Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಯುಪಿಎಸ್ಸಿ ಪರೀಕ್ಷೆಯಲ್ಲಿ ರಾಜ್ಯದ ಹಿಂದುಳಿದ ಸಮುದಾಯದ ಅಭ್ಯರ್ಥಿಗಳು ಉತ್ತಮ ಸಾಧನೆ ಮಾಡಿದರೆ ಭವಿಷ್ಯದಲ್ಲಿ 500ಕ್ಕಿಂತ ಹೆಚ್ಚು ಅಭ್ಯರ್ಥಿಗಳಿಗೆ ಇಲಾಖೆ ವತಿಯಿಂದ ಉಚಿತ ವಸತಿ ಸಹಿತ ತರಬೇತಿ ಕೊಡಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್.ಎಸ್.ತಂಗಡಗಿ ಅವರು ಭರವಸೆ ನೀಡಿದರು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಹಿಂದುಳಿದ ಸಮುದಾಯದ ಅಭ್ಯರ್ಥಿಗಳಿಗೆ ನೀಡಲಾಗುವ ಉಚಿತ ವಸತಿ ಸಹಿತ ಐಎಎಸ್ ಮತ್ತು ಕೆಎಎಸ್ ತರಬೇತಿ ಕೇಂದ್ರವನ್ನು ಗುರುವಾರ ಉದ್ಘಾಟಿಸಿ ಅವರು ಮಾತನಾಡಿದರು. ದೆಹಲಿಯಲ್ಲಿ ತರಬೇತಿ ಕೇಂದ್ರ ತೆರೆಯಬೇಕೆಂದು ನಿರ್ಧಾರ ಮಾಡಲಾಗಿತ್ತು. ಆದರೆ ಸ್ಥಳ ಸಿಗದ ಕಾರಣ, ಬೆಂಗಳೂರಿನಲ್ಲಿ ತರಬೇತಿ ಕೇಂದ್ರ ತೆರೆಯಲಾಗಿದೆ. ಪ್ರಸ್ತುತ 150 ಮಂದಿ ಹಿಂದುಳಿದ ಸಮುದಾಯದ ಅಭ್ಯರ್ಥಿಗಳಿಗೆ ಉಚಿತ ಊಟ, ವಸತಿ ಸಹಿತ ಪರೀಕ್ಷೆಗೆ ಹತ್ತು ತಿಂಗಳು ತರಬೇತಿ ನೀಡಲಾಗುತ್ತಿದೆ ಎಂದು ಹೇಳಿದರು. ಸರ್ಕಾರ ನಿಮ್ಮ ಜವಾಬ್ದಾರಿ ತೆಗೆದುಕೊಂಡಿದೆ. ಇಷ್ಟು ಮೊತ್ತದ ಹಣವನ್ನು ಈ ಕಾರ್ಯಕ್ರಮಕ್ಕೆ ವ್ಯಯಿಸಲು ಸರ್ಕಾರಕ್ಕೆ ಕಷ್ಟ ಆಗುವುದಿಲ್ಲ. ನೀವು…
ಬೆಂಗಳೂರು: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು ದಿನಾಂಕ 27ನೇ ಫೆಬ್ರವರಿ 2026 ಯಿಂದ ಹಳದಿ ಮಾರ್ಗದಲ್ಲಿ 8ನೇ ರೈಲನ್ನು ಪ್ರಯಾಣಿಕರ ಸೇವೆಗೆ ಸೇರಿಸಲಾಗುತ್ತಿದೆ. ಹೆಚ್ಚುವರಿ ರೈಲು ಸೇರ್ಪಡೆಯೊಂದಿಗೆ, ಸೋಮವಾರದಿಂದ ಶನಿವಾರದವರೆಗೆ ಹಳದಿ ಮಾರ್ಗದಲ್ಲಿ ಪೀಕ್ ಅವಧಿಯ ವೇಳೆಯಲ್ಲಿ 10 ನಿಮಿಷಗಳ ಬದಲಿಗೆ 9 ನಿಮಿಷಗಳ ಅಂತರದಲ್ಲಿ ಹಾಗೂ ನಾನ್-ಪೀಕ್ ಅವಧಿಯಲ್ಲಿ 18 ನಿಮಿಷಗಳ ಬದಲಿಗೆ 14 ನಿಮಿಷಗಳ ಅಂತರದಲ್ಲಿ ಮೆಟ್ರೋ ಸೇವೆಗಳು ಸಂಚರಿಸಲಿವೆ. ಭಾನುವಾರದ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಎಲ್ಲಾ ದಿನಗಳಲ್ಲಿಆರ್.ವಿ. ರಸ್ತೆ ಹಾಗೂ ಬೊಮ್ಮಸಂದ್ರ ಟರ್ಮಿನಲ್ ನಿಲ್ದಾಣಗಳಿಂದ ಮೊದಲ ಮತ್ತು ಕೊನೆಯ ರೈಲುಗಳ ಸಮಯದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಪ್ರಯಾಣಿಕರು ಮೇಲ್ಕಂಡ ಬದಲಾವಣೆಗಳನ್ನು ಗಮನಿಸಿ, ಸುಧಾರಿತ ಮೆಟ್ರೋ ಸೇವೆಯನ್ನು ಸದುಪಯೋಗಪಡಿಸಿಕೊಳ್ಳುವಂತೆ ವಿನಂತಿಸಿಕೊಳ್ಳಲಾಗಿದೆ. ಸಾರ್ವಜನಿಕರು ಹಾಗೂ ಮೆಟ್ರೋ ಪ್ರಯಾಣಿಕರ ಮಾಹಿತಿಗಾಗಿ ಈ ವಿಷಯವನ್ನು ತಮ್ಮ ಗೌರವಾನ್ವಿತ ಮಾಧ್ಯಮಗಳ ಮೂಲಕ ವ್ಯಾಪಕ ಪ್ರಚಾರವನ್ನು ನೀಡಲು ಕೋರಿದೆ. https://kannadanewsnow.com/kannada/yediyurappa-bommai-didnt-you-give-urdu-advertisements-cm-questions-with-evidence/ https://kannadanewsnow.com/kannada/video-of-elephant-lifting-man-by-its-trunk-in-kerala-goes-viral-my-jhum/
ಬೆಂಗಳೂರು: ಹಿಂದೆ ತಾವೇ ಅಧಿಕಾರದಲ್ಲಿ ಇದ್ದಾಗ ಉರ್ದು ಭಾಷೆಯ ಜಾಹೀರಾತು ನೀಡಿ, ಈಗ ನಮ್ಮ ವಿರುದ್ಧ ಮುಗಿಬೀಳುವುದು ಆತ್ಮವಂಚನೆ ಮತ್ತು ಅಸಹ್ಯದ ಪರಮಾವಧಿ. ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಅವರು ಅಧಿಕಾರದಲ್ಲಿದ್ದಾಗ ಯಾರ ಓಲೈಕೆ ಮಾಡಲು ಉರ್ದು ಜಾಹೀರಾತು ನೀಡಿದ್ದರು? ಎಂದು ಹೇಳಿ ಪುಣ್ಯಕಟ್ಟಿಕೊಳ್ಳಿ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ತಿರುಗೇಟು ನೀಡಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಉರ್ದು ಪತ್ರಿಕೆಯಲ್ಲಿ ಸರ್ಕಾರದ ಜಾಹೀರಾತೊಂದು ಉರ್ದು ಭಾಷೆಯಲ್ಲಿ ಪ್ರಕಟಗೊಂಡಿದ್ದನ್ನು ವಿರೋಧಿಸಿ ವಿಪಕ್ಷಗಳ ನಾಯಕರು ಆಡಿರುವ ವೀರಾವೇಶದ ಮಾತುಗಳನ್ನು ಆಲಿಸಿದೆ. ಹಿಂದೆ ತಾವೇ ಅಧಿಕಾರದಲ್ಲಿ ಇದ್ದಾಗ ಉರ್ದು ಭಾಷೆಯ ಜಾಹೀರಾತು ನೀಡಿ, ಈಗ ನಮ್ಮ ವಿರುದ್ಧ ಮುಗಿಬೀಳುವುದು ಆತ್ಮವಂಚನೆ ಮತ್ತು ಅಸಹ್ಯದ ಪರಮಾವಧಿ. ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಅವರು ಅಧಿಕಾರದಲ್ಲಿದ್ದಾಗ ಯಾರ ಓಲೈಕೆ ಮಾಡಲು ಉರ್ದು ಜಾಹೀರಾತು ನೀಡಿದ್ದರು? ಎಂದು ಹೇಳಿ ಪುಣ್ಯಕಟ್ಟಿಕೊಳ್ಳಿ ಎಂದಿದ್ದಾರೆ. ಸರ್ಕಾರದ ಕಾರ್ಯಕ್ರಮಗಳು, ಯೋಜನೆಗಳ ಮಾಹಿತಿಯನ್ನು ಜನರಿಗೆ ತಲುಪಿಸುವ ಉದ್ದೇಶದಿಂದಲೇ ಸರ್ಕಾರ ಜಾಹೀರಾತು ನೀಡುತ್ತದೆ. ಹೆಚ್ಚೆಚ್ಚು ಜನರನ್ನು ತಲುಪುತ್ತದೆ…
ತಿರುವನಂತಪುರಂ: ಕೇರಳದ ಸಾಂಪ್ರದಾಯಿಕ ದೇವಾಲಯದ ಉತ್ಸವವೊಂದು ಕ್ಷಣಾರ್ಧದಲ್ಲಿ ರಣರಂಗವಾಗಿ ಮಾರ್ಪಟ್ಟಿದೆ. ಮೆರವಣಿಗೆಯ ಸಿದ್ಧತೆ ನಡೆಯುತ್ತಿದ್ದಾಗ ಆನೆಯೊಂದು ಹಠಾತ್ತನೆ 26 ವರ್ಷದ ಯುವಕನ ಮೇಲೆ ದಾಳಿ ಮಾಡಿ, ಆತನನ್ನು ಗಾಳಿಯಲ್ಲಿ ಎತ್ತಿ ಬಿಸಾಡಿದ ಘಟನೆ ಅಣ್ಣಮ್ಮನಡ ಮಹಾದೇವ ದೇವಸ್ಥಾನದ ‘ವಲಿಯವಿಳಕ್ಕು’ ಹಬ್ಬದಲ್ಲಿ ನಡೆದಿದೆ. ಘಟನೆಯ ವಿವರ: ವಾರ್ಷಿಕ ಉತ್ಸವದ ಅಂಗವಾಗಿ ದೇವಸ್ಥಾನದಲ್ಲಿ ಮೆರವಣಿಗೆಯ ಸಿದ್ಧತೆಗಳು ಭರದಿಂದ ಸಾಗುತ್ತಿದ್ದವು. ವೈರಲ್ ಆಗಿರುವ ವೀಡಿಯೊದಲ್ಲಿ ಕಂಡಂತೆ, ಆನೆಯ ಮೇಲೆ ಮಾವುತ ಏರಲು ಯತ್ನಿಸುತ್ತಿದ್ದಾಗ, ಆನೆಯ ಮುಂಭಾಗದಲ್ಲಿ ಅಲಂಕಾರಿಕ ವಸ್ತುವನ್ನು ಹಿಡಿದು ನಿಂತಿದ್ದ ಯುವಕನ ಮೇಲೆ ಗಜರಾಜ ಹಠಾತ್ತನೆ ದಾಳಿ ಮಾಡಿದ್ದಾನೆ. ಯಾವುದೇ ಮುನ್ಸೂಚನೆ ನೀಡದ ಆನೆಯು ಯುವಕನ ಕಾಲುಗಳನ್ನು ತನ್ನ ಸೊಂಡಿಲಿನಿಂದ ಸುತ್ತುವರಿದು, ಬಲವಾಗಿ ಗಾಳಿಯಲ್ಲಿ ಎತ್ತಿ ದೂರಕ್ಕೆ ಬಿಸಾಡಿದೆ. https://twitter.com/TimesNow/status/2026988583337468298 ಗಂಭೀರ ಸ್ಥಿತಿಯಲ್ಲಿ ಯುವಕ: ದಾಳಿಗೊಳಗಾದ ಯುವಕನನ್ನು ತಕ್ಷಣವೇ ಅಂಗಮಾಲಿಯ ಅಪೊಲೊ ಅಡ್ಲಕ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಯುವಕನ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಈ ಘಟನೆಯಿಂದ ಸ್ಥಳದಲ್ಲಿದ್ದ ನೂರಾರು ಭಕ್ತರು ಪ್ರಾಣಭಯದಿಂದ ದಿಕ್ಕಾಪಾಲಾಗಿ…
ಬೆಂಗಳೂರು: 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣಗಳನ್ನು (Social Media) ನಿಷೇಧಿಸುವ ಕುರಿತು ರಾಜ್ಯ ಸರ್ಕಾರ ಆಲೋಚಿಸುತ್ತಿದ್ದು, ಈ ನಿಟ್ಟಿನಲ್ಲಿ ಮಕ್ಕಳು, ಪೋಷಕರು ಮತ್ತು ತಜ್ಞರ ಅಭಿಪ್ರಾಯ ಪಡೆದು ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಗುರುವಾರ ಬೆಂಗಳೂರಿನ ಜವಾಹರಲಾಲ್ ನೆಹರು ತಾರಾಲಯದಲ್ಲಿ ಹಮ್ಮಿಕೊಳ್ಳಲಾಗಿದ್ದ ‘ರಾಷ್ಟ್ರೀಯ ವಿಜ್ಞಾನ ದಿನಾಚರಣೆ’ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು. ಪೋಷಕರು ಮೊದಲು ಎಚ್ಚೆತ್ತುಕೊಳ್ಳಬೇಕು ಮಕ್ಕಳು ಮೊಬೈಲ್ ಚಟಕ್ಕೆ ಬೀಳುವಲ್ಲಿ ಪೋಷಕರ ಪಾತ್ರದ ಬಗ್ಗೆ ಬೇಸರ ವ್ಯಕ್ತಪಡಿಸಿದ ಸಚಿವರು, “ಇವತ್ತಿನ ವ್ಯವಸ್ಥೆಯಲ್ಲಿ ಮಗು ಅಳುತ್ತಿದೆ ಅಥವಾ ಸುಮ್ಮನಿರಲಿ ಎಂದು ಪೋಷಕರೇ ತಮ್ಮ ಕೈಯಾರೆ ಮೊಬೈಲ್ ಕೊಡುತ್ತಾರೆ. ಸಮಸ್ಯೆಯ ಮೂಲ ಇರುವುದೇ ಅಲ್ಲಿ. ಮೊಬೈಲ್ ಮತ್ತು ಸಾಮಾಜಿಕ ಜಾಲತಾಣಗಳಿಂದ ಮಕ್ಕಳು ದಾರಿ ತಪ್ಪುತ್ತಿದ್ದಾರೆ ಎಂಬುದು ಕೇವಲ ನಮ್ಮ ರಾಜ್ಯದ್ದಲ್ಲ, ಇಡೀ ದೇಶದ ಸಮಸ್ಯೆಯಾಗಿದೆ,” ಎಂದರು. ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರ ಸೂಚನೆಯಂತೆ ‘ಮೊಬೈಲ್ ಬಿಡಿ,…
ನವದೆಹಲಿ : ಟೆಲಿಕಾಂ ವಲಯದ ಕುರಿತು ಐಸಿಐಸಿಐ ಸೆಕ್ಯೂರಿಟೀಸ್ ಮತ್ತು ಸಿಎಲ್ಎಸ್ಎ (CLSA) ಇತ್ತೀಚಿನ ವರದಿಯು ರಿಲಯನ್ಸ್ ಜಿಯೋದ ಪ್ರಗತಿಯನ್ನು ಸ್ಪಷ್ಟವಾಗಿ ಎತ್ತಿ ತೋರಿಸುತ್ತದೆ. ಮೂರನೇ ತ್ರೈಮಾಸಿಕದಲ್ಲಿ (Q3FY26) ಜಿಯೋ ಉದ್ಯಮದ ಹೊಂದಾಣಿಕೆಯ ಒಟ್ಟು ಆದಾಯ (AGR – Adjusted Gross Revenue) ಮತ್ತು ಆದಾಯದ ಪಾಲು(Revenue share) ಎರಡರಲ್ಲೂ ತನ್ನ ಪ್ರತಿಸ್ಪರ್ಧಿಗಳನ್ನು ಮೀರಿಸಿದೆ. ಐಸಿಐಸಿಐ ಸೆಕ್ಯೂರಿಟೀಸ್ ಪ್ರಕಾರ, ಜಿಯೋ, ಏರ್ಟೆಲ್ ಮತ್ತು ವೊಡಾಫೋನ್ ಐಡಿಯಾ – ಮೂರು ಖಾಸಗಿ ಸಂಸ್ಥೆಯೂ ಸೇರಿ ಸಂಯೋಜಿತ ಎಜಿಆರ್ (AGR) – Q3FY26ರಲ್ಲಿ ಶೇ 2.9ರಷ್ಟು ತ್ರೈಮಾಸಿಕದಿಂದ ತ್ರೈಮಾಸಿಕಕ್ಕೆ (QoQ) ಮತ್ತು ಶೇಕಡಾ 8.9ರಷ್ಟು ವರ್ಷದಿಂದ ವರ್ಷಕ್ಕೆ (YoY) 72,000 ಕೋಟಿ ರೂಪಾಯಿಗೆ ಏರಿದೆ. ಈ ಅವಧಿಯಲ್ಲಿ, ರಿಲಯನ್ಸ್ ಜಿಯೋದ ಎಜಿಆರ್ 32,000 ಕೋಟಿ ರೂಪಾಯಿ ಆಗಿದ್ದು, ಇದು ತ್ರೈಮಾಸಿಕದಿಂದ ತ್ರೈಮಾಸಿಕಕ್ಕೆ (QoQ) ಶೇ 3.9ರಷ್ಟು ಮತ್ತು ವರ್ಷಕ್ಕೆ ಶೇ 11.2ರಷ್ಟು ಬೆಳವಣಿಗೆಯನ್ನು ಪ್ರತಿನಿಧಿಸುತ್ತದೆ. ಇದು ಜಿಯೋದ ಎಜಿಆರ್ ಮಾರುಕಟ್ಟೆ ಪಾಲನ್ನು ಶೇ 43ಕ್ಕೆ…
ಬೆಂಗಳೂರು: ಭಾರತೀಯ ಅಡುಗೆ ಮನೆಯಲ್ಲಿ ಶುಂಠಿಗೆ ವಿಶೇಷ ಸ್ಥಾನವಿದೆ. ಚಹಾದ ರುಚಿ ಹೆಚ್ಚಿಸುವುದರಿಂದ ಹಿಡಿದು ಬಿರಿಯಾನಿಯ ಪರಿಮಳದವರೆಗೆ ಶುಂಠಿ ಬೇಕೇ ಬೇಕು. ಆದರೆ, ಈ ಪುಟ್ಟ ಶುಂಠಿಯಲ್ಲಿ ಅಡಗಿರುವ ಔಷಧೀಯ ಗುಣಗಳು ಬೆಟ್ಟದಷ್ಟಿವೆ. ಆಯುರ್ವೇದದಲ್ಲಿ “ಮಹೌಷಧಿ” ಎಂದು ಕರೆಯಲ್ಪಡುವ ಶುಂಠಿಯ ಅದ್ಭುತ ಪ್ರಯೋಜನಗಳ ಮಾಹಿತಿ ಇಲ್ಲಿದೆ. 1. ಜೀರ್ಣಕ್ರಿಯೆಗೆ ರಾಮಬಾಣ ಶುಂಠಿಯು ಜೀರ್ಣರಸಗಳ ಉತ್ಪತ್ತಿಯನ್ನು ಉತ್ತೇಜಿಸುತ್ತದೆ. ಊಟದ ನಂತರ ಸಣ್ಣ ಶುಂಠಿ ಚೂರನ್ನು ಸೇವಿಸುವುದರಿಂದ ಗ್ಯಾಸ್ಟ್ರಿಕ್, ಹೊಟ್ಟೆ ಉಬ್ಬರ ಮತ್ತು ಅಜೀರ್ಣದಂತಹ ಸಮಸ್ಯೆಗಳು ದೂರವಾಗುತ್ತವೆ. ಇದು ಕರುಳಿನ ಆರೋಗ್ಯವನ್ನು ಸುಧಾರಿಸಲು ಸಹಕಾರಿ. 2. ರೋಗನಿರೋಧಕ ಶಕ್ತಿಯ ಹೆಚ್ಚಳ ಶುಂಠಿಯಲ್ಲಿ ‘ಜಿಂಜೆರಾಲ್’ (Gingerol) ಎಂಬ ಪ್ರಬಲ ಅಂಶವಿದೆ. ಇದು ದೇಹದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಶೀತ, ಕೆಮ್ಮು ಮತ್ತು ಗಂಟಲು ನೋವಿನ ಸಂದರ್ಭದಲ್ಲಿ ಶುಂಠಿ ಕಷಾಯ ಅಥವಾ ಶುಂಠಿ ಚಹಾ ಸೇವಿಸುವುದು ತಕ್ಷಣದ ಉಪಶಮನ ನೀಡುತ್ತದೆ. 3. ಉರಿಯೂತ ಮತ್ತು ಕೀಲು ನೋವು ನಿವಾರಣೆ ಶುಂಠಿಯಲ್ಲಿ ಉರಿಯೂತ ವಿರೋಧಿ (Anti-inflammatory) ಗುಣಗಳಿವೆ. ಇದು…
ನವದೆಹಲಿ: ದೇಶದ ಪ್ರತಿಷ್ಠಿತ ವೈದ್ಯಕೀಯ ಸಂಸ್ಥೆಯಾದ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (AIIMS), ನರ್ಸಿಂಗ್ ಅಧಿಕಾರಿ ನೇಮಕಾತಿ ಸಾಮಾನ್ಯ ಅರ್ಹತಾ ಪರೀಕ್ಷೆ (NORCET-10) ಅಡಿಯಲ್ಲಿ ಒಟ್ಟು 2,551 ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದೆ. ನರ್ಸಿಂಗ್ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಬಯಸುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಅರ್ಜಿ ಸಲ್ಲಿಕೆ ಮತ್ತು ಪ್ರಮುಖ ದಿನಾಂಕಗಳು: ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮಾರ್ಚ್ 16, 2026. ಪ್ರಾಥಮಿಕ ಪರೀಕ್ಷೆ (Stage 1): ಏಪ್ರಿಲ್ 11, 2026. ಮುಖ್ಯ ಪರೀಕ್ಷೆ (Stage 2): ಏಪ್ರಿಲ್ 30, 2026. ವೆಬ್ಸೈಟ್: aiimsexams.ac.in ಶೈಕ್ಷಣಿಕ ಅರ್ಹತೆ ಮತ್ತು ವಯೋಮಿತಿ: ವಿದ್ಯಾರ್ಹತೆ: ಮಾನ್ಯತೆ ಪಡೆದ ಸಂಸ್ಥೆಯಿಂದ ಬಿಎಸ್ಸಿ ನರ್ಸಿಂಗ್ / ಪೋಸ್ಟ್ ಬೇಸಿಕ್ ಬಿಎಸ್ಸಿ ನರ್ಸಿಂಗ್ ಅಥವಾ ಜಿಎನ್ಎಂ (GNM) ಡಿಪ್ಲೊಮಾ ಪೂರ್ಣಗೊಳಿಸಿರಬೇಕು. ವಯೋಮಿತಿ: ಅಭ್ಯರ್ಥಿಗಳ ವಯಸ್ಸು 18 ರಿಂದ 30 ವರ್ಷಗಳ ಒಳಗಿರಬೇಕು (ಸರ್ಕಾರಿ ನಿಯಮದಂತೆ ವಯೋಮಿತಿ ಸಡಿಲಿಕೆ ಇರುತ್ತದೆ). ಆಯ್ಕೆ ಪ್ರಕ್ರಿಯೆ ಮತ್ತು ಪರೀಕ್ಷಾ ವಿಧಾನ:…
ಮಹಾರಾಷ್ಟ್ರ: ಮಲ್ಲಿಕಾರ್ಜುನ ಮುತ್ಯಾ ವಿರುದ್ಧದ ಪೋಕ್ಸೋ ಪ್ರಕರಣಕ್ಕೆ ಈಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಅಪ್ರಾಪ್ತ ಬಾಲಕಿಯ ಪೋಷಕರು ಉಲ್ಟಾ ಹೊಡೆದಿದ್ದು, ಸ್ಪೋಟಕ ಹೇಳಿಕೆಯನ್ನು ನೀಡಿದ್ದಾರೆ. ಅಪ್ರಾಪ್ತ ಬಾಲಕಿ ಪೋಷಕರಿಂದ ವೀಡಿಯೋ ಹೇಳಿಕೆ ರಿಲೀಸ್ ಮಾಡಲಾಗಿದ್ದು, ನಮ್ಮ ಮಗಳ ಜನ್ಮದಿನ ಹಿನ್ನಲೆ ನಾವು ಮಠಕ್ಕೆ ಹೋಗಿದ್ವಿ. ಮಲ್ಲಿಕಾರ್ಜುನ ಮುತ್ಯಾ ಅಶೀರ್ವಾದ ಪಡೆಯಲು ಹೋಗಿದ್ವಿ. ನಾವು ಮಲ್ಲಿಕಾರ್ಜುನ ಮುತ್ಯಾ ಅವರ ಭಕ್ತರು ಇದ್ದೇವೆ ಎಂದಿದ್ದಾರೆ. ಕಳೆದ 3-4 ವರ್ಷಗಳಿಂದ ನಾವು ಮಠಕ್ಕೆ ಹೋಗುತ್ತಿದ್ದೆವು. ಮಲ್ಲಿಕಾರ್ಜುನ ಮುತ್ಯಾ ನಮಗೆ ಆಶೀರ್ವಾದ ಮಾಡಿದರು. ನಮ್ಮ ಮಗಳಿಗೂ ಕೂಡ ಮುತ್ಯಾ ಅಶೀರ್ವಾದ ಮಾಡಿದರು. ಅದನ್ನು ನಾವು ವೀಡಿಯೋ ಮಾಡಿ ಸ್ಟೇಟಸ್ ಗೆ ಹಾಕಿದ್ದೆವು ಎಂದು ಹೇಳಿದ್ದಾರ. ನಾವು ಸ್ಟೇಟಸ್ ಗೆ ಹಾಕಿದಂತ ವೀಡಿಯೋವನ್ನು ಕೆಲ ಕಿಡಿಗೇಡಿಗಳು ವೈರಲ್ ಮಾಡಿದ್ದಾರೆ. ಇದರಲ್ಲಿ ಮಲ್ಲಿಕಾರ್ಜುನ ಮುತ್ಯಾ ಅವರದ್ದು ಏನೂ ತಪ್ಪಿಲ್ಲ ಎಂಬುದಾಗಿ ಹೇಳಿಕೆ ನೀಡಿದ್ದಾರೆ. https://kannadanewsnow.com/kannada/no-need-to-pay-extra-charges-for-changes-within-48-hours-of-booking-dgca/ https://kannadanewsnow.com/kannada/massive-protest-in-delhi-by-youth-congress-state-workers-led-by-manjunath-gowda-participate/
ನವದೆಹಲಿ: ವಿಮಾನ ಪ್ರಯಾಣಿಕರ ಹಿತದೃಷ್ಟಿಯಿಂದ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (DGCA) ಟಿಕೆಟ್ ಮರುಪಾವತಿ (Refund) ನಿಯಮಗಳಲ್ಲಿ ಕ್ರಾಂತಿಕಾರಿ ಬದಲಾವಣೆ ತಂದಿದೆ. ಇನ್ಮುಂದೆ ಟಿಕೆಟ್ ಬುಕ್ ಮಾಡಿದ 48 ಗಂಟೆಗಳ ಒಳಗೆ ಪ್ರಯಾಣಿಕರು ಯಾವುದೇ ಹೆಚ್ಚುವರಿ ರದ್ದತಿ ಶುಲ್ಕವಿಲ್ಲದೆ ಟಿಕೆಟ್ ಬದಲಾಯಿಸಲು ಅಥವಾ ರದ್ದುಗೊಳಿಸಲು ಅವಕಾಶ ನೀಡಲಾಗಿದೆ. 1. 48 ಗಂಟೆಗಳ ‘ಲುಕ್-ಇನ್’ ಆಯ್ಕೆ ಪ್ರಯಾಣಿಕರು ಟಿಕೆಟ್ ಬುಕ್ ಮಾಡಿದ ಮೊದಲ 48 ಗಂಟೆಗಳ ಕಾಲಾವಧಿಯನ್ನು ‘Look-in option’ ಎಂದು ಪರಿಗಣಿಸಲಾಗುತ್ತದೆ. ಈ ಅವಧಿಯಲ್ಲಿ ಟಿಕೆಟ್ ರದ್ದು ಮಾಡಿದರೆ ಯಾವುದೇ ಹೆಚ್ಚುವರಿ ದಂಡ ಇರುವುದಿಲ್ಲ. ಷರತ್ತು: ಈ ಸೌಲಭ್ಯವು ದೇಶೀಯ ವಿಮಾನಗಳಿಗೆ ಪ್ರಯಾಣದ 7 ದಿನ ಮುಂಚಿತವಾಗಿ ಮತ್ತು ಅಂತರಾಷ್ಟ್ರೀಯ ವಿಮಾನಗಳಿಗೆ 15 ದಿನಗಳ ಮುಂಚಿತವಾಗಿ ಬುಕ್ ಮಾಡಿದ ಟಿಕೆಟ್ಗಳಿಗೆ ಮಾತ್ರ ಅನ್ವಯಿಸುತ್ತದೆ. 2. ಹೆಸರು ತಿದ್ದುಪಡಿಗೆ ಹಣ ನೀಡಬೇಕಿಲ್ಲ ಒಂದೊಮ್ಮೆ ಟಿಕೆಟ್ ಬುಕ್ ಮಾಡುವಾಗ ಹೆಸರಿನಲ್ಲಿ ಅಕ್ಷರ ದೋಷಗಳಾಗಿದ್ದರೆ, ಅದನ್ನು 24 ಗಂಟೆಯೊಳಗೆ ಏರ್ಲೈನ್ ಗಮನಕ್ಕೆ ತಂದರೆ ಯಾವುದೇ ಶುಲ್ಕವಿಲ್ಲದೆ ಸರಿಪಡಿಸಿಕೊಡಬೇಕು.…














