿ ಪಾಟೀಲ್ 6 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಎಂಬಿಬಿಎಸ್ ಶಿಕ್ಷಣ ನೆರವೇರಿಸಲು ಲಕ್ಷ ಲಕ್ಷ ಆರ್ಥಿಕ ನೆರವಿನ ಸಹಾಯ ಹಸ್ತ ಚಾಚಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿರುವಂತ ಅವರು, ವಿಜಯಪುರ ಜಿಲ್ಲೆಯ 6 ಪ್ರತಿಭಾವಂತ ವಿದ್ಯಾರ್ಥಿಗಳಿಗೆ MBBS ಶಿಕ್ಷಣಕ್ಕೆ ನೆರವಾಗಿದ್ದೇನೆ. ನೀಟ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಸರ್ಕಾರಿ ಕೋಟಾದಡಿ MBBS ಸೀಟು ಪಡೆದರೂ, ಆರ್ಥಿಕ ಅಡಚಣೆಯಿಂದಾಗಿ ತಮ್ಮ ಕನಸಿನ ಶಿಕ್ಷಣವನ್ನು ಮುಂದುವರಿಸಲಾಗದೆ ಕಷ್ಟಪಡುತ್ತಿದ್ದ 6 ಮಂದಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನೆರವು ನೀಡಿದ ಸಂತಸ ನನ್ನದು ಎಂದಿದ್ದಾರೆ. ಈ ಕೆಳಕಂಡ ವಿದ್ಯಾರ್ಥಿಗಳು ಎಂಬಿಬಿಎಸ್ ವ್ಯಾಸಂಗ ಮುಗಿಸಲು ಸಚಿವ ಎಂ.ಬಿ ಪಾಟೀಲ್ ಆರ್ಥಿಕ ನೆರವು ಬಾಬಾನಗರದ ಕೃಷಿ ಕಾರ್ಮಿಕ ಗಣಪತಿ ಶಿಂಧೆ ಅವರ ಪುತ್ರಿ…
ಕೊಪ್ಪಳ: ರಾಜ್ಯದಲ್ಲಿ ಸಿಎಂ, ಕೆಪಿಸಿಸಿ ಅಧ್ಯಕ್ಷರ ಹುದ್ದೆ ಖಾಲಿಯಿಲ್ಲ. 2028ರವರೆಗೆ ಸಿದ್ಧರಾಮಯ್ಯನವರೇ ಮುಖ್ಯಮಂತ್ರಿಯಾಗಿ ಇರಲಿದ್ದಾರೆ. ಆ ಬಳಿಕ ಡಿ.ಕೆ ಶಿವಕುಮಾರ್ ಸಿಎಂ ಆಗಬೇಕು ಎಂಬುದು ನನ್ನ ಆಸೆಯಾಗಿದೆ ಎಂಬುದಾಗಿ ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಸಿಎಂ ಆಗಬೇಕು ಎನ್ನುವಂತ ಆಸೆ ಎಲ್ಲರಿಗೂ ಇರುತ್ತದೆ. ಡಿ.ಕೆ ಶಿವಕುಮಾರ್ ಅವರ ಅಭಿಮಾನಿಗಳು ಕೂಡ ಆಸೆಯನ್ನು ಇಟ್ಟುಕೊಂಡಿರುತ್ತಾರೆ. ಸಿಎಂ ಸಿದ್ಧರಾಮಯ್ಯ ಅವರಿಗೆ ಎಲ್ಲಾ ಶಾಸಕರ ಬೆಂಬಲವಿದ್ದು, ಅವರೇ ಪೂರ್ಣ ಅವಧಿಗೆ ಮುಖ್ಯಮಂತ್ರಿ ಆಗಿರುತ್ತಾರೆ. ಆ ಬಳಿಕ ಹೈಕಮಾಂಡ್ ತೀರ್ಮಾನ ಕೈಗೊಳ್ಳುತ್ತದೆ ಎಂದರು. ಡಿ.ಕೆ ಶಿವಕುಮಾರ್ ಅವರು ಅಪಾರ ದೈವಭಕ್ತರಾಗಿದ್ದಾರೆ. ಮೊದಲಿನಿಂದಲೂ ಅವರು ದೇವಸ್ಥಾನಗಳಿಗೆ ಹೋಗುವುದು ಸಾಮಾನ್ಯವಾಗಿದೆ. ಅವರು ದೇವಸ್ಥಾನಕ್ಕೆ ಹೋಗೋದಕ್ಕೂ, ಮುಖ್ಯಮಂತ್ರಿ ಸ್ಥಾನದ ಪೈಪೋಟಿಗೂ ಯಾವುದೇ ಸಂಬಂಧವಿಲ್ಲ. ನವೆಂಬರ್ ನಲ್ಲಿ ರಾಜ್ಯದಲ್ಲಿ ಯಾವುದೇ ಕ್ರಾಂತಿಯೂ ನಡೆಯೋದಿಲ್ಲ. ಇದೆಲ್ಲವೂ ಬಿಜೆಪಿಯ ಕಟ್ಟು ಕಥೆ ಎಂದರು. https://kannadanewsnow.com/kannada/safari-shutdown-if-human-wildlife-conflict-in-bandipur-mysore-not-brought-to-a-standstill-minister-eshwar-khandre/ https://kannadanewsnow.com/kannada/another-good-news-for-the-women-of-the-state-akka-pade-to-be-launched-on-november-19th/
ಚಾಮರಾಜನಗರ: ಬಂಡೀಪುರ, ಮೈಸೂರು ಜಿಲ್ಲೆಯಲ್ಲಿ ಮಾನವ-ವನ್ಯಜೀವಿ ಸಂಘರ್ಷ ಹೆಚ್ಚುತ್ತಿದ್ದು, ಇದು ತಹಬಂದಿಗೆ ಬಾರದಿದ್ದರೆ ಸಫಾರಿಯನ್ನು ಸಂಪೂರ್ಣ ಬಂದ್ ಮಾಡುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಎಚ್ಚರಿಕೆ ನೀಡಿದ್ದಾರೆ. ಚಾಮರಾಜನಗರದ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ನಡೆದ ಅರಣ್ಯ, ಕಂದಾಯ ಮತ್ತು ಪೊಲೀಸ್ ಇಲಾಖೆಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ವನ್ಯಜೀವಿ- ಮಾನವ ಸಂಘರ್ಷ ಇರುವ ಸ್ಥಳದಲ್ಲಿ ಹೆಚ್ಚಿನ ಸಿಬ್ಬಂದಿ ನಿಯೋಜಿಸಲು ಸಿಬ್ಬಂದಿ ಕೊರತೆ ಎನ್ನುತ್ತೀರಿ. ಹಾಗಾದರೆ ಸಫಾರಿಗೆ ನಿಯೋಜಿಸಿರುವ ಸಿಬ್ಬಂದಿಯನ್ನೇ ಅಲ್ಲಿಗೆ ನಿಯೋಜಿಸಬೇಕಾಗುತ್ತದೆ ಎಂದು ಹೇಳಿದರು. ಮಾನವ-ವನ್ಯಜೀವಿ ಸಂಘರ್ಷ ತಪ್ಪಿಸಲು ಅರಣ್ಯ ಇಲಾಖೆ ಕಂದಾಯ ಮತ್ತು ಪೊಲೀಸ್ ಇಲಾಖೆಯೊಂದಿಗೆ ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು. ಸಮನ್ವಯದ ಕೊರತೆ, ಪರಸ್ಪರ ದೋಷಾರೋಪವನ್ನು ಸರ್ಕಾರ ಕ್ಷಮಿಸುವುದಿಲ್ಲ ಸಬೂಬುಗಳಿಗೆ ಅವಕಾಶವಿಲ್ಲ. ಎಲ್ಲ ಇಲಾಖೆಗಳೂ ಜೊತೆಗೂಡಿ ಮಾನವ- ವನ್ಯಜೀವಿ ಸಂಘರ್ಷ ನಿಯಂತ್ರಿಸಬೇಕು ಎಂದು ಸೂಚಿಸಿದರು. ಆನೆ, ಹುಲಿಗಳ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದೆ. ಇದು ನಿಮಗೂ ತಿಳಿದಿದೆ. ಹೆಚ್ಚುತ್ತಿರುವ ಪ್ರಾಣಿಗಳಿಗೆ ಅನುಗುಣವಾಗಿ ಅರಣ್ಯ ಪ್ರದೇಶ ಹೆಚ್ಚಳ ಮಾಡಲು…
ಬೆಂಗಳೂರು: ಎಂಬಿಎ, ಎಂಸಿಎ, ಎಂಇ, ಎಂ.ಟೆಕ್, ಎಂ.ಆರ್ಕ್ ಕೋರ್ಸ್ ಗಳ ಪ್ರವೇಶಕ್ಕೆ ಮೂರನೇ ಸುತ್ತಿನ ಸೀಟು ಹಂಚಿಕೆಗೆ ಇಚ್ಛೆ/ಆಯ್ಕೆಗಳನ್ನು ದಾಖಲಿಸಲು ನ.4ರಿಂದ 6ರವರೆಗೆ ಅವಕಾಶ ನೀಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ. 3ನೇ ಸುತ್ತಿನಲ್ಲಿ ಲಭ್ಯವಿರುವ ಸೀಟುಗಳ ವಿವರಗಳನ್ನು ನ.4ರಂದು KEA ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗುತ್ತದೆ. ಆಸಕ್ತರು ₹25,000 ಕಾಷನ್ ಡೆಪಾಸಿಟ್ ಕಟ್ಟಿ ಇಚ್ಛೆ/ಆಯ್ಕೆಗಳನ್ನು ದಾಖಲಿಸಬಹುದು ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ನ.7ರಂದು ಮಧ್ಯಾಹ್ನ 2ಗಂಟೆಗೆ ತಾತ್ಕಾಲಿಕ ಫಲಿತಾಂಶ ಪ್ರಕಟ. ನ.8ರಂದು ಮಧ್ಯಾಹ್ನ 2 ಗಂಟೆಗೆ ಅಂತಿಮ ಫಲಿತಾಂಶ ಪ್ರಕಟಿಸಲಾಗುತ್ತದೆ. ಸೀಟು ಹಂಚಿಕೆಯಾದವರು ನ.10ರಿಂದ 12ರವರೆಗೆ ಶುಲ್ಕ ಕಟ್ಟಿ ಸೀಟು ಖಾತರಿ ಚೀಟಿ ಡೌನ್ಲೋಡ್ ಮಾಡಿಕೊಂಡು ನ.13ರೊಳಗೆ ಕಾಲೇಜುಗಳಿಗೆ ವರದಿ ಮಾಡಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದ್ದಾರೆ. ಮೊದಲ ಮತ್ತು ಎರಡನೇ ಸುತ್ತಿನಲ್ಲಿ ಸಿಕ್ಕಿರುವ ಸೀಟು ರದ್ದುಪಡಿಸಿಕೊಳ್ಳಲು ನ.6ರವರೆಗೆ ಅವಕಾಶ ನೀಡಲಾಗಿದೆ. ಸೀಟು ರದ್ದುಪಡಿಸಿಕೊಂಡವರಿಗೆ 3ನೇ ಸುತ್ತಿನಲ್ಲಿ ಭಾಗವಹಿಸಲು ಅವಕಾಶ ಇರುವುದಿಲ್ಲ ಎಂದು ಅವರು…














