Author: kannadanewsnow09

ಮಡಿಕೇರಿ: ಇಲ್ಲಿನ ತಲಕಾವೇರಿಯಲ್ಲಿ ಅಕ್ಟೋಬರ್‌ 17ರಂದು ಬೆಳಗ್ಗೆ 7.40ಕ್ಕೆ ನಡೆಯಲಿರುವ ಶ್ರೀಕಾವೇರಿ ತುಲಾಸಂಕ್ರಮಣ ಪವಿತ್ರ ತೀರ್ಥೋದ್ಭವ ನಡೆಯಲಿದೆ. ಈ ಸಂದರ್ಭದಲ್ಲಿ ಕಲ್ಯಾಣಿ ಮತ್ತು ಪವಿತ್ರ ಬ್ರಹ್ಮಕುಂಡಿಕೆ ಬಳಿ ಪ್ಲಾಸ್ಟಿಕ್‌ ಬಾಟಲಿ, ಬಿಂದಿಗೆ ಮತ್ತು ಕ್ಯಾನ್‌ಗಳ ಬಳಕೆಯನ್ನು ಸಂಪೂರ್ಣ ನಿಷೇಧಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ʼತೀರ್ಥೋದ್ಭವವಾಯಿತುʼ ಎಂದು ಅರ್ಚಕರು ಘೋಷಿಸುತ್ತಿದ್ದಂತೆ ಸಾಮಾನ್ಯವಾಗಿ ಕಲ್ಯಾಣಿಗೆ ಪ್ಲಾಸ್ಟಿಕ್‌ ಬಿಂದಿಗೆ, ಕ್ಯಾನ್‌, ಬಾಟಲಿಗಳನ್ನು ಹಿಡಿದು ಧುಮುಕುವ ಭಕ್ತರು ಬ್ರಹ್ಮಕುಂಡಿಕೆ ಬಳಿ ತೀರ್ಥವನ್ನು ಅದರಲ್ಲೇ ತುಂಬಿಸಿಕೊಳ್ಳುತ್ತಾರೆ. ಹಾಗಾಗಿ ತೀರ್ಥ ತುಂಬಿಸಿಕೊಳ್ಳಲು ಪ್ಲಾಸ್ಟಿಕ್‌ ಪರಿಕರಗಳನ್ನು ನಿಷೇಧಿಸಲಾಗಿದೆ. https://twitter.com/KarnatakaVarthe/status/1846153349923557421 https://kannadanewsnow.com/kannada/good-news-for-those-who-are-going-on-a-pilgrimage-to-karnataka-bharat-gaurav-south-constituencies-from-the-state-government/ https://kannadanewsnow.com/kannada/people-of-bengaluru-call-this-helpline-number-for-complaints-related-to-rain-havoc/

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಕರ್ನಾಟಕ ಭಾರತ್ ಗೌರವ್ ದಕ್ಷಿಣ ಕ್ಷಏತ್ರಗಳ ಯಾತ್ರೆಗೆ ತೆರಳೋರಿಗೆ ಗುಡ್ ನ್ಯೂಸ್ ನೀಡಲಾಗಿದೆ. ಅದೇನೆಂದರೇ ಇದಕ್ಕೆ ತಗಲುವಂತ ಮೊತ್ತದಲ್ಲಿ ಸರ್ಕಾರವೇ 15,000 ಪಾವತಿಸಲಿದೆ. ಧಾರ್ಮಿಕ ದತ್ತಿ ಇಲಾಖೆಯಿಂದ ಕರ್ನಾಟಕ ಭಾರತ್‌ ಗೌರವ್‌ ದಕ್ಷಿಣ ಕ್ಷೇತ್ರಗಳ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ. ರಾಮೇಶ್ವರ, ಕನ್ಯಾಕುಮಾರಿ, ಮಧುರೈ, ತಿರುವನಂತಪುರಂ ಕ್ಷೇತ್ರಗಳನ್ನು ಒಳಗೊಂಡ 6 ದಿನಗಳ ಪ್ರವಾಸ ಇದಾಗಿದೆ. ಈ ಪ್ಯಾಕೇಜ್‌ಗೆ ಒಟ್ಟು ₹25,000 ತಗುಲಲಿದ್ದು, ಈ ಪೈಕಿ ಕರ್ನಾಟಕ ಸರ್ಕಾರದ ವತಿಯಿಂದ ₹10,000 ಭರಿಸಲಾಗುತ್ತದೆ. ಹಾಗೂ ಸಹಾಯಧನ ₹5,000 ಒಳಗೊಂಡಿರುತ್ತದೆ. ಯಾತ್ರಾರ್ಥಿಗಳು ಬುಕ್ಕಿಂಗ್‌ ಮೊತ್ತವಾಗಿ ₹10,000 ಮಾತ್ರ ಪಾವತಿಸಬೇಕಾಗುತ್ತದೆ. ಪ್ರಯಾಣಿಸುವಾಗ ಆಧುನಿಕ ಪ್ಯಾಂಟ್ರಿ ಕಾರಿನಲ್ಲಿ ತಯಾರಿಸಿದ ತಾಜಾ ಸ್ಥಳೀಯ ಆಹಾರವನ್ನು ನೀಡಲಾಗುತ್ತದೆ. 3 ಟೈರ್‌ ಎ.ಸಿ. ರೈಲಿನಲ್ಲಿ ಪ್ರಯಾಣ, ಊಟ, ವಸತಿ, ಸ್ಥಳೀಯ ಸಾರಿಗೆ ಮತ್ತು ದರ್ಶನದ ವ್ಯವಸ್ಥೆ ಇರುತ್ತದೆ. ಯಾತ್ರಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ವೈದ್ಯಕೀಯ ಸಹಾಯ ವ್ಯವಸ್ಥೆ ಇರುತ್ತದೆ. ಟಿಕೆಟ್‌ ಬುಕ್ಕಿಂಗ್‌ಗಾಗಿ https://irctctourism.com/Karnatakbgaurav?searchKey=&tagType=&travelType=Domestic&sector=All&bdar=6… ವೆಬ್‌ಸೈಟ್‌ಗೆ ಭೇಟಿ ನೀಡಬಹುದು. ಅಥವಾ 9003140710, 8595931292,…

Read More

ಸ್ವೀಡನ್: ಸ್ವೀಡನ್ ನಲ್ಲಿ ಕೈಲಿಯನ್ ಎಂಬಪೆ ವಿರುದ್ಧ ಅತ್ಯಾಚಾರದ ತನಿಖೆ ನಡೆಯುತ್ತಿದೆ ಎಂದು ಸ್ವೀಡನ್ ಮಾಧ್ಯಮ ವರದಿಯೊಂದು ಹೇಳಿದೆ. ಆದಾಗ್ಯೂ, ಫ್ರೆಂಚ್ ಫುಟ್ಬಾಲ್ ತಾರೆ ತಾನು ‘ನಕಲಿ ಸುದ್ದಿ’ಗೆ ಬಲಿಯಾಗಿದ್ದೇನೆ ಎಂದು ಹೇಳಿದ್ದಾರೆ, ಈ ವರದಿಯಲ್ಲಿ ಮಾಡಿದ ಹೇಳಿಕೆಗಳ ಬಗ್ಗೆ ಯಾವುದೇ ಸತ್ಯಾಸತ್ಯತೆಯನ್ನು ನಿರಾಕರಿಸಿದ್ದಾರೆ. ವಿಶೇಷವೆಂದರೆ, ಈ ಸುದ್ದಿಯನ್ನು ಮೊದಲು ಸ್ವೀಡಿಷ್ ಪತ್ರಿಕೆ ಅಫ್ಟಾನ್ಬ್ಲಾಡೆಟ್ ಬಿಚ್ಚಿಟ್ಟಿತು ಆದರೆ ಆರೋಪಿಗಳ ಹೆಸರನ್ನು ಹೇಳಲಿಲ್ಲ. ನಂತರ, ಎಕ್ಸ್ಪ್ರೆಸೆನ್ ಎಂಬಪೆಯನ್ನು ಪ್ರಮುಖ ಶಂಕಿತ ಎಂದು ಹೆಸರಿಸಿದನು. “ಎಕ್ಸ್ಪ್ರೆಸ್ಸೆನ್ ಪಡೆದ ಮಾಹಿತಿಯ ಪ್ರಕಾರ, ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯದ ಬಗ್ಗೆ ಸಮಂಜಸವಾಗಿ ಶಂಕಿಸಲಾಗಿರುವ ತಾರೆಯ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ” ಎಂದು ಪತ್ರಿಕೆ ಬರೆದಿದೆ. ಸ್ವೀಡಿಷ್ ಕಾನೂನು ಜಾರಿದಾರರು ಅನುಮಾನದ ಮಟ್ಟವನ್ನು ಸಮಂಜಸ ಅಥವಾ ಸಂಭವನೀಯ ಎಂದು ವರ್ಗೀಕರಿಸಿದ್ದಾರೆ. ಎಮ್ಬಾಪೆಯನ್ನು ‘ಸಮಂಜಸವಾದ ಶಂಕಿತ’ ಎಂದು ಹೆಸರಿಸಿರುವುದರಿಂದ ಅವನು ಕಡಿಮೆ ಮಟ್ಟದ ಅನುಮಾನದ ಶಂಕಿತನಾಗಿದ್ದಾನೆ ಎಂದರ್ಥ. ಆದಾಗ್ಯೂ, ತಾನು “ನಕಲಿ ಸುದ್ದಿ”ಗೆ ಬಲಿಯಾಗಿದ್ದೇನೆ ಎಂದು ಎಮ್ಬಾಪೆ ಹೇಳಿದ್ದಾರೆ. https://twitter.com/KMbappe/status/1845840989878980885…

Read More

ಬೆಂಗಳೂರು: ನಗರದಲ್ಲಿ ಭಾರೀ ಮಳೆಯಿಂದಾಗಿ ಅವಾಂತರವೇ ಸೃಷ್ಠಿಯಾಗಿದೆ. ಮಳೆಯ ಕಾರಣದಿಂದಾಗಿ ನಾಳೆ ಬೆಂಗಳೂರಿನ ಶಾಲೆ, ಅಂಗನವಾಡಿ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಜಗದೀಶ್ ರಜೆಯನ್ನು ಘೋಷಿಸಿ ಆದೇಶಿಸಿದ್ದಾರೆ. ಇದರ ನಡುವೆ ಮಳೆ ಅವಾಂತರ ಸಂಬಂಧಿತ ದೂರುಗಳಿಗಾಗಿ ಬಿಬಿಎಂಪಿಯ ಸಹಾಯವಾಣಿ ಸಂಖ್ಯೆಗೆ ಕರೆ ಮಾಡುವಂತೆ ಮನವಿ ಮಾಡಿದೆ. ಪತ್ರಿಕಾ ಪ್ರಕಟಣೆಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ತಿಳಿಸಿದ್ದು, ನಗರದ 8 ವಲಯ ವ್ಯಾಪ್ತಿಯಲ್ಲಿ 8 ನಿಯಂತ್ರಣ ಕೊಠಡಿಗಳಿದ್ದು, ಪಾಲಿಕೆ ಕೇಂದ್ರ ಕಛೇರಿಯಲ್ಲಿ 1 ನಿಯಂತ್ರಣ ಕೊಠಡಿಯಿದೆ. ಮಳೆಯಿಂದಾಗಿ ಏನಾದರು ಸಮಸ್ಯೆಗಳಿದ್ದರೆ ನಾಗರೀಕರು ಕೂಡಲೆ ಪಾಲಿಕೆಯ ಉಚಿತ ಸಹಾಯವಾಣಿ ಸಂಖ್ಯೆಯಾದ 1533ಗೆ ಕರೆ ಮಾಡಿ ದೂರು ನೀಡಬಹುದಾಗಿದೆ. ಸದರಿ ದೂರಗಳನ್ನು ಸಂಬಂಧಪಟ್ಟ ವಲಯ ಹಾಗೂ ಅಧಿಕಾರಿಗಳ ಗಮನಕ್ಕೆ ತಂದು ಶೀಘ್ರವಾಗಿ ಸಮಸ್ಯೆ ಬಗೆಹರಿಸುವ ಕೆಲಸ ಮಾಡಲಾಗುತ್ತದೆ ಎಂದು ತಿಳಿದೆ. https://kannadanewsnow.com/kannada/those-who-set-bombs-and-fires-in-the-state-are-patriots-chalavadi-narayanasamy/ https://kannadanewsnow.com/kannada/raichur-three-children-killed-as-boulder-falls-on-them/

Read More

ರಾಯಚೂರು: ಜಿಲ್ಲೆಯಲ್ಲಿ ಧಾರುಣ ಘಟನೆಯೊಂದು ಜರುಗಿದೆ. ಹೊಲದ ಬದುವಿನಲ್ಲಿ ಹಾಕಿದ್ದಂತ ಕಲ್ಲಿನ ಬಂಡೆಯೊಂದು ಉಳುರಿ ಬಿದ್ದು ಇಬ್ಬರು ಮಕ್ಕಳು ದುರ್ಮರಣಹೊಂದಿದ್ದರೇ, ಓರ್ವ ಮಗುವಿನ ಕಾಲು ಮುರಿದಿರುವಂತ ಘಟನೆ ನಡೆದಿದೆ. ರಾಯಚೂರು ಜಿಲ್ಲೆಯ ಲಿಂಗಸೂರು ತಾಲ್ಲೂಕಿನ ಗೌಡಹಳ್ಳಿಯ ತಾಂಡಾದಲ್ಲಿ ಇಂದು ಈ ದುರ್ಘಟನೆ ನಡೆದಿದೆ. ಶಾಲೆಗಳಿಗೆ ರಜೆಯಿದ್ದ ಕಾರಣ, ಮಕ್ಕಳನ್ನು ತಮ್ಮ ಹೊಲಕ್ಕೆ ಲಚ್ಚಪ್ಪ ಎಂಬುವರು ಕರೆದೊಯ್ದಿದ್ದರು. ಜಮೀನಿನಲ್ಲಿದ್ದಂತ ಕಲ್ಲುಗಳನ್ನು ಕೀಳಿಸಿ ಬದುವಿನ ಮೇಲೆ ಹಾಕಲಾಗಿತ್ತು. ಇಂತಹ ಕಲ್ಲುಗಳನ್ನು ಸುತ್ತುವರೆಯುವಂತ ಆಟ ಆಡುತ್ತಿದ್ದಂತ ವೇಳೆಯಲ್ಲಿ ಕಲ್ಲು ಬಂಡೆ ಉರುಳಿ ಸ್ಥಳದಲ್ಲೇ ಮಂಜುನಾಥ್(9) ಹಾಗೂ ವೈಶಾಲಿ(8) ಎಂಬ ಮಕ್ಕಳು ಸಾವನ್ನಪ್ಪಿದ್ದಾವೆ. ಮತ್ತೊಂದು ಮಗು 7 ವರ್ಷದ ರಘು ಕಾಲು ಮುರಿದಿದೆ. ಈ ಸಂಬಂಧ ಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/those-who-set-bombs-and-fires-in-the-state-are-patriots-chalavadi-narayanasamy/ https://kannadanewsnow.com/kannada/bjp-mla-munirathna-granted-bail-in-rape-case/

Read More

ದಕ್ಷಿಣ ಕನ್ನಡ: ರಾಜ್ಯದಲ್ಲಿ ಯಾರು ಬಾಂಬ್, ಬೆಂಕಿ ಹಾಕ್ತಾರೋ ದೇಶಪ್ರೇಮಿಗಳು. ಪಾಕಿಸ್ತಾನ್ ಜಿಂದಾಬಾದ್ ಅಂದವರು ದೇಶಪ್ರೇಮಿಗಳು, ಭಾರತ್ ಮಾತಕೀ ಜೈ ಎಂದವರು ದೇಶದ್ರೋಹಿಗಳು ಎಂಬುದಾಗಿ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾಧಿ ನಾರಾಯಣಸ್ವಾಮಿ ಕಿಡಿ ಕಾರಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಇಂದು ವಿಧಾನಪರಿಷತ್ ಉಪ ಚುನಾವಣೆ ಸಂಬಂಧ ನಡೆದ ಬಿಜೆಪಿ ಜನಪ್ರತಿನಿಧಿಗಳ ಸಮಾವೇಶದ ಸಂದರ್ಭದಲ್ಲಿ ಅವರು ಮಾತನಾಡಿದರು. ರಾಜ್ಯದಲ್ಲಿ ಪಾಕಿಸ್ತಾನ ಜಿಂದಾಬಾದ್ ಎನ್ನುವವರು ದೇಶಪ್ರೇಮಿಗಳು; ಭಾರತ್ ಮಾತಾಕಿ ಜೈ ಎನ್ನುವವರು ದೇಶದ್ರೋಹಿಗಳು ಎಂಬ ಸ್ಥಿತಿ ಇದೆ. ಯಾರು ಬಾಂಬ್ ಹಾಕುತ್ತಾರೋ, ಬೆಂಕಿ ಹಾಕುತ್ತಾರೋ, ಕಾನೂನು ಕೈಗೆ ತೆಗೆದುಕೊಳ್ಳುವವರು ದೇಶಪ್ರೇಮಿಗಳು ಎಂಬಂತಾಗಿದೆ ಎಂದು ಟೀಕಿಸಿದರು. ಮಾಜಿ ಮುಖ್ಯಮಂತ್ರಿ ಸದಾನಂದ ಗೌಡ ಅವರು ಮಾತನಾಡಿ, ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ತುಷ್ಟೀಕರಣ ನೀತಿ ತುತ್ತತುದಿಗೆ ಮುಟ್ಟಿದೆ. ಭ್ರಷ್ಟಾಚಾರ ಮಿತಿ ಮೀರಿದೆ. ಇಂಥ ಆಡಳಿತದ ವಿರುದ್ಧ ಸೆಟೆದು ನಿಲ್ಲಬೇಕಿದೆ ಎಂದು ತಿಳಿಸಿದರು. ಸಂಸದ ಬ್ರಿಜೇಶ್ ಚೌಟ ಅವರು ಮಾತನಾಡಿ, ಇದು ಕಾರ್ಯಕರ್ತರಿಗೆ ಹುಮ್ಮಸ್ಸು…

Read More

ಬೆಂಗಳೂರು: ಹುಬ್ಬಳ್ಳಿಯ ಗಲಭೆ ಪ್ರಕರಣಗಳನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಹಿಂಪಡೆದಿದೆ. ರಾಜ್ಯ ಸರ್ಕಾರದ ನಿರ್ಧಾರದಿಂದ ಬಿಜೆಪಿ ಸಿಡಿದೆದ್ದಿತ್ತು. ಈ ಪ್ರಕರಣದ ಬಗ್ಗೆ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಪ್ರಧಾನಿ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಕೇಂದ್ರ ಸಚಿವರಿಗೆ ಪತ್ರವನ್ನು ಬರೆದಿದ್ದಾರೆ. ಹೌದು ರಾಜ್ಯ ಸರ್ಕಾರವು ಹಳೇ ಹುಬ್ಬಳ್ಳಿ ಕಲಭೆ ಪ್ರಕರಣಗಳನ್ನು ಹಿಂಪಡೆದ ನಿರ್ಧಾರವನ್ನು ಪ್ರಶ್ನಿಸಿ, ಸೂಕ್ತ ಕ್ರಮ ಕೈಗೊಳ್ಳುವಂತೆ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವ ಗೃಹ ಸಚಿವ ಅಮಿತ್ ಶಾ, ಕೇಂದ್ರ ಸಚಿವ ಅರ್ಜುನ್ ರಾಮ್ ಮೇಘವಾಲ್, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಗೆ ಪತ್ರ ಬರೆದಿದ್ದಾರೆ. ಅವರು ಬರೆದಿರುವಂತ ಪತ್ರದಲ್ಲಿ ಹಳೇ ಹುಬ್ಬಳ್ಳಿ ಗಲಭೆ ಸಂಬಂಧ ಕೇಸ್ ಹಿಂಪಡೆದ ಬಗ್ಗೆ ರಾಜ್ಯ ಸರ್ಕಾರಕ್ಕೆ ಮರು ಪರಿಶೀಲನೆಗೆ ನಿರ್ದೇಶಿಸುವಂತೆ ಮನವಿ ಮಾಡಿದ್ದಾರೆ. ಇದರ ನಡುವೆ ಸಿಎಂ ಸಿದ್ಧರಾಮಯ್ಯ ಅವರು ರಾಜ್ಯ ಸರ್ಕಾರಕ್ಕೆ ಕೇಸ್ ಹಿಂಪಡೆಯುವ…

Read More

ಬೆಂಗಳೂರು: ನಗರದಲ್ಲಿ ಸೋಮವಾರ ರಾತ್ರಿಯಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಬುಧವಾರ ಎಲ್ಲಾ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್ ಜಿ, ‘ಸದ್ಯಕ್ಕೆ ಶಾಲಾ-ಕಾಲೇಜುಗಳಿಗೆ ಅಕ್ಟೋಬರ್.16ರ ನಾಳೆ ರಜೆ ಘೋಷಿಸಲಾಗಿದೆ. ಕೆಲವು ವಿಶ್ವವಿದ್ಯಾಲಯಗಳಲ್ಲಿ ಪರೀಕ್ಷೆಗಳು ನಡೆಯುತ್ತಿವೆ. ಕಾಲೇಜುಗಳಿಗೆ ರಜೆ ಘೋಷಿಸುವ ಬಗ್ಗೆ ನಿರ್ಧರಿಸಲು ನಾವು ವಿವರಗಳನ್ನು ಪರಿಶೀಲಿಸುತ್ತಿದ್ದೇವೆ ಎಂದರು. ಮಹರ್ಷಿ ವಾಲ್ಮೀಕಿ ಜಯಂತಿ ಪ್ರಯುಕ್ತ ಗುರುವಾರ ಸಾರ್ವಜನಿಕ ರಜೆ ಇರುವುದರಿಂದ ಬುಧವಾರ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ನಾಳೆ ವಿವಿಗಳಿಗೆ ರಜೆ ನೀಡುವ ಸಂಬಂಧ ಚರ್ಚಿಸಲಾಗುತ್ತದೆ. ಕೆಲ ವಿವಿಗಳ ಪರೀಕ್ಷೆ ನಡೆಯುತ್ತಿದೆ. ಮರು ಪರೀಕ್ಷೆಗೆ ದಿನಾಂಕ ನಿಗದಿ ಪಡಿಸುವುದು ಕಷ್ಟಕರವಾಗಿದೆ. ಹೀಗಾಗಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು. https://kannadanewsnow.com/kannada/jio-launches-new-4g-feature-phone-jiobharat-v3-v4-just-rs-1099/ https://kannadanewsnow.com/kannada/bjp-mla-munirathna-granted-bail-in-rape-case/

Read More

ನವದೆಹಲಿ : ನವದೆಹಲಿಯಲ್ಲಿ ನಡೆಯುತ್ತಿರುವ ಇಂಡಿಯಾ ಮೊಬೈಲ್ ಕಾಂಗ್ರೆಸ್- 2024ರಲ್ಲಿ ರಿಲಯನ್ಸ್ ಜಿಯೋದಿಂದ ಎರಡು ಹೊಸ 4ಜಿ ಫೀಚರ್ ಫೋನ್‌ಗಳನ್ನು ಬಿಡುಗಡೆ ಮಾಡಿದೆ. V3 ಮತ್ತು V4 ಎರಡೂ ಜಿಯೋಭಾರತ್ (JioBharat) ಸರಣಿ ಅಡಿಯಲ್ಲಿ ಬಿಡುಗಡೆಯಾದ 4ಜಿ ವೈಶಿಷ್ಟ್ಯದ ಫೋನ್ ಗಳಾಗಿವೆ. ಹೊಸ ಮಾಡೆಲ್‌ಗಳು 1099 ರೂಪಾಯಿಗೆ ಮಾರುಕಟ್ಟೆಯಲ್ಲಿ ಬಿಡುಗಡೆ ಆಗಲಿದೆ. ಜಿಯೋಭಾರತ್ V2 ಮಾದರಿಯನ್ನು ಕಳೆದ ವರ್ಷ ಬಿಡುಗಡೆ ಮಾಡಲಾಗಿತ್ತು. ಇದು ಭಾರತೀಯ ಫೀಚರ್ ಫೋನ್ ಮಾರುಕಟ್ಟೆಯಲ್ಲಿ ಸಂಚಲನ ಮೂಡಿಸಿದ್ದು, ಕಂಪನಿಯ ಪ್ರಕಾರ, ಲಕ್ಷಾಂತರ 2ಜಿ ಗ್ರಾಹಕರು ಜಿಯೋಭಾರತ್ ಫೀಚರ್ ಫೋನ್‌ಗಳ ಮೂಲಕ 4ಜಿಗೆ ಬದಲಾಗಿದ್ದಾರೆ. ಮುಂದಿನ ಪೀಳಿಗೆಯ ಈ ಹೊಸ 4ಜಿ ಫೀಚರ್ ಫೋನ್‌ಗಳು ಆಧುನಿಕ ವಿನ್ಯಾಸ, ಶಕ್ತಿಯುತ 1000 mAh ಬ್ಯಾಟರಿ, 128 ಜಿಬಿವರೆಗೆ ವಿಸ್ತರಿಸಬಹುದಾದ ಸಂಗ್ರಹ ಹಾಗೂ 23 ಭಾರತೀಯ ಭಾಷೆಗಳಿಗೆ ಬೆಂಬಲದೊಂದಿಗೆ ಬರುತ್ತವೆ. ಜಿಯೋಭಾರತ್ ಫೋನ್ ಅನ್ನು ಕೇವಲ 123 ರೂಪಾಯಿಗಳಲ್ಲಿ ಮಾಸಿಕ ರೀಚಾರ್ಜ್ ಮಾಡಬಹುದು. ಇದರಲ್ಲಿ ಅನಿಯಮಿತ ಧ್ವನಿ ಕರೆಗಳು ಮತ್ತು 14…

Read More

ಬೆಂಗಳೂರು: ನಟ ದರ್ಶನ್ ಅವರಿಗೆ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ 57ನೇ ಸಿಸಿಹೆಚ್ ನ್ಯಾಯಾಲಯ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಹೀಗಾಗಿ ಮತ್ತೆ ಜಾಮೀನು ಕೋರಿ ನಟ ದರ್ಶನ್ ಹೈಕೋರ್ಟ್ ಗೆ ವಕೀಲರ ಮೂಲಕ ಅರ್ಜಿಯನ್ನು ಸಲ್ಲಿಸಿದ್ದಾರೆ. ನಿನ್ನೆ ನಟ ದರ್ಶನ್ ಸಲ್ಲಿಸಿದ್ದಂತ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ್ದಂತ ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯವು ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಎ2 ಆರೋಪಿಯಾಗಿದ್ದಂತ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ಈ ಹಿನ್ನಲೆಯಲ್ಲಿ ಇಂದು ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಇಂದು ತಮ್ಮ ಪರ ವಕೀಲ ಸುನೀಲ್ ಮೂಲಕ ನಟ ದರ್ಶನ್ ಹೈಕೋರ್ಟ್ ಗೆ ಜಾಮೀನು ಅರ್ಜಿಯನ್ನು ಸಲ್ಲಿಸಿದ್ದಾರೆ. ನಟ ದರ್ಶನ್ ಗೆ ಹೈಕೋರ್ಟ್ ನಿಂದಲಾದರೂ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಜಾಮೀನು ದೊರೆಯುತ್ತಾ ಎಂಬುದನ್ನು ಕಾದು ನೋಡಬೇಕಿದೆ. https://kannadanewsnow.com/kannada/by-elections-to-3-assembly-constituencies-in-karnataka-to-be-held-on-november-13/ https://kannadanewsnow.com/kannada/bjp-mla-munirathna-granted-bail-in-rape-case/

Read More