Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಆ ಕುಟುಂಬಕ್ಕೆ ಹೊಟ್ಟೆ ತುಂಬ ಉಣ್ಣೋದಕ್ಕೆ ಇದ್ದದ್ದೇ ಒಂದು ರೇಷನ್ ಕಾರ್ಡ್. ಸಿಟಿ ಸೇರಿದರೂ, ಹೊಟ್ಟೆಗೆ ಬಿಪಿಎಲ್ ಕಾರ್ಡ್ ಅಕ್ಕಿಯೇ ಗಟ್ಟಿಯಾಗಿತ್ತು. ಕಾರಣ ಕಡಿಮೆ ಸಂಬಳದಲ್ಲೂ, ಅನ್ನ ರಾಮಯ್ಯ ಎಂಬ ಕೀರ್ತಿಗಳಿಸಿದ್ದಂತ ಸಿದ್ಧರಾಮಯ್ಯ ಕೊಡುತ್ತಿದ್ದ 10 ಕೆಜಿ ಅಕ್ಕಿ ಹೊಟ್ಟೆ ತುಂಬಿಸುತ್ತಿತ್ತು. ಆದರೇ ಕಂಪನಿಯವರು ಟಿಡಿಎಸ್ ಪಡೆಯೋದಕ್ಕೆ ಐಟಿ ಫೈಲ್ ಮಾಡಬೇಕು ಎಂದಿದ್ದಕ್ಕೆ ಮಾಡಿದ್ದರ ಕಾರಣ, ಬಿಪಿಎಲ್ ಕಾರ್ಡ್ ರದ್ದಗೊಂಡು ವ್ಯಥೆ ಪಡುವಂತಾಗಿದೆ. ಆ ಬಿಪಿಎಲ್ ಕಾರ್ಡ್ ರದ್ದಾದವರ ಕಥೆ ಮುಂದೆ ಓದಿ. ರಾಜ್ಯದ ಹಳ್ಳಿಯೊಂದರಲ್ಲಿ ಅಪ್ಪ-ಮಗ ಇಬ್ಬರಿದ್ದರು. ಉದ್ಯೋಗ ಹರಸಿ ಬಂದಾಗ, ಹೆಚ್ಚು ಓದಿಲ್ಲದ ಅವರಿಗೆ ಜೀವನ ನಿರ್ವಹಣೆಗೆ ಸೇರಿದ್ದು ಸ್ವಿಗ್ಗಿಯಲ್ಲಿ ಪುಡ್ ಡಿಲವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದರು. ಕಷ್ಟ ಪಟ್ಟು ದುಡಿದಂತ ದುಡ್ಡಿನಲ್ಲೇ ಕಂಪನಿಯಿಂದ ಟಿಡಿಎಸ್ ಕಡಿತಗೊಳಿಸಿ ಹಣವನ್ನು ನೀಡಲಾಗುತ್ತಿತ್ತು. ಒಂದು ವರ್ಷಗಳ ಹಿಂದೆ ಕೆಲಸ ಬಿಟ್ಟಾಗ, ಕಂಪನಿಯವರು ನಿಮ್ಮ ಕಡಿತದ ಟಿಡಿಎಸ್ ಪಡೆಯೋದಕ್ಕೆ ಐಟಿ ಫೈಲ್ ಮಾಡಿ ಎಂಬುದಾಗಿ ಸೂಚಿಸಿತ್ತು. ಸ್ವಿಗ್ಗಿ ಕಂಪನಿಯವರು ಹೇಳಿದ್ದ…
ಬೆಂಗಳೂರು: ಕೃಷಿ ಭೂಮಿಯನ್ನು ಕೃಷಿಯೇತರ ಉದ್ದೇಶಗಳಿಗಾಗಿ ಭೂ ಪರಿವರ್ತಿಸುವುದಕ್ಕೆ ಸರ್ಕಾರ ಅವಕಾಶ ನೀಡಿದೆ. ಆದರೇ ಈ ಉದ್ದೇಶಗಳಿಗಾಗಿ ಕೆಲವು ದಾಖಲೆಗಳನ್ನು ಸಲ್ಲಿಸುವುದು ಕಡ್ಡಾಯವಾಗಿದೆ. ಈ ಸಂಬಂಧ ಕಂದಾಯ ಇಲಾಖೆಯ ಭೂಮಂಜೂರಾತಿ ವಿಭಾಗದ ಸರ್ಕಾರದ ಅಧೀನ ಕಾರ್ಯದರ್ಶಿಯವರು ದಿನಾಂಕ 20-02-2019ರಲ್ಲೇ ಹೊರಡಿಸಿರುವಂತ ನಡವಳಿಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಅದರಲ್ಲಿ ಕರ್ನಾಟಕ ಭೂ ಕಂದಾಯ ಕಾಯ್ದೆ, 1964ರ ಕಲಂ 95(2) ರಡಿಯಲ್ಲಿ ಕೃಷಿ ಉದ್ದೇಶಕ್ಕಾಗಿ ಹೊಂದಿರುವ ಭೂಮಿಯ ಅಧಿಭೋಗದಾರನು ಅಂತಹ ಜಮೀನನ್ನು ಅಥವಾ ಅದರ ಯಾವುದೇ ಭಾಗವನ್ನು ಕೃಷಿಯೇತರ ಉದ್ದೇಶಕ್ಕಾಗಿ ಪರಿವರ್ತಿಸಲು ಇಚ್ಚಿಸಿದರೆ ಜಿಲ್ಲಾಧಿಕಾರಿಯವರಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಮೇಲೆ ಓದಲಾದ ಕ್ರಮ ಸಂಖ್ಯೆ(1)ರ ಸರ್ಕಾರದ ಸುತ್ತೋಲೆ ದಿನಾಂಕ: 17-10-2008 ರನ್ವಯ ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ, 1961 (ಕೆಟಿಪಿಪಿ) ಅನ್ವಯ ಕೃಷಿ ಜಮೀನನ್ನು ಭೂ ಪರಿವರ್ತಿಸಲಾದ ಯಾವುದೇ ಕಾನೂನಿನ ಉಪಬಂಧಗಳನ್ನು ಉಲ್ಲಂಘಿಸುತ್ತಿಲ್ಲವೆಂಬುದನ್ನು ಹಾಗೂ ಭೂ ಉಪಯೋಗ ಬದಲಾವಣೆಗೆ ಸಂಬಂಧಿಸಿದ ಓಡಿಪಿ ಮತ್ತು ಸಿಡಿಪಿ ಅನ್ವಯ ಇದೆಯೇ ಎನ್ನುವ ಕುರಿತು ದೃಢೀಕರಿಸಿಕೊಳ್ಳುವ…
ಬೆಂಗಳೂರು: ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಪ್ರವೇಶ ಸಲುವಾಗಿ ನಡೆದ ಮೂಲ ದಾಖಲೆಗಳ ಪರಿಶೀಲನೆ ವೇಳೆ ಪರಿಶಿಷ್ಟ ಜಾತಿಯ ಒಳ ಮೀಸಲಾತಿ (SCA, SCB, SCC) ಸಂಬಂಧ ದಾಖಲೆ ಸಲ್ಲಿಸದಿರುವ ಅಭ್ಯರ್ಥಿಗಳು ನ.25 ಮತ್ತು 26 ರಂದು ಖುದ್ದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಚೇರಿಗೆ ಬಂದು ಸಲ್ಲಿಸಬಹುದು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ. ದಾಖಲೆ ಪರಿಶೀಲನೆ ವೇಳೆಗೆ ಅನೇಕರು ತಹಶೀಲ್ದಾರ್ ಅವರಿಂದ ಒಳ ಮೀಸಲಾತಿ ಕುರಿತ ಪ್ರಮಾಣ ಪತ್ರಗಳನ್ನು ಪಡೆಯಲು ಆಗಿರಲಿಲ್ಲ ಎಂದು ಅನೇಕ ಅಭ್ಯರ್ಥಿಗಳು ಮನವಿ ಸಲ್ಲಿಸಿದ ಕಾರಣಕ್ಕೆ ಈ ಅನುಕೂಲ ಮಾಡಲಾಗಿದೆ. ಯಾರೆಲ್ಲ ದಾಖಲೆಗಳನ್ನು ಪರಿಶೀಲನಾ ಅರ್ಜಿ ಜತೆ ಸಲ್ಲಿಸುತ್ತಾರೊ ಅಂತಹವರನ್ನು ಸದರಿ ಪ್ರವರ್ಗದಡಿ ಸೀಟು ಹಂಚಿಕೆಗೆ ಪರಿಗಣಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ. https://kannadanewsnow.com/kannada/whatever-siddaramaiah-says-it-is-the-same-as-the-scriptures-dcm-d-k-shivakumar/ https://kannadanewsnow.com/kannada/nutritionist-clarifies-whether-to-use-freshly-prepared-or-leftover-atta-dough-kept-in-refrigerator-wheat-is-not-the-villain/
ಬೆಂಗಳೂರು: ಮಾಧ್ಯಮಗಳು ಸ್ವಯಂ ನಿಯಂತ್ರಣ ವಿಧಿಸಿಕೊಂಡು ಸತ್ಯ ಮತ್ತು ನಿಖರ ಸುದ್ದಿಗಳನ್ನು ಜನರಿಗೆ ತಲುಪಿಸಲು ಸಂಘಟಿತ ನಡೆಸುವ ಮೂಲಕ ವಿಶ್ವಾಸರ್ಹತೆ ಕಾಪಾಡಿಕೊಳ್ಳಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ. ನಗರದ ಗಾಂಧೀಭವನದಲ್ಲಿಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲೂೃಜೆ) ರಾಜ್ಯ ಮಟ್ಟದ ಪದಾಧಿಕಾರಿಗಳ ಅಧಿಕಾರ ಸ್ವೀಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಸುದ್ದಿಯನ್ನು ತಲುಪಿಸುವ ನಿಟ್ಟಿನಲ್ಲಿ ಧಾವಂತ ಬೇಡ. ಸರಿಯಾದ ಸುದ್ದಿಯನ್ನು ಜನರಿಗೆ ತಲುಪಿಸುವುದು ಆದ್ಯತೆಯಾಗಬೇಕು ಎಂದು ಸಲಹೆ ನೀಡಿದರು. ಇದು ಕೃತಕ ಬುದ್ಧಿಮತ್ತೆ (ಎ.ಐ.)ಕಾಲವಾಗಿದ್ದು, ಮಾಧ್ಯಮಗಳು ಸುದ್ದಿ ಪ್ರಸಾರಕ್ಕೆ ಮುನ್ನ ಸುದ್ದಿ ಚಿತ್ರಗಳ ನೈಜತೆಯನ್ನು ಖಚಿತ ಪಡಿಸಿಕೊಳ್ಳುವುದು ಅಗತ್ಯ. ಸುಳ್ಳು ಸುದ್ದಿಗಳು, ನಕಲಿ ಚಿತ್ರ, ದೃಶ್ಯಗಳ ಬಗ್ಗೆ ಎಚ್ಚರಿಕೆ ಅಗತ್ಯ. ಒಮ್ಮೆ ಚಾರಿತ್ರ್ಯವಧೆ ಆದರೆ ಮತ್ತೆ ಅದನ್ನು ಸರಿಪಡಿಸಲು ಸಾಧ್ಯವಿಲ್ಲ ಎಂದು ಹೇಳಿದರು. ಮಾಧ್ಯಮಗಳಿಗೆ ವಿಶ್ವಾಸಾರ್ಹತೆ ಮುಖ್ಯ. ಹೀಗಾಗಿ ಪೂರ್ವಾಗ್ರಹ ಪೀಡಿತವಾಗಿ ಮತ್ತು ರೋಚಕ ಸುದ್ದಿಗಳನ್ನು ಬಿತ್ತಸಿರುವ ಧಾವಂತದಲ್ಲಿ ಸುಳ್ಳೇ ಸತ್ಯ ಎಂಬಂತೆ…
ಬೆಂಗಳೂರು: ಸಿದ್ದರಾಮಯ್ಯ ಅವರು ಹೇಳಿದ ಮೇಲೆ ಅದೇ ನಮಗೆ ವೇದವಾಕ್ಯ. ಅವರ ಮಾತಿಗೆ ನಾನು ಗೌರವ ನೀಡುತ್ತೇನೆ. ಸಿದ್ದರಾಮಯ್ಯ ಅವರು ಪಕ್ಷಕ್ಕೆ ದೊಡ್ಡ ಆಸ್ತಿ. ಅವರ ಮಾರ್ಗದರ್ಶನದಲ್ಲಿ ಕೆಲಸ ಮಾಡಿಕೊಂಡು ಹೋಗುತ್ತಿದ್ದೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ಶಿಡ್ಲಘಟ್ಟ ಹಾಗೂ ಬೆಂಗಳೂರಿನ ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು. ಹೈಕಮಾಂಡ್ ಹೇಳಿದ್ದನ್ನು ನಾನು, ಶಿವಕುಮಾರ್ ಸೇರಿದಂತೆ ಎಲ್ಲರೂ ಒಪ್ಪಬೇಕು ಎಂಬ ಸಿದ್ದರಾಮಯ್ಯ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ನಾವೆಲ್ಲರೂ ಹೈಕಮಾಂಡ್ ಮೇಲೆ ಗೌರವವನ್ನು ಇಟ್ಟಿದ್ದೇವೆ. ಅಧಿಕಾರ ಹಂಚಿಕೆ ಬಗ್ಗೆ ನಾನಾಗಲಿ ಯಾರೇ ಆಗಲಿ ಮಾತನಾಡಿಲ್ಲ. ಮಾಧ್ಯಮದವರು ಅನವಶ್ಯಕವಾಗಿ ಇದರ ಬಗ್ಗೆ ಸುದ್ದಿ ಮಾಡುತ್ತಾ ಇದ್ದೀರಿ. ನೀವುಗಳೇ ಅನವಶ್ಯಕ ಗೊಂದಲ ಮೂಡಿಸುತ್ತಿದ್ದೀರಿ. ನನಗೂ ಹಾಗೂ ಯಾರಿಗೂ ಗೊಂದಲಗಳಿಲ್ಲ. ಏನಾದರೂ ಇದ್ದರೆ ನಾನು ಹಾಗೂ ಪಕ್ಷದ ಹೈಕಮಾಂಡ್ ಬಗೆಹರಿಸಿಕೊಳ್ಳುತ್ತೇವೆ. ಏನೇ ತೀರ್ಮಾನ ಆಗಿದ್ದರು ಅದು ಒಂದು ಕೊಠಡಿಯ ಆಂತರಿಕ ಚೌಕಟ್ಟಿನ ಒಳಗೆ ಆಗಿರುತ್ತದೆ” ಎಂದರು.…
ಯಾದಗಿರಿ : ಅನಧಿಕೃತವಾಗಿ ಹುಕ್ ಗಳ ಮೂಲಕ ನಡೆಯುವ ವಿದ್ಯುತ್ ಕಳ್ಳತನ ತಡೆಗಟ್ಟಲು ಮತ್ತು ಅಧಿಕ ಲೋಡ್ ನಿಂದಾಗಿ ಟ್ರಾನ್ಸ್ ಫಾರ್ಮರ್ ಗಳು ಸುಟ್ಟು ಹೋಗುವುದನ್ನು ತಡೆಯಲು ತ್ವರಿತ ಕ್ರಮ ಜರುಗಿಸುವಂತೆ ಇಂಧನ ಸಚಿವ ಕೆ.ಜೆ.ಜಾರ್ಜ್ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಹಾಗೂ ಗುಲ್ಬರ್ಗ ವಿದ್ಯುತ್ ಸರಬರಾಜು ಕಂಪನಿ (ಜೆಸ್ಕಾಂ) ಸಹಯೋಗದಲ್ಲಿ ಇಲಾಖೆಗೆ ಸಂಬಂಧಿಸಿದಂತೆ ಆಯೋಜಿಸಿದ್ದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗಿ ನಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. “ರಾಜ್ಯದಲ್ಲಿ ವಿದ್ಯುತ್ ಕೊರತೆ ಇಲ್ಲ. ಆದರೆ, ಅದರ ಪೂರೈಕೆಯನ್ನು ಸಮರ್ಪಕಗೊಳಿಸುವುದು ಅವಶ್ಯವಾಗಿದೆ. ಹೀಗಾಗಿ ಪಂಪ್ ಸೆಟ್ ಗಳಿಗಾಗಿ ಹಾಗೂ ಇತರೆ ಅವಶ್ಯಕತೆಗಳು ಮತ್ತು ಕೈಗಾರಿಕೆಗಳ ವ್ಯಾಪ್ತಿಯಲ್ಲಿ ವಿದ್ಯುತ್ ಕಳ್ಳತನ ಆಗದಂತೆ ನಿಗಾವಹಿಸಬೇಕು. ಜತೆಗೆ ಅಧಿಕ ಲೋಡ್ ನಿಂದಾಗಿ ಟ್ರಾನ್ಸ್ ಫಾರ್ಮರ್ ಗಳು ಸುಟ್ಟು ಹೋಗದಂತೆ ನೋಡಿಕೊಳ್ಳಬೇಕು,” ಎಂದು ಸಭೆಯಲ್ಲಿ ಹಾಜರಿದ್ದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. “ಈಗಾಗಲೇ ಸ್ಥಾಪಿಸಿರುವ ವಿದ್ಯುತ್ ಉಪ…
ಶಿವಮೊಗ್ಗ : ಸಾಗರದ ಶ್ರೀ ಮಾರಿಕಾಂಬಾ ದೇವಿ ನ್ಯಾಸ ಪ್ರತಿಷ್ಟಾನದ ಚುನಾವಣೆಗೆ ತಡೆಯಾಜ್ಞೆ ತಂದಿರುವುದನ್ನು ತೆರವುಗೊಳಿಸಲು ನಮ್ಮ ಸಮಿತಿ ಪ್ರಯತ್ನಶೀಲವಾಗಿದೆ ಎಂದು ಪ್ರತಿಷ್ಟಾನದ ಉಪಾಧ್ಯಕ್ಷ ಸುಂದರ ಸಿಂಗ್ ತಿಳಿಸಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ನ.30ಕ್ಕೆ ಚುನಾವಣೆ ನಿಗಧಿಯಾಗಿದ್ದು, ಎಲ್ಲ ಪ್ರಕ್ರಿಯೆ ಮುಗಿದಿರುವ ಸಂದರ್ಭದಲ್ಲಿಯೆ ಕೊರಮ ಸಮಾಜದವರು ರಾಜ್ಯ ಉಚ್ಚ ನ್ಯಾಯಾಲಯಕ್ಕೆ ಹೋಗಿ ತಡೆಯಾಜ್ಞೆ ತಂದಿದ್ದಾರೆ ಎಂದರು. ಮಾರಿಕಾಂಬಾ ದೇವಿ ನ್ಯಾಸ ಪ್ರತಿಷ್ಟಾನವು ಜಿಲ್ಲಾ ನ್ಯಾಯಾಲಯದ ಸೂಚನೆಯನ್ನು ಕಟ್ಟುನಿಟ್ಟಾಗಿ ಪಾಲಿಸಿದೆ. ಜಿಲ್ಲಾ ನ್ಯಾಯಾಲಯವು ದಿನಾಂಕ 11-07-2025ರಂದು 11-10-2025ರೊಳಗೆ ಚುನಾವಣೆ ನಡೆಸಲು ಆದೇಶ ನೀಡಿತ್ತು. ಈಗಾಗಲೆ ಚುನಾವಣೆ ಪ್ರಕ್ರಿಯೆ ಆರಂಭವಾಗಿದ್ದು ಸೋಮವಾರ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗಿತ್ತು. ಚುನಾವಣೆಗೆ ಯಾವುದೇ ಅಡೆತಡೆ ಬರಬಾರದು ಎಂದು ನಮ್ಮ ಪ್ರತಿಷ್ಟಾನದ ವತಿಯಿಂದ ಕೆವಿಯಟ್ ಸಹ ತರಲಾಗಿತ್ತು. ಆದರೆ ಕೊರಮ ಸಮಾಜದವರು ತಮ್ಮ ಸಮುದಾಯಕ್ಕೆ ಪ್ರಾತಿನಿಧ್ಯ ನೀಡಿಲ್ಲ ಎಂದು ರಾಜ್ಯ ಉಚ್ಚ ನ್ಯಾಯಾಲಯದಲ್ಲಿ ದಾವೆ ಹೂಡಿದ್ದು ನ್ಯಾಯಾಲಯ…
ಬೆಂಗಳೂರು: ಕೆ ಎಸ್ ಸಿ ಎ ಅಧ್ಯಕ್ಷ ಸ್ಥಾನಕ್ಕೆ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕೆ ಎಸ್ ಸಿ ಎ ಅಧ್ಯಕ್ಷ ಸ್ಥಾನಕ್ಕೆ ಡಿಸೆಂಬರ್.7ರಂದು ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸುವಂತೆ ಹೈಕೋರ್ಟ್ ಸೂಚಿಸಿತ್ತು. ಹೀಗಾಗಿ ಚುನಾವಣಾ ಪ್ರಕ್ರಿಯೆ ಶುರುವಾಗಿ ಕ್ರಿಕೆಟಿಗೆ ವೆಂಕಟೇಶ್ ಪ್ರಸಾದ್ ಹಾಗೂ ವಿರೋಧಿ ಬಣದಿಂದ ಶಾಂತಕುಮಾರ್ ನಾಮಪತ್ರವನ್ನು ಸಲ್ಲಿಸಿದ್ದರು. ಆದರೇ ವಿರೋಧಿ ಬಣದಿಂದ ಅಭ್ಯರ್ಥಿಯಾಗಿ ಶಾಂತಕುಮಾರ್ ಸಲ್ಲಿಸಿದ್ದಂತ ನಾಮಪತ್ರ ತಿರಸ್ಕೃತಗೊಂಡಿದೆ. ಈ ಹಿನ್ನಲೆಯಲ್ಲಿ ಕೆ ಎಸ್ ಸಿ ಎ ( Karnataka State Cricket Association -KSCA) ಅಧ್ಯಕ್ಷ ಸ್ಥಾನಕ್ಕೆ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಅವಿರೋಧವಾಗಿ ಆಯ್ಕೆಯಾದಂತೆ ಆಗಿದೆ. https://kannadanewsnow.com/kannada/nutritionist-clarifies-whether-to-use-freshly-prepared-or-leftover-atta-dough-kept-in-refrigerator-wheat-is-not-the-villain/ https://kannadanewsnow.com/kannada/the-power-to-drive-away-evil-lies-in-two-leaves/
ಲಂಡನ್: ಬ್ರಿಟನ್ನಿನ ದೈತ್ಯ ಕಂಪನಿಗಳಿಂದ ರಾಜ್ಯಕ್ಕೆ ಬಂಡವಾಳ ಆಕರ್ಷಿಸಿ, ಕೈಗಾರಿಕಾ ಬೆಳವಣಿಗೆಗೆ ಇಂಬು ನೀಡುವ ಉದ್ದೇಶದಿಂದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರು ಕೈಗೊಂಡಿರುವ ಇಂಗ್ಲೆಂಡ್ ಪ್ರವಾಸ ಸೋಮವಾರದಿಂದ ಆರಂಭವಾಗಿದೆ. ಬುಧವಾರ ಕೊನೆಗೊಳ್ಳಲಿರುವ ಈ ಮೂರು ದಿನಗಳ ಪ್ರವಾಸದಲ್ಲಿ ಅವರು 20ಕ್ಕೂ ಹೆಚ್ಚು ಕಂಪನಿಗಳ ಪ್ರಮುಖರೊಂದಿಗೆ ಮಾತುಕತೆ ನಡೆಸಲಿದ್ದಾರೆ. ಮೊದಲ ದಿನವಾದ ಸೋಮವಾರ ಅವರು ಅಗ್ರಗಣ್ಯ ಉದ್ಯಮ ಸಂಸ್ಥೆಗಳಾಗಿರುವ ಮಾರ್ಟಿನ್ ಬೇಕರ್, ಎಸ್.ಸಿ.ಐ ಸೆಮಿಕಂಡಕ್ಟರ್ಸ್, ಸ್ಯಾಮ್ಕೊ ಹೋಲ್ಡಿಂಗ್ಸ್, ಎ.ಆರ್.ಎಂ, ಲ್ಯಾಟೋಸ್ ಗ್ರೂಪ್, ವಿಯರ್ ಮತ್ತು ಎಡ್ವರ್ಡಿಯನ್ ಹೋಟೆಲ್ ಗ್ರೂಪ್ ಪ್ರಮುಖರನ್ನು ಭೇಟಿ ಮಾಡಿದರು. ಈ ಪ್ರವಾಸ ಕಾರ್ಯಕ್ರಮ ಮೂರು ತಿಂಗಳ ಹಿಂದೆಯೇ ನಿಗದಿಯಾಗಿತ್ತು. ಈ ಸಂದರ್ಭದಲ್ಲಿ ರಾಜ್ಯದಲ್ಲಿರುವ ಕೈಗಾರಿಕಾ ಕಾರ್ಯ ಪರಿಸರ, ಮೂಲಸೌಕರ್ಯ, ಭೂಮಿಯ ಲಭ್ಯತೆ, ವಿಷನ್ ಗ್ರೂಪ್ ಚಿಂತನೆ, ಇನ್ವೆಸ್ಟ್ ಕರ್ನಾಟಕ ಫೋರಂನ ಉದ್ದೇಶ, ಪ್ರವರ್ಧಮಾನಕ್ಕೆ ಬರುತ್ತಿರುವ ಆಧುನಿಕ ಉದ್ದಿಮೆಗಳು, ರಫ್ತುಕೇಂದ್ರಿತ ಕೈಗಾರಿಕಾ ನೀತಿ, ಕೊಡಲಾಗುವ ರಿಯಾಯಿತಿ/ವಿನಾಯಿತಿ ಮತ್ತು ಪ್ರೋತ್ಸಾಹನಾ ಭತ್ಯೆಗಳನ್ನು ಕುರಿತು ಸಮಗ್ರ ಮಾಹಿತಿ…
ಬೆಂಗಳೂರು: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) – ಎಐ ಮತ್ತು ಡೇಟಾ ಸೈನ್ಸ್ ಶಾಖೆಯ ಮೂವರು ವಿದ್ಯಾರ್ಥಿಗಳು ಧಾರವಾಡದ ಐಐಐಟಿ ಮತ್ತು ಐಐಟಿ ಸಂಯುಕ್ತವಾಗಿ ಆಯೋಜಿಸಿದ್ದ ಹ್ಯಾಕಥಾನ್ನಲ್ಲಿ ಟಾಪ್ 5 ತಂಡಗಳಲ್ಲಿ 5ನೇ ಸ್ಥಾನಗಳಿಸಿದ್ದಾರೆ. ಈ ಕಾರ್ಯಕ್ರಮವನ್ನು ಉತ್ತರ ಕರ್ನಾಟಕದ ಅತಿದೊಡ್ಡ ಕೋಡಿಂಗ್ ಸ್ಪರ್ಧೆ ಎಂದು ಗುರುತಿಸಲಾಗಿದ್ದು, ರಾಜ್ಯದ 80 ಕಾಲೇಜುಗಳಿಂದ 125ಕ್ಕೂ ಹೆಚ್ಚು ತಂಡಗಳು ಭಾಗವಹಿಸಿದ್ದವು. ಈ ತೀವ್ರ ಸ್ಪರ್ಧೆಯಲ್ಲಿ ಪಿಯೂಷ್, ಅದ್ವಿಕಾ ಮತ್ತು ಪ್ರಜ್ವಲ್ ವಿದ್ಯಾರ್ಥಿಗಳ ತಂಡ ತಮ್ಮ ನೂತನ ಪರಿಹಾರಗಳು ಮತ್ತು ತಾಂತ್ರಿಕ ಪರಿಣತಿಯಿಂದ ಹೊರಹೊಮ್ಮಿದರು. ಅವರ ಸಾಧನೆ ಅವರಿಗೆ ಐಐಐಟಿ ಮತ್ತು ಐಐಟಿ ಧಾರವಾಡದಲ್ಲಿ ಇನ್ಕ್ಯೂಬೇಷನ್ ಅವಕಾಶಗಳನ್ನು ನೀಡಿದ್ದು, ಭವಿಷ್ಯದ ಉದ್ಯಮಶೀಲ ಪ್ರಯತ್ನಗಳಿಗೆ ದಾರಿ ತೆರೆದಿದೆ. ಜೊತೆಗೆ, ತಂಡಕ್ಕೆ ಅಲ್ಗೊರಿದಮ್ 365 ಪ್ರಾಯೋಜಿತ ₹1 ಲಕ್ಷ ಮೌಲ್ಯದ ಫುಲ್ ಸ್ಟಾಕ್ ಡೆವಲಪ್ಮೆಂಟ್ ಕೋರ್ಸ್ ದೊರೆತಿದೆ. ಇದು ಅವರ ಕೌಶಲ್ಯವನ್ನು ಮತ್ತಷ್ಟು ಬಲಪಡಿಸಲು ಸಹಾಯ ಮಾಡಲಿದೆ. ವಿದ್ಯಾರ್ಥಿಗಳ ಸಾಧನೆ ಕುರಿತು ಅಧ್ಯಾಪಕರು ಅಪಾರ ಹೆಮ್ಮೆ ವ್ಯಕ್ತಪಡಿಸಿದ್ದು, ಅವರ…














