Subscribe to Updates
Get the latest creative news from FooBar about art, design and business.
Author: kannadanewsnow09
ಉತ್ತರ ಕನ್ನಡ: ಜಿಲ್ಲೆಯ ಗೋಕರ್ಣ ಕಡಲ ಕಿನಾರೆಯಲ್ಲಿ ಮುಳುಗುತ್ತಿದ್ದಂತ ಮೂವರು ಪ್ರವಾಸಿಗರನ್ನು ಲೈಫ್ ಗಾರ್ಡ್ ಸಿಬ್ಬಂದಿಗಳು ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲ್ಲೂಕಿನ ಗೋಕರ್ಣ ಸಮುದ್ರದಲ್ಲಿ ಮುಳುಗುತ್ತಿದ್ದಂತ ಚಿತ್ರದುರ್ಗ ಮೂಲದ ಮನು(23), ಶಿವು(36) ಹಾಗೂ ಕಿರಣ್(26) ಎಂಬುವರನ್ನು ರಕ್ಷಣೆ ಮಾಡಲಾಗಿದೆ. ಚಿತ್ರದುರ್ಗದಿಂದ ಗೋಕರ್ಣಕ್ಕೆ 21 ಜನರು ಪ್ರವಾಸಕ್ಕೆ ತೆರಳಿದ್ದರು. ಲೈಫ್ ಗಾರ್ಡ್ ಸಿಬ್ಬಂದಿ ಎಚ್ಚರಿಕೆ ನೀಡಿದ್ದರೂ ಸಮುದ್ರಕ್ಕೆ ಇಳಿದಿದ್ದರು. ಅಲೆಗಳ ಅಬ್ಬರಕ್ಕೆ ಕೊಚ್ಚಿ ಹೋಗುತ್ತಿದ್ದ ಮೂವರು ಪ್ರವಾಸಿಗರನ್ನು ಲೈಫ್ ಗಾರ್ಡ್ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. https://kannadanewsnow.com/kannada/government-grants-for-school-and-assembly-hall-at-marikamba-temple-in-sagar-mla-gopalakrishna-belur/ https://kannadanewsnow.com/kannada/gift-from-the-state-government-to-the-lakkundi-rithi-family-site-cash-appointment-letter-handed-over/
ಗದಗ: ಜಿಲ್ಲೆಯ ಲಕ್ಕುಂಡಿಯಲ್ಲಿ ನಿಧಿ ಸಿಕ್ಕಿದ್ದನ್ನು ಸರ್ಕಾರಕ್ಕೆ ನೀಡಿದಂತ ರಿತ್ತಿ ಕುಟುಂಬಕ್ಕೆ ಸರ್ಕಾರ ಬಂಫರ್ ಗಿಫ್ಟ್ ನೀಡಿದೆ. ಮನೆ ನಿರ್ಮಾಣಕ್ಕೆ ನಿವೇಶನ, ಜೊತೆಗೆ 5 ಲಕ್ಷ ನಗದು ಹಾಗೂ ಕಸ್ತೂರೆವ್ವಗೆ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ನೀಡಿದೆ. ಇಂದು ಸಚಿವ ಹೆಚ್.ಕೆ ಪಾಟೀಲ್ ಅವರು ರಿತ್ತಿ ಕುಟುಂಬಕ್ಕೆ 30X40 ಅಳತೆಯ ನಿವೇಶನ, ಮನೆ ನಿರ್ಮಾಣಕ್ಕೆ 5 ಲಕ್ಷ ನಗದನ್ನು ನೀಡಿದರು. ಇದಲ್ಲದೇ ಕಸ್ತೂರೆವ್ವಗೆ ಹೊರಗುತ್ತಿಗೆ ಆಧಾರದಲ್ಲಿ ಕೆಲಸದ ಆದೇಶ ಪತ್ರವನ್ನು ನೀಡಿದರು. ರತ್ತಿ ಕುಟುಂಬವು ಮನೆ ನಿರ್ಮಾಣಕ್ಕಾಗಿ ಪಾಯ ತೆಗೆಯುತ್ತಿದ್ದಂತ ಸಂದರ್ಭದಲ್ಲಿ ಪುರಾತನ ಬಂಗಾರದ ಮಡಿಕೆ ದೊರೆತಿತ್ತು. ಅದನ್ನು ಸರ್ಕಾರಕ್ಕೆ ಒಪ್ಪಿಸಿದ್ದರು. ಅದೇ ಜಾಗದಲ್ಲಿ ಉತ್ಖನನಗೆ ಪುರಾತತ್ವ ಇಲಾಖೆ ನಿರ್ಧರಿಸಿತ್ತು. ಹೀಗಾಗಿ ಪರ್ಯಾಯ ನಿವೇಶನ ನೀಡುವಂತೆ ಸರ್ಕಾರಕ್ಕೆ ಕುಟುಂಬ ಮನವಿ ಮಾಡಿತ್ತು. ಈ ಹಿನ್ನಲೆಯಲ್ಲಿ ರಿತ್ತಿ ಕುಟುಂಬಕ್ಕೆ ಸಚಿವ ಹೆಚ್.ಕೆ ಪಾಟೀಲ್ ಅವರು ಇಂದು ಕಾರ್ಯಕ್ರಮವೊಂದರಲ್ಲಿ ಸನ್ಮಾನಿಸಿ, ನಿವೇಶನ ಹಂಚಿಕೆ ಪತ್ರ, ರಿತ್ತಿ ಕುಟುಂಬದ ಕಸ್ತೂರೆವ್ವಗೆ ಹೊರಗುತ್ತಿಗೆ ಆಧಾರದಲ್ಲಿ ನೇಮಕಾತಿ ಪತ್ರ ಹಾಗೂ…
ಶಿವಮೊಗ್ಗ: ಸಾಗರದ ಶ್ರೀ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನದಿಂದನ ನಿರ್ಮಿಸುವಂತ ಶಾಲೆ, ಸಭಾ ಭವನಕ್ಕೆ ಸಮಿತಿಯಿಂದ ಎಷ್ಟು ಆಗುತ್ತೋ ಅಷ್ಟು ಹಣದ ನೆರವಾಗಿ. ಇನ್ನುಳಿದ ಹಣವನ್ನು ಸರ್ಕಾರದಿಂದ ತಂದು ಶಾಲೆ, ಸಭಾ ಭವನವನ್ನು ಪೂರ್ಣಗೊಳಿಸುವ ಜವಾಬ್ದಾರಿ ನನ್ನದು ಎಂಬುದಾಗಿ ಶಾಸಕ ಗೋಪಾಲಕೃಷ್ಣ ಬೇಳೂರು ಭರವಸೆ ನೀಡಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಶ್ರೀ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನದ ನೂತನ ಶಾಲೆ, ಸಭಾಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಮಾತನಾಡಿದಂತ ಅವರು, ಫೆಬ್ರವರಿ 3ರಿಂದ 9 ದಿನಗಳ ವರೆಗೆ ಸಾಗರದ ಪ್ರಸಿದ್ಧ ಮಾರಿಕಾಂಬ ದೇವಿ ಜಾತ್ರೆ ನೆರವೇರಲಿದೆ. ಈ ಬಾರಿ ಕಳೆದ ಬಾರಿಗಿಂದ 20 ರಿಂದ 30 ಲಕ್ಷ ಜನರು ಬರುವ ನಿರೀಕ್ಷೆಯಿದೆ ಎಂದರು. ಮಾರಿಕಾಂಬ ಜಾತ್ರೆಗೆ ಆಗಮಿಸುವಂತ ಭಕ್ತರಿಗೆ ಯಾವುದೇ ಮೂಲಭೂತ ಸೌಕರ್ಯಗಳ ಕೊರತೆ ಆಗದಂತೆ ತಾಲ್ಲೂಕು ಆಡಳಿತದಿಂದ ಸಕಲ ಸಿದ್ಧತೆ ಮಾಡಲಾಗಿದೆ. ಜಾತ್ರೆಗಾಗಿ 20 ಸಮಿತಿಯನ್ನು ರಚನೆ ಮಾಡಲಾಗಿದ್ದು, ಒಂದೊಂದು ಕಮಿಟಿಗೂ ಓರ್ವ ಸರ್ಕಾರಿ ಅಧಿಕಾರಿಯನ್ನು ನಿಯೋಜಿಸಲಾಗಿದೆ. ಜಾತ್ರೆಗೆ…
ಗದಗ: ಜಿಲ್ಲೆಯ ಲಕ್ಕುಂಡಿಯಲ್ಲಿ ನಿಧಿ ಸಿಕ್ಕಿದ್ದನ್ನು ಸರ್ಕಾರಕ್ಕೆ ನೀಡಿದಂತ ರಿತ್ತಿ ಕುಟುಂಬಕ್ಕೆ ಸರ್ಕಾರ ಬಂಫರ್ ಗಿಫ್ಟ್ ನೀಡಿದೆ. ಮನೆ ನಿರ್ಮಾಣಕ್ಕೆ ನಿವೇಶನ, ಜೊತೆಗೆ 5 ಲಕ್ಷ ನಗದು ಹಾಗೂ ಕಸ್ತೂರೆವ್ವಗೆ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ನೀಡಿದೆ. ಇಂದು ಸಚಿವ ಹೆಚ್.ಕೆ ಪಾಟೀಲ್ ಅವರು ರಿತ್ತಿ ಕುಟುಂಬಕ್ಕೆ 30X40 ಅಳತೆಯ ನಿವೇಶನ, ಮನೆ ನಿರ್ಮಾಣಕ್ಕೆ 5 ಲಕ್ಷ ನಗದನ್ನು ನೀಡಿದರು. ಇದಲ್ಲದೇ ಕಸ್ತೂರೆವ್ವಗೆ ಹೊರಗುತ್ತಿಗೆ ಆಧಾರದಲ್ಲಿ ಕೆಲಸದ ಆದೇಶ ಪತ್ರವನ್ನು ನೀಡಿದರು.
ಉಡುಪಿ : ಐಲ್ಯಾಂಡ್ ಗಳನ್ನೂ ಸೇರಿಸಿಕೊಂಡು, ಸಂಪೂರ್ಣ ಕರಾವಳಿ ಭಾಗದಲ್ಲಿ ಹೊಸ ದೃಷ್ಟಿಕೋನದಿಂದ ಪ್ರವಾಸೋದ್ಯಮ ಬೆಳೆಸುವುದಕ್ಕೆ ನಾವು ಉತ್ಸುಕರಾಗಿದ್ದೇವೆ. ಇದು ಕೇವಲ ಕರಾವಳಿ ಭಾಗಕ್ಕಷ್ಟೇ ಅಲ್ಲದೆ, ರಾಜ್ಯದ ಮತ್ತು ದೇಶದ ಭವಿಷ್ಯಕ್ಕೆ ಹೊಸ ಬಾಗಿಲು ತೆರೆಯುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಸೇಂಟ್ ಮೇರೀಸ್ ಐಲ್ಯಾಂಡ್ ನಲ್ಲಿ ಸೋಮವಾರ 77ನೇ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ಈ ಐಲ್ಯಾಂಡ್ ಸೇರಿದಂತೆ ರಾಜ್ಯದಲ್ಲಿರುವ 116 ಐಲ್ಯಾಂಡ್ ಗಳೂ ನಿರ್ಲಕ್ಷ್ಯಕ್ಕೊಳಗಾಗಿದೆ. ಇಂತಹ ಅತ್ಯದ್ಭುತ ಸಂಪನ್ಮೂಲಗಳಿದ್ದರೂ ನಾವು ಪ್ರವಾಸೋದ್ಯಮದ ದೃಷ್ಟಿಯಿಂದ ಬಳಸಿಕೊಳ್ಳಲು ವಿಫಲರಾಗಿದ್ದೇವೆ. ಕೆಲವು ದಿನಗಳ ಹಿಂದೆ ಮಂಗಳೂರಿನಲ್ಲಿ ಕರಾವಳಿ ಪ್ರವಾಸೋದ್ಯಮದ ಹಿನ್ನೆಲೆಯಲ್ಲಿ ಇಡೀ ದಿನ ವಿಚಾರಸಂಕಿರಣವೊಂದನ್ನು ಆಯೋಜಿಸಲಾಗಿತ್ತು. ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಹಾಗೂ ಕರಾವಳಿ ಜಿಲ್ಲೆಗಳ ಎಲ್ಲ ಜನಪ್ರತಿನಿಧಿಗಳು, ಅಧಿಕಾರಿಗಳು ಇದರಲ್ಲಿ ಭಾಗವಹಿಸಿದ್ದರು. ಇಷ್ಟು ವರ್ಷಗಳ ಕಾಲ ನಿರ್ಲಕ್ಷ್ಯಕ್ಕೊಳಗಾಗಿರುವ ಕರಾವಳಿ ಭಾಗದಲ್ಲಿ ಪ್ರವಾಸೋದ್ಯಮ ಬೆಳೆಸಲು ನಾವು ಹೆಜ್ಜೆ ಇಟ್ಟಿದ್ದೇವೆ. ರಾಜ್ಯ ಸರಕಾರದ ಈ ಹೊಸ ಯೋಜನೆಗೆ ನಿಮ್ಮೆಲ್ಲರ…
ಬೆಂಗಳೂರು: ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಬಂಧನ ವಿಳಂಬವೇನು ಇಲ್ಲ. ಅವರ ಬಂಧನಕ್ಕೆ ಪೊಲೀಸರು ಕಾರ್ಯಪ್ರವೃತ್ತರಾಗಿದ್ದಾರೆ. ರಾಜೀವ್ ಗೌಡನನ್ನು ಹಿಡಿದೇ ಹಿಡೀತಿವಿ ಅದರಲ್ಲಿ ಎರಡು ಮಾತೇ ಇಲ್ಲ ಎಂಬುದಾಗಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ರಾಜೀವ್ ಗೌಡನನ್ನು ಹಿಡಿದೇ ಹಿಡೀತಿವಿ. ಸವಾಲೇನು ಇಲ್ಲ. ರಾಜೀವ್ ಗೌಡ ಎಷ್ಟು ದಿನ ತಪ್ಪಿಸಿಕೊಂಡು ಹೋಗೋಕೆ ಆಗುತ್ತೆ.? ಅವರೇನು ಇಲ್ಲೇ ಮನೆಯಲ್ಲಿ ಇದ್ದಾರಾ ಹಿಡಿದುಕೊಂಡು ಬರೋಕೆ ಎಂಬುದಾಗಿ ಪ್ರಶ್ನಿಸಿದರು. ಒಂದೊಂದು ಕೇಸಲ್ಲೂ ಅದಕ್ಕೆ ಆದ ಆಯಾಮಗಳು ಇರುತ್ತದೆ. ಮೈಸೂರು ಜಿಲ್ಲೆ ಹುಣಸೂರು ಪಟ್ಟಣದಲ್ಲಿ ದರೋಡೆ ಮಾಡಿದ್ರು. ದರೋಡೆಕೋರರನ್ನು ಬಂಧಿಸುತ್ತೇವೆ ಸಮಯ ಕೊಡಿ ಅಂದೆ. ಈಗ ಹಿಡಿದುಕೊಂಡು ಬಂದ್ರು. ಕಾನೂನು ಪ್ರಕಾರ ಕ್ರಮ ಕೈಗೊಳ್ತಾರೆ. ಅವರು ಕಳ್ಳತನ ಮಾಡಿರೋದ್ರಲ್ಲಿ ಅರ್ಧ ಸಿಕ್ಕಿದೆ. ಇನ್ನೂ ಉಳಿದ ಚಿನ್ನಾಭರಣಗಳನ್ನು ಮಾರಾಟ ಮಾಡಿಕೊಂಡಿದ್ದಾರೆ. ಕೆಲವು ಆರೋಪಿಗಳು ನೇಪಾಳಕ್ಕೆ ಹೋಗಿದ್ದಾರೆ ಅನ್ನುವ ಸುದ್ದಿ ಇದೆ. ಅನೇಕ ವಿಷಯಗಳು ನನಗೆ ಗೊತ್ತಿದೆ. ನಾನು ಈಗ ಹೇಳುವುದಿಲ್ಲ ಎಂದರು.…
ಉಡುಪಿ: ಜಿಲ್ಲೆಯ ಅರಬ್ಬಿ ಸಮುದ್ರದಲ್ಲಿ ಟೂರಿಸ್ಟ್ ಬೋಟ್ ಒಂದು ಮುಳುಗಿ ಇಬ್ಬರು ಪ್ರವಾಸಿಗರು ಸಾವನ್ನಪ್ಪಿರುವಂತ ಘಟನೆ ನಡೆದಿದೆ. ಉಡುಪಿ ತಾಲ್ಲೂಕಿನ ಕೋಡಿಬೆಂಗ್ರೆ ಬಳಿಯಲ್ಲಿ ಈ ದುರಂತ ಸಂಭವಿಸಿದೆ. ಬೋಟ್ ನಲ್ಲಿ ಶಂಕರಪ್ಪ (22), ಸಿಂಧು (23) ಸಾವನ್ನಪ್ಪಿದ್ದಾರೆ. ಧರ್ಮರಾಜ್ (26), ದಿಶಾ(26) ಎಂಬುವರ ಸ್ಧಿತಿ ಗಂಭೀರವಾಗಿದೆ. ಟೂರಿಸ್ಟ್ ಬೋಟ್ ನಲ್ಲಿ ಸಂಚಾರಕ್ಕೆ 15 ಪ್ರವಾಸಿಗರು ಹೋಗಿದ್ದರು. ಸಮುದ್ರ ಅಲೆಗೆ ಸಿಕ್ಕಿ ಟೂರಿಸ್ಟ್ ಬೋಟ್ ಮುಳುಗಿದೆ. ಅಸ್ವಸ್ಥರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಬೆಂಗಳೂರು: ನಗರದಲ್ಲಿ ಬಿಎಂಟಿಸಿ ಬಸ್ಸೊಂದಕ್ಕೆ ರೈಲು ಡಿಕ್ಕಿ ಹೊಡೆದಿದೆ. ಹೀಗಾಗಿ ರೈಲಿನ ಹಿಂಭಾಗ ಸಂಪೂರ್ಣ ಜಖಂಗೊಂಡಿರುವಂತ ಘಟನೆ ಸಾದರಮಂಗಲ ಬಳಿಯಲ್ಲಿ ನಡೆದಿದೆ. ಅದೃಷ್ಟವಶಾತ್ ಬಸ್ಸಿನಲ್ಲಿ ಪ್ರಯಾಣಿಕರು ಇಲ್ಲದ ಕಾರಣ ದೊಡ್ಡ ದುರಂತವೊಂದು ತಪ್ಪಿದೆ. ಬೆಂಗಳೂರಿನ ಸಾದರಮಂಗಲ ಬಳಿಯಲ್ಲಿ ಬಿಎಂಟಿಸಿ ಬಸ್ ಹಿಂದೆ ತೆಗೆದುಕೊಳ್ಳುತ್ತಿದ್ಗ ರೈಲು ಹಳಿಯ ಮೇಲೆ ನಿಂತಿತ್ತು. ಅದೇ ವೇಳೆಯಲ್ಲಿ ರೈಲು ಆಗಮಿಸಿದಾಗ ಬಸ್ಸಿನ ಹಿಂಭಾಗಕ್ಕೆ ಡಿಕ್ಕಿ ಹೊಡೆದ ಪರಿಣಾಮ ಜಖಂ ಆಗಿದೆ. ಬಿಎಂಟಿಸಿ ಬಸ್ಸಿನಲ್ಲಿದ್ದಂತ ನಿರ್ವಾಹಕನಿಗೆ ಸಣ್ಣಪುಟ್ಟ ಗಾಯವಾಗಿದೆ.
ಶಿವಮೊಗ್ಗ: ಇಂದು ಸಾಗರದ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನದಿಂದ ನಿರ್ಮಿಸಲು ಉದ್ದೇಶಿಸಿರುವಂತ ಶಿಕ್ಷಣ ಸಂಸ್ಥೆ, ಸಭಾ ಮಂಟಪದ ನಿರ್ಮಾಣ ಕಾಮಗಾರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಕುರಿತು ಶ್ರೀ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನದಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದಿನಾಂಕ 26-01-2026ರ ಸೋಮವಾರದ ಇಂದು ಬೆಳಗ್ಗೆ 11 ಗಂಟೆಗೆ ಶ್ರೀ ಮಾರಿಕಾಂಬಾ ಶಿಕ್ಷಣ ಸಂಸ್ಥೆ ಹಾಗೂ ಶ್ರೀ ಮಾರಿಕಾಂಬ ಸಭಾಮಂಟಪ ನಿರ್ಮಾಣ ಕಾಮಗಾರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ವಿದ್ಯುಕ್ತವಾಗಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದಿದೆ. ಇಂದಿನ ಶಂಕುಸ್ಥಾಪನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ದೇವಸ್ಥಾನ ಸಮಿತಿಯ ಅಧ್ಯಕ್ಷರಾದಂತ ಕೆ.ಎನ್ ನಾಗೇಂದ್ರ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಾಗರ ಉಪ ವಿಭಾಗಾಧಿಕಾರಿ ವಿರೇಶ ಕುಮಾರ್, ತಹಶೀಲ್ದಾರ್ ರಶ್ಮಿ, ಪೌರಾಯುಕ್ತ ಹೆಚ್.ಕೆ ನಾಗಪ್ಪ ಅವರು ಇರಲಿದ್ದಾರೆ ಎಂದಿದೆ. ಈ ವೇದಿಕೆಯಲ್ಲಿ ಶ್ರೀ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನದ ಉಪಾಧ್ಯಕ್ಷ ಸುಂದರ್ ಸಿಂಗ್, ಪ್ರಧಾನ ಕಾರ್ಯದರ್ಶಿ ಬಿ.ಗಿರಿಧರ್ ರಾವ್, ಸಹ ಕಾರ್ಯದರ್ಶಿ ಎಸ್ ವಿ ಕೃಷ್ಣಮೂರ್ತಿ, ಕೋಶಾಧ್ಯಕ್ಷರಾದಂತ…
ಮಂಡ್ಯ: ಜಿಲ್ಲೆಯ ಅಂಕೇಗೌಡ ಅವರಿಗೆ 2026ನೇ ಸಾಲಿನ ಪದ್ಮಶ್ರೀ ಪ್ರಶಸ್ತಿ ಗೌರವ ಸಂದಿದೆ. ಆ ಮೂಲಕ ಕನ್ನಡಿಗ ಅಂಕೇಗೌಡರಿಗೆ 2026ನೇ ಸಾಲಿನ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಚಿನಕುರಳಿ ಗ್ರಾಮದವರೇ ಅಂಕೇಗೌಡ ಆಗಿದ್ದಾರೆ. 20 ಲಕ್ಷಕ್ಕೂ ಹೆಚ್ಚು ಪುಸ್ತಕಗಳನ್ನು ಸಂಗ್ರಹಿಸಿದಂತ ಕೀರ್ತಿ ಅಂಕೇಗೌಡ ಅವರಿಗೆ ಸಲ್ಲುತ್ತದೆ. ಅಂಕೇಗೌಡ ಅವರು ಪುಸ್ತಕ ಮನೆ ಎನ್ನುವಂತ ಗ್ರಂಥಾಲಯವನ್ನೇ ನಿರ್ಮಿಸಿದ್ದಾರೆ. 20ನೇ ವಯಸ್ಸಿನಲ್ಲೇ ಪುಸ್ತಕ ಸಂಗ್ರಹಕ್ಕೆ ಇಳಿದಂತ ಅಂಕೇಗೌಡರು, ಪುಸ್ತಕ ಮನೆ ನಿರ್ಮಿಸಿ ಓದುವ ಹವ್ಯಾಸವನ್ನು ಹೆಚ್ಚಿಸುವಂತ ಕೆಲಸ ಮಾಡುತ್ತಿದ್ದಾರೆ. ಇದೀಗ ಪುಸ್ತಕ ಮನೆಯ ಸರದಾರ ಸಾಧಕರಾದಂತ ಅಂಕೇಗೌಡ ಅವರಿಗೆ 2026ನೇ ಸಾಲಿನ ಪದ್ಮಶ್ರೀ ಪ್ರಶಸ್ತಿಯನ್ನು ಕೇಂದ್ರ ಸರ್ಕಾರ ಘೋಷಿಸಿದೆ. https://twitter.com/ANI/status/2015351294068936913 https://kannadanewsnow.com/kannada/list-of-padma-shri-awardees-for-2026-announced-kannadigas-anke-gowda-honoured-with-prestigious-award/













