Author: kannadanewsnow09

ಬೆಂಗಳೂರು: ದೈವ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಹೈಗ್ರೌಂಡ್ ಠಾಣೆಯ ಪೊಲೀಸರು ಮತ್ತೊಂದು ನೋಟಿಸ್ ನೀಡಿದ್ದಾರೆ. ರಿಷಬ್ ಶೆಟ್ಟಿ ನಟನೆಯ ಕಾಂತಾರ-2 ಸಿನಿಮಾದ ವಿಚಾರವಾಗಿ ಗೋವಾದಲ್ಲಿ ನಡೆದಂತ ಫಿಲ್ಮ್ ಫೇರ್ ಕಾರ್ಯಕ್ರಮದಲ್ಲಿ ಬಾಲಿವುಡ್ ನಟ ರಣವೀರ್ ಸಿಂಗ್ ಮಾತನಾಡಿದ್ದರು. ದೈವದ ವಿಚಾರವಾಗಿ ಅವಹನೇಳನಕಾರಿಯಾಗಿ ಮಾತನಾಡಿದ್ದರ ಸಂಬಂಧ ಅವರ ವಿರುದ್ಧ ದೂರು, ಆ ಬಳಿಕ ಎಫ್ಐಆರ್ ಕೂಡ ದಾಖಲಾಗಿತ್ತು. ವಕೀಲ ಪ್ರಶಾಂತ್ ಎಂಬುವರು ನೀಡಿದಂತ ದೂರಿನ ಆಧಾರದ ಮೇಲೆ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಈ ಹಿನ್ನಲೆಯಲ್ಲಿ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಗೆ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರಿಸಲು ನೋಟಿಸ್ ನೀಡಿದ್ದಾರೆ. ಈ ಹಿಂದೆ ಒಂದು ಬಾರಿ ವಾಟ್ಸ್ ಆಪ್ ಮೂಲಕ ನೋಟಿಸ್ ನೀಡಿದ್ದರೂ ಪ್ರತ್ಯುತ್ತರ ನೀಡರಲಿಲ್ಲ. ಹೀಗಾಗಿ ಮತ್ತೊಮ್ಮೆ ಮುಂಬೈನಲ್ಲಿರುವಂತ ಬಾಲಿವುಡ್ ನಟ ರಣವೀರ್ ಸಿಂಗ್ ಅವರ ನಿವಾಸಕ್ಕೆ ಪೊಲೀಸರು ಮತ್ತೊಮ್ಮೆ ನೋಟಿಸ್ ನೀಡಿದ್ದಾರೆ. ಯಾವುದೇ ಪ್ರತ್ಯುತ್ತರ ನೀಡಿಲ್ಲ ಎನ್ನಲಾಗಿದೆ. https://kannadanewsnow.com/kannada/two-people-including-an-engineering-student-arrested-for-helping-cyber-fraudsters-by-opening-fake-bank-accounts/…

Read More

ದಾವಣಗೆರೆ: ನಕಲಿ ದಾಖಲೆಗಳನ್ನು ನೀಡಿ, ಬ್ಯಾಂಕ್ ಖಾತೆಯನ್ನು ತೆರೆದು, ಅದರಿಂದ ಸೈಬರ್ ವಂಚಕರಿಗೆ ಸಹಾಯ ಮಾಡುತ್ತಿದ್ದಂತ ಎಂಜಿನಿಯರಿಂಗ್ ವಿದ್ಯಾರ್ಥಿ ಸೇರಿದಂತೆ ಇಬ್ಬರನ್ನು ದಾವಣಗೆರೆಯ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ಕುಂಕುಮ ಗ್ರಾಮದ ಪರಶುರಾಮ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಈತ ಬೆಂಗಳೂರಿನ ರಾಜಾಜಿನಗರದಲ್ಲಿನ ನಕಲಿ ಕಂಪನಿ ತೆಗೆದು, ವಿವಿಧ ರಾಷ್ಟ್ರೀಯ, ಖಾಸಗಿ ಬ್ಯಾಂಕ್ ಗಳಲ್ಲಿ 6 ಖಾತೆ ತೆರೆದಿದ್ದರು. ಈ ಆರು ಮ್ಯೂಲ್ ಅಕೌಂಟ್ ಗಳಿಂದ ಕೋಟ್ಯಂತರ ಹಣ ವಂಚನೆ ಮಾಡಿರೋದು ಪೊಲೀಸರ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಈ ಆರು ಮ್ಯೂಲ್ ಅಕೌಂಟ್ ಗಳ ವಿರುದ್ಧ ದೇಶಾದ್ಯಂತ 95ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದಾವೆ. ಮತ್ತೊಂದು ಕೇಸಲ್ಲಿ 19 ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸಿದ್ದಾರೆ. ಆನ್ ಲೈನ್ ನಲ್ಲಿ ಕೆಲಸ ಹುಡುಕೋರನ್ನು ಟಾರ್ಗೆಟ್ ಮಾಡುತ್ತಿದ್ದ ಈತ, ಕೆಲಸದಾಸೆಗೆ ಸೈಬರ್ ವಂಚಕರ ಜಾಲಕ್ಕೆ ಸಿಲುಕಿಸುತ್ತಿದ್ದನು. ಈ ಸಂಬಂಧ ಆತನನ್ನು ಬಂಧಿಸಲಾಗಿದೆ. ಆತ ಎರಡು ಮ್ಯೂಲ್ ಅಕೌಂಟ್ ಬಳಸುತ್ತಿದ್ದನ್ನು ಪೊಲೀಸರು…

Read More

ಬೆಂಗಳೂರು: ಮಳೆ ನಿಂತರೂ ಮಳೆ ಹನಿ ನಿಲ್ಲದು ಎಂಬ ಮಾತಿನಂತೆ ಬಿಜೆಪಿ ಸರ್ಕಾರ ಹೋದರೂ ಅವರ ಭ್ರಷ್ಟಾಚಾರ ಮಾತ್ರ ನಿಂತಿಲ್ಲ ಎಂಬುದಾಗಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಗುತ್ತಿಗೆದಾರರಿಂದ ಕಮಿಷನ್ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತರ ಕೈಗೆ ಸಿಕ್ಕಿಬಿದ್ದಿರುವ ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರು “ ಬಿಜೆಪಿಯ ಭ್ರಷ್ಟಾಚಾರದ ಬ್ರ್ಯಾಂಡ್ ” ಅನ್ನು ಗಟ್ಟಿಗೊಳಿಸಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ. ಭ್ರಷ್ಟಾಚಾರದಲ್ಲಿ ಪಳಗಿದ ಬಿಜೆಪಿಯ ಹಿರಿತಲೆಗಳು ಹಿಂದಿನ “40% ಕಮಿಷನ್“ ಕಲೆಯನ್ನು ತಮ್ಮ ಯುವ ಶಾಸಕರಿಗೆ ಚೆನ್ನಾಗಿಯೇ ಕಲಿಸಿದ್ದಾರೆ! ಇದು ಯಾರೋ ಮಾಡಿದ ಬಾಯಿ ಮಾತಿನ ಆರೋಪವಲ್ಲ, ಲೋಕಾಯುಕ್ತರು ಪ್ರತ್ಯಕ್ಷವಾಗಿ ಹಿಡಿದಿದ್ದು ಎಂದಿದ್ದಾರೆ. ತಮ್ಮ ಶಾಸಕರ ಈ ಕೃತ್ಯಕ್ಕೆ ರಾಜ್ಯಾಧ್ಯಕ್ಷರು ಹೊಣೆ ಹೊರುತ್ತಾರಾ? ವಿರೋಧ ಪಕ್ಷದ ನಾಯಕರು ರಾಜೀನಾಮೆ ಕೊಡುತ್ತಾರಾ? ಅಥವಾ ಚಂದ್ರು ಲಮಾಣಿ ಅವರಿಂದ ರಾಜೀನಾಮೆ ಕೊಡಿಸುತ್ತಾರಾ? ಬಿಜೆಪಿ ಆರ್.ಅಶೋಕ್, ಬಿವೈ ವಿಜಯೇಂದ್ರ ಅವರು ಉತ್ತರಿಸಬೇಕು? ಹಾಗೆಯೇ, “ನಾ ಖಾವುಂಗಾ ನಾ ಖಾನೆದುಂಗಾ“…

Read More

ಉತ್ತರ ಕನ್ನಡ: ಜಿಲ್ಲೆಯ ಕಾರವಾರಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಂಜೂರು ಮಾಡದೇ ಹೋದ್ರೆ, ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಕಾರವಾರ ವಿಧಾನಸಭಾ ಕ್ಷೇತ್ರದ ಶಾಸಕ ಸತೀಶ್ ಸೈಲ್ ಎಚ್ಚರಿಕೆ ನೀಡಿದ್ದಾರೆ. ಇಂದು ಈ ವಿಚಾರವಾಗಿ ಮಾತನಾಡಿದಂತ ಅವರು, ಬಜೆಟ್ ನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಘೋಷಿಸುವ ಭರವಸೆ ಇದೆ. ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಘೋಷಿಸದಿದ್ರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಎಚ್ಚರಿಕೆಯನ್ನು ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಮುಂದೆಯೇ ನೀಡಿದ್ದಾರೆ. ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡ ಉದ್ಘಾಟನೆ ಕಾರ್ಯಕ್ರಮದ ವೇಳೆಯಲ್ಲೇ ಆಸ್ಪತ್ರೆ ಘೋಷಿಸದಿದ್ರೆ ಹೇಳಿದಂತೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವೆ ಎಂಬುದಾಗಿ ಕಾರವಾರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಹೇಳಿದ್ದಾರೆ. https://kannadanewsnow.com/kannada/the-next-cm-in-the-state-will-be-a-dalit-leader-minister-mahadevappa-insists/ https://kannadanewsnow.com/kannada/union-minister-h-d-kumaraswamy-gave-this-retort-to-cm-siddaramaiah/

Read More

ಬೆಂಗಳೂರು: ಕುಮಾರಸ್ವಾಮಿಯವರು ಮತ್ತು ಅವರ ಪೂಜ್ಯ ತಂದೆಯವರಾದ ಹೆಚ್.ಡಿ.ದೇವೇಗೌಡರು ಖಂಡಿತಾ ಜಾತಿವಾದಿಗಳಲ್ಲ, ಅವರು ಸ್ವಜಾತಿ ವಿರೋಧಿಗಳು. ಅದಕ್ಕಿಂತಲೂ ಮುಖ್ಯವಾಗ ಕುಟುಂಬವಾದಿಗಳು. ಇವರಿಗೆ ತಮ್ಮ ಜಾತಿ ಒಂದು ಓಟ್ ಬ್ಯಾಂಕ್ ಅಷ್ಟೆ. ತಂದೆ ಮತ್ತು ಮಕ್ಕಳು ತಮ್ಮ ಕುಟುಂಬದ ಸ್ವಾರ್ಥಕ್ಕಾಗಿ ರಾಜಕೀಯ ಕ್ಷೇತ್ರದಲ್ಲಿ ಉಳಿದವರನ್ನು ಬಿಟ್ಟುಬಿಡಿ, ಸ್ವಜಾತಿ ನಾಯಕರು ಕೂಡಾ ಬೆಳೆಯದಂತೆ ಒಬ್ಬೊಬ್ಬರನ್ನೇ ಮುಗಿಸುತ್ತಾ ಬಂದವರು. “ಹಿಂದೆ, ಇಂದು ಮತ್ತು ಮುಂದೆ ಜಾತ್ಯತೀತ ಜನತಾದಳದ ತುತ್ತತುದಿಯ ನಾಯಕರು ಗೌಡರ ಕುಟುಂಬದವರೇ ಆಗಿರುತ್ತಾರೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಹೇಳಿದ್ದರು. ಇದಕ್ಕೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಈ ಕೆಳಗಿನಂತೆ ತಿರುಗೇಟು ನೀಡಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಸಿದ್ದರಾಮಯ್ಯನವರೇ, ನಾನು ಸುತ್ತಿಬಳಸಿ ಮಾತನಾಡಲ್ಲ. ನೇರವಾಗಿ ವಿಷಯಕ್ಕೇ ಬರುತ್ತೇನೆ. ಸಿದ್ದರಾಮಯ್ಯನವರು ಕುರ್ಚಿಗಾಗಿ ಜಾತಿ ಎಳೆದು ತಂದಿದ್ದಾರೆ ಎಂದು ನಾನು ತಮಾಷೆಗೆ ಹೇಳಿದ್ದಲ್ಲ, ಸೀರಿಯಸ್ಸಾಗೇ ಹೇಳಿದ್ದೇನೆ. ತಮಾಷೆಗೆ ಹೇಳಿದ್ದೇನೆ ಎಂದಿಟ್ಟುಕೊಳ್ಳಿ, ನೀವು ಇಷ್ಟುದ್ದ ಉತ್ತರ ಬರೆಯುವ ಅಗತ್ಯವಿರಲಿಲ್ಲ. ಈ ಬಗ್ಗೆ ನೀವು ಸೀರಿಯಸ್‌ ಆಗಿದ್ದೀರಿ ಎಂಬುದನ್ನು…

Read More

ಮಡಿಕೇರಿ: ರಾಜ್ಯದಲ್ಲಿ ಮುಂದೆ ದಲಿತ ನಾಯಕನೇ ಮುಖ್ಯಮಂತ್ರಿ ಆಗಬೇಕು ಎಂಬುದಾಗಿ ಕಾಂಗ್ರೆಸ್ ಹೈಕಮಾಂಡ್ ಅನ್ನು ಸಚಿವ ಹೆಚ್.ಸಿ ಮಹದೇವಪ್ಪ ಒತ್ತಾಯಿಸಿದ್ದಾರೆ. ಇಂದು ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ರಾಜ್ಯದಲ್ಲಿ ಇನ್ನೂ ದಲಿತ ಮುಖ್ಯಮಂತ್ರಿ ಕೂಗು ಮುಟ್ಟಿಲ್ಲ. ಅದು ಸಿದ್ಧರಾಮಯ್ಯ ಸಿಎಂ ಆಗಿರೋದರಿಂದ ಆಗಿದೆ. ರಾಜ್ಯದಲ್ಲಿ ಮುಂದೆ ದಲಿತ ಸಿಎಂ ಆಗ್ಬೇಕು. ಸಿದ್ದರಾಮಯ್ಯ, ಕಾಂಗ್ರೆಸ್ ಹೈಕಮಾಂಡ್ ಎಲ್ಲರೂ ಸೂಕ್ತ ದಲಿತ ಅಭ್ಯರ್ಥಿಯನ್ನು ಮುಖ್ಯಮಂತ್ರಿ ಸ್ಥಾನದಲ್ಲಿ ಕೂರಿಸಬೇಕೆಂದು ಮನವಿ ಮಾಡಿದರು. ರಾಜ್ಯದಲ್ಲಿ ದಲಿತ ನಾಯಕನ ಆಯ್ಕೆಯಲ್ಲಿ ಯಾವುದೇ ಗೊಂದಲ ಇರಬಾರದು. ಯಾಕೆಂದರೇ ರಾಜ್ಯದಲ್ಲಿ ದಲಿತರು ಗಣನೀಯ ಪ್ರಮಾಣದಲ್ಲಿ ಇದ್ದಾರೆ. ಅವರು ಕಾಂಗ್ರೆಸ್ ಪಕ್ಷಕ್ಕೆ ಸದಾ ಬೆನ್ನೆಲುಬು ಆಗಿದ್ದಾರೆ. ಅವರನ್ನು ಕಳೆದುಕೊಂಡರೇ ಪಕ್ಷ ಬಲವಾಗಿ ಇರೋದಕ್ಕೆ ಸಾಧ್ಯವಿಲ್ಲ ಎಂದರು. https://kannadanewsnow.com/kannada/delhi-police-arrests-8-suspected-militants-with-links-to-pakistani-terrorists/ https://kannadanewsnow.com/kannada/army-blows-up-house-where-terrorists-were-hiding-in-kashmir-two-including-most-wanted-saifullah-killed/

Read More

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಮನೆಯಲ್ಲಿ ಅಡಗಿದ್ದಂತ ಉಗ್ರನನ್ನು ನುಗ್ಗಿ ಹೊಡೆದು ಉರುಳಿಸುವಲ್ಲಿ ಭದ್ರತಾ ಪಡೆಗಳು ಯಶಸ್ವಿಯಾಗಿದ್ದಾವೆ. ಕಾಶ್ಮೀರದಲ್ಲಿ ಉಗ್ರರು ಅಡಗಿದ್ದಂತ ಮನೆಯನ್ನು ಸ್ಪೋಟಿಸಿದ್ದು, ಈ ಸ್ಪೋಟದಲ್ಲಿ ಮೋಸ್ಟ್ ವಾಂಟೆಡ್ ಸೈಫುಲ್ಲ ಸೇರಿದಂತೆ ಇಬ್ಬರು ಉಗ್ರು ಫಿನಿಶ್ ಆಗಿದ್ದಾರೆ. ಜಮ್ಮು-ಕಾಶ್ಮೀರದ ಕಿಶ್ತ್ವಾರ್ ನಲ್ಲಿ ಭದ್ರತಾ ಪಡೆಗಳು ಹಾಗೂ ಉಗ್ರರ ನಡುವೆ ನಡೆದಂತ ಗುಂಡಿನ ಚಕಮಕಿಯಲ್ಲಿ ಇಬ್ಬರು ಭಯೋತ್ಪಾದಕರು ಬಲಿಯಾಗಿದ್ದಾರೆ. ಬೆಟ್ಟದ ತಪ್ಪಲಿನಲ್ಲಿರುವ ಮಣ್ಣಿನ ಮನೆಯೊಳಗೆ ಮೋಸ್ಟ್ ವಾಂಟೆಡ್ ಉಗ್ರ ಸೈಪುಲ್ಲ ಸೇರಿದಂತೆ ಇಬ್ಬರು ಅಭಯೋತ್ಪಾದಕರು ಅಡಗಿದ್ದ ವೇಳೆಯಲ್ಲಿ ಖಚಿತ ಮಾಹಿತಿಯ ಮೇರೆಗೆ ಈ ದಾಳಿ ನಡೆಸಿ ಹತ್ಯೆಗೈಯ್ಯಲಾಗಿದೆ. ಈ ಎನ್ ಕೌಂಟರ್ ನಲ್ಲಿ 2 ಎಕೆ-47 ರೈಫಲ್ ಗಳನ್ನು ಭದ್ರತಾ ಪಡೆಗಳು ವಶಕ್ಕೆ ಪಡೆದಿದ್ದಾವೆ. ಕಾಶ್ಮೀರ ಕಣಿವೆಯಲ್ಲಿ ಉಗ್ರರನ್ನು ಮಟ್ಟ ಹಾಕೋ ಕಾರ್ಯಾಚರಣೆಯಲ್ಲಿ ಸೇನೆ ಮುಂದುವರೆಸಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/delhi-police-arrests-8-suspected-militants-with-links-to-pakistani-terrorists/ https://kannadanewsnow.com/kannada/indias-fastest-metro-complete-namo-bharat-corridor-inaugurated-by-prime-minister-modi/

Read More

ನವದೆಹಲಿ: ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾ (ಎಲ್‌ಇಟಿ), ಪಾಕಿಸ್ತಾನದ ಬೇಹುಗಾರಿಕೆ ಸಂಸ್ಥೆ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್‌ಐ) ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿರುವ ಪ್ರಮುಖ ಭಯೋತ್ಪಾದಕ ಘಟಕವನ್ನು ದೆಹಲಿ ಪೊಲೀಸರು ಭೇದಿಸಿದ್ದಾರೆ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದ ಎಂಟು ಶಂಕಿತರನ್ನು ಸಂಘಟಿತ ಕಾರ್ಯಾಚರಣೆಯಲ್ಲಿ ಬಂಧಿಸಿದ್ದಾರೆ. ವಿದೇಶಿ ನಿರ್ವಾಹಕರ ನಿರ್ದೇಶನದ ಮೇರೆಗೆ ಈ ಗುಂಪು ಭಾರತದಲ್ಲಿ ಪ್ರಮುಖ ಭಯೋತ್ಪಾದಕ ದಾಳಿಯನ್ನು ಯೋಜಿಸುತ್ತಿದೆ ಎಂದು ತನಿಖಾಧಿಕಾರಿಗಳು ಶಂಕಿಸಿದ್ದಾರೆ. ಮಿಜಾನೂರ್ ರೆಹಮಾನ್, ಮೊಹಮ್ಮದ್ ಶಬಾತ್, ಉಮರ್, ಮೊಹಮ್ಮದ್ ಲಿಟನ್, ಮೊಹಮ್ಮದ್ ಶಾಹಿದ್ ಮತ್ತು ಮೊಹಮ್ಮದ್ ಉಜ್ಜಲ್ ಎಂದು ಗುರುತಿಸಲಾದ ಆರು ಆರೋಪಿಗಳನ್ನು ತಮಿಳುನಾಡಿನ ತಿರುಪ್ಪೂರು ಜಿಲ್ಲೆಯಾದ್ಯಂತದ ಗಾರ್ಮೆಂಟ್ ಘಟಕಗಳಿಂದ ಬಂಧಿಸಲಾಗಿದೆ ಮತ್ತು ಇನ್ನಿಬ್ಬರನ್ನು ಪಶ್ಚಿಮ ಬಂಗಾಳದಿಂದ ಬಂಧಿಸಲಾಗಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಬಂಧಿತ ವ್ಯಕ್ತಿಗಳಲ್ಲಿ ಕೆಲವರು ಬಾಂಗ್ಲಾದೇಶಿ ಪ್ರಜೆಗಳಾಗಿದ್ದು, ಅವರು ತಮ್ಮ ಗುರುತನ್ನು ಮರೆಮಾಡಲು ನಕಲಿ ಆಧಾರ್ ಕಾರ್ಡ್‌ಗಳನ್ನು ಬಳಸುತ್ತಿದ್ದರು ಎಂದು ಆರೋಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸ್ ಮೂಲಗಳ…

Read More

ಮೀರತ್: ಪ್ರಧಾನಿ ನರೇಂದ್ರ ಮೋದಿ ಇಂದು 82 ಕಿ.ಮೀ. ದೆಹಲಿ-ಮೀರತ್ ಪ್ರಾದೇಶಿಕ ಕ್ಷಿಪ್ರ ಸಾರಿಗೆ ವ್ಯವಸ್ಥೆ (RRTS) ಮತ್ತು 23 ಕಿ.ಮೀ. ಮೀರತ್ ಮೆಟ್ರೋದ ಉಳಿದ ಭಾಗಗಳನ್ನು ಉದ್ಘಾಟಿಸಿದರು. ಇದು ಭಾರತದ ಅತ್ಯಂತ ವೇಗದ ಮೆಟ್ರೋ ಸೇವೆಯಾಗಿದೆ. ಇದು ದೆಹಲಿ-NCR ನಲ್ಲಿ ಪ್ರಾದೇಶಿಕ ಸಂಪರ್ಕಕ್ಕೆ ಪ್ರಮುಖ ಉತ್ತೇಜನ ನೀಡುತ್ತದೆ. ಉದ್ಘಾಟನೆಯ ನಂತರ ಸಂಜೆ 6 ಗಂಟೆಗೆ ಸೇವೆಗಳು ಪ್ರಾರಂಭವಾಗಲಿವೆ. ಪ್ರಧಾನಿಯವರು ದೆಹಲಿಯ ಸರಾಯ್ ಕಾಲೇ ಖಾನ್ ಮತ್ತು ನ್ಯೂ ಅಶೋಕ್ ನಗರ ನಡುವಿನ 5 ಕಿ.ಮೀ. ಮಾರ್ಗ, ಮೀರತ್ ದಕ್ಷಿಣ ಮತ್ತು ಮೋದಿಪುರಂ ನಡುವಿನ 21 ಕಿ.ಮೀ. ಮಾರ್ಗ ಮತ್ತು ಶತಾಬ್ದಿ ನಗರ ನಿಲ್ದಾಣದಿಂದ ಮೀರತ್ ದಕ್ಷಿಣದಿಂದ ಮೋದಿಪುರಂವರೆಗಿನ ಮೆಟ್ರೋ ಮಾರ್ಗವನ್ನು ಉದ್ಘಾಟಿಸಿದರು. ದೆಹಲಿ ಮತ್ತು ಮೀರತ್ ನಡುವಿನ ಅಂತ್ಯದಿಂದ ಅಂತ್ಯದ ಪ್ರಯಾಣವು ಕೇವಲ ಒಂದು ಗಂಟೆಯೊಳಗೆ ತೆಗೆದುಕೊಳ್ಳುತ್ತದೆ. ಪ್ರಧಾನಿ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ರಾಷ್ಟ್ರೀಯ ರಾಜಧಾನಿ ಪ್ರದೇಶ ಸಾರಿಗೆ ನಿಗಮ (NCRTC) ಅಧಿಕಾರಿಗಳೊಂದಿಗೆ ಶತಾಬ್ದಿ…

Read More

ರಾಜಸ್ಥಾನ: ಇಲ್ಲಿನ ಜೋಧ್‌ಪುರದಲ್ಲಿ ಶನಿವಾರ ನಡೆಯಬೇಕಿದ್ದ ಜೋಡಿ ವಿವಾಹ ಸಮಾರಂಭಕ್ಕೆ ಕೆಲವೇ ಗಂಟೆಗಳ ಮೊದಲು ಇಬ್ಬರು ಸಹೋದರಿಯರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದ್ದು, ಈ ಘಟನೆಯ ಹಿಂದೆ ಸಂಬಂಧಿಯೊಬ್ಬರ ಆರೋಪವಿದೆ. ಮೃತರನ್ನು ದೀಪ್ ಸಿಂಗ್ ಅವರ ಪುತ್ರಿಯರಾದ 25 ವರ್ಷದ ಶೋಭಾ ಮತ್ತು 23 ವರ್ಷದ ವಿಮ್ಲಾ ಎಂದು ಗುರುತಿಸಲಾಗಿದೆ. ಇಬ್ಬರೂ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು. ಪ್ರಾಥಮಿಕ ತನಿಖೆಯ ಪ್ರಕಾರ ಸಹೋದರಿಯರು ವಿಷಕಾರಿ ವಸ್ತು ಸೇವಿಸಿ ಸಾವನ್ನಪ್ಪಿರಬಹುದು. ಆದಾಗ್ಯೂ, ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರ ಸಾವಿಗೆ ನಿಖರವಾದ ಕಾರಣ ತಿಳಿದುಬರುತ್ತದೆ. ಈ ಹಂತದಲ್ಲಿ ಅವರ ಸಾವಿಗೆ ಕಾರಣವನ್ನು ಖಚಿತಪಡಿಸಿಕೊಳ್ಳುವುದು ಅಕಾಲಿಕವಾಗಿರುತ್ತದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಶನಿವಾರ ಮುಂಜಾನೆ ಮಹಿಳೆಯರ ಆರೋಗ್ಯ ಹದಗೆಟ್ಟ ನಂತರ ಕುಟುಂಬ ಸದಸ್ಯರು ಅವರನ್ನು ಖಾಸಗಿ ಆಸ್ಪತ್ರೆಗೆ ಸಾಗಿಸಿದರು. ವೈದ್ಯರು ಆಗಮಿಸುವಾಗಲೇ ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಿದರು. ಘಟನೆಯ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಾಗ ಕುಟುಂಬವು ಅಂತ್ಯಕ್ರಿಯೆಗೆ ಸಿದ್ಧತೆಗಳನ್ನು ಪ್ರಾರಂಭಿಸಿತ್ತು,…

Read More