Subscribe to Updates
Get the latest creative news from FooBar about art, design and business.
Author: kannadanewsnow09
ಮಂಡ್ಯ : ನಾಗಮಂಗಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೊಪ್ಪ ಗ್ರಾಮದಲ್ಲಿ ಡಿ.3 ರಂದು 150 ಕೋಟಿಗೂ ಹೆಚ್ಚಿನ ಅನುದಾನದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸಲಾಗುವುದು ಎಂದು ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಬುಧವಾರ ಹೇಳಿದರು. ಕೊಪ್ಪ ಹೋಬಳಿಯ ಕೌಡ್ಲೆ ಗ್ರಾಮದಲ್ಲಿ ಪಶು ಆಸ್ಪತ್ರೆಯ ನೂತನ ಕಟ್ಟಡ ಹಾಗೂ ಕೌಡ್ಲೆ – ಗಟ್ಟಹಳ್ಳಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಕೊಪ್ಪ ಹೋಬಳಿಯ 8 ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಅಂದಾಜು 150 ಕೋಟಿಗೂ ಹೆಚ್ಚಿನ ಅನುದಾನದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಹಾಗೂ ಜನ ಸಂಪರ್ಕ ಸಭೆಯನ್ನು ಆಯೋಜಿಸಲಾಗಿದೆ ಎಂದರು. ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಪ್ರಾರಂಭವಾಗಲಿದ್ದು, ಹೀಗಾಗಿ ಸಮಯಾವಕಾಶದ ಕೊರತೆಯಿಂದ ಎಲ್ಲಾ ಗ್ರಾಮಗಳಿಗೆ ತೆರಳಿ ಕಾಮಗಾರಿಗಳಿಗೆ ಚಾಲನೆ ನೀಡಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಕೊಪ್ಪದಲ್ಲೇ ಎಲ್ಲಾ ಕಾಮಗಾರಿಗಳಿಗೆ ಚಾಲನೆ ನೀಡಲಾಗುವುದು ಎಂದು ತಿಳಿಸಿದರು. ಅಂದು ಜೊತೆಗೆ ಜನ ಸಂಪರ್ಕ ಸಭೆಯನ್ನು ಸಹ ಜಿಲ್ಲಾಡಳಿತ, ತಾಲೂಕು ಆಡಳಿತದ ಸಹಯೋಗದಲ್ಲಿ…
ಶಿವಮೊಗ್ಗ: ಸಾಗರ ಟೌನ್ ಠಾಣೆಯ ಪೊಲೀಸ್ ಲೋಕೇಶ್ ಪುತ್ರಿ ಪ್ರೇಕ್ಷಾ ಎಲ್ ಗೌಡ ಕ್ರೀಡಾ ಸಾಧನೆ ಮುಂದುವರೆದಿದೆ. ಈ ಹಿಂದೆ ಹಲವು ಸಾಧನೆ ಗೈದಿದ್ದಂತ ಪ್ರೇಕ್ಷಾ ಇದೀಗ ಎತ್ತರ ಜಿಗಿತದಲ್ಲಿ ರಾಜ್ಯಮಟ್ಟದಲ್ಲಿ ಚಿನ್ನ ಗೆದ್ದು, ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಕಳೆದ ನ.20ರಂದು ಹಾಸನದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ 14 ವರ್ಷ ವಯೋಮಿತಿಯ ಬಾಲಕ ಬಾಲಕಿಯರ ರಾಜ್ಯ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ ನಡೆಯಿತು. ಈ ಕ್ರೀಡಾಕೂಟದಲ್ಲಿ ಶಿವಮೊಗ್ಗದ ಶ್ರೀ ಆದಿಚುಂಚನಗಿರಿ ಶಾಲೆಯ 8ನೇ ತರಗತಿ ವ್ಯಾಸಂಗ ಮಾಡುತ್ತಿದ್ದ, ಸಾಗರ ಟೌನ್ ಪೊಲೀಸ್ ಠಾಣೆಯ ಪೋಲಿಸ್ ಕಾನ್ಸ್ ಟೇಬಲ್ ಆಗಿರುವಂತ ಲೋಕೇಶ್ ಮತ್ತು ಛಾಯಾ ಇವರ ಪುತ್ರಿ ಕುಮಾರಿ ಪ್ರೇಕ್ಷಾ.ಎಲ್. ಗೌಡ ಭಾಗವಹಿಸಿದ್ದರು. ಹಾಸನದಲ್ಲಿ ನಡೆದಂತ ರಾಜ್ಯಮಟ್ಟದ ಎತ್ತರ ಜಿಗಿತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ, ಚಿನ್ನದ ಪದಕವನ್ನು ಕುಮಾರಿ ಪ್ರೇಕ್ಷಾ ಎಲ್ ಗೌಡ ಗೆದ್ದಿದ್ದಾರೆ. ಮುಂದೆ ಮಧ್ಯಪ್ರದೇಶದ ಇಂದೋರ್ ನಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಕ್ರೀಡಾ ಕೂಟದಲ್ಲಿ ಭಾಗವಹಿಸಲಿದ್ದಾರೆ. ಲೋಕೇಶ್ ಅವರ ಪುತ್ರಿ ಪ್ರೇಕ್ಷಾ…
ನವದೆಹಲಿ: ಅಯೋಧ್ಯೆಯ ರಾಮ ಮಂದಿರದಲ್ಲಿ ಧ್ವಜಾರೋಹಣ ಅಥವಾ ಧ್ವಜಾರೋಹಣ ಸಮಾರಂಭದ ಕುರಿತು ಪಾಕಿಸ್ತಾನದ ಹೇಳಿಕೆಗಳಿಗೆ ಭಾರತ ತೀಕ್ಷ್ಣ ಪ್ರತಿಕ್ರಿಯೆ ನೀಡಿದೆ. ಪಾಕಿಸ್ತಾನವು ಇತರರಿಗೆ ಉಪನ್ಯಾಸ ನೀಡುವ ನೈತಿಕ ಅಧಿಕಾರವನ್ನು ಹೊಂದಿಲ್ಲ ಮತ್ತು ಬದಲಾಗಿ ತನ್ನದೇ ಆದ ಮಾನವ ಹಕ್ಕುಗಳ ಕಳಪೆ ದಾಖಲೆಯನ್ನು ಉಲ್ಲೇಖಿಸಬೇಕು ಎಂದು ಹೇಳಿದೆ. ಮಂಗಳವಾರ ಅಯೋಧ್ಯೆಯ ರಾಮ ಮಂದಿರದ ಶಿಖರದ ಮೇಲೆ ಪ್ರಧಾನಿ ನರೇಂದ್ರ ಮೋದಿ ಅವರು ಕೇಸರಿ ಧ್ವಜವನ್ನು ಔಪಚಾರಿಕವಾಗಿ ಹಾರಿಸಿದ ನಂತರ ಈ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇದು ದೇವಾಲಯದ ನಿರ್ಮಾಣ ಪೂರ್ಣಗೊಂಡಿರುವುದನ್ನು ಸೂಚಿಸುತ್ತದೆ. “ನಾವು ವರದಿಯಾದ ಹೇಳಿಕೆಗಳನ್ನು ನೋಡಿದ್ದೇವೆ ಮತ್ತು ಅವುಗಳನ್ನು ಅರ್ಹವಾದ ತಿರಸ್ಕಾರದಿಂದ ತಿರಸ್ಕರಿಸುತ್ತೇವೆ. ತನ್ನ ಅಲ್ಪಸಂಖ್ಯಾತರ ಮೇಲೆ ಧರ್ಮಾಂಧತೆ, ದಬ್ಬಾಳಿಕೆ ಮತ್ತು ವ್ಯವಸ್ಥಿತವಾಗಿ ನಡೆಸಿಕೊಳ್ಳುವ ಬಗ್ಗೆ ಆಳವಾದ ಕಲೆಗಳನ್ನು ಹೊಂದಿರುವ ದೇಶವಾಗಿ, ಪಾಕಿಸ್ತಾನವು ಇತರರಿಗೆ ಉಪನ್ಯಾಸ ನೀಡುವ ನೈತಿಕ ಸ್ಥಾನವನ್ನು ಹೊಂದಿಲ್ಲ” ಎಂದು ವಿದೇಶಾಂಗ ವ್ಯವಹಾರಗಳ ವಕ್ತಾರ ರಣಧೀರ್ ಜೈಸ್ವಾಲ್ ಬುಧವಾರ ನಡೆದ ಸಾಪ್ತಾಹಿಕ ಬ್ರೀಫಿಂಗ್ನಲ್ಲಿ ಹೇಳಿದರು. https://twitter.com/PTI_News/status/1993663508706398285 “ಕಪಟ ಧರ್ಮೋಪದೇಶಗಳನ್ನು ನೀಡುವ…
ನವದೆಹಲಿ: ಇದು ಅಧಿಕೃತ. ಈಗ ಅಹಮದಾಬಾದ್ ಅನ್ನು 2030 ರ ಕಾಮನ್ವೆಲ್ತ್ ಕ್ರೀಡಾಕೂಟದ ಅಧಿಕೃತ ಆತಿಥೇಯ ಎಂದು ಹೆಸರಿಸಲಾಗಿದೆ. ಭಾರತ ಕೊನೆಯ ಬಾರಿಗೆ 2010 ರಲ್ಲಿ ದೆಹಲಿಯಲ್ಲಿ ಕ್ರೀಡಾಕೂಟವನ್ನು ಆಯೋಜಿಸಿತ್ತು. ಈ ಬಾರಿ, ಕಳೆದ ದಶಕದಲ್ಲಿ ತನ್ನ ಕ್ರೀಡಾ ಮೂಲಸೌಕರ್ಯವನ್ನು ಗಮನಾರ್ಹವಾಗಿ ನವೀಕರಿಸಿದ ನಗರವಾದ ಅಹಮದಾಬಾದ್ನಲ್ಲಿ ಈ ಕಾರ್ಯಕ್ರಮ ನಡೆಯಲಿದೆ. 2030ರ ಕ್ರೀಡಾಕೂಟಕ್ಕೆ ಭಾರತದ ಬಿಡ್ ನೈಜೀರಿಯಾದ ಅಬುಜಾದಿಂದ ಸ್ಪರ್ಧೆಯನ್ನು ಎದುರಿಸಿತು. ಆದಾಗ್ಯೂ, ಕಾಮನ್ವೆಲ್ತ್ ಸ್ಪೋರ್ಟ್ ತನ್ನ ಆತಿಥ್ಯವನ್ನು ಬೆಂಬಲಿಸಲು ಮತ್ತು ವೇಗಗೊಳಿಸಲು ಒಂದು ತಂತ್ರವನ್ನು ಅಭಿವೃದ್ಧಿಪಡಿಸಿದ ನಂತರ 2024ರ ಆವೃತ್ತಿಗೆ ನೈಜೀರಿಯಾವನ್ನು ಪರಿಗಣಿಸಲು ನಿರ್ಧರಿಸಿತು. https://twitter.com/Team_Scotland/status/1993662526547169310 ಅಹಮದಾಬಾದ್ನ ಪುನರಾರಂಭ ಇತ್ತೀಚೆಗೆ, ಅಹಮದಾಬಾದ್ ಕಾಮನ್ವೆಲ್ತ್ ವೇಟ್ಲಿಫ್ಟಿಂಗ್ ಚಾಂಪಿಯನ್ಶಿಪ್ಗಳು, ಏಷ್ಯನ್ ಅಕ್ವಾಟಿಕ್ಸ್ ಚಾಂಪಿಯನ್ಶಿಪ್ಗಳು ಮತ್ತು ಎಎಫ್ಸಿ ಅಂಡರ್-೧೭ ಏಷ್ಯನ್ ಕಪ್ 2026 ಅರ್ಹತಾ ಪಂದ್ಯಗಳು ಸೇರಿದಂತೆ ಹಲವಾರು ಅಂತರರಾಷ್ಟ್ರೀಯ ಕ್ರೀಡಾಕೂಟಗಳನ್ನು ಆಯೋಜಿಸಿದೆ. ಮುಂದಿನ ವರ್ಷ, ಇದು ಏಷ್ಯನ್ ವೇಟ್ಲಿಫ್ಟಿಂಗ್ ಚಾಂಪಿಯನ್ಶಿಪ್ ಮತ್ತು ಏಷ್ಯಾ ಪ್ಯಾರಾ-ಆರ್ಚರಿ ಕಪ್ ಅನ್ನು ಆಯೋಜಿಸುತ್ತದೆ ಮತ್ತು 2029ರಲ್ಲಿ, ವಿಶ್ವ…
ಬೆಂಗಳೂರು: “ಸಚಿವ ಸತೀಶ್ ಜಾರಕಿಹೊಳಿ ಅವರು ಪಕ್ಷದ ಹಿರಿಯ ನಾಯಕರು. ಕಾಂಗ್ರೆಸ್ ಪಕ್ಷವನ್ನು 2028 ಹಾಗೂ 2029 ರ ಚುನಾವಣೆಯಲ್ಲಿ ಅಧಿಕಾರಕ್ಕೆ ತರುವ ಕಾರ್ಯತಂತ್ರದ ಬಗ್ಗೆ ಅವರ ಜತೆ ಚರ್ಚೆ ನಡೆಸಲಾಯಿತು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಭವನದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಬುಧವಾರ ಪ್ರತಿಕ್ರಿಯೆ ನೀಡಿದರು. “ನಾನು ಪಕ್ಷದ ಅಧ್ಯಕ್ಷ, ಸತೀಶ್ ಜಾರಕಿಹೊಳಿ ಅವರು ಪಕ್ಷದ ಕಾರ್ಯಾಧ್ಯಕ್ಷರು. ಜೊತೆಗೆ ನಾವಿಬ್ಬರು ಆತ್ಮೀಯ ಸ್ನೇಹಿತರು. ಇಬ್ಬರ ಬಾಂಧವ್ಯ ಚೆನ್ನಾಗಿದೆ. ನಾವಿಬ್ಬರು ಒಟ್ಟಿಗೆ ಕೆಲಸ ಮಾಡಿದ್ದೇವೆ. ನಾನು ಮತ್ತು ಸತೀಶ್ ಇಬ್ಬರೂ ಪ್ರಸ್ತುತ ಒಂದೇ ಸಂಪುಟದಲ್ಲಿ ಕೆಲಸ ಮಾಡುತ್ತಿದ್ದೇವೆ. ಸತೀಶ್ ಜಾರಕಿಹೊಳಿ ಅವರು ಪಕ್ಷದ ದೊಡ್ಡ ಆಸ್ತಿ. ನಾವು ನಮ್ಮ ಕೆಲಸ ಮುಂದುವರೆಸಿಕೊಂಡು ಹೋಗುತ್ತೇವೆ” ಎಂದರು. “ಸರ್ಕಾರ ಅಧಿಕಾರಕ್ಕೆ ಬಂದು ಎರಡೂವರೆ ವರ್ಷವಾಗಿದೆ. ಮಿಕ್ಕ ಸಮಯದಲ್ಲಿ ಏನೇನು ಕೆಲಸಗಳನ್ನು ಮಾಡಬೇಕು ಎಂದು ಚರ್ಚೆ ನಡೆಸಲಾಗಿದೆ. ಇದು ಬಿಟ್ಟರೆ ಮಾತುಕತೆಯಲ್ಲಿ ಬೇರೆ ವಿಶೇಷತೆ ಏನಿಲ್ಲ”…
ಬಳ್ಳಾರಿ : ದೇಶದಲ್ಲಿ ಪೋಲಿಯೋ ರೋಗವು ಮರುಕಳಿಸಬಾರದು ಎಂಬ ಮುನ್ನೆಚ್ಚರಿಕೆಯೊಂದಿಗೆ ಐದು ವರ್ಷದೊಳಗಿನ ಎಲ್ಲಾ ಮಕ್ಕಳನ್ನು ಪೋಲಿಯೊ ವೈರಸ್ ವಿರುದ್ಧ ರಕ್ಷಿಸಲು ಡಿ.21 ರಂದು ಬಳ್ಳಾರಿ ಸೇರಿದಂತೆ ರಾಜ್ಯಾಧ್ಯಂತ ಪಲ್ಸ್ ಪೋಲಿಯೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಿಶ್ವ ಆರೋಗ್ಯ ಸಂಸ್ಥೆ ಸಹಯೋಗದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಸಭಾಂಗಣದಲ್ಲಿ ಜಿಲ್ಲಾ ಮತ್ತು ತಾಲ್ಲೂಕು, ಕ್ಷೇತ್ರ ಮಟ್ಟದ ಮೇಲ್ವಿಚಾರಕರಿಗೆ ಮಂಗಳವಾರ ಹಮ್ಮಿಕೊಂಡಿದ್ದ ಪಲ್ಸ್ ಪೋಲಿಯೋ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಲು ಆರೋಗ್ಯ ಇಲಾಖೆಯ ಸಿಬ್ಬಂದಿ ಹೆಚ್ಚಿನ ರೀತಿಯಲ್ಲಿ ಪೋಷಕರಿಗೆ ಮನವರಿಕೆ ಮಾಡಿಕೊಡಬೇಕು ಎಂದು ತಿಳಿಸಿದರು. 2011 ರ ಜ.13 ರಂದು ಭಾರತದಲ್ಲಿ ಪೋಲಿಯೋ ಕೊನೆಯ ಪ್ರಕರಣ ವರದಿಯಾದ ನಂತರ ಇಲ್ಲಿಯವರೆಗೆ ನಿರಂತರ ನಿಗಾವಣೆಯೊಂದಿಗೆ 5…
ಬೆಂಗಳೂರು: ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯಲ್ಲಿ (ಕೆಸೆಟ್-25) ಅರ್ಹರಾದವರ ತಾತ್ಕಾಲಿಕ ಪಟ್ಟಿಯನ್ನು ಪ್ರಕಟಿಸಿದ್ದು, ದಾಖಲೆ ಪರಿಶೀಲನೆ ಸಂದರ್ಭದಲ್ಲಿ ಕ್ಲೇಮ್ ಪ್ರಕಾರ ಮೂಲ ದಾಖಲೆಗಳನ್ನು ಸಲ್ಲಿಸಿದವರಿಗೆ ಮಾತ್ರ ಕೆಸೆಟ್ ಪ್ರಮಾಣ ಪತ್ರ ನೀಡಲಾಗುತ್ತದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ. ದಾಖಲೆ ಪರಿಶೀಲನೆಗೆ ಆಹ್ವಾನಿಸುವ ದಿನದಂದು ಅರ್ಜಿಯಲ್ಲಿ ಉಲ್ಲೇಖಿಸಿರುವ ಪ್ರಕಾರ ಮೀಸಲಾತಿ ಸಂಬಂಧಿತ ದಾಖಲೆ ಹಾಗೂ ಸ್ನಾತಕೋತ್ತರ ಪದವಿ ಪ್ರಮಾಣ ಪತ್ರಗಳ ಮೂಲ ಪ್ರತಿಗಳನ್ನು ಹಾಜರುಪಡಿಸುವುದು ಕಡ್ಡಾಯ. ದಾಖಲೆಗಳನ್ನು ಪರಿಶೀಲಿಸಿ, ಸರಿ ಇದ್ದರೆ ಪ್ರಮಾಣ ಪತ್ರಗಳನ್ನು ನೀಡಲಾಗುವುದು ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಪ.ಜಾತಿ ಪ್ರವರ್ಗ-ಎ, ಪ್ರವರ್ಗ-ಬಿ ಮತ್ತು ಪ್ರವರ್ಗ-ಸಿ ಮೀಸಲಾತಿ ಕೋರಿರುವ ಅಭ್ಯರ್ಥಿಗಳು RD ಸಂಖ್ಯೆ ಇರುವ, ತಹಶೀಲ್ದಾರರಿಂದ ವಿತರಿಸಲ್ಪಟ್ಟ ಪ್ರಮಾಣ ಪತ್ರವನ್ನು ದಾಖಲೆ ಪರಿಶೀಲನೆ ವೇಳೆ ಕಡ್ಡಾಯವಾಗಿ ಹಾಜರುಪಡಿಸಬೇಕು. ಒಂದು ವೇಳೆ ಹಾಜರುಪಡಿಸದಿದ್ದಲ್ಲಿ ಪ್ರಮಾಣ ಪತ್ರ ನೀಡಲಾಗುವುದಿಲ್ಲ. ಹಾಗೂ ಆ ಪ್ರವರ್ಗಕ್ಕೆ ನಿಗದಿಯಾಗಿರುವ ಸ್ಲಾಟ್ ಗಳನ್ನು ಭರ್ತಿ ಮಾಡಲು ಅವರ ನಂತರದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು…
ಧಾರವಾಡ: ರಾಷ್ಟ್ರೀಯ ಆರೋಗ್ಯ ಅಭಿಯಾನ ಯೋಜನೆಯಡಿಯ ವಿವಿಧ ಕಾರ್ಯಕ್ರಮಗಳಡಿಯಲ್ಲಿ ಸನ್ 2024-25 ನೇ ಸಾಲಿನಲ್ಲಿ ಭರ್ತಿಯಾಗಿ ಖಾಲಿ ಉಳಿದಿರುವ ಹುದ್ದೆಗಳು ಮತ್ತು ಸನ್ 2025-26 ನೇ ಸಾಲಿನ ಆರ್ಓಪಿ ಯಲ್ಲಿ ಅನುಮೋದನೆಯಾಗಿರುವ ಹುದ್ದೆಗಳಿಗೆ, ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿದಾರು ರಾಷ್ಟ್ರೀಯ ಆರೋಗ್ಯ ಅಭಿಯಾನದ ಸುತ್ತೋಲೆ ಅನುಸಾರ ಕಂಪ್ಯೂಟರ್ ಸಾಕ್ಷರತೆ ಪರಿಕ್ಷೆಯಲ್ಲಿ ತೇರ್ಗಡೆಯಾದ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಸಲ್ಲಿಸಬೇಕು. ಒಟ್ಟು 42 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಿ, ಆಯ್ಕೆ ಪ್ರಕ್ರೀಯೆಯನ್ನು ಹಾಗೂ ಯೋಜನೆಯ ನಿಯಮಾನುಸಾರ ಮೇರಿಟ್ ಹಾಗೂ ರೊಷ್ಠರ್ ಆಧಾರದ ಮೇಲೆ ಮಾರ್ಚ್ 31, 2026 ವರೆಗೆ ಅಥವಾ ಸರ್ಕಾರದ ನಿಯಮಾವಳಿ ಸುತ್ತೋಲೆಯ ಪ್ರಕಾರ ಯಾವುದು ಮೊದಲು ಅದಕ್ಕೆ ಅನುಗುಣವಾಗಿ ವಿವಿಧ ಕಾರ್ಯಕ್ರಮದ ಅಡಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಡಿಸೆಂಬರ್ 02 ಮತ್ತು 03, 2025 ರಂದು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಿ, ಆಯ್ಕೆ ಪ್ರಕ್ರೀಯೆಯನ್ನು ಕೈಗೊಳ್ಳಲಾಗುವುದು. ಅರ್ಹ ಅಭ್ಯರ್ಥಿಗಳು ಕಡ್ಡಾಯವಾಗಿ ತಮ್ಮ ಮೂಲ ದಾಖಲಾತಿಗಳೊಂದಿಗೆ ಡಿಸೆಂಬರ್ 02 ಮತ್ತು 03, 2025…
ಬೆಳಗಾವಿ: ನಿನ್ನೆ ಕಲಬುರ್ಗಿಯ ಜೇವರ್ಗಿ ಬಳಿಯಲ್ಲಿ ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸಾವನ್ನಪ್ಪಿದ್ದರು. ಅವರೊಂದಿಗೆ ಅವರ ಸಹೋದರರು ಸಾವನ್ನಪ್ಪಿದ್ದರು. ಪೊಲೀಸ್ ಗೌರವಗಳೊಂದಿಗೆ ಮಹಾಂತೇಶ್ ಬೀಳಗಿ ಅವರನ್ನು ರಾಮದುರ್ಗದ ಬಳಿ ಇರುವಂತ ಜಮೀನಿನಲ್ಲಿ ಅಂತ್ಯಕ್ರಿಯೆಯನ್ನು ನೆರವೇರಿಸಲಾಯಿತು. ಬೆಳಗಾವಿ ಜಿಲ್ಲಯೆ ರಾಮದುರ್ಗದಲ್ಲಿ ಇರುವಂತ ಜಮೀನಿನಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿದಂತೆ ನಾಲ್ವರನ್ನು ಏಕಕಾಲಕ್ಕೆ ಅಂತ್ಯಕ್ರಿಯೆ ನೆರವೇರಿಸಲಾಯಿತು. ಮಹಾಂತೇಶ್ ಬೀಳಗಿ, ಸಹೋದರರಾದ ಶಂಕರ್, ಈರಣ್ಣ, ಸ್ನೇಹಿತ ಈರಣ್ಣ ಶರಸಂಗಿ ಅಂತ್ಯಕ್ರಿಯೆಯನ್ನು ಮಾಡಲಾಯಿತು.
ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿದ್ದಂತ ಕೆ ಎಸ್ ಸಿ ಎ ಅಧ್ಯಕ್ಷೀಯ ಚುನಾವಣೆ ಸ್ಪರ್ಧೆಯಲ್ಲಿ ಕೆಎನ್ ಶಾಂತಾಕುಮಾರ್ ಅವರ ನಾಮಪತ್ರ ತಿರಸ್ಕೃತಗೊಂಡ ಹಿನ್ನಲೆಯಲ್ಲಿ ಅವಿರೋಧವಾಗಿ ವೆಂಕಟೇಶ್ ಪ್ರಸಾದ್ ಆಯ್ಕೆಯಾಗಿದ್ದರು. ಇದನ್ನು ಪ್ರಶ್ನಿಸಿ ಶಾಂತಾಕುಮಾರ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ನಾಳೆಯವರೆಗೆ ಕೆ ಎಸ್ ಸಿ ಎ ಅಧ್ಯಕ್ಷ ಸ್ಥಾನದ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸದಂತೆ ಆದೇಶಿಸಿದೆ. ಕೆ ಎಸ್ ಸಿ ಎ ಅಧ್ಯಕ್ಷ ಚುನಾವಣೆಯಲ್ಲಿ ನಾಮಪತ್ರ ತಿರಸ್ಕೃತಗೊಂಡಿದ್ದನ್ನು ಪ್ರಶ್ನಿಸಿ ಅಭ್ಯರ್ಥಿ ಕೆ.ಎನ್ ಶಾಂತಾಕುಮಾರ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿಯಲ್ಲಿ ಚುನಾವಣಾಧಿಕಾರಿ ಆದೇಶ ರದ್ದುಪಡಿಸುವಂತೆ ಕೋರಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದಂತ ಹೈಕೋರ್ಟ್ ಏಕ ಸದಸ್ಯ ನ್ಯಾಯಪೀಠವು ನಾಳೆಯವರೆಗೆ ಅಧ್ಯಕ್ಷ ಸ್ಥಾನದ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸದಂತೆ ಸೂಚಿಸಿದೆ. ಇದಲ್ಲದೇ ನಾಮಪತ್ರ ಪರಿಶೀಲನೆ ವೇಳೆಗೆ ಚಂದಾ ಹಣ ಪಾವತಿಸಲಾಗಿತ್ತೇ? ಇದರ ಮಾಹಿತಿಯನ್ನು ಚುನಾವಣಾಧಿಕಾರಿಗಳಿಗಿತ್ತೇ ತಿಳಿಸಬೇಕು ಎಂದು ಹೇಳಿ ನಾಳೆಗೆ ವಿಚಾರಣೆ ಮುಂದೂಡಿಕೆ ಮಾಡಿದೆ. ಪ್ರತಿವಾದಿ ಬಿಕೆ ವೆಂಕಟೇಶ್ ಪ್ರಸಾದ್, ಕೆ ಎಸ್ ಸಿ ಎ ಚುನಾವಣಾಧಿಕಾರಿ ಕಲ್ಪನಾ…














