Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ರಾಜ್ಯ ಸರ್ಕಾರದಿಂದ 2026ನೇ ಸಾಲಿನ ಸಾರ್ವತ್ರಿಕ ಹಾಗೂ ಪರಿಮಿತ ರಜಾ ದಿನಗಳ ಪಟ್ಟಿ ಪ್ರಕಟಿಸಲಾಗಿದೆ. ಹಾಗಾದ್ರೇ 2026ನೇ ಸಾಲಿಗೆ ಮಂಜೂರಾದ ಸಾರ್ವತ್ರಿಕೆ ರಜಾ ದಿನಗಳು ಹಾಗೂ ಪರಿಮಿತ ರಜಾ ದಿನಗಳ ಅಧಿಕೃತ ಪಟ್ಟಿಯನ್ನು ಮುಂದಿದೆ ನೋಡಿ.. ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಯವರು ಅಧಿಸೂಚನೆ ಹೊರಡಿಸಿದ್ದಾರೆ. 2026ನೇ ಸಾಲಿಗೆ ಮಂಜೂರು ಮಾಡಿರುವ ಸಾರ್ವತ್ರಿಕ ರಜಾ ದಿನಗಳ ಪಟ್ಟಿ ಸಾರ್ವಜನಿಕರಿಗಾಗಿ ಈ ಕೆಳಕಂಡಂತೆ ಪ್ರಕಟಿಸಲಾಗಿದೆ ಎಂದಿದ್ದಾರೆ. ಇನ್ನೂ ಅಧಿಸೂಚನೆ 1ರ ಅನುಬಂಧದಲ್ಲಿ 2026ನೇ ವರ್ಷಕ್ಕೆ ರಾಜ್ಯ ಸರ್ಕಾರಿ ನೌಕರರಿಗೆ ಇರುವ ಪರಿಮಿತ ರಜಾ ದಿನಗಳ ಪಟ್ಟಿಯನ್ನು ಈ ಕೆಳಕಂಡಂತೆ ಪ್ರಕಟಿಸಿದ್ದಾರೆ. ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು
ಬೆಂಗಳೂರು: ಸಾಮಾಜಿಕ ಜಾಲತಾಣವಾದಂತ ವಾಟ್ಸ್ ಆಪ್ ಗ್ರೂಪಿನಲ್ಲಿ ಜಾತಿ ಗಣತಿ ವರದಿಯೆಂದು ಕೆಲವೊಂದು ಅಂಕಿ ಸಂಖ್ಯೆಗಳನ್ನು ಪ್ರಕಟಿಸಿ, ಸಾರ್ವಜನಿಕರಲ್ಲಿ ಗೊಂದಲ ಉಂಟು ಮಾಡಿದ ವ್ಯಕ್ತಿ ವಿರುದ್ಧ ಕ್ರಿಮಿನಲ್ ಮೊಕದ್ದಮ್ಮೆ ದಾಖಲಿಸಲು ದೂರು ನೀಡಲಾಗಿದೆ. ಈ ಕುರಿತಂತೆ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯ ಕಾರ್ಯದರ್ಶಿ ಕೆಎ ದಯಾನಂದ ಅವರು ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಅವರು ನೀಡಿದಂತ ದೂರಿನಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ರಾಜ್ಯಾದ್ಯಂತ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಯನ್ನು ದಿನಾಂಕ:22.09.2025ರಿಂದ ನಡೆಸಲಾಗಿದೆ. ಸಮೀಕ್ಷೆಯಲ್ಲಿ ಪಾಲ್ಗೊಳ್ಳದ ಪ್ರಾರಂಭಿಸಿ ದಿನಾಂಕ:31.10.2025ರವರೆಗೆ ಸಾರ್ವಜನಿಕರಿಗೆ ಆನೈನ್ ಮೂಲಕ ಪಾಲ್ಗೊಳ್ಳಲು ದಿನಾಂಕ:30.11.2025ರವರೆಗೆ ಅವಕಾಶ ನೀಡಲಾಗಿದೆ. ಅದರಂತೆ ಸಮೀಕ್ಷೆ ಕಾರ್ಯ ಇನ್ನೂ ಪ್ರಗತಿಯಲ್ಲಿರುತ್ತದೆ. ಈ ಸಂಬಂಧ ಮಾನ್ಯ ಉಚ್ಚನ್ಯಾಯಾಲಯದಲ್ಲಿ ದಾಖಲಾಗಿರುವ ಪ್ರಕರಣಗಳ ಸಂಖ್ಯೆ: 28665/2025, 28668/2025, 28670/2025 ಮತ್ತು 28675/2025 ಗಳಲ್ಲಿ ಆಯೋಗವು ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಯಲ್ಲಿ ಸಂಗ್ರಹಿಸಿದ ದತ್ತಾಂಶಗಳನ್ನು ಯಾವುದೇ ವ್ಯಕ್ತಿಗೆ ಮಾಹಿತಿಯನ್ನು ಸೋರಿಕೆಯಾಗದಂತೆ ಗೌಪ್ಯತೆಯನ್ನು ಕಾಪಾಡಲಾಗುವುದೆಂದು ದಿನಾಂಕ:26.09.2025 ರಂದು ಅಫಿಡವಿಟ್…
ಬೆಂಗಳೂರು: ರಾಜ್ಯ ಸರ್ಕಾರದಿಂದ 2026ನೇ ಸಾಲಿನ ಸಾರ್ವತ್ರಿಕ ಹಾಗೂ ಪರಿಮಿತ ರಜಾ ದಿನಗಳ ಪಟ್ಟಿ ಪ್ರಕಟಿಸಲಾಗಿದೆ. ಹಾಗಾದ್ರೇ 2026ನೇ ಸಾಲಿಗೆ ಮಂಜೂರಾದ ಸಾರ್ವತ್ರಿಕೆ ರಜಾ ದಿನಗಳು ಹಾಗೂ ಪರಿಮಿತ ರಜಾ ದಿನಗಳ ಅಧಿಕೃತ ಪಟ್ಟಿಯನ್ನು ಮುಂದಿದೆ ನೋಡಿ.. ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಯವರು ಅಧಿಸೂಚನೆ ಹೊರಡಿಸಿದ್ದಾರೆ. 2026ನೇ ಸಾಲಿಗೆ ಮಂಜೂರು ಮಾಡಿರುವ ಸಾರ್ವತ್ರಿಕ ರಜಾ ದಿನಗಳ ಪಟ್ಟಿ ಸಾರ್ವಜನಿಕರಿಗಾಗಿ ಈ ಕೆಳಕಂಡಂತೆ ಪ್ರಕಟಿಸಲಾಗಿದೆ ಎಂದಿದ್ದಾರೆ. ಹೀಗಿದೆ 2026ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿ ದಿನಾಂಕ 15-01-2026 ಗುರುವಾರ, ಉತ್ತರಾಯಣ ಪುಣ್ಯಕಾಲ, ಮಕರ ಸಂಕ್ರಾಂತಿ ದಿನಾಂಕ 26-01-2026 ಸೋಮವಾರ, ಗಣರಾಜ್ಯೋತ್ಸವ ದಿನಾಂಕ 19-03-2026 ಗುರುವಾರ, ಯುಗಾದಿ ಹಬ್ಬ ದಿನಾಂಕ 21-03-2026 ಶನಿವಾರ, ಖುತುಬ್ ಎ ರಂಜಾನ್ ದಿನಾಂಕ 31-03-2026 ಮಂಗಳವಾರ, ಮಹಾವೀರ ಜಯಂತಿ ದಿನಾಂಕ 03-04-2026 ಶುಕ್ರವಾರ, ಗುಡ್ ಪ್ರೈಡೆ ದಿನಾಂಕ 14-04-2026 ಮಂಗಳವಾರ, ಡಾ.ಬಿಆರ್ ಅಂಬೇಡ್ಕರ್ ಜಯಂತಿ ದಿನಾಂಕ 04-04-2026 ಸೋಮವಾರ, ಬಸವಜಯಂತಿ,…
ಬೆಂಗಳೂರು: ಸಮಾಜದ ಸ್ವಾಸ್ತ್ಯ ಕಾಪಾಡಿಕೊಂಡು ಹೋಗುವ ನಿಟ್ಟಿನಲ್ಲಿ ಮಾಧ್ಯಮಗಳ ಪಾತ್ರ ಮಹತ್ವದ್ದಾಗಿದೆ ಎಂದು ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾ ಸಂಸ್ಥಾನದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರು ಅಭಿಪ್ರಾಯಪಟ್ಟರು. ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ(ಕೆಯುಡಬ್ಲೂೃಜೆ) ವತಿಯಿಂದ ಮಂಡ್ಯ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ಮಂಡ್ಯದ ಕರ್ನಾಟಕ ಸಂಘದ ಕೆ.ವಿ.ಶಂಕರೇಗೌಡ ಸಭಾಂಗಣದಲ್ಲಿ ಏರ್ಪಡಿಸಿದ್ದ ರಾಷ್ಟ್ರೀಯ ಪತ್ರಿಕಾ ದಿನಾಚರಣೆ ಕಾರ್ಯಕ್ರಮದ ಸಾನಿಧ್ಯ ವಹಿಸಿ ಮಾತನಾಡಿದರು. ಮಹಾಭಾರತದಲ್ಲಿ ಸಂಜಯ ಕೂಡ ಒಬ್ಬ ವರದಿಗಾರನ ರೀತಿಯಲ್ಲಿ ಅಲ್ಲಿ ನಡೆಯುತ್ತಿದ್ದ ಯುದ್ಧದ ಘಟನಾವಳಿಗಳನ್ನು ವರದಿ ಮಾಡುತ್ತಿದ್ದ. ಈಗ ಇದ್ದ ವಿಷಯ ಇದ್ದ ಹಾಗೆ ಹೇಳುವುದು ಕಡಿಮೆಯಾಗಿದೆ. ಸುದ್ದಿಗೆ ರೆಕ್ಕೆ ಪುಕ್ಕ ಕಟ್ಟಿ ತೇಲಿ ಬಿಡುವ ಮನೋಧೋರಣೆ ಹೆಚ್ಚುತ್ತಿರುವುದು ಅಪಾಯಕಾರಿ ಬೆಳವಣಿಗೆ. ಈ ಬಗ್ಗೆ ಮಾಧ್ಯಮಗಳು ಮತ್ತು ಪತ್ರಕರ್ತರು ಎಚ್ಚರವಹಿಸಬೇಕು ಎಂದರು. ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಮಾತನಾಡಿ, ಪತ್ರಕರ್ತರು ವಿಶ್ವಾಸರ್ಹತೆ ಪಡೆದುಕೊಳ್ಳುವ ನಿಟ್ಟಿನಲ್ಲಿ ವೃತ್ತಿ ಬದ್ದವಾಗಿ ಕೆಲಸ ಮಾಡಲು ಮುಂದಾಗಬೇಕು.…
ಶಿವಮೊಗ್ಗ: ನಾಳೆ ಸಾಗರದ ನೆಹರೂ ಮೈದಾನದಲ್ಲಿ ಅಗತ್ಯವಿರುವಂತ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಆ ಮೂಲಕ 70 ಲಕ್ಷದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆಯನ್ನು ನೀಡಲಿದ್ದಾರೆ. ಈ ಕುರಿತಂತೆ ಸಾಗರ ನಗರಸಭಎ ಪೌರಾಯುಕ್ತ ಹೆಚ್.ಕೆ ನಾಗಪ್ಪ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ನಾಳೆ ಸಂಜೆ.5 ಗಂಟೆಗೆ ಸಾಗರದ ನೆಹರೂ ಮೈದಾನದಲ್ಲಿ ಅತಿ ಅವಶ್ಯಕತೆ ಇರುವಂತ ವಿವಿಧ ಅಭಿವೃದ್ಧಿ ಕಾಮಗಾರಿಗಳಇಗೆ ಸಾಗರ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮ ನಿಯಮಿತದ ಅಧ್ಯಕ್ಷರಾದಂತ ಗೋಪಾಲಕೃಷ್ಣ ಬೇಳೂರು ಶಂಕು ಸ್ಥಾಪನೆ ನೆರವೇರಿಸಲಿದ್ದಾರೆ ಎಂಬುದಾಗಿ ತಿಳಿಸಿದ್ದಾರೆ. ನಾಳೆ ನೆಹರೂ ಮೈದಾನದಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಯಾವೆಲ್ಲ ಕಾಮಗಾರಿಗೆ ಶಂಕುಸ್ಥಾಪನೆ? 1. ನೆಹರು ಮೈದಾನದಲ್ಲಿ ಜವಾಹರ್ ಲಾಲ್ ನೆಹರೂ ಬಯಲು ರಂಗಮಂದಿರ- ರೂ.40 ಲಕ್ಷ 2. ವಾಯುವಿಹಾರಿಗಳ ಸುರಕ್ಷತೆಗಾಗಿ ಚೈನ್ ಲಿಂಗ್ ಬೇಲಿ ನಿರ್ಮಾಣ- ರೂ.10 ಲಕ್ಷ 3. ಸರ್ವ ಋತು ವಾಕಿಂಗ್ ಟ್ರ್ಯಾಕ್ ಗಾಗಿ ಚಾವಣಿ…
ಬೆಂಗಳೂರು: ನೀವು ಸಾಮಾಜಿಕ ಜಾಲತಾಣ ಸೇರಿದಂತೆ ವಿವಿಧೆಡೆಗಳಲ್ಲಿ ವೈಯಕ್ತಿಕ ಮಾಹಿತಿ ಹಂಚಿಕೊಳ್ಳುವುದರಿಂದಲೇ ಇಂದು ಡಿಜಿಟಲ್ ಅರೆಸ್ಟ್ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿವೆ. ಹೀಗಾಗಿ ವೈಯಕ್ತಿಕ ಮಾಹಿತಿಯನ್ನು ಹಂಚಿಕೊಳಅಳೋದು ತಪ್ಪಿಸಿ, ಡಿಜಿಟಲ್ ಅರೆಸ್ಟ್ ನಿಂದ ದೂರಾಗಿ ಎಂಬುದಾಗಿ ಸರ್ಕಾರ ಎಚ್ಚರಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರ ಮಾಹಿತಿ ನೀಡಿದ್ದು, ವೈಯಕ್ತಿಕ ಮಾಹಿತಿ ಹಂಚಿಕೊಳ್ಳುವುದಕ್ಕೂ ಮುನ್ನ ಎಚ್ಚರದಿಂದಿರಿ! ಡಿಜಿಟಲ್ ಅರೆಸ್ಟ್ನಂತಹ ವಂಚನೆಗೆ ಬಲಿಯಾಗದಿರಿ ಎಂಬುದಾಗಿ ತಿಳಿಸಿದೆ. ವಂಚಕರು ಸರ್ಕಾರಿ ಅಧಿಕಾರಿಗಳ / ಪೊಲೀಸರ ಸೋಗಿನಲ್ಲಿ ವಾಟ್ಸಾಪ್ ಕರೆ ಮಾಡಿ, ಅಪರಾಧ ಪ್ರಕರಣದಲ್ಲಿ ಬಂಧಿಸುವುದಾಗಿ ಬೆದರಿಸಿ ಹಣ ವಸೂಲಿ ಮಾಡಬಹುದು. ಈ ಬಗ್ಗೆ ಜಾಗರೂಕರಾಗಿರಿ. ಸಂಶಯಾಸ್ಪದ ಕರೆಗಳು ಬಂದಲ್ಲಿ ತಕ್ಷಣವೇ ಸಹಾಯವಾಣಿ ಸಂಖ್ಯೆ 1930 ಅನ್ನು ಸಂಪರ್ಕಿಸಿ ಅಥವಾ ನಿಮ್ಮ ಹತ್ತಿರದ ಪೊಲೀಸ್ ಠಾಣೆಗೂ ಮಾಹಿತಿ ನೀಡಬಹುದು ಎಂದು ತಿಳಿಸಿದೆ. https://twitter.com/KarnatakaVarthe/status/1990395758080922007 https://kannadanewsnow.com/kannada/bmrcl-shocks-those-who-blocked-our-metro-train-in-bengaluru-complaint-filed/ https://kannadanewsnow.com/kannada/cm-siddaramaiahs-wife-parvatis-health-deteriorates-admitted-to-hospital/
ಬೆಂಗಳೂರು: ನಗರದಲ್ಲಿ ನಮ್ಮ ಮೆಟ್ರೋ ರೈಲು ತಡೆದು ರೈಲು ಪ್ರಯಾಣಕ್ಕೆ ವಿಳಂಬ ಮಾಡಲಾಗಿತ್ತು. ಈ ಹಿನ್ನಲೆಯಲ್ಲಿ ಮೆಟ್ರೋ ರೈಲು ತಡೆದವರ ವಿರುದ್ದ ಬಿಎಂಆರ್ ಸಿಎಲ್ ದೂರು ನೀಡಿದೆ. ಹೀಗಾಗಿ ಮೆಟ್ರೋ ರೈಲು ತಡೆದಂತವರ ವಿರುದ್ಧ ಬೆಂಗಳೂರಿನ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಕುರಿತಂತೆ ಬಿಎಂಆರ್ ಸಿಎಲ್ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, 17ನೇ ನವೆಂಬರ್ 2025ರ ಮುಂಜಾನೆ, ಕೆಲವು ವ್ಯಕ್ತಿಗಳ ಗುಂಪು ಹಳದಿಮಾರ್ಗದ ಮೊದಲ ರೈಲು ಹೊರಡುವುದನ್ನು ಆರ್.ವಿ ರಸ್ತೆ ಮೆಟ್ರೋ ನಿಲ್ದಾಣದಲ್ಲಿ ಉದ್ದೇಶಪೂರ್ವಕವಾಗಿ ಅಡ್ಡಿಪಡಿಸಿತು. ಇದರ ಪರಿಣಾಮವಾಗಿ, 6:00ಕ್ಕೆ ಹೊರಡಬೇಕಿದ್ದ ರೈಲು 6:35ಕ್ಕೆ ಹೊರಟಿತು. ಇದರಿಂದಾಗಿ ಎಲ್ಲಾ ರೈಲುಗಳ ಸಂಚಾರದಲ್ಲಿ ವಿಳಂಬ ಉಂಟಾಯಿತು. ಸೇವೆಯನ್ನು ಸ್ಥಿರಗೊಳಿಸಲು, ಒಂದು ರೈಲನ್ನು ಸೆಂಟ್ರಲ್ ಸಿಲ್ಕ್ ಬೋರ್ಡ್ ನ ಲ್ಲಿ ಶಾರ್ಟ್-ಲೂಪ್ ಮಾಡಬೇಕಾಯಿತು. ಇಂತಹ ಕೃತ್ಯಗಳು ಅನೇಕ ಸಹ ಪ್ರಯಾಣಿಕರಿಗೆ ಅನಾನುಕೂಲತೆ ಉಂಟು ಮಾಡುವುದಷ್ಟೇ ಅಲ್ಲದೆ, ಮೆಟ್ರೋ ಸಂಚಾರದ ಸುರಕ್ಷತೆ ಮತ್ತು ದಕ್ಷತೆಯ ಕಾರ್ಯಾಚರಣೆಯನ್ನೂ ಹಾನಿಗೊಳಿಸುತ್ತವೆ ಎಂದಿದೆ. ಮೆಟ್ರೋ ರೈಲು (ಕಾರ್ಯಾಚರಣೆ ಮತ್ತು…
ಬೆಂಗಳೂರು: ಸಿಎಂ ಸಿದ್ಧರಾಮಯ್ಯ ಅವರ ಪತ್ನಿ ಪಾರ್ವತಿ ಆರೋಗ್ಯದಲ್ಲಿ ಏರುಪೇರಾಗಿದೆ. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದು, ದಿಢೀರ್ ಆರೋಗ್ಯದಲ್ಲಿ ಏರುಪೇರಾಗಿದೆ. ಹೀಗಾಗಿ ಬೆಂಗಳೂರಿನ ಶೇಷಾದ್ರಿಪುರಂನಲ್ಲಿ ಇರುವಂತ ಅಪೊಲೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇನ್ನೂ ಪತ್ನಿ ಪಾರ್ವತಿ ಅವರು ಅನಾರೋಗ್ಯಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿರುವಂತ ವಿಷಯ ತಿಳಿದು ಸಿಎಂ ಸಿದ್ಧರಾಮಯ್ಯ ಅವರು ದೆಹಲಿ ಪ್ರಯಾಣ ಮೊಟಕುಗೊಳಿಸಿ ಬೆಂಗಳೂರಿಗೆ ವಾಪಾಸ್ ಆಗುತ್ತಿರುವುದಾಗಿ ತಿಳಿದು ಬಂದಿದೆ. https://kannadanewsnow.com/kannada/school-children-wrote-and-sang-a-song-expressing-their-love-for-the-mla/ https://kannadanewsnow.com/kannada/shivamogga-the-thief-who-stole-a-luggage-auto-was-arrested-along-with-the-vehicle-by-the-sagar-anandpur-police-in-just-three-days/
ಶಿವಮೊಗ್ಗ: ಲಗೇಜ್ ಆಟೋ ರಿಕ್ಷಾವನ್ನು ಕೆಲಸ ಮುಗಿಸಿ ರಾತ್ರಿ ನಿಲ್ಲಿಸಿ ಹೋಗಿ ಬಂದು, ಬೆಳಗ್ಗೆ ಬಂದು ನೋಡಿದ್ರೆ ನಾಪತ್ತೆಯಾಗಿತ್ತು. ಆ ಲಗೇಜ್ ಆಟೋವನ್ನು ಯಾರೋ ಕದ್ದೊಯ್ದಿದ್ದಾರೆ. ಹುಡುಕಿ ಕೊಡುವಂತೆ ಮಾಲೀಕ ಸಲ್ಲಿಸಿದ ದೂರಿನ ಮೂರೇ ದಿನಗಳಲ್ಲಿ ವಾಹನ ಸಹಿತ ಕಳ್ಳನನ್ನು ಎಡೆಮುರಿ ಕಟ್ಟಿ ಸಾಗರದ ಆನಂದಪುರ ಪೊಲೀಸು ಬಂಧಿಸಿದ್ದಾರೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಸಾಗರ ಗ್ರಾಮಾಂತರ ವೃತ್ತದ ಆನಂದಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶೇಕ್ ಮಿರಾನ್ ಎಂಬಾತ ದಿನಾಂಕ 13-11-2025ರಂದು ತನ್ನ ಲಗೇಜ್ ಆಟೋ ರಿಕ್ಷಾ ಕಳ್ಳತನವಾಗಿದೆ. ಯಾರೋ ಕದ್ದೊಯ್ದಿದ್ದಾರೆ. ಹುಡುಕಿ ಕೊಡುವಂತೆ ದೂರು ನೀಡಿದ್ದರು ಎಂದಿದೆ. ವಾಹನ ಮಾಲೀಕ ನೀಡಿದಂತ ದೂರಿನ ಹಿನ್ನಲೆಯಲ್ಲಿ ಆನಂದಪುರ ಪೊಲೀಸ್ ಠಾಣೆಯಲ್ಲಿ ಲಗೇಜ್ ಆಟೋ ರಿಕ್ಷಾ ಕಳ್ಳತನ ಪ್ರಕರಣ ದಾಖಲಾಗಿತ್ತು. ಈ ಪ್ರಕರಣ ಬೇದಿಸಲು ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದಂತ ಕಾರಿಯಪ್ಪ, ರಮೇಶ್ ಹಾಗೂ ಸಾಗರ ಉಪ ವಿಭಾಗದ ಪೊಲೀಸ್ ಉಪಾಧಿಕ್ಷಕರಾದಂತ ಕೇಶವ…
ಮೈಸೂರು: ಮೈಸೂರಿನ ಚಾಮುಂಡಿ ಕ್ಲಬ್ನಲ್ಲಿ ರೈಲ್ವೆಯ ರನ್ನಿಂಗ್ ಸಿಬ್ಬಂದಿ ಮತ್ತು ಅವರ ಕುಟುಂಬಗಳ ನಡುವೆ ಸಂಬಂಧವನ್ನು ಬಲಪಡಿಸುವ ಉದ್ದೇಶದಿಂದ ಒಂದು ವಿಚಾರಗೋಷ್ಠಿ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದ ಮುಖ್ಯ ಉದ್ದೇಶ, ರೈಲುಗಳ ಸುರಕ್ಷಿತ ಮತ್ತು ಪರಿಣಾಮಕಾರಿ ಸಂಚಾರಕ್ಕಾಗಿ ಕುಟುಂಬಗಳ ಬೆಂಬಲ ಅತ್ಯಂತ ಮಹತ್ವದ್ದಾಗಿದೆ ಎಂಬುದನ್ನು ಗುರುತಿಸುವುದು. 67 ಮಂದಿ ಭಾಗವಹಿಸಿದ ಈ ವಿಚಾರಗೋಷ್ಠಿಯಲ್ಲಿ ರನ್ನಿಂಗ್ ಸಿಬ್ಬಂದಿಯ ವೈಶಿಷ್ಟ್ಯಪೂರ್ಣ ಕೆಲಸದ ಸವಾಲುಗಳು, ಕುಟುಂಬಗಳ ಕಲ್ಯಾಣ ಮತ್ತು ಪರಸ್ಪರ ಹೊಂದಾಣಿಕೆ ಕುರಿತು ಜಾಗೃತಿ ಮೂಡಿಸಲಾಯಿತು. ಜ್ಯೋತಿ ಲಕ್ಷ್ಮಿ, ಹಿರಿಯ ವೈಜ್ಞಾನಿಕ ಅಧಿಕಾರಿ, CFTRI ಅವರು ರನ್ನಿಂಗ್ ಸಿಬ್ಬಂದಿಗಾಗಿ ಆರೋಗ್ಯಕರ ಆಹಾರ ಪದ್ಧತಿ ಎಂಬ ವಿಷಯದ ಮೇಲೆ ವಿಶೇಷ ಉಪನ್ಯಾಸ ನೀಡಿದರು. ಅವರು ಸಮತೋಲನ ಆಹಾರ, ಸಮರ್ಪಕ ಹೈಡ್ರೇಶನ್, ಕರ್ತವ್ಯದ ಸಮಯದಲ್ಲಿ ಊಟ ಮಾಡುವುದು, ಜಾಗೃತಿಯನ್ನು ಕಾಯ್ದುಕೊಳ್ಳಲು ಮತ್ತು ದಣಿವು ಕಡಿಮೆ ಮಾಡಲು ಸಹಾಯಕವಾಗುವ ಆಹಾರ ಆಯ್ಕೆಗಳ ಬಗ್ಗೆ ವಿವರಿಸಿದರು. ಅವರ ಉಪನ್ಯಾಸವು ಸಿಬ್ಬಂದಿ ಮತ್ತು ಅವರ ಕುಟುಂಬಗಳಿಗೆ ಆರೋಗ್ಯಕರ ಆಹಾರ ಆಯ್ಕೆ ಮಾಡುವಲ್ಲಿ ಮಾರ್ಗದರ್ಶನ ನೀಡಿತು.…














