Subscribe to Updates
Get the latest creative news from FooBar about art, design and business.
Author: kannadanewsnow09
ಶಿವಮೊಗ್ಗ: ಗುಣಮಟ್ಟದ ಶಿಕ್ಷಣಕ್ಕೆ ಶಿಕ್ಷಕರೇ ಆಧಾರ. ನಾವು ಈಗಾಗಲೇ 14,499 ಶಿಕ್ಷಕರನ್ನು ನೇಮಕ ಮಾಡಿಕೊಂಡಿದ್ದೇವೆ. ಶಿಕ್ಷಕರ ಕೊರತೆ ನೀಗಿಸಲು ಪ್ರಥಮ ಬಾರಿಗೆ ನಮ್ಮ ಸರ್ಕಾರ 51000 ಅತಿಥಿ ಶಿಕ್ಷಕರನ್ನುನೇಮಿಸಿದೆ. ಮುಂದಿನ ಶೈಕ್ಷಣಿಕ ವರ್ಷದೊಳಗೆ ಇನ್ನೂ 10,800 ಹೊಸ ಶಿಕ್ಷಕರನ್ನು ಹಾಗೂ ಅನುದಾನಿತ ಶಾಲೆಗಳಿಗೆ ಶಿಕ್ಷಕರ ನೇಮಕಾತಿಗೆ ಕ್ರಮ ಕೈಗೊಳ್ಳಲಾಗಿದೆ ಎಂಬುದಾಗಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ನಗರದ ನೆಹರೂ ಕ್ರೀಡಾಂಗಣದಲ್ಲಿ ಸೋಮವಾರ ಏರ್ಪಡಿಸಲಾಗಿದ್ದ ಗಣರಾಜ್ಯೋತ್ಸವ ದಿನಾಚರಣೆಯ ಧ್ವಜಾರೋಹಣ ನೆರವೇರಿಸಿ, ಗಣರಾಜ್ಯೋತ್ಸವ ಸಂದೇಶ ನೀಡಿದರು. ಈ ನಿಟ್ಟಿನಲ್ಲಿ ಸಂವಿಧಾನದ ಮಹತ್ವವನ್ನು ಅರಿತ ನಮ್ಮ ಸರ್ಕಾರವು ರಾಜ್ಯದ ಒಂದು ಕೋಟಿಗೂ ಹೆಚ್ಚು ಮಕ್ಕಳು ಪ್ರತಿದಿನ ಶಾಲೆಯಲ್ಲಿ ‘ಸಂವಿಧಾನದ ಪೀಠಿಕೆ’ಯನ್ನು ಓದುತ್ತಿದ್ದಾರೆ. ಎಳೆಯ ವಯಸ್ಸಿನಲ್ಲೇ ಮಕ್ಕಳಲ್ಲಿ ಸಂವಿಧಾನದ ಮೌಲ್ಯಗಳನ್ನು ಬೆಳಸುವುದು ನಮ್ಮ ಉದ್ದೇಶ ಹಾಗೂ ಇದು ಅವಶ್ಯಕತೆಯೂ ಹೌದು ಎಂದರು. ಕರ್ನಾಟಕದ ಮತ್ತು ಭಾರತದ ಭೂಪಟದಲ್ಲಿ ಶಿವಮೊಗ್ಗಕ್ಕೆ ತನ್ನದೇ ಆದ ಐತಿಹಾಸಿಕ ಮತ್ತು ಸಾಂಸ್ಕೃತಿಕ ಮಹತ್ವವಿದ್ದು ರಾಷ್ಟ್ರಕವಿ ಕುವೆಂಪು ಅವರು…
ಬೆಂಗಳೂರು: ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಬಂಧನ ವಿಳಂಬವೇನು ಇಲ್ಲ. ಅವರ ಬಂಧನಕ್ಕೆ ಪೊಲೀಸರು ಕಾರ್ಯಪ್ರವೃತ್ತರಾಗಿದ್ದಾರೆ. ರಾಜೀವ್ ಗೌಡನನ್ನು ಹಿಡಿದೇ ಹಿಡೀತಿವಿ ಅದರಲ್ಲಿ ಎರಡು ಮಾತೇ ಇಲ್ಲ ಎಂಬುದಾಗಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ರಾಜೀವ್ ಗೌಡನನ್ನು ಹಿಡಿದೇ ಹಿಡೀತಿವಿ. ಸವಾಲೇನು ಇಲ್ಲ. ರಾಜೀವ್ ಗೌಡ ಎಷ್ಟು ದಿನ ತಪ್ಪಿಸಿಕೊಂಡು ಹೋಗೋಕೆ ಆಗುತ್ತೆ.? ಅವರೇನು ಇಲ್ಲೇ ಮನೆಯಲ್ಲಿ ಇದ್ದಾರಾ ಹಿಡಿದುಕೊಂಡು ಬರೋಕೆ ಎಂಬುದಾಗಿ ಪ್ರಶ್ನಿಸಿದರು. ಒಂದೊಂದು ಕೇಸಲ್ಲೂ ಅದಕ್ಕೆ ಆದ ಆಯಾಮಗಳು ಇರುತ್ತದೆ. ಮೈಸೂರು ಜಿಲ್ಲೆ ಹುಣಸೂರು ಪಟ್ಟಣದಲ್ಲಿ ದರೋಡೆ ಮಾಡಿದ್ರು. ದರೋಡೆಕೋರರನ್ನು ಬಂಧಿಸುತ್ತೇವೆ ಸಮಯ ಕೊಡಿ ಅಂದೆ. ಈಗ ಹಿಡಿದುಕೊಂಡು ಬಂದ್ರು. ಕಾನೂನು ಪ್ರಕಾರ ಕ್ರಮ ಕೈಗೊಳ್ತಾರೆ. ಅವರು ಕಳ್ಳತನ ಮಾಡಿರೋದ್ರಲ್ಲಿ ಅರ್ಧ ಸಿಕ್ಕಿದೆ. ಇನ್ನೂ ಉಳಿದ ಚಿನ್ನಾಭರಣಗಳನ್ನು ಮಾರಾಟ ಮಾಡಿಕೊಂಡಿದ್ದಾರೆ. ಕೆಲವು ಆರೋಪಿಗಳು ನೇಪಾಳಕ್ಕೆ ಹೋಗಿದ್ದಾರೆ ಅನ್ನುವ ಸುದ್ದಿ ಇದೆ. ಅನೇಕ ವಿಷಯಗಳು ನನಗೆ ಗೊತ್ತಿದೆ. ನಾನು ಈಗ ಹೇಳುವುದಿಲ್ಲ ಎಂದರು.…
ಉಡುಪಿ: ಜಿಲ್ಲೆಯ ಅರಬ್ಬಿ ಸಮುದ್ರದಲ್ಲಿ ಟೂರಿಸ್ಟ್ ಬೋಟ್ ಒಂದು ಮುಳುಗಿ ಇಬ್ಬರು ಪ್ರವಾಸಿಗರು ಸಾವನ್ನಪ್ಪಿರುವಂತ ಘಟನೆ ನಡೆದಿದೆ. ಉಡುಪಿ ತಾಲ್ಲೂಕಿನ ಕೋಡಿಬೆಂಗ್ರೆ ಬಳಿಯಲ್ಲಿ ಈ ದುರಂತ ಸಂಭವಿಸಿದೆ. ಬೋಟ್ ನಲ್ಲಿ ಶಂಕರಪ್ಪ (22), ಸಿಂಧು (23) ಸಾವನ್ನಪ್ಪಿದ್ದಾರೆ. ಧರ್ಮರಾಜ್ (26), ದಿಶಾ(26) ಎಂಬುವರ ಸ್ಧಿತಿ ಗಂಭೀರವಾಗಿದೆ. ಟೂರಿಸ್ಟ್ ಬೋಟ್ ನಲ್ಲಿ ಸಂಚಾರಕ್ಕೆ 15 ಪ್ರವಾಸಿಗರು ಹೋಗಿದ್ದರು. ಸಮುದ್ರ ಅಲೆಗೆ ಸಿಕ್ಕಿ ಟೂರಿಸ್ಟ್ ಬೋಟ್ ಮುಳುಗಿದೆ. ಅಸ್ವಸ್ಥರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಬೆಂಗಳೂರು: ನಗರದಲ್ಲಿ ಬಿಎಂಟಿಸಿ ಬಸ್ಸೊಂದಕ್ಕೆ ರೈಲು ಡಿಕ್ಕಿ ಹೊಡೆದಿದೆ. ಹೀಗಾಗಿ ರೈಲಿನ ಹಿಂಭಾಗ ಸಂಪೂರ್ಣ ಜಖಂಗೊಂಡಿರುವಂತ ಘಟನೆ ಸಾದರಮಂಗಲ ಬಳಿಯಲ್ಲಿ ನಡೆದಿದೆ. ಅದೃಷ್ಟವಶಾತ್ ಬಸ್ಸಿನಲ್ಲಿ ಪ್ರಯಾಣಿಕರು ಇಲ್ಲದ ಕಾರಣ ದೊಡ್ಡ ದುರಂತವೊಂದು ತಪ್ಪಿದೆ. ಬೆಂಗಳೂರಿನ ಸಾದರಮಂಗಲ ಬಳಿಯಲ್ಲಿ ಬಿಎಂಟಿಸಿ ಬಸ್ ಹಿಂದೆ ತೆಗೆದುಕೊಳ್ಳುತ್ತಿದ್ಗ ರೈಲು ಹಳಿಯ ಮೇಲೆ ನಿಂತಿತ್ತು. ಅದೇ ವೇಳೆಯಲ್ಲಿ ರೈಲು ಆಗಮಿಸಿದಾಗ ಬಸ್ಸಿನ ಹಿಂಭಾಗಕ್ಕೆ ಡಿಕ್ಕಿ ಹೊಡೆದ ಪರಿಣಾಮ ಜಖಂ ಆಗಿದೆ. ಬಿಎಂಟಿಸಿ ಬಸ್ಸಿನಲ್ಲಿದ್ದಂತ ನಿರ್ವಾಹಕನಿಗೆ ಸಣ್ಣಪುಟ್ಟ ಗಾಯವಾಗಿದೆ.
ಶಿವಮೊಗ್ಗ: ಇಂದು ಸಾಗರದ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನದಿಂದ ನಿರ್ಮಿಸಲು ಉದ್ದೇಶಿಸಿರುವಂತ ಶಿಕ್ಷಣ ಸಂಸ್ಥೆ, ಸಭಾ ಮಂಟಪದ ನಿರ್ಮಾಣ ಕಾಮಗಾರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಕುರಿತು ಶ್ರೀ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನದಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದಿನಾಂಕ 26-01-2026ರ ಸೋಮವಾರದ ಇಂದು ಬೆಳಗ್ಗೆ 11 ಗಂಟೆಗೆ ಶ್ರೀ ಮಾರಿಕಾಂಬಾ ಶಿಕ್ಷಣ ಸಂಸ್ಥೆ ಹಾಗೂ ಶ್ರೀ ಮಾರಿಕಾಂಬ ಸಭಾಮಂಟಪ ನಿರ್ಮಾಣ ಕಾಮಗಾರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ವಿದ್ಯುಕ್ತವಾಗಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದಿದೆ. ಇಂದಿನ ಶಂಕುಸ್ಥಾಪನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ದೇವಸ್ಥಾನ ಸಮಿತಿಯ ಅಧ್ಯಕ್ಷರಾದಂತ ಕೆ.ಎನ್ ನಾಗೇಂದ್ರ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಾಗರ ಉಪ ವಿಭಾಗಾಧಿಕಾರಿ ವಿರೇಶ ಕುಮಾರ್, ತಹಶೀಲ್ದಾರ್ ರಶ್ಮಿ, ಪೌರಾಯುಕ್ತ ಹೆಚ್.ಕೆ ನಾಗಪ್ಪ ಅವರು ಇರಲಿದ್ದಾರೆ ಎಂದಿದೆ. ಈ ವೇದಿಕೆಯಲ್ಲಿ ಶ್ರೀ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನದ ಉಪಾಧ್ಯಕ್ಷ ಸುಂದರ್ ಸಿಂಗ್, ಪ್ರಧಾನ ಕಾರ್ಯದರ್ಶಿ ಬಿ.ಗಿರಿಧರ್ ರಾವ್, ಸಹ ಕಾರ್ಯದರ್ಶಿ ಎಸ್ ವಿ ಕೃಷ್ಣಮೂರ್ತಿ, ಕೋಶಾಧ್ಯಕ್ಷರಾದಂತ…
ಮಂಡ್ಯ: ಜಿಲ್ಲೆಯ ಅಂಕೇಗೌಡ ಅವರಿಗೆ 2026ನೇ ಸಾಲಿನ ಪದ್ಮಶ್ರೀ ಪ್ರಶಸ್ತಿ ಗೌರವ ಸಂದಿದೆ. ಆ ಮೂಲಕ ಕನ್ನಡಿಗ ಅಂಕೇಗೌಡರಿಗೆ 2026ನೇ ಸಾಲಿನ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಚಿನಕುರಳಿ ಗ್ರಾಮದವರೇ ಅಂಕೇಗೌಡ ಆಗಿದ್ದಾರೆ. 20 ಲಕ್ಷಕ್ಕೂ ಹೆಚ್ಚು ಪುಸ್ತಕಗಳನ್ನು ಸಂಗ್ರಹಿಸಿದಂತ ಕೀರ್ತಿ ಅಂಕೇಗೌಡ ಅವರಿಗೆ ಸಲ್ಲುತ್ತದೆ. ಅಂಕೇಗೌಡ ಅವರು ಪುಸ್ತಕ ಮನೆ ಎನ್ನುವಂತ ಗ್ರಂಥಾಲಯವನ್ನೇ ನಿರ್ಮಿಸಿದ್ದಾರೆ. 20ನೇ ವಯಸ್ಸಿನಲ್ಲೇ ಪುಸ್ತಕ ಸಂಗ್ರಹಕ್ಕೆ ಇಳಿದಂತ ಅಂಕೇಗೌಡರು, ಪುಸ್ತಕ ಮನೆ ನಿರ್ಮಿಸಿ ಓದುವ ಹವ್ಯಾಸವನ್ನು ಹೆಚ್ಚಿಸುವಂತ ಕೆಲಸ ಮಾಡುತ್ತಿದ್ದಾರೆ. ಇದೀಗ ಪುಸ್ತಕ ಮನೆಯ ಸರದಾರ ಸಾಧಕರಾದಂತ ಅಂಕೇಗೌಡ ಅವರಿಗೆ 2026ನೇ ಸಾಲಿನ ಪದ್ಮಶ್ರೀ ಪ್ರಶಸ್ತಿಯನ್ನು ಕೇಂದ್ರ ಸರ್ಕಾರ ಘೋಷಿಸಿದೆ. https://twitter.com/ANI/status/2015351294068936913 https://kannadanewsnow.com/kannada/list-of-padma-shri-awardees-for-2026-announced-kannadigas-anke-gowda-honoured-with-prestigious-award/
ಬೆಂಗಳೂರು : “ಮುಂದಿನ 25 ವರ್ಷಗಳಲ್ಲಿ ಆಗಲಿರುವ ಪ್ರಗತಿಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯದ ಎಲ್ಲಾ ನಗರಗಳಲ್ಲೂ ಸಂಚಾರಿ ಗ್ರಿಡ್ ರೂಪಿಸಲು ಚಿಂತನೆ ನಡೆಸಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ದಾವೋಸ್ ವಿಶ್ವ ಆರ್ಥಿಕ ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಿ ವಾಪಸ್ಸಾದ ಬಳಿಕ ವಿಧಾನಸೌಧದಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಶಿವಕುಮಾರ್ ಅವರು ಭಾನುವಾರ ಮಾತನಾಡಿದರು. “ದಾವೋಸ್ ಕಾರ್ಯಕ್ರಮದಲ್ಲಿ ಕೆಲವು ಕಂಪನಿಗಳು ಕರ್ನಾಟಕದ 2-3ನೇ ಹಂತದ ನಗರಗಳ ಬಗ್ಗೆಯೂ ಆಸಕ್ತಿ ಹೊಂದಿದ್ದು, ಈ ನಗರಗಳು ಪ್ರಕಾಶಮಾನವಾಗಿ, ಯುವ ಪ್ರತಿಭೆಗಳನ್ನು ಹೊಂದಿರಬೇಕು ಎಂದು ಚರ್ಚೆ ಮಾಡಿದ್ದಾರೆ. ಇಡೀ ರಾಜ್ಯದಲ್ಲಿ ಎಲ್ಲಾ ನಗರ ಪ್ರದೇಶಗಳಿಗೆ ಸಂಚಾರ ಯೋಜನೆ ರೂಪಿಸಬೇಕು. ಮುಂದಿನ 25 ವರ್ಷಕ್ಕೆ ಅಗತ್ಯವಿರುವ ಸಂಚಾರಿ ಮಾರ್ಗದ ಯೋಜನೆ ರೂಪಿಸಬೇಕು. ಎಲ್ಲಾ ನಗರ ಪ್ರದೇಶಗಳಲ್ಲಿ ವರ್ತುಲ ರಸ್ತೆಗಳಿಗೆ ಯೋಜನೆ ರೂಪಿಸಬೇಕು ಎಂದು ಅಧಿಕಾರಿಗಳ ಜೊತೆ ಚರ್ಚೆ ನಡೆಸಲಾಗಿದೆ. ಸಮಯವೇ ಹಣ, ಯಾರೂ ಸಹ ಸಮಯ ವ್ಯರ್ಥ ಮಾಡಿಕೊಳ್ಳಲು ಬಯಸುವುದಿಲ್ಲ. ಹೀಗಾಗಿ ನಾವು ಈಗಿನಿಂದಲೇ ಯೋಜನೆ ರೂಪಿಸಬೇಕಿದೆ. ಈ ಬಗ್ಗೆ ನಾನು,…
ಶಿವಮೊಗ್ಗ: ನಾಳೆ ಸಾಗರದ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನದಿಂದ ನಿರ್ಮಿಸಲು ಉದ್ದೇಶಿಸಿರುವಂತ ಶಿಕ್ಷಣ ಸಂಸ್ಥೆ, ಸಭಾ ಮಂಟಪ ನಿರ್ಮಾಣ ಕಾಮಗಾರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಕುರಿತು ಶ್ರೀ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನದಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದಿನಾಂಕ 26-01-2026ರ ಸೋಮವಾರದ ನಾಳೆ ಬೆಳಗ್ಗೆ 11 ಘಂಟೆಗೆ ಶ್ರೀ ಮಾರಿಕಾಂಬಾ ಶಿಕ್ಷಣ ಸಂಸ್ಥೆ ಹಾಗೂ ಶ್ರೀ ಮಾರಿಕಾಂಬ ಸಭಾಮಂಟಪ ನಿರ್ಮಾಣ ಕಾಮಗಾರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ವಿದ್ಯುಕ್ತ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದಿದೆ. ನಾಳೆಯ ಶಂಕುಸ್ಥಾಪನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ದೇವಸ್ಥಾನ ಸಮಿತಿಯ ಅಧ್ಯಕ್ಷರಾದಂತ ಕೆ.ಎನ್ ನಾಗೇಂದ್ರ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಾಗರ ಉಪ ವಿಭಾಗೀಯ ಅಧಿಕಾರಿ ವಿರೇಶ ಕುಮಾರ್, ತಹಶೀಲ್ದಾರ್ ರಶ್ಮಿ, ಪೌರಾಯುಕ್ತ ಹೆಚ್.ಕೆ ನಾಗಪ್ಪ ಅವರು ಇರಲಿದ್ದಾರೆ ಎಂಬುದಾಗಿ ಹೇಳಿದೆ. ಈ ವೇದಿಕೆಯಲ್ಲಿ ಶ್ರೀ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನದ ಉಪಾಧ್ಯಕ್ಷ ಸುಂದರ್ ಸಿಂಗ್, ಪ್ರಧಾನ ಕಾರ್ಯದರ್ಶಿ ಬಿ.ಗಿರಿಧರ್ ರಾವ್, ಸಹ ಕಾರ್ಯದರ್ಶಿ ಎಸ್ ವಿ…
ರಾಯಚೂರು: ಜಿಲ್ಲೆಯಲ್ಲಿ ಹುಚ್ಚು ನಾಯಿಯೊಂದು ಕಂಡಕಂಡವರ ಮೇಲೆ ಎರದಿ ಕಡಿದಿದೆ. ಆಟವಾಡುತ್ತಿದ್ದಂತ 10 ಮಕ್ಕಳಿಗೂ ಹುಚ್ಚು ನಾಯಿ ಕಡಿತವಾಗಿದ್ದು, ಗಂಭೀರವಾಗಿ ಗಾಯಗಳಾಗಿದ್ದಾವೆ. ಹುಚ್ಚು ನಾಯಿಗಳ ದಾಳಿಯಿಂದ ಕಡಿತಕ್ಕೆ ಒಳಗಾದಂತ ಮಕ್ಕಳಿಗೆ ಸಮೀಪದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಅಲ್ಲದೇ ಹೆಚ್ಚಿನ ಚಿಕಿತ್ಸೆಗಾಗಿ ಸಿಂಧನೂರು ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ವಿಷಯ ತಿಳಿದು ಆಸ್ಪತ್ರೆಗೆ ಮಸ್ಕಿ ಶಾಸಕ ಆರ್.ಬಸನಗೌಡ ತುರ್ವಿಹಾಳ ಭೇಟಿ ಮಾಡಿ, ಆರೋಗ್ಯ ವಿಚಾರಿಸಿದರು. ಹುಚ್ಚು ನಾಯಿ ಮತ್ತಷ್ಟು ಜನರ ಮೇಲೆ ದಾಳಿ ಮಾಡಿ, ಗಾಯಗೊಳಿಸೋ ಮುನ್ನ ಸೆರೆ ಹಿಡಿಯಲು ಕ್ರಮವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. https://kannadanewsnow.com/kannada/republic-day-celebrations-at-manik-shah-maidan-in-bengaluru-tomorrow-this-traffic-change/ https://kannadanewsnow.com/kannada/woman-found-dead-in-swimming-pool-husband-suspected-of-murder/
ಮೈಸೂರು: ದಕ್ಷ ಪೊಲೀಸ್ ಅಧಿಕಾರಿ ಎಂಬುದಾಗಿಯೇ ಹೆಸರಾದಂತ ಮೂಲತಃ ಮೈಸೂರಿನ, ಸದ್ಯ ಕಲಬುರ್ಗಿ ಪೊಲೀಸ್ ತರಬೇತಿ ಕೇಂದ್ರದ ಪ್ರಾಂಶುಪಾಲರಾದ ಹಿರಿಯ ಐಪಿಎಸ್ ಅಧಿಕಾರಿ ಡಿಜಿಪಿ ಪುಟ್ಟಮಾದಯ್ಯ ಎಂ ಸೇರಿದಂತೆ ಐವರಿಗೆ ಭಾರತದ 77ನೇ ಗಣರಾಜ್ಯೋತವ ಅಂಗವಾಗಿ ಕೇಂದ್ರ ಸರ್ಕಾರ ನೀಡುವಂತ 2026ನೇ ಸಾಲಿನ ಪೊಲೀಸ್ ಉತ್ಕೃಷ್ಟ ರಾಷ್ಟ್ರಪತಿ ಪದಕವನ್ನು ಘೋಷಿಸಲಾಗಿದೆ. ಐಪಿಎಸ್ ಅಧಿಕಾರಿ ಪುಟ್ಟಮಾದಯ್ಯ ಅವರು ಸಾರ್ವಜನಿಕ ಸೇವೆಗೆ ಸಲ್ಲಿಸಿದಂತ ಮಹತ್ವದ ಕೊಡುಗೆಯನ್ನು ಕೇಂದ್ರ ಸರ್ಕಾರ ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ. ಈ ಗೌರವವನ್ನು ರಾಷ್ಟ್ರಪತಿಯವರಿಂದ ನೀಡಲಾಗುತ್ತಿರುವಂತ ಪೊಲೀಸ್ ಶ್ರೇಣಿಯ ಅತ್ಯುನ್ನತ ಪ್ರಶಸ್ತಿಗಳಲ್ಲಿ ಒಂದಾಗಿದೆ. ಮೈಸೂರು ಪೊಲೀಸ್ ಆಯುಕ್ತರಾದಂತ ಸೀಮಾ ಲಾಟ್ಕರ್ ಸೇರಿದಂತೆ ರಾಜ್ಯದ ವಿವಿಧೆಡೆ ಕಾರ್ಯ ನಿರ್ವಹಿಸುತ್ತಿರುವ ಐಪಿಎಸ್ ಅಧಿಕಾರಿಗಳಾದ ಸವೀತಾ.ಎಸ್, ಬೆಳಗಾವಿಯ ಡಾ.ಚೇತನ್ ಸಿಂಗ್ ರಾಥೋಡ್ ಹಾಗೂ ಮಂಗಳೂರಿನ ಅಮಿತ್ ಸಿಂಗ್ ಅವರಿಗೂ ರಾಷ್ಟ್ರಪತಿಗಳ ಶ್ಲಾಘನೀಯ ಸೇವಾ ಪದಕವನ್ನು ಘೋಷಿಸಲಾಗಿದೆ. https://kannadanewsnow.com/kannada/republic-day-celebrations-at-manik-shah-maidan-in-bengaluru-tomorrow-this-traffic-change/ https://kannadanewsnow.com/kannada/woman-gives-hiv-injection-to-ex-lovers-wife/














