Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಜನರಿಗೆ ಎ-ಖಾತಾ ನೀಡುವಂತ ನಿರ್ಧಾರವನ್ನು ಸರ್ಕಾರ ಕೈಗೊಂಡಿದೆ. ಅನಧಿಕೃತವಾಗಿ ರಚಿಸಿರುವ ಬಡಾವಣೆಗಳ ಬಿ-ಖಾತಾ ನಿವೇಶನ, ಕಟ್ಟಡ, ಅಪಾರ್ಮೆಂಟ್ ಗಳಿಗೆ ಎ-ಖಾತಾ ನೀಡಲು ಸಚಿವ ಸಂಪುಟ ತೀರ್ಮಾನಿಸಿದೆ. ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸಕ್ಷಮ ಪ್ರಾಧಿಕಾರಗಳಿಂದ ಅನುಮೋದನೆ ಪಡೆಯದೇ ನಿವೇಶನಗಳನ್ನು ರಚಿಸಿರುವ ಅಥವಾ ಮಾರಾಟ ಮಾಡುವ ಪ್ರಕ್ರಿಯೆಯನ್ನು ತಡೆಯುವ ಉದ್ದೇಶದಿಂದ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಣಯವನ್ನು ಕೈಗೊಳ್ಳಲಾಗಿದೆ. ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಈಗಾಗಲೇ ಅನಧಿಕೃತವಾಗಿ ರಚಿಸಿರುವ ಬಡಾವಣೆಗಳ ಬಿ – ಖಾತಾ ನಿವೇಶನ / ಕಟ್ಟಡ / ಅಪಾರ್ಟ್ಮೆಂಟ್ಗಳಿಗೆ ಸಕ್ಷಮ ಪ್ರಾಧಿಕಾರದಿಂದ ಅನುಮೋದನೆ ಪಡೆಯುವ ಷರತ್ತಿಗೆ ಒಳಪಟ್ಟು ಎ – ಖಾತಾ ನೀಡಲು ತೀರ್ಮಾನಿಸಲಾಗಿದೆ. https://twitter.com/KarnatakaVarthe/status/2009247095866192037
BREAKING: 2020-21ನೇ ಸಾಲಿನ ಡಾ.ರಾಜ್ ಕುಮಾರ್, ಪುಟ್ಟಣ್ಣ ಕಣಗಾಲ್, ವಿಷ್ಣವರ್ಧನ್ ಪ್ರಶಸ್ತಿ ಪ್ರಕಟ, ಇಲ್ಲಿದೆ ಪಟ್ಟಿ
ಬೆಂಗಳೂರು: ರಾಜ್ಯ ಸರ್ಕಾರದಿಂದ 2020-21ನೇ ಸಾಲಿನ ಡಾ.ರಾಜ್ ಕುಮಾರ್ ಹಾಗೂ ಪುಟ್ಟಣ್ಣ ಕಣಗಾಲ್, ವಿಷ್ಣುವರ್ಧನ್ ಪ್ರಶಸ್ತಿಯನ್ನು ಸರ್ಕಾರ ಪ್ರಕಟಿಸಿದೆ. 2020ನೇ ಸಾಲಿನ ಡಾ.ರಾಜ್ ಕುಮಾರ್ ಪ್ರಶಸ್ತಿಯನ್ನು ಹಿರಿಯ ನಟಿ ಜಯಮಾಲಗೆ ನೀಡಿದ್ದರೇ, 2020ನೇ ಸಾಲಿನ ಪುಟ್ಟಣ ಕಣಗಾಲ್ ಪ್ರಶಸ್ತಿಯನ್ನು ಎಂ.ಎಸ್ ಸತ್ಯುಗೆ ನೀಡಲಾಗಿದೆ. ಪ್ರಗತಿ ಅಶ್ವತ್ಥ್ ನಾರಾಯಣರಿಗೆ 2020ನೇ ಸಾಲಿನ ಡಾ.ವಿಷ್ಣವರ್ಧನ್ ಪ್ರಶಸ್ತಿಯನ್ನು ಜೀವಮಾನ ಸಾಧನೆಗಾಗಿ ನೀಡಲಾಗಿದೆ. 2021ನೇ ಸಾಲಿನ ರಾಜ್ ಕುಮಾರ್ ಪ್ರಶಸ್ತಿಯನ್ನು ಸಾರಾ ಗೋವಿಂದುಗೆ ನೀಡಲಾಗಿದೆ. ನಿರ್ದೇಶಕ ಶಿವರುದ್ರಯ್ಯಗೆ 2021ನೇ ಸಾಲಿನ ಪುಟ್ಟಣ್ಣ ಕಣಗಾಲ್ ಪ್ರಶಸ್ತಿಯನ್ನು ರಾಜ್ಯ ಸರ್ಕಾರ ಘೋಷಿಸಿದೆ. ಹಿರಿಯ ನಟ ಎಂ.ಕೆ ಸುಂದರ್ ರಾಜ್ ಗೆ 2021ನೇ ಸಾಲಿನ ವಿಷ್ಣುವರ್ಧನ್ ಪ್ರಶಸ್ತಿಯನ್ನು ನೀಡಲಾಗಿದೆ.
ಬೆಂಗಳೂರು: ಭ್ರಷ್ಟಾಚಾರ ಹಾಗೂ ಯುವಜನತೆಯನ್ನು ಬಲಿ ತೆಗೆದುಕೊಳ್ಳುತ್ತಿರುವ ಡ್ರಗ್ ಮಾಫಿಯಾದ ವಿರುದ್ಧ ರಾಜ್ಯ ಬಿಜೆಪಿಯಿಂದ ಸಂಘಟಿತ ಹೋರಾಟ ನಡೆಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ ಸದಾನಂದ ಗೌಡ ಹೇಳಿದ್ದಾರೆ. ಕರ್ನಾಟಕದಲ್ಲಿ ಸತ್ತಂತಿರುವ ಪೊಲೀಸ್ ಇಲಾಖೆಯನ್ನು ಎಚ್ಚರಿಸಿ ರಾಜಕೀಯದಲ್ಲಿ ಹೊಸ ಅಧ್ಯಾಯ ಪ್ರಾರಂಭಿಸಲು ನಿರ್ಧರಿಸಲಾಗಿದೆ. ರಾಜ್ಯ ಸರ್ಕಾರದ ದುರಾಡಳಿತ ಹಾಗೂ ಭ್ರಷ್ಟಾಚಾರದ ವಿರುದ್ಧ ಧ್ವನಿ ಎತ್ತಲಿದ್ದೇವೆ ಕೋರ್ ಕಮಿಟಿ ಸಭೆಯ ಬಳಿಕ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು. ರಾಜ್ಯ ಸರ್ಕಾರದ ಜನವಿರೋಧಿ ನೀತಿಗಳ ಕುರಿತು ಜನರಿಗೆ ಎಚ್ಚರಿಕೆ ನೀಡಲು ಹಾಗೂ ಕಾಂಗ್ರೆಸ್ ಸರ್ಕಾರವು ವಿವಿಧ ಯೋಜನೆಗಳ ಬಗ್ಗೆ ಹರಡುತ್ತಿರುವ ಅಪಪ್ರಚಾರದ ವಿರುದ್ಧ ಸತ್ಯಾಂಶಗಳನ್ನು ಜನರಿಗೆ ಮನವರಿಕೆ ಮಾಡಿಕೊಡುವ ಕೆಲಸವನ್ನೂ ನಾವು ಜವಾಬ್ದಾರಿಯಿಂದ ನಿರ್ವಹಿಸಲು ಕಾರ್ಯಕರ್ತರಿಗೆ ತರಬೇತಿ ನೀಡುತ್ತಿದ್ದೇವೆ. ರಾಜ್ಯದ ಎಲ್ಲ ಮಂಡಲಗಳಲ್ಲಿ ಏಕರೂಪದ ಕಾರ್ಯಯೋಜನೆಗಳು ಮತ್ತು ಕಲಾಪಗಳು ನಡೆಯಬೇಕು ಎನ್ನುವ ಉದ್ದೇಶದಿಂದ ಕಾರ್ಯಕರ್ತರಿಗೆ ವಿಶೇಷ ತರಬೇತಿ ನೀಡುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಮಾಜಿ ಸಿಎಂ ವಿವರಿಸಿದರು. ಮುಂಬರುವ ಚುನಾವಣಾ ಸವಾಲುಗಳ ಕುರಿತು ಮಾತನಾಡಿದ ಅವರು,…
ಮಂಡ್ಯ: ಜಿಲ್ಲೆಯ ಮದ್ದೂರು ಬಳಿಯಲ್ಲಿ ಮೈಸೂರು-ಬೆಂಗಳೂರು ದಶಪಥ ಹೆದ್ದಾರಿಯಲ್ಲಿ ಕಾರೊಂದು ಹೊತ್ತಿ ಉರಿದಿರುವಂತ ಘಟನೆ ನಡೆದಿದೆ. ಮೈ- ಬೆಂ ದಶಪಥ ಹೆದ್ದಾರಿಯಲ್ಲಿ ಕಾರು ಹೊತ್ತಿ ಉರಿದಿದೆ. ಮದ್ದೂರು ತಾಲೂಕಿನ ನಿಡಘಟ್ಟ ಬಳಿಯ ಮೈ- ಬೆಂ ಹೆದ್ದಾರಿಯಲ್ಲಿ ಘಟನೆ ನಡೆದಿದೆ. ಕಾರಿನಲ್ಲಿದ್ದ ದಂಪತಿ ಆಶ್ಚರ್ಯಕರ ರೀತಿ ಪಾರಾಗಿದ್ದಾರೆ. ಶ್ರೀರಂಗಪಟ್ಟಣ ತಾಲೂಕಿನ ಪಿ. ಹೊಸಹಳ್ಳಿ ಗ್ರಾಮದ ಕಿರಣ್ ಹಾಗು ರಂಜಿತ ಅಪಾಯದಿಂದ ಪಾರಾದ ದಂಪತಿ ಆಗಿದ್ದಾರೆ. ಬೆಂಗಳೂರಿಗೆ ಹೋಗಿ ವಾಪಸ್ಸು ಬರುವ ವೇಳೆ ಹೆದ್ದಾರಿಯಲ್ಲಿ ಏಕಾಏಕಿ ಕಾರು ಹೊತ್ತಿ ಉರಿದಿದೆ. ಕಾರಿನಲ್ಲಿ ಹೊಗೆ ಬರುತ್ತಿದ್ದಂತೆ ಕಾರಿನಿಂದ ಇಳಿದು ದಂಪತಿಗಳು ಪಾರಾಗಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಮದ್ದೂರು ಅಗ್ನಿಶಾಮಕ ಸಿಬ್ಬಂದಿಗಳಿಂದ ಬೆಂಕಿ ಶಮನ ಕಾರ್ಯಾಚರಣೆ ನಡೆಸಿದರು. ಮದ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/breaking-screaming-over-priests-rights-against-the-neighbors-cannot-be-filed-as-a-case-high-court-important-verdict/ https://kannadanewsnow.com/kannada/tilak-varma-ruled-out-of-first-three-new-zealand-t20is/
ನವದೆಹಲಿ: ನ್ಯೂಜಿಲೆಂಡ್ ವಿರುದ್ಧದ ಮುಂಬರುವ ಬಹು-ಸ್ವರೂಪದ ವೈಟ್-ಬಾಲ್ ಸರಣಿಯ ಮೊದಲ ಮೂರು ಟಿ20ಐಗಳಿಂದ ಸ್ಟಾರ್ ಇಂಡಿಯಾ ಬ್ಯಾಟ್ಸ್ಮನ್ ತಿಲಕ್ ವರ್ಮಾ ಅಧಿಕೃತವಾಗಿ ಹೊರಗುಳಿದಿದ್ದಾರೆ. ಮೆನ್ ಇನ್ ಬ್ಲೂ ತಂಡವು ಮೂರು ಏಕದಿನ ಮತ್ತು ಐದು ಟಿ20ಐ ಪಂದ್ಯಗಳಲ್ಲಿ ಬ್ಲ್ಯಾಕ್ ಕ್ಯಾಪ್ಸ್ ಅನ್ನು ಎದುರಿಸಲಿದೆ ಎಂಬುದು ಗಮನಿಸಬೇಕಾದ ಸಂಗತಿ. ಸರಣಿಗೆ ಮುಂಚಿತವಾಗಿ, ಭಾರತವು ಮೊದಲ ಮೂರು ಟಿ20ಐಗಳಿಗೆ ತಿಲಕ್ ವರ್ಮಾ ಅವರ ಸೇವೆಗಳನ್ನು ಹೊಂದಿರುವುದಿಲ್ಲ. ತಿಲಕ್ ಹೊಟ್ಟೆಯ ಸಮಸ್ಯೆಗೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಪ್ರಸ್ತುತ ಚೇತರಿಸಿಕೊಳ್ಳುತ್ತಿದ್ದಾರೆ ಎಂಬುದು ಕುತೂಹಲಕಾರಿಯಾಗಿದೆ. https://kannadanewsnow.com/kannada/e-khata-benefits-for-unauthorized-layouts-plots-buildings-apartments-in-the-state/ https://kannadanewsnow.com/kannada/breaking-screaming-over-priests-rights-against-the-neighbors-cannot-be-filed-as-a-case-high-court-important-verdict/
ಬೆಂಗಳೂರು : ಕೇಂದ್ರ ಸರ್ಕಾರದ ವಿಬಿ ಜಿ ರಾಮ್ ಜಿ ಕಾಯ್ದೆ ವಿರುದ್ಧ ಕಾಂಗ್ರೆಸ್ ಪಕ್ಷ ನ್ಯಾಯಾಲಯದಲ್ಲಿ ಕಾನೂನು ಹಾಗೂ ಬೀದಿಗಿಳಿದು ಹೋರಾಟ ಮಾಡಿ ಜನರಲ್ಲಿ ಅರಿವು ಮೂಡಿಸಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಹೊಟೇಲ್ ಲಲಿತ್ ಅಶೋಕದಲ್ಲಿ ಗುರುವಾರ ಆಯೋಜಿಸಿದ್ದ ಮುಂದಿನ ದಿನಗಳಲ್ಲಿ ಕೇಂದ್ರ ಸರ್ಕಾರದ ವಿಬಿ ಜಿ ರಾಮ್ ಜಿ ಕಾಯ್ದೆ ವಿರುದ್ಧ ಪಕ್ಷದ ವತಿಯಿಂದ ನಡೆಸಬೇಕಾದ ಹೋರಾಟದ ಬಗ್ಗೆ ಚರ್ಚಿಸಲು ಪಕ್ಷದ ಸಚಿವರು, ಸಂಸದರು, ಶಾಸಕರು ಹಾಗೂ ಮುಖಂಡರ ಸಭೆಗೂ ಮುನ್ನ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. “ಕೇಂದ್ರ ಸರ್ಕಾರದ ಈ ಹೊಸ ಕಾಯ್ದೆ ಜಾರಿ ಕಷ್ಟ. ಮನರೇಗಾ ಯೋಜನೆಯಲ್ಲಿ ಕಾಮಗಾರಿ ಆಯ್ಕೆ ಮಾಡುವ ಅಧಿಕಾರ ಪಂಚಾಯಿತಿಗಳ ಬಳಿ ಇತ್ತು. ಈಗ ದೆಹಲಿಯಿಂದ ತೀರ್ಮಾನ ಆಗುತ್ತದೆ. ಶೇಕಡಾ 40 ರಷ್ಟು ಅನುದಾನ ಭರಿಸಲು ಯಾವುದೇ ರಾಜ್ಯಗಳಿಂದ ಸಾಧ್ಯವಿಲ್ಲ. ಈ ವಿಚಾರವಾಗಿ ಕೇಂದ್ರ ಸರ್ಕಾರ ತೀರ್ಮಾನ ಮಾಡುವ ಮುನ್ನ ರಾಜ್ಯಗಳ ಅಭಿಪ್ರಾಯ ಪಡೆಯಬೇಕಿತ್ತು. ರಾಜ್ಯಗಳ ಅಭಿಪ್ರಾಯ ಪಡೆಯದೇ…
ಶಿವಮೊಗ್ಗ: ಅದು ಖಾಸಗಿ ಸ್ವತ್ತಾಗಿರಲೀ, ಅರಣ್ಯ ಭೂಮಿಯಾಗಿರಲಿ ಅವುಗಳಲ್ಲಿನ ಮರಗಳನ್ನು ಕಾನೂನು ಮೀರಿ ಕಡಿತಲೆ ಮಾಡುವುದು ಅಪರಾಧ. ಆದ್ರೆ ಸಾಗರದಲ್ಲೊಬ್ಬ ಅರಣ್ಯಾಧಿಕಾರಿ ಮಾತ್ರ ಖಾಸಗಿ ಜಮೀನುಗಳಲ್ಲಿ ಮರಗಳ ಮಾರಣಹೋಮವೇ ನಡೆಯುತ್ತಿದ್ದರೂ, ಕಡಿತಲೆ ಮಾಡುವುದನ್ನು ತಡೆಗಟ್ಟೋ ಬದಲು, ಕಡಿದ ಮೇಲೆ ದಂಡ ಹಾಕೋದು ಮಾತ್ರ ನಮ್ಮ ಕೆಲಸ ಎನ್ನುವ ನಡೆಯನ್ನು ತೋರುತ್ತಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಉಳ್ಳೂರು ವ್ಯಾಪ್ತಿಯ ಸರ್ವೆ ನಂಬರ್.25ರಲ್ಲಿ ಕಳೆದ ಕೆಲ ವರ್ಷಗಳ ಹಿಂದೆಯೂ ಖಾಸಗಿ ಭೂಮಿಯಲ್ಲಿ ಬೆಳೆದಿದ್ದಂತ ಮರಗಳನ್ನು ಅನುಮತಿ ಪಡೆಯದೇ ಕಡಿತಲೆ ಮಾಡಲಾಗಿತ್ತು. ಆಗಲೂ ಕೇಸ್ ಮಾಡಿ ದಂಡ ಹಾಕಿ ಅರಣ್ಯ ಇಲಾಖೆಯ ಅಧಿಕಾರಿಗಳು ಕೈ ತೊಳೆದುಕೊಂಡಿದ್ದರು. ಇದೀಗ ಮತ್ತೆ ಅದೇ ಜಮೀನು ಮಾಲೀಕನಿಂದ ಮರಗಳ ಮಾರಣಹೋಮವೇ ನಡೆದಿದೆ. ಕಡಿತಲೆ ತಡೆಯಬೇಕಿದ್ದ ಅರಣ್ಯಾಧಿಕಾರಿ, ಸಿಬ್ಬಂದಿಗಳೇ ಕಣ್ಣಿದ್ದೂ ಕುರುಡು ಉಳ್ಳೂರು ವ್ಯಾಪ್ತಿಯ ಸರ್ವೆ ನಂಬರ್.25ರಲ್ಲಿ ಖಾಸಗಿ ಭೂಮಿಯಲ್ಲಿ ಬೆಳೆದಿದ್ದಂತ 20ಕ್ಕೂ ಹೆಚ್ಚು ಮರಗಳನ್ನು ತಿಂಗಳಾನುಗಟ್ಟಲೇ ಕಡಿತಲೆ ಮಾಡಲಾಗಿದೆ. ಈ ಭಾಗದ ಮರಗಳ ಕಡಿತಲೆ ಮೇಲೆ ಕಣ್ಣಿಡಬೇಕಿದ್ದಂತ ವಾಚರ್,…
ಬೆಂಗಳೂರು: ಡಿ-ಫಾರ್ಮಾ ಕೋರ್ಸ್ ಪ್ರವೇಶಕ್ಕೆ ಇದೇ ಮೊದಲ ಬಾರಿಗೆ ಕೌನ್ಸೆಲಿಂಗ್ ನಡೆಸುತ್ತಿದ್ದು ಅಭ್ಯರ್ಥಿಗಳ ರಾಂಕ್ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಗುರುವಾರ ಪ್ರಕಟಿಸಿದೆ. ಅಭ್ಯರ್ಥಿಗಳು ವೆರಿಫಿಕೇಷನ್ ಸ್ಲಿಪ್ ಡೌನ್ಲೋಡ್ ಮಾಡಿಕೊಂಡು, ಇಚ್ಚೆ/ಆಯ್ಕೆಗಳ ದಾಖಲಿಗೆ ಜನವರಿ 10ರಂದು ಮಧ್ಯಾಹ್ನ 3 ಗಂಟೆವರೆಗೆ ಅವಕಾಶ ನೀಡಲಾಗಿದೆ. ಅದೇ ದಿನ ಸಂಜೆ 6 ಗಂಟೆ ನಂತರ ತಾತ್ಕಾಲಿಕ ಫಲಿತಾಂಶ ಪ್ರಕಟಿಸಲಾಗುವುದು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ. ಅಭ್ಯರ್ಥಿಗಳು ವೆರಿಫಿಕೇಷನ್ ಸ್ಲಿಪ್ ನಲ್ಲಿ ದಾಖಲಿಸಿರುವಂತೆ ಎಲ್ಲ ಮೂಲ ದಾಖಲೆಗಳನ್ನು ಸಿದ್ಧಮಾಡಿಟ್ಟುಕೊಳ್ಳಬೇಕು. ಕಾಲೇಜು ಪ್ರವೇಶ ಸಂದರ್ಭದಲ್ಲಿ ಅವುಗಳ ಹಾಜರುಪಡಿಸಬೇಕು ಎಂದು ಅವರು ಸಲಹೆ ನೀಡಿದ್ದಾರೆ. https://kannadanewsnow.com/kannada/good-news-for-the-states-beedi-workers-minister-santosh-lad-holds-important-meeting-on-minimum-wage-fixing/ https://kannadanewsnow.com/kannada/breaking-screaming-over-priests-rights-against-the-neighbors-cannot-be-filed-as-a-case-high-court-important-verdict/
ಬೆಂಗಳೂರು : ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಎಸ್ ಲಾಡ್ ಅವರು, ವಿಕಾಸಸೌಧದಲ್ಲಿ ಬೀಡಿ ಉದ್ಯಮದ ಕಾರ್ಮಿಕರಿಗೆ ಕನಿಷ್ಠ ವೇತನವನ್ನು ನಿಗದಿಪಡಿಸುವ ಕುರಿತು ಸಭೆ ನಡೆಸಿದರು. ಈ ಸಭೆಯಲ್ಲಿ ಕಾರ್ಮಿಕ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಸಲ್ಮಾ ಕೆ ಫಾಹಿಂ, ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜ, ಕಾರ್ಮಿಕ ಆಯುಕ್ತರಾದ ಡಾ. ಎಚ್ ಎನ್ ಗೋಪಾಲಕೃಷ್ಣ, ಜಂಟಿ ಕಾರ್ಮಿಕ ಆಯುಕ್ತ ರಾದ ಡಾ. ರವಿಕುಮಾರ್, ಕನಿಷ್ಠ ವೇತನ ಸಲಹಾ ಮಂಡಳಿಯ ಅಧ್ಯಕ್ಷರಾದ ಶಾಹಿದ್ ಟೆಕ್ಕಿಲ್, ಬೀಡಿ ಉದ್ಯಮದ ಸಂಘಟನೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು. https://kannadanewsnow.com/kannada/woman-stripped-and-assaulted-in-hubballi-national-commission-registers-case-and-investigates/ https://kannadanewsnow.com/kannada/breaking-screaming-over-priests-rights-against-the-neighbors-cannot-be-filed-as-a-case-high-court-important-verdict/
ಬೆಂಗಳೂರು: ಹುಬ್ಬಳ್ಳಿ ಘಟನೆಯನ್ನು ರಾಷ್ಟ್ರೀಯ ಮಹಿಳಾ ಆಯೋಗ (NCW) ಸ್ವಯಂಪ್ರೇರಿತವಾಗಿ ಕೈಗೆತ್ತಿಕೊಂಡಿರುವುದು, ಮಹಿಳೆಯರ ಘನತೆಯನ್ನು ರಕ್ಷಿಸುವಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ಸಂಪೂರ್ಣ ವೈಫಲ್ಯಕ್ಕೆ ಜೀವಂತ ಸಾಕ್ಷಿಯಾಗಿದೆ ಎಂಬುದಾಗಿ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ತಿಳಿಸಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಪೊಲೀಸ್ ಬಂಧನದ ಸಮಯದಲ್ಲಿ ಮಹಿಳೆಯೊಬ್ಬರು ಅತ್ಯಂತ ಸಂಕಷ್ಟದ ಮತ್ತು ಅವಮಾನಕರ ಸ್ಥಿತಿಯಲ್ಲಿರುವ ದೃಶ್ಯಗಳು ಹೊರಬಂದಾಗ, ಒಂದು ಜವಾಬ್ದಾರಿಯುತ ಸರ್ಕಾರ ಸಂವೇದನಾಶೀಲತೆಯಿಂದ ಪಾರದರ್ಶಕವಾಗಿ ನ್ಯಾಯವನ್ನು ಒದಗಿಸುವ ಮಾಡಬೇಕಿತ್ತು. ಆದರೆ ಲಜೆಗೆಟ್ಟ ಕಾಂಗ್ರೆಸ್ ಸರ್ಕಾರ ಮಾಡಿದ್ದು, ನಿರಾಕರಣೆ ಮತ್ತು ಸಾರ್ವಜನಿಕ ಆಕ್ರೋಶವನ್ನು ಲಘುವಾಗಿ ಕಾಣುವ ಪ್ರಯತ್ನ ಎಂದು ಹೇಳಿದ್ದಾರೆ. ಸಾಂವಿಧಾನಿಕ ಸಂಸ್ಥೆಗಳು ರಾಜ್ಯ ಸರ್ಕಾರಕ್ಕೆ ಅದರ ಮೂಲಭೂತ ಕರ್ತವ್ಯವಾದ ನಾಗರೀಕರ ಘನತೆ ಮತ್ತು ವೈಯಕ್ತಿಕ ಸ್ವಾತಂತ್ರ್ಯವನ್ನು ರಕ್ಷಿಸುವ ಬಗ್ಗೆ ನೆನಪಿಸುವಂತಹ ಪರಿಸ್ಥಿತಿ ಬಂದಿರುವುದು ಅತ್ಯಂತ ದುರದೃಷ್ಟಕರ. ಈ ಪ್ರಕರಣದಲ್ಲಿ ಎಫ್ಐಆರ್ ದಾಖಲಿಸುವಂತೆ, ನ್ಯಾಯಯುತ ಮತ್ತು ಕಾಲಮಿತಿಯ ತನಿಖೆ ನಡೆಸುವಂತೆ, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ, ಮತ್ತು ಸಂತ್ರಸ್ತೆಗೆ ಸೂಕ್ತ…














